Subscribe to Updates
Get the latest creative news from FooBar about art, design and business.
Author: kannadanewsnow57
ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತ ಸೇರಿದಂತೆ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಆಗಿರುತ್ತದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಪ್ಪಳ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಳ್ಳಾರಿ ರೀಡ್ಸ್ ಸಂಸ್ಥೆ ಹಾಗೂ ಬೆಳಗಾವಿ ಸ್ಪಂದನಾ ಸೊಸೈಟಿ ಇವರುಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿದ್ದ “ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ-2016 ಹಾಗೂ ಹದಿಹರೆಯದ ಮಕ್ಕಳ ಸಬಲೀಕರಣ ಕುರಿತು ವಿವಿಧ ಭಾಗೀದಾರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಬಾಲ್ಯವಿವಾಹವನ್ನು ಮಾಡಿಸಿದ ಪಾಸ್ಟರ್(ಪಾದ್ರಿ)ರವರಿಗೆ ಶಿಕ್ಷೆಯಾಗಿದೆ. ಕಲ್ಯಾಣ…
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಕಾರ್ಯಕ್ರಮಗಳಡಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ www.sw.kar.nic.in ಅಥವಾ https://ssp.postmatric.karnataka.gov.in/homepage.aspx ಲಿಂಕ್ ನಲ್ಲಿ ಅರ್ಜಿ ಸಲ್ಲಿಸಬಹುದು. ಸೂಚನೆಗಳು: ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಿ ಪ್ರಥಮ ಬಾರಿಗೆ, ಪ್ರಥಮ ಪ್ರಯತ್ನದಲ್ಲಿ ಪಾಸಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾಥಿವೇತನ ಪಡೆದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿಗೆ ಅರ್ಜಿ ಸಲ್ಲಿಸಬಹುದು. ಕಳೆದ ಸಾಲಿನಲ್ಲಿ ವಿವಿಧ ಕಾರಣಗಳಿಂದ ವಿದ್ಯಾರ್ಥಿ ವೇತನ ಮಂಜೂರಾಗದ ಹಾಗೂ ರಿಜೆಕ್ಟ್…
ಸರ್ಕಾರದ ಆದೇಶದಂತೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ 35 ವಾರ್ಡ್ಗಳಲ್ಲಿ ಇ-ಆಸ್ತಿಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು ನ.11 ರಿಂದ ಡಿ.03 ರವರೆಗೆ ವಿವಿಧ ವಾರ್ಡುಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಮಹಾನಗರಪಾಲಿಕೆ ಆಯುಕ್ತರು ಕೋರಿದ್ದಾರೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇ-ಆಸ್ತಿ(ಇ-ಖಾತಾ) ಪಡೆಯುವುದು ಕಡ್ಡಾಯವಾಗಿದ್ದು ಆಸ್ತಿ ಮಾಲೀಕರು ಕರ್ನಾಟಕ ಒನ್/ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಪಾಲಿಕೆಯ 3 ವಲಯ ಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು, ಪಾಲಿಕೆ ಸಿಬ್ಬಂದಿಗಳು ಮನೆ-ಮನೆಗೆ ಭೇಟಿ ನೀಡಿದಾಗ ಸೂಕ್ತ ದಾಖಲೆಗಳನ್ನು ಒದಗಿಸಿ ಪಡೆಯಬಹುದು, ವಾರ್ಡ್ವಾರು ‘ಇ-ಖಾತಾ ಮೇಳ’ ದಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ Citizen Portal Link : https//eaasthi.karnataka.gov.in ಇಲ್ಲಿ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಕಂದಾಯ ವಾರ್ಡ್ ಸಂಖ್ಯೆ 35 ಗಾಡಿಕೊಪ್ಪ ದಿ: 11-11-2025 ಅಗಮುಡಿ ಸಮಾಜ ಸೇವಾ ಸಂಘ, ಆಲ್ಕೋಳ ವೃತ್ತ. ವಾರ್ಡ್ ಸಂಖ್ಯೆ 34 ವಿನೋಬನಗರ ದಿ: 13-11-2025 ಆಟೋ ಕಾಂಪ್ಲೆಕ್ಸ್, ಪ್ಲಾಟ್ ನಂ 61,…
ಟರ್ಕಿ : ಟರ್ಕಿಶ್ ಸರಕು ವಿಮಾನ ಅಜೆರ್ಬೈಜಾನ್-ಜಾರ್ಜಿಯಾ ಗಡಿಯ ಬಳಿ ಪತನಗೊಂಡಿದ್ದು, 20 ಸೈನಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಅಪಘಾತದ ಬಗ್ಗೆ ಟರ್ಕಿಶ್ ಅಧ್ಯಕ್ಷ ತಯ್ಯಿಪ್ ಎರ್ಡೋಗನ್ ಅವರು ಹುತಾತ್ಮರಿಗೆ ಸಂತಾಪ ಸೂಚಿಸಿದರು, ಏಕೆಂದರೆ ಶೋಧ ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ತೆರಳಿದವು. ಆದಾಗ್ಯೂ, ಈವರೆಗೂ 20 ಸೈನಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಂಕಾರಾದಲ್ಲಿ ಭಾಷಣ ಮುಗಿಸುವಾಗ, ಎರ್ಡೋಗನ್ ಅವರಿಗೆ ಅವರ ಸಹಾಯಕರು ಒಂದು ಟಿಪ್ಪಣಿಯನ್ನು ನೀಡಿದರು, ನಂತರ ಅವರು ವಿಮಾನ ಅಪಘಾತದ ಬಗ್ಗೆ ಕೇಳಿ ದುಃಖಿತರಾದರು ಎಂದು ಹೇಳಿದರು. https://twitter.com/EternalGlory0/status/1988229199933636663?s=20
ಬೆಂಗಳೂರು: ಪಾಲಿಕೆಗಳ ಅಧಿಕಾರಿಗಳನ್ನು ಭೇಟಿ ಮಾಡದೆ, ʼಫೇಸ್ಲೆಸ್, ಸಂಪರ್ಕರಹಿತ, ಆನ್ಲೈನ್ ಇ-ಖಾತಾʼ ಪಡೆಯುವ ವ್ಯವಸ್ಥೆಯನ್ನು ಜಿಬಿಎ ವ್ಯಾಪ್ತಿಯಲ್ಲಿ ಜಾರಿಗೊಳಿಸಲಾಗಿದೆ. ಇದರಿಂದ ನಾಗರಿಕರಿಗೆ ಆಗುತ್ತಿದ್ದ ಕಿರುಕುಳ ತಪ್ಪುತ್ತದೆ, ಭ್ರಷ್ಟಾಚಾರ ಇಲ್ಲದಂತಾಗುತ್ತದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ. ಬಿಬಿಎಂಪಿಯಲ್ಲಿ ಹಳೆಯ ಭೌತಿಕ ಖಾತಾ ವ್ಯವಸ್ಥೆಯಲ್ಲಿ ಸಮಸ್ಯೆ ಏನು ? * ಪ್ರತಿಯೊಬ್ಬ ನಾಗರಿಕರು ತಮ್ಮ ಖಾತಾಗಳನ್ನು ಪಡೆಯಲು ಮತ್ತು ರೂಪಾಂತರಗಳಿಗಾಗಿ ARO ಕಚೇರಿಗಳಿಗೆ ಭೇಟಿ ನೀಡಬೇಕಾಗಿತ್ತು * ದಾಖಲೆಗಳನ್ನು ಭೌತಿಕವಾಗಿ ಸ್ಥಳೀಯವಾಗಿ ಪರಿಶೀಲಿಸಲಾಗಿದ್ದರಿಂದ ಹಿರಿಯ ಅಧಿಕಾರಿಗಳ ಅಥವಾ ವ್ಯವಸ್ಥೆಯ ಮೇಲ್ವಿಚಾರಣೆ ಸಾಧ್ಯವಾಗಲಿಲ್ಲ. * ಮಧ್ಯವರ್ತಿಗಳು ನಾಗರಿಕರಿಂದ ಹಣವನ್ನು ಸಂಗ್ರಹಿಸಿ ಅಧಿಕಾರಿಗಳನ್ನು ಪ್ರಭಾವಿಸಿದರು ಮತ್ತು ಭ್ರಷ್ಟಾಚಾರವು ತುಂಬಾ ಹೆಚ್ಚಾಗಿತ್ತು * ನಾಗರಿಕರು ಸಂಪೂರ್ಣವಾಗಿ ಮಧ್ಯವರ್ತಿ ಮತ್ತು ಅಧಿಕಾರಿಗಳ ಮೇಲೆ ಅವಲಂಬಿತರಾಗಿದ್ದರು. ಫೇನ್ಲೆಸ್, ಸಂಪರ್ಕರಹಿತ ಮತ್ತು ಆನ್ಲೈನ್ ಇಖಾತಾ ವ್ಯವಸ್ಥೆ – ಒಂದು ಕ್ರಾಂತಿ: * ಎಲ್ಲಾ ಬೆಂಗಳೂರು ನಗರ ಖಾತಾಗಳನ್ನು (25 ಲಕ್ಷಕ್ಕೂ ಹೆಚ್ಚು) https://BBMPeAasthi.karnataka.gov.in ನಾಗರಿಕರು ಯಾವುದೇ ಸಮಯದಲ್ಲಿ…
