Author: kannadanewsnow57

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದ್ದು. ಕುಖ್ಯಾತ ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಆರೋಪಿ ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಯತ್ನಿಸಿದ ಪರಿಣಾಮ, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿರುವ ಘಟನೆ ಹೆಬ್ಬಗೋಡಿ ವ್ಯಾಪ್ತಿಯಲ್ಲಿ ನಡೆದಿದೆ. ಗುಂಡೇಟಿಗೆ ಒಳಗಾದ ಆರೋಪಿ ಜೀವ (19) ಎಂದು ಗುರುತಿಸಲಾಗಿದ್ದು, ಆತನ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡ ಆರೋಪಿಯನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ತಿರುಪಾಳ್ಯ ನಿವಾಸಿಯಾಗಿರುವ ಜೀವ, ಕೊಲೆ, ಸುಲಿಗೆ ಹಾಗೂ ದರೋಡೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಕಳೆದ ವಾರ ಹೆಬ್ಬಗೋಡಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಪ್ರದೇಶಗಳಲ್ಲಿ ನಡೆದ ದರೋಡೆ ಪ್ರಕರಣಗಳಲ್ಲಿಯೂ ಆತನ ಪಾತ್ರವಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆತನಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು.ಖಚಿತ ಮಾಹಿತಿ ಆಧರಿಸಿ ಸಿಂಗೇನಾ ಅಗ್ರಹಾರದ ತೋಪು ಪ್ರದೇಶದಲ್ಲಿ ಪೊಲೀಸರು ದಾಳಿ ನಡೆಸಿದ ವೇಳೆ, ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ…

Read More

ರೈಲು ಪ್ರಯಾಣದ ಸಮಯದಲ್ಲಿ ಆನ್ಲೈನ್ ಮೂಲಕ ಆಹಾರ ಆರ್ಡರ್ ಮಾಡುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಗಣನೀಯವಾಗಿ ಹೆಚ್ಚಾಗಿದೆ. ಆದರೆ, ಇದೇ ಕ್ರೇಜ್ ಅನ್ನು ಬಂಡವಾಳ ಮಾಡಿಕೊಂಡಿರುವ ಕೆಲವು ಸಂಸ್ಥೆಗಳು ರೈಲ್ವೆ ಇಲಾಖೆಯ ಯಾವುದೇ ಅನುಮತಿ ಇಲ್ಲದೆ ಅನಧಿಕೃತವಾಗಿ ಆಹಾರ ವಿತರಣೆ (Food Delivery) ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ಐಆರ್ಸಿಟಿಸಿ ಈಗ ಇಂತಹ 14 ಪ್ರಮುಖ ವೆಬ್ಸೈಟ್ ಹಾಗೂ ಆ್ಯಪ್ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ಧರಿಸಿದೆ. ಬ್ಲಾಕ್ ಲಿಸ್ಟ್ ಸೇರಿದ ಆ 14 ಆ್ಯಪ್ಗಳು ಯಾವುವು? ರೈಲ್ವೆ ನಿಯಮಗಳನ್ನು ಉಲ್ಲಂಘಿಸಿ, ಅನಧಿಕೃತವಾಗಿ ಸೇವೆ ನೀಡುತ್ತಿದ್ದ ಕಾರಣಕ್ಕಾಗಿ ಐಆರ್ಸಿಟಿಸಿ ಕೆಳಗಿನ ಸಂಸ್ಥೆಗಳಿಗೆ ಈಗಾಗಲೇ ಲೀಗಲ್ ನೋಟಿಸ್ ಜಾರಿ ಮಾಡಿದೆ: ರೈಲ್ ರೆಸ್ಟ್ರೋ (RailRestro) ಇ-ಕ್ಯಾಟರಿಂಗ್ ಆ್ಯಪ್ (e-Catering App) ಖಾನಾ ಆನ್ಲೈನ್ (Khana Online) ಟ್ರೈನ್ವೇ (Trainway) ರೈಲ್ ಮೀಲ್ (Rail Meal) ಟ್ರೈನ್ಮೆನು (Train Menu) ಫುಡ್ ಆನ್ ಟ್ರ್ಯಾಕ್ (Food on Track)…

