Subscribe to Updates
Get the latest creative news from FooBar about art, design and business.
Author: kannadanewsnow57
ಅನೇಕ ಮಾಂಸಾಹಾರಿಗಳು ಮೀನುಗಳನ್ನ ಇಷ್ಟಪಡುತ್ತಾರೆ. ಅವ್ರು ಪ್ರತಿದಿನ ಅದನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳುತ್ತಾರೆ. ಭಾರತೀಯ ಮಾರುಕಟ್ಟೆಯಲ್ಲಿ ಅನೇಕ ಪೌಷ್ಟಿಕ ಮೀನುಗಳು ಲಭ್ಯವಿದ್ದರೂ, ಕೆಲವು ರೀತಿಯ ಮೀನುಗಳು ತಿನ್ನಲು ಸುರಕ್ಷಿತವಲ್ಲ ಮತ್ತು ಮಾರಕ ಅಪಘಾತಗಳಿಗೆ ಕಾರಣವಾಗಬಹುದು ಎಂದು ಅನೇಕ ಜನರಿಗೆ ತಿಳಿದಿಲ್ಲ. ಕ್ಯಾನ್ಸರ್’ಗೆ ಕಾರಣವಾಗುವ ಥಾಯ್ ಮಾಗುರ್.! ಅಂತಹ ಒಂದು ಮೀನು ಥಾಯ್ ಮಾಗುರ್.. ಈ ಮೀನು ಮಾನವನ ಆರೋಗ್ಯಕ್ಕೆ ಮಾತ್ರವಲ್ಲದೆ ಜಲಚರಗಳಿಗೂ ಅಪಾಯಕಾರಿ. ಕೇಂದ್ರ ಸರ್ಕಾರವು ಇದರ ಸಂತಾನೋತ್ಪತ್ತಿ, ಮಾರಾಟ ಮತ್ತು ಸೇವನೆಯನ್ನ ಸಂಪೂರ್ಣವಾಗಿ ನಿಷೇಧಿಸಿದೆ. ಈ ಥಾಯ್ ಮಾಗುರ್ ಮೀನಿನಲ್ಲಿ ಕ್ಯಾನ್ಸರ್ ಉಂಟು ಮಾಡುವ ಪದಾರ್ಥಗಳಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದನ್ನು ತಿನ್ನುವುದರಿಂದ ದೇಹದಲ್ಲಿ ಹಾನಿಕಾರಕ ವಿಷ ಉತ್ಪತ್ತಿಯಾಗುತ್ತದೆ. ಇದು ದೀರ್ಘಾವಧಿಯಲ್ಲಿ ಕ್ಯಾನ್ಸರ್’ನಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಅದಕ್ಕಾಗಿಯೇ ಇದನ್ನು ಕ್ಯಾನ್ಸರ್ ಜನಕ ಮೀನು ಎಂದೂ ಕರೆಯುತ್ತಾರೆ. ಅದನ್ನು ಏಕೆ ನಿಷೇಧಿಸಲಾಯಿತು? ಥಾಯ್ ಮಾಗುರ್ ಮೀನುಗಳನ್ನು ನಿಷೇಧಿಸುವುದಕ್ಕೆ ಕೇವಲ ಆರೋಗ್ಯದ ಕಾರಣಗಳಲ್ಲ, ಪರಿಸರದ ಪರಿಗಣನೆಯೂ ಇದೆ. ಪರಿಸರ ನಾಶ :…
ಬೆಂಗಳೂರು: ರಾಜ್ಯ ಸರ್ಕಾರದಿಂದ ಶೇ.50ರಷ್ಟು ರಿಯಾಯಿತಿಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆಯ ದಂಡವನ್ನು ಪಾವತಿಸೋದಕ್ಕೆ ಮತ್ತೆ ಅವಕಾಶ ನೀಡಿದೆ. ಈ ಬೆನ್ನಲ್ಲೇ ಆನ್ ಲೈನ್ ವಂಚಕರ ಜಾಲವೂ ಸಕ್ರೀಯವಾಗಿದೆ. ಆರ್ ಟಿ ಓ ಚಲನ್ ಎಂಬುದಾಗಿ ಆಪ್ ಫೈಲ್ ಬಂದಿದ್ದರೇ ಕ್ಲಿಕ್ ಮಾಡಬೇಡಿ ಎಂಬುದಾಗಿ ಇಲಾಖೆ ಎಚ್ಚರಿಸಿದೆ. ಈ ಕುರಿತಂತೆ ಸಾರಿಗೆ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಆರ್.ಟಿ.