Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಇಂದು ಷೇರುಪೇಟೆಯಲ್ಲಿ ಸೆನ್ಸೆಕ್ಸ್ 300 ಅಂಕ ಏರಿಕೆಯಾಗಿದ್ದು, ನಿಫ್ಟಿ 25,900 ರ ಅಂಕಗಳನ್ನು ದಾಟಿದೆ. ಇಂದು ಷೇರು ಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ 300 ಅಂಕಗಳ ಏರಿಕೆಯಾಗಿದ್ದು,, ನಿಫ್ಟಿ 25,900 ಕ್ಕಿಂತ ಹೆಚ್ಚು ಏರಿಕೆ ಕಂಡರೆ, ಇನ್ಫೋಸಿಸ್ ಶೇ. 1 ರಷ್ಟು ಏರಿಕೆಯಾಗಿದೆ.
ಬೆಂಗಳೂರು: ಬೆಂಗಳೂರು: ದಶಕದಿಂದ ಜಟಿಲ ಸಮಸ್ಯೆಯಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ಪಿಡಿಒ ಜೇಷ್ಠತಾ ಪಟ್ಟಿ ಪ್ರಕರಣವು ತಾರ್ಕಿಕವಾಗಿ ನ್ಯಾಯಾಲಯದಲ್ಲಿ ಬಗೆ ಹರಿದು ಸಾವಿರಾರು ಪಿಡಿಒಗಳಿಗೆ ನ್ಯಾಯ ದೊರಕಿದೆ. ಶೀಘ್ರವೇ ಪಿಡಿಒಗಳ ಪದೋನ್ನತಿ ಸರಾಗವಾಗಿ ನಡೆಯಲಿದೆ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಮೂಲಕ ಪದೋನ್ನತಿ ನಿರೀಕ್ಷೆಯಲ್ಲಿದ್ದ ಪಿಡಿಒಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಮಹತ್ವದ ಮತ್ತು ಐತಿಹಾಸಿಕ ನ್ಯಾಯ ದೊರಕಿದೆ. ಇಚ್ಚಾಶಕ್ತಿಯ ಕೊರತೆಯಿಂದಾಗಿ ದಶಕಗಳ ಕಾಲ ಜೇಷ್ಠತಾ ಪಟ್ಟಿಯ ಪ್ರಕರಣವು ಕಗ್ಗಂಟಾಗಿ ನ್ಯಾಯಾಲಯದಲ್ಲಿತ್ತು, ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ಮತ್ತು ವಿಶೇಷ ಆಸಕ್ತಿಯಿಂದಾಗಿ ಈ ಪ್ರಕರಣವನ್ನು ಸಕಾರಾತ್ಮಕವಾಗಿ ಬಗೆಹರಿಸುವಲ್ಲಿ ಯಶಸ್ವಿಯಾಗಿದೆ ಎಂದಿದ್ದಾರೆ. ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡಾಗ ಇಲಾಖೆಯಲ್ಲಿನ ಪಿಡಿಒ ಜೇಷ್ಠತಾ ಪಟ್ಟಿಯ ಪ್ರಕರಣವು ಸವಾಲಿನಂತೆ ಎದುರಿಗಿತ್ತು, ಇದನ್ನು ಬಗೆಹರಿಸಲೇಬೇಕು ಎಂಬ ದೃಷ್ಟಿಯಿಂದ ಸುಮಾರು 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ, ನಿರಂತರವಾಗಿ…
ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಶಾಲಾ ವಿದ್ಯಾರ್ಥಿಗಳ Aadhar Mandatory Biometric Update (Aadhar MBU) ಹಾಗೂ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ (1)ರಲ್ಲಿನ ದಿನಾಂಕ:16.07.2025ರ ಸಭಾ ನಡವಳಿಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, AJSK ಮತ್ತು EDCS ಸಹಯೋಗದೊಂದಿಗೆ, ವಾರ್ಷಿಕವಾಗಿ ಸುಮಾರು 20 ಲಕ್ಷ MBU ಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಶಾಲೆಗಳಲ್ಲಿ ಶಿಬಿರಗಳನ್ನು ಆಯೋಜಿಸಲು ಪ್ರಸ್ತಾಪಿಸಲಾಗಿರುವುದಾಗಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯನ್ನು ಯುಐಡಿಎಐ ಅಡಿಯಲ್ಲಿ ರಾಜ್ಯ ರಿಜಿಸ್ಟ್ರಾರ್ ಆಗಿ ನೇಮಿಸಲು, 300-500 ಇಸಿಎಂಪಿ ಕಿಟ್ಗಳನ್ನು ಸಂಗ್ರಹಿಸಲು ಮತ್ತು ಶಾಲಾ ಅಧಿಕಾರಿಗಳಿಗೆ ತರಬೇತಿ ನೀಡಲು ಅಥವಾ ಪ್ರಮಾಣೀಕೃತ ನಿರ್ವಾಹಕರ ಮೂಲಕ ವಿದ್ಯಾರ್ಥಿಗಳ ಆಧಾರ್ MBU ಕಾರ್ಯವನ್ನು ನಡೆಸಲು ಒಂದು ವ್ಯವಸ್ಥೆಯನ್ನು ರೂಪಿಸಲು ಪ್ರಸ್ತಾಪಿಸಲಾಗಿದೆ. ಮೇಲೆ ಓದಲಾದ (2)ರಲ್ಲಿನ, ದಿನಾಂಕ:16.09.2025ರ ಸಭಾ ನಡವಳಿಯಲ್ಲಿ, ಸರ್ಕಾರಿ ಶಾಲಾ-ಕಾಲೇಜುಗಳನ್ನು ನೋಂದಣಿ ಅಥವಾ ದಾಖಲಾತಿ ಏಜೆನ್ಸಿಗಳನ್ನಾಗಿ ಮಾಡಲಾಗುವುದಿಲ್ಲ ಎಂದು…
ಬೆಂಗಳೂರು : ರಾಜ್ಯದಲ್ಲಿ ಇನ್ಮುಂದೆ ವಿಷಪೂರಿತ ಔಷಧ, ಡಿಕಂಪೋಸ್, ಟೊಕ್ಸಿಕ್ ಔಷಧಗಳ ಮಾರಾಟ ಮಾಡಿದರೆ ನಾನ್ ಬೇಲೆಬಲ್ ಪ್ರಕರಣ ಆಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಔಷಧ ಮತ್ತು ಪ್ರಸಾಧನ ಸಾಮಗ್ರಿ ತಿದ್ದುಪಡಿ ವಿಧೇಯಕ- 2025ದ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಸಾಕಷ್ಟು ಚರ್ಚೆ ಮಾಡಿಯೇ ಈ ವಿಧೇಯಕ ಮಾಡುತ್ತಿದ್ದೇವೆ. ಇದರ ಮುಖ್ಯ ಉದ್ದೇಶ ಕಳಪೆ ಮತ್ತು ನಕಲಿ ಔಷಧ ಜಾಲ ತಲೆ ಎತ್ತದಂತೆ ನೋಡಿಕೊಳ್ಳುವುದು. ಎಲ್ಲ ಔಷಧಗಳನ್ನು Central drug lab ನಲ್ಲಿ ಕಡೆಯದಾಗಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಿ ರಾಜ್ಯದಲ್ಲಿಯೇ ಲ್ಯಾಬ್ ಮಾಡುತ್ತಿದ್ದೇವೆ. ಔಷಧ ಪರೀಕ್ಷೆಯಲ್ಲಿ ಆಗುತ್ತಿದ್ದ ವಿಳಂಬ ತಪ್ಪಿಸುವುದು ಇದರ ಉದ್ದೇಶ. ಎಲ್ಲದಕ್ಕೂ ಸರಿಯಾದ ಸಪ್ಲೈ ಚೈನ್ ಇರಬೇಕು, ಇಲ್ಲದಿದ್ದರೆ ಅಡಲ್ಟ್ರೇಟೆಡ್ ಔಷಧ ಮಾರುಕಟ್ಟೆಗೆ ಬರುವ ಸಾಧ್ಯತೆ ಇರುತ್ತದೆ. ಈ ಮೊದಲು ಕೇಸ್ ಹಾಕಿದರೆ ಸುಲಭದಲ್ಲಿ ತಪ್ಪಿಸಿಕೊಳ್ಳಲು ಅವಕಾಶ ಸಿಗುತ್ತಿತ್ತು. ಈ ಕಾಯಿದೆ ಮೂಲಕ ಔಷಧ ಎಲ್ಲಿಂದ ಎಲ್ಲಿಗೆ ಬರುತ್ತದೆ…
ನೀವು ಹೊಸ ಫೋನ್ ಖರೀದಿಸಿದಾಗಲೆಲ್ಲಾ, ನಿಮ್ಮ ಹಳೆಯದು ಡ್ರಾಯರ್ನಲ್ಲಿ ಬಿದ್ದಿರುತ್ತದೆ, ಹಾಳಾಗುತ್ತದೆ. ಆದರೆ ಅದೇ ಹಳೆಯ ಫೋನ್ ನಿಮ್ಮ ಮನೆಯ ಸುರಕ್ಷತೆಯನ್ನ ಸುಧಾರಿಸುವಲ್ಲಿ ದೊಡ್ಡ ಪಾತ್ರ ವಹಿಸುತ್ತದೆ ಎಂದು ನಿಮಗೆ ತಿಳಿದಿದೆಯೇ.? ಹೌದು! ಕೆಲವೇ ಸರಳ ಸೆಟ್ಟಿಂಗ್’ಗಳು ಮತ್ತು ಸರಿಯಾದ ಅಪ್ಲಿಕೇಶನ್’ನೊಂದಿಗೆ, ನಿಮ್ಮ ಹಳೆಯ ಸ್ಮಾರ್ಟ್ಫೋನ್ ನಿಮಿಷಗಳಲ್ಲಿ ಉತ್ತಮ ಗೃಹ ಭದ್ರತಾ ಕ್ಯಾಮೆರಾವಾಗಬಹುದು. ಇದು ನಿಮಗೆ ಹೆಚ್ಚಿನ ಖರ್ಚು ಮಾಡದೆ ನಿಮ್ಮ ಮನೆಯನ್ನು ಮೇಲ್ವಿಚಾರಣೆ ಮಾಡಲು ಅನುವು ಮಾಡಿಕೊಡುತ್ತದೆ. ಸರಿಯಾದ ಅಪ್ಲಿಕೇಶನ್ ಆಯ್ಕೆ ಮಾಡುವುದು ಮೊದಲ ಹೆಜ್ಜೆ.! ಮೊದಲು, ನಿಮ್ಮ ಹಳೆಯ ಫೋನ್ ಅನ್ನು ಭದ್ರತಾ ಕ್ಯಾಮೆರಾವನ್ನಾಗಿ ಪರಿವರ್ತಿಸಬಹುದಾದ ಅಪ್ಲಿಕೇಶನ್’ನ್ನ ನೀವು ಸ್ಥಾಪಿಸಬೇಕಾಗುತ್ತದೆ. ಆಲ್ಫ್ರೆಡ್ ಕ್ಯಾಮೆರಾ, ಮೆನಿಥಿಂಗ್, ಐಪಿ ವೆಬ್ಕ್ಯಾಮ್ ಅಥವಾ ಹೋಮ್ ಸೆಕ್ಯುರಿಟಿ ಕ್ಯಾಮೆರಾದಂತಹ ಹಲವಾರು ಅಪ್ಲಿಕೇಶನ್’ಗಳು ಲೈವ್ ವೀಡಿಯೊ ಸ್ಟ್ರೀಮಿಂಗ್, ಚಲನೆಯ ಪತ್ತೆ ಮತ್ತು ರೆಕಾರ್ಡಿಂಗ್’ನಂತಹ ವೈಶಿಷ್ಟ್ಯಗಳನ್ನ ನೀಡುತ್ತವೆ. ಈ ಅಪ್ಲಿಕೇಶನ್’ಗಳಲ್ಲಿ ಒಂದನ್ನು ನಿಮ್ಮ ಹಳೆಯ ಫೋನ್’ಗೆ ಡೌನ್ಲೋಡ್ ಮಾಡಿ ಮತ್ತು ಸೆಟಪ್ ಪ್ರಕ್ರಿಯೆಯನ್ನು ಪ್ರಾರಂಭಿಸಿ. ಫೋನ್’ನ್ನು ಕ್ಯಾಮೆರಾ…
ALERT : `ಮೊಬೈಲ್’ ಬಳಕೆದಾರರೇ ಗಮನಿಸಿ : ನಿಮ್ಮ `ಫೋನ್ ನಲ್ಲಿ ಈ 14 ಅಪ್ಲಿಕೇಶನ್ ಗಳಿದ್ದರೆ ತಕ್ಷಣವೇ ಡಿಲೀಟ್ ಮಾಡಿ.!
