Subscribe to Updates
Get the latest creative news from FooBar about art, design and business.
Author: kannadanewsnow57
ಹಾಸನ : ಹಾಸನ ಜಿಲ್ಲೆ, ಹಾಸನ ಟೌನ್ ಶ್ರೀ ಹಾಸನಾಂಬ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದೆ. ಸದರಿ ದೇವಾಲಯದಲ್ಲಿ ಪ್ರತೀ ವರ್ಷ ಶ್ರೀ ಹಾಸನಾಂಬ ದೇವಿಯ ಜಾತ್ರೋತ್ಸವ ಕಾರ್ಯಕ್ರಮವು ಅಭೂತಪೂರ್ವವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದೆ. ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 9 ರಂದು ಬಾಗಿಲು ಓಪನ್ ಆಗಲಿದ್ದು, ಅಕ್ಟೋಬರ್ 23ರಂದು ಬಾಗಿಲು ಮುಚ್ಚಲಾಗುವುದು. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಸೆಕ್ಷನ್ 58ರಡಿಯಲ್ಲಿ ದೇವಸ್ಥಾನದ ರೂಢಿ, ಸಂಪ್ರದಾಯ ಮತ್ತು ಆಚರಣೆಯಂತೆ ದೇವಾಲಯದ ಗರ್ಭಗುಡಿ, ಒಳಾಂಗಣ ಮತ್ತು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುತ್ತಿರುವ ದೇವಾಲಯದ ನೌಕರರು ಮತ್ತು ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ವಸ್ತ್ರ ಸಂಹಿತೆಯನ್ನು ಪಾಲಿಸುವುದು ಸೂಕ್ತವಾಗಿದ್ದು, ಈ ಬಗ್ಗೆ ದಿನಾಂಕ:19.09.2025 ರಂದು ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ನಿರ್ಣಯವಾಗಿರುತ್ತದೆ. ಆದ್ದರಿಂದ, ಕರ್ನಾಟಕ ಹಿಂದೂ ಧಾರ್ಮಿಕ…
ಬೆಂಗಳೂರು : ಸಿನಿಮಾ ಮಾಡುವುದಾಗಿ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ, ನಿರ್ದೇಶಕ, ನಿರ್ಮಾಪಕ ಹೇಮಂತ್ ರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ರಾಜಾಜಿನಗರ ಪೊಲೀಸರು ನಟ, ನಿರ್ದೇಶಕ ಮತ್ತು ನಿರ್ಮಾಪಕ ಹೇಮಂತ್ ನನ್ನು ಬಂಧಿಸಿದ್ದಾರೆ. 2022 ರಲ್ಲಿ ನಟಿಗೆ ಪರಿಚಯವಾಗಿದ್ದ ನಟ ಹೇಮಂತ್. ರಿಚ್ಚಿ ಎಂಬ ಚಿತ್ರದಲ್ಲಿ ನಟಿಗೆ ಅವಕಾಶ ನೀಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. 2 ಲಕ್ಷ ರೂ. ಸಂಭಾವನೆ ನೀಡೋದಾಗಿ ಅಗ್ರಿಮೆಂಟ್ ಮಾಡಿದ್ದರು. ಮುಂಗಡವಾಗಿ 60 ಸಾವಿರ ರೂ. ಹಣ ನೀಡಿದ್ದ ಹೇಮಂತ್, ಅಶ್ಲೀಲ ಬಟ್ಟೆ ತೊಟ್ಟು ನಟಿಸಬೇಕು ಎಂದು ಕಿರುಕುಳ ನೀಡಲಾಗಿದೆ. ಮುಂಬೈಗೆ ಶೂಟಿಂಗ್ ಗೆ ಹೋಗಿದ್ದಾಗ ಅಸಭ್ಯ ವರ್ತನೆ, ನಿರಾಕರಿಸಿದ್ದಕ್ಕೆ ರೌಡಿಗಳನ್ನು ಬಿಟ್ಟು ಬೆದರಿಕೆ ಹಾಕಲಾಗಿದೆ ಎಂದು ನಟಿ ಆರೋಪಿಸಿದ್ದಾರೆ. ಚಿತ್ರೀಕರಣದ ಬಳಿಕ ನೀಡಿದ್ದ ಚೆಕ್ ಬೌನ್ಸ್ ಆರೋಪ, ಸೆನ್ಸಾರ್ ಆಗದ ದೃಶ್ಯಗಳನ್ನು ವೈರಲ್ ಮಾಡಿದ್ದ ಎಂದು ನಟಿ ಆರೋಪಿಸಿದ್ದು, ಸದ್ಯ ಪೊಲೀಸರು ನಟ ಹೇಮಂತ್ ರನ್ನು ನ್ಯಾಯಾಂಗ…