Read More

ನಗದು ವಹಿವಾಟುಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ (Income Tax Department) ನಿಯಮಗಳನ್ನು ಅತ್ಯಂತ ಕಠಿಣಗೊಳಿಸಿದೆ. ದೇಶದಲ್ಲಿ ಪಾರದರ್ಶಕವಾಗಿ ಹಣಕಾಸು ವಹಿವಾಟುಗಳು ನಡೆಯಬೇಕೆಂಬ ಉದ್ದೇಶದಿಂದ ಐಟಿ ಇಲಾಖೆ ಹಲವು ಕಟ್ಟುನಿಟ್ಟಿನ ನಿಯಮ ಹಾಗೂ ಮಿತಿಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಪ್ರತಿಯೊಬ್ಬ ನಾಗರಿಕರೂ ಪಾಲಿಸುವುದು ಕಡ್ಡಾಯವಾಗಿದೆ. ಸಾಮಾನ್ಯವಾಗಿ ತುರ್ತು ಸಂದರ್ಭಗಳಲ್ಲಿ ನಾವು ಸ್ನೇಹಿತರು ಅಥವಾ ಸಂಬಂಧಿಕರಿಂದ ಕೈಗಡವಾಗಿ (ಸಾಲ) ಹಣವನ್ನು ಪಡೆದುಕೊಳ್ಳುತ್ತೇವೆ. ಯಾವುದೇ ದಾಖಲೆಗಳಿಲ್ಲದೆ ನಗದು ರೂಪದಲ್ಲಿ ಇಂತಹ ವಹಿವಾಟುಗಳು ನಡೆಯುತ್ತವೆ. ಆದರೆ, ಇಂತಹ ದೊಡ್ಡ ಮೊತ್ತದ ನಗದು ವಹಿವಾಟುಗಳು ಕೂಡ ಐಟಿ ನಿಯಮಗಳ ಉಲ್ಲಂಘನೆಯ ವ್ಯಾಪ್ತಿಗೆ ಬರುತ್ತವೆ ಎಂಬುದು ನಿಮಗೆ ಗೊತ್ತೇ? ಕೈಗಡ ವಹಿವಾಟಿಗೆ ಇದೆ ಕಠಿಣ ನಿಯಮ! ಸ್ನೇಹಿತರು ಅಥವಾ ಪರಿಚಯಸ್ಥರಿಂದ ನಗದು ರೂಪದಲ್ಲಿ ಹಣವನ್ನು ಪಡೆಯುವ ವಿಷಯದಲ್ಲಿ ಆದಾಯ ತೆರಿಗೆ ಇಲಾಖೆ ಸ್ಪಷ್ಟ ಮಿತಿಯನ್ನು ವಿಧಿಸಿದೆ. ಐಟಿ ಕಾಯ್ದೆಯ ಸೆಕ್ಷನ್ 269SS ಪ್ರಕಾರ, ಯಾವುದೇ ವ್ಯಕ್ತಿಯಿಂದ ನಗದು ರೂಪದಲ್ಲಿ ರೂ. 20,000 ಕ್ಕಿಂತ ಹೆಚ್ಚು ಸಾಲ ಅಥವಾ ಠೇವಣಿಯನ್ನು…

