Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ವೃತ್ತಿಪರ ಕೋರ್ಸ್ಗಳ (Professional Courses) ಪ್ರವೇಶಾತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸಿಹಿ ಸುದ್ದಿ ಹೊರಬಿದ್ದಿದೆ. ಸರ್ಕಾರಿ ಕೋಟಾದ ಸೀಟುಗಳನ್ನು ಪಡೆದ ನಂತರವೂ ಕೆಲವು ಖಾಸಗಿ ಕಾಲೇಜುಗಳು ಕಾನೂನು ಬಾಹಿರವಾಗಿ ಹೆಚ್ಚಿನ ಶುಲ್ಕಕ್ಕೆ ಬೇಡಿಕೆ ಇಡುತ್ತಿರುವ ದೂರುಗಳು ಕೇಳಿಬರುತ್ತಿವೆ. ಇದಕ್ಕೆ ಬ್ರೇಕ್ ಹಾಕಲು ಶುಲ್ಕ ನಿಯಂತ್ರಣ ಸಮಿತಿ (Fee Regulatory Committee) ಈಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಸರ್ಕಾರ ನಿಗದಿಪಡಿಸಿದ ಮೊತ್ತಕ್ಕಿಂತ ಒಂದು ರೂಪಾಯಿ ಜಾಸ್ತಿ ಕೇಳಿದರೂ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿದ್ಯಾರ್ಥಿಗಳು ನೇರವಾಗಿ ದೂರು ದಾಖಲಿಸಬಹುದು ಎಂದು ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ. ಶ್ರೀನಿವಾಸಗೌಡ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಯಾರೆಲ್ಲಾ ದೂರು ನೀಡಬಹುದು? ಇದು ಕೇವಲ ಹೊಸದಾಗಿ ಅಡ್ಮಿಷನ್ ಪಡೆಯುತ್ತಿರುವವರಿಗೆ ಮಾತ್ರವಲ್ಲ! ಮುಂಬರುವ ದಿನಗಳಲ್ಲಿ ವೃತ್ತಿಪರ ಕೋರ್ಸ್ಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳು. ಈಗಾಗಲೇ ಕಾಲೇಜು ಸೇರಿ, ಹೆಚ್ಚಿನ ಶುಲ್ಕದ ಕಿರುಕುಳ ಅನುಭವಿಸುತ್ತಿರುವ ಹಳೇ ವಿದ್ಯಾರ್ಥಿಗಳು. ಯಾವೆಲ್ಲಾ ಕಾಲೇಜುಗಳಿಗೆ ಇದು ಅನ್ವಯ? ಕರ್ನಾಟಕ ಪರೀಕ್ಷಾ ಪ್ರಾಧಿಕಾರದ…
ಬೆಂಗಳೂರು :ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈಗ ಎಲ್ಲರ ಕಣ್ಣು ಬೆಂಗಳೂರಿನ ‘ಕಾವೇರಿ’ ನಿವಾಸದತ್ತ ನೆಟ್ಟಿದೆ. ಸಿಎಂ ಬದಲಾವಣೆ ವದಂತಿಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವೆ ನಾಳೆ ಒಂದು ಮಹತ್ವದ ಆತಿಥ್ಯ ಕೂಟ ನಿಗದಿಯಾಗಿದೆ. ನಾಳೆ (ಮೇ 28) ಮುಂಜಾನೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ವಿಶೇಷ ಉಪಹಾರ ಕೂಟವನ್ನು ಆಯೋಜಿಸಲಾಗಿದೆ. ಈ ಹೈಪ್ರೊಫೈಲ್ ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಲಿದ್ದಾರೆ. ರಾಜ್ಯ ರಾಜಕೀಯದ ವರ್ತಮಾನದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ಇಬ್ಬರು ನಾಯಕರ ಮುಖಾಮುಖಿ ತೀವ್ರ ಕುತೂಹಲ ಕೆರಳಿಸಿದೆ. ಕಳೆದ ಕೆಲವು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ವಲಯದಲ್ಲಿ ನಾಯಕತ್ವ ಬದಲಾವಣೆಯ ಊಹಾಪೋಹಗಳು ದಟ್ಟವಾಗಿವೆ. ಇಂತಹ ಬಿಗುವಿನ ವಾತಾವರಣದ ನಡುವೆ ಇಬ್ಬರೂ ನಾಯಕರು ಒಟ್ಟಿಗೆ ಕುಳಿತು ಉಪಹಾರ ಸೇವಿಸುತ್ತಾ ಯಾವ ವಿಷಯದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂಬುದು ಸದ್ಯದ…
