Author: kannadanewsnow57

ಬೆಂಗಳೂರು : ಬೇಸಿಗೆ ರಜೆಯ ಮಜ ಮುಗಿಸಿ ವಿದ್ಯಾರ್ಥಿಗಳು ಮತ್ತೆ ಶಾಲೆಯತ್ತ ಹೆಜ್ಜೆ ಇಡಲು ಸನ್ನದ್ಧರಾಗಿದ್ದಾರೆ. ರಾಜ್ಯಾದ್ಯಂತ ಇಂದಿನಿಂದಲೇ 2026-27ನೇ ಶೈಕ್ಷಣಿಕ ವರ್ಷದ ಸರ್ಕಾರಿ ಶಾಲೆಗಳು ಅಧಿಕೃತವಾಗಿ ಆರಂಭಗೊಂಡಿದ್ದು, ಶಿಕ್ಷಕರು ಮಕ್ಕಳಿಗೆ ಹೂ ನೀಡಿ, ಸಿಹಿ ಹಂಚಿ ಸ್ವಾಗತಿಸಿದ್ದಾರೆ. ಇಷ್ಟು ದಿನ ರಜೆಯ ಮೂಡ್‌ ನಲ್ಲಿದ್ದ ವಿದ್ಯಾರ್ಥಿಗಳನ್ನು ಡಿಜಿಟಲ್ ಜಗತ್ತಿನಿಂದ ಮತ್ತೆ ತರಗತಿಗಳತ್ತ ಆಕರ್ಷಿಸಲು ಶಿಕ್ಷಣ ಇಲಾಖೆ ಈ ಬಾರಿ ಮಹತ್ವದ ಹೆಜ್ಜೆ ಇಟ್ಟಿದೆ. ಇಂದು ಶಾಲೆಗೆ ಬರುವ ಪುಟಾಣಿಗಳಿಗೆ ತೋರಣ ಕಟ್ಟಿ, ಹೂವು ಕೊಟ್ಟು, ಸಿಹಿ ತಿನ್ನಿಸಿ ಅತ್ಯಂತ ಪ್ರೀತಿಯಿಂದ ಬರಮಾಡಿಕೊಂಡಿದ್ದಾರೆ. ಮಕ್ಕಳಲ್ಲಿ ಶಾಲೆಯ ಬಗ್ಗೆ ಭೀತಿ ಹೋಗಲಾಡಿಸಿ ಉತ್ಸಾಹ ತುಂಬಲು ಈ ಮೊದಲ ದಿನವನ್ನು “ಮಕ್ಕಳ ಹಬ್ಬ” ಎಂದು ಆಚರಿಸಲಾಗುತ್ತಿದೆ. ಶಾಲೆಗಳ ಆವರಣವನ್ನು ಈಗಾಗಲೇ ಸಿಂಗರಿಸಲಾಗಿದ್ದು, ಮೊದಲ ದಿನವೇ ಮಕ್ಕಳಿಗೆ ವಿಶೇಷ ಬಿಸಿಯೂಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಶೇ.90 ರಷ್ಟು ಪಠ್ಯಪುಸ್ತಕ ಸಪ್ಲೈ ಕಂಪ್ಲೀಟ್! ಈ ಬಾರಿ ಶೈಕ್ಷಣಿಕ ವರ್ಷದ ಆರಂಭದಲ್ಲೇ ಮಕ್ಕಳಿಗೆ ಪುಸ್ತಕ ತಲುಪಿಸಲು ಸರ್ಕಾರ ವೇಗವಾಗಿ ಕೆಲಸ…

Read More

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಮಹಾಸಮರಕ್ಕೆ ಕೌಂಟ್‌ಡೌನ್ ಆರಂಭವಾಗಿದೆ. ಇಂದು ರಾತ್ರಿ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ತಮ್ಮ ಎರಡನೇ ಟ್ರೋಫಿಗಾಗಿ ಸೆಣಸಾಡಲಿವೆ. ಆರ್‌ಸಿಬಿ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ. ಆದರೆ, ಈ ಭಾರಿ ಸಂಭ್ರಮಾಚರಣೆಯ ನೆಪದಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬೆಂಗಳೂರು ನಗರ ಪೊಲೀಸರು ಅತ್ಯಂತ ಕಠಿಣವಾದ ಸುರಕ್ಷತಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ಕಳೆದ ವರ್ಷದ ಕರಾಳ ನೆನಪು: ಪೊಲೀಸರ ಕಠಿಣ ನಿಲುವಿಗೆ ಕಾರಣವೇನು? ಕಳೆದ 2025ರ ಐಪಿಎಲ್‌ನಲ್ಲಿ ಆರ್‌ಸಿಬಿ ತನ್ನ ಚೊಚ್ಚಲ ಪ್ರಶಸ್ತಿ ಗೆದ್ದಾಗ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ವಿಪರೀತ ಸಂಭ್ರಮಾಚರಣೆ ಮತ್ತು ಕಾಲ್ತುಳಿತದಲ್ಲಿ 11 ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಈ ಭೀಕರ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು ಹಾಗೂ ಸರ್ಕಾರ ಮತ್ತು…

