Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ, ಪೌತಿ ಖಾತೆ ಸೇರಿದಂತೆ ವಿವಿಧ ಖಾತೆ ಬದಲಾವಣೆಗೆ ಬೇಕಾಗುವ ಸಮಯ ಎಷ್ಟು? ಈ ಕುರಿತಂತೆ ಇಲ್ಲಿದೆ ಸಂಪೂರ್ಣ ಮಾಹಿತಿ. ಸಾರ್ವಜನಿಕರು ಆನ್ ಲೈನ್ ಮೂಲಕ, ನಾಡಕಛೇರಿಗಳಲ್ಲಿ ಹಾಗೂ ತಾಲ್ಲೂಕ ಭೂಮಿ ಕೇಂದ್ರಗಳಲ್ಲಿ ಪೌತಿ ವಾರಸಾ/ವಿಲ್/ಮೈನರ್ ಗಾರ್ಡಿಯನ್ ಖಾತೆ ಬದಲಾವಣೆಗಳಿಗಾಗಿ ಅರ್ಜಿ ಸಲಿ ಸುತ್ತಾಗೆ ಅರ್ಜಿ ಸಲ್ಲಿಸಿದ ನಂತರ ಭೂಮಿ ಆಪರೇಟರ್ ಲಾಗಿನ್ ನ ಹೊಸ ವಹಿವಾಟು ಸೇರ್ಪಡೆ ಆಯ್ಕೆಗೆ ಸ್ವೀಕೃತಗೊಳ್ಳುತ್ತವೆ. ನಂತರ ಭೂಮಿ ಆಪರೇಟರ್ ಲಾಗಿನ್ ನಲ್ಲಿ ವಹಿವಾಟು ಸಂಬಂಧ ಡೇಟಾ ನಮೂದು ಮಾಡಿ ಚೆಕಿ ಸ್ಟ್ ತಯಾರಿಸಲಾಗುತ್ತದೆ. ವಹಿವಾಟು ಅನುಮೋದನೆಗೆ ಭೂಮಿ ಶಿರಸ್ತೇದಾರರ ಲಾಗಿನ್ ಗೆ ಸ್ವೀಕೃತವಾಗಿತ್ತವೆ. ಸರ್ಕಾರಿ ಮಾಲೀಕತ್ವದ ಯಾವುದಾದರು ಸರ್ವೇ ನಂಬರ್ ಇದ್ದಲ್ಲಿ ವಹಿವಾಟು ಅನುಮೋದನೆಗೆ ತಹಶೀಲ್ದಾರ್ ಲಾಗಿನ್ ಗೆ ಸ್ವೀಕೃತವಾಗುತ್ತವೆ. ತಹಶೀಲ್ದಾರ್/ ಶಿರಸ್ತೇದಾರ್ ರವರ ವಹಿವಾಟು ಅನುಮೋದನೆ ನಂತರ ಭೂಮಿ ಆಪರೇಟರ್ ಲಾಗಿನ್ ನೋಟಿಸ್ ಮುದ್ರಣಕ್ಕಾಗಿ ಸ್ವೀಕೃತವಾಗುತ್ತವೆ. ನಂತರ ರಾಜಸ್ವ ನಿರಿಕ್ಷಕರ ಲಾಗಿನ್ ಗೆ ಕಡತ ಸ್ವೀಕೃತಿಗಾಗಿ…
ವಾಹನ ಸವಾರರೇ ಗಮನಿಸಿ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ಫೈನ್’ ಪಾವತಿಸುವುದು ಬಹಳ ಸುಲಭ, ಜಸ್ಟ್ ಹೀಗೆ ಮಾಡಿ.!