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಪಡಿತರ ಕಾರ್ಡ್ ದಾರರಿಗೆ ಸರ್ಕಾರ ಶಾಕ್ ನೀಡಿದೆ. ಉಚಿತವಾಗಿ ಪಡೆಯುತ್ತಿರುವ ಅನ್ನಭಾಗ್ಯ ಪಡಿತರ ಪಡಿತರ ಕಾರ್ಡ್ ಪರಿಷ್ಕರಣೆ ಮಾಡಿದೆ. ರಾಜ್ಯ ಸರ್ಕಾರವು ಹಲವು ಕಡೆ ಪಡಿತರ ಕಾರ್ಡ್ ಡಿಲೀಟ್ ಮಾಡಲು ಮುಂದಾಗಿದೆ. ಡಿಲೀಟ್ ಮಾಡಿದ್ದು ಮಾತ್ರವಲ್ಲದೇ ನ್ಯಾಯಬೆಲೆ ಅಂಗಡಿಯಲ್ಲಿ ಡಿಲೀಟ್ ಮಾಡಲಾದ ವ್ಯಕ್ತಿಗಳ ಹೆಸರಿನಲ್ಲಿರುವ ಕಾರ್ಡ್ ವಿವರಗಳನ್ನು ನೋಟಿಸ್ ಬೋರ್ಡ್ನಲ್ಲಿ ಅಂಟಿಸಲಾಗಿದೆ. ಇನ್ನು ನೋಟಿಸ್ ಬೋರ್ಡ್ನಲ್ಲಿ ಕೃಷಿ ಇತ್ಯಾದಿ ಆದಾಯಗಳಿಂದಾಗಿ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದೆ. ಹೀಗಾಗಿ ನಿಮ್ಮ ಪಡಿತರವನ್ನು ರದ್ದುಗೊಳಿಸಲು ಮುಂದಾಗಿದ್ದೇವೆ. ಈ ಬಾರಿ ಕೊನೆಯ ಬಾರಿಗೆ ಪಡಿತರ ನೀಡಲಾಗುತ್ತದೆ. ಮುಂದಿನ ತಿಂಗಳಿನಿಂದ ಪಡಿತರ ನೀಡಲಾಗುವುದಿಲ್ಲ ಎಂದು ಉಲ್ಲೇಖಿಸಲಾಗಿದೆ. ಬ್ಯಾಂಕ್ ನಲ್ಲಿ ಕೃಷಿ, ಶಿಕ್ಷಣ, ವಾಹನ ಸಾಲಕ್ಕಾಗಿ ಐಟಿ ಫೈಲಿಂಗ್ ತೋರಿಸಿದವರಿಗೂ ರದ್ದತಿಯ ಶಾಕ್ ರೈತರು ತಮ್ಮ ಕೃಷಿ ಕೆಲಸಗಳಿಗಾಗಿ ಸಾಲಸೌಲಭ್ಯಕ್ಕಾಗಿ ಐಟಿ ಫೈಲಿಂಗ್ ನಂತಹ ಕೆಲಸ ಮಾಡಿದ್ದು ಇಂದು ರೇಷನ್ ಕಾರ್ಡ್ ರದ್ದತಿಗೆ ಪ್ರಮುಖ ಕಾರಣವಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಲ,…
ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 131 ಇನ್ಪೆಕ್ಟರ್ ಹಾಗೂ 27 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 131 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಡೈರಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರ್ ಆಫ್ ಪೊಲೀಸ್ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ಎಸ್ ಎಲ್ ಸಾಗರ್ ಅವರನ್ನು ಚಾಮರಾಜನಗರದ ಸಂತೇಮಾರನಹಳ್ಳಿ ವೃತ್ತಕ್ಕೆ ವರ್ಗಾವಣೆ ಮಾಡಿದ್ದರೇ, ಬಸವರಾಜು ಅವರನ್ನು ಡಿಸಿಆರ್ ಇಗೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗದ ಸೊರಬ ವೃತ್ತದ ಪೊಲೀಸ್ ಇನ್ಸ್ ಪೆಕ್ಟರ್ ರಾಜಶೇಖರಯ್ಯ ಎಲ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಮುದ್ದುರಾಜ ವೈ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ, ಬೆಂಗಳೂರು ನಗರ ಸಂಚಾರ ಮತ್ತು ಯೋಜನೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶ್ವಥನಾರಾಯಣ ಸ್ವಾಮಿ ಬಿಎನ್ ಅವರನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.…
ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಸ್ಲೀಪರ್ ಬಸ್ ಹರಿದು ಮೂವರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಸ್ಲೀಪರ್ ಬಸ್ ಹರಿದು ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮೃತರನ್ನು ಅನ್ನಪೂರ್ಣ(40), ಪ್ರಕಾಶ್(25) ಶರಣಪ್ಪ(19) ಎಂದು ಗುರುತಿಸಲಾಗಿದೆ. ಮೃತರು ಗದಗ ಜಿಲ್ಲೆ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದವರಾಗಿದ್ದಾರೆ. ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಹೋಗುತ್ತಿದ್ದರು. ಈ ವೇಳೆ ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಡಿಕ್ಕಿ ಹೊಡೆದಿದೆ. ಮೂವರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಕೊಪ್ಪಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದ ಶಿಕ್ಷಕರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಜೊತೆಗೆ ಶಾಲಾ ತರಗತಿಯನ್ನು ನಡೆಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆದೇಶಿಸಿದೆ. ಈ ಮೂಲಕ ರಾಜ್ಯದ ಜಾತಿಗಣತಿ ಸಮೀಕ್ಷೆಯಲ್ಲಿ ತೊಡಗಿದ್ದಂತ ಶಿಕ್ಷಕರಿಗೆ ಸರ್ಕಾರ ಶಾಕ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದೆ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ: 04-10-2025 ರಿಂದ ಪ್ರಾರಂಭಿಸಲಾಗಿದ್ದು, ರಾಜ್ಯದ ಇತರೆ ಭಾಗಗಳಲ್ಲಿ ದಿನಾಂಕ:…
ಬೆಂಗಳೂರು : ಮುಡಾ ಹಗರಣದಲ್ಲಿ 440 ಕೋಟಿ ರೂ.ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಕ್ರಮವಾಗಿ ನೀಡಿದ್ದ 252 ನಿವೇಶನಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ತಿಳಿಸಿದೆ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಳಿ ಇಡಿ ಅಧಿಕಾರಿಗಳು 32 ಸೈಟ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 40.8 ಕೋಟಿ ರೂ.ಮೌಲ್ಯದ ನಿವೇಶಗಳನ್ನೂ ಇಡಿ ವಶಕ್ಕೆ ಪಡೆದುಕೊಂಡಿದೆ. ಅಕ್ರಮವಾಗಿ 252 ಸೈಟ್ ಗಳನ್ನು ಅಧಿಕಾರಿಗಳು ಅಲಾಟ್ ಮಾಡಿದ್ದರು. ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತು, ದಿನೇಶ್ ಬಳಿ 32 ನಿವೇಶಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕುಟುಂಬಸ್ಥರ ಹೆಸರಿನಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್ ಆಸ್ತಿ ಮಾಡಿದ್ದರು.
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಂಸದ, ಶಾಸಕರ ಕಾರಿನ ಮೇಲೆ ದಾಳಿ ನಡೆಸಲಾಗಿದ್ದು, ಖಗೇನ್ ಮುರ್ಮು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ಪಕ್ಷದ ನಿಯೋಗದ ಮೇಲೆ ಕಲ್ಲು ತೂರಾಟ ನಡೆದಿದ್ದು, ಬಿಜೆಪಿ ಸಂಸದ ಖಗೇನ್ ಮುರ್ಮು ಗಂಭೀರವಾಗಿ ಗಾಯಗೊಂಡಿದ್ದಾರೆ. ಇತ್ತೀಚಿನ ಪ್ರವಾಹದಿಂದ ಇದು ಅತ್ಯಂತ ಹಾನಿಗೊಳಗಾಗಿದೆ. ಸಂಸತ್ತಿನಲ್ಲಿ ಮಾಲ್ದಾಹ ಉತ್ತರವನ್ನು ಪ್ರತಿನಿಧಿಸುವ ಮುರ್ಮು, ದಾಳಿ ನಡೆದಾಗ ಪರಿಸ್ಥಿತಿಯನ್ನು ಪರಿಶೀಲಿಸಲು ಸ್ಥಳೀಯ ಬಿಜೆಪಿ ಶಾಸಕ ಶಂಕರ್ ಘೋಷ್ ಅವರೊಂದಿಗೆ ನಾಗರಕತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಮುರ್ಮು ತಲೆಯಿಂದ ತೀವ್ರ ರಕ್ತಸ್ರಾವವಾಗುತ್ತಿರುವುದನ್ನು ವೀಡಿಯೊಗಳು ತೋರಿಸಿವೆ. ಘಟನೆಯ ಸಮಯದಲ್ಲಿ ಶಂಕರ್ ಘೋಷ್ ಅವರ ಕಾರನ್ನು ಸಹ ಧ್ವಂಸಗೊಳಿಸಲಾಗಿದೆ. ಪಕ್ಷದ ಮೂಲಗಳ ಪ್ರಕಾರ, ತಂಡವು ಪ್ರವಾಹ ಪೀಡಿತ ನಿವಾಸಿಗಳೊಂದಿಗೆ ಸಂವಹನ ನಡೆಸುತ್ತಿದ್ದಾಗ ಸ್ಥಳೀಯರ ಗುಂಪು ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು ಎಂದು ಆರೋಪಿಸಲಾಗಿದೆ.
