Author: kannadanewsnow57

ನೀವು ಆಸ್ತಿಯನ್ನು ಖರೀದಿಸುವಾಗ, ಸುಗಮ ಮತ್ತು ಕಾನೂನುಬದ್ಧ ವಹಿವಾಟುಗಳಿಗೆ ಕೆಲವು ದಾಖಲೆಗಳು ಅವಶ್ಯಕ. ಗುರುತಿನ ಪುರಾವೆಯಿಂದ ಹಿಡಿದು ಸಮೀಕ್ಷೆಗಳು, ಶೀರ್ಷಿಕೆ ಪತ್ರಗಳು ಮತ್ತು ಇತರ ಆಸ್ತಿ ಸಂಬಂಧಿತ ದಾಖಲೆಗಳವರೆಗೆ, ದಾಖಲೆಗಳ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ ಕೂಡ. ಭಾರತದಲ್ಲಿ ಆಸ್ತಿಯನ್ನು ಖರೀದಿಸಲು ಅಗತ್ಯವಾದ ದಾಖಲೆಗಳ ಪಟ್ಟಿ ಮಾರಾಟ ಪತ್ರ Encumbrance Certificate ಸ್ವಾಧೀನ ಪತ್ರ -Possession Letter ಖಾತಾ ಪ್ರಮಾಣಪತ್ರ ಶೀರ್ಷಿಕೆ ಪತ್ರ -Title Deed ಕಟ್ಟಡ ಅನುಮೋದನೆ ಯೋಜನೆ ಪವರ್ ಆಫ್ ಅಟಾರ್ನಿ (POA) ಪೂರ್ಣಗೊಳಿಸುವಿಕೆ ಪ್ರಮಾಣಪತ್ರ-Completion Certificate ಆಕ್ಯುಪೆನ್ಸಿ ಪ್ರಮಾಣಪತ್ರ ಆಕ್ಷೇಪಣೆಯಿಲ್ಲದ ಪ್ರಮಾಣಪತ್ರಗಳು (NOC ಗಳು) ಮಾರಾಟ ಮತ್ತು ಖರೀದಿ ಒಪ್ಪಂದಗಳು ಪಾವತಿ ರಶೀದಿಗಳು (ನಿರ್ಮಾಣ ಹಂತದಲ್ಲಿದೆ / ಸ್ಥಳಾಂತರಗೊಳ್ಳಲು ಸಿದ್ಧವಾಗಿದೆ) ಗುರುತು ಮತ್ತು ವಿಳಾಸ ಪುರಾವೆ ಅಡಮಾನ ದಾಖಲೆಗಳು (ಅನ್ವಯಿಸಿದರೆ) RERA (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ, 2016 ರ ಅಡಿಯಲ್ಲಿ ಅನುಸರಣೆ ಅಗತ್ಯ ದಾಖಲೆಗಳು ನಿರ್ಮಾಣ ಹಂತದಲ್ಲಿರುವ ಆಸ್ತಿಗಾಗಿ ಸ್ಥಳಾಂತರಿಸಲು ಸಿದ್ಧವಾಗಿರುವ ಆಸ್ತಿಗಾಗಿತಾಜಾ /ಪ್ರಾಥಮಿಕ ಮಾರಾಟಮರುಮಾರಾಟ /…

