Author: kannadanewsnow57

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಬೇಸಿಗೆ ಮಳೆ ಅಬ್ಬರಿಸುತ್ತಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ತೀವ್ರವಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಮೈಸೂರು ಸುತ್ತಮುತ್ತಲಿನ ಜಿಲ್ಲೆಗಳು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 4 ದಿನ ಮತ್ತು ಕರಾವಳಿ ಭಾಗದಲ್ಲಿ ಮುಂದಿನ 2 ದಿನ ಬಿರುಸಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ ಮತ್ತು ಹಾವೇರಿಯಲ್ಲಿ ಮೇ 19ರಿಂದ ಮೇ 21ರವರೆಗೆ ಗುಡುಗು, ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿ ತೀರದಲ್ಲಿ ಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದ ಬಳಿ ಇರುವ ಯಕ್ಷಂಡಿ ಸೇತುವೆಯು ಮಳೆಯ ಭೋರ್ಗರೆತಕ್ಕೆ ಕೊಚ್ಚಿ ಹೋಗಿದೆ. ಜಿಲ್ಲೆಯಾದ್ಯಂತ ರಸ್ತೆಗಳ…

Read More

ನವದೆಹಲಿ : ದೇಶದಲ್ಲಿ ಇಂಧನ ಬೆಲೆಗಳ ಏರಿಕೆ ಸರಣಿ ಮುಂದುವರಿದಿದ್ದು, ವಾಹನ ಸವಾರರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಿದೆ. ಕೇವಲ ಐದು ದಿನಗಳ ಅಂತರದಲ್ಲಿ ಎರಡನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಇತ್ತೀಚಿನ ಪರಿಷ್ಕರಣೆಯ ಅನ್ವಯ, ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ 91 ಪೈಸೆ ಹೆಚ್ಚಳವಾಗಿದೆ. (ಮತ್ತೊಂದು ಮೂಲದ ಪ್ರಕಾರ ಇಂಧನ ದರಗಳಲ್ಲಿ ಸರಾಸರಿ 90 ಪೈಸೆ ಏರಿಕೆಯಾಗಿದೆ). ಕಳೆದ ಐದೇ ದಿನಗಳಲ್ಲಿ ಇದು ಎರಡನೇ ದರ ಏರಿಕೆಯಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಉಂಟಾಗಿರುವ ಏರಿಳಿತ ಹಾಗೂ ತೈಲ ಕಂಪನಿಗಳ ಮೇಲಿನ ಆರ್ಥಿಕ ಒತ್ತಡದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ನಿರಂತರವಾಗಿ ಹೆಚ್ಚುತ್ತಿರುವ ಇಂಧನ ದರಗಳಿಂದಾಗಿ ಅಗತ್ಯ ವಸ್ತುಗಳ ಬೆಲೆ ಹಾಗೂ ಸಾರಿಗೆ ವೆಚ್ಚಗಳು ಮತ್ತಷ್ಟು ದುಬಾರಿಯಾಗುವ ಆತಂಕ ಎದುರಾಗಿದೆ. ಭಿನ್ನ ರಾಜ್ಯಗಳಲ್ಲಿ ಸ್ಥಳೀಯ ತೆರಿಗೆಗಳಿಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆಯ 30ನೇ ಕಂತಿನ ಹಣವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ. ರಾಜ್ಯದ ಒಟ್ಟು 1,24,10,668 ಮಹಿಳೆಯರಿಗೆ ಈ ಕಂತಿನ ಹಣ ತಲುಪಲಿದೆ. ಯೋಜನೆಯ ಆರಂಭದಿಂದ ಇಂದಿನವರೆಗೆ ಪ್ರತಿ ಫಲಾನುಭವಿಗೆ ಒಟ್ಟು ₹60,000 ರೂ.ಗಳನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ.ಯಾವುದೇ ರೀತಿಯ ಭ್ರಷ್ಟಾಚಾರ ಅಥವಾ ಕಮಿಷನ್ ದಂಧೆಗೆ ಆಸ್ಪದ ನೀಡದೆ, ಡಿಬಿಟಿ (DBT) ಮೂಲಕ ಅತ್ಯಂತ ಪಾರದರ್ಶಕವಾಗಿ ಹಣವನ್ನು ಫಲಾನುಭವಿಗಳ ಖಾತೆಗೆ ತಲುಪಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣವು ಮಹಿಳೆಯರ ಆರ್ಥಿಕ ಸ್ವಾಲಂಬನೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಇದು ಕುಟುಂಬದ ದಿನನಿತ್ಯದ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಆಹಾರ ವೆಚ್ಚಗಳನ್ನು ನಿಭಾಯಿಸಲು ನೆರವಾಗುತ್ತಿದ್ದು, ಗ್ರಾಮೀಣ ಹಾಗೂ ಬಡ ಕುಟುಂಬಗಳ…