ಬೆಂಗಳೂರು: 2026ನೇ ಸಾಲಿನ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಯ ಮೊದಲನೇ ಸುತ್ತಿನ ಸೀಟು ಹಂಚಿಕೆಯ ನೈಜ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಕಟಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳ ಪ್ರವೇಶಕ್ಕಾಗಿ ಈ ಪ್ರಕ್ರಿಯೆ ನಡೆದಿದೆ. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. ಯಾವ ಶಾಲೆಗಳು? ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ|| ಬಿ.ಆರ್. ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರತ್ನ, ಗಾಂಧಿತತ್ವ ಹಾಗೂ ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳು. ಅಭ್ಯರ್ಥಿಗಳು ನಮೂದಿಸಿದ ಇಚ್ಛೆ/ಆಯ್ಕೆಗಳನ್ನು (Options) ಪರಿಗಣಿಸಿ, ಸಂಪೂರ್ಣವಾಗಿ ಮೆರಿಟ್ ಆಧಾರದ ಮೇಲೆ ನಿಯಮಾನುಸಾರ ಈ ಸೀಟು ಹಂಚಿಕೆ ಮಾಡಲಾಗಿದೆ. ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ದಿನಾಂಕ 30-05-2026 ರೊಳಗಾಗಿ ಸಂಬಂಧಪಟ್ಟ…
ತಿರುವನಂತಪುರಂ: ಕೇರಳಂ ಮಾಜಿ ಮುಖ್ಯಮಂತ್ರಿ ಹಾಗೂ ಪ್ರಸ್ತುತ ವಿರೋಧ ಪಕ್ಷದ ನಾಯಕರಾಗಿರುವ (LoP) ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ಕೇರಳದ ಒಟ್ಟು 10 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಇಂದು ಏಕಕಾಲದಲ್ಲಿ ದಾಳಿ ನಡೆಸಿದೆ. ಕೊಚ್ಚಿನ್ ಮಿನರಲ್ಸ್ ಆಂಡ್ ರುಟೈಲ್ ಲಿಮಿಟೆಡ್ (CMRL) ಸಂಸ್ಥೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ಶೋಧ ಕಾರ್ಯ ನಡೆಯುತ್ತಿದ್ದು, ಪಿಣರಾಯಿ ವಿಜಯನ್ ಅವರ ಪುತ್ರಿಯ ವಿರುದ್ಧ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿಎಂಆರ್ಎಲ್ (CMRL) ಕಂಪನಿಯಿಂದ ಪಿಣರಾಯಿ ವಿಜಯನ್ ಅವರ ಪುತ್ರಿಗೆ ನಿಯಮಬಾಹಿರವಾಗಿ ಹಣ ಸಂದಾಯವಾಗಿದೆ ಎಂಬ ಆರೋಪದ ಮೇಲೆ ತನಿಖೆ ತೀವ್ರಗೊಂಡಿದೆ. ಈ ದಾಳಿಯ ಕುರಿತು ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳಿಂದ ಅಧಿಕೃತ ಪ್ರಕಟಣೆ ಹಾಗೂ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ. ಕೇರಳ ರಾಜಕೀಯ ವಲಯದಲ್ಲಿ ಈ ಬೆಳವಣಿಗೆ ಭಾರೀ ಸಂಚಲನ ಮೂಡಿಸಿದೆ. https://twitter.com/ANI/status/2059464032843952550?s=20
