Author: kannadanewsnow57

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ಎದುರಾಗಲಿರುವ 2026ರ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳಿಗೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ವಾರ್ಡ್‌ಗಳ ವಿಂಗಡಣೆ ಹಾಗೂ ವಿವಿಧ ವರ್ಗಗಳ ಸದಸ್ಯ ಸ್ಥಾನಗಳ ಮೀಸಲಾತಿ ನಿಗದಿಪಡಿಸುವ ಕುರಿತು ಮಹತ್ವದ ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ. ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (RDPR) ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಗಳು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 5 ರ ಅಡಿಯಲ್ಲಿ ಜಿಲ್ಲಾಧಿಕಾರಿಗಳು ಈ ಪ್ರಕ್ರಿಯೆಯನ್ನು ಕೈಗೊಳ್ಳಲು ಸ್ಪಷ್ಟ ಸೂತ್ರಗಳನ್ನು ನಿಗದಿಪಡಿಸಲಾಗಿದೆ. ವಿಧಾನಸಭಾ ಮತಗಟ್ಟೆಗಳೇ ಇನ್ನು ಪಂಚಾಯಿತಿ ವಾರ್ಡ್‌ಗಳು! ಹೊಸ ಮಾರ್ಗಸೂಚಿಯ ಪ್ರಕಾರ, ಗ್ರಾಮ ಪಂಚಾಯಿತಿ ವ್ಯಾಪ್ತಿಯೊಳಗೆ ಬರುವಂತಹ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳನ್ನು (Polling Stations) ಒಂದು ವಾರ್ಡ್ ಎಂದು ಪರಿಗಣಿಸಿ ಸೀಮಾ ಗಡಿಗಳನ್ನು ಗುರುತಿಸಬೇಕು. ವಾರ್ಡ್‌ಗಳ ವ್ಯಾಪ್ತಿಯ ಜನಸಂಖ್ಯೆಯನ್ನು ನಿರ್ಧರಿಸಲು 2011ರ ಅಧಿಕೃತ ಜನಗಣತಿಯ…

Read More

ದೇಶದ ಅಸಂಘಟಿತ ವಲಯದ ಕಾರ್ಮಿಕರ ಆರ್ಥಿಕ ಭದ್ರತೆಗಾಗಿ ಕೇಂದ್ರ ಸರ್ಕಾರವು ಅತ್ಯುತ್ತಮ ಯೋಜನೆಯೊಂದನ್ನು ಜಾರಿಗೆ ತಂದಿದೆ. ಅದೇ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಯೋಜನೆ. ಈ ಯೋಜನೆಯಡಿ ಕಾರ್ಮಿಕರು ತಮ್ಮ ಭವಿಷ್ಯದ ದಿನಗಳಿಗಾಗಿ ಪ್ರತಿ ತಿಂಗಳು ಕೇವಲ ₹55 ಹೂಡಿಕೆ ಮಾಡುವ ಮೂಲಕ, ವೃದ್ಧಾಪ್ಯದಲ್ಲಿ ಮಾಸಿಕ ₹3,000 ಪಿಂಚಣಿ ಪಡೆಯಬಹುದು. ನೀವು ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು, ಮನೆಗೆಲಸದವರು ಅಥವಾ ಯಾವುದೇ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಾಗಿದ್ದರೆ, ಈ ಯೋಜನೆ ನಿಮಗೆ ವರದಾನವಾಗಲಿದೆ. ಕನಿಷ್ಠ ಹೂಡಿಕೆ: ಅರ್ಜಿದಾರರ ವಯಸ್ಸಿನ ಆಧಾರದ ಮೇಲೆ ತಿಂಗಳಿಗೆ ₹55 ರಿಂದ ₹200 ರವರೆಗೆ ಹೂಡಿಕೆ ಮಾಡಬೇಕಾಗುತ್ತದೆ. (ಉದಾಹರಣೆಗೆ: 18 ವರ್ಷದ ಯುವಕರು ತಿಂಗಳಿಗೆ ಕೇವಲ ₹55 ಪಾವತಿಸಿದರೆ ಸಾಕು). ಸರ್ಕಾರದ ಸಮಾನ ಕೊಡುಗೆ: ನೀವು ಪ್ರತಿ ತಿಂಗಳು ಎಷ್ಟು ಹಣವನ್ನು ಜಮಾ ಮಾಡುತ್ತೀರೋ, ಅಷ್ಟೇ ಮೊತ್ತದ ಹಣವನ್ನು ಕೇಂದ್ರ ಸರ್ಕಾರವೂ ನಿಮ್ಮ ಖಾತೆಗೆ ಜಮಾ ಮಾಡುತ್ತದೆ. ಸ್ಥಿರ ಪಿಂಚಣಿ: ಯೋಜನೆಯ ಫಲಾನುಭವಿಗಳಿಗೆ…