ಓ ಚಲನ್ ಎಂದು ನಂಬಿಸಿ ವಂಚಿಸುತ್ತಾರೆ. ಎಚ್ಚರ..! ಯಾವುದೇ ಕಾರಣಕ್ಕೂ ಇಂಥ Apk ಫೈಲ್ಗಳ ಮೇಲೆ ಕ್ಲಿಕ್ ಮಾಡದಿರಿ ಎಂಬುದಾಗಿ ಮನವಿ ಮಾಡಿದೆ. ಇನ್ನೂ ಒಂದು ವೇಳೆ ನೀವು ವಾಹನಗಳ ಸಂಚಾರ ನಿಯಮ ಉಲ್ಲಂಘನೆಯ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ಪಡೆದು, ಪಾವತಿಸೋದಕ್ಕೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವಂತೆ ತಿಳಿಸಿದೆ. ವಾಹನ ಮಾಲೀಕರು ಆರ್ ಟಿ ಓ ಚಲನ್ ಎಂಬುದಾಗಿ ಬಂದಂತ Apk ಫೈಲ್ ಡೌನ್ ಲೋಡ್ ಮಾಡಿಕೊಂಡರೇ, ಮೊಬೈಲ್ ನಲ್ಲಿನ ಗೌಪ್ಯ ದತ್ತಾಂಶಗಳನ್ನು ಆನ್ ಲೈನ್ ಕಳ್ಳರು ಕದಿಯೋ ಸಾಧ್ಯತೆ ಇದೆ. ಆ…
ಧಾರವಾಡ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಚಿಕ್ಕ ಮಲ್ಲಿಗವಾಡ ಗ್ರಾಮದಲ್ಲಿ ನಾರಾಯಣ ಶಿಂಧೆ ಎಂಬುವವರು ತನ್ನ ತಂದೆ ವಿಠ್ಠಲ ಶಿಂಧೆ, ಮಕ್ಕಳಾದ ಶಿವಕುಮಾರ್ ಶಿಂಧೆ ಹಾಗೂ ಶ್ರೀನಿಧಿ ಶಿಂಧೆ ಜೊತೆ ಗ್ರಾಮದ ಹೊರವಲಯದಲ್ಲಿರುವ ಯಲ್ಲಮನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ಶಶಿಕುಮಾರ್ 6 ನೇ ತರಗತಿಯಲ್ಲಿ ಓದುತ್ತಿದ್ದರು. ಮಗಳು ಶ್ರೀನಿಧಿ 5 ನೇ ತರಗತಿ ಓದುತ್ತಿದ್ದಳು. ಶಾಲಾ ಸಮವಸ್ತ್ರದಲ್ಲೇ ಮಕ್ಕಳ ಜೊತೆಗೆ ತಂದೆಯನ್ನು ಕರೆದುಕೊಂಡು ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವಂತ ಜನರಿಗೆ ತುರ್ತು ಸಂದರ್ಭ ಸೇರಿದಂತೆ ಅನಾರೋಗ್ಯ ಸಮಸ್ಯೆಗೆ, ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬಹುದಾಗಿದೆ. ಈ ಮೊದಲು ಅಫ್ ಲೈನ್ ಮೂಲಕ ಅರ್ಜಿಯೊಂದಿಗೆ ಅಲೆಯ ಬೇಕಿದ್ದಂತ ಪ್ರಕ್ರಿಯೆಯು, ಈಗ ಮತ್ತಷ್ಟು ಸರಳಗೊಳಿಸಲಾಗಿದೆ. ಜಸ್ಟ್ ಕುಳಿತಲ್ಲಿಯೇ ಆನ್ ಲೈನ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿ ಬಗ್ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯು ಸರ್ಕಾರದ ಆದೇಶ ಸಂಖ್ಯೆ ಎಫ್.ಡಿ. 103 ಎ.ಸಿ.ಪಿ 58ರಂತೆ ದಿನಾಂಕ: 3ನೇ ಡಿಸೆಂಬರ್ 1958ರಂತೆ ಸ್ಥಾಪಿತಗೊಂಡಿದ್ದು, ನಿಯಮಗಳು ಸರ್ಕಾರದ ಆದೇಶ ಸಂಖ್ಯೆ: ಎಫ್.ಡಿ. 35 ಬಿ.ಎಂ.ಎಸ್. 78 ದಿನಾಂಕ: 12ನೇ ಸೆಪ್ಟಂಬರ್ 1978 ರಂದು ರಚನೆಗೊಂಡಿರುತ್ತದೆ. ಮುಖ್ಯಮಂತ್ರಿಗಳಿಗೆ ಪ್ರದತ್ತವಾಗಿರುವ ವಿವೇಚನ ಅಧಿಕಾರದಂತೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಲಾಗುತ್ತಿದೆ. ಸಾರ್ವಜನಿಕರು, ಸಂಘ-ಸಂಸ್ಥೆಗಳು, ನಿಗಮ-ಮಂಡಳಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸುವ ದೇಣಿಗೆಯ ಮೊತ್ತವೇ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಆದಾಯ ಮೂಲವಾಗಿದ್ದು, ಸರ್ಕಾರದ ವಾರ್ಷಿಕ ಆಯ-ವ್ಯಯದಲ್ಲಿ ಯಾವುದೇ ಅನುದಾನವು ನಿಗಧಿಯಾಗಿರುವುದಿಲ್ಲ…