ನವದೆಹಲಿ : ದೆಹಲಿ ಪೊಲೀಸರ ಅಪರಾಧ ವಿಭಾಗ ಮತ್ತು ಸೈಬರ್ ಸೆಲ್ ಚೀನಾದೊಂದಿಗೆ ಸಂಪರ್ಕ ಹೊಂದಿರುವ ಅಂತರರಾಷ್ಟ್ರೀಯ ಸೈಬರ್ ಸಿಂಡಿಕೇಟ್ ಅನ್ನು ಭೇದಿಸಿದೆ. ಈ ಗ್ಯಾಂಗ್ ದೆಹಲಿ ಮೂಲದ ಚಾರ್ಟರ್ಡ್ ಅಕೌಂಟೆಂಟ್ (CA) ಅವರನ್ನು ಗುರಿಯಾಗಿಸಿಕೊಂಡು ಒಟ್ಟು ₹47 ಲಕ್ಷ ಸಂಪಾದಿಸಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದ್ದು, ದೇಶಾದ್ಯಂತ ದಾಖಲಾಗಿರುವ 1167 ಸೈಬರ್ ದೂರುಗಳೊಂದಿಗೆ ಅವರು ಸಂಪರ್ಕ ಹೊಂದಿದ್ದಾರೆಂದು ಕಂಡುಬಂದಿದೆ. ಚೀನಾದ ಮಾಸ್ಟರ್ಮೈಂಡ್ ‘ಟಾಮ್’ ಸಂಪರ್ಕ ಈ ಸಂಪೂರ್ಣ ಹಗರಣದ ಹಿಂದಿನ ಮಾಸ್ಟರ್ಮೈಂಡ್ ಚೀನಾದಲ್ಲಿ ನೆಲೆಸಿರುವ ‘ಟಾಮ್’ ಎಂಬ ವ್ಯಕ್ತಿ ಎಂದು ತನಿಖೆಯಿಂದ ತಿಳಿದುಬಂದಿದೆ. ಅವರು ಟೆಲಿಗ್ರಾಮ್ ಮೂಲಕ ಭಾರತೀಯ ಏಜೆಂಟರಿಗೆ ಸೂಚನೆಗಳನ್ನು ನೀಡುತ್ತಿದ್ದರು. ಬಿಹಾರದ ಆಶಿಶ್ ಕುಮಾರ್ ಅಲಿಯಾಸ್ ಜ್ಯಾಕ್ ಈ ಟಾಮ್ನ ಪ್ರಮುಖ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಪ್ರತಿ ಅಕ್ರಮ ವಹಿವಾಟಿನ ಮೇಲೆ 1 ರಿಂದ 1.5% ಕಮಿಷನ್ ಪಡೆಯುತ್ತಿದ್ದರು. ಬಲಿಪಶುವನ್ನು ತಾವು ಕಾನೂನುಬದ್ಧ ಹೂಡಿಕೆ ಸಂಸ್ಥೆ ಎಂದು ನಂಬಿಸಲು ಅವರು ನೋಯ್ಡಾದಲ್ಲಿ ನಕಲಿ ಕಚೇರಿಯನ್ನು…
ಬೆಂಗಳೂರು: ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಸಿಮೆಂಟ್ ಇಟ್ಟಿಗೆಗಳು ಪಕ್ಕದ ಮನೆಯ ಮೇಲೆ ಬಿದ್ದು 4 ವರ್ಷದ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಅವಘಡ ಸಂಭವಿಸಿದ್ದು, ಮನುಶ್ರೀ (4) ಎಂಬ ಮಗು ಮೃತಪಟ್ಟಿದ್ದರೆ, ಆನಂದ್ (6), ಶ್ರೀಯಾನ್ (2) ಹಾಗೂ ಶೇಖರ್ (5) ಎಂಬ ಮಕ್ಕಳು ಗಾಯಗೊಂಡಿದ್ದಾರೆ. ಚಿನ್ನಪ್ಪನಹಳ್ಳಿ ಯಲ್ಲಿ ಸುಬ್ಬಾರಾವ್ ಎಂಬುವರ ಮಾಲೀಕತ್ವದ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಕಟ್ಟಡದ ಮೇಲಿಂದ 10-12 ಸಿಮೆಂಟ್ ಇಟ್ಟಿಗೆಗಳು ಪಕ್ಕದಲ್ಲೇ ಇದ್ದ ಶೀಟಿನ ಮನೆ ಮೇಲೆ ಬಿದ್ದವು. ಮನೆಯ ಒಳಗೆ ಆಟವಾಡುತ್ತಿದ್ದ ನಾಲ್ಕು ಮಕ್ಕಳ ಪೈಕಿ ಒಂದು ಮಗುವಿನ ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಬಿದ್ದಿದೆ. ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಮಗು ಮೃತಪಟ್ಟಿದೆ. ಘಟನೆ ಸಂಬಂಧ ಕಟ್ಟಡದ ಮಾಲೀಕ ಸುಬ್ಬಾರಾವ್ ವಿರುದ್ಧ ಪೊಲೀಸರು ಎಫ್ ಐ ಆರ್ಿ ದಾಖಲಿಸಿಕೊಂಡಿದ್ದಾರೆ. ಕಟ್ಟಡ ಕಾಮಗಾರಿ ವೇಳೆ ಸುರಕ್ಷಿತ…
