Subscribe to Updates
Get the latest creative news from FooBar about art, design and business.
Author: kannadanewsnow57
GOOD NEWS : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 16,500 ಸರ್ಕಾರಿ ಶಾಲೆಗಳಲ್ಲಿ `ಸ್ಮಾರ್ಟ್ ಕ್ಲಾಸ್’.!
ಬೆಂಗಳೂರು: ರಾಜ್ಯದ 16,500 ಸರ್ಕಾರಿ ವಸತಿ ಶಾಲೆಗಳಿಗೆ ಹೊಸ ಪಾತ್ರೆ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳ ಕಲಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗುತ್ತದೆ. ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವುದಾಗಿಯೂ ಹೇಳಿದ್ದಾರೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಾಗಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನವರು ಇಂದು ಶನಿವಾರ ಉದ್ಘಾಟಿಸಿದರು. ಈ ಬಳಿಕ ಮಾತನಾಡಿದರು. ಆರೋಗ್ಯದ ದೃಷ್ಟಿಯಿಂದ ಹೊಸ ಅಡುಗೆ ಪಾತ್ರೆಗಳು: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು. ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ನೀಡಿ ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಆಹಾರ ತಯಾರಿಸುವುದು ಒಳ್ಳೆಯದಲ್ಲ, ಹಾಗಾಗಿ ಹಳೆಯ ಪಾತ್ರೆಗಳನ್ನ ಬದಲಾಯಿಸಲಾಗುವುದು…
ಬೆಂಗಳೂರು : 22.04.2025ರಂದು ವಿಶ್ವ ಭೂ ದಿನ ಆಚರಿಸುವ ಕುರಿತು. (World Earth day Celebration) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಪ್ರತಿ ವರ್ಷವು ವಿಶ್ವದಾದ್ಯಂತ ಏಪ್ರಿಲ್ -22 ರಂದು ಪರಿಸರ ಸಂರಕ್ಷಣೆಗಾಗಿ ” ವಿಶ್ವ ಭೂ ದಿನ’ವನ್ನು ಆಚರಿಸಲಾಗುತ್ತಿದೆ. ಭೂಮಿ ಮನುಷ್ಯ ಮಾತ್ರವಲ್ಲದೆ, ಎಷ್ಟೋ ಜೀವ ಸಂಕುಲೆಗಳು, ಸೂಕ್ಷಾಣುಗಳು, ಸಸ್ಯಗಳನ್ನು ತನ್ನ ಒಡಲಿನಲ್ಲಿ ತುಂಬಿಕೊಂಡು ಸಲಹುತ್ತಿದೆ. ಆದರೆ ಈ ಭೂಮಿಯಲ್ಲಿ ಇರುವ ಜೀವಿಗಳಲ್ಲಿ ಮನುಷ್ಯನಿಂದ ಭೂಮಿಗೆ ಕಂಟಕವಾಗಿದೆ. ಭೂಮಿಯ ಮೇಲೆ ಇಂದು ಪ್ಲಾಸ್ಟಿಕ್ ಬಳಕೆ, ತಾಪಮಾನ ಏರಿಕೆ, ಮರಳುಗಾಡು ನಿರ್ಮಾಣವಾಗುತ್ತಿರುವುದು. ಜನಸಂಖ್ಯೆ ಹೆಚ್ಚಳ, ಕಾಡುನಾಶ ಹೀಗೆ ಅನೇಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆದರೆ ನಾವು ಭೂಮಿಯನ್ನು ಉಳಿಸುವ ಕೆಡೆಗೆ ಯೋಚಿಸುತ್ತಿಲ್ಲ. ಈ ಕುರಿತು. ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. 2025 ರ ಭೂ ದಿನದ ಥೀಮ್ “ನಮ್ಮ ಶಕ್ತಿ, ನಮ್ಮ ಗ್ರಹ”, ಈ ಥೀಮ್ ಹವಾಮಾನ ಬದಲಾವಣೆಯನ್ನು ಎದುರಿಸುವಲ್ಲಿ ಮತ್ತು ಸುಸ್ಥಿರ ಭವಿಷ್ಯವನ್ನು ಸಾಧಿಸುವಲ್ಲಿ…