GOOD NEWS : ರಾಜ್ಯದಲ್ಲಿ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡ `ರೈತರ’ ಖಾತೆಗೆ ಹಣ ವರ್ಗಾವಣೆ : CM ಸಿದ್ದರಾಮಯ್ಯ ಘೋಷಣೆ
ಮೈಸೂರು : ರಾಜ್ಯ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಜಂಟಿ ಸಮೀಕ್ಷೆ ಬಳಿಕ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡವರ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ,ಕೃಷಿ-ತೋಟಗಾರಿಕೆ-ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಜಂಟಿ ಸಭೆಗಳನ್ನು ನಡೆಸಬೇಕು ಎ೦ದು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಹುರುಳಿ, ಮುಸುಕಿನ ಜೋಳ ಬಿತ್ತನೆ ಇನ್ನೂ ಆಗಬೇಕಿದೆ. ಕೆಲವು ರೈತರು ಬೆಳೆಯನ್ನು ಬದಲಾಯಿಸಿದ್ದಾರೆ. ಗೊಬ್ಬರ, ಬೀಜ ನಮ್ಮಲ್ಲಿ ಸ೦ಗ್ರಹ ಇದೆ. ರೈತರಿಗೆ ಅಗತ್ಯಕ್ಕಿಂತ ಹೆಚ್ಚು ಗೊಬ್ಬರವನ್ನೂ ದಾಸ್ತಾನು ಮಾಡಿಟ್ಟುಕೊ೦ಡಿದ್ದೇವೆ. ಯೂರಿಯಾ ಅಗತ್ಯ ಇರುವುದಕ್ಕಿಂತ ಹೆಚ್ಚು ಸ೦ಗ್ರಹವಿದೆ. ಕುರಿಗಾಹಿಗಳಿಗೆ ಆಗುತ್ತಿದ್ದ ತೊಂದರೆಗಳು ಮತ್ತು ಕಳ್ಳ ಕಾಕರಿಂದ ರಕ್ಷಣೆ ಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿ೦ದ ಜಿಲ್ಲೆಯಲ್ಲಿ ಕುರಿಗಾಹಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದಿಲ್ಲ ಎನ್ನುವ ವರದಿಯನ್ನು…
ಮೈಸೂರು : ರಾಜ್ಯ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಜಂಟಿ ಸಮೀಕ್ಷೆ ಬಳಿಕ ಅತಿವೃಷ್ಟಿಯಿ೦ದ ಬೆಳೆ ಕಳೆದುಕೊ೦ಡವರ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ,ಕೃಷಿ-ತೋಟಗಾರಿಕೆ-ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಜಂಟಿ ಸಭೆಗಳನ್ನು ನಡೆಸಬೇಕು ಎ೦ದು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ. ಹುರುಳಿ, ಮುಸುಕಿನ ಜೋಳ ಬಿತ್ತನೆ ಇನ್ನೂ ಆಗಬೇಕಿದೆ. ಕೆಲವು ರೈತರು ಬೆಳೆಯನ್ನು ಬದಲಾಯಿಸಿದ್ದಾರೆ. ಗೊಬ್ಬರ, ಬೀಜ ನಮ್ಮಲ್ಲಿ ಸ೦ಗ್ರಹ ಇದೆ. ರೈತರಿಗೆ ಅಗತ್ಯಕ್ಕಿಂತ ಹೆಚ್ಚು ಗೊಬ್ಬರವನ್ನೂ ದಾಸ್ತಾನು ಮಾಡಿಟ್ಟುಕೊ೦ಡಿದ್ದೇವೆ. ಯೂರಿಯಾ ಅಗತ್ಯ ಇರುವುದಕ್ಕಿಂತ ಹೆಚ್ಚು ಸ೦ಗ್ರಹವಿದೆ. ಕುರಿಗಾಹಿಗಳಿಗೆ ಆಗುತ್ತಿದ್ದ ತೊಂದರೆಗಳು ಮತ್ತು ಕಳ್ಳ ಕಾಕರಿಂದ ರಕ್ಷಣೆ ಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿ೦ದ ಜಿಲ್ಲೆಯಲ್ಲಿ ಕುರಿಗಾಹಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದಿಲ್ಲ ಎನ್ನುವ ವರದಿಯನ್ನು…