Read More

ಬ್ರಹ್ಮಾವರ : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ನೇರವಾಗಿ ತೆಂಗಿನಕಾಯಿ ಬಿದ್ದ ಪರಿಣಾಮ, ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಅತ್ಯಂತ ದುರದೃಷ್ಟಕರ ಘಟನೆ ಹೆರಂಜೆಯಲ್ಲಿ ಮಂಗಳವಾರ ನಡೆದಿದೆ. ಬ್ರಹ್ಮಾವರದಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿರುವ ಪ್ರಶಾಂತ್ ಹಾಗೂ ಗೃಹಿಣಿ ಸುಚಿತ್ರಾ ದಂಪತಿಯ ಪುಟ್ಟ ಕಂದಮ್ಮನೇ ವಿಧಿಯಾಟಕ್ಕೆ ಬಲಿಯಾದ ದುರ್ದೈವಿ. ಘಟನೆಯ ಹಿನ್ನೆಲೆ: ಮಂಗಳವಾರ ತಾಯಿ ಸುಚಿತ್ರಾ ಅವರು ತಮ್ಮ 6 ವರ್ಷದ ಹಿರಿಯ ಮಗಳನ್ನು ಶಾಲೆಗೆ ಬಿಡಲು ಹೊರಟಿದ್ದರು. ಎಂದಿನಂತೆ ಚಿಕ್ಕ ಮಗುವನ್ನು ಮನೆಯಲ್ಲಿ ಬಿಟ್ಟು ಹೋಗುವ ಬದಲು, ಅಂದು ಮಳೆ ನಿಂತಿದ್ದ ಕಾರಣ ಒಂದೂವರೆ ವರ್ಷದ ಪುಟ್ಟ ಮಗುವನ್ನೂ ಕಂಕುಳಲ್ಲಿ ಎತ್ತಿಕೊಂಡು ಹೊರಟಿದ್ದರು. ಮನೆ ಬಿಟ್ಟು ಸ್ವಲ್ಪ ದೂರ ಸಾಗುತ್ತಿದ್ದಂತೆ, ದಾರಿ ಬದಿಯ ತೋಟದ ಮರದಿಂದ ಅಚಾನಕ್ಕಾಗಿ ತೆಂಗಿನಕಾಯಿಯೊಂದು ನೇರವಾಗಿ ಮಗುವಿನ ತಲೆಯ ಮೇಲೆ ಬಿದ್ದಿದೆ. ತೆಂಗಿನಕಾಯಿ ಬಿದ್ದ ತಕ್ಷಣ ಮಗುವಿನ ತಲೆಗೆ ಗಂಭೀರ ಪೆಟ್ಟಾಗಿದ್ದು, ಸ್ಥಳೀಯರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ಪಕ್ಕದ…

Read More

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಪ್ರಮುಖವಾದ ತೀರ್ಪೊಂದನ್ನು ನೀಡಿದೆ. ಚೆಕ್ ಬೌನ್ಸ್ ಆದಾಗ ವಿಧಿಸಲಾಗುವ ದಂಡವನ್ನು ಪಾವತಿಸದ ಆರೋಪಿಯನ್ನು ಯಾವುದೇ ಕಾರಣಕ್ಕೂ ಗರಿಷ್ಠ 2 ವರ್ಷಕ್ಕಿಂತ ಹೆಚ್ಚು ಅವಧಿಗೆ ಜೈಲಿನಲ್ಲಿ ಇಡುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಏನಿದು ಪ್ರಕರಣ? ಕೋರ್ಟ್ ಹೇಳಿದ್ದೇನು? ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆ (NI Act) ಸೆಕ್ಷನ್ 138ರ ಅಡಿಯಲ್ಲಿ ದಾಖಲಾಗಿದ್ದ ಮೂರು ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬನಿಗೆ ತಲಾ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತ ವ್ಯಕ್ತಿ ನ್ಯಾಯಾಲಯದ ಮೊರೆ ಹೋಗಿದ್ದನು. ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಎಂ. ನಾಗಪ್ರಸನ್ನ ಅವರು ಕಾನೂನಿನ ಮಿತಿಯನ್ನು ನೆನಪಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಾನೂನುಬದ್ಧವಾಗಿ ವಿಧಿಸಬಹುದಾದ ಗರಿಷ್ಠ ಶಿಕ್ಷೆಯ ಅವಧಿ ಎರಡು ವರ್ಷಗಳು ಮಾತ್ರ. ಹೀಗಾಗಿ, ದಂಡ ಕಟ್ಟದಿದ್ದರೂ ಸಹ ಆರೋಪಿಯನ್ನು ಎರಡು ವರ್ಷ ಮೀರಿ ಜೈಲಿನಲ್ಲಿ ಇರಿಸಲು ಅವಕಾಶವಿಲ್ಲ…