ಬೆಳಗಾವಿ : ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್ದಾಪರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿ.ಪಿ.ಎಲ್ ಹಾಗೂ 1.25 ಲಕ್ಷ ಎ.ಪಿ.ಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ.…
ತುಮಕೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನ ಕೊಡದಿದ್ದರೆ ಕಾಂಗ್ರೆಸ್ ಸರ್ವನಾಶವಾಗುತ್ತೆ ಎಂದು ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನ ಕೊಡದಿದ್ದರೆ ಕಾಂಗ್ರೆಸ್ ಸರ್ವನಾಶವಾಗುತ್ತೆ. ಡಿ.ಕೆ. ಶಿವಕುಮಾರ್ ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಹೀಗಾಗಿ ಅವರು ಸಿಎಂ ಆಗಬೇಕು. ಅವರು ದುಡಿದಿದ್ದಕ್ಕೆ ಕೂಲಿ ಕೊಡಬೇಕು ಎಂದು ಹೇಳಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನ ಮುಗಿದ ಕೂಡಲೇ ಅವರನ್ನು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಬೇಕು. ಇಲ್ಲ ಅಂದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಹೇಳಿದ್ದಾರೆ.
ಬೆಳಗಾವಿ : ಕಾಂಗ್ರೆಸ್ ನಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್ ಜೋರಾಗಿದ್ದು, ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮಾಡಿದ್ದಾರೆ . ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಡಿನ್ನರ್ ನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೆಚ್.ಸಿ. ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಎಂ.ಸಿ. ಸುಧಾಕರ್, ಶಾಸಕ ಪೊನ್ನಣ್ಣ, ಎಂ.ಎಲ್. ಸಿ ನಜೀರ್ ಸೇರಿದಂತೆ ಸಿಎಂ ಸಿದ್ದರಾಮಯ್ಯ ಆಪ್ತರಷ್ಟೇ ಭಾಗಿಯಾಗಿದ್ದಾರೆ. ಆದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತರಿಗೆ ಆಹ್ವಾನಿಸಿಲ್ಲ ಎಂದು ತಿಳಿದುಬಂದಿದೆ. ಸದ್ಯ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಡಿನ್ನರ್ ಮೀಟಿಂಗ್ ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.