ಬೆಂಗಳೂರು : ದಿನಾಂಕ: 15-04-2025 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳು, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕಿನ ಅಧಿಕಾರಿಗಳ ಜೊತೆ ವೇತನ ಪ್ಯಾಕೇಜ್ ಖಾತೆಗೆ ಸಂಬಂಧಿಸಿದಂತೆ ಈ ಕೆಳಕಂಡ ವಿಷಯಗಳ ಕುರಿತು ಸಭೆ ನಡೆಸಲಾಯಿತು. ಕಡಿಮೆ ಬಡ್ಡಿ ದರದಲ್ಲಿ ಗೃಹ ನಿರ್ಮಾಣ ಸಾಲ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಕಡಿಮೆ ಬಡ್ಡಿ ದರದಲ್ಲಿ ವಾಹನ ಸಾಲ ಕಡಿಮೆ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ಓವರ್ ಡ್ರಾಫ್ಟ್ ಸೌಲಭ್ಯ ಆರೋಗ್ಯ ವಿಮೆ ಗೃಹ ಸಾಲ ವರ್ಗಾವಣೆ ಬಗ್ಗೆ ಸ್ವೀಪ್ ಇನ್-ಸ್ವೀಪ್ ಓಟ್ ಅಕೌಂಟ್ > ಮೇಲ್ಕಂಡ ಸಾಲ ಸೌಲಭ್ಯಗಳನ್ನು ಕಡಿಮೆ ಬಡ್ಡಿ ದರದಲ್ಲಿ ನೀಡಲು ಮತ್ತು 1.00 ಕೋಟಿ ಅಪಘಾತ ವಿಮಾ ಯೋಜನೆ ಹಾಗೂ ವೈದ್ಯಕೀಯ ವಿಮೆ, ವಾರ್ಷಿಕ ಆರೋಗ್ಯ ತಪಾಸಣೆ ಹಾಗೂ ಇನ್ನಿತರೆ ಉಚಿತ ಸೇವಾ ಸೌಲಭ್ಯಗಳ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಯಿತು. ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವ ಹಾಗೂ ಉಚಿತವಾಗಿ…
ಬೆಂಗಳೂರು : ಪ್ರಸಕ್ತ ಹಣಕಾಸು ವರ್ಷದಲ್ಲಿ ಟಿಸಿಎಸ್ 42,000 ಹೊಸಬರ ನೇಮಕ ಮಾಡಿಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದ ಬೆನ್ನಲ್ಲೇ, ಐಟಿ ದೈತ್ಯ ಸಂಸ್ಥೆಗಳಾದ ಇನ್ಫೋಸಿಸ್, ವಿಪ್ರೊ ಕೂಡ ಹೊಸಬರನ್ನು ನೇಮಕ ಮಾಡಿಕೊಳ್ಳುವುದಾಗಿ ಹೇಳಿವೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಇನ್ಫೋಸಿಸ್ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ) ಜಯೇಶ್ ಸಂಘರಾಜ್ಯ ಅವರು, ಈ ಹಣಕಾಸು ವರ್ಷದಲ್ಲಿ 20,000ಕ್ಕೂ ಅಧಿಕ ಪ್ರಶರ್ಗಳನ್ನು ನೇಮಿಸಿಕೊಳ್ಳಲು ಯೋಜಿಸಿದೆ. 