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿಯನ್ನು ಮತ್ತೆ ನೀಡಿ ಸರ್ಕಾರ ಆದೇಶಿಸಿದೆ. ಶೇ.50ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಕಾಲಾವಕಾಶವನ್ನು ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದಿದ್ದಾರೆ. ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದು ಹೇಳಿದ್ದಾರೆ. ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ…
ಮಂಡ್ಯ : ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಫೈಟ್ ಜೋರಾಗಿದೆ. ಈ ನಡುವೆ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಗಿಳಿ ಶಾಸ್ತ್ರ ಕೇಳುವ ಮೂಲಕ ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ವಿಚಾರಕ್ಕೆ ಬಿಜೆಪಿಯವರು ಗಿಣಿ ಶಾಸ್ತ್ರ ಕೇಳಿ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದರು. ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ಕಾರ್ಯಕರ್ತರು ಗಿಣಿ ಶಾಸ್ತ್ರ ಕೇಳಿ ಡಿಸಿಎಂಗೆ ತಿರುಗೇಟು ನೀಡಿದ್ದಾರೆ. ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರಾ? ಇಲ್ವೋ? ಎಂದು ಗಿಳಿ ಶಾಸ್ತ್ರ ಕೇಳಿದ್ದಾರೆ. ಈ ವೇಳೆ ಗಿಳಿ ಚೊಂಬು ಇರುವ ಕಾರ್ಡ್ ತೆಗೆದಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗಲ್ಲ, ಅವರ ಕೈಗೆ ಚೊಂಬು ಎಂದು ಬಿಜೆಪಿ ಕಾರ್ಯಕರ್ತರು ಲೇವಡಿ ಮಾಡಿದ್ದಾರೆ. ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿದರೆ ಜನರಿಗೆ ಒಳ್ಳೆಯದಾಗುತ್ತಾ ಎಂದು ಶಾಸ್ತ್ರ ಕೇಳಿದ್ದಾರೆ. ಈ ವೇಳೆ ಹೂ ಇರುವ ಕಾರ್ಡ್ನ್ನು ಗಿಣಿ ತೆಗೆದಿದೆ. ಸಿದ್ದರಾಮಯ್ಯ ಸಿಎಂ ಆಗಿದ್ರೆ ಜನರ ಕಿವಿಗೆ ಹೂ ಗ್ಯಾರಂಟಿ…