Read More

ಬೆಂಗಳೂರು: ದೇಶದ ಬೆನ್ನೆಲುಬಾಗಿರುವ ರೈತರ ಆರ್ಥಿಕ ಸಬಲೀಕರಣ, ಕೃಷಿ ಆಧುನೀಕರಣ ಮತ್ತು ಸಂಕಷ್ಟದ ಸಮಯದಲ್ಲಿ ನೆರವಾಗಲು ಸರ್ಕಾರವು ಕೃಷಿ ಇಲಾಖೆಯ ಮೂಲಕ ಹತ್ತಾರು ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ. ಕೃಷಿ ಉತ್ಪಾದನೆ ಹೆಚ್ಚಿಸುವುದರಿಂದ ಹಿಡಿದು ಸಂಕಷ್ಟದಲ್ಲಿರುವ ರೈತ ಕುಟುಂಬಗಳಿಗೆ ಆಸರೆಯಾಗುವವರೆಗೆ ಸರ್ಕಾರ ನೀಡುತ್ತಿರುವ ಪ್ರಮುಖ ಸೌಲಭ್ಯಗಳು ಮತ್ತು ಸಬ್ಸಿಡಿಗಳ (ಸಹಾಯಧನ) ಸಮಗ್ರ ಮಾಹಿತಿ ಇಲ್ಲಿದೆ. 1. ಬಿತ್ತನೆ ಬೀಜ ಹಾಗೂ ಸಸ್ಯ ಸಂರಕ್ಷಣೆಗೆ ಭಾರಿ ರಿಯಾಯಿತಿ ಗುಣಮಟ್ಟದ ಬೀಜಗಳ ಪೂರೈಕೆ: ರಾಜ್ಯದ ಎಲ್ಲಾ ವರ್ಗದ ರೈತರಿಗೆ ವಿವಿಧ ಕೃಷಿ ಬೆಳೆಗಳ ಪ್ರಮಾಣಿತ ಬಿತ್ತನೆ ಬೀಜಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ. 50 ರಷ್ಟು ಹಾಗೂ ಪರಿಶಿಷ್ಟ ಜಾತಿ (ಪ.ಜಾ)/ ಪರಿಶಿಷ್ಟ ಪಂಗಡದ (ಪ.ಪಂ) ರೈತರಿಗೆ ಶೇ. 75 ರಷ್ಟು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ಸಸ್ಯ ಸಂರಕ್ಷಣೆ: ಕೀಟ ಹಾಗೂ ರೋಗ ಬಾಧೆ ತಡೆಯಲು ಪೀಡನಾಶಕ, ಜೈವಿಕ ಪೀಡನಾಶಕ ಮತ್ತು ಜೈವಿಕ ನಿಯಂತ್ರಣ ಕಾರಕಗಳನ್ನು ಶೇ. 50 ರಷ್ಟು ರಿಯಾಯಿತಿ ದರದಲ್ಲಿ ರೈತರಿಗೆ…