2025-26ನೇ ಸಾಲಿಗೆ ಒಟ್ಟು 20 ಸಾವಿರ ಅಭ್ಯರ್ಥಿಗಳು ಸಂಸ್ಥೆಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಐಟಿ ದೈತ್ಯ ಕಂಪನಿಗಳಲ್ಲಿ ಒಂದಾಗಿರುವ ವಿಪ್ರೊ ಕೂಡ ಪ್ರಸಕ್ತ ವರ್ಷ 10,000 ನೇಮಕ ನಡೆಸುವುದಾಗಿ ಹೇಳಿದೆ. ಐಟಿ ಸೇವೆಗಳ ದೈತ್ಯ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) 2026 ರ ಹಣಕಾಸು ವರ್ಷದಲ್ಲಿ 42,000 ಫ್ರೆಶರ್ಗಳನ್ನು ನೇಮಿಸಿಕೊಳ್ಳುವ ಯೋಜನೆಯನ್ನು ಘೋಷಿಸಿದೆ. ಮಾರ್ಚ್ 31, 2025 ರ ವೇಳೆಗೆ ಕಂಪನಿಯ ಉದ್ಯೋಗಿಗಳ ಸಂಖ್ಯೆ 6,07,979 ರಷ್ಟಿದ್ದು, ನಾಲ್ಕನೇ ತ್ರೈಮಾಸಿಕದಲ್ಲಿ 625 ನಿವ್ವಳ ಸೇರ್ಪಡೆಯಾಗಿದೆ. ಟಿಸಿಎಸ್ 2025ರ ಹಣಕಾಸು ವರ್ಷದಲ್ಲಿ…
ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿಯಾಗಿದ್ದು, ಭಾರೀ ದುರಂತವೊಂದು ತಪ್ಪಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಡಿಕ್ಕಿ ರಭಸಕ್ಕೆ ಟಿಟಿ ವಾಹನದ ಟಾಪ್ ನಜ್ಜುಗುಜ್ಜಾಗಿದೆ. ಸಣ್ಣಪುಟ್ಟ ಗಾಯಗಳಿಂದ ಟಿಟಿ ಚಾಲಕ ಪಾರಾಗಿದ್ದಾರೆ. ಕೂದಲೆಳೆ ಅಂತರದಲ್ಲಿ ಭಾರಿ ದುರಂತ ತಪ್ಪಿದೆ. ಕೆಲ ದಿನಗಳಿಂದ ಕೆಟ್ಟು ನಿಂತಿದ್ದ ಇಂಡಿಗೋ ವಿಮಾನ. ಚಾಲಕನ ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ. ಟಿಟಿಯಲ್ಲಿ ಪ್ರಯಾಣಿಕರನ್ನು ಬಿಟ್ಟು ಬರುವಾಗ ಈ ಘಟನೆ ನಡೆದಿದೆ. ಸಿಬ್ಬಂದಿ ಬಿಟ್ಟು ಬರುವಾಗ ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದೆ. ಘಟನೆಯ ಬಗ್ಗೆ ನಾಗರಿಕ ವಿಮಾನಯಾನ ಇಲಾಖೆಯಿಂದ ತನಿಖೆ ಕೈಗೊಳ್ಳಲಾಗಿದೆ.
ಬೆಂಗಳೂರು: ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. 25 ವರ್ಷದ ಸ್ವಾತಿ ಮೃತಪಟ್ಟ ಬಾಣಂತಿಯಾಗಿದ್ದು, ವಾಣಿವಿಲಾಸ ಆಸ್ಪತ್ರೆಯ ವೈದ್ಯರ ವಿರುದ್ಧ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಹೆರಿಗೆಗಾಗಿ ಸ್ವಾತಿ ಆಸ್ಪತ್ರೆಗೆ ದಾಖಲಾಗಿದ್ದು, ನಂತರ ನಾರ್ಮಲ್ ಡೆಲಿವರಿ ಆಗುತ್ತದೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ನಂತರ ಸಿಸೇರಿಯನ್ ಮಾಡಬೇಕೆಂದು ವೈದ್ಯರು ತಿಳಿಸಿ ಸಿಸೇರಿಯನ್ ಮಾಡಿ ಮಗುವನ್ನು ಹೊರಗೆ ತೆಗೆದಿದ್ದಾರೆ ಸಿಸೇರಿಯನ್ ವೇಳೆ ಸ್ವಾತಿಯ ಕರುಳಿಗೆ ಡ್ಯಾಮೇಜ್ ಆಗಿದ್ದು, ಅದನ್ನು ಸರಿಪಡಿಸುವ ಪ್ರಯತ್ನ ನಡೆದಿದೆ. ಆರು ದಿನ ನೋವು ತಿಂದು ಸ್ವಾತಿ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಸ್ವಾತಿ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ಸುರಕ್ಷತೆಯನ್ನು