ರೈತರು ಕೃಷಿ ಪರಿಕರಗಳನ್ನು ಖರೀದಿಸುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕೃಷಿ ಇಲಾಖೆಯಿಂದ ರೈತರಿಗೆ ಸಲಹೆಗಳನ್ನು ನೀಡಲಾಗಿದೆ. ಈ ವರ್ಷದ ಮುಂಗಾರು ಹಂಗಾಮು ಉತ್ತಮವಾಗಿ ಪ್ರಾರಂಭಗೊಂಡಿದೆ. ಇಲ್ಲಿಯವರೆಗೆ ವಾಡಿಕೆ ಮಳೆಯ ಪ್ರಮಾಣ 64.30 ಮಿ.ಮೀ. ಇದ್ದು, ವಾಸ್ತವಿಕ ಮಳೆಯ ಪ್ರಮಾಣ 92.00 ಮಿ.ಮೀ. ದಾಖಲಾಗಿದೆ. 43% ಹೆಚ್ಚಿನ ಮಳೆಯಾಗಿದ್ದು, ಮಳೆಯು ಪ್ರಾರಂಭವಾಗಿರುವುದರಿಂದ ಈ ಹಂಗಾಮು ಆಶಾದಾಯಕವಾಗಿರುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ರೈತರು ಕೆಲವು ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಅಧೀಕೃತ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟ ಮಳಿಗೆಗಳಿಂದ ಮಾತ್ರ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಖರೀದಿಸಬೇಕು. ಬಿಡಿ (ಲೂಸ್) ಬಿತ್ತನೆ ಬೀಜಗಳನ್ನು ಖರೀದಿಸಬಾರದು. ಖರೀದಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಬಿಲ್ ಪಡೆದುಕೊಳ್ಳಬೇಕು ಹಾಗೂ ಬಿಲ್ಲಿನಲ್ಲಿ ಉಲ್ಲೇಖಿತ ವಿವರಗಳನ್ನು ಪರಿಶೀಲಿಸಬೇಕು. ಬಿಲ್ನಲ್ಲಿ ಲಾಟ್ ಸಂಖ್ಯೆ ಅಥವಾ ಬ್ಯಾಚ್ ಸಂಖ್ಯೆ ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ತಮ್ಮ ಜಮೀನಿನ ಸ್ವರೂಪಕ್ಕೆ (ಖುಷ್ಕಿ ಅಥವಾ ನೀರಾವರಿ) ಅನುಗುಣವಾಗಿ ಶಿಫಾರಸ್ಸು ಮಾಡಿದ ತಳಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ರೈತರು…
ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು. ನಗರದ ನೂತನ ಜಿಲ್ಲಾಡಳಿತ ಭವನದ ಕೆಸ್ವಾನ್ ಹಾಲ್ ನಲ್ಲಿ ಮಂಗಳವಾರ ಜನನ ಮತ್ತು ಮರಣ ನೊಂದಣಿ ಪ್ರಕ್ರಿಯೆ, ಬೆಳೆ ಅಂದಾಜು ಸಮೀಕ್ಷೆ ಹಾಗೂ ಕೃಷಿ ಗಣತಿಯ ವಿವಿಧ ಹಂತಗಳ ಪ್ರಗತಿ ಕುರಿತು ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯಾವುದೇ ಜನನ ಅಥವಾ ಮರಣ ಸಂಭವಿಸಿದಾಗ ಅದನ್ನು ನಿಗದಿತ ಅವಧಿಯೊಳಗೆ ನೋಂದಾಯಿಸುವುದು ಕಡ್ಡಾಯವಾಗಿದೆ. ತಾಲ್ಲೂಕು ಮಟ್ಟದ ಜನನ ಮತ್ತು ಮರಣ ಸಮನ್ವಯ ಸಮಿತಿ ಸಭೆಗಳು ಕಡ್ಡಾಯವಾಗಿ ಜರುಗಿಸಬೇಕು. ಈ ಕುರಿತು ಆಯಾ ತಾಲ್ಲೂಕು ತಹಶೀಲ್ದಾರರು ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸಿದರು. ಜನನ ಅಥವಾ ಮರಣ ಸಂಭವಿಸಿದ 21 ದಿನಗಳ ಒಳಗಾಗಿ ಉಚಿತವಾಗಿ ನೋಂದಣಿ ಮಾಡಬಹುದು. 21 ದಿನಗಳು ಕಳೆದ ನಂತರ ಮತ್ತು 30 ದಿನಗಳ ಒಳಗಾಗಿ ಸಣ್ಣ ಪ್ರಮಾಣದ ತಡಶುಲ್ಕ ಪಾವತಿಸಿ ನೋಂದಾಯಿಸಬಹುದು. 30 ದಿನಗಳ…
ALERT : ಮೂತ್ರ ವಿಸರ್ಜನೆ ವೇಳೆ ಈ ಸಮಸ್ಯೆ ಕಾಣಿಸಿಕೊಂಡರೆ ನಿರ್ಲಕ್ಷಿಸಬೇಡಿ : ಇದು ಪ್ರಾಣಾಂತಕ ಕ್ಯಾನ್ಸರ್ ಇರಬಹುದು.!