ಬೆಂಗಳೂರು : ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ವಸತಿ ಮತ್ತು ವಾಣಿಜ್ಯ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿ Farm House/ಭೂ ಪರಿವರ್ತಿತ ಜಮೀನಿನಲ್ಲಿ ಏಕನಿವೇಶನ ವಿನ್ಯಾಸಗಳಲ್ಲಿ ಕಟ್ಟಡ ನಿರ್ಮಿಸಲು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಸಾರ್ವಜನಿಕ ರಸ್ತೆಯ ಸಂಪರ್ಕವನ್ನು ಕಡ್ಡಾಯಗೊಳಿಸಲಾಗುತ್ತಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗಿರುತ್ತದೆ. ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ, ಸಕ್ಷಮಪ್ರಾಧಿಕಾರಗಳು ನಿಯಮಾನುಸಾರ ಕ್ರಮ ಜರುಗಿಸಿ ತಾಂತ್ರಿಕ ಅನುಮೋದನೆಗಳನ್ನು ನೀಡಲು ಸರ್ಕಾರದಿಂದ ಸ್ಪಷ್ಟ ನಿರ್ದೇಶನವನ್ನು ನೀಡುವ ಅಗತ್ಯವಿರುವುದನ್ನು ಗಮನಿಸಲಾಗಿರುತ್ತದೆ. ಹಾಗಾಗಿ, ರಾಜ್ಯಾದ್ಯಂತ ಏಕರೂಪದ ಕ್ರಮ ಜರುಗಿಸುವ ಅಗತ್ಯವಿದ್ದು, ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳಲ್ಲಿ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಸಂದರ್ಭದಲ್ಲಿ ಹಾಗೂ farm house ಗಳಿಗೆ ಅನುಮತಿ ನೀಡುವ ಪ್ರಸ್ತಾವನೆಗಳಲ್ಲಿ ಸಾರ್ವಜನಿಕ ರಸ್ತೆಯ ಸಂಪರ್ಕದ ಕುರಿತು ಕೆಳಕಂಡಂತೆ ಪರಿಶೀಲಿಸಿ ತಾಂತ್ರಿಕ…
ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪ್ರಕ್ರಿಯೆಗಳ ಬಗ್ಗೆ ಉಲ್ಲೇಖ (1) ರಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ. ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಡಿ ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕು ಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಉಲ್ಲೇಖ (2) ರಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸದರಿ ಸಭೆಯ…