ಸುಧಾರಿಸಲು ಮತ್ತು ಸಂಚಾರ ಕಾನೂನು ಜಾರಿಯಲ್ಲಿ ನ್ಯಾಯಯುತತೆಯನ್ನು ಖಚಿತಪಡಿಸಿಕೊಳ್ಳಲು ಗ್ರಾಹಕ ವ್ಯವಹಾರಗಳ ಇಲಾಖೆಯು 2011 ರ ಕಾನೂನು ಮಾಪನಶಾಸ್ತ್ರ (ಸಾಮಾನ್ಯ) ನಿಯಮಗಳ ಅಡಿಯಲ್ಲಿ ಹೊಸ ನಿಯಮಗಳನ್ನು ಪರಿಚಯಿಸಿದೆ. ಜುಲೈ 1, 2025 ರಿಂದ, ಈ ನಿಯಮಗಳು ಕೈಗಾರಿಕೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳಿಗೆ ಹೊಸ ಮಾನದಂಡಗಳನ್ನು ಅನುಸರಿಸಲು ಸಾಕಷ್ಟು ಸಮಯವನ್ನು ನೀಡುತ್ತವೆ. ವಾಹನ ಮಾಲೀಕರಿಗೆ ಇದು ಏಕೆ ಮುಖ್ಯವಾಗಿದೆ? ವೇಗದ ದಂಡವು ನ್ಯಾಯಯುತವಾಗಿದೆಯೇ ಎಂದು ನೀವು ಎಂದಾದರೂ ಪ್ರಶ್ನಿಸಿದ್ದೀರಾ? ಈ ಹೊಸ ನಿಯಮಗಳನ್ನು ನೀವು ನಿಜವಾದ ಉಲ್ಲಂಘನೆಗಳಿಗೆ ಮಾತ್ರ ದಂಡ ವಿಧಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ವಿನ್ಯಾಸಗೊಳಿಸಲಾಗಿದೆ. ಈ ಮಾರ್ಗಸೂಚಿಗಳೊಂದಿಗೆ, ಪ್ರಮಾಣೀಕೃತ, ನಿಖರ ಮತ್ತು ಟ್ಯಾಂಪರಿಂಗ್-ಪ್ರೂಫ್ ವೇಗ ಅಳತೆ ಸಾಧನಗಳನ್ನು ರಸ್ತೆಗಳಲ್ಲಿ ಮಾತ್ರ ಬಳಸಲಾಗುತ್ತದೆ. ಇದರರ್ಥ ಕಡಿಮೆ ಅನ್ಯಾಯದ ದಂಡಗಳು ಮತ್ತು ಸಂಚಾರ ಕಾನೂನುಗಳನ್ನು ಹೇಗೆ ಜಾರಿಗೊಳಿಸಲಾಗುತ್ತದೆ ಎಂಬುದರಲ್ಲಿ ಹೆಚ್ಚು ಪಾರದರ್ಶಕತೆ. ವಿಶ್ವಾಸಾರ್ಹ ತಂತ್ರಜ್ಞಾನದೊಂದಿಗೆ ವೇಗ ಮಿತಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿದುಕೊಂಡು ನೀವು ಹೆಚ್ಚು ವಿಶ್ವಾಸದಿಂದ ಚಾಲನೆ ಮಾಡಬಹುದು. ಹೊಸ…
ಬೆಂಗಳೂರು : 2024ರ ಖಾರೀಫ್ ಹಾಗೂ 2023-24ನೇ ಸಾಲಿನ ರಬಿ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿರುವ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ಅಗ್ರ 3 ಸ್ಥಾನದಲ್ಲಿರುವ ದೇಶದ ಮೂರು ಜಿಲ್ಲೆಗಳ ಪೈಕಿ ರಾಜ್ಯದ ಹಾವೇರಿ ಮತ್ತು ಕೊಪ್ಪಳ ಸ್ಥಾನ ಪಡೆದಿರುವುದು ವೈಯಕ್ತಿಕವಾಗಿ ಸಂತಸವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಈ ಪ್ರಶಸ್ತಿಯನ್ನು ನಮ್ಮೆಲ್ಲ ಕೃಷಿ ಅಧಿಕಾರಿಗಳು ಹಾಗೂ ನಾಡಿನ ಅನ್ನದಾತರಿಗೆ ಅರ್ಪಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ನವದೆಹಲಿ : ಆರೋಗ್ಯ ವಿಮಾ ಪ್ರಕ್ರಿಯೆಯನ್ನು ಸುಗಮಗೊಳಿಸುವ ಮಹತ್ವದ ಕ್ರಮದಲ್ಲಿ, ವಿಮಾದಾರರು ಒಂದು ಗಂಟೆಯೊಳಗೆ ನಗದು