Read More

ಬೆಂಗಳೂರು: ದೇಶಾದ್ಯಂತ ಡಿಜಿಟಲ್ ಪಾವತಿಗಳು ಅತ್ಯಂತ ವೇಗವಾಗಿ ಹೆಚ್ಚಾಗುತ್ತಿದ್ದು, ಯುಪಿಐ (UPI) ಆಧಾರಿತ ಕ್ಯೂಆರ್ ಕೋಡ್ (QR Code) ಪಾವತಿಗಳು ನಮ್ಮ ದೈನಂದಿನ ಜೀವನದ ಪ್ರಮುಖ ಭಾಗವಾಗಿ ಮಾರ್ಪಟ್ಟಿವೆ. ಶಾಪಿಂಗ್ ಮಾಲ್‌ಗಳು, ಸಣ್ಣ ಅಂಗಡಿಗಳು, ರೆಸ್ಟೋರೆಂಟ್‌ಗಳು ಮತ್ತು ಆನ್‌ಲೈನ್ ಡೆಲಿವರಿ ಹೀಗೆ ಪ್ರತಿಯೊಂದು ಕಡೆಯೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಪಾವತಿಸುವುದು ಸಾಮಾನ್ಯವಾಗಿದೆ. ಆದರೆ, ಇದೇ ಸೌಕರ್ಯವನ್ನು ಸೈಬರ್ ಅಪರಾಧಿಗಳು ಈಗ ಹೊಸ ಮಾದರಿಯ ವಂಚನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಅಂಗಡಿಗಳಲ್ಲಿ ಅಸಲಿ ಕ್ಯೂಆರ್ ಕೋಡ್‌ಗಳ ಮೇಲೆ ತಮಗೆ ಸೇರಿದ ನಕಲಿ ಕ್ಯೂಆರ್ ಕೋಡ್‌ಗಳನ್ನು ಅಂಟಿಸಿ, ಗ್ರಾಹಕರ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿವೆ ಎಂದು ಸೈಬರ್ ಭದ್ರತಾ ತಜ್ಞರು ಎಚ್ಚರಿಸಿದ್ದಾರೆ. ವಂಚನೆ ನಡೆಯುವುದು ಹೇಗೆ? ಸಾಮಾನ್ಯವಾಗಿ ಗ್ರಾಹಕರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಯುಪಿಐ ಪಿನ್ (UPI PIN) ನಮೂದಿಸಿದ ತಕ್ಷಣ ಹಣವು ಸಂಬಂಧಪಟ್ಟ ಖಾತೆಗೆ ಜಮೆಯಾಗುತ್ತದೆ. ಆದರೆ, ನಕಲಿ ಕ್ಯೂಆರ್ ಕೋಡ್ ಇರುವ ಸಂದರ್ಭಗಳಲ್ಲಿ ಆ ಹಣ ಅಸಲಿ…