Read More

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಈಗ ಮತ್ತೊಂದು ಆಘಾತ ಎದುರಾಗಿದೆ. ಶಾಲಾ ಮಕ್ಕಳ ಪೋಷಕರ ಜೇಬಿಗೆ ಕತ್ತರಿ ಬೀಳುವಂತಹ ಸುದ್ದಿಯೊಂದು ಹೊರಬಿದ್ದಿದ್ದು, ಖಾಸಗಿ ಶಾಲಾ ವಾಹನಗಳ (ವ್ಯಾನ್ ಮತ್ತು ಬಸ್) ಪ್ರಯಾಣ ದರವನ್ನು ಶೇಕಡಾ 10 ರಿಂದ 15 ರಷ್ಟು ಹೆಚ್ಚಿಸಲು ಮಾಲೀಕರ ಸಂಘಟನೆಗಳು ನಿರ್ಧರಿಸಿವೆ. ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಬೆನ್ನಲ್ಲೇ ಈ ದರ ಏರಿಕೆ ಜಾರಿಗೆ ಬರಲಿದ್ದು, ಮಧ್ಯಮ ವರ್ಗದ ಪೋಷಕರಿಗೆ ಇದು ದೊಡ್ಡ ಹೊರೆಯಾಗಿ ಪರಿಣಮಿಸಲಿದೆ. ಇಂಧನ ಬೆಲೆ ಏರಿಕೆಯೇ ಪ್ರಮುಖ ಕಾರಣ: ಕಳೆದ ಕೆಲವು ಸಮಯದಿಂದ ಇಂಧನ ದರಗಳು ನಿರಂತರವಾಗಿ ಏರಿಕೆಯಾಗುತ್ತಿರುವುದು ಈ ನಿರ್ಧಾರಕ್ಕೆ ಮುಖ್ಯ ಕಾರಣ ಎಂದು ಶಾಲಾ ವಾಹನಗಳ ಮಾಲೀಕರು ಸಮರ್ಥಿಸಿಕೊಂಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದಿಂದಾಗಿ ವಾಹನಗಳ ದೈನಂದಿನ ನಿರ್ವಹಣಾ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಹಳೆಯ ದರದಲ್ಲೇ ವಾಹನಗಳನ್ನು ಚಲಾಯಿಸಿದರೆ ತೀವ್ರ ನಷ್ಟ ಅನುಭವಿಸಬೇಕಾಗುತ್ತದೆ. ಹಾಗಾಗಿ ಅನಿವಾರ್ಯವಾಗಿ ಶೇ.…