Read More

ಪ್ರಕೃತಿಯನ್ನು ರಕ್ಷಿಸುವ ಮತ್ತು ಭೂಮಿಯನ್ನು ಸುರಕ್ಷಿತವಾಗಿಡುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜೂನ್ 5 ರಂದು ವಿಶ್ವಾದ್ಯಂತ ‘ವಿಶ್ವ ಪರಿಸರ ದಿನ’ವನ್ನು ಆಚರಿಸಲಾಗುತ್ತದೆ. ಹೆಚ್ಚುತ್ತಿರುವ ಮಾಲಿನ್ಯ, ಹವಾಮಾನ ವೈಪರೀತ್ಯ, ಕಾಡುಗಳ ನಾಶ ಮತ್ತು ಪ್ಲಾಸ್ಟಿಕ್ ಕಸದಂತಹ ಸವಾಲುಗಳ ಮಧ್ಯೆ ಈ ದಿನದ ಮಹತ್ವ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ವಿಶ್ವಸಂಸ್ಥೆಯು ಪರಿಸರ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನಾಚರಣೆಯನ್ನು ಪ್ರಾರಂಭಿಸಿತು. ಇಂದು ಇದು ವಿಶ್ವದ ಅತಿ ದೊಡ್ಡ ಪರಿಸರ ಅಭಿಯಾನಗಳಲ್ಲಿ ಒಂದಾಗಿದ್ದು, 150 ಕ್ಕೂ ಹೆಚ್ಚು ದೇಶಗಳು ಇದರಲ್ಲಿ ಸಕ್ರಿಯವಾಗಿ ಭಾಗವಹಿಸುತ್ತವೆ. ಪ್ರತಿ ವರ್ಷ, ಒಂದು ನಿರ್ದಿಷ್ಟ ಪರಿಸರ ಸಮಸ್ಯೆಯತ್ತ ಜಗತ್ತಿನ ಗಮನ ಸೆಳೆಯಲು ವಿಶಿಷ್ಟವಾದ ಥೀಮ್ (ಧ್ಯೇಯವಾಕ್ಯ) ಮತ್ತು ಆತಿಥೇಯ ದೇಶದೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನ 2026 ರ ಥೀಮ್ ಮತ್ತು ಆತಿಥೇಯ ದೇಶ ಯಾವುದು? ಧ್ಯೇಯವಾಕ್ಯ (Theme): ಈ ವರ್ಷ 2026 ರ ವಿಶ್ವ ಪರಿಸರ ದಿನವನ್ನು “Climate action”…

