Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಸೇರಿ ಇನ್ನು ಮುಂದೆ ಖಾಸಗಿ ಆಸ್ಪತ್ರೆ ಎಂಪಾನೆಲ್ (ನೋಂದಣಿ) ಮಾಡುವಾಗ ಅಥವಾ ನವೀಕರಿಸುವಾಗ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ (ಕೆಪಿಎಂಇ)ಯಿಂದ ಮಾನ್ಯತೆ ಹೊಂದಿರುವ ಪ್ರಮಾಣಪತ್ರ ಪರಿಗಣಿಸುವುದು ಕಡ್ಡಾಯವೆಂದು ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಕ್ರಮ ಸಂಖ್ಯೆ (1) ರಲ್ಲಿ ಓದಲಾದ ಆದೇಶದಲ್ಲಿ ಅಸ್ತಿತ್ವದಲ್ಲಿರುವ ಆರೋಗ್ಯ ಯೋಜನೆಯಾದ “ಆರೋಗ್ಯ ಕರ್ನಾಟಕ ಮತ್ತು ಭಾರತ ಸರ್ಕಾರದ ಆರೋಗ್ಯ ಯೋಜನೆ “ಆಯುಷ್ಮಾನ್ ಭಾರತ್’ ಅನು ಸಂಯೋಜಿಸುವ ಮೂಲಕ ಕರ್ನಾಟಕದ ಎಲ್ಲಾ ನಿವಾಸಿಗಳಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಆಯುಷ್ಕಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಒದಗಿಸಲು ಅನುಮೋದನೆಯನ್ನು ನೀಡಿ ಆದೇಶಿಸಲಾಗಿದೆ. ಮುಂದುವರೆದು, ಇದೇ ಆದೇಶದ ಅನುಬಂಧ-6 ರಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳನ್ನು ಎಂಪ್ಯಾನಲ್ ಮಾಡಲು ಮಾನದಂಡಗಳನ್ನು ತಿಳಿಸಲಾಗಿರುತ್ತದೆ. ಮೇಲೆ ಕ್ರಮ ಸಂಖ್ಯೆ (2) ರಲ್ಲಿ ಓದಲಾದ ಮಾರ್ಗಸೂಚಿಗಳಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳನ್ನು ಎಂಪ್ಯಾನಲ್…
ಬೆಂಗಳೂರು : ಮಹಿಳೆಯೊಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ಹಿಂದೆ ಬಿದ್ದು, ಪ್ರೀತಿಸುವಂತೆ ಕಾಟ ಕೊಡುತ್ತಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಅವರಿಗೆ ಮಹಿಳೆಯೊಬ್ಬರು ಪ್ರೀತಿಸುವಂತೆ ನಿರಂತರವಾಗಿ ಇನ್ಸ್ಪೆಕ್ಟರ್ ಹಿಂದೆ ಬಿದ್ದಿದ್ದಳು ಎಂಬ ಆರೋಪ ಕೇಳಿಬಂದಿದೆ. ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದೆ. ಚಿನ್ನಿ ಐ ಲವ್ ಯು, ಯು ಮಸ್ಟ್ ಲವ್ ಮಿ ಎಂದು ಸಾವಿರಾರು ಮೆಸೇಜ್ ಗಳನ್ನು ಕಳುಹಿಸಿತ್ತಾರಂತೆ. ಮಹಿಳೆ ಬರ್ರೋಬ್ಬರಿ 11 ಮೊಬೈಲ್ ನಂಬರ್ ಗಳಿಂದ ಇನ್ಸ್ ಪೆಕ್ಟರ್ ಗೆ ಮೆಸೇಜ್ ಕಳುಹಿಸಿ ಕಾಟ ಕೊಡುತ್ತಿದ್ದು, ಇದರಿಂದ ಬೇಸತ್ತ ಇನ್ಸ್ ಪೆಕ್ಟರ್ 11 ನಂಬರ್ ಗಳನ್ನು ಬ್ಲಾಕ್ ಮಾಡಿದ್ದಾರೆ. ಮಹಿಳೆ ತಾನು ಕಾಂಗ್ರೆಸ್ ಕಾರ್ಯಕರ್ತೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತನಗೆ ಪರಿಚಯ ಎಂದು ಹೇಳಿಕೊಂಡಿದ್ದಾಳೆ. ಮೋಟಮ್ಮ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಇರುವ ಫೋಟೋಗಳನ್ನು ಕಳುಹಿಸಿ, ಪ್ರೀತಿಸಲೇಬೇಕು ಎಂದು ಇನ್ಸ್ಪೆಕ್ಟರ್ ಮೇಲೆ ಒತ್ತಡ ಹೇರಿದ್ದಾಳೆ ಎಂದು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದಿನಿಂದ ಟ್ರಯಲ್ ಪ್ರಾರಂಭ ಆಗುತ್ತಿದೆ. ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ನುಡಿಯಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ಕಾಶಿನಾಥಯ್ಯ ಹಾಗೂ ತಾಯಿ ರತ್ನಪ್ರಭಾ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದು, ಘಟನಾವಳಿಯ ಬಗ್ಗೆ ಸಂಪೂರ್ಣ ಹೇಳಿಕೆಯನ್ನು ನುಡಿಯಲಿದ್ದಾರೆ. ರೇಣುಕಾಸ್ವಾಮಿ ಯಾವಾಗ ಮನೆಯಿಂದ ಹೊರಟ, ಮಧ್ಯಾಹ್ನ ಊಟಕ್ಕೆ ಬರೋದಿಲ್ಲ ಅಂದಿದ್ದು, ಬಳಿಕ ಸಾವಿನ ವಿಚಾರ ತಿಳಿದಿದ್ದು, ಈ ಎಲ್ಲಾ ಮಾಹಿತಿಯನ್ನು ನ್ಯಾಯಾಲಯದ ಮುಂದೆ ಹೇಳಲಿದ್ದಾರೆ. ನಟ ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನುಡಿಯಲು ಕೊಲೆಯಾದ ರೇಣುಕಾಸ್ವಾಮಿಯ ಪಾಲಕರಿಗೆ ಸಮನ್ಸ್ ಜಾರಿಗೊಳಿಸಿರುವ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಡಿಸೆಂಬರ್ 17ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿತ್ತು. ಪ್ರಕರಣ ಸಂಬಂಧ ಸಾಕ್ಷ್ಯ ನುಡಿಯಲು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಮತ್ತು ತಾಯಿ ರತ್ನಮ್ಮಗೆ (ಸಾಕ್ಷಿ ಸಂಖ್ಯೆ 7 ಹಾಗೂ 8) ಸಮನ್ಸ್ ಜಾರಿಗೊಳಿಸಬೇಕು ಎಂದು ಕೋರಿ…
ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲೆಂದು ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘೋರ ಧಾರವಾಡದ ತಪೋವನ ಬಳಿ ನಡೆದಿದೆ. ಬಳ್ಳಾರಿ ಮೂಲಕ ಪಲ್ಲವಿ (22) ಆತ್ಮಹತ್ಯೆಗೆ ಶರಣಾದ ಯುವತಿ. ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಯಲ್ಲಿದ್ದ ಯುವತಿ ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾಳೆ. ಯುವತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧಾರವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ನವದೆಹಲಿ : ಹಿಜಾಬ್ ವಿಷಯಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪಾಕಿಸ್ತಾನದ ಕುಖ್ಯಾತ ಭಯೋತ್ಪಾದಕ ಶಹಜಾದ್ ಭಟ್ಟಿ ಬೆದರಿಕೆ ಹಾಕಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಸಂದೇಶವನ್ನು ಬಿಡುಗಡೆ ಮಾಡಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಪರಿಣಾಮಗಳು ಭೀಕರವಾಗಿರುತ್ತವೆ ಎಂದು ಒತ್ತಾಯಿಸಿದ್ದಾನೆ. ಬಿಹಾರದಲ್ಲಿ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಮುಸ್ಲಿಂ ಮಹಿಳೆಯನ್ನು ಈ ರೀತಿ ನಡೆಸಿಕೊಂಡರು ಎಂದು ಭಟ್ಟಿ ಹೇಳಿದ್ದಾನೆ. ಆ ವ್ಯಕ್ತಿಗೆ ಇನ್ನೂ ಸಮಯವಿದೆ ಅವನು ಅವಳಲ್ಲಿ ಕ್ಷಮೆಯಾಚಿಸಬೇಕು. ಇಂದು ಅವನು ಕ್ಷಮೆಯಾಚಿಸದಿದ್ದರೆ, ಜವಾಬ್ದಾರಿಯುತ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು. ಎಚ್ಚರಿಕೆ ನೀಡಲಾಗಿಲ್ಲ ಎಂದು ನಂತರ ಹೇಳಬೇಡಿ. ಕುಖ್ಯಾತ ಪಾಕಿಸ್ತಾನಿ ದರೋಡೆಕೋರನಿಂದ ಭಯೋತ್ಪಾದಕನಾಗಿ ಬದಲಾದ ಬೆದರಿಕೆಯ ನಂತರ, ಬಿಹಾರ ಪೊಲೀಸ್ ಮತ್ತು ಕೇಂದ್ರ ಸಂಸ್ಥೆಗಳ ತಂಡಗಳು ಸಕ್ರಿಯವಾಗಿವೆ ಮತ್ತು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿವೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳಾ ವೈದ್ಯೆ ನುಸ್ರತ್ ಪ್ರವೀಣ್ ಅವರಿಗೆ ನೇಮಕಾತಿ ಪತ್ರ ನೀಡುವಾಗ ಅವರ ಹಿಜಾಬ್ ತೆಗೆದು ನೋಡುತ್ತಿರುವುದನ್ನು…
ಹೃದಯಾಘಾತದ ಹಲವು ಲಕ್ಷಣಗಳು ಬಹಳ ಸಾಮಾನ್ಯ. ಜನರು ಅವುಗಳನ್ನು ಹಗುರವಾಗಿ ಪರಿಗಣಿಸುತ್ತಾರೆ. ಈ ಚಿಹ್ನೆಗಳು ವಾರಗಳು ಅಥವಾ ತಿಂಗಳುಗಳ ಮೊದಲೇ ಕಾಣಿಸಿಕೊಳ್ಳಬಹುದು. ಅಂತಹ ಲಕ್ಷಣಗಳ ಮೇಲೆ ನಿಗಾ ಇರಿಸಿ ಸರಿಯಾದ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಲು ತಜ್ಞರು ಸೂಚಿಸುತ್ತಾರೆ. ಆಯಾಸ, ಅನಿಲ, ಒತ್ತಡ ಅಥವಾ ವೃದ್ಧಾಪ್ಯದ ಕಾರಣದಿಂದಾಗಿ ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಲಾಗುತ್ತದೆ. ಈ ಅಜಾಗರೂಕತೆಯು ನಂತರ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹೃದಯ ಸಮಸ್ಯೆಗಳು ಇದ್ದಕ್ಕಿದ್ದಂತೆ ಬೆಳೆಯುವುದಿಲ್ಲ, ಆದರೆ ಕ್ರಮೇಣ ಬೆಳೆಯುತ್ತವೆ ಎಂಬುದನ್ನು ನೆನಪಿಡಿ. ಹೃದಯ ಅಪಧಮನಿಗಳಲ್ಲಿ ಅಡಚಣೆಗಳು ಬೆಳೆಯಲು ಪ್ರಾರಂಭಿಸಿದಾಗ ಅಥವಾ ಹೃದಯ ಸ್ನಾಯುವಿಗೆ ಸಾಕಷ್ಟು ಆಮ್ಲಜನಕ ಸಿಗದಿದ್ದಾಗ, ದೇಹವು ವಿವಿಧ ರೀತಿಯಲ್ಲಿ ಎಚ್ಚರಿಸುತ್ತದೆ. ಈ ಆರಂಭಿಕ ಚಿಹ್ನೆಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಿದರೆ, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದು ಮಾತ್ರವಲ್ಲದೆ ಜೀವಗಳನ್ನು ಸಹ ಉಳಿಸಬಹುದು. ಹಿರಿಯ ಹೃದ್ರೋಗ ತಜ್ಞ ಡಾ. ಅಲೋಕ್ ಚೋಪ್ರಾ ಅವರ ಪ್ರಕಾರ, ಹಠಾತ್ ಹೃದಯಾಘಾತದ ಮೊದಲು ಕಾಣಿಸಿಕೊಳ್ಳುವ ಕೆಲವು ಮೌನ, ಸೂಕ್ಷ್ಮ ಎಚ್ಚರಿಕೆ ಚಿಹ್ನೆಗಳು…