Read More

ನವದೆಹಲಿ: ಭಾರತದ ಗಲ್ಲಿ ಗಲ್ಲಿಗಳ ಬೀದಿಬದಿಯ ಸಂಸ್ಕೃತಿಯ ಭಾಗವಾಗಿರುವ, ಭಾರತೀಯರ ಜೀವನಾಡಿಯಾದ ‘ಮಸಾಲ ಚಾಯ್’ (Masala Chai) ಈಗ ಅಧಿಕೃತವಾಗಿ ಜಗತ್ತಿನ ಅತ್ಯುತ್ತಮ ಚಹಾವಾಗಿ ಹೊರಹೊಮ್ಮಿದೆ. ಜಾಗತಿಕ ಆಹಾರ ಮತ್ತು ಪಾನೀಯಗಳ ಪ್ರತಿಷ್ಠಿತ ಮಾರ್ಗದರ್ಶಿಯಾದ ‘ಟೇಸ್ಟ್‌ಅಟ್ಲಾಸ್’ (TasteAtlas) ಪ್ರಕಟಿಸಿರುವ ಮೇ ಆವೃತ್ತಿಯ “ವಿಶ್ವದ ಟಾಪ್ 100 ಚಹಾಗಳು” ಪಟ್ಟಿಯಲ್ಲಿ ಭಾರತದ ಮಸಾಲ ಚಾಯ್ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದೆ. ಪೂರ್ವ ಏಷ್ಯಾ ಮತ್ತು ಯುರೋಪ್‌ನ ಅತ್ಯಂತ ದುಬಾರಿ ಹಾಗೂ ಪ್ರೀಮಿಯಂ ಚಹಾಗಳನ್ನು ಹಿಂದಿಕ್ಕಿ ಭಾರತದ ಈ ಸಾಂಬಾರ ಪದಾರ್ಥಗಳ ಮಿಶ್ರಣದ ಹಾಲಿನ ಚಹಾ ಜಾಗತಿಕ ಮಟ್ಟದಲ್ಲಿ ಅಗ್ರಸ್ಥಾನ ಗಳಿಸಿರುವುದು ಭಾರತೀಯ ಆಹಾರ ಪರಂಪರೆಗೆ ಸಿಕ್ಕ ಐತಿಹಾಸಿಕ ಮನ್ನಣೆಯಾಗಿದೆ. ಜಾಗತಿಕ ಅಭಿರುಚಿಯಲ್ಲಿ ಬದಲಾವಣೆ ಶತಮಾನಗಳಿಂದಲೂ ಜಾಗತಿಕ ಪಾನೀಯ ಲೋಕದಲ್ಲಿ ಯಾವುದೇ ಮಿಶ್ರಣವಿಲ್ಲದ ಗ್ರೀನ್ ಟೀ ಮತ್ತು ಬ್ಲ್ಯಾಕ್ ಟೀ ವೆರೈಟಿಗಳದ್ದೇ ಮೇಲಗೈ ಇತ್ತು. ಆದರೆ, ಈಗ ಮಸಾಲ ಚಾಯ್ ಮೊದಲ ಸ್ಥಾನಕ್ಕೇರಿರುವುದು ಅಂತರರಾಷ್ಟ್ರೀಯ ಮಟ್ಟದಲ್ಲಿ ಜನರ ಅಭಿರುಚಿ ಬದಲಾಗುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಸಿಟಿಸಿ (CTC) ಚಹಾ…

Read More

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಮೇ.29 ರಿಂದ ಆರಂಭಿಸಿದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬೇಕಿರುತ್ತದೆ. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು URL-https://sevasindhu.karnataka.gov.in/buspassservices ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿದ್ದು, ಕೆಳಕಂಡ ಕ್ರಮಗಳನ್ನು ಅನುಸರಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿರುತ್ತದೆ. ನೆರೆ ರಾಜ್ಯದ ವಿರ್ಧ್ಯಾಥಿನಿಯರು ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಈ ಕ್ರಮಗಳನ್ನು ಅನುಸರಿಸಿ ವಿದ್ಯಾರ್ಥಿ ಪಾಸುಗಳನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರಗಳಿಗೆ ಭೇಟಿ ನೀಡಿ…