Read More

ಕೋಲಾರ : ಪೋಷಕರು ತಿನ್ನುವ ಸಲುವಾಗಿ ಇಟ್ಟಿದ್ದ ಬೆಟ್ಟದ ನೆಲ್ಲಿಕಾಯಿಯನ್ನು ತಿನ್ನಲು ಹೋಗಿ, ಅದು ಗಂಟಲಿನಲ್ಲಿ ಸಿಲುಕಿ ಉಸಿರುಗಟ್ಟಿ ಎರಡು ವರ್ಷದ ಗಂಡು ಮಗುವೊಂದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ನಡೆದಿದೆ. ರವಿ ಮತ್ತು ಮಾಲಾ ದಂಪತಿಯ 2 ವರ್ಷದ ಮಗು ವಿಜಯೇಂದ್ರ ಮೃತಪಟ್ಟ ದುರ್ದೈವಿ. ಮಗು ಬೆಟ್ಟದ ನೆಲ್ಲಿಕಾಯಿಯನ್ನು ನುಂಗಲು ಹೋದಾಗ ಅದು ಗಂಟಲಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಮಗು ಉಸಿರಾಡಲು ಸಾಧ್ಯವಾಗದೆ ಒದ್ದಾಡುತ್ತಿರುವುದನ್ನು ಪೋಷಕರು ಗಮನಿಸಿದ್ದಾರೆ. ಕೂಡಲೇ ಮಗುವನ್ನು ರಕ್ಷಿಸಲು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯದಲ್ಲೇ ಮಗು ಕೊನೆಯುಸಿರೆಳೆದಿದೆ. ಪಟ್ಟಣದಲ್ಲಿ ಕೊತ್ತಂಬರಿ ಸೊಪ್ಪು ಮಾರಾಟ ಮಾಡುವ ರವಿ-ಮಾಲಾ ದಂಪತಿ, ಮದುವೆಯಾಗಿ ಎಂಟು ವರ್ಷಗಳ ನಂತರ ತಮಗ ಹುಟ್ಟಿದ್ದ ಮಗುವನ್ನು ಕಳೆದುಕೊಂಡು ತೀವ್ರ ದುಃಖದಲ್ಲಿದ್ದಾರೆ.

Read More

ಬೆಂಗಳೂರು: ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಡೆಸಿದ ಮತ್ತೊಂದು ಸುತ್ತಿನ ಸಂಧಾನ ಮಾತುಕತೆ ಸಂಪೂರ್ಣ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಮೇ 20ರ ಬುಧವಾರದಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗುವುದು ಬಹುತೇಕ ಖಚಿತವಾಗಿದೆ. ಸಾರಿಗೆ ನೌಕರರ ವಿವಿಧ ಸಂಘಟನೆಗಳ ಒಕ್ಕೂಟವಾಗಿರುವ ಜಂಟಿ ಕ್ರಿಯಾ ಸಮಿತಿಯು ಮುಷ್ಕರಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ, ಸೋಮವಾರ ಬನ್ನೇರುಘಟ್ಟ ರಸ್ತೆಯ ಕಾರ್ಮಿಕ ಭವನದಲ್ಲಿ ಮಹತ್ವದ ಸಭೆ ಆಯೋಜಿಸಲಾಗಿತ್ತು. ಕಾರ್ಮಿಕ ಇಲಾಖೆಯ ಆಯುಕ್ತರಾದ ದಿನೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಭಾಗವಹಿಸಿದ್ದರು. ಆದರೆ, ಬೇಡಿಕೆಗಳ ಈಡೇರಿಕೆಯ ಕುರಿತು ಸರ್ಕಾರದಿಂದ ಯಾವುದೇ ಸ್ಪಷ್ಟ ಭರವಸೆ ಸಿಗದ ಕಾರಣ, ಸಮಿತಿಯ ಪದಾಧಿಕಾರಿಗಳನ್ನು ಮನವೊಲಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಸರ್ಕಾರ ನಮ್ಮ ಬೇಡಿಕೆಗಳ ಬಗ್ಗೆ ಕೇವಲ ಹಾರಿಕೆ ಉತ್ತರದ ಭರವಸೆ ನೀಡುತ್ತಿದೆ. ಹೀಗಾಗಿ ಮೇ 20ರಿಂದ ಕರೆ ನೀಡಿರುವ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು…