ರಹಿತ ಅಧಿಕಾರ ವಿನಂತಿಗಳನ್ನು ಅನುಮೋದಿಸಬೇಕು ಮತ್ತು ಮೂರು ಗಂಟೆಗಳಲ್ಲಿ ಅಂತಿಮ ಕ್ಲೈಮ್ಗಳನ್ನು ಇತ್ಯರ್ಥಪಡಿಸಬೇಕು ಎಂದು ಕೇಂದ್ರವು ಆದೇಶಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಪ್ರಸ್ತಾವಿತ ಬದಲಾವಣೆಗಳು ಗ್ರಾಹಕರ ವಿಶ್ವಾಸವನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಆರೋಗ್ಯ ವಿಮಾ ನುಗ್ಗುವಿಕೆಯನ್ನು ಸುಧಾರಿಸಲು ವಿಶಾಲ ಪ್ರಯತ್ನಗಳ ಭಾಗವಾಗಿದೆ. ವೇಗವಾದ ಅನುಮೋದನೆಗಳ ಜೊತೆಗೆ, ಸರಳೀಕೃತ, ಪ್ರಮಾಣೀಕೃತ ಕ್ಲೈಮ್ ಮತ್ತು ಅರ್ಜಿ ನಮೂನೆಗಳನ್ನು ವಿನ್ಯಾಸಗೊಳಿಸಲು ವೃತ್ತಿಪರ ಏಜೆನ್ಸಿಯನ್ನು ಬಳಸಿಕೊಳ್ಳಬಹುದು. ಕ್ಲೈಮ್ಗಳ ತ್ವರಿತ ಮತ್ತು ಪೂರ್ಣ ಇತ್ಯರ್ಥವನ್ನು ಖಚಿತಪಡಿಸಿಕೊಳ್ಳುವಾಗ, ಗ್ರಾಹಕರು ಅರ್ಥಮಾಡಿಕೊಳ್ಳಲು ಮತ್ತು ಭರ್ತಿ ಮಾಡಲು ಈ ಫಾರ್ಮ್ಗಳು ಸುಲಭವಾಗುತ್ತವೆ. ವಿಮಾ ಪ್ರವೇಶವನ್ನು ವಿಸ್ತರಿಸುವ ಪ್ರಯತ್ನಗಳು “ಕಾರ್ಯಾಚರಣೆಗಳನ್ನು ಸುಗಮಗೊಳಿಸುವ ವಿಮಾ ವಲಯದಲ್ಲಿ ಬಿಐಎಸ್ ಮಾದರಿಯ ಮಾನದಂಡಗಳನ್ನು ಹೊಂದಿರುವುದು ಇದರ ಉದ್ದೇಶವಾಗಿದೆ” ಎಂದು ಅಧಿಕಾರಿಯೊಬ್ಬರು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ಅನ್ನು ಉಲ್ಲೇಖಿಸಿ ಹೇಳಿದರು. 2022 ರ ನವೆಂಬರ್ನಲ್ಲಿ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ…
ಬೆಂಗಳೂರು : ಶಾಸಕ ಮುನಿರತ್ನಗೆ ಮತ್ತೊಂದು ಶಾಕ್, ಜಾತಿ ನಿಂದನೆ ಪ್ರಕರಣ ಸಂಬಂಧ ಅವರನ್ನು ಪ್ರಾಸಿಕ್ಯೂಷನ್ ಗೆ ಒಳಪಡಿಸಲು ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಅನುಮತಿ ನೀಡಿದ್ದಾರೆ. ಶಾಸಕ ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್ ಸಂಬಂಧ ಒಳಾಡಳಿತ ಇಲಾಖೆ ಆದೇಶ ಹೊರಡಿಸಿದೆ. ಜಾತಿ ನಿಂದನೆ ಆರೋಪ ಸಂಬಂಧ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಐಡಿಯ ಎಸ್ ಐಟಿಗೆ ವಹಿಸಲಾಗಿತ್ತು. ತನಿಖೆ ನಡೆ ಸಿದ್ದ ಎಸ್ಐಟಿ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿತ್ತು. ಬಳಿಕ ಮುನಿರತ್ನ ಶಾಸಕರಾಗಿರುವ ಕಾರಣ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಸ್ಪೀಕರ್ ಮೊರೆ ಹೋಗಿತ್ತು. ಇದೀಗ ಸ್ಪೀಕರ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.