Author: kannadanewsnow57

ಬೆಳಗಾವಿ : ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರ ಉತ್ತರ. ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಜಾಗೃತದಳ (ವಿಜಿಲೆನ್ಸ್) ಘಟಕವನ್ನು ಪೊಲೀಸ್ ಅಧೀಕ್ಷಕರು / ಪೊಲೀಸ್ ಉಪ ಅಧೀಕ್ಷಕರು ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರ ನೇತೃತ್ವದಲ್ಲಿ ರಚಿಸಲಾಗಿದೆ ಹಾಗೂ ಪ್ರತಿ ಜಿಲ್ಲಾಮಟ್ಟದಲ್ಲಿ ಜಾಗೃತದಳ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ / ಸಬ್ ಇನ್ಸ್ಪೆಕ್ಟರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಮತ್ತು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಾಗೃತದಳವು ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು. ಜಾಗೃತದಳವು ನಿಯಮಿತವಾಗಿ…

Read More

ಬೆಳಗಾವಿ : ರಾಜ್ಯಾದ್ಯಂತ ಭ್ರೂಣಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ, ಕೆಲ ಆಸ್ಪತ್ರೆಗಳಲ್ಲಿಯೇ ಗಂಡು ಸಂತಾನವು ಗರಿಷ್ಟ ಪ್ರಮಾಣದಲ್ಲಿ ದಾಖಲಾಗುತ್ತಿರುವುದನ್ನು ಗುಪ್ತಚರ ದಾಳಿಯ ಮೂಲಕ ಕಂಡುಕೊಳ್ಳಲಾಗುತ್ತಿದೆ. ಯಾವ ತಾಲೂಕಿನಲ್ಲಿ ಗಂಡು ಹೆಣ್ಣಿನ ಅನುಪಾತ ಹೆಚ್ಚುತ್ತಿದೆ? ಯಾವ ಆಸ್ಪತ್ರೆಯಲ್ಲಿ ಏನಾಗುತ್ತಿದೆ ಎನ್ನುವಂತಹ ಅಂಶಗಳ ಮೇಲೆ ಮೇಲ್ವಿಚಾರಣೆ ನಡೆಸಿ, ಅಂತಹ ಜಾಲವನ್ನು ಹತ್ತಿಕ್ಕಲು ಸೂಕ್ತ ಕ್ರಮವಹಿಸುತ್ತಿದ್ದೇವೆ. ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ 2024-25 ನೇ ಸಾಲಿನಲ್ಲಿ ಬಸ್ ಬ್ರ್ಯಾಂಡಿಂಗ್, ಟ್ರೈನ್ ಬ್ರ್ಯಾಂಡಿಂಗ್, ಹೋರ್ಡಿಂಗ್ಸ್ ಗೋಡೆ ಬರಹ, ರೇಡಿಯೋ ಜಿಂಗಲ್ಸ್, ಟಿ.ವಿ. ಸ್ಪಾಟ್ಸ್ ಮುಖಾಂತರ ಸಾರ್ವಜನಿಕರಿಗೆ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯ ಕುರಿತು ಅರಿವು ಮೂಡಿಸಲಾಗುತ್ತಿದೆ. ಪಿ.ಸಿ. & ಪಿ.ಎನ್.ಡಿ.ಟಿ. ಕಾಯ್ದೆಯ ಬಗ್ಗೆ ರಾಜ್ಯ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಾಲಕಾಲಕ್ಕೆ ಅರಿವು ಮೂಡಿಸುವ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್…

Read More

ಬೆಂಗಳೂರು: ನಗರದಲ್ಲಿ ಡಿಸೆಂಬರ್.31ರ ರಾತ್ರಿಯಂದು ಹೊಸ ವರ್ಷಾಚರಣೆಯನ್ನು ವಿಜೃಂಭಣೆಯಿಂದ ಜನರು ಆಚರಿಸುತ್ತಾರೆ. ಈ ವೇಳೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮತ್ತು ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹಾ ಸೂಚನೆಗಳು, ಸಾರ್ವಜನಿಕರು ಮಾಡಬೇಕಾದ ಅಂಶಗಳು. 1. ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಆಚರಿಸುವುದು. 2. ಕಾನೂನು ನಿಯಮಗಳನ್ನು ಪಾಲನೆ ಮಾಡಿ, ನಿಯಮಿತವಾಗಿ ವಾಹನ ಚಾಲನೆ ಮಾಡಿ ಮತ್ತು ಸಂಚಾರಿ ನಿಮಯಗಳನ್ನು ಕಡ್ಡಾಯವಾಗಿ ಪಾಲಿಸಿ. 3. ಸಾರ್ವಜನಿಕರು ಶಾಂತಿ ಮತ್ತು ಶಿಸ್ತನ್ನು ಕಾಪಾಡಲು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಯವರ ಜೊತೆ ಸಹಕರಿಸಿ 4. ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮೋದಿಸಲ್ಪಟ್ಟ ಅಧೀಕೃತ ಸ್ಥಳಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ. 5. ತುರ್ತು ಸಂದರ್ಭಗಳಲ್ಲಿ 112 ಅಥವಾ ಸಮೀಪದ ಪೊಲೀಸ್ ಠಾಣೆಯನ್ನು/ಪೊಲೀಸ್ ಕಿಯೋಸ್ಕ್ ಅನ್ನು ಸಂಪರ್ಕಿಸುವುದು. 6. ವರ್ಷಾಚರಣೆಯ ಸಂದರ್ಭದಲ್ಲಿ ಅಕ್ಕಪಕ್ಕದವರ ಭದ್ರತೆ ಮತ್ತು ಸುರಕ್ಷತೆಯ…

Read More

ಬೆಳಗಾವಿ : ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಸಚಿವರು,ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು 3.96 ಲಕ್ಷ ಅರ್ಜಿಗಳು ಇಲಾಖೆಗೆ ಬಂದಿವೆ. ಈ ಪೈಕಿ 2.95 ಲಕ್ಷ ಅರ್ಜಿಗಳ ವಿಲೇ ವಾರಿ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನ ಮೇರೆಗೆ ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಅನರ್ಹರನ್ನು ಪತ್ತೆ ಹಚ್ಚಿ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇನ್ನು ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ 3.96 ಲಕ್ಷ ಅರ್ಜಿಗಳು ಬಂದಿದ್ದು, ಈ ಪೈಕಿ 2.95 ಲಕ್ಷ ಅರ್ಜಿ ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳನ್ನು ಒಂದು ತಿಂಗಳೊಳಗೆ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Read More

ಬೆಂಗಳೂರು : ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ರಾಜ್ಯ ಮಹಿಳಾ ಆಯೋಗವು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕಲಬುರಗಿ, ಶಿವಮೊಗ್ಗ, ಬೀದರ್, ತುಮಕೂರು ಮತ್ತು ಹಾಸನ ಜಿಲ್ಲೆಗಳಿಗೆ ನಾನು ಭೇಟಿ ನೀಡಿದ್ದಾಗ ಅಕ್ರಮ ಮದ್ಯ ಮಾರಾಟ ಮತ್ತು ಹೆಚ್ಚುತ್ತಿರುವ ಮದ್ಯದಂಗಡಿಗಳ ಬಗ್ಗೆ ಮಹಿಳೆಯರು ಅಹವಾಲುಗಳನ್ನು ಸಲ್ಲಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಮದ್ಯ ಮಾರಾಟದಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಚಿಂತನೆ ನಡೆಸಬೇಕು ಎಂದು ಪತ್ರದಲ್ಲಿ ಅವರು ಕೋರಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2025-26 ನೇ ಸಾಲಿನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಸರ್ಕಾರ ಮಾಹಿತಿ ನೀಡಿದೆ. ರಾಜ್ಯ ಸರ್ಕಾರವು ರಾಜ್ಯದಲ್ಲಿ ಸರ್ಕಾರಿ ಮತ್ತು ಅರೇ ಸರ್ಕಾರಿ ಇಲಾಖೆವಾರು ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿಗೆ ಸರ್ಕಾರದಿಂದ ಅನುಮೋದನೆ ದೊರೆತಿರುವ ಹುದ್ದೆಗಳ ಕುರಿತು ಮಾಹಿತಿ ಹಂಚಿಕೊಂಡಿದೆ. ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ. ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,572 ಹುದ್ದೆಗಳು ಖಾಲಿ ಇದ್ದು, ಒಳಾಡಳಿತ ಇಲಾಖೆಯಲ್ಲಿ 28,188, ಕಂದಾಯ ಇಲಾಖೆಯಲ್ಲಿ 10,867 ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,504 ಹುದ್ದೆಗಳು ಖಾಲಿ ಉಳಿದಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ರಸ್ತೆ ನಿರ್ಮಿಸಲು 12 ಲಕ್ಷ ರೂ. ಸಹಾಯನಧ ನೀಡಲಿದೆ. ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಜ್ಯ ಸರ್ಕಾರದ ಲೆ.ಶೇ.3054 ಯೋಜನೆಯಡಿ ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಗ್ರಾಮೀಣ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ನರೇಗಾ ಯೋಜನೆಯಡಿ ಈ ಹಿಂದೆ ಗ್ರಾಮೀಣ ಸರ್ವಋತು ಸಂಪರ್ಕ ರಸ್ತೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಸದರಿ ಯೋಜನೆಯಡಿ ರಸ್ತೆಗಳನ್ನು ಕೊನೆಯ ಆದ್ಯತೆಯಾಗಿ ಪರಿಗಣಿಸಿ ಶೇ10ರ ಮಿತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿತ್ತು. ರಾಜ್ಯಾದ್ಯಂತ ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸಲು ವ್ಯಾಪಕವಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗದ ಕಾರಣ, ಹಾಗೂ ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಸಕಾಲದಲ್ಲಿ ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗುವಂತೆ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಅತ್ಯಗತ್ಯವಾಗಿರವುದನ್ನು ಮನಗಂಡು ಸನ್ಮಾನ…