ಪ್ರತಿದಿನ ನಾವು ಎದುರಿಸುವ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕೆಲವೊಮ್ಮೆ ದೊಡ್ಡ ಕಾಯಿಲೆಯ ಮುನ್ಸೂಚನೆ ಆಗಿರುತ್ತವೆ. ಸಾಮಾನ್ಯವಾಗಿ ಮೂತ್ರ ವಿಸರ್ಜನೆ ಮಾಡುವಾಗ ಉರಿ ಕಾಣಿಸಿಕೊಂಡರೆ ಅಥವಾ ಪದೇ ಪದೇ ಮೂತ್ರಕ್ಕೆ ಹೋಗಬೇಕಾಗಿ ಬಂದರೆ, ನಾವೆಲ್ಲರೂ ಅದನ್ನು ಸಾಮಾನ್ಯ ‘ಯೂರಿನ್ ಇನ್ಫೆಕ್ಷನ್’ (UTI) ಎಂದು ನಿರ್ಲಕ್ಷಿಸುತ್ತೇವೆ. ಆದರೆ, ಮೆಡಿಕಲ್ ಲೋಕದ ತಜ್ಞರು ನೀಡುತ್ತಿರುವ ಶಾಕಿಂಗ್ ಮಾಹಿತಿ ಏನೆಂದರೆ, ಇಂತಹ ಲಕ್ಷಣಗಳು ಪ್ರಾಣಾಂತಕ ಮೂತ್ರಕೋಶದ ಕ್ಯಾನ್ಸರ್ (Bladder Cancer) ನ ಆರಂಭಿಕ ಸೂಚನೆಗಳೂ ಆಗಿರಬಹುದು! ವೈದ್ಯರ ಬಳಿ ಬರುವ ಬಹುತೇಕ ರೋಗಿಗಳು “ಇದು ಮಾಮೂಲಿ ಇನ್ಫೆಕ್ಷನ್ ಅನ್ಕೊಂಡಿದ್ವಿ ಡಾಕ್ಟರ್” ಎಂದು ಹೇಳುತ್ತಾರಂತೆ. ಇಂತಹ ಉದಾಸೀನತೆಯೇ ಮುಂದೆ ಜೀವಕ್ಕೆ ಕುತ್ತು ತರುತ್ತದೆ. ಹಾಗಾದರೆ, ಸಾಮಾನ್ಯ ಸೋಂಕು ಮತ್ತು ಕ್ಯಾನ್ಸರ್ ನಡುವಿನ ವ್ಯತ್ಯಾಸವೇನು? ಯಾವ ಲಕ್ಷಣಗಳನ್ನು ನಾವು ಮಿಸ್ ಮಾಡಲೇಬಾರದು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್. ಕ್ಯಾನ್ಸರ್ ಲಕ್ಷಣಗಳು ಮರೆಯಾಗುವುದು ಏಕೆ? ಮೂತ್ರಪಿಂಡದ ವ್ಯವಸ್ಥೆಯಲ್ಲಿ ಕಾಣಿಸಿಕೊಳ್ಳುವ ಅತ್ಯಂತ ವಿಲಕ್ಷಣ ಕ್ಯಾನ್ಸರ್ ಎಂದರೆ ಅದು ಬ್ಲಾಡರ್ ಕ್ಯಾನ್ಸರ್. ಇದು ಆರಂಭದಲ್ಲಿ ಸಾಮಾನ್ಯ…
ಉಪನೋಂದಣಾಧಿಕಾರಿಗಳ (Sub-Registrar) ಹುದ್ದೆಯ ಅಧಿಕಾರ ಹಾಗೂ ನಿರ್ವಹಿಸಬೇಕಾದ ಕರ್ತವ್ಯಗಳ ಸಮಗ್ರ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.