Subscribe to Updates
Get the latest creative news from FooBar about art, design and business.
Author: kannadanewsnow57
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ಮತ್ತೆ ರಕ್ತದ ಓಕುಳಿಯ ಹರಿದಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ನಗರದ ಹೃದಯಭಾಗವಾದ ಗಾಂಧಿ ಬಜಾರ್ ಬಳಿ ಈ ಘಟನೆ ನಡೆದಿದ್ದು, ಗೋವಿಂದಪುರ ನಿವಾಸಿ, ರೌಡಿಶೀಟರ್ ನರಸಿಂಹ ಕೊಲೆಯಾದ ದುರ್ದೈವಿ. ನರಸಿಂಹ ಒಂಟಿಯಾಗಿ ಸಿಕ್ಕಾಗ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ತೀವ್ರ ಕ್ರೌರ್ಯ ಮೆರೆದಿರುವ ಹಂತಕರು, ನರಸಿಂಹನ ಎರಡು ಕೈಗಳನ್ನು ಕತ್ತರಿಸಿ, ರಸ್ತೆಯಲ್ಲೇ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಈ ಕೃತ್ಯ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ನಡೆದಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗದ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪರಾರಿಯಾಗಿರುವ ಹಂತಕರ ಪತ್ತೆಗಾಗಿ ಜಾಲ ಬೀಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಬೆಂಗಳೂರು: ಪೋಷಕರ ನೆರಳು ಪ್ರತಿಯೊಬ್ಬ ಮಗುವಿನ ಜೀವನದಲ್ಲೂ ಅತ್ಯಂತ ದೊಡ್ಡ ರಕ್ಷಾ ಕವಚ. ಬಾಲ್ಯದಿಂದ ಹಿಡಿದು ಸ್ವಂತ ಕಾಲಿನ ಮೇಲೆ ನಿಲ್ಲುವವರೆಗೆ, ಪೋಷಕರು ತಮ್ಮ ಪ್ರತಿಯೊಂದು ಸಂತೋಷವನ್ನು ತ್ಯಾಗ ಮಾಡಿ ಮಕ್ಕಳ ಭವಿಷ್ಯವನ್ನು ರೂಪಿಸುತ್ತಾರೆ. ಆದರೆ ಇಂದಿನ ಆಧುನಿಕ ಕಾಲದ ಕಹಿ ಮತ್ತು ನೋವಿನ ಸತ್ಯವೆಂದರೆ, ಅನೇಕ ಮಕ್ಕಳು ಬೆಳೆದ ನಂತರ ತಮ್ಮದೇ ಆದ ವೃದ್ಧ ಪೋಷಕರನ್ನು ಹೊರೆ ಎಂದು ಭಾವಿಸಲು ಪ್ರಾರಂಭಿಸುತ್ತಾರೆ. ವೃದ್ಧಾಪ್ಯದಲ್ಲಿ ಅವರಿಗೆ ಅತ್ಯಂತ ಹೆಚ್ಚಿನ ಆಸರೆಯ ಅಗತ್ಯವಿರುವಾಗ, ಅವರನ್ನೇ ಸ್ವಂತ ಮನೆಯಿಂದ ಹೊರಹಾಕುವ ಅಥವಾ ಕಿರುಕುಳ ನೀಡುವ ಘಟನೆಗಳು ನಡೆಯುತ್ತಿವೆ. ಇದು ಕೇವಲ ಸಾಮಾಜಿಕ ಮತ್ತು ನೈತಿಕವಾಗಿ ಅಮಾನವೀಯ ಮಾತ್ರವಲ್ಲ, ಭಾರತೀಯ ಕಾನೂನಿನ ಪ್ರಕಾರ ಗಂಭೀರ ಅಪರಾಧವೂ ಆಗಿದೆ. ಇಂತಹ ಅಸಹಾಯಕ ವೃದ್ಧರ ಗೌರವ ಮತ್ತು ಸುರಕ್ಷತೆಗಾಗಿ ಭಾರತ ಸರ್ಕಾರವು ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007’ (The Maintenance and Welfare of Parents and Senior Citizens Act,…
