Author: kannadanewsnow57

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯ ಗ್ರಾಹಕರಿಗೆ ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಲಾಗಿದೆ. ಸಮಗ್ರ ವಿದ್ಯುತ್‌ ಅಭಿವೃದ್ಧಿ ಯೋಜನೆಯ (IPDS) ಹಂತ-2 ರ ಅಡಿಯಲ್ಲಿ ಹೊಸ ಸಾಫ್ಟ್‌ವೇರ್ ಅಳವಡಿಕೆ ಕಾರ್ಯ ನಡೆಯುತ್ತಿರುವುದರಿಂದ, ಬೆಸ್ಕಾಂ ವ್ಯಾಪ್ತಿಯ 20 ಪಟ್ಟಣಗಳಲ್ಲಿ ದಿನಾಂಕ 10.06.2026 ರಿಂದ 30.06.2026 ರವರೆಗೆ ಒಟ್ಟು 21 ದಿನಗಳ ಕಾಲ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಸೇವೆಗಳ ಸ್ಥಗಿತಕ್ಕೆ ಕಾರಣವೇನು? ಪ್ರಸ್ತುತ ಚಾಲ್ತಿಯಲ್ಲಿರುವ ಟಿಆರ್‌ಎಮ್‌ (TRM) ಸಾಫ್ಟ್‌ವೇರ್‌ ಬದಲಿಗೆ ಅತ್ಯಾಧುನಿಕ ಐಪಿಡಿಎಸ್‌ ಐಟಿ (IPDS IT) ಅಪ್ಲಿಕೇಶನ್‌ ಅನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಹಳೆಯ ದತ್ತಾಂಶಗಳನ್ನು (Data) ಹೊಸ ಸಾಫ್ಟ್‌ವೇರ್‌ಗೆ ವರ್ಗಾವಣೆ ಮಾಡುವುದು ಅನಿವಾರ್ಯವಾಗಿರುವುದರಿಂದ ಆನ್‌ಲೈನ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ. ಯಾವೆಲ್ಲಾ ಸೇವೆಗಳು ಸಿಗುವುದಿಲ್ಲ? ಈ 21 ದಿನಗಳ ಅವಧಿಯಲ್ಲಿ ಗ್ರಾಹಕರಿಗೆ ಕೆಳಗಿನ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ: ಹೊಸ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ (New Connection) ಹೆಸರು ವರ್ಗಾವಣೆ (Name Transfer) ಲೋಡ್‌ ಹೆಚ್ಚಳ (Load Enhancement) ಸಾಮಾನ್ಯ ಬಿಲ್‌ ಪಾವತಿ (Online…

Read More

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ತರಕಾರಿ ಮಾರುಕಟ್ಟೆಯಲ್ಲಿ ದರ ಏರಿಕೆ ಕಂಡುಬಂದಿದ್ದು, ಸಾಮಾನ್ಯ ಜನರ ಜೇಬಿನ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ. ಪ್ರಮುಖ ತರಕಾರಿಗಳ ಬೆಲೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿರುವುದರಿಂದ ಮನೆಮಂದಿಯ ಮಾಸಿಕ ಖರ್ಚು ಕೂಡ ಹೆಚ್ಚಾಗಿದೆ. ಮಳೆ ಕಾರಣದಿಂದ ಬೆಳೆಗಳಿಗೆ ಹಾನಿಯಾಗಿರುವುದು ಹಾಗೂ ವಿವಿಧ ಪ್ರದೇಶಗಳಿಂದ ಮಾರುಕಟ್ಟೆಗೆ ಸರಬರಾಜು ಕಡಿಮೆಯಾಗಿರುವುದು ದರ ಏರಿಕೆಗೆ ಪ್ರಮುಖ ಕಾರಣವೆಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಕೆಲವು ತರಕಾರಿಗಳ ಬೆಲೆ ಒಂದೇ ವಾರದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಗ್ರಾಹಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಯಾವ ತರಕಾರಿಗೆ ಎಷ್ಟು ದರ? ಪ್ರಸ್ತುತ ಮಾರುಕಟ್ಟೆಯಲ್ಲಿ ಬೀನ್ಸ್‌ ಸುಮಾರು ₹78, ಟೊಮೆಟೊ ₹62ಕ್ಕೆ ಮಾರಾಟವಾಗುತ್ತಿದೆ. ಬಿಳಿ ಬದನೆಕಾಯಿ ₹80, ಗುಂಡು ಬದನೆಕಾಯಿ ₹66, ಬಜ್ಜಿ ಮೆಣಸಿನಕಾಯಿ ಹಾಗೂ ಗೊರಿಕಾಯಿ ತಲಾ ₹72ಕ್ಕೆ ತಲುಪಿವೆ. ಇನ್ನು ಬೀಟ್‌ರೂಟ್‌ ₹50, ಎಲೆಕೋಸು ₹45, ಹೂಕೋಸು ₹50 ಹಾಗೂ ಮೂಲಂಗಿ ₹48 ದರದಲ್ಲಿ ಲಭ್ಯವಿದೆ. ಸೊಪ್ಪುಗಳ ಬೆಲೆಯಲ್ಲೂ ಏರಿಕೆ…