Read More

ಟೈಪ್-1 ಡಯಾಬಿಟಿಸ್‌ನಿಂದ (Type-1 Diabetes) ಬಳಲುತ್ತಿರುವ ಲಕ್ಷಾಂತರ ರೋಗಿಗಳ ಜೀವನದಲ್ಲಿ ಹೊಸ ಭರವಸೆ ಮೂಡಿಸುವ ನಿಟ್ಟಿನಲ್ಲಿ ವೈದ್ಯಕೀಯ ರಂಗದಲ್ಲಿ ಒಂದು ದೊಡ್ಡ ಹೆಜ್ಜೆ ಇಡಲಾಗಿದೆ. ವಿಜ್ಞಾನಿಗಳು ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಿರುವ ‘ಬಯೋ ಇಂಜಿನಿಯರ್ಡ್ ಮಿನಿ-ಪ್ಯಾಂಕ್ರಿಯಾಸ್’ (Bio-engineered Mini-Pancreas) ಈಗ ನೈಜ ಅಂಗದಂತೆಯೇ ಕೆಲಸ ಮಾಡುತ್ತಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರಂತರವಾಗಿ ಗಮನಿಸುತ್ತಾ, ದೇಹಕ್ಕೆ ಅಗತ್ಯವಿರುವಾಗ ಸೂಕ್ತ ಪ್ರಮಾಣದ ಇನ್ಸುಲಿನ್ ಅನ್ನು ಸ್ವಯಂಚಾಲಿತವಾಗಿ ಬಿಡುಗಡೆ ಮಾಡುತ್ತದೆ. ಇದು ಲ್ಯಾಬ್‌ನಲ್ಲಿ ವೈಜ್ಞಾನಿಕವಾಗಿ ಸಿದ್ಧಪಡಿಸಲಾದ ಕೃತಕ ರಚನೆಯಾಗಿದ್ದರೂ, ದೇಹದಲ್ಲಿನ ಪ್ಯಾಂಕ್ರಿಯಾಟಿಕ್ ಬೀಟಾ ಕೋಶಗಳ (Beta Cells) ಕಾರ್ಯವನ್ನೇ ಸಂಪೂರ್ಣವಾಗಿ ನಕಲು ಮಾಡುತ್ತದೆ. ಪ್ರಸ್ತುತ ಟೈಪ್-1 ಮಧುಮೇಹ ಹೊಂದಿರುವ ರೋಗಿಗಳು ಪ್ರತಿದಿನ ಇನ್ಸುಲಿನ್ ಇಂಜೆಕ್ಷನ್‌ಗಳ ಮೇಲೆ ಅವಲಂಬಿತರಾಗಬೇಕಿದೆ. ಆದರೆ, ಭವಿಷ್ಯದಲ್ಲಿ ಈ ಮಿನಿ-ಪ್ಯಾಂಕ್ರಿಯಾಸ್ ಅನ್ನು ರೋಗಿಯ ದೇಹದಲ್ಲಿ ಅಳವಡಿಸುವುದರಿಂದ, ಇಂಜೆಕ್ಷನ್‌ಗಳ ಅಗತ್ಯತೆ ಗಣನೀಯವಾಗಿ ಕಡಿಮೆಯಾಗಲಿದೆ ಅಥವಾ ಸಂಪೂರ್ಣವಾಗಿ ಮುಕ್ತಿ ಸಿಗಲಿದೆ ಎಂದು ತಜ್ಞರು ಆಶಾವಾದ ವ್ಯಕ್ತಪಡಿಸಿದ್ದಾರೆ. ವೈದ್ಯಕೀಯ ರಂಗದಲ್ಲಿ ಹೊಸ ಮೈಲಿಗಲ್ಲು..! ಲ್ಯಾಬ್‌ನಲ್ಲಿ ಬೆಳೆಸಿದ ಐಲೆಟ್ ಕೋಶಗಳ…