Read More

ರಾಜೀವ್ ಗಾಂಧಿ ವಸತಿ ನಿಗಮದ ಸೂಚನೆಯಂತೆ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)-2.0 ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಸೌಲಭ್ಯ ಕಲ್ಪಿಸುವ ಸಲುವಾಗಿ ವಸತಿ ರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆಗೆ ಅರ್ಜಿ ಸಲ್ಲಿಸಲು ಜೂನ್, 30 ರವರೆಗೆ ಕಾಲಾವಕಾಶ ನೀಡಿದೆ. ಈ ಯೋಜನೆಯಡಿ ಇದುವರೆಗೂ ಯಾವುದೇ ವಸತಿ ಯೋಜನೆಯಡಿ ಸೌಲಭ್ಯ ಪಡೆಯದೇ ಇರುವ ವಸತಿ ರಹಿತರು (ನಿವೇಶನ/ ಹಳೆಯ ಕಚ್ಚಾಮನೆ ಉಳ್ಳವರು) ಹಾಗೂ ನಿವೇಶನ ರಹಿತ ಮಹಿಳೆಯರು, ಹಿರಿಯ ನಾಗರೀಕರು, ವಿಧುರರು, ವಿಶೇಷ ಚೇತನರು ಹಾಗೂ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿದಾರರು ಪೆÇೀಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಓಟರ್ ಐಡಿ, ಬ್ಯಾಂಕ್ ಪಾಸ್ ಪುಸ್ತಕ, ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಗಳು, ನಿವೇಶನ/ ಹಳೆಯ ಕಚ್ಚಾಮನೆ ದಾಖಲೆಗಳೊಂದಿಗೆ https/pmay.urban.gov.in ದಲ್ಲಿ ಸ್ವಂತವಾಗಿ/ ಗ್ರಾಹಕ ಸೇವಾ ಕೇಂದ್ರಗಳಲ್ಲಿ/ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆನ್ಲೈtನ್ ಮೂಲಕ ಜೂನ್, 30 ರೊಳಗೆ ಅರ್ಜಿ…

Read More

ಮಾಂಸಾಹಾರಿಗಳಲ್ಲಿ ಚಿಕನ್ ಅಂದರೆ ಪ್ರಾಣ ಬಿಡುವವರೇ ಹೆಚ್ಚು. ವೀಕೆಂಡ್ ಬಂತು ಅಂದರೆ ಸಾಕು, ತರಹೇವಾರಿ ಚಿಕನ್ ಖಾದ್ಯಗಳು ರಾರಾಜಿಸುತ್ತವೆ. ಆದರೆ, ಚಿಕನ್‌ನ ಎಲ್ಲಾ ಭಾಗಗಳೂ ಆರೋಗ್ಯಕ್ಕೆ ಸುರಕ್ಷಿತವಲ್ಲ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಿದ್ದಾರೆ. ಕೋಳಿಯ ಕೆಲವು ನಿರ್ದಿಷ್ಟ ಭಾಗಗಳಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾ, ಪರಾವಲಂಬಿ ಜೀವಿಗಳು ಮತ್ತು ವಿಷಕಾರಿ ಅಂಶಗಳು (ಟಾಕ್ಸಿನ್) ಹೆಚ್ಚಾಗಿ ಸಂಗ್ರಹವಾಗುತ್ತವೆ. ಇವುಗಳನ್ನು ಸರಿಯಾಗಿ ಬೇಯಿಸದೆ ತಿಂದರೆ ತೀವ್ರ ಫುಡ್ ಪಾಯ್ಸನಿಂಗ್, ಜೀರ್ಣಕ್ರಿಯೆ ಸಮಸ್ಯೆಗಳು ಹಾಗೂ ದೀರ್ಘಕಾಲದ ಆರೋಗ್ಯ ಕಾಟಗಳು ಎದುರಾಗಬಹುದು. ಹಾಗಾದರೆ, ಚಿಕನ್ ಪ್ರಿಯರು ತಮ್ಮ ಆರೋಗ್ಯದ ದೃಷ್ಟಿಯಿಂದ ಕೋಳಿಯ ಯಾವೆಲ್ಲಾ ಭಾಗಗಳನ್ನು ತಿನ್ನಬಾರದು? ಇಲ್ಲಿದೆ ಸಂಪೂರ್ಣ ಮಾಹಿತಿ: 1. ಕೋಳಿಯ ಚರ್ಮ (Chicken Skin) ಅನೇಕರು ಚಿಕನ್ ಬೇಯಿಸುವಾಗ ಚರ್ಮದ ಸಮೇತ (With Skin) ಬೇಯಿಸುತ್ತಾರೆ. ಆದರೆ, ಚಿಕನ್ ಚರ್ಮದಲ್ಲಿ ಅತಿ ಹೆಚ್ಚು ಪ್ರಮಾಣದ ಸಂತೃಪ್ತ ಕೊಬ್ಬು (Saturated Fats) ಇರುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (LDL) ಮಟ್ಟ ವೇಗವಾಗಿ ಹೆಚ್ಚಿ, ಬೊಜ್ಜು…