ನವದೆಹಲಿ: ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಇಂದು ನಿವೃತ್ತರಾಗುತ್ತಿದ್ದಾರೆ. ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ ಭಾರತದ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭೂತಾನ್, ಮಾರಿಷಸ್ ಮತ್ತು ಬ್ರೆಜಿಲ್ ಸೇರಿದಂತೆ ಏಳು ದೇಶಗಳ ಮುಖ್ಯ ನ್ಯಾಯಮೂರ್ತಿಗಳು ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭಾಗವಹಿಸಲಿದ್ದಾರೆ. ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಐತಿಹಾಸಿಕವಾಗಲಿದೆ. ಇತರ ದೇಶಗಳಿಂದ ಇಷ್ಟು ದೊಡ್ಡ ಸಂಖ್ಯೆಯ ನ್ಯಾಯಾಂಗ ನಿಯೋಗಗಳು ಸಿಜೆಐ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನವೆಂಬರ್ 24 ರ ಸೋಮವಾರ ರಾಷ್ಟ್ರಪತಿ ಭವನದಲ್ಲಿ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭೂತಾನ್, ಕೀನ್ಯಾ, ಮಲೇಷ್ಯಾ, ಮಾರಿಷಸ್,…
ಕೊಚ್ಚಿ : ಕೇರಳದಲ್ಲಿ ಶಬರಿಮಲೆ ಯಾತ್ರೆ ಪ್ರಾರಂಭವಾಗುವ ಸ್ವಲ್ಪ ಸಮಯದ ಮೊದಲು ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ (AME) ಪ್ರಕರಣಗಳು ಬೆಳಕಿಗೆ ಬಂದಿರುವುದು ಸ್ಥಳೀಯ ಜನರಲ್ಲಿ ಹೆಚ್ಚಿನ ಕಳವಳವನ್ನುಂಟುಮಾಡಿದೆ. ಮೆದುಳು ಜ್ವರ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಈ ರೋಗವು ಬಹಳ ಅಪರೂಪ.. ಆದರೆ ಬಹಳ ಅಪಾಯಕಾರಿ. ಈ ಸಂದರ್ಭದಲ್ಲಿ, ಈ ಮಾರಕ ಕಾಯಿಲೆಯ ಲಕ್ಷಣಗಳು, ಅದರ ಹರಡುವ ವಿಧಾನ, ಚಿಕಿತ್ಸೆ ಮತ್ತು ಶಬರಿಮಲೆ ಯಾತ್ರಿಕರು ತೆಗೆದುಕೊಳ್ಳಬೇಕಾದ ಕೆಲವು ಮುನ್ನೆಚ್ಚರಿಕೆಗಳ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಳ್ಳೋಣ. ತೀವ್ರ ಸೋಂಕು: ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ (AME): ರೋಗದ ಅವಲೋಕನ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ (AME) ಒಂದು ತೀವ್ರವಾದ ಸೋಂಕಾಗಿದ್ದು ಅದು ಮೆದುಳು, ಬೆನ್ನುಹುರಿಯ ಸುತ್ತಲಿನ ಪೊರೆಗಳು ಮತ್ತು ಮೆದುಳಿನ ಅಂಗಾಂಶ ಎರಡನ್ನೂ ಸೋಂಕು ಮಾಡುತ್ತದೆ. ಈ ರೋಗದ ಕಾರಣ ನೇಗ್ಲೇರಿಯಾ ಫೌಲೆರಿ ಎಂಬ ಸೂಕ್ಷ್ಮಜೀವಿ. ಈ ಸೂಕ್ಷ್ಮಜೀವಿಯನ್ನು ಸಾಮಾನ್ಯವಾಗಿ ಮೆದುಳು ತಿನ್ನುವ ಅಮೀಬಾ ಎಂದು ಕರೆಯಲಾಗುತ್ತದೆ. ಇದು ಏಕಕೋಶೀಯ ಜೀವಿಯ ಒಂದು ವಿಧಕ್ಕೆ ಸೇರಿದೆ. ಇದು ಹೆಚ್ಚಿನ ತಾಪಮಾನದೊಂದಿಗೆ ಬೆಚ್ಚಗಿನ…