Read More

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಜಾರಿಗೆ ತರಲಾಗಿರುವ ‘ಆಲ್ಕೋಹಾಲ್ ಇನ್ ಬೇವರೆಜ್’ (AIB) ತೆರಿಗೆ ಪದ್ಧತಿಯಿಂದಾಗಿ ಬಿಯರ್ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಹೊಸ ನಿಯಮದ ಅನ್ವಯ ಬಿಯರ್ ಬೆಲೆಯಲ್ಲಿ ಗರಿಷ್ಠ 80 ರೂಪಾಯಿಗಳವರೆಗೆ ಭಾರಿ ಕಡಿತವಾಗಿದೆ. ಮದ್ಯದ ಮೇಲೆ ಎಐಬಿ ತೆರಿಗೆ ಪದ್ಧತಿಯನ್ನು ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ. ಈ ಮೊದಲು ಲೀಟರ್ ಆಧಾರದ ಮೇಲೆ ತೆರಿಗೆಯನ್ನು ವಿಧಿಸಲಾಗುತ್ತಿತ್ತು. ಆದರೆ, ಅಬಕಾರಿ ಆದಾಯವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ರಾಜ್ಯ ಸರ್ಕಾರವು ಮದ್ಯದಲ್ಲಿರುವ ಆಲ್ಕೋಹಾಲ್ ಅಂಶವನ್ನು ಆಧರಿಸಿ (AIB) ತೆರಿಗೆ ಹಾಕುವ ಹೊಸ ಪದ್ಧತಿಯನ್ನು ಇತ್ತೀಚೆಗೆ ಜಾರಿಗೆ ತಂದಿದೆ. ಇದರ ನೇರ ಪರಿಣಾಮವಾಗಿ ಪ್ರಮುಖ ಬ್ರ್ಯಾಂಡ್‌ಗಳ ಬಿಯರ್ ಬೆಲೆಗಳು ಗಣನೀಯವಾಗಿ ಕುಸಿದಿವೆ. ಪ್ರಮುಖ ಬಿಯರ್ ಬ್ರ್ಯಾಂಡ್‌ಗಳ ಪರಿಷ್ಕೃತ ದರ ಪಟ್ಟಿ (650 ML): ಹೊಸ ತೆರಿಗೆ ನೀತಿಯ ಬಳಿಕ ಪ್ರಮುಖ ಬ್ರ್ಯಾಂಡ್‌ಗಳ ಬೆಲೆ ವಿವರಗಳು ಈ ಕೆಳಗಿನಂತಿವೆ: ಬಿಯರ್ ಬ್ರ್ಯಾಂಡ್ (650 ML) ಹಳೆಯ ಬೆಲೆ (₹) ಹೊಸ ಬೆಲೆ…

Read More

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಮಳೆಯ ಆರ್ಭಟ ತೀವ್ರಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಒಟ್ಟು 13 ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಹಾಗೂ ಮಳೆಗೆ ಸಂಬಂಧಿಸಿದ ಅವಘಡಗಳಿಂದ ಮೂವರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಮಳೆಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಗದಗ, ಲಕ್ಷ್ಮೇಶ್ವರ ಹಾಗೂ ಹೊನ್ನಾಳಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗದಗ ಹೊರವಲಯದ ಒಕ್ಕಲಗೇರಿ ಓಣಿಯ ನಿವಾಸಿ, ಕುರಿಗಾಹಿ ಮರೇತಮ್ಮಪ್ಪ (52) ಎಂಬುವವರು ಮನೆಯ ಹೊರಗೆ ಮಲಗಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಗಾಳಿ-ಮಳೆಗೆ ಹೆದ್ದಾರಿಯ ವಿದ್ಯುತ್ ಕಂಬವೊಂದು ಮುರಿದು ಬಿದ್ದ ಪರಿಣಾಮ, ಕುರಿಗಾಯಿ ಮಂಜಪ್ಪ (26) ಎಂಬ ಯುವಕ ಮೃತಪಟ್ಟಿದ್ದಾನೆ.ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮಲೆಕಣಬೂರು ಗ್ರಾಮದ ಸರ್ಕಾರಿ ಶಾಲೆಯ ಹೆಡ್ ಮಾಸ್ಟರ್ ನಾಗರಾಜಪ್ಪ (45) ಎಂಬುವವರು ಮನೆಯ ಮುಂದೆ ನಿಂತು ಮಳೆ ವೀಕ್ಷಿಸುತ್ತಿದ್ದಾಗ, ಸಿಡಿಲಿನ ಭೀಕರ ಶಬ್ದಕ್ಕೆ…