Read More

ನವದೆಹಲಿ : ರೈಲ್ವೆ ಟಿಕೆಟ್ ಬುಕಿಂಗ್ನಲ್ಲಿ ನಡೆಯುವ ವಂಚನೆ ಹಾಗೂ ವೇಟಿಂಗ್ ಲಿಸ್ಟ್ ದಂಧೆಗೆ ಕಡಿವಾಣ ಹಾಕಲು ಭಾರತೀಯ ರೈಲ್ವೆ ಅಂಗಸಂಸ್ಥೆಯಾದ ಐಆರ್ಸಿಟಿಸಿ (IRCTC) ಬೃಹತ್ ಕಾರ್ಯಾಚರಣೆ ನಡೆಸಿದೆ. ಈ ಪ್ರಕ್ರಿಯೆಯಲ್ಲಿ ಸುಮಾರು 9 ಕೋಟಿ (90 ಮಿಲಿಯನ್) ಬಳಕೆದಾರರ ಖಾತೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಸಂಶಯಾಸ್ಪದವಾಗಿ ಕಂಡುಬಂದ 30 ಮಿಲಿಯನ್ಗಿಂತಲೂ ಹೆಚ್ಚು ಯೂಸರ್ ಐಡಿಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.ಇನ್ನುಳಿದ 60 ಮಿಲಿಯನ್ ಖಾತೆಗಳನ್ನು ಕಟ್ಟುನಿಟ್ಟಿನ ಪರಿಶೀಲನೆಗೆ (Verification) ಒಳಪಡಿಸಲಾಗಿದೆ.ಸುಮಾರು 4.18 ಲಕ್ಷ ಸಂಶಯಾಸ್ಪದ ಪಿಎನ್ಆರ್ (PNR) ಗಳ ವಿರುದ್ಧ ರಾಷ್ಟ್ರೀಯ ಸೈಬರ್ ಕ್ರೈಂ ಪೋರ್ಟಲ್ನಲ್ಲಿ 501 ದೂರುಗಳನ್ನು ದಾಖಲಿಸಲಾಗಿದೆ. ಜೊತೆಗೆ, ಈ ವರ್ಷ 13,343 ಕ್ಕೂ ಹೆಚ್ಚು ನಕಲಿ ಇಮೇಲ್ ಡೊಮೈನ್ಗಳನ್ನು ಬ್ಲಾಕ್ ಮಾಡಲಾಗಿದೆ. ರೈಲ್ವೆ ಅಡುಗೆ ಕೋಣೆಗಳ ಮೇಲೆ ‘AI’ ಕಣ್ಣು: ಹೇಗೆ ಕೆಲಸ ಮಾಡುತ್ತದೆ? ಖಾದ್ಯಗಳ ಗುಣಮಟ್ಟ ಮತ್ತು ನೈರ್ಮಲ್ಯವನ್ನು ಕಾಯ್ದುಕೊಳ್ಳಲು ಐಆರ್ಸಿಟಿಸಿ ತನ್ನ ಕೃತಕ ಬುದ್ಧಿಮತ್ತೆ (AI) ಆಧಾರಿತ ಮೇಲ್ವಿಚಾರಣಾ ವ್ಯವಸ್ಥೆಯನ್ನು ದೇಶಾದ್ಯಂತ ವಿಸ್ತರಿಸಿದೆ. 1.…

Read More

ಬೆಂಗಳೂರು: ತಮಗೆ ಖಾತೆ ಹಂಚಿಕೆಯಾದ ಕೇವಲ ಒಂದೇ ಗಂಟೆಯಲ್ಲಿ ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಸಾರ್ವಜನಿಕರ ಸೇವೆಯಲ್ಲಿ ಸಕ್ರಿಯರಾಗಿದ್ದಾರೆ. ತಡರಾತ್ರಿ ಜಯನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವರು, ಇಂಚಿಂಚೂ ಪರಿಶೀಲನೆ ನಡೆಸುವ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಿಸಿ ಮುಟ್ಟಿಸಿದ್ದಾರೆ. ಆಸ್ಪತ್ರೆಯ ಐಸಿಯು (ICU), ರೋಗಿಗಳಿಗೆ ನೀಡಲಾಗುತ್ತಿರುವ ಚಿಕಿತ್ಸಾ ವಿಧಾನ ಹಾಗೂ ಸ್ವಚ್ಛತೆಯನ್ನು ಖುದ್ದಾಗಿ ವೀಕ್ಷಿಸಿದ ಸಚಿವರು, ಅಲ್ಲಿನ ವ್ಯವಸ್ಥೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಆಸ್ಪತ್ರೆಯ ನೆಲದ ಮೇಲೆ ಗರ್ಭಿಣಿಯೊಬ್ಬರು ಕುಳಿತಿರುವುದನ್ನು ಕಂಡು ತೀವ್ರ ಆಕ್ರೋಶಗೊಂಡ ಸಚಿವರು, ತಕ್ಷಣವೇ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.ತಡರಾತ್ರಿಯ ಕರ್ತವ್ಯದ ಅವಧಿಯಲ್ಲಿ ಹಾಜರಾತಿ ಪುಸ್ತಕ ಪರಿಶೀಲಿಸಿದಾಗ ಹಲವು ಸಿಬ್ಬಂದಿ ಗೈರಾಗಿರುವುದು ಕಂಡುಬಂದಿತು. ಈ ಹಿನ್ನೆಲೆಯಲ್ಲಿ ಬೇಜವಾಬ್ದಾರಿ ತೋರಿದ ಸಿಬ್ಬಂದಿಗೆ ಸಚಿವರು ಕಠಿಣ ಎಚ್ಚರಿಕೆ (ವಾರ್ನಿಂಗ್) ನೀಡಿದ್ದಾರೆ.

