Subscribe to Updates
Get the latest creative news from FooBar about art, design and business.
Author: kannadanewsnow57
ಚಿತ್ರದುರ್ಗ : ಕುರಿ ಕಾಯುತ್ತಿದ್ದ ನನ್ನನ್ನು ರಾಜಪ್ಪ ಮೇಸ್ಟ್ರು ಶಾಲೆಗೆ ಸೇರಿಸಿದ್ದಕ್ಕೆ ನಾನು ಇಂದು ಮುಖ್ಯಮಂತ್ರಿ ಆಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಶೇ.98 ರಷ್ಟು ಅಂಕ ಪಡೆದು ರಾಜ್ಯಕ್ಕೆ 8ನೇ ರ್ಯಾಂಕ್ ಗಳಿಸಿದ ಪಿಯುಸಿ ವಿದ್ಯಾರ್ಥಿನಿಯೊಬ್ಬರಿಗೆ ಐ.ಎ.ಎಸ್ ಮಾಡುವಂತೆ ಸಲಹೆ ನೀಡಿ, ಆಕೆಯ ಐಎಎಸ್ ಪರೀಕ್ಷಾ ಸಿದ್ಧತೆಗೆ ಬೇಕಾದ ಎಲ್ಲಾ ಸಹಾಯವನ್ನು ನಾನು ಮಾಡುತ್ತೇನೆಂದು ಮಾತು ಕೊಟ್ಟಿದ್ದೇನೆ ಎಂದರು. ಶೋಷಿತ ಸಮುದಾಯದ ಮಕ್ಕಳು ಬದುಕಿನ ಸವಾಲುಗಳನ್ನು ಮೆಟ್ಟಿನಿಂತು ಶೈಕ್ಷಣಿಕ ಸಾಧನೆ ಮಾಡುವುದನ್ನು ಕಂಡಾಗ ನನ್ನ ಬಾಲ್ಯದ ದಿನಗಳು ನೆನಪಾಗುತ್ತದೆ. ಕುರಿ ಕಾಯುತ್ತಿದ್ದ ನನ್ನನ್ನು ಶಾಲೆಗೆ ಸೇರಿಸಿಕೊಂಡಿದ್ದರಿಂದ ಇಲ್ಲಿಗೆ ಬಂದು ಮುಟ್ಟಿದ್ದೇನೆ. ಇಂದು ನಾನು ರಾಜಪ್ಪ ಮೇಸ್ಟ್ರನ್ನು ನೆನೆದಂತೆ ಈ ಹೆಣ್ಣುಮಗು ಐಎಎಸ್ ಪಾಸಾಗಿ ಉನ್ನತ ಹುದ್ದೆಗೇರಿದರೆ ನನ್ನನ್ನು ನೆನೆದು, ಆಕೆಯೂ ನಾಲ್ಕಾರು ಮಕ್ಕಳಿಗೆ ನೆರವಾಗಬಹುದು. ನಾನು ರಾಜಪ್ಪ ಮೇಸ್ಟ್ರ ಹಾಗೆ…
ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನಕ್ಕೆ ಆಎರಂಜ್, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಧಾರವಾಡ, ಯಾದಗಿರಿ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಾಳೆಯಿಂದ ಮೂರು ದಿನಗಳವವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು : ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಇನ್ಮುಂದೆ ಪ್ರತಿನಿತ್ಯ ಮೊಟ್ಟೆ ವಿತರಣೆಯಾಗಲಿದೆ. ನಾಲ್ಕು ದಿನದ ಮೊಟ್ಟೆ ವೆಚ್ಚವನ್ನು ಅಜೀಂ ಪ್ರೇಮ್ ಜೀ ಪ್ರತಿಷ್ಠಾನ ಭರಿಸಲಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ ಎಂದರು. ವೈಜ್ಞಾನಿಕವಾಗಿ, ವೈಚಾರಿಕವಾಗಿ ನೀವು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗುತ್ತೀರಿ…