Read More

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭರ್ಜರಿ ಸಿಹಿ ಸುದ್ದಿ ನೀಡಿದೆ. ಒಟ್ಟು 3,991 ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (Civil Police Constable) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಜೂನ್ 10ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 3 ಕೊನೆಯ ದಿನವಾಗಿದೆ. ಒಟ್ಟು ಹುದ್ದೆಗಳ ಪೈಕಿ ಕಲ್ಯಾಣ ಕರ್ನಾಟಕ (HK) ಕೋಟಾದಡಿ 596 ಹುದ್ದೆಗಳು ಹಾಗೂ ಉಳಿಕೆ ಮೂಲ ವೃಂದದ (Non-HK) ಕೋಟಾದಡಿ 3,395 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಸಿದ್ಧವಾಗಿಟ್ಟುಕೊಳ್ಳಬೇಕಾದ ಪ್ರಮುಖ ದಾಖಲೆಗಳು: ಅರ್ಜಿ ಸಲ್ಲಿಕೆ ಆರಂಭವಾಗುವ ಮುನ್ನವೇ ಅಭ್ಯರ್ಥಿಗಳು ಕೆಳಗಿನ ಅಗತ್ಯ ಪ್ರಮಾಣಪತ್ರಗಳನ್ನು ಕಡ್ಡಾಯವಾಗಿ ಸಿದ್ಧಪಡಿಸಿಟ್ಟುಕೊಳ್ಳಬೇಕು: ಆಧಾರ್ ಕಾರ್ಡ್ ಶೈಕ್ಷಣಿಕ ಅಂಕಪಟ್ಟಿಗಳು: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದ, ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಎಲ್ಲಾ ವಿಷಯಗಳ/ಸೆಮಿಸ್ಟರ್ಗಳ ಅಂಕಪಟ್ಟಿಗಳು ಹಾಗೂ ಘಟಿಕೋತ್ಸವ ಪ್ರಮಾಣಪತ್ರ ಅಥವಾ…

Read More

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಇತ್ತೀಚೆಗೆ (ಜೂನ್ 3, 2026) ಪ್ರಮಾಣ ವಚನ ಸ್ವೀಕರಿಸಿದ ಮಾನ್ಯ ನೂತನ ಉಪ ಮುಖ್ಯಮಂತ್ರಿಗಳು, ಸಂಪುಟ ದರ್ಜೆಯ ಸಚಿವರುಗಳು ಹಾಗೂ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಿಗೆ ವಿಧಾನಸೌಧ ಮತ್ತು ವಿಕಾಸಸೌಧ ಕಟ್ಟಡಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕೊಠಡಿಗಳನ್ನು ಹಂಚಿಕೆ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಹೊರಡಿಸಿರುವ ಆದೇಶ ಸಂಖ್ಯೆ: ಸಿಆಸುಇ 69 ಡಿಪಿಎಂ 2026, ದಿನಾಂಕ: 08.06.2026ರ ಪ್ರಕಾರ ಹಂಚಿಕೆಯಾಗಿರುವ ಕೊಠಡಿಗಳ ವಿವರ ಹೀಗಿದೆ: ವಿಧಾನಸೌಧ ಮತ್ತು ವಿಕಾಸಸೌಧದ ಕೊಠಡಿ ಹಂಚಿಕೆ ವಿವರ: ಕ್ರ.ಸಂ. ನೂತನ ಉಪ ಮುಖ್ಯಮಂತ್ರಿ / ಸಚಿವರು / ಸಲಹೆಗಾರರ ಹೆಸರು ಮತ್ತು ಇಲಾಖೆ ಹಂಚಿಕೆ ಮಾಡಿರುವ ಕೊಠಡಿ ಮತ್ತು ಕಟ್ಟಡ 1 ಡಾ: ಜಿ. ಪರಮೇಶ್ವರ್ ಮಾನ್ಯ ಉಪ ಮುಖ್ಯಮಂತ್ರಿಗಳು, ಕಂದಾಯ ಮತ್ತು ಕ್ರೀಡಾ ಇಲಾಖೆ ಕೊಠಡಿ ಸಂಖ್ಯೆ: 327-327 ಎ ವಿಧಾನಸೌಧ 2 ಶ್ರೀ ಕೆ.ಎಚ್. ಮುನಿಯಪ್ಪ ಮಾನ್ಯ ಆಹಾರ…