ಉಡುಪಿ : ಉಡುಪಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ಈ ಘಟನೆ ನಡೆದಿದ್ದು, ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಕೀರ್ತನಾ ಸಾವನ್ನಪ್ಪಿದೆ. ನೀರು ಸೇದುವಾಗ ತಾಯಿ ಕೈಯಿಂದ ಮಗು ಬಾವಿಗೆ ಬಿದ್ದಿದದೆ. ಹಗ್ಗದ ಸಹಾಯದಿಂದ ತಾಯಿ ಬಾವಿಗೆ ಇಳಿದಿದ್ದಾರೆ. ಆದರೆ ಮಗು ಅದಾಗಲೇ ಮೃತಪಟ್ಟಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಮನೆಯಲ್ಲಿ ಫ್ರಿಡ್ಜ್ ಬಳಸುವವರೇ ಎಚ್ಚರ, ಫ್ರಿಡ್ಜ್ ಸ್ಪೋಟಗೊಂಡು ತಾಯಿ-ಮಗ ದುರಂತವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಜೋಗುಳಂಬ ಗಡ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಧಾರೂರು ಮಂಡಲ ಕೇಂದ್ರದಲ್ಲಿರುವ ಅವರ ಮನೆಯಲ್ಲಿ ರೆಫ್ರಿಜರೇಟರ್ ಕಂಪ್ರೆಸರ್ ಸ್ಫೋಟಗೊಂಡು ಇಬ್ಬರು ಮಹಿಳೆಯರು ಮತ್ತು 11 ತಿಂಗಳ ಗಂಡು ಮಗು ಗಂಭೀರವಾಗಿ ಗಾಯಗೊಂಡಿತ್ತು. ಈ ಮಧ್ಯೆ, ಚಿಕಿತ್ಸೆ ಪಡೆಯುತ್ತಿದ್ದಾಗ ತಾಯಿ ಮತ್ತು 11 ತಿಂಗಳ ಮಗು ಸಾವನ್ನಪ್ಪಿದೆ. ಮತ್ತೊಬ್ಬ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಸೆಂಬರ್ 6 ರಂದು, ಧಾರೂರು ಮಂಡಲ ಕೇಂದ್ರದಲ್ಲಿ ಮುಚ್ಚಿದ ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅಶ್ವಿನಿ ಮತ್ತು ಸುನೀತಾ ಎಂಬ ಮಹಿಳೆಯರು ಅಂಗಡಿಯ ಶಟರ್ ತೆರೆದರು. ಇದ್ದಕ್ಕಿದ್ದಂತೆ, ಫ್ರಿಡ್ಜ್ ಸ್ಫೋಟಗೊಂಡು, ಇಬ್ಬರು ಮಹಿಳೆಯರು ಮತ್ತು ಅವರ 11 ತಿಂಗಳ ಮಗುವಿಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯರು ತಕ್ಷಣ ಅವರನ್ನು ಗಡ್ವಾಲ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿಂದ ಅವರನ್ನು ಉತ್ತಮ ಚಿಕಿತ್ಸೆಗಾಗಿ ಕರ್ನೂಲ್ಗೆ ಕರೆದೊಯ್ಯಲಾಯಿತು. ಫ್ರಿಡ್ಜ್ನಲ್ಲಿನ ಕಂಪ್ರೆಸರ್ ಸ್ಫೋಟಗೊಂಡ ಕಾರಣ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಹೇಳುತ್ತಾರೆ. ಈ…