Read More

ಉಡುಪಿ :ಉಡುಪಿಯಲ್ಲಿ ಅಪರೂಪದ ಘಟನೆಯೊಂದು ನಡೆದಿದ್ದು, ಆಫೀಸ್ ಗೆ ರಜೆ ಸಿಗದಿದ್ದಕ್ಕೆ ಆನ್ ಲೈನ್ ನಲ್ಲೇ ಜೋಡಿಯೊಂದು ನಿಶ್ಚಿತಾರ್ಥ ಮಾಡಿಕೊಂಡ ಘಟನೆ ನಡೆದಿದೆ. ಹೌದು, ಉಡುಪಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲು ರಜೆ ಸಿಗದೇ ಇದ್ದಕ್ಕೆ ಕುಟುಂಬದವರು ಆನ್ ಲೈನ್ ನಲ್ಲೇ ಎಂಗೇಜ್ ಮೆಂಟ್ ಮಾಡಿಸಿದ್ದಾರೆ. ಆನ್ ಲೈನ್ ನಲ್ಲೇ ಪರಸ್ಪರ ಉಂಗುರ ತೋರಿಸಿ ಯುವಕ ಯುವತಿ ಉಂಗುರ ಧರಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ಯುವಕ ಸುಹಾಸ್ ಎಸ್ ಮತ್ತು ಉಡುಪಿ ನಿವಾಸಿ ಕಾತ್ಯಾಯಿನಿ ಅವರ ನಿಶ್ಚಿತಾರ್ಥ ನಿಗದಿಯಾಗಿತ್ತು. ಕೆನಡಾದಲ್ಲಿ ಕೆಲಸ ಮಾಡುತ್ತಿರುವ ಮಾಗಡಿ ಮೂಲದ ಸುಹಾಸ್ಗೆ ಇಂಡಿಯಾಗೆ ಬರಲು ರಜೆ ಸಿಕ್ಕಿಲ್ಲ. ಮುಂದಿನ ಜ. 7 ಹಾಗೂ 8 ಕ್ಕೆ ಮದುವೆ ನಿಗದಿಯಾಗಿದ್ದು, ನಿಶ್ಚಿತಾರ್ಥಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಆನ್ಲೈನ್ ಮೂಲಕ ನಿಶ್ಚಿತಾರ್ಥ ಮಾಡಲು ನಿರ್ಧರಿಸಿದ ಕುಟುಂಬ ವೀಡಿಯೋ ಕಾಲ್ ಮೂಲಕ ನಿಶ್ಚಿತಾರ್ಥ ಮಾಡಿ ಮುಗಿಸಿದೆ. ಉಡುಪಿಯಲ್ಲಿ ಬೆಳಗ್ಗೆ ಸಮಯದಲ್ಲಿ ನಿಶ್ಚಿತಾರ್ಥ ನಡೆದಿದ್ರೆ, ಕೆನಡಾದಲ್ಲಿ ಮಧ್ಯರಾತ್ರಿ ಆಗಿತ್ತು.…