Read More

ಬೆಂಗಳೂರು: ರಾಜ್ಯದ ರೈತರ ಅನುಕೂಲಕ್ಕಾಗಿ ಸರ್ಕಾರದಿಂದ ವಿವಿಧ ಯೋಜನೆಗಳಿದ್ದಾವೆ. ಅದರೊಟ್ಟಿಗೆ ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ವಿವಿಧ ಸಾಲಸೌಲಭ್ಯಗಳು ಕೂಡ ದೊರೆಯುತ್ತಿವೆ. ಈ ಬಗ್ಗೆ ಕಳೆದ ಮುಂಗಾರು ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿ ಕೇಳಿದಂತ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಉತ್ತರ ನೀಡಿದ್ದಾರೆ. ಹಾಗಾದ್ರೇ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ದೊರೆಯುವ ವಿವಿಧ ಸಾಲಗಳು ಯಾವುವು ಎನ್ನುವ ಮಾಹಿತಿ ಈ ಕೆಳಗಿದೆ. ರೈತರಿಗೆ ಸಿಗಲಿವೆ ಸಹಕಾರಿ ಸಂಸ್ಥೆಗಳಿಂದ ಈ ಸಾಲ ಸೌಲಭ್ಯಗಳು ರೂ.5 ಲಕ್ಷಗಳವರೆಗಿನ ಅಲ್ಪಾವಧಿ ಬೆಳೆ ಸಾಲವನ್ನು ಮತ್ತು ರೂ.2 ಲಕ್ಷದವರೆಗೆ ಪಶುಸಂಗೋಪನೆ, ಮೀನುಗಾರಿಕೆ ಉದ್ದೇಶಗಳಿಗೆ ದುಡಿಯುವ ಬಂಡವಾಳದ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ವಿತರಿಸುವ ಯೋಜನೆಯ ಜಾರಿಯಲ್ಲಿದೆ. ರೂ.15 ಲಕ್ಷದವರೆಗೆ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲವನ್ನು ಶೇ.3ರ ಬಡ್ಡಿದರದಲ್ಲಿ ವಿತರಣೆ. ಸಹಕಾರಿ ಸಂಘಗಳು ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಗೋದಾಮುಗಳಲ್ಲಿ ಶೇಖರಣೆ ಮಾಡಿ, ವಿತರಿಸುವ ಅಡಮಾನ ಸಾಲವನ್ನು ಶೇ.7ರ ಬಡ್ಡಿದರದಲ್ಲಿ ನೀಡಲಾಗುತ್ತದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ,…

Read More

ಬೆಂಗಳೂರು: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಸೀರೆ ಕಳವು ಮಾಡಿದ್ದಾರೆ ಎಂದು ಆರೋಪಿಸಿ ನಡುರಸ್ತೆಯಲ್ಲೇ ಮಹಿಳೆಗೆ ಬಟ್ಟೆ ಅಂಗಡಿ ಮಾಲೀಕರೊಬ್ಬರು ಬೂಟುಕಾಲಿನಿಂದ ಒದ್ದಿದ್ದಾರೆ.‌ ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್ ಎಂಬುವರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ‌. ಮಾಲೀಕ ಮಾತ್ರವಲ್ಲದೇ ಅಂಗಡಿ ಸಿಬ್ಬಂದಿ ಸಹ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನೋವಿನಿಂದ ಮಹಿಳೆ ಕಿರುಚಾಡಿ ಅಂಗಲಾಚಿದರೂ ಸಹ ಬಿಟ್ಟಿಲ್ಲ. ಮಹಿಳೆ ಮೇಲೆ ಹಲ್ಲೆ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಹಲ್ಲೆಯ ವಿಡಿಯೋ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯನ್ನು ರಸ್ತೆಯಲ್ಲಿ ಎಳೆದಾಡಿ ಖಾಸಗಿ ಅಂಗಕ್ಕೆ ಮಾಲೀಕ ಒದ್ದಿದ್ದಾನೆ. ನೋವಿನಿಂದ ಗೋಳಾಡುತ್ತಿದ್ದರೂ ಬಿಡದೆ ಹಲ್ಲೆ ಮಾಡಿದ್ದಾನೆ. ಮಹಿಳೆ ಮೇಲೆ ಹಲ್ಲೆ ನಡೆಸುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಹಿಳೆ ರಕ್ಷಣೆಗೆ ನಿಲ್ಲಬೇಕಿದ್ದ ಪೊಲೀಸರು ಕ್ರಮ ಕೈಗೊಂಡಿಲ್ಲ. ಪೂರ್ವಾಪರ ವಿಚಾರಿಸದೇ ಮಹಿಳೆಯ…

Read More

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯನಗರ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಗ್ರಾಮ ಪಂಚಾಯತ್ ನಲ್ಲಿ ಸಿಗುವ ಸೌಲಭ್ಯಗಳು ಯಾವುದು..? ಇಲ್ಲಿದೆ ಪಟ್ಟಿ