ಜೈಪುರ: ವಿಚ್ಛೇದನ ಒಪ್ಪಂದಕ್ಕೆ ಸಹಿ ಹಾಕಿ, ಜೀವನಾಂಶವಾಗಿ 20 ಲಕ್ಷ ರೂಪಾಯಿ ಪಡೆದ ನಂತರವೂ ಮಾಜಿ ಪತಿ ಮತ್ತು ಅವರ ಕುಟುಂಬದ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗ ಎಂದು ರಾಜಸ್ಥಾನ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಪತಿ ಹಾಗೂ ಅವರ ವಯೋವೃದ್ಧ ಪೋಷಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ. ವೈವಾಹಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಸೊಸೆ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ 65 ವರ್ಷದ ಸತ್ಯಪಾಲ್ ಶರ್ಮಾ ಮತ್ತು ಅವರ 62 ವರ್ಷದ ಪತ್ನಿ ಸೀತಾ ದೇವಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಅನೂಪ್ ಕುಮಾರ್ ಧಂಡ್ ಈ ಆದೇಶ ನೀಡಿದ್ದಾರೆ. 20 ಲಕ್ಷ ರೂ. ಜೀವನಾಂಶದೊಂದಿಗೆ ವಿಚ್ಛೇದನ ಇತ್ಯರ್ಥ ವರದಿಗಳ ಪ್ರಕಾರ, ಈ ದಂಪತಿಯ ವಿವಾಹವು 2009ರ ನವೆಂಬರ್ನಲ್ಲಿ ನಡೆದಿತ್ತು. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 2013 ರಲ್ಲಿ ಮಹಿಳೆ ತನ್ನ ಪತಿ ಮತ್ತು ಆತನ ಕುಟುಂಬ ಸದಸ್ಯರ ವಿರುದ್ಧ…
ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಮುಕ್ತ ಕಚೇರಿ ಎಂದು ಫಲಕ ಅಳವಡಿಸುವಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇ ವನೆ ನಿಷೇಧಿಸಿದ್ದು, ಸೇವನೆ ಮಾಡುತ್ತಿರುವುದು ಕಂಡು ಬಂದಲ್ಲಿ ದಂಡ ವಿಧಿಸುವಂತೆ ಸೂಚನೆ ನೀಡಿದರಲ್ಲದೆ, ಅನಿರೀಕ್ಷಿತ ದಾಳಿ ನಡೆಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ತಂಬಾಕು ಉತ್ಪನ್ನಗಳನ್ನು ಬಳಸಬಾರದು ಅವುಗಳಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮ ಕುರಿತು ಶಾಲಾ ಮಕ್ಕಳಿಗೆ ಮಾಹಿತಿ ನೀಡುವುದರ ಮೂಲಕ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರ ಲ್ಲದೆ, ತಂಬಾಕು ಮುಕ್ತ ಶಾಲೆ, ಹಾಸ್ಟೆಲ್ ಎಂದು ಫಲಕ ಅಳವಡಿಸುವಂತೆ ನಿರ್ದೇಶನ ನೀಡಿದರು. ಸದರಿ ಆವರಣಗಳಲ್ಲಿ ಗುಟ್ಕಾ ಕವರ್ ಗಳು ಸಿಕ್ಕರೆ ದಂಡ ವಿಧಿಸಿ ಶಾಲಾ ಮುಖ್ಯಸ್ಥರೆ ಹೊಣೆಗಾರಾರು ಎಂದು ತಿಳಿಸಿದರು. ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳನ್ನು ತಂಬಾಕು ಮುಕ್ತ ನಿಲ್ದಾಣ ಎಂದು ಘೋಷಣೆ ಮಾಡಲು…