Read More

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣ ಇಡೀ ಕರ್ನಾಟಕವನ್ನೇ ನಡುಗಿಸಿತ್ತು. ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಕೇಸ್‌ನಲ್ಲಿ ಜೈಲು ಪಾಲಾಗಿ ಇಂದಿಗೆ (ಜೂನ್ 11) ಸರಿಯಾಗಿ ಎರಡು ವರ್ಷಗಳು ಕಳೆದಿವೆ. ಕಳೆದ 2024ರ ಜೂನ್ 11ರಂದು ಮೈಸೂರಿನ ಹೋಟೆಲ್ ಒಂದರಲ್ಲಿ ಇದ್ದಾಗಲೇ ನಟ ದರ್ಶನ್ ಹಾಗೂ ಅವರ ಆಪ್ತರನ್ನು ಪೊಲೀಸರು ಬಂಧಿಸಿದ್ದರು. ಮಧ್ಯದಲ್ಲಿ ಒಮ್ಮೆ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದ ದರ್ಶನ್, ಆ ಬಳಿಕ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ 2025ರ ಆಗಸ್ಟ್ 14ರಂದು ಮತ್ತೆ ಜೈಲು ಪಾಲಾಗಿದ್ದರು. ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್, ತಮ್ಮ ಬಹುನಿರೀಕ್ಷಿತ ‘ಡಿ ಡೆವಿಲ್’ ಸಿನಿಮಾದ ಶೂಟಿಂಗ್ ಮುಗಿಸಿದ್ದರೂ, ಚಿತ್ರದ ರಿಲೀಸ್ ಸಂಭ್ರಮವನ್ನು ಜೈಲಿನಲ್ಲೇ ಕಳೆಯುವಂತಾಯಿತು. ಅಷ್ಟೇ ಅಲ್ಲದೆ, ಈ ವರ್ಷ ತಮ್ಮ 49ನೇ ಹುಟ್ಟುಹಬ್ಬ ಹಾಗೂ 23ನೇ ಮದುವೆ ವಾರ್ಷಿಕೋತ್ಸವವನ್ನು ಕುಟುಂಬ ಮತ್ತು ಅಭಿಮಾನಿಗಳ ಜೊತೆ ಆಚರಿಸಲಾಗದೆ ಜೈಲಿನ ಕೋಣೆಯಲ್ಲೇ ಮಿಸ್ ಮಾಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಯೋಜನೆಯ ಸೌಲಭ್ಯಗಳು ನಿಜವಾದ ಅರ್ಹರಿಗೆ ಮಾತ್ರ ತಲುಪುವಂತೆ ಮಾಡಲು, ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲಿಸಿ ನವೀಕರಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತಿದೆ. ಇದರ ಭಾಗವಾಗಿ, ಮುಂದಿನ ವಾರದಿಂದಲೇ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆ ಜಾರಿಯಾಗುವ ಸಾಧ್ಯತೆ ಇದೆ. ಹೆಬ್ಬೆಟ್ಟು, ಕಣ್ಣು, ಮುಖ ಗುರುತಿಸುವಿಕೆ ಮೂಲಕ ದೃಢೀಕರಣ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ತಮ್ಮ ಗುರುತನ್ನು ದೃಢೀಕರಿಸಲು ಹೆಬ್ಬೆಟ್ಟಿನ ಗುರುತು (Fingerprint), ಕಣ್ಣಿನ ರೆಟಿನಾ ಸ್ಕ್ಯಾನ್ (Retina Scan) ಹಾಗೂ ಫೇಸ್ ರೆಕಗ್ನಿಷನ್ (Face Recognition) ವಿಧಾನಗಳನ್ನು ಬಳಸಬೇಕಾಗುತ್ತದೆ. ಬಯೋಮೆಟ್ರಿಕ್ ಮೂಲಕ ಪರಿಶೀಲನೆ ಸಾಧ್ಯವಾಗದ ಸಂದರ್ಭಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ದುರುಪಯೋಗ ತಡೆಯಲು ಸರ್ಕಾರದ ಕಟ್ಟುನಿಟ್ಟಿನ ಕ್ರಮ ಕುಟುಂಬದ ಅರ್ಹ ಮಹಿಳೆಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲವು ಅಕ್ರಮಗಳು ಪತ್ತೆಯಾಗಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಮೃತಪಟ್ಟ ವ್ಯಕ್ತಿಗಳ ಹೆಸರಿನ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು…