Read More

ಬೆಂಗಳೂರು: ಗ್ರಾಹಕರಿಗೆ ಮಟನ್ ಎಂದು ನಂಬಿಸಿ ಗೋಮಾಂಸ (ಬೀಫ್) ಉಣಿಸುತ್ತಿದ್ದ ರೆಸ್ಟೋರೆಂಟ್ ಮಾಲೀಕರಿಬ್ಬರನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬ್ಯಾರತಿ ಗ್ರಾಮದ ಜಿಜೂ ಅಲೆಕ್ಸಾಂಡರ್ ಹಾಗೂ ಟಿಪ್ಪಣ್ಣ ಲೇಔಟ್‌ನ ಶಿಬು ಕೆ.ಬಿ. ಎಂದು ಗುರುತಿಸಲಾಗಿದೆ. ಮೂಲತಃ ಕೇರಳದವರಾದ ಇವರು ಭೈರತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರಿಬ್ಬರು ನಗರದ ಬೊಮ್ಮನಹಳ್ಳಿಯಲ್ಲಿರುವ ಐಸಿರಿ ಹಬ್ ಕಾಯಲೋರಂ ರೆಸ್ಟೋರೆಂಟ್‌ನ ಮಾಲೀಕರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಾಯಲೋರಂ ರೆಸ್ಟೋರೆಂಟ್‌ನ ಮೆನು ಕಾರ್ಡ್‌ನಲ್ಲಿ ಎಲ್ಲಿಯೂ ಗೋಮಾಂಸದ (ಬೀಫ್) ಉಲ್ಲೇಖ ಇರಲಿಲ್ಲ. ಆದರೆ, ಇಲ್ಲಿ ಮಟನ್ ಖಾದ್ಯಗಳನ್ನು ಆರ್ಡರ್ ಮಾಡಿದಾಗ ಗ್ರಾಹಕರಿಗೆ ಗೋಮಾಂಸವನ್ನು ನೀಡಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿದ್ದವು. ಖಚಿತ ಮಾಹಿತಿ ಮತ್ತು ಗ್ರಾಹಕರ ದೂರುಗಳ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಬಂಧಿತ ಆರೋಪಿಗಳ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ-2020 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ಇದೇ…

Read More

ಹಿಂದೂ ಧರ್ಮದಲ್ಲಿ ಪ್ರತಿಯೊಂದು ಸಂಪ್ರದಾಯದ ಹಿಂದೆ ಒಂದು ಬಲವಾದ ಕಾರಣ ಹಾಗೂ ವೈಜ್ಞಾನಿಕ ಹಿನ್ನೆಲೆ ಇರುತ್ತದೆ. ಸಾಮಾನ್ಯವಾಗಿ ನಮ್ಮಲ್ಲಿ ಹೆಣ್ಣುಮಕ್ಕಳು ಮಾತ್ರ ಕಿವಿ ಚುಚ್ಚಿಸಿಕೊಳ್ಳುತ್ತಾರೆ ಎಂಬ ಭಾವನೆ ಇದೆ. ಇದರಿಂದಾಗಿ ‘ಹುಡುಗರು ಕಿವಿ ಚುಚ್ಚಿಸಿಕೊಳ್ಳಬಹುದೇ?’ ಎಂಬ ಸಂದೇಹ ಅನೇಕರಲ್ಲಿ ಮೂಡುವುದು ಸಹಜ. ಆದರೆ, ಭಾರತೀಯ ಸನಾತನ ಸಂಪ್ರದಾಯದ ಪ್ರಕಾರ ಕಿವಿ ಚುಚ್ಚಿಸಿಕೊಳ್ಳುವುದು ಕೇವಲ ಹೆಣ್ಣುಮಕ್ಕಳಿಗೆ ಮಾತ್ರ ಸೀಮಿತವಾಗಿಲ್ಲ. ಹಿಂದೂ ಸಂಸ್ಕೃತಿಯಲ್ಲಿ ಗಂಡುಮಕ್ಕಳಿಗೂ ಇದು ಅತ್ಯಂತ ಪ್ರಮುಖ ಸಂಸ್ಕಾರವಾಗಿದೆ. ಇದನ್ನು “ಕರ್ಣವೇಧ ಸಂಸ್ಕಾರ” ಎಂದು ಕರೆಯಲಾಗುತ್ತದೆ. ಪ್ರಾಚೀನ ಕಾಲದಿಂದಲೂ ಮಕ್ಕಳಿಗೆ ಕಿವಿ ಚುಚ್ಚಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಕೆಲವು ಕುಟುಂಬಗಳಲ್ಲಿ ಬಾಲ್ಯದಲ್ಲೇ ಕಿವಿ ಚುಚ್ಚಿಸಿದರೆ, ಇನ್ನು ಕೆಲವು ಕಡೆ ಉಪನಯನದ (ಮುಂಜಿ) ಸಮಯದಲ್ಲಿ ಈ ಆಚರಣೆಯನ್ನು ಮಾಡಲಾಗುತ್ತದೆ. ಪ್ರಸ್ತುತ ದಿನಗಳಲ್ಲಿ ಫ್ಯಾಷನ್‌ಗಾಗಿಯೂ ಯುವಕರು ಕಿವಿ ಚುಚ್ಚಿಸಿಕೊಳ್ಳುವುದು ಸಾಮಾನ್ಯವಾಗಿದೆ. ಕಿವಿ ಚುಚ್ಚಿಸಿಕೊಳ್ಳುವುದರಿಂದಾಗುವ ಪ್ರಯೋಜನಗಳು: 1. ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ನಂಬಿಕೆಗಳು ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕಿವಿ ಚುಚ್ಚಿಸಿಕೊಳ್ಳುವುದರಿಂದ ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಜ್ಯೋತಿಷ್ಯ ಶಾಸ್ತ್ರದ…