ಬೆಂಗಳೂರು: ಇಂದಿನ ದಿನಗಳಲ್ಲಿ ಸ್ವಂತ ಮನೆ ಹೊಂದುವ ಕನಸಿನೊಂದಿಗೆ ಲಕ್ಷಾಂತರ ಜನರು ಗೃಹ ಸಾಲ (Home Loan) ಪಡೆದುಕೊಳ್ಳುತ್ತಿದ್ದಾರೆ. ಆದರೆ, ತಿಂಗಳ ಸಂಬಳ ಬರುತ್ತಿದ್ದಂತೆ ಇಎಂಐ (EMI) ಕಟ್ಟುವುದರಲ್ಲೇ ಇಡೀ ಜೀವನ ಕಳೆದುಹೋಗುತ್ತದೆ ಎಂಬುದು ಮಧ್ಯಮ ವರ್ಗದವರ ಅಳಲು. ಜೀವನದ ಇತರೆ ಪ್ರಮುಖ ಅಗತ್ಯಗಳನ್ನು ತ್ಯಾಗ ಮಾಡಿಯಾದರೂ ಸರಿ, ಇಎಂಐ ಪಾವತಿಯನ್ನು ಮಾತ್ರ ತಪ್ಪಿಸಬಾರದು ಎಂದು ಎಲ್ಲರೂ ಹೋರಾಡುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಒಂದು ವೇಳೆ ಗೃಹ ಸಾಲದ ಇಎಂಐ ಸಮಯಕ್ಕೆ ಸರಿಯಾಗಿ ಪಾವತಿಸದಿದ್ದರೆ ಬ್ಯಾಂಕ್ ಮನೆಯನ್ನು ಹರಾಜು ಹಾಕಿಬಿಡುತ್ತದೆಯೇ ಎಂಬ ಭಯ ಪ್ರತಿಯೊಬ್ಬ ಸಾಲಗಾರನನ್ನೂ ಕಾಡುವುದು ಸಹಜ. ಆದರೆ, ಕೇವಲ ಇಎಂಐ ಪಾವತಿಸಿಲ್ಲ ಎಂದ ತಕ್ಷಣ ಬ್ಯಾಂಕುಗಳು ತಕ್ಷಣವೇ ಮನೆಯನ್ನು ಹರಾಜು ಹಾಕುವ ಕಾನೂನು ಪ್ರಕ್ರಿಯೆಯನ್ನು ಆರಂಭಿಸುವುದಿಲ್ಲ. ಪರಿಸ್ಥಿತಿ ಕೈಮೀರಿ ಹೋಗುವ ಮುನ್ನ ಅದನ್ನು ಬಗೆಹರಿಸಿಕೊಳ್ಳಲು ಬ್ಯಾಂಕ್ ಸಾಲಗಾರನಿಗೆ ಮುನ್ನೆಚ್ಚರಿಕೆ ನೀಡಿ, ತಪ್ಪು ತಿದ್ದಿಕೊಳ್ಳಲು ಸಾಕಷ್ಟು ಅವಕಾಶವನ್ನು ಕಲ್ಪಿಸಿಕೊಡುತ್ತದೆ. ಯಾವಾಗ ಸಾಲದ ಖಾತೆ ‘NPA’ ಆಗುತ್ತದೆ? ಭಾರತೀಯ ರಿಸರ್ವ್ ಬ್ಯಾಂಕ್ (RBI)…
ಸ್ವಂತ ಮನೆ ಇಲ್ಲದ ಬಡ ಜನರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅವಧಿಯನ್ನು 2029 ರವರೆಗೆ ವಿಸ್ತರಿಸುವುದಾಗಿ ಘೋಷಿಸಿದೆ. ಈ ಯೋಜನೆಯಡಿ ದೇಶದಲ್ಲಿ ಸ್ವಂತ ಮನೆ ಇಲ್ಲದ ಬಡವರಿಗೆ ಮನೆ ನಿರ್ಮಿಸಿಕೊಳ್ಳಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಲಿದೆ. ಇದರೊಂದಿಗೆ ರಾಜ್ಯ ಸರ್ಕಾರಗಳು ಕೂಡ ಬಡವರ ಮನೆ ನಿರ್ಮಾಣಕ್ಕೆ ತನ್ನ ಪಾಲಿನ ಸಹಾಯಧನವನ್ನು ನೀಡಲಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಈ ಸಹಾಯವನ್ನು ಬಳಸಿಕೊಂಡು ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರು ತಮ್ಮ ಸ್ವಂತ ಮನೆಯ ಕನಸನ್ನು ನನಸು ಮಾಡಿಕೊಳ್ಳಬಹುದು. ಹಾಗಾದರೆ ಈ ಯೋಜನೆಗೆ ಇರಬೇಕಾದ ಅರ್ಹತೆಗಳೇನು? ಇದರ ಲಾಭ ಪಡೆಯುವುದು ಹೇಗೆ? ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ: ಯೋಜನೆಗೆ ಇರಬೇಕಾದ ಅರ್ಹತೆಗಳು: ಅರ್ಜಿದಾರರು ಸ್ವಂತ ಮನೆ ಹೊಂದಿರಬಾರದು. ಕಡ್ಡಾಯವಾಗಿ ಪಡಿತರ ಚೀಟಿ (Ration Card) ಹೊಂದಿರಬೇಕು. ಅರ್ಜಿದಾರರು ಕಡಿಮೆ ಆದಾಯದ ವರ್ಗಕ್ಕೆ (LIG/EWS) ಸೇರಿದವರಾಗಿರಬೇಕು. ಅಗತ್ಯವಿರುವ ದಾಖಲೆಗಳು: ಆಧಾರ್ ಕಾರ್ಡ್,…