Read More

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ, ಮುಂಬರುವ ವಿಶೇಷ ಲೋಕ ಅದಾಲತ್ ಹಿನ್ನೆಲೆಯಲ್ಲಿ ಮೇ-2026 ಕ್ಕಿಂತ ಮೊದಲು ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆಯ ಇ-ಚಲನ್ ಹಾಗೂ ಸಾರಿಗೆ ಇಲಾಖೆಯಲ್ಲಿ 1991 ರಿಂದ 2022 ರ ಅವಧಿಯಲ್ಲಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ವಿಶೇಷ ರಿಯಾಯಿತಿ ನೀಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿದ್ದಲಿಂಗ ಪ್ರಭು ಅವರು ತಿಳಿಸಿದ್ದಾರೆ. ಈ ವಿಶೇಷ ರಿಯಾಯಿತಿಯು ಸೀಮಿತ ಅವಧಿಗೆ ಮಾತ್ರ ಅನ್ವಯಿಸಲಿದ್ದು, 21.06.2026 ರಿಂದ 10.07.2026 ರವರೆಗೆ (ಕೇವಲ 20 ದಿನಗಳು ಮಾತ್ರ) ಇರಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆಯ ನಿಯಮಾವಳಿಗಳ ಪ್ರಕಾರ ದಾಖಲಾಗಿರುವ ಅರ್ಹ ಬಾಕಿ ಸಂಚಾರ ಇ-ಚಲನ್ ಮತ್ತು ಸಾರಿಗೆ ಇಲಾಖೆಯ ಪ್ರಕರಣಗಳಿಗೆ ಮಾತ್ರ ಈ ಶೇ.50 ರಿಯಾಯಿತಿ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಮಹತ್ವಾಕಾಂಕ್ಷೆಯ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಗೆ ಸಂಬಂಧಿಸಿದಂತೆ ಸರ್ಕಾರವು ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ, ಬಾಕಿ ಇರುವ ಎಲ್ಲಾ ನೌಕರರು ಮತ್ತು ಅವರ ಕುಟುಂಬದವರ ವಿವರಗಳನ್ನು 2026ರ ಜುಲೈ 15ರೊಳಗಾಗಿ ಕಡ್ಡಾಯವಾಗಿ HRMS ತಂತ್ರಾಂಶದಲ್ಲಿ ನಮೂದಿಸುವಂತೆ ಎಲ್ಲಾ ಡಿ.ಡಿ.ಒ (DDO) ಗಳಿಗೆ ಕಡಕ್ ಸೂಚನೆ ನೀಡಲಾಗಿದೆ. ಒಟ್ಟು ನೌಕರರ ವಿವರ: ಯೋಜನೆಯಡಿ ಒಟ್ಟು 3,76,955 ನೌಕರರು ಆಪ್ಟ್-ಇನ್ (Opt-in) ಆಗಿದ್ದು, 23,081 ನೌಕರರು ಆಪ್ಟ್-ಔಟ್ (Opt-out) ಆಗಿದ್ದಾರೆ. ಬಾಕಿ ಇರುವ ನೋಂದಣಿ: ಆಪ್ಟ್-ಇನ್ ಆಗಿರುವ ನೌಕರರ ಪೈಕಿ ಕೇವಲ 1,79,339 ನೌಕರರ ವಿವರಗಳು ಮಾತ್ರ ಇದುವರೆಗೆ HRMS ತಂತ್ರಾಂಶದಲ್ಲಿ ಸಂಪೂರ್ಣವಾಗಿ ದಾಖಲಾಗಿವೆ. ಇನ್ನುಳಿದ 1,97,616 ನೌಕರರು ಮತ್ತು ಅವರ ಅವಲಂಬಿತ ಕುಟುಂಬದ ಅರ್ಹ ಸದಸ್ಯರ ವಿವರಗಳನ್ನು ತಂತ್ರಾಂಶದಲ್ಲಿ…

