Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಹಳ್ಳಿಗಳ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ. ಗ್ರಾಮೀಣ ಭಾಗದಲ್ಲಿ ಪ್ರತಿಯೊಬ್ಬರಿಗೂ ಉತ್ತಮ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಗ್ರಾಮೀಣ ಜನರ ಆಸ್ತಿಗಳ ಭದ್ರತೆಗಾಗಿ ಇ-ಸ್ವತ್ತು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಗ್ರಾಮೀಣ ಜನರು ಆಸ್ತಿಗಳ ಇ-ಖಾತಾ ಪಡೆಯುವುದು ಈಗ ಮತ್ತಷ್ಟು ಸುಲಭವಾಗಿದೆ. https://eswathu.karnataka.gov.in ಪೋರ್ಟಲ್ಗೆ ಲಾಗಿನ್ ಆಗಿ ನಿಮ್ಮ ಆಸ್ತಿ ವಿವರಗಳನ್ನು ತುಂಬಿಸಿ, ಅರ್ಜಿ ಸಲ್ಲಿಸಿ ಇ-ಖಾತಾ ಪಡೆಯಬಹುದು. ಅದಕ್ಕಾಗಿ ನಮ್ಮ ಇಲಾಖೆಯಿಂದ ಇ-ಸ್ವತ್ತು ಸಹಾಯವಾಣಿ 9483476000 ಅನ್ನು ಪ್ರಾರಂಭಿಸಿದ್ದು ನಿಮ್ಮ ಯಾವುದೇ ಗೊಂದಲಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್ ರೂಪದ ಇ – ಖಾತಾ ಪಡೆಯಲು ಇಲಾಖೆಯು ಅವಕಾಶ ಕಲ್ಪಿಸಿದೆ. ಇದನ್ನು ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸುತ್ತೇವೆ.
ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (TET) ಅಭ್ಯರ್ಥಿಗಳ ನೈಜತೆ ಪರಿಶೀಲಿಸಲು ಇದೇ ಮೊದಲ ಬಾರಿ ಪರೀಕ್ಷಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಮತ್ತು ಫೇಸ್ ರೆಕಗ್ನಿಷನ್ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಪರಿಚಯಿಸಿದೆ. ಇಂದು ಬೆಳಗ್ಗೆ ಪತ್ರಿಕೆ-1 ಮತ್ತು ಮಧ್ಯಾಹ್ನ ಪತ್ರಿಕೆ-2 ಪರೀಕ್ಷೆಗಳು ನಡೆಯಲಿವೆ. ರಾಜ್ಯದ 903 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಒಟ್ಟು 3.35 ಲಕ್ಷ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿಗಳನ್ನು ತಡೆಯಲು ಎಲ್ಲ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ನಡೆಸುವ ಮೆಟಲ್ ಡಿಟೆಕ್ಟರ್ ತಪಾಸಣೆ, ಡಿಜಿಟಲ್ ಬೆರಳಚ್ಚು ದಾಖಲಿಸುವಿಕೆ ಮತ್ತು ಮುಖ ಗುರುತಿಸುವಿಕೆ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕೆಂದು ಸೂಚಿಸಲಾಗಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಯು ಉದ್ಯೋಗ ಪಡೆಯುದಕ್ಕಾಗಿ ಅರ್ಹತಾ ಪರೀಕ್ಷೆಯಾಗಿದೆ. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ಹಾಗೂ ಮೊಬೈಲ್, ಬ್ಲೂಟೂತ್, ಸ್ಮಾರ್ಟ್ ವಾಚ್ ಸೇರಿದಂತೆ ಅತ್ಯಾಧುನಿಕ ತಾಂತ್ರಿಕ ಸಾಧನ ಸಲಕರಣೆಗಳನ್ನು ಪರೀಕ್ಷಾ ಕೊಠಡಿಗೆ ತರದಂತೆ ಮತ್ತು ಬಳಸದಂತೆ ಮುಂಜಾಗೃತೆ ವಹಿಸಬೇಕೆಂದು ತಿಳಿಸಲಾಗಿದೆ. ಪರೀಕ್ಷೆಗಾಗಿ ಸೂಕ್ತ ಭದ್ರಯೆ ಇರುವಂತೆ ಹಾಗೂ ನಿಗಧಿತ ಅವಧಿಗೆ ಪರೀಕ್ಷೆಗಳನ್ನು ಆರಂಭಿಸಿ,…
ಗೋವಾ: ಗೋವಾದ ರೆಸ್ಟೋರೆಂಟ್-ಕ್ಲಬ್ ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 23 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಪ್ರವಾಸಿಗರು ಹಾಗೂ ರೆಸ್ಟೋರೆಂಟ್ ಸಿಬ್ಬಂದಿಗಳು ಸೇರಿ ಮೂವರು ಮಹಿಳೆಯರು ಮತ್ತು 20 ಪುರುಷರು ಸಜೀವ ದಹನವಾಗಿದ್ದಾರೆ. ಗೋವಾದ ಅರ್ಪೋರಾದಲ್ಲಿರುವ ರೆಸ್ಟೋರೆಂಟ್-ಕಮ್-ಕ್ಲಬ್ನಲ್ಲಿ ಭಾನುವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು, ಆದರೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ರಾತ್ರಿಯಿಡೀ ಕೆಲಸ ಮಾಡಿದರು. ಗೋವಾ ಡಿಜಿಪಿ ಅಲೋಕ್ ಕುಮಾರ್ ಅವರು ಮಧ್ಯರಾತ್ರಿಯ ನಂತರ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಿದರು. ರ್ಪೋರಾದ ರೆಸ್ಟೋರೆಂಟ್-ಕಮ್-ಕ್ಲಬ್ನಲ್ಲಿ ದುರದೃಷ್ಟಕರ ಘಟನೆ ಸಂಭವಿಸಿದೆ. ಬೆಳಿಗ್ಗೆ 12.04 ಕ್ಕೆ ಪೊಲೀಸ್ ನಿಯಂತ್ರಣ ಕೊಠಡಿಗೆ ಬೆಂಕಿಯ ಬಗ್ಗೆ ಮಾಹಿತಿ ಸಿಕ್ಕಿತು, ಮತ್ತು ಪೊಲೀಸರು, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ಗಳನ್ನು ಸ್ಥಳಕ್ಕೆ ಧಾವಿಸಲಾಯಿತು” ಎಂದು ಸುದ್ದಿ ಸಂಸ್ಥೆ ಎಎನ್ಐ ಅವರನ್ನು…
ನವದೆಹಲಿ : *401# ನಂತರ ಪರಿಚಯವಿಲ್ಲದ ಮೊಬೈಲ್ ಸಂಖ್ಯೆಯನ್ನು ಡಯಲ್ ಮಾಡದಂತೆ ದೂರಸಂಪರ್ಕ ಇಲಾಖೆ (DoT) ಇತ್ತೀಚೆಗೆ ಟೆಲಿಕಾಂ ಚಂದಾದಾರರಿಗೆ ಎಚ್ಚರಿಕೆ ನೀಡಿದೆ, ಏಕೆಂದರೆ ಹಾಗೆ ಮಾಡುವುದರಿಂದ ಅವರು ಸಂಭಾವ್ಯ ಸೈಬರ್ ವಂಚನೆಗೆ ಒಳಗಾಗಬಹುದು. “ಇದು ನಾಗರಿಕರ ಮೊಬೈಲ್ನಲ್ಲಿ ಸ್ವೀಕರಿಸಿದ ಬೇಷರತ್ತಾದ ಕರೆ ಫಾರ್ವರ್ಡ್ ಮಾಡುವಿಕೆಯನ್ನು ಅಪರಿಚಿತ ಮೊಬೈಲ್ ಸಂಖ್ಯೆಗೆ ಸಕ್ರಿಯಗೊಳಿಸುತ್ತದೆ. ಇದು ವಂಚಕರು ಎಲ್ಲಾ ಒಳಬರುವ ಕರೆಗಳನ್ನು ಸ್ವೀಕರಿಸಲು ಅನುವು ಮಾಡಿಕೊಡುತ್ತದೆ ಮತ್ತು ವಂಚನೆಗೆ ಬಳಸಬಹುದು” ಎಂದು ದೂರಸಂಪರ್ಕ ಇಲಾಖೆ ತನ್ನ ಸಲಹೆಯಲ್ಲಿ ಉಲ್ಲೇಖಿಸಿದೆ. ಈ ಕರೆ ಫಾರ್ವರ್ಡ್ ಮಾಡುವ ಹಗರಣದ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ. ವಂಚನೆ ಹೇಗೆ ಕಾರ್ಯನಿರ್ವಹಿಸುತ್ತದೆ: ಯೋಜನೆ: ಸಾಮಾನ್ಯವಾಗಿ ಮೊಬೈಲ್ ಸೇವಾ ಪೂರೈಕೆದಾರರು ಅಥವಾ ಐಟಿ ವೃತ್ತಿಪರರಂತೆ ನಟಿಸುವ ವಂಚಕರು, ಅನುಮಾನಾಸ್ಪದ ಬಲಿಪಶುಗಳಿಗೆ ಕರೆ ಮಾಡಿ *401# ಅನ್ನು ಡಯಲ್ ಮಾಡಲು ಮನವೊಲಿಸುತ್ತಾರೆ ಮತ್ತು ನಂತರ ನಿರ್ದಿಷ್ಟ ಸಂಖ್ಯೆಯನ್ನು ಡಯಲ್ ಮಾಡುತ್ತಾರೆ. ಪರಿಣಾಮ: ಈ ಕೋಡ್ ಕರೆ ಫಾರ್ವರ್ಡ್ ಮಾಡುವಿಕೆಯನ್ನು ಸಕ್ರಿಯಗೊಳಿಸುತ್ತದೆ, ಎಲ್ಲಾ ಒಳಬರುವ…
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೊಜನೆಯನ್ನು ಜಾರಿಗೊಳಿಸುವ ಸಂಬಂಧ ಸರ್ಕಾರ ರಚಿಸಿರುವ ಸಮಿತಿಯು ಈಗಾಗಲೆ ವರದಿ ಸಿದ್ಧಪಡಿಸಿದ್ದು, ವರದಿಯನ್ನು ಒಂದು ವಾರದೊಳಗಾಗಿ ಸರ್ಕಾರಕ್ಕೆ ಸಲ್ಲಿಸುವ ಭರವಸೆ ನೀಡಲಾಗಿರುತ್ತದೆ. ಅಲ್ಲದೆ ರಾಜ್ಯ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ ಸೌಲಭ್ಯ ಮಂಜೂರು ಮಾಡಿ ಆದೇಶ ಹೊರಡಿಸಿರುವ ಸರ್ಕಾರಕ್ಕೆ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸುತ್ತದೆ ಎಂದು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಾಲತೇಶ ಮುದ್ದಜ್ಜಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ 2006 ರಿಂದ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್ಪಿಎಸ್) ಹೋಗಲಾಡಿಸಿ, ಈ ಹಿಂದಿನ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸುವ ಸಂಬಂಧ, ಒಪಿಎಸ್ ಜಾರಿಗೊಳಿಸಿರುವ ದೇಶದ ಇತರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸಮಿತಿ ರಚಿಸಿತ್ತು. ಸಮಿತಿಯು ಈ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ನೌಕರರ ಸಂಘ ಒತ್ತಾಯಿಸುತ್ತಲೆ ಬಂದಿತ್ತು. ಕಳೆದ…
ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳಿಗೆ ಪಂಚತಂತ್ರ 2.0 ತಂತ್ರಾಂಶದ ಮೂಲಕ ಅರ್ಜಿಗಳನ್ನು ಸ್ವೀಕಾರ ಮಾಡಲಾಗುತ್ತದೆ. ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯು ನಾಗರಿಕರಿಗೆ ವಿವಿಧ ಸೇವೆಗಳನ್ನು ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಮೂಲಕ ಸುಲಭವಾಗಿ ತಲುಪಿಸುವ ಗುರಿಯನ್ನು ಹೊಂದಿದೆ. ಆನ್ಲೈನ್ ಪೋರ್ಟಲ್ ಮೂಲಕ ಕೆಲವು ಸೇವೆಗಳು ಸಹ ಲಭ್ಯವಿವೆ. ಇದು ಸೇವೆಗಳ ವಿತರಣೆಯನ್ನು ಸಕ್ರಿಯಗೊಳಿಸಲು ಬ್ಯಾಕೆಂಡ್ ಕಂಪ್ಯೂಟರೀಕರಣವನ್ನು ಬಳಸುತ್ತದೆ ಮತ್ತು ಪಾರದರ್ಶಕತೆ ಮತ್ತು ನಿಯಮಗಳ ಏಕರೂಪದ ಅನ್ವಯವನ್ನು ಖಾತ್ರಿಗೊಳಿಸುತ್ತದೆ. ಸೇವೆಗಳ ಎಲೆಕ್ಟ್ರಾನಿಕ್ ವಿತರಣೆಯು ನಾಗರಿಕರಿಗೆ ತಮ್ಮ ಅರ್ಜಿಯ ಸ್ಥಿತಿ ಪರಿಶೀಲಿಸಲು ಹಾಗೂ ಸರ್ಕಾರಕ್ಕೆ ಅರ್ಜಿಗಳ ವಿಲೆವಾರಿಯನ್ನು ಮಾನಿಟರ್ ಮಾಡಲು ಅನುವು ಮಾಡಿಕೊಡುತ್ತದೆ. ಇದರಿಂದಾಗಿ ಪ್ರಕ್ರಿಯೆಯ ಒಟ್ಟಾರೆ ದಕ್ಷತೆ ಸುಧಾರಣೆಯಾಗಿದೆ ಮತ್ತು ಸಾರ್ವಜನಿಕರಿಗೆ ಸಕಾಲದಲ್ಲಿ ಪರಿಣಾಮಕಾರಿ ಸೇವೆಗಳನ್ನು ಒದಗಿಸಲು ಇಲಾಖೆಯನ್ನು ಶಕ್ತಗೊಳಿಸುತ್ತದೆ. ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯು ಜಾತಿ ಮತ್ತು ಆದಾಯ, ಭೂಮಿ ಮತ್ತು ಕೃಷಿಕರಿಗೆ ಸಂಬಂಧಿಸಿದ…
ಬೆಂಗಳೂರು : ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ- ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಉಲ್ಲೇಖಿತ ಸರ್ಕಾರದ ಆದೇಶದಲ್ಲಿ, ಖಜಾನೆ-2ರ ತಂತ್ರಾಂಶದ ಮುಖಾಂತರ ಪ್ರಾಯೋಗಿಕವಾಗಿ, ಏಪ್ರಿಲ್ 2025 ರಿಂದ ಮೂರು ತಿಂಗಳ ಕಾಲ ರಾಜ್ಯದ ಎಲ್ಲಾ ಹಣ ಸೆಳೆಯುವ ಮತ್ತು ಬಟವಾಡೆ ಅಧಿಕಾರಿಗಳು (ಡಿಡಿಓ), ವಯೋನಿವೃತ್ತಿ /ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿಗೆ ಸಂಬಂಧಿಸಿದ ಅರ್ಜಿಗಳನ್ನು ಆನ್ಲೈನ್ ನಲ್ಲಿ ದಾಖಲಿಸಿ ಮಂಜೂರು ಮಾಡುವುದು ಮತ್ತು ಭೌತಿಕವಾಗಿ ಸಿದ್ಧಪಡಿಸಿರುವ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಮಹಾಲೇಖಪಾಲರಿಗೆ ನಿಯಮಾನುಸಾರ ಸಲ್ಲಿಸಲು ಆದೇಶಿಸಿದೆ. ಪ್ರಾಯೋಗಿಕ ಹಂತವು ಯಶಸ್ವಿಯಾದಲ್ಲಿ, ಖಜಾನೆ-2ರ ತಂತ್ರಾಂಶದ ಮುಖಾಂತರ ಪಿಂಚಣಿ ಅರ್ಜಿಗಳನ್ನು ಮಹಾಲೇಖಪಾಲರಿಗೆ ಸಲ್ಲಿಸಲು ಮುಂದುವರೆಸುವುದು ಎಂದು ಸಹ ಆದೇಶಿಸಿದೆ. 2. ಆದಾಗ್ಯೂ, ಸರ್ಕಾರ ನೀಡಿದ ಸ್ಪಷ್ಟ ಸೂಚನೆಗಳ ಹೊರತಾಗಿಯೂ, ಗಮನಾರ್ಹ ಸಂಖ್ಯೆಯ ಡಿಡಿಓಗಳು ಪಿಂಚಣಿ ದಾಖಲೆಗಳನ್ನು ಭೌತಿಕವಾಗಿ ಸಲ್ಲಿಸುವುದನ್ನು ಮುಂದುವರೆಸಿರುವುದನ್ನು ಗಮನಿಸಲಾಗಿದೆ. ಇದು…
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಹೊಸ ಸದಸ್ಯರ ಸೇರ್ಪಡೆ * ಪೋಟೋ ಬದಲಾವಣೆ * ಹೆಸರು ಡಿಲೆಟ್ * ಅಂಗಡಿ. ನಂ. ಬದಲಾವಣೆ * ಹೆಸರು ತಿದ್ದುಪಡಿ * ಮುಖ್ಯಸ್ಥರ ಬದಲಾವಣೆ ಅರ್ಜಿ ಸಲ್ಲಿಸಲು ದಾಖಲಾತಿಗಳು 1. ಸದಸ್ಯರ ಆಧಾರ ಕಾರ್ಡ್ ಕಡ್ಡಾಯ 2. ಸದಸ್ಯರ ಜಾತಿ ಮತ್ತು ಆದಾಯ…