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಆರ್ಥಿಕ ಇಲಾಖೆಯು ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. ಇನ್ಮುಂದೆ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯ (KAMS) ಮೊಬೈಲ್ ಆಪ್ ಮೂಲಕ ಬೆಳಗ್ಗೆ 10:00 ಗಂಟೆಯೊಳಗೆ ತಮ್ಮ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಬೇಕೆಂದು ಸರ್ಕಾರ ಆದೇಶಿಸಿದೆ. ಇದರೊಂದಿಗೆ, ಪಾರದರ್ಶಕ ಆಡಳಿತ ಮತ್ತು ನಿಖರವಾದ ಸ್ಥಳ ಪರಿಶೀಲನೆಗಾಗಿ ಪ್ರತಿಯೊಂದು ಸರ್ಕಾರಿ ಕಚೇರಿಯ ಭೌಗೋಳಿಕ ನಿರ್ದೇಶಾಂಕಗಳನ್ನು (Geo Coordinates) ಸಂಗ್ರಹಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಏನಿದು ಹೊಸ ನಿಯಮ? ಪ್ರಮುಖ ಅಂಶಗಳು ಇಲ್ಲಿವೆ: ಬೆಳಗ್ಗೆ 10 ಗಂಟೆಗೆ ಹಾಜರಾತಿ ಕಡ್ಡಾಯ: ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹಾಜರಾತಿಯನ್ನು HRMS ನ ಕರ್ತವ್ಯ (KAMS) ಆಪ್ ಮೂಲಕವೇ ದಾಖಲಿಸಬೇಕು. ಕಚೇರಿಗಳ ಜಿಯೋ ಟ್ಯಾಗಿಂಗ್: ಪ್ರತಿಯೊಂದು ಸರ್ಕಾರಿ ಕಚೇರಿಯ ನಿಖರವಾದ ರೇಖಾಂಶ ಮತ್ತು ಅಕ್ಷಾಂಶಗಳನ್ನು (Geo-Coordinates) HRMS-ESS ಆಪ್ ಮೂಲಕ ಸೆರೆಹಿಡಿಯಲು ಸೂಚಿಸಲಾಗಿದೆ. ಅಧಿಕಾರಿಗಳ ನೇಮಕ: ಜಿಯೋ ನಿರ್ದೇಶಾಂಕಗಳನ್ನು ದಾಖಲಿಸಲು ಪ್ರತಿಯೊಂದು ಕಚೇರಿಯಿಂದ ಒಬ್ಬ ಗ್ರೂಪ್…
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸಿಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಜೂನ್ 13ರಿಂದ ಜೂನ್ 15ರವರೆಗೆ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮದಿಂದ ಭಾರೀ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ನಿರಂತರ ಮಳೆಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದೇ ಅವಧಿಯಲ್ಲಿ ರಾಜ್ಯದ ಇತರ ಭಾಗಗಳಲ್ಲಿ ಲಘು ಪ್ರಮಾಣದ ಮಳೆಯಾಗುವ ಸಾಧ್ಯತೆಯೂ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಜೂನ್ 13ರಿಂದ 15ರವರೆಗೆ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆಯ ಸಾಧ್ಯತೆ ಇರುವ ಪ್ರದೇಶಗಳ ನಿವಾಸಿಗಳು ಹವಾಮಾನ ಇಲಾಖೆಯ…
ಬೆಂಗಳೂರು: ಹಿಂದೂ ಧರ್ಮ ಹಾಗೂ ಶ್ರೀರಾಮನ ಕುರಿತು ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಗತಿಪರ ಚಿಂತಕ, ಲೇಖಕ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೆಚ್.ಎಂ. ಸುರೇಶ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎನ್ಸಿಆರ್ (Non-Cognizable Report) ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಕೆ.ಎಸ್. ಭಗವಾನ್, ಹಿಂದೂ ದೇವತೆಗಳು ಮತ್ತು ಪುರಾಣಗಳ ಬಗ್ಗೆ ತೀವ್ರ ಆಕ್ಷೇಪಾರ್ಹ ಮಾತುಗಳನ್ನಾಡಿದ್ದರು. ಶ್ರೀರಾಮಚಂದ್ರನು ರಾಜ ದಶರಥನ ಮಗನೇ ಅಲ್ಲ. ದಶರಥನಿಗೆ ಶ್ರೀರಾಮ ಹುಟ್ಟಿದ್ದಲ್ಲ ಎಂದು ಹೇಳಿಕೆ ನೀಡಿದ್ದಾರೆ. ಪುತ್ರಕಾಮೇಷ್ಟಿ ಯಾಗದ ಸಂದರ್ಭದಲ್ಲಿ ರಾಣಿಯರ ಜೊತೆ ಮಲಗಬೇಕಿತ್ತು. ಹಾಗಾಗಿ ಶ್ರೀರಾಮನು ಪುರೋಹಿತರಿಗೆ ಹುಟ್ಟಿದವನು ಎಂಬ ಅರ್ಥದಲ್ಲಿ ವಿವಾದಾತ್ಮಕವಾಗಿ ಮಾತನಾಡಿದ್ದಾರೆ.ಹಿಂದೂ ಧರ್ಮದ ದೇವರುಗಳಿಗೆ ಯಾರೂ ಪೂಜೆ ಮಾಡಬಾರದು ಎಂದು ಅವರು ಕರೆ ನೀಡಿದ್ದಾರೆ. ಕೆ.ಎಸ್. ಭಗವಾನ್ ಅವರು ಉದ್ದೇಶಪೂರ್ವಕವಾಗಿಯೇ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವಂತಹ ಮತ್ತು ಸನಾತನ ಧರ್ಮವನ್ನು…
ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಜವರೇಗೌಡನ ಕೊಪ್ಪಲಿನಲ್ಲಿ ತಾಯಿಯೊಬ್ಬಳು ತನ್ನಿಬ್ಬರು ಕಂದಮ್ಮಗಳನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮೂರು ವರ್ಷದ ಧ್ರುತಿ ಹಾಗೂ ಒಂದೂವರೆ ವರ್ಷದ ದಿಶಾ ತಾಯಿಯ ಕ್ರೌರ್ಯಕ್ಕೆ ಬಲಿಯಾದ ದುರ್ದೈವಿ ಮಕ್ಕಳಾಗಿದ್ದಾರೆ. ಮಕ್ಕಳನ್ನು ಕೊಂದ ಬಳಿಕ ತಾಯಿ ಪ್ರಿಯಾಂಕಾ (26) ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆರು ವರ್ಷಗಳ ಹಿಂದೆ ಪ್ರಿಯಾಂಕಾ ಹಾಗೂ ಅನಿಲ್ ಕುಮಾರ್ ಎಂಬುವವರ ವಿವಾಹವಾಗಿತ್ತು. ಪ್ರಿಯಾಂಕಾ ತನ್ನಿಬ್ಬರು ಮಕ್ಕಳಿಗೆ ನೇಣು ಬಿಗಿದು ಕೊಲೆ ಮಾಡಿದ್ದಾಳೆ. ಆ ಬಳಿಕ ತಾನೂ ಸಹ ನೇಣಿಗೆ ಶರಣಾಗಲು ಯತ್ನಿಸಿದ್ದಾಳೆ. ಈ ವಿಷಯ ತಡವಾಗಿ ಅಕ್ಕಪಕ್ಕದ ನಿವಾಸಿಗಳ ಗಮನಕ್ಕೆ ಬಂದಿದ್ದು, ತಕ್ಷಣವೇ ಅವರು ಧಾವಿಸಿ ಪ್ರಿಯಾಂಕಾಳನ್ನು ರಕ್ಷಿಸಿದ್ದಾರೆ. ಸದ್ಯ ಪ್ರಿಯಾಂಕಾಳ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಗೆ ನಿಖರವಾದ ಕಾರಣವೇನೆಂದು ಇನ್ನು ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸಾಲಿಗ್ರಾಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.