ಬಾಗಲಕೋಟೆ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಮಹಾಲಿಂಗಪುರ ಠಾಣೆ ಪೊಲೀಸರು ಜಾನಪದ ಗಾಯಕ ಮ್ಯೂಸಿಕ್ ಮೈಲಾರಿಯನ್ನು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಮ್ಯೂಸಿಕ್ ಮೈಲಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಲಾರಿ ಮಹಾರಾಷ್ಟ್ರಕ್ಕೆ ಹೊರಟ್ಟಿದ ವೇಲೆ ಮಹಾರಾಷ್ಟ್ರದ ಜತ್ತ ಬಳಿ ಪೊಲೀಸರು ಬಂಧಿಸಿದ್ದಾರೆ. ಘಟನೆ ಹಿನ್ನೆಲೆ ಉತ್ತರ ಕರ್ನಾಟಕ ಭಾಗದಲ್ಲಿ ಅನೇಕ ಪ್ರಖ್ಯಾತ ಜಾನಪದ ಗಾಯಕರಿದ್ದಾರೆ.ಅದರಲ್ಲೂ ಬಿಗ್ ಬಾಸ್ ಸೀಸನ್ 12 ರಲ್ಲಿ ಉತ್ತರ ಕರ್ನಾಟಕದ ಖ್ಯಾತ ಜಾನಪದ ಗಾಯಕ ಮಾಳು ನಿಪನಾಳ್ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಇದೀಗ ಉತ್ತರ ಕರ್ನಾಟಕದ ಯೂಟ್ಯೂಬರ್ ಸ್ಟಾರ್ ಗಾಯಕ ಒಬ್ಬನ ವಿರುದ್ಧ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಹೌದು ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯೂಟ್ಯೂಬ್ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ಸೇರಿದಂತೆ 7 ಜನರ ವಿರುದ್ಧ ಪೋಕ್ಸೋ…
ಬೆಳಗಾವಿ : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 16866 ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ಇವುಗಳ ಪೈಕಿ 8133 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ದಾಖಲಾಗಿರುವ ಡ್ರಗ್ಸ್ ಮತ್ತು ಗಾಂಜಾ ಪ್ರಕರಣಗಳ ಸಂಖ್ಯೆ ಎಷ್ಟು? ಈ ಪೈಕಿ ಎಷ್ಟು ಪೆಡ್ಡರ್ಗಳನ್ನು ಬಂಧಿಸಲಾಗಿದೆ? ಅವರ ವಿರುದ್ಧ ಕೈಗೊಂಡ ಕ್ರಮಗಳೇನು? ಎಷ್ಟು ಪ್ರಮಾಣದ ಮಾದಕದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಧಾನಸಭೆಯಲ್ಲಿ ಅಬ್ಬಯ್ಯಪ್ರಸಾದ್ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್, ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 16866 ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ಇವುಗಳ ಪೈಕಿ 8133 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. 2023 ರಿಂದ 2025 ರವರೆಗೆ ಒಟ್ಟು 16866 ಪ್ರಕರಣಗಳನ್ನು ದಾಖಲಿಸಿ, 8133 ಪೆಡ್ಡರ್ಗಳನ್ನು ಬಂಧಿಸಿ ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆ-1985ರಡಿಯಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿ, ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುತ್ತಿದೆ.