ಬೆಂಗಳೂರು : ಬೆಂಗಳೂರಲ್ಲಿ 7.11 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ದರೋಡೆಕೋರ ಪೊಲೀಸ್ ಠಾಣೆಗೆ ತಾನೇ ಬಂದು ಶರಣಾಗಿದ್ದಾನೆ. ರಾಕೇಶ್ ಬಂಧಿತ ದರೋಡೆಕೋರ. ದರೋಡೆ ಪ್ರಕರಣದಲ್ಲಿ ಈವರೆಗೆ ಒಟ್ಟು 7 ಬಂದಿಯ ಬಂಧನವಾಗಿದೆ. ಬಂಧಿತ ರಾಕೇಶ್ ಆರೋಪಿ ರವಿಯ ಸಹೋದರ. ನಿನ್ನೆ ರಾತ್ರಿ ಸಿದ್ದಾಪುರ ಪೊಲೀಸ್ ಠಾಣೆಗೆ ಬಂದು ಆರೋಪಿ ತಾನಾಗಿಯೇ ಶರಣಾಗಿದ್ದಾನೆ. ಹೌದು ಇದುವರೆಗೂ ಪೊಲೀಸರು ಹಲವಾರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು 5 ಕೋಟಿ 56 ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ. ಆದರೆ ಈ ಒಂದು ಇದು ಕೋಟಿ ಎಪ್ಪತ್ತು ಲಕ್ಷ ಹಣ ಎಲ್ಲಿ ದೊರೆಯಿತು? ಪೊಲೀಸರ ಕಾರ್ಯಾಚರಣೆ ಹೇಗಿತ್ತು? ಆ ವಿಚಾರಕ್ಕೆ ಸಂಬಂಧಪಟ್ಟಂತೆ ಇಲ್ಲಿದೆ ಸಂಪೂರ್ಣ ಮಾಹಿತಿ. 7 ಕೋಟಿ ದರೋಡೆ ಮಾಡಿ ಆರೋಪಿಗಳು ಹೊಸಕೋಟೆಯ ಬಳಿ ಪಾಳು ಬಿದ್ದ ಮನೆಯಲ್ಲಿ ಹಣ ಇಟ್ಟಿದ್ದಾರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ತಾಳ ಬಿದ್ದ ಮನೆಯಲ್ಲಿ ದರೋಡೆಕೋರ ಗ್ಯಾಂಗ್ ಹಣ ಇಟ್ಟಿದ್ದರು ಅನುಮಾನದ ಮೇಲೆ ಪೊಲೀಸರು…
ಜನಸಂಖ್ಯೆಯ ಒಂದು ದೊಡ್ಡ ಭಾಗವು ಉದ್ಯೋಗದಲ್ಲಿದೆ ಮತ್ತು ಅವರ ಮಾಸಿಕ ಸಂಬಳವನ್ನು ಅವಲಂಬಿಸಿರುತ್ತದೆ. ಜನರು ಈ ಆದಾಯವನ್ನು ತಮ್ಮ ಪ್ರಸ್ತುತ ಅಗತ್ಯಗಳನ್ನು ಪೂರೈಸಲು ಮತ್ತು ಭವಿಷ್ಯಕ್ಕಾಗಿ ಉಳಿಸಲು ಬಳಸುತ್ತಾರೆ. ಅಂತಹ ಒಂದು ಉಳಿತಾಯವೆಂದರೆ ನಿಮ್ಮ ಪಿಎಫ್ ಖಾತೆ. ವಾಸ್ತವವಾಗಿ, ನಿಯಮಗಳ ಪ್ರಕಾರ, ಉದ್ಯೋಗಿಗಳ ಪಿಎಫ್ ಅನ್ನು ಠೇವಣಿ ಮಾಡಲಾಗುತ್ತದೆ, ಇದರಲ್ಲಿ ಪ್ರತಿ ತಿಂಗಳು ಅವರ ಸಂಬಳದಿಂದ ನಿಗದಿತ ಮೊತ್ತವನ್ನು ಕಡಿತಗೊಳಿಸಲಾಗುತ್ತದೆ ಮತ್ತು ಕಂಪನಿಯು ಈ ಮೊತ್ತವನ್ನು ಉದ್ಯೋಗಿಯ ಪಿಎಫ್ ಖಾತೆಯಲ್ಲಿಯೂ ಠೇವಣಿ ಮಾಡುತ್ತದೆ. ಇದು ವಾರ್ಷಿಕ ಬಡ್ಡಿಯನ್ನು ಸಹ ಗಳಿಸುತ್ತದೆ, ಇದನ್ನು ಇಪಿಎಫ್ಒ ಪಾವತಿಸುತ್ತದೆ. ಆದರೆ ನಿಮ್ಮ ಪಿಎಫ್ ಖಾತೆಯಲ್ಲಿ ಎಷ್ಟು ಹಣವನ್ನು ಠೇವಣಿ ಮಾಡಲಾಗಿದೆ ಎಂದು ನಿಮಗೆ ತಿಳಿದಿದೆಯೇ? ನೀವು ಇದನ್ನು ಪರಿಶೀಲಿಸಲು ಬಯಸಿದರೆ, ನೀವು ಅದನ್ನು ನೀವೇ ಮಾಡಬಹುದು, ಅಂದರೆ ಯಾರ ಸಹಾಯವಿಲ್ಲದೆ. ಆದ್ದರಿಂದ, ನಿಮ್ಮ ಪಾಸ್ಬುಕ್ ಅನ್ನು ಹೇಗೆ ಪರಿಶೀಲಿಸುವುದು ಎಂದು ತಿಳಿಯಿರಿ ನಿಮ್ಮ ಪಾಸ್ ಬುಕ್ನಲ್ಲಿ ನೀವು ಏನು ಪರಿಶೀಲಿಸಬಹುದು? ನೀವು ನಿಮ್ಮ ಪಾಸ್ಬುಕ್ ಅನ್ನು…