Read More

ಮುಂಬೈ: ಭಾರತದ ಭೌತಿಕ ಕರೆನ್ಸಿ (ನೋಟುಗಳು) ಶೀಘ್ರದಲ್ಲೇ ದೊಡ್ಡ ಮಟ್ಟದ ಬದಲಾವಣೆ ಕಾಣುವ ಸಾಧ್ಯತೆ ಇದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಪಾಲಿಮರ್ ಅಥವಾ ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಪ್ರಾಯೋಗಿಕ ಯೋಜನೆಯನ್ನು (Pilot Scheme) ಪ್ರಾರಂಭಿಸಲು ಸಜ್ಜಾಗಿದೆ ಎಂದು ವರದಿಯಾಗಿದೆ. ದೇಶದಲ್ಲಿ ಡಿಜಿಟಲ್ ಪಾವತಿಗಳು ವೇಗವಾಗಿ ಬೆಳೆಯುತ್ತಿದ್ದರೂ, ನಗದಿಗೆ ಇರುವ ಬೇಡಿಕೆ ಮಾತ್ರ ಕಡಿಮೆಯಾಗಿಲ್ಲ. ನೋಟು ಮುದ್ರಣ ವೆಚ್ಚ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಮತ್ತು ಪ್ರತಿ ವರ್ಷ ಕೋಟ್ಯಂತರ ಹಾನಿಗೊಳಗಾದ ನೋಟುಗಳನ್ನು ಚಲಾವಣೆಯಿಂದ ತೆಗೆದುಹಾಕಬೇಕಾಗಿರುವುದು ಆರ್‌ಬಿಐಗೆ ದೊಡ್ಡ ಸವಾಲಾಗಿದೆ. ಹೀಗಾಗಿ, ಸುಮಾರು ಹತ್ತು ವರ್ಷಗಳ ಹಿಂದಿನ ಈ ಪ್ರಸ್ತಾಪವನ್ನು ಆರ್‌ಬಿಐ ಈಗ ಮತ್ತೆ ಗಂಭೀರವಾಗಿ ಪರಿಗಣಿಸುತ್ತಿದೆ. ಏನಿದು ಪ್ಲಾಸ್ಟಿಕ್ ಕರೆನ್ಸಿ ನೋಟುಗಳು? ಪ್ಲಾಸ್ಟಿಕ್ ನೋಟುಗಳು ಎಂದರೆ ನಮ್ಮ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್‌ಗಳಂತೆ ಗಟ್ಟಿಯಾಗಿರುವುದಿಲ್ಲ. ಇವುಗಳನ್ನು ಅತ್ಯಂತ ತೆಳುವಾದ, ಪ್ಲಾಸ್ಟಿಕ್ ಆಧಾರಿತ ‘ಪಾಲಿಮರ್’ ವಸ್ತುವಿನಿಂದ ತಯಾರಿಸಲಾಗುತ್ತದೆ. ಇವು ಸಾಂಪ್ರದಾಯಿಕ ಕಾಗದದ ನೋಟುಗಳಂತೆಯೇ ಮೃದುವಾಗಿದ್ದು, ಸುಲಭವಾಗಿ…

Read More