Read More

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ (Ration Card Holders) ಆಹಾರ ಇಲಾಖೆಯು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೇಷನ್ ಕಾರ್ಡ್ ತಿದ್ದುಪಡಿ, ಹೆಸರು ಸೇರ್ಪಡೆ ಅಥವಾ ನ್ಯಾಯಬೆಲೆ ಅಂಗಡಿಗಳ ಅಕ್ರಮದ ವಿರುದ್ಧ ದೂರು ನೀಡಲು ದಿನಗಟ್ಟಲೆ ಕಾಯಬೇಕಾಗಿಲ್ಲ ಸಾರ್ವಜನಿಕರ ದೂರುಗಳನ್ನು ಅತ್ಯಂತ ವೇಗವಾಗಿ ಪರಿಹರಿಸಲು ಆಹಾರ ಇಲಾಖೆಯು ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನ ಆಧಾರಿತ ‘ಸ್ಮಾರ್ಟ್ ಅನ್ನವಾಣಿ’ ಯೋಜನೆಯನ್ನು ಜಾರಿಗೆ ತರಲು ಸಜ್ಜಾಗಿದೆ. ಮುಂದಿನ ಎರಡರಿಂದ ಮೂರು ತಿಂಗಳಲ್ಲಿ ಈ ಹೊಸ ಡಿಜಿಟಲ್ ವ್ಯವಸ್ಥೆ ಅಧಿಕೃತವಾಗಿ ಲಭ್ಯವಾಗಲಿದೆ. ಪ್ರಸ್ತುತ ಅನ್ನಭಾಗ್ಯ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಹಾಗೂ ರೇಷನ್ ಕಾರ್ಡ್‌ಗೆ ಸಂಬಂಧಿಸಿದ ದೂರುಗಳಿಗಾಗಿ ಆಹಾರ ಇಲಾಖೆಯು ‘1967’ ಸಹಾಯವಾಣಿಯನ್ನು ನಡೆಸುತ್ತಿದೆ. ಪ್ರತಿದಿನ ಸರಾಸರಿ 200 ರಿಂದ 300 ದೂರುಗಳು ಇಲ್ಲಿ ದಾಖಲಾಗುತ್ತಿದ್ದು, ಸದ್ಯ ಚಾಲ್ತಿಯಲ್ಲಿರುವ ಮ್ಯಾನುಯಲ್ ವ್ಯವಸ್ಥೆಯಿಂದಾಗಿ ಗ್ರಾಹಕರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಸಿಗುತ್ತಿರಲಿಲ್ಲ. ಈ ಸಮಸ್ಯೆಯನ್ನು ಮುಕ್ತಾಯಗೊಳಿಸಲು ಇಡೀ ಸಹಾಯವಾಣಿಯನ್ನು ಸಂಪೂರ್ಣ…