ಬೆಂಗಳೂರು : ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ ಇತ್ಯಾದಿಗಳ ಅಧಿಕಾರಿ/ ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದು ಉಪಯೋಗಿಸಿದ್ರೆ ದಂಡ ವಿಧಿಸಲಾಗುತ್ತದೆ. ಹೌದು, ಈ ಬಗ್ಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಕೆಲವು ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ ವಿಶ್ವ ವಿದ್ಯಾಲಯ/ಸಂಸ್ಥೆಯ ಅಧಿಕಾರಿ / ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದುಕೊಂಡು, ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದು ಒಬ್ಬ ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆಯಾಗಿರುತ್ತದೆ. ಬಿ.ಪಿ.ಎಲ್. ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ. ಒಬ್ಬ ಸರ್ಕಾರಿ ಅಧಿಕಾರಿ/ನೌಕರ ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನರೇಖೆಗಿಂತ ಕೆಳಗೆ ಬರುವುದಿಲ್ಲ. ಆದುದರಿಂದ, ಒಂದು ವೇಳೆ ಯಾವುದೇ ಸರ್ಕಾರಿ/ ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವ ವಿದ್ಯಾಲಯ/ಸಂಸ್ಥೆಯ ಅಧಿಕಾರಿ/ನೌಕರ ಅಥವಾ ಆತನ/ಆಕೆಯ ಅವಲಂಬಿತ…
ಬೆಂಗಳೂರು : ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿನ ಸೋರಿಕೆಯನ್ನು ತಡೆಯಲು ‘ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ಸ್’ ಎಂಬ ಮೊಬೈಲ್ ಅಪ್ಲಿಕೇಶನ್ ವ್ಯವಸ್ಥೆಯನ್ನು ಪರಿಚಯಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಗ್ರಾಹಕರಿಗೆ ಪಡಿತರ ವಿತರಿಸುವಾಗ ತೂಕದಲ್ಲಿ ಮೋಸವಾಗುವುದನ್ನು ತಡೆಯಲು ಕೇಂದ್ರ ಸರಕಾರದ ಸೂಚನೆ ಮೇರೆಗೆ ತೂಕದ ಯಂತ್ರವನ್ನು ಬಯೋಮೆಟ್ರಿಕ್ಗೆ ಸಂಯೋಜಿಸಲು ನಿರ್ಧರಿಸಲಾಗಿದೆ. ಇದರಿಂದ ತೂಕದಲ್ಲಿ ವ್ಯತ್ಯಾಸವಾದರೆ ಗ್ರಾಹಕರಿಗೆ ಗೊತ್ತಾಗಲಿದೆ. ಮೊಬೈಲ್ ಅಪ್ಲಿಕೇಶನ್, ಸರಕಾರದ ಕೇಂದ್ರೀಕೃತ ದತ್ತಾಂಶದೊಂದಿಗೆ ಸಂಪರ್ಕ ಹೊಂದಿರುತ್ತದೆ. ಈ ಕೇಂದ್ರೀಕೃತ ವ್ಯವಸ್ಥೆಯಿಂದ ಫಲಾನುಭವಿಗಳು ರಾಜ್ಯದ ಯಾವುದೇ ಪ್ರದೇಶದಲ್ಲಿ ಪಡಿತರ ಪಡೆಯುವುದನ್ನು ಖಚಿತಪಡಿಸುತ್ತದೆ. ಹೀಗಾಗಿ ಕರ್ನಾಟಕದಲ್ಲಿ ಅಳವಡಿಸಲು ತೀರ್ಮಾನಿಸಲಾಗಿದ್ದು, ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಅನುಕೂಲವಾಗುವಂತೆ ಸರಕಾರ ಹೊಸ ಮೊಬೈಲ್ ಅಪ್ಲಿಕೇಶನ್ ಪರಿಚಯಿಸಲು ಮುಂದಾಗಿದೆ.