Read More

ಜಿಮ್ ಗೆ ಹೋಗುವ ಯುವಕರೇ ಎಚ್ಚರ, 27 ವರ್ಷದ ಯುವಕನೊಬ್ಬ ದಿನನಿತ್ಯದ ಜಿಮ್‌ನಲ್ಲಿ ಭಾರವಾದ ಭಾರವನ್ನು ಎತ್ತುವಾಗ ಹಠಾತ್ ಮತ್ತು ನೋವುರಹಿತ ದೃಷ್ಟಿ ನಷ್ಟ ಅನುಭವಿಸಿರುವ ಘಟನೆ ನಡೆದಿದೆ. ದೆಹಲಿಯ ಏಮ್ಸ್‌ನಲ್ಲಿ ತರಬೇತಿ ಪಡೆದ ಕಣ್ಣಿನ ತಜ್ಞ ವೈದ್ಯ ಮತ್ತು ಸಹಾಯಕ ಪ್ರಾಧ್ಯಾಪಕ ಡಾ. ಆಶಿಶ್ ಮಾರ್ಕನ್ ಅವರು ಈ ಪ್ರಕರಣವನ್ನು ಹಂಚಿಕೊಂಡಿದ್ದಾರೆ, ಅವರು ತೀವ್ರವಾದ ದೈಹಿಕ ಒತ್ತಡಕ್ಕೆ ಸಂಬಂಧಿಸಿದ ಸ್ವಲ್ಪ ತಿಳಿದಿರುವ ಆದರೆ ಗಂಭೀರವಾದ ಕಣ್ಣಿನ ಸ್ಥಿತಿಯ ಬಗ್ಗೆ ಜಾಗೃತಿ ಮೂಡಿಸಲು ಇನ್‌ಸ್ಟಾಗ್ರಾಮ್‌ನಲ್ಲಿ ಘಟನೆಯನ್ನು ಹೈಲೈಟ್ ಮಾಡಿದ್ದಾರೆ. ಡಾ. ಮಾರ್ಕನ್ ಹಂಚಿಕೊಂಡ ವಿವರಗಳ ಪ್ರಕಾರ, ಆ ವ್ಯಕ್ತಿ ಆರೋಗ್ಯವಾಗಿದ್ದರು ಮತ್ತು ಕಣ್ಣಿಗೆ ಸಂಬಂಧಿಸಿದ ಯಾವುದೇ ದೂರುಗಳಿರಲಿಲ್ಲ. ಜಿಮ್‌ನಲ್ಲಿ ಡೆಡ್‌ಲಿಫ್ಟ್ ಸಮಯದಲ್ಲಿ ಅವರು ಆಯಾಸಗೊಂಡ ತಕ್ಷಣ ದೃಷ್ಟಿ ಸಮಸ್ಯೆ ಪ್ರಾರಂಭವಾಯಿತು. ಅವರ ಬಲಗಣ್ಣಿನಲ್ಲಿ ಹಠಾತ್ ದೃಷ್ಟಿ ಕುಸಿತವನ್ನು ಅವರು ಗಮನಿಸಿದರು, ಆದರೆ ಅವರ ಎಡಗಣ್ಣು ಸಂಪೂರ್ಣವಾಗಿ ಸಾಮಾನ್ಯವಾಗಿತ್ತು. ಪರೀಕ್ಷಿಸಿದಾಗ, ಪೀಡಿತ ಕಣ್ಣಿನಲ್ಲಿ ದೃಷ್ಟಿ ಗಮನಾರ್ಹವಾಗಿ ಕಡಿಮೆಯಾಗಿದೆ, ಅವರು ಬೆರಳುಗಳನ್ನು ಮಾತ್ರ ಎಣಿಸುವ…

Read More

ಇತ್ತೀಚೆಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗಿದ್ದು, ಆಂಧ್ರಪ್ರದೇಶದಲ್ಲಿ ಹೃದಯಾಘಾತದಿಂದ ತರಗತಿಯಲ್ಲಿ ಕುಸಿದು ಬಿದ್ದ 10 ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಕೊನಸೀಮಾ ಜಿಲ್ಲೆಯ ರಾಮಚಂದ್ರಪುರಂನಲ್ಲಿರುವ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 10 ನೇ ತರಗತಿ ವಿದ್ಯಾರ್ಥಿನಿ ಸಿರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗ ಆಕೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಇದನ್ನು ಗಮನಿಸಿದ ಶಿಕ್ಷಕರು ಮತ್ತು ಇತರ ಸಿಬ್ಬಂದಿ ಸಿರಿಯನ್ನು ಏರಿಯಾ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಸಿರಿಯನ್ನು ಪರೀಕ್ಷಿಸಿದ ವೈದ್ಯರು ಆಕೆ ಈಗಾಗಲೇ ಮೃತಪಟ್ಟಿದ್ದಾಳೆ ಎಂದು ದೃಢಪಡಿಸಿದರು. ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ನಂಬಿದ್ದಾರೆ. ವಿಷಯ ತಿಳಿದ ನಂತರ, ರಾಮಚಂದ್ರಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://twitter.com/TeluguScribe/status/1999828957970264528?s=20

Read More