Read More

ನವದೆಹಲಿ : ಬ್ರಾಂಡೆಡ್ ಔಷಧಿಗಳ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಘೋಷಣೆ ಮಾಡಿದ್ದಾರೆ. ಅಕ್ಟೋಬರ್ 1, 2025 ರಿಂದ ಅಮೆರಿಕವು ಬ್ರಾಂಡೆಡ್ ಅಥವಾ ಪೇಟೆಂಟ್ ಪಡೆದ ಔಷಧಿಗಳ ಆಮದಿನ ಮೇಲೆ 100% ಸುಂಕವನ್ನು ವಿಧಿಸಲಿದೆ ಎಂದು ಅವರು ಹೇಳಿದ್ದಾರೆ. ಗುರುವಾರ ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ “ಟ್ರುತ್ ಸೋಷಿಯಲ್” ನಲ್ಲಿ ಈ ಘೋಷಣೆ ಮಾಡಿದ್ದಾರೆ. ಈ ಕ್ರಮವು ಅಮೆರಿಕದಲ್ಲಿ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸದ ಔಷಧ ಕಂಪನಿಗಳಿಗೆ ಅನ್ವಯಿಸುತ್ತದೆ ಎಂದು ಟ್ರಂಪ್ ಹೇಳಿದ್ದಾರೆ. “ಔಷಧೀಯ ಕಂಪನಿಯು ಈಗಾಗಲೇ ಅಮೆರಿಕದಲ್ಲಿ ಔಷಧೀಯ ಘಟಕವನ್ನು ನಿರ್ಮಿಸಲು ಪ್ರಾರಂಭಿಸಿದ್ದರೆ, ಈ 100% ಸುಂಕವು ಅದಕ್ಕೆ ಅನ್ವಯಿಸುವುದಿಲ್ಲ.” ಇದರರ್ಥ ಅಮೆರಿಕದಲ್ಲಿ ಕಾರ್ಖಾನೆ ಅಥವಾ ಉತ್ಪಾದನಾ ಕೇಂದ್ರದ ನಿರ್ಮಾಣ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಿರುವ ಕಂಪನಿಗಳು ಈ ಸುಂಕದಿಂದ ವಿನಾಯಿತಿ ಪಡೆಯುತ್ತವೆ ಎಂದು ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ. ಈ ನಿರ್ಧಾರದ ಉದ್ದೇಶವೇನು? ಟ್ರಂಪ್ ಅವರ ನಿರ್ಧಾರವು ಔಷಧೀಯ ಕಂಪನಿಗಳನ್ನು ಅಮೆರಿಕದಲ್ಲಿ ಉತ್ಪಾದಿಸಲು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ. ಇದು…

Read More

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಸೆಪ್ಟೆಂಬರ್.22ರಿಂದ ಆರಂಭಗೊಂಡಿದೆ. ಅಕ್ಟೋಬರ್.4ರವರೆಗೆ ನಡೆಸಲು ನಿರ್ಧರಿಸಿರುವಂತ ಸಮೀಕ್ಷಾ ಕಾರ್ಯಕ್ಕೆ ಸರ್ವರ್ ಸಮಸ್ಯೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಇಂದು ಎಲ್ಲಾ ಅಧಿಕಾರಿಗಳೊಂದಿಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ವೀಡಿಯೋ ಸಂವಾದವನ್ನು ನಡೆಸಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕುರಿತಂತೆ ಎಲ್ಲಾ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಸಮೀಕ್ಷೆಗೆ ಸಂಬಂಧಿಸಿದಂತ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ತಪ್ಪದೇ ಭಾಗಿಯಾಗುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ವೀಡಿಯೋ ಸಂವಾದ ಸಭೆಯಲ್ಲಿ ಜಾತಿಗಣತಿಗೆ ಅಡ್ಡಿಯಾಗಿರುವಂತ ಸರ್ವರ್ ಸಮಸ್ಯೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಚರ್ಚೆಯಾಗುವ ನಿರೀಕ್ಷೆಯಿದೆ. ಸರ್ವರ್ ಸಮಸ್ಯೆ ನಡುವೆಯೂ ನಿನ್ನೆ ಒಂದೇ ದಿನ 1,81,051 ಜನರ ಸಮೀಕ್ಷೆ ನೆಟ್ವರ್ಕ್ ಸಮಸ್ಯೆಗಳ ನಡುವೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂರನೇ ದಿನವಾದ ಗುರುವಾರ ರಾಜ್ಯದಲ್ಲಿ 53,908 ಕುಟುಂಬಗಳ 1,81,051 ಜನರ…

Read More

ಬೆಂಗಳೂರು : ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಲಿ–ಭಾರತ ಬಾಹ್ಯಾಕಾಶ, ಏರೋಸ್ಪೇಸ್ ಮತ್ತು ರಕ್ಷಣಾ ರೋಡ್ ಶೋ ಭಾಗವಾಗಿ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗವು 2025 ನೇ ಸೆಪ್ಟೆಂಬರ್ 24 ರಂದು ಭೇಟಿ ನೀಡಿತು. ಭೇಟಿಯ ಸಮಯದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಅವರು ಕೇಂದ್ರದ ಧ್ಯೇಯ, ಮುಂದುವರೆದ ಸಾಮಥ್ರ್ಯಗಳು, ಬೆಳೆ ಮೇಲ್ವಿಚಾರಣೆ ಹಾಗೂ ವಿಪತ್ತು ನಿರ್ವಹಣೆಯಿಂದ ನಗರ ಯೋಜನೆ ಮತ್ತು ನೈಸರ್ಗಿಕ ಸಂಪನ್ಮೂಲ ನಿರ್ವಹಣೆವರೆಗೆ ಬಾಹ್ಯಾಕಾಶ ಆಧಾರಿತ ಆಡಳಿತ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ವೈವಿಧ್ಯಮಯ ಅನ್ವಯಿಕೆಗಳನ್ನು ಪ್ರಸ್ತುತಪಡಿಸಿದರು. ಕಿಟ್ಸ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಪ್ರಮೋದ್ ಎಲ್.ಪಾಟೀಲ್ ಅವರು, ಕರಡು ಕರ್ನಾಟಕ ಬಾಹ್ಯಾಕಾಶ ನೀತಿಯ ಪ್ರಮುಖ ಅಂಶಗಳನ್ನು ಹಂಚಿಕೊಂಡು ಜಾಗತಿಕ ಸಾಮಥ್ರ್ಯ ಕೇಂದ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವುದನ್ನು ತಿಳಿಸಿದರು. ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ (ಜಿಐಎ)…

Read More

ಬೆಂಗಳೂರು: ನಗರದ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟದ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 2024ರ ಕಲಂ 241(7) ಅಡಿಯಲ್ಲಿ 1,200 ಚದುರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದಲ್ಲಿ ವಸತಿ ಕಟ್ಟಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವಂತ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (GLASS REINFORCED PLASTIC PIPE)…

Read More

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಸರ್ವರ್ ಸಮಸ್ಯೆ ನಡುವೆಯೂ ಶಿಕ್ಷಕರು ಜಾತಿಗಣತಿ ಸಮೀಕ್ಷೆಯನ್ನು ನಡೆಸುತ್ತಿದ್ದಾರೆ. ಹಾಗಾದ್ರೇ ಈವರೆಗೆ ಎಷ್ಟು ಮನೆಗಳ ಸರ್ವೆ ಮಾಡಲಾಗಿದೆ ಎಂಬ ಬಗ್ಗೆ ಅಂಕಿ ಅಂಶ ಮುಂದಿದೆ ಓದಿ. ನೆಟ್ವರ್ಕ್ ಸಮಸ್ಯೆಗಳ ನಡುವೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂರನೇ ದಿನವಾದ ಗುರುವಾರ ರಾಜ್ಯದಲ್ಲಿ 53,908 ಕುಟುಂಬಗಳ 1,81,051 ಜನರ ಸಮೀಕ್ಷೆ ಮಾಡಲಾಗಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಸೆಪ್ಟೆಂಬರ್.22ರಿಂದ ನಡೆಸಲಾಗುತ್ತಿದೆ. ಸಮೀಕ್ಷೆಗೆ 1.60 ಲಕ್ಷ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಜಾತಿಗಣತಿಯ ಸಮೀಕ್ಷೆಗೆ ಸರ್ವರ್ ಸಮಸ್ಯೆ ಎದುರಾಗಿದೆ. ರಾಜ್ಯದ ವಿವಿಧೆಡೆ ನೀರಿನ ಟ್ಯಾಂಕ್, ಮರ ಏರಿಯೆಲ್ಲ ಶಿಕ್ಷಕರು ಸಮೀಕ್ಷೆ ನಡೆಸುತ್ತಿರುವುದು ವರದಿಯಾಗಿದೆ. ಸರ್ವರ್ ಸಮಸ್ಯೆ ಕಾರಣಕ್ಕಾಗಿ ಜಾತಿಗಣತಿ ಸಮೀಕ್ಷೆಯನ್ನು ಮುಂದೂಡಿಕೆ ಮಾಡುವಂತೆಯೂ ಶಿಕ್ಷಕರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Read More