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಕಾರ್ಯಕ್ರಮ (ಪದವಿ ಉತ್ತೀರ್ಣರಾದವರಿಗೆ ರೂ.3,000 ಮತ್ತು ಡಿಪ್ಲೋಮಾ ಉತ್ತೀರ್ಣರಾದವರಿಗೆ ರೂ.1,500) ವನ್ನು ನೀಡುತ್ತಿದ್ದು, ಯೋಜನೆಯ ಪ್ರಯೋಜನವನ್ನು ಪಡೆಯಲು ಸೇವಾ ಸಿಂಧು ಪೆÇೀರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಅರ್ಹತೆ: 2023 ರಲ್ಲಿ ಪದವಿ, ಡಿಪೆÇ್ಲೀಮಾ ಉತ್ತೀರ್ಣರಾಗಿಬೇಕು. ಪದವಿ, ಡಿಪೆÇ್ಲೀಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿರಬಾರದು. ಸ್ವಯಂ ಉದ್ಯೋಗ ಹೊಂದಿರಬಾರದು. ಉನ್ನತ ವಿದ್ಯಾಭ್ಯಾಸ ಮುಂದುವರಿಸಿರಬಾರದು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪೆÇ್ಲೀಮಾದವರೆಗೆ ಅಧ್ಯಯನ ಮಾಡಿರಬೇಕು. ಈಗಾಗಲೇ ಈ ಯೋಜನೆಯ ಪ್ರಯೋಜನ ಪಡೆಯುತ್ತಿರುವವರು ಪ್ರತಿ ತಿಂಗಳು 25ನೇ ತಾರೀಖಿನ ಒಳಗಾಗಿ ಸ್ವಯಂ ದೃಢೀಕೃತ ನಿರುದ್ಯೋಗಿ ಪ್ರಮಾಣ ಪತ್ರವನ್ನು ಪೆÇೀರ್ಟಲ್ನಲ್ಲಿ ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ. ಯಾವುದೇ ತಿಂಗಳು ತಮಗೆ ನಿರುದ್ಯೋಗ ಭತ್ಯೆ ಸಂದಾಯವಾಗದಿದ್ದರೆ ತಮ್ಮ ಮೂಲ ದಾಖಲೆಗಳನ್ನು ಈ ಕೆಳಕಂಡ ಕಚೇರಿಗಳಲ್ಲಿ ಪರಿಶೀಲನೆಗೆ ಒಳಪಡಿಸಬೇಕು. ಡಿಡಿಪಿಐ ಕಚೇರಿಯಲ್ಲಿ ಎಸ್ಎಸ್ಎಲ್ಸಿ ಪ್ರಮಾಣ ಪತ್ರ, ಡಿಡಿಪಿಯು ಕಚೇರಿಯಲ್ಲಿ ದ್ವಿತೀಯ…
ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹದಾಯವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ. ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್…
ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರಕ್ಕೆ ಹಲವಡೆ ಹಾನಿಯಾಗಿದ್ದು, ಅತಿ ಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಗೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದು,ಮಳೆಹಾನಿ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿ ನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ.775 ಕೋಟಿ ಹಣ ನೀಡಿದ್ದು, ಅಗತ್ಯವಿದ್ದರೆ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇಂದೋರ್: ಇಂದೋರ್ ನ ಸಿಮ್ರೋಲ್ನಲ್ಲಿರುವ ಐಐಟಿ ಕ್ಯಾಂಪಸ್ನಲ್ಲಿರುವ ಪಿಎಂ ಶ್ರೀ ಕೇಂದ್ರೀಯ ವಿದ್ಯಾಲಯಕ್ಕೆ ಶಾಲೆಯ ಆವರಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ಪಾಕಿಸ್ತಾನದ ರಹಸ್ಯ ಸಂಸ್ಥೆ ಐಎಸ್ಐ ಹೆಸರಿನಲ್ಲಿ ಇಮೇಲ್ನಲ್ಲಿ ಕಳುಹಿಸಲಾದ ಬೆದರಿಕೆಯು ಆಗಸ್ಟ್ 15 ರಂದು ಶಾಲೆಯ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಎಚ್ಚರಿಸಿದೆ. ಬೆದರಿಕೆಯನ್ನು ಸ್ವೀಕರಿಸಿದ ನಂತರ, ಶಾಲೆಯ ಭದ್ರತಾ ಅಧಿಕಾರಿ ಸಿಮ್ರೋಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಐಟಿ ಕ್ಯಾಂಪಸ್ನಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಈಗ ಗುರುತಿನ ಚೀಟಿಗಳಿಲ್ಲದೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸಿಮ್ರೋಲ್ ಪೊಲೀಸರು, ಸೈಬರ್ ತಂಡದೊಂದಿಗೆ ಇಮೇಲ್ ಬೆದರಿಕೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಐಐಟಿ ಕ್ಯಾಂಪಸ್ನ ಪಿಎಂ ಶ್ರೀ ಸೆಂಟ್ರಲ್ ಸ್ಕೂಲ್ಗೆ ಬಾಂಬ್ ಬೆದರಿಕೆ ಬಂದ ನಂತರ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (ಬಿಡಿಡಿಎಸ್) ನಿಯೋಜನೆಯೊಂದಿಗೆ ಸಿದ್ಧತೆಗಳು ನಡೆಯುತ್ತಿವೆ. ಈ ಘಟನೆಯು ಶಿಕ್ಷಣ ಸಂಸ್ಥೆಗಳ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಕಳವಳವನ್ನು ಹೆಚ್ಚಿಸಿದೆ, ಇದು ಪೊಲೀಸ್ ಅಧಿಕಾರಿಗಳಿಂದ ತ್ವರಿತ ಕ್ರಮವನ್ನು ಪ್ರೇರೇಪಿಸಿದೆ. ಶಾಲಾ ಆವರಣವನ್ನು ರಕ್ಷಿಸಲು…
ನವದೆಹಲಿ : ಈ ಸಮಯದಲ್ಲಿ ಆನ್ಲೈನ್ ವಂಚನೆಯ ಘಟನೆಗಳು ಸಾಮಾನ್ಯವಾಗಿದೆ. ದಿನದಿಂದ ದಿನಕ್ಕೆ, ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಪ್ರತಿದಿನ, ಕೆಲವು ನಗರಗಳಲ್ಲಿ ಆನ್ಲೈನ್ ವಂಚನೆಯ ಪ್ರಕರಣ ಕಂಡುಬರುತ್ತದೆ ಮತ್ತು ಕೇಳಲಾಗುತ್ತದೆ. ಆದಾಗ್ಯೂ, ನೀವು ಆನ್ಲೈನ್ ವಂಚನೆಗೆ ಬಲಿಯಾದರೆ, ಅದರ ನಂತರ ನೀವು ಏನು ಮಾಡಬೇಕು ಮತ್ತು ಹೇಗೆ ದೂರು ನೀಡಬೇಕು ಎಂದು ಕೆಲವೇ ಜನರಿಗೆ ತಿಳಿದಿದೆ. ಆನ್ ಲೈನ್ ವಂಚನೆಗೆ ಹ್ಯಾಕರ್ ಗಳು ಹೊಸ ಮಾರ್ಗಗಳನ್ನು ರೂಪಿಸುತ್ತಿರುವುದನ್ನು ಕಾಣಬಹುದು. ಕೆಲವೊಮ್ಮೆ ಸಂದೇಶದ ಮೂಲಕ ಲಿಂಕ್ ಕಳುಹಿಸುವ ಮೂಲಕ, ಕೆಲವೊಮ್ಮೆ ಕರೆ ಮಾಡುವ ಮೂಲಕ ಮತ್ತು ಒಟಿಪಿ ಕೇಳುವ ಮೂಲಕ, ಅವರು ಆನ್ಲೈನ್ ವಂಚನೆ ಮಾಡುವುದನ್ನು ಕಾಣಬಹುದು. ಇತ್ತೀಚೆಗೆ, ಬಿಹಾರದಿಂದ ಒಂದು ಪ್ರಕರಣ ಬೆಳಕಿಗೆ ಬಂದಿದೆ, ಇದರಲ್ಲಿ ಫೋನ್ ಕರೆಗಳು ಮತ್ತು ಒಟಿಪಿಗಳಿಲ್ಲದೆ ವ್ಯಕ್ತಿಯ ಬ್ಯಾಂಕ್ ಖಾತೆ ಸಂಪೂರ್ಣವಾಗಿ ಖಾಲಿಯಾಗಿದೆ, ಈ ಘಟನೆಯ ಬಗ್ಗೆ ಜನರಿಗೆ ತಿಳಿದಿಲ್ಲ, ಜನರು ಸಂಪೂರ್ಣವಾಗಿ ಆಶ್ಚರ್ಯಚಕಿತರಾಗಿದ್ದಾರೆ. ಪ್ರಕರಣ ಏನು? ಸಾಮಾಜಿಕ ಮಾಧ್ಯಮದಲ್ಲಿ, ಐಪಿಎಸ್ ಪಂಕಜ್ ನೈನ್…