ನವದೆಹಲಿ : ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದಾರೆ. ಜೈಶ್ ಎ ಮೊಹ್ಮಮದ್ ಉಗ್ರ ಸಂಘಟನೆ ಸಂಪರ್ಕದ ಶಂಕೆ ಹಿನ್ನೆಲೆಯಲ್ಲಿ ಹರಿಯಾಣದ ಫರಿದಾಬಾದ್ ನಲ್ಲಿ ಮುಜಾಮ್ಮಿಲ್, ಇಬ್ಬರು ವೈದ್ಯರು ಸೇರಿ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ IB, NIA, NSG & ಸ್ಥಳೀಯರ ತಂಡವನ್ನು ರಚನೆ ಮಾಡಲಾಗಿದೆ. 500 ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ತಂಡದಲ್ಲಿದ್ದಾರೆ. ದೆಹಲಿಯ ಕೆಂಪು ಕೋಟೆಯ ಬಳಿ i20 ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 9 ಜನರು ಸಾವನ್ನಪ್ಪಿದ್ದರು. ಇದೀಗ ಮತ್ತೆ ಮೂವರು ಚಿಕಿತ್ಸೆ ಫಲಕರಿಯಾಗದೆ ಸಾವನಪ್ಪಿದು ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಇನ್ನು 17 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ವಿಧಿವಿಜ್ಞಾನ ಮತ್ತು ಭಯೋತ್ಪಾದನಾ ವಿರೋಧಿ ತಜ್ಞರು ಕುಳಿಗಳು, ಚೂರುಚೂರುಗಳು ಅಥವಾ ಉಂಡೆಗಳ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೌದು, ಇಂದು ಬೆಂಗಳೂರು ಜಿಬಿಎ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ಬಳಿ ಇರುವ ಟಿವಿಸಿಸಿ ಕಚೇರಿ ಸೇರಿದಂತೆ 7 ವಿವಿಧ ಸ್ಥಳಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ಗೋವಿಂದರಾಜು ನೇತೃತ್ವದ ಐದು ಸದಸ್ಯರ ತಂಡ ಈ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಆರ್ ಆರ್ ನಗರ ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ದೂರು ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ನವದೆಹಲಿ : 2006 ರ ನಿಥಾರಿ ಸರಣಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಸುರೇಂದ್ರ ಕೋಲಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ ಮತ್ತು ಅವರ ಶಿಕ್ಷೆಯನ್ನು ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರ ಪೀಠವು ಬೇರೆ ಯಾವುದೇ ಪ್ರಕರಣದಲ್ಲಿ ಬೇಡವಾದರೆ ಅವರನ್ನು ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದೆ. ಆದೇಶವನ್ನು ಪ್ರಕಟಿಸಿದ ನ್ಯಾಯಮೂರ್ತಿ ನಾಥ್, ಕೋಲಿಯನ್ನು ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ ಎಂದು ಹೇಳಿದರು. “ಕ್ಯುರೇಟಿವ್ ಅರ್ಜಿಯನ್ನು ಅನುಮತಿಸಲಾಗಿದೆ. ಅರ್ಜಿದಾರರನ್ನು ಆರೋಪಗಳಿಂದ ಮುಕ್ತಗೊಳಿಸಲಾಗಿದೆ. ಅರ್ಜಿದಾರರನ್ನು ತಕ್ಷಣವೇ ಬಿಡುಗಡೆ ಮಾಡಲಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನಿಥಾರಿ ಹತ್ಯೆಗಳಿಗೆ ಸಂಬಂಧಿಸಿದ ಕೊನೆಯ ಉಳಿದ ಪ್ರಕರಣದಲ್ಲಿ ಕೋಲಿ ಶಿಕ್ಷೆಯನ್ನು ಪೀಠ ರದ್ದುಗೊಳಿಸಿದೆ. ಅವರನ್ನು ಈಗಾಗಲೇ 12 ಪ್ರಕರಣಗಳಲ್ಲಿ ಖುಲಾಸೆಗೊಳಿಸಲಾಗಿದೆ. 2011 ರ ಸುಪ್ರೀಂ ಕೋರ್ಟ್ನ ತೀರ್ಪಿನ ವಿರುದ್ಧ ಕೋಲಿ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಅನುಮತಿಸಿದೆ, ಅದು ಒಂದು ಪ್ರಕರಣದಲ್ಲಿ ಅವರ ಶಿಕ್ಷೆಯನ್ನು ದೃಢಪಡಿಸಿತ್ತು. 2011 ರ…