Read More

ತುಮಕೂರು: ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅಂಗವಾಗಿ ಹಮ್ಮಿಕೊಂಡಿರುವ ‘ಸಮರ್ಪಣೆ ಸಂಕಲ್ಪ’ ಮತ್ತು ‘ಗ್ಯಾರಂಟಿ ಇಲಾಖಾ ಹಬ್ಬ’ದ ಬೃಹತ್ ಸಮಾವೇಶವು ಇಂದು (ಮೇ 19, ಮಂಗಳವಾರ) ತುಮಕೂರಿನಲ್ಲಿ ನಡೆಯಲಿದೆ. ತುಮಕೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 11:00 ಗಂಟೆಗೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಒಟ್ಟು 1,52,492 ಫಲಾನುಭವಿ ಕುಟುಂಬಗಳಿಗೆ ಹಕ್ಕುಪತ್ರ, ದಾಖಲೆ ಹಾಗೂ ಆದೇಶ ಪತ್ರಗಳನ್ನು ಅಧಿಕೃತವಾಗಿ ಹಸ್ತಾಂತರಿಸಲಾಗುತ್ತಿದೆ. ‘ಭೂ ಗ್ಯಾರಂಟಿ’ ಯೋಜನೆಯಡಿ ಈ ಮಹತ್ವದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಂದಾಯ ಸೇವೆಗಳನ್ನು ಜನರಿಗೆ ಸರಳ, ಸುಲಭ ಹಾಗೂ ಸುಲಲಿತವಾಗಿ ತಲುಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಸಮಾವೇಶದಲ್ಲಿ 1.52 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು. 600 ಮಂದಿಗೆ ಅಂಗನವಾಡಿ ಉದ್ಯೋಗ ನೀಡಲಿದ್ದು, ರಾಜ್ಯದ ಇತಿಹಾಸದಲ್ಲಿ ಒಂದೇ ಕಾರ್ಯಕ್ರಮದಲ್ಲಿ ಇಷ್ಟು ಜನರಿಗೆ ಹಕ್ಕುಪತ್ರ ವಿತರಿಸುತ್ತಿರುವುದು ಇದೇ ಮೊದಲು. ಈ ಸಾಧನೆ ಗಿನ್ನೆಸ್ ದಾಖಲೆಗೆ ಸೇರಲಿದೆ. ಆ ಕುರಿತು ಪ್ರಮಾಣ ಪತ್ರ ಪ್ರದಾನ ಮಾಡಲು ಇಂಗ್ಲೆಂಡ್ ನಿಂದ ಗಿನ್ನೆಸ್ ಸಂಸ್ಥೆಯ ಪ್ರತಿನಿಧಿಗಳು…

Read More

ಲಖಿಂಪುರ ಖೇರಿ (ಉತ್ತರ ಪ್ರದೇಶ): ಇಲ್ಲಿನ ಸಿಸೈಯಾ-ಲಖಿಂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ವ್ಯಾನ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಹತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖಿಂಪುರದಿಂದ ಸಿಸೈಯಾ ಕಡೆಗೆ ಪ್ರಯಾಣಿಸುತ್ತಿದ್ದ ವ್ಯಾನ್, ಉಂಚ್ಗಾಂವ್ ಮತ್ತು ಭರೇಹ್ರಾ ಗ್ರಾಮಗಳ ನಡುವೆ ಅಪಘಾತಕ್ಕೆ ಈಡಾಗಿದೆ. ವ್ಯಾನ್ನಲ್ಲಿದ್ದ ಒಂಬತ್ತು ಪ್ರಯಾಣಿಕರು ಹಾಗೂ ಚಾಲಕ ಸೇರಿದಂತೆ ಒಟ್ಟು 10 ಜನರು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಧೌರಹ್ರಾ ವೃತ್ತದ ಪೊಲೀಸ್ ಅಧಿಕಾರಿ ಶಂಶೇರ್ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ. ಲಖಿಂಪುರ ಖೇರಿ ಜಿಲ್ಲಾಧಿಕಾರಿ ಅಂಜನಿ ಕುಮಾರ್ ಸಿಂಗ್ ಮಾತನಾಡಿ, “ಒಂಬತ್ತು ಜನರು ಅಪಘಾತದ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ. ಮೃತರ ಗುರುತು ಪತ್ತೆ: ಮೃತರಲ್ಲಿ ಏಳು ಜನರನ್ನು ಗುರುತಿಸಲಾಗಿದ್ದು, ಬಹರೈಚ್ ಜಿಲ್ಲೆಯ ನಿವಾಸಿಗಳಾದ ಜೈದೀಪ್ ಸಿಂಗ್ (25), ಪವನ್ (23), ಸೋಹನ್ (21), ರಾಮ್ ಗೋಯಲ್ (42), ಸಹಜ್ರಾಮ್ (35), ಪಪ್ಪು…

Read More