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿವಿ ಹೀಗೆ 8 ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 25ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಪ್ರಾಧಿಕಾರದಿಂದ ದಿನಾಂಕ 15.11.2025 ರಂದು ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕದ ವಿವಿಧ ಸರ್ಕಾರಿ ಇಲಾಖೆ/ಸಂಸ್ಥೆ/ನಿಗಮದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿಗಳನ್ನು ಆಹ್ವಾನಿಸಿ, ದಿನಾಂಕ 08.10.2025 ಮತ್ತು 31.10.2025 ರಂದು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅಧಿಸೂಚನೆಗಳನ್ನು ಹೊರಡಿಸಲಾಗಿತ್ತು ಮತ್ತು ದಿನಾಂಕ 31.10.2025 ರಂದು ಪ್ರತ್ಯೇಕ ಪ್ರಕಟಣೆ ಹೊರಡಿಸಿ ಅರ್ಜಿ ಸಲ್ಲಿಸಲು ದಿನಾಂಕವನ್ನು 14.11.2025ರ ವರೆಗೆ ಹಾಗೂ…
ಆಸ್ತಿ ಮಾಲೀಕರು 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಮತ್ತು ಇತರೆ ತೆರಿಗೆಗಳನ್ನು ಎಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಪಾವತಿಸಿ ಶೇ.05 ರಷ್ಟು ರಿಯಾಯಿತಿಯನ್ನು ಪಡೆಯಲು ಮತ್ತು https:/davangerecitycorp.org ಲಿಂಕ್ನ್ನು ಆನ್ಲೈನ್ ಮೂಲಕ ಯು.ಪಿ.ಐ ಉಪಯೋಗಿಸಿಕೊಂಡು ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಆಸ್ತಿ ಮಾಲೀಕರು ಈವರೆಗೂ ತೆರಿಗೆಗಳನ್ನು ಪಾವತಿಸದಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಕಂದಾಯ ವಿಭಾಗದ ಅಧಿಕಾರಿಗಳು ಸರ್ಕಾರದ ಸುತ್ತೋಲೆ ಕರ್ನಾಟಕ ಮುನ್ಸಿಪಲ್ ಕಾರ್ಪೆರೇಷನ ತೆರಿಗೆ (ತಿದ್ದುಪಡಿ) ನಿಯಮಗಳು 2025 ರಂತೆ ತೆರಿಗೆಗಳನ್ನು ಬಾಕಿ ಉಳಿಸಿಕೊಂಡಿರುವ ಸ್ವತ್ತಿನ ಮಾಲೀಕರುಗಳಿಗೆ ಡಿಮ್ಯಾಂಡ್ ನೋಟಿಸ್ನ್ನು ನೀಡಲಾಗುತ್ತದೆ. ಡಿಮ್ಯಾಂಡ್ ನೋಟಿಸ್ಗೆ ಅನುಗುಣವಾಗಿ 30 ದಿನಗಳಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಬಾಕಿ ಮೊತ್ತ ಪಾವತಿ ಮಾಡದಿದ್ದರೆ ಆಸ್ತಿಯನ್ನು ಮಹಾನಗರಪಾಲಿಕೆಯೊಂದಿಗೆ ಲಿಂಕ್ ಮಾಡಲಾಗುತ್ತದೆ. ಆಗ ಆಸ್ತಿ ಮಾಲೀಕರು ತಮ್ಮ ಆಸ್ತಿ ಮಾರಾಟ ಮಾಡುವುದು ಹಾಗೂ ವರ್ಗಾವಣೆ ಮಾಡುವುದಕ್ಕೆ ಕಷ್ಟವಾಗುವುದು.. ಆದ್ದರಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರು ತೆರಿಗೆಗಳನ್ನು ಪಾವತಿಸಿ ನಗರದ ಸರ್ವತೋಮುಖ…