ಉಪನೋಂದಣಾಧಿಕಾರಿಗಳ ವ್ಯಾಪ್ತಿಗೆ ಬರುವ ಆಡಳಿತಾತ್ಮಕ ಮತ್ತು ನೋಂದಣಿ ಕಾರ್ಯಗಳ ಸಂಪೂರ್ಣ ಪಟ್ಟಿ ಬಿಡುಗಡೆಯಾಗಿದೆ. ವರದಿಯ ಪ್ರಕಾರ, ಉಪನೋಂದಣಾಧಿಕಾರಿಗಳ ಪ್ರಮುಖ ಕರ್ತವ್ಯಗಳನ್ನು ಪ್ರಮುಖವಾಗಿ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ: 1. ಆಡಳಿತಾತ್ಮಕ ಜವಾಬ್ದಾರಿಗಳು: ಕಚೇರಿ ಮೇಲ್ವಿಚಾರಣೆ: ಕಚೇರಿಯ ಆಡಳಿತಾತ್ಮಕ ಉಸ್ತುವಾರಿ, ಸಿಬ್ಬಂದಿಗಳ ನಡವಳಿ ಆದೇಶಗಳು ಹಾಗೂ ದಿನನಿತ್ಯದ ರಾಜಸ್ವವನ್ನು (Revenue) ಸರ್ಕಾರಕ್ಕೆ ಜಮೆ ಮಾಡುವುದು. ವೇತನ ಮತ್ತು ಬಿಲ್ಲುಗಳು: ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರ ವೇತನ ಬಟಾವಾಡೆ, ಕಚೇರಿ ಕಟ್ಟಡ ಹಾಗೂ ವಿದ್ಯುತ್ ಶಕ್ತಿ ಬಿಲ್ಲುಗಳ ಪಾವತಿ ನಿರ್ವಹಣೆ. ಸಿಬ್ಬಂದಿ ನಿರ್ವಹಣೆ: ಕಚೇರಿ ಸಿಬ್ಬಂದಿಯ ರಜೆ ಮಂಜೂರಾತಿ, ಶಿಸ್ತು ಕ್ರಮಕ್ಕೆ ಶಿಫಾರಸು ಹಾಗೂ ಸೇವಾ ವಹಿಗಳನ್ನು (Service Registers) ನಿರ್ವಹಿಸುವುದು. ವರದಿ ಸಲ್ಲಿಕೆ: ಆಸ್ತಿಯ ಹೊಣೆಗಾರಿಕೆ ಪಟ್ಟಿ, ಮಾಸಿಕ ಮತ್ತು ವಾರ್ಷಿಕ ಲೆಕ್ಕ ಪತ್ರಗಳು ಹಾಗೂ ವರಮಾನ ತೆರಿಗೆ ಇಲಾಖೆಗೆ ವಾರ್ಷಿಕ ಮಾಹಿತಿಯನ್ನು ಜಿಲ್ಲಾ ನೋಂದಣಾಧಿಕಾರಿಗಳಿಗೆ ಸಲ್ಲಿಸುವುದು. ಸಾರ್ವಜನಿಕ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಪ್ರಮುಖ ಯೋಜನೆಯಾದ ‘ಇ-ಸ್ವತ್ತು 2.0’ (E-Swathu 2.0) ತಂತ್ರಾಂಶದ ಸೇವೆಗಳನ್ನು ಇನ್ಮುಂದೆ ಮತ್ತಷ್ಟು ಸುಲಭವಾಗಿ ಪಡೆಯಬಹುದು. ಇ-ಸ್ವತ್ತು ಮೂಲಕ ನಮೂನೆಗಳನ್ನು (Forms) ಪಡೆಯಲು ಹಾಗೂ ಅರ್ಜಿಗಳನ್ನು ಸಲ್ಲಿಸಲು ಗ್ರಾಮೀಣ ಮತ್ತು ನಗರ ಭಾಗದ ನಾಗರಿಕರಿಗೆ ಅನುಕೂಲವಾಗುವಂತೆ ಗ್ರಾಮ ಒನ್ (Grama One), ಕರ್ನಾಟಕ ಒನ್ (Karnataka One) ಮತ್ತು ಬೆಂಗಳೂರು ಒನ್ (Bengaluru One) ಕೇಂದ್ರಗಳಲ್ಲೂ ಅವಕಾಶ ಕಲ್ಪಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಈ ಕುರಿತು ಸರ್ಕಾರದ ಆದೇಶ ಸಂಖ್ಯೆ: RDPR / 73 / GPA / 2026 ರನ್ವಯ ಆದೇಶ ಹೊರಡಿಸಿದ್ದು, ಈ ಹೊಸ ಸೇವೆಗೆ ನಿಗದಿಪಡಿಸಲಾಗಿರುವ ಶುಲ್ಕದ ವಿವರಗಳನ್ನು ಪ್ರಕಟಿಸಿದೆ. ಅರ್ಜಿ ಶುಲ್ಕದ ವಿವರಗಳು: ವಿವಿಧ ನಾಗರಿಕ ಸೇವಾ ಕೇಂದ್ರಗಳಲ್ಲಿ ಇ-ಸ್ವತ್ತು 2.0 ಅರ್ಜಿ ಸಲ್ಲಿಸಲು ಸರ್ಕಾರ ನಿಗದಿಪಡಿಸಿರುವ ಪರಿಷ್ಕೃತ ಶುಲ್ಕದ ಪಟ್ಟಿ ಹೀಗಿದೆ: ಕ್ರಮ ಸಂಖ್ಯೆ ಸೇವಾ…
ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ನೂತನ ವೇಳಾಪಟ್ಟಿಯಂತೆ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29, 2026 ರಿಂದ ಪುನರಾರಂಭಗೊಳ್ಳಲಿವೆ. ಶೈಕ್ಷಣಿಕ ಅವಧಿಗಳ ವಿವರ: ನೂತನ ಶೈಕ್ಷಣಿಕ ವರ್ಷದಲ್ಲಿ ಒಟ್ಟು ಎರಡು ಅವಧಿಗಳಿರಲಿದ್ದು, ವಿವರಗಳು ಈ ಕೆಳಗಿನಂತಿವೆ: ಮೊದಲನೇ ಅವಧಿ: ದಿನಾಂಕ 29.05.2026 ರಿಂದ 02.10.2026 ರವರೆಗೆ. ಎರಡನೇ ಅವಧಿ: ದಿನಾಂಕ 22.10.2026 ರಿಂದ 10.04.2027 ರವರೆಗೆ. ರಜೆಗಳ ಪಟ್ಟಿ: ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಪ್ರಮುಖ ರಜೆಗಳ ವಿವರ ಹೀಗಿದೆ: ದಸರಾ ರಜೆ: ದಿನಾಂಕ 03.10.2026 ರಿಂದ 21.10.2026 ರವರೆಗೆ. ಬೇಸಿಗೆ ರಜೆ: ದಿನಾಂಕ 11.04.2027 ರಿಂದ 28.05.2027 ರವರೆಗೆ. ವರ್ಷದ ಒಟ್ಟು ದಿನಗಳ ಲೆಕ್ಕಾಚಾರ: 2026-27ನೇ ಸಾಲಿನಲ್ಲಿ ಒಟ್ಟು 365 ದಿನಗಳಲ್ಲಿ ರಜೆ ಮತ್ತು ಕೆಲಸದ ದಿನಗಳ ಹಂಚಿಕೆ ಹೀಗಿದೆ: ಶಾಲಾ ಕರ್ತವ್ಯದ ದಿನಗಳು: 245 ದಿನಗಳು.…