ನವದೆಹಲಿ : ಇಂದು ಸುಪ್ರೀಂ ಕೋರ್ಟ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದರು. ಆರಂಭಿಕ ಮಾಹಿತಿಯ ಪ್ರಕಾರ, ವಕೀಲರು ಚರ್ಚೆಯ ಸಮಯದಲ್ಲಿ ವೇದಿಕೆಯ ಬಳಿ ಬಂದು ತಮ್ಮ ಶೂ ಎಸೆಯಲು ಪ್ರಯತ್ನಿಸಿದರು, ಆದರೆ ಭದ್ರತಾ ಸಿಬ್ಬಂದಿ ಅವರನ್ನು ಸಮಯಕ್ಕೆ ಸರಿಯಾಗಿ ತಡೆದರು. ಭದ್ರತಾ ಸಿಬ್ಬಂದಿ ವಕೀಲರನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ದರು, ಆ ಸಮಯದಲ್ಲಿ ಅವರು “ಸನಾತನ ಧರ್ಮಕ್ಕೆ ಆಗಿರುವ ಅವಮಾನವನ್ನು ನಾವು ಸಹಿಸುವುದಿಲ್ಲ” ಎಂದು ಕೂಗಿದರು. ಘಟನೆಯ ಉದ್ದಕ್ಕೂ ಸಿಜೆಐ ಗವಾಯಿ ತಮ್ಮ ಶಾಂತತೆಯನ್ನು ಕಾಯ್ದುಕೊಂಡರು ಮತ್ತು “ನಮಗೆ ಇದರಿಂದ ತೊಂದರೆಯಾಗಿಲ್ಲ; ನೀವು ನಿಮ್ಮ ವಾದಗಳನ್ನು ಮುಂದುವರಿಸಬೇಕು” ಎಂದು ಹೇಳಿದರು. https://twitter.com/ANI/status/1975102292140474641?ref_src=twsrc%5Egoogle%7Ctwcamp%5Eserp%7Ctwgr%5Etweet
ನವದೆಹಲಿ : ಇಂದು ಸುಪ್ರೀಂ ಕೋರ್ಟ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದರು. ಆರಂಭಿಕ ಮಾಹಿತಿಯ ಪ್ರಕಾರ, ವಕೀಲರು ಚರ್ಚೆಯ ಸಮಯದಲ್ಲಿ ವೇದಿಕೆಯ ಬಳಿ ಬಂದು ತಮ್ಮ ಶೂ ಎಸೆಯಲು ಪ್ರಯತ್ನಿಸಿದರು, ಆದರೆ ಭದ್ರತಾ ಸಿಬ್ಬಂದಿ ಅವರನ್ನು ಸಮಯಕ್ಕೆ ಸರಿಯಾಗಿ ತಡೆದರು. ಭದ್ರತಾ ಸಿಬ್ಬಂದಿ ವಕೀಲರನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ದರು, ಆ ಸಮಯದಲ್ಲಿ ಅವರು “ಸನಾತನ ಧರ್ಮಕ್ಕೆ ಆಗಿರುವ ಅವಮಾನವನ್ನು ನಾವು ಸಹಿಸುವುದಿಲ್ಲ” ಎಂದು ಕೂಗಿದರು. ಘಟನೆಯ ಉದ್ದಕ್ಕೂ ಸಿಜೆಐ ಗವಾಯಿ ತಮ್ಮ ಶಾಂತತೆಯನ್ನು ಕಾಯ್ದುಕೊಂಡರು ಮತ್ತು “ನಮಗೆ ಇದರಿಂದ ತೊಂದರೆಯಾಗಿಲ್ಲ; ನೀವು ನಿಮ್ಮ ವಾದಗಳನ್ನು ಮುಂದುವರಿಸಬೇಕು” ಎಂದು ಹೇಳಿದರು. https://twitter.com/ANI/status/1975102292140474641?ref_src=twsrc%5Egoogle%7Ctwcamp%5Eserp%7Ctwgr%5Etweet