ಇಂಟರ್ನೆಟ್ ಬ್ಯಾಂಕಿಂಗ್, ಮೇಲ್, ಫೇಸ್ಬುಕ್ ಮುಂತಾದ ಯಾವುದೇ ವೇದಿಕೆಯನ್ನು ಪ್ರವೇಶಿಸಲು, ನೀವು ಖಾತೆ ಮತ್ತು ಪಾಸ್ವರ್ಡ್ ಅನ್ನು ರಚಿಸಬೇಕು ಎಂದು ನಮಗೆಲ್ಲರಿಗೂ ತಿಳಿದಿದೆ. ಕೆಲವರು ತಮ್ಮ ಪಾಸ್ವರ್ಡ್ಗಳನ್ನು ಮರೆತುಬಿಡುತ್ತಲೇ ಇರುತ್ತಾರೆ. ಅಂತಹ ಸಮಯದಲ್ಲಿ, ಅವರು ತಮ್ಮ ಪಾಸ್ವರ್ಡ್ಗಳನ್ನು ಮರುಹೊಂದಿಸುತ್ತಲೇ ಇರುತ್ತಾರೆ. ತಮ್ಮ ಪಾಸ್ವರ್ಡ್ಗಳನ್ನು ಬದಲಾಯಿಸುವುದನ್ನು ತಪ್ಪಿಸಲು, ಅನೇಕ ಜನರು ತಮ್ಮ ಹೆಸರು ಅಥವಾ ಸಂಖ್ಯೆಗಳನ್ನು 1234 ನಂತಹ ಅನುಕ್ರಮದಲ್ಲಿ ಹೊಂದಿಸುತ್ತಾರೆ. ಅಂತಹ ವಿಷಯಗಳನ್ನು ಹೊಂದಿಸುವುದರಿಂದ ಖಾತೆ ಸುರಕ್ಷಿತವಾಗಿರುವುದಿಲ್ಲ. ಹ್ಯಾಕರ್ಗಳು ಸುಲಭವಾಗಿ ಪ್ರವೇಶಿಸುವ ಅಪಾಯವಿದೆ. ಇತ್ತೀಚೆಗೆ, ಸೈಬರ್ ಅಪರಾಧಿಗಳು ಸಾಮಾನ್ಯ ಪಾಸ್ವರ್ಡ್ಗಳನ್ನು ಹೊಂದಿಸಿದ್ದ ಲಕ್ಷಾಂತರ ಬಳಕೆದಾರರ ಡೇಟಾವನ್ನು ಸೋರಿಕೆ ಮಾಡಿದ್ದಾರೆ. ವೈಯಕ್ತಿಕ ವಿವರಗಳ ಜೊತೆಗೆ, ಅವರ ಖಾತೆ ವಿವರಗಳು ಮತ್ತು ಪಾಸ್ವರ್ಡ್ಗಳು ಬಹಿರಂಗಗೊಂಡಿವೆ. ಅನೇಕ ಜನರು ತಮ್ಮ ಮೇಲ್, ಸಾಮಾಜಿಕ ಮಾಧ್ಯಮ ಮತ್ತು ಆನ್ಲೈನ್ ಖಾತೆಗಳಿಗೆ ದುರ್ಬಲ ಮತ್ತು ಊಹಿಸಬಹುದಾದ ಪಾಸ್ ವರ್ಡ್ಗಳನ್ನು ಹೊಂದಿಸುತ್ತಿದ್ದಾರೆ. ಈ ಕಾರಣದಿಂದಾಗಿ, ಹ್ಯಾಕರ್ಗಳು ಅವುಗಳನ್ನು ಸುಲಭವಾಗಿ ಪ್ರವೇಶಿಸುತ್ತಿದ್ದಾರೆ. ಇತ್ತೀಚಿನ ಸೋರಿಕೆಯಾದ ಡೇಟಾದ ಪ್ರಕಾರ, 123456 ಸಾಮಾನ್ಯವಾಗಿ ಬಳಸುವ…
ಬೆಂಗಳೂರು : ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ದಿನಾಂಕ : 08.12.2025 ರಿಂದ 19.12.2025 ರವರೆಗೆ ನಡೆಯಲಿರುವ ಕಾರ್ನಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಅಧಿವೇಶನ ನಡೆಯಲಿದೆ. ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಎರಡೂ ಸದನಗಳ ಅಧಿವೇಶನವು ದಿನಾಂಕ 08.12.2025 ರಂದು ಪೂರ್ವಾಹ್ನ 11.00 ಗಂಟೆಗೆ (ಸೋಮವಾರ) ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾಗಲಿದ್ದು, ಸದನದ ತಾತ್ಕಾಲಿಕ ಕಾರ್ಯಕ್ರಮದ ವಿವರಗಳು ಈ ಕೆಳಕಂಡಂತಿವೆ. ಅಧಿವೇಶನದಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಸದನದಲ್ಲಿ ಮಾನ್ಯ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು ಮಂಡಿಸಲಿರುವ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಸದನದಲ್ಲಿ ಪ್ರಸ್ತಾಪಿಸಬಹುದಾದ ವಿಷಯಗಳ ಕುರಿತು ಮಾಹಿತಿಯನ್ನು ಟಿಪ್ಪಣಿ ರೂಪದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಸಿದ್ಧಪಡಿಸಿ ಕೊಳ್ಳಲು ಕೋರಿದೆ. 2. ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪೊಲೀಸ್ ಪ್ರಧಾನ ಕಛೇರಿಯಿಂದ ಕಳುಹಿಸಿದ ವಿಧಾನ ಸಭೆ/ ವಿಧಾನ ಪರಿಷತ್ತಿನ ಪ್ರಶ್ನೆಗಳಿಗೆ ಸಮರ್ಪಕವಾದ ಉತ್ತರವನ್ನು ತಯಾರಿಸಿ ಶೀಘ್ರ ಮಾಹಿತಿಯನ್ನು ಸಲ್ಲಿಸುವುದು. ಈ ಸಂಬಂಧ ಘಟಕಾಧಿಕಾರಿಗಳಿಗೆ ಕೆಳಕಂಡ ನಿರ್ದೇಶನಗಳನ್ನು…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ಹೇಳಿ 48 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಲೈಂಗಿಕ ಸಮಸ್ಯೆಗೆ ಪರಿಹಾರ ಮಾಡುವುದಾಗಿ ಹೇಳಿ ಟೆಕ್ಕಿಯಿಂದ 48 ಲಕ್ಷ ರೂ. ದೋಚಲಾಗಿದೆ. ಟೆಕ್ಕಿ 48 ಲಕ್ಷ ರೂ. ಸಾಲ ಮಾಡಿ ಆಯುರ್ವೇದಿಕ್ ಔಷಧಿ ಖರೀದಿಸಿದ್ದರು. ಆದರೆ ಔಷಧಿಯಿಂದ ಸಾಫ್ಟ್ ವೇರ್ ಇಂಜಿನಿಯರ್ ತಮ್ಮ ಕಿಡ್ನಿಯನ್ನೇ ಕಳೆದುಕೊಂಡಿದ್ದಾರೆ. ಪುಟ್ ಪಾತ್ ಪಕ್ಕದ ಟೆಂಟ್ ನಲ್ಲಿ ಆಯುರ್ವೇದ ಚಿಕಿತ್ಸೆ ನೆಪದಲ್ಲಿ ವಂಚಿಸಲಾಗಿದೆ. ಮೊದಲು ಕೆಂಗೇರಿ ಸನೈರಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆಯ ಪಕ್ಕದ ಟೆಂಟ್ ಬಳಿ ಹೋಗಿದ್ದ ವೇಳೆ ವಿಜಯ್ ಗುರೂಜಿಗೆ ಹೇಳಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ವ್ಯಕ್ತಿ ಭರವಸೆ ನೀಡಿದ್ದಾನೆ. ದೇವರಾಜ್ ಬೂಟಿ ಹೆಸರಿನ 1 ಗ್ರಾಂ ಔಷಧಿಗೆ 1,60,000 ರೂ. ದರ ನಿಗದಿ ಮಾಡಲಾಗಿದೆ. ಯಶವಂತಪುರದ ಆಯುರ್ವೇದಿಕ್ ಶಾಪ್ ನಲ್ಲಿ ಖರೀದಿಸುವಂತೆ ಸಲಹೆ ನೀಡಿದ್ದಾನೆ. ವಿಜಯಲಕ್ಷ್ಮೀ ಶಾಪ್…