Read More

ನವದೆಹಲಿ: ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಒಂದು ಅತ್ಯಂತ ಪ್ರಮುಖ ಹಾಗೂ ಮಹತ್ವದ ಆದೇಶವನ್ನು ಹೊರಡಿಸಿದೆ. ಹುದ್ದೆಗೆ ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಆ ಉದ್ಯೋಗ ಸಿಗಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ. ಕಡಿಮೆ ವಿದ್ಯಾಭ್ಯಾಸದ ಹಿನ್ನೆಲೆಯುಳ್ಳವರಿಗಾಗಿ ಮೀಸಲಿಟ್ಟ ಕೆಲಸಗಳನ್ನು, ಹೆಚ್ಚು ಓದಿದವರು ಗಿಟ್ಟಿಸಿಕೊಳ್ಳುವುದರಿಂದ ನಿಜವಾದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ. ಬ್ಯಾಂಕ್ ಒಂದರ ತಾತ್ಕಾಲಿಕ ಅಟೆಂಡರ್ ಹುದ್ದೆಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಮರುನೇಮಕಾತಿ ಆದೇಶವನ್ನು ಸುಪ್ರೀಂ ಕೋರ್‌್ಟನ ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾಮುಲ್ಲಾ ಹಾಗೂ ಆರ್. ಮಹದೇವನ್ ಅವರಿದ್ದ ನ್ಯಾಯಪೀಠವು ರದ್ದುಗೊಳಿಸಿದೆ. ಸದರಿ ಹುದ್ದೆಗೆ ಗರಿಷ್ಠ ಹತ್ತನೇ ತರಗತಿಯವರೆಗಿನ ವಿದ್ಯಾಭ್ಯಾಸವನ್ನು ಮಾತ್ರ ಅರ್ಹತೆ ಎಂದು ನಿಗದಿಪಡಿಸಲಾಗಿತ್ತು. ಆದರೆ, ಹೈಕೋರ್ಟ್ ಈ ಅಂಶವನ್ನು ಗಮನಿಸದೆ ತೀರ್ಪು ನೀಡಿತ್ತು ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಉದ್ಯೋಗ ಗಿಟ್ಟಿಸಿಕೊಂಡ ವ್ಯಕ್ತಿಯು ತಾನು ಪದವೀಧರ ಎಂಬ ಸತ್ಯವನ್ನು ಮುಚ್ಚಿಟ್ಟು ಈ ಕೆಲಸ…

Read More

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆಯೊಂದನ್ನು ನೀಡಿದ್ದು, ಬಹುದಿನಗಳ ನಿರೀಕ್ಷೆಯಾಗಿದ್ದ ‘ಉಚಿತ ಬಸ್ ಪಾಸ್’ ಸೌಲಭ್ಯಕ್ಕೆ ಸಾರಿಗೆ ಇಲಾಖೆಯು ಅಧಿಕೃತವಾಗಿ ತಾತ್ವಿಕ ಅನುಮೋದನೆ ನೀಡಿದೆ. ಈ ಕುರಿತು ಗುರುವಾರ ಮಹತ್ವದ ಸರ್ಕಾರಿ ಆದೇಶ ಹೊರಬಿದ್ದಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ವಿತರಿಸುವ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು. ಕ್ಯಾಬಿನೆಟ್ ನಿರ್ಧಾರಕ್ಕೆ ಪೂರಕವಾಗಿ ಸಾರಿಗೆ ಇಲಾಖೆಯು ತಕ್ಷಣವೇ ಕಾರ್ಯಪ್ರವೃತ್ತವಾಗಿದ್ದು, ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಹಸಿರು ನಿಶಾನೆ ತೋರಿಸಿದೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ದೈನಂದಿನ ಪ್ರಯಾಣ ಇನ್ಮುಂದೆ ಮತ್ತಷ್ಟು ಸುಲಭ ಹಾಗೂ ಸಂಪೂರ್ಣ ಉಚಿತವಾಗಲಿದೆ. ನಾಲ್ಕು ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಉಚಿತ ಪ್ರಯಾಣ: ಈ ಹೊಸ ಆದೇಶದ ಅನ್ವಯ, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಗೆ ಒಳಪಡುವ ನಾಲ್ಕೂ ಪ್ರಮುಖ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಬಸ್‌ಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಶಾಲಾ-ಕಾಲೇಜುಗಳಿಗೆ…

Read More