Read More

ಬೆಂಗಳೂರು: ಕರ್ನಾಟಕದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯು ತನ್ನ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯ ದೈನಂದಿನ ಹಾಜರಾತಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭ, ಸುರಕ್ಷಿತ ಮತ್ತು ಪಾರದರ್ಶಕಗೊಳಿಸಲು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇಲಾಖೆಯ ಸಿಬ್ಬಂದಿಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಕರ್ನಾಟಕ ಅಡ್ವಾನ್ಸ್‌ಡ್‌ ಅಟೆಂಡೆನ್ಸ್‌ ಮ್ಯಾನೇಜ್‌ಮೆಂಟ್‌ ಸಿಸ್ಟಮ್‌ – ಕರ್ತವ್ಯ’ (KAAMS-Kartavya) ಮೊಬೈಲ್‌ ಅಪ್ಲಿಕೇಷನ್‌ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ.ಈ ಅತ್ಯಾಧುನಿಕ ಡಿಜಿಟಲ್ ವ್ಯವಸ್ಥೆಯು ಇಲಾಖೆಯ ದೈನಂದಿನ ಕಾರ್ಯನಿರ್ವಹಣೆಯಲ್ಲಿ ದೊಡ್ಡ ಬದಲಾವಣೆ ತರಲಿದ್ದು, ಸಿಬ್ಬಂದಿಗಳು ಯಾವುದೇ ಅಡೆತಡೆಯಿಲ್ಲದೆ ತಮ್ಮ ಹಾಜರಾತಿಯನ್ನು ದಾಖಲಿಸಲು ನೆರವಾಗಲಿದೆ. ಎಲ್ಲಾ ಸ್ಮಾರ್ಟ್‌ ಫೋನ್‌ ಗಳಲ್ಲೂ ಲಭ್ಯ: ಈ ಆ್ಯಪ್ ಅನ್ನು ಎಲ್ಲಾ ವರ್ಗದ ಸಿಬ್ಬಂದಿ ಸುಲಭವಾಗಿ ಬಳಸಬಹುದಾಗಿದ್ದು, ಸಂಪೂರ್ಣವಾಗಿ ಉಚಿತವಾಗಿ ಲಭ್ಯವಿದೆ. ಆಂಡ್ರಾಯ್ಡ್ ಬಳಕೆದಾರರು: ಗೂಗಲ್ ಪ್ಲೇ ಸ್ಟೋರ್ (Google Play Store) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಐಫೋನ್ ಬಳಕೆದಾರರು: ಆ್ಯಪಲ್ ಆ್ಯಪ್‌ ಸ್ಟೋರ್ (Apple App Store) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಎಲ್ಲಾ…

Read More