ಬೆಂಗಳೂರು: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 4,500 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ರೆನಾಲ್ಟ್ ನಿಸ್ಸಾನ್ ಟೆಕ್ನಾಲಜಿ ಮತ್ತು ಬಿಸಿನೆಸ್ ಸೆಂಟರ್ ಇಂಡಿಯಾ ಸಂಸ್ಥೆಯ ಸಹಯೋಗದಲ್ಲಿ ಬೆಂಗಳೂರು ನಗರ ಪೊಲೀಸ್ ಘಟಕಕ್ಕೆ ‘ಹೈಜಿನ್ ಆನ್ ಗೋ’ ವಾಹನಗಳ ಹಸ್ತಾಂತರ ಹಾಗೂ ಪೊಲೀಸ್ ಇಲಾಖೆಯ ‘ಪ್ರಗತಿಯ ಸ್ತಂಭಗಳು’ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಒಳ ಮೀಸಲಾತಿ ಪ್ರಕ್ರಿಯೆ ಕಾರಣ ಸುಮಾರು 75 ಸಾವಿರ ಹುದ್ದೆ ಭರ್ತಿ ಸಾಧ್ಯವಾಗಿರಲಿಲ್ಲ. ಇದೀಗ ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ನಿರ್ಧಾರ ಅಂತಿಮವಾದಲ್ಲಿ ಎರಡನೇ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯದಲ್ಲಿ 4500 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ನೇಮಕಾತಿ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಇನ್ನು ಬೆಂಗಳೂರು ನಗರದಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನ ಆಯವ್ಯಯ ಕಂಡಿಕ ಸಂಖ್ಯೆ 111(i) ರಂತೆ ರಾಜ್ಯದಲ್ಲಿ, ಪೂರ್ವ ಪ್ರಾಥಮಿಕ ತರಗತಿಗಳನ್ನು(LKG ಮತ್ತು UKG) ಪ್ರಾರಂಭಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಈ ಆಯವ್ಯಯ ಭಾಷಣದ ಘೋಷಣೆಯ ಅನ್ವಯ ಸರ್ಕಾರದ ಆದೇಶ ಸಂಖ್ಯೆ: ಇಪಿ176 ಪಿಬಿಎಸ್ 2025, ಬೆಂಗಳೂರು, ದಿನಾಂಕ:14.11.2025ರ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ 111(1)ರಲ್ಲಿ ಘೋಷಿಸಿರುವಂತೆ ಅನುಬಂಧ- 1 ರಂತೆ ರಾಜ್ಯದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 1105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ ಯೋಜನೆಯಡಿ 1126 ಶಾಲೆಗಳು ಮತ್ತು 1699 ಮ್ಯಾಗ್ನೆಟ್ ಶಾಲೆಗಳು ಸೇರಿದಂತೆ ಒಟ್ಟಾರೆ 4056 ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ 2025-26ನೇ ಸಾಲಿಗೆ LKG ಹಾಗೂ 2026-27ನೇ ಸಾಲಿಗೆ UKG ಪ್ರತ್ಯೇಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಿದೆ. ಪೂರ್ವ ಪ್ರಾಥಮಿಕ ತರಗತಿಗಳನ್ನು ನಿರ್ವಹಿಸಲು ಸೂಚನೆಗಳು ಉಲ್ಲೇಖ(3)ರನ್ವಯ ಆಯ್ಕೆಯಾದ ಶಾಲೆಗಳಲ್ಲಿ, 2025-26ನೇ ಸಾಲಿಗೆ ಪೂರ್ವ ಪ್ರಾಥಮಿಕ…