ಬೆಂಗಳೂರು : ರಾಜ್ಯ ಸರಕಾರಿ ನೌಕರರು ಸೇವೆ ಸಲ್ಲಿಸುತ್ತಲೇ ಬೇರೆ ಹುದ್ದೆಗೆ ನೇಮಕಾತಿ ಹೊಂದಲು ಮತ್ತು ಸದರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲೇ ಸೇವೆ ಸಲ್ಲಿಸುತ್ತಿರುವ ಇಲಾಖೆಯ ಮುಖ್ಯಸ್ಥರಿಂದ NOC (No objection Certificate) ನಿರಾಕ್ಷೇಪಣಾ ಪತ್ರ ಪಡೆಯಬೇಕಾಗಿತ್ತು.ಆದರೆ ಇದೀಗ ಆ ನಿಯಮವನ್ನು ತಿದ್ದುಪಡಿ ಮಾಡಿ ಆಯ್ಕೆಯಾದ ನಂತರವೂ ಇಲಾಖೆಯಿಂದ NOC ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಾಜ್ಯ ಪತ್ರ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 2(ಎ) ಉಪ ಪ್ರಕರಣವನ್ನು ಪ್ರಕರಣ 8ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ:07.08.2020ರ ರಾಜ್ಯ ಪತ್ರದ ವಿಶೇಷ ಸಂಚಿಕೆಯ ಭಾಗ IV-ಎ(ನಂ-391)ರಲ್ಲಿ ಅಧಿಸೂಚನೆ ಹೊರಡಿಸಿದೆ. 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ…
ಶಿವಮೊಗ್ಗ : ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆಯು 2024-25ನೇ ಸಾಲಿನಲ್ಲಿ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆ ಖರೀದಿಗೆ ಪಡೆಯುವ ಸಾವನ್ನು ಸಕಾಲದಲ್ಲಿ ಮರುಪಾವತಿ ಮಾಡಿದರೆ ರಾಜ್ಯ ಸರ್ಕಾರದಿಂದ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುವುದು. ಈ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುವಿಗಳಿಗೆ ಗರಿಷ್ಟ ರೂ. 65,000/- ಸಾಲದ ಮೊತ್ತಕ್ಕೆ ಶೇ. 6ರ ಬಡ್ಡಿ ಸಹಾಯಧನ ನೀಡಲಾಗುತ್ತಿದ್ದು, ರೈತ ಮಹಿಳೆಯರು ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ|| ಬಾಬುರತ್ನ ಎ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಯನ್ನು ಆಯಾ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಹಾಗೂ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸುವುದು.