Author: kannadanewsnow57

ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಮತ್ತು ನೌಕರರ ಕರ್ತವ್ಯ ಹಾಗೂ ಜವಾಬ್ದಾರಿಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ. ಪೌರಾಯುಕ್ತರ/ಮುಖ್ಯಾಧಿಕಾರಿಗಳ ಕರ್ತವ್ಯಗಳು ಮತ್ತು ಅಧಿಕಾರ ಹಾಗೂ ಜವಾಬ್ದಾರಿಗಳು: ಕರ್ನಾಟಕ ಪೌರಸಭೆಗಳ ಅಧಿಕಾರ ಪ್ರತ್ಯಾಯೋಜನೆ. ಮತ್ತು ಅಧಿಕಾರಿಗಳ ಮತ್ತು ನೌಕರರುಗಳ ಕರ್ತವ್ಯಗಳ ನಿಯಮಾವಳಿ 1973ರ ನಿಯಮ 7. 8. 9 ಮತ್ತು 10 ರಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಕರ್ನಾಟಕ ಪೌರಸಭೆಗಳ ಅಧಿನಿಯಮ 19640 50 330, 332, 338, 339, 340, 341, 342, 344, 345, 346, 347, 2 348 ಅವುಗಳನ್ನು ಸಂಕ್ಷಿಪ್ತವಾಗಿ ವಿವರಿಸಲಾಗಿದೆ. ತರುವಾಯ ಸರ್ಕಾರವು ಸುತ್ತೊಲೆ ಸಂಖ್ಯೆ HUD.15.TMD 95 ದಿನಾಂಕ 18-2-1995ರ ಮೂಲಕ ಈ ಕುರಿತು ಸ್ಪಷ್ಟವಾಗಿ ತಿಳಿಸಿದೆ. 1. ಕಛೇರಿಯ ಸಮಸ್ತ ಪ್ರಮುಖ ದಾಖಲೆ ಪತ್ರಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಳ್ಳುವುದು 2. ಕಛೇರಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಯವರ ಮೇಲ್ವಿಚಾರಣೆ ಮಾಡುವುದು. 3. ದೈನಂದಿನ ಲೆಕ್ಕ ಪತ್ರಗಳ ದಾಖಲೆಗಳ ನಿರ್ವಹಣೆ ಮೇಲ್ವಿಚಾರಣೆ ಮಾಡುವುದು. 4.…

Read More

ಮೈಸೂರು : ಮೈಸೂರಿನ ಅರಮನೆಯ ಎದುರು ಜಯ ಮಾರ್ಯಾಂಡ ದ್ವಾರದ ಬಳಿ ಬಲೂನ್ ಗೆ ಹೀಲಿಯಂ ತುಂಬುವ ಸಿಲಿಂಡರ್ ಸ್ಫೋಟ ದುರಂತದಲ್ಲಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ. ಸ್ಪೋಟದಿಂದ ಗಾಯಗೊಂಡಿದ್ದ ನಂಜನಗೂಡಿನ ಚಾಮಲಾಪುರ ಬೀದಿ ನಿವಾಸಿ ಮಂಜುಳಾ(28), ಬೆಂಗಳೂರಿನ ಬ್ಯಾಡರಹಳ್ಳಿ ಲಕ್ಷ್ಮಿ(41) ಶುಕ್ರವಾರ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಉತ್ತರ ಪ್ರದೇಶದ ಜಿಲ್ಲೆಯ ತೋಫಿಯಾ ಗ್ರಾಮದ ಸಲೀಂ(40) ಅರಮನೆ ಸಮೀಪ ಸೈಕಲ್ ನಲ್ಲಿ ಹೀಲಿಯಂ ಬಲೂನ್ ಮಾರುತಿದ್ದಾಗ ಸ್ಪೋಟ ಸಂಭವಿಸಿ ಮೃತಪಟ್ಟಿದ್ದರು. ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ ಸತತವಾಗಿ ಬಲೂನ್ಗಳಿಗೆ ಹೀಲಿಯಂ…

Read More

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳನ್ನು ಪ್ರಕಟಿಸಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 14677 ಹುದ್ದೆಗಳು ಖಾಲಿ ಇವೆ. ಕರ್ನಾಟಕದ ಮೈಸೂರು ವಿಶ್ವವಿದ್ಯಾಲಯದಲ್ಲಿ 747 ಹುದ್ದೆಗಳು ಖಾಲಿ ಇವೆ, ಹಾಸನ ವಿಶ್ವವಿದ್ಯಾಲಯದಲ್ಲಿ 272, ಮಂಡ್ಯ ವಿಶ್ವವಿದ್ಯಾಲಯದಲ್ಲಿ 245 ಹುದ್ದೆಗಳು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ 598 ಹುದ್ದೆಗಳು ಸೇರಿದಂತೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಖಾಲಿ ಇವೆ. ಇಲ್ಲಿದೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ

Read More

ಬೆಂಗಳೂರು : ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಗಾನವಿ ಆತ್ಮಹತ್ಯೆ ಬೆನ್ನಲ್ಲೇ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹಾರಾಷ್ಟ್ರದ ನಾಗಪುರದ ತನ್ನ ಮನೆಯಲ್ಲಿ ಪತಿ ಸೂರಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಸೂರಜ್ ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದ ಬಿ ಚೆನ್ನಸಂದ್ರದಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಗಾನವಿ (26) ಆತ್ಮಹತ್ಯೆ ಮಾಡಿಕೊಂಡಿದ್ದರು. ಹನಿಮೂನ್ ಗೆ ಶ್ರೀಲಂಕಾಗೆ ಗಾನವಿ ಹಾಗು ಸೂರಜ್ ತೆರಳಿದ್ದಾರೆ. ಆದರೆ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು. ಈಗ ಚಿಕಿತ್ಸೆ ಫಲಕಾರಿ ಆಗಲೇ ಗಾನವಿ ಸಾವನ್ನಪ್ಪಿದ್ದರು. ಇದೀಗ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

Read More

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ ಡಿಸೆಂಬರ್‌ 23ರಿಂದ 2025ರ ಡಿಸೆಂಬರ್‌ 31ರವರೆಗೆ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಕುಸುಮ್‌ ಬಿ ಯೋಜನೆ ಕುರಿತಂತೆ ರೈತರು ತಮ್ಮ ಸಮಸ್ಯೆಗಳನ್ನು ದೂರವಾಣಿ ಕರೆಯ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ರಾಜ್ಯದ ಎಲ್ಲ ರೈತರು ಇದರ ನೆರವು ಪಡೆದುಕೊಳ್ಳಬಹುದಾಗಿದ್ದು, ಇದಕ್ಕಾಗಿ ಕ್ರೆಡಲ್‌ ಸಿಬ್ಬಂದಿ, ಪ್ರತಿದಿನ ಬೆಳಿಗ್ಗೆ 6.00 ರಿಂದ ರಾತ್ರಿ 9.00ರವರೆಗೆ ರಜೆ ಇಲ್ಲದೆ ಎರಡು ಪಾಳಿಗಳಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಸಹಾಯವಾಣಿಯಲ್ಲಿ ಕುಸುಮ್ ಯೋಜನೆಯ ಕಾಂಪೊನೆಂಟ್ ಬಿ ಅಡಿ ಸೋಲಾರ್‌ ಪಂಪ್‌ಸೆಟ್‌ ಹಾಕಿಸಿಕೊಳ್ಳುವ ಕುರಿತು ಮಾಹಿತಿ, ಆನ್‌ಲೈನ್ ಪಾವತಿ ಮತ್ತು ಇತರ ಸಂಬಂಧಿತ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ರೈತರು ಮಧ್ಯವರ್ತಿಗಳನ್ನು ಸಂಪರ್ಕಿಸದೆ ಸಹಾಯವಾಣಿಯ ಅಧಿಕೃತ ಫೋನ್ ಸಂಖ್ಯೆ 080-22202100 ಮತ್ತು 8095132100ಅನ್ನು ನೇರವಾಗಿ ಸಂಪರ್ಕಿಸಬಹುದು. ಸೋಲಾರ್‌ ವಿದ್ಯುತ್‌ ಚಾಲಿತ ನೀರಾವರಿ…

Read More

ಬೆಂಗಳೂರು : 2026 ರ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪ್ರತಿ ವರ್ಷ ನಡೆಸಲಾಗುತ್ತಿದ್ದಂತೆಯೇ ಪ್ರಾಯೋಗಿಕ ಪರೀಕ್ಷೆಗಳನ್ನು 2026ರ ಜನವರಿ ಮತ್ತು ಫೆಬ್ರವರಿ ಮಾಹೆಯಲ್ಲಿ ದಿನಾಂಕ: 27-01-2026 ರಿಂದ 14-02-2026 ರವರೆಗೆ ನಡೆಸುವ ಸಂಪೂರ್ಣ ಜವಾಬ್ದಾರಿಯು ಆಯಾ ಜಿಲ್ಲಾ ಉಪನಿರ್ದೇಶಕರದ್ದಾಗಿರುತ್ತದೆ. ಪ್ರಾಯೋಗಿಕ ಪರೀಕ್ಷೆಗಳಿರುವ ವಿಷಯಗಳಲ್ಲಿ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಲ್ಲಿ ಗರಿಷ್ಠ ಅಂಕಗಳನ್ನು ಪಡೆದು ತಾತ್ವಿಕ ಪರೀಕ್ಷೆಯಲ್ಲಿ ಕನಿಷ್ಠ ಅಂಕಗಳನ್ನು ಪಡೆಯುತ್ತಿರುವುದು ಮಂಡಲಿಯ ಗಮನಕ್ಕೆ ಬಂದಿರುತ್ತದೆ. ಇದು ಪ್ರಾಯೋಗಿಕ ಪರೀಕ್ಷೆಗಳ ಮೌಲ್ಯಮಾಪನದ ಪಾವಿತ್ರ್ಯತೆಯ ಬಗ್ಗೆ ಸಂದೇಹ ಮೂಡಿಸುತ್ತದೆ. ಇದನ್ನು ಮಂಡಲಿಯು ಗಂಭೀರವಾಗಿ ಪರಿಗಣಿಸಿದ್ದು 2025-26ರ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಲ್ಲಿ ಈ ಕೆಳಗಿನ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲಾ ಉಪನಿರ್ದೇಶಕರುಗಳಿಗೆ ಸೂಚಿಸಿದೆ. ಜಿಲ್ಲಾ ಉಪನಿರ್ದೇಶಕರುಗಳ ಕರ್ತವ್ಯಗಳು ಮತ್ತು ಜವಾಬ್ದಾರಿಗಳು:- 1. 2026ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ…

Read More

ಬೆಂಗಳೂರು : ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ ಸಿ.ಬಿ.ಎಸ್.ಇ ಮಂಡಳಿಯಲ್ಲಿ ಕಂಪ್ಯೂಟರ್ಗಳನ್ನು ಬಳಸಿ 12ನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶವಿದ್ದು, ಅದೇ ರೀತಿ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಿಂದ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದರಿ ವಿದ್ಯಾರ್ಥಿಗಳಿರುವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕರು ಪರೀಕ್ಷಾ ಪೂರ್ವ ಹಾಗೂ ಪರೀಕ್ಷಾ ದಿನಗಳಂದು ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ. 1. ಪರೀಕ್ಷಾ ಕೇಂದ್ರದಲ್ಲಿ ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆಯನ್ನು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾಡುವುದು. 2. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ ಕಾಲೇಜುಗಳಲ್ಲಿ (Visually Impaired) ವಿದ್ಯಾರ್ಥಿಗಳಿರುವ ಕಾರ್ಯನಿರ್ವಹಿಸುವ ಮೇಲ್ವಿಚಾರಕರಾಗಿ ನೇಮಿಸಿಕೊಳ್ಳುವುದು. ವಿಶೇಷ ಉಪನ್ಯಾಸಕರನ್ನು…

Read More

ನವದೆಹಲಿ : ಈ ವರ್ಷ ಮುಗಿದ ನಂತರ ನೀವು ಮನೆ ಕಟ್ಟಲು ಅಥವಾ ವಸತಿ ಯೋಜನೆಯಲ್ಲಿ ಕೆಲಸ ಪ್ರಾರಂಭಿಸಲು ಯೋಜಿಸುತ್ತಿದ್ದೀರಾ? ಹೌದು ಎಂದಾದರೆ, ಅದು ನಿಮಗೆ ಸ್ವಲ್ಪ ದುಬಾರಿಯಾಗಬಹುದು. ಏಕೆಂದರೆ ಜನವರಿ 2026ರಿಂದ ದೇಶದಲ್ಲಿ ಸಿಮೆಂಟ್ ಬೆಲೆಗಳು ಏರಿಕೆಯಾಗುವ ನಿರೀಕ್ಷೆಯಿದೆ. ಆದ್ದರಿಂದ, ಹೊಸ ಮನೆ ಕಟ್ಟಲು ಅಥವಾ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲು ಯೋಜಿಸುತ್ತಿರುವವರು ಮುಂಬರುವ ಸಮಯದಲ್ಲಿ ಹೆಚ್ಚಿನ ವೆಚ್ಚವನ್ನ ಎದುರಿಸಬೇಕಾಗುತ್ತದೆ. ಸಿಸ್ಟಮ್ಯಾಟಿಕ್ಸ್ ರಿಸರ್ಚ್‌ನ ವರದಿಯ ಪ್ರಕಾರ, ಜನವರಿ 2026ರಿಂದ ಸಿಮೆಂಟ್ ಬೆಲೆಗಳು ಹೆಚ್ಚಾಗಬಹುದು. ಸಿಮೆಂಟ್ ಬೆಲೆಗಳಲ್ಲಿ ಇತ್ತೀಚಿನ ಕುಸಿತದ ನಂತರ, ಬೇಡಿಕೆ ಸುಧಾರಿಸುವ ಸಾಧ್ಯತೆಯಿದೆ, ಇದರಿಂದಾಗಿ ಕಂಪನಿಗಳು ಬೆಲೆಗಳನ್ನ ಹೆಚ್ಚಿಸಬಹುದು ಎಂದು ವರದಿ ಹೇಳುತ್ತದೆ. ಕುಸಿತದ ನಂತರ ಬೆಲೆಗಳು ಏರಿಕೆಯಾಗುವ ನಿರೀಕ್ಷೆ.! ಸಿಸ್ಟಮ್ಯಾಟಿಕ್ಸ್ ರಿಸರ್ಚ್ ವರದಿಯ ಪ್ರಕಾರ, ಕಳೆದ ತಿಂಗಳು ಅಖಿಲ ಭಾರತ ಸರಾಸರಿ ಸಿಮೆಂಟ್ ಬೆಲೆಗಳು ಪ್ರತಿ ಚೀಲಕ್ಕೆ ₹6 ರಷ್ಟು ಕುಸಿದಿವೆ. ಈ ಕುಸಿತವು ಮುಖ್ಯವಾಗಿ ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ಬೆಲೆ ಇಳಿಕೆಯಿಂದಾಗಿ ಸಂಭವಿಸಿದೆ. ಆದಾಗ್ಯೂ, ಸಿಸ್ಟಮ್ಯಾಟಿಕ್ಸ್…

Read More

ಬೆಂಬಲ ಯೋಜನೆಯಡಿ 2025-26 ನೇ ಸಾಲಿನ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಜಿಲ್ಲಾ ಟಾಸ್ಕ್  ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ.8000 ರಂತೆ ಖರೀದಿಸಲಾಗುತ್ತಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತವು ಖರೀದಿ ಏಜೆನ್ಸಿಯಾಗಿದೆ. ಖರೀದಿ ಕೇಂದ್ರಗಳ ವಿವರ: ಬಳ್ಳಾರಿ ನಗರದ ಎಸ್.ಪಿ ವೃತ್ತದ ಬಳಿಯ ಮಾರುತಿ ನಗರದ 2ನೇ ಕ್ರಾಸ್ ನ ರೈತರ  ಸೇವಾ ಸಹಕಾರ ಸಂಘ ನಿಯಮಿತ (ದೂ.08392266489, ಮೊ.9035829283). ಬಳ್ಳಾರಿ ನಗರದ ಹರಿಶ್ಚಂದ್ರ ಘಾಟ್ ರಸ್ತೆಯ ಮಿಲ್ಲರ್ ಪೇಟೆಯ ನಂ:124 ರ ಟಿಎಪಿಸಿಎಂಎಸ್ (ಮೊ.9535151619, 6361665722). ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾರಿ (ಮೊ.9449664453). ಬೇಕಾದ ದಾಖಲೆ: 2025-26ನೇ ಸಾಲಿನ ಪಹಣಿ ಪತ್ರ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್‌ಐಡಿ ಪಡೆಯುವುದು ಕಡ್ಡಾಯ,…

Read More

ಬೆಂಗಳೂರು : ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ – ಎಫ್ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಬಸ್ಗಳಲ್ಲಿ ಯಾವುದೇ ರೀತಿಯ ಸ್ಫೋಟಕಗಳನ್ನು ಸಾಗಿಸಬಾರದು ಎಂದು ಕಟ್ಟಪ್ಪಣೆ ಮಾಡಿದ್ದೇವೆ. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯವಾದ ಲಗೇಜ್ಗಳನ್ನು ಸಾಗಿಸದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/2004525422034427913?s=20

Read More