Read More

ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ಇರುವ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 6,565 ಟೆಕ್ನಿಷಿಯನ್ (ತಂತ್ರಜ್ಞ) ಹುದ್ದೆಗಳ ಭರ್ತಿಗಾಗಿ ಸಂಕ್ಷಿಪ್ತ ನೇಮಕಾತಿ ಅಧಿಸೂಚನೆಯನ್ನು (CEN No. 02/2026) ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ಸೈಟ್ಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ಹಾಗೂ ವರ್ಗೀಕರಣ: ರೈಲ್ವೆ ಇಲಾಖೆಯು ಒಟ್ಟು 6,565 ಹುದ್ದೆಗಳನ್ನು ಪ್ರಕಟಿಸಿದ್ದು, ಇವುಗಳನ್ನು ಎರಡು ಪ್ರಮುಖ ವಿಭಾಗಗಳಾಗಿ ವಿಂಗಡಿಸಲಾಗಿದೆ: ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್ (Technician Grade I Signal): 323 ಹುದ್ದೆಗಳು ಟೆಕ್ನಿಷಿಯನ್ ಗ್ರೇಡ್-III (Technician Grade III): 6,242 ಹುದ್ದೆಗಳು ಶೈಕ್ಷಣಿಕ ಅರ್ಹತೆ: ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಭೌತಶಾಸ್ತ್ರ (Physics), ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ (IT), ಇನ್ಸ್ಟ್ರುಮೆಂಟೇಶನ್…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಂತ್ರಜ್ಞಾನ ಶಿಕ್ಷಣ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (KPS) 2026-27ನೇ ಶೈಕ್ಷಣಿಕ ಸಾಲಿನಿಂದ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಪರಿಚಯಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ 2,500 ಮಾಹಿತಿ ತಂತ್ರಜ್ಞಾನ (IT/Computer) ಶಿಕ್ಷಕರ ಹುದ್ದೆಗಳನ್ನು ಹೊಸದಾಗಿ ಸೃಜಿಸಿ ಪರಿವರ್ತಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಜೂನ್ 8, 2026 ರಂದು ಈ ಕುರಿತು ಅಧಿಕೃತ ಸರ್ಕಾರಿ ಆದೇಶ (ಆದೇಶ ಸಂಖ್ಯೆ: ಇಪಿ 50 ಡಿಪಿಐ 2026) ಹೊರಡಿಸಿದ್ದಾರೆ. ಹಿನ್ನೆಲೆ ಮತ್ತು ಹುದ್ದೆಗಳ ಪರಿವರ್ತನೆ ರಾಜ್ಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ 200 ಶಾಲೆಗಳು ಹಾಗೂ ರಾಜ್ಯದ ಇತರೆಡೆಯ 500 ಶಾಲೆಗಳು ಸೇರಿದಂತೆ ಆಯ್ದ ಸರ್ಕಾರಿ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ ಶಾಲೆಗಳಲ್ಲಿ ಹೆಚ್ಚುವರಿ ಮೂಲಭೂತ…

Read More

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಂತ ಮನೆ ನಿರ್ಮಿಸಿಕೊಂಡಿರುವ ಸಾರ್ವಜನಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ನಿಗದಿತ ಮಿತಿಯೊಳಗಿನ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕವನ್ನು ಪಡೆಯಲು ಸ್ವಾಧೀನಾನುಭವ ಪ್ರಮಾಣ ಪತ್ರ (Occupancy Certificate – OC) ಪಡೆಯುವುದರಿಂದ ಒಂದು ಬಾರಿಗೆ ವಿನಾಯಿತಿ ನೀಡಿ ಸರ್ಕಾರ ಹೊಸ ಆದೇಶ ಹೊರಡಿಸಿದೆ.  ಸಾರ್ವಜನಿಕರಿಗೆ ಸುಲಭವಾಗಿ ಸೇವೆ ಒದಗಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಇಲಾಖೆಯು ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಯಾರಿಗೆ ಸಿಗಲಿದೆ ಈ ವಿನಾಯಿತಿ? ಸರ್ಕಾರದ ಹೊಸ ಆದೇಶದನ್ವಯ ಈ ಕೆಳಗಿನ ನಿಯಮಗಳಿಗೆ ಒಳಪಡುವ ವಸತಿ ಕಟ್ಟಡಗಳಿಗೆ ಒಸಿ (OC) ಮುಕ್ತಾಯದಿಂದ ವಿನಾಯಿತಿ ಸಿಗಲಿದೆ: ನಿವೇಶನದ ಅಳತೆ: 2400 ಚದರ ಅಡಿ ವಿಸ್ತೀರ್ಣದವರೆಗಿನ (+20% ಹೆಚ್ಚುವರಿ ವಿಸ್ತೀರ್ಣದ ಮಿತಿಯೊಂದಿಗೆ) ನಿವೇಶನಗಳು. ಕಟ್ಟಡದ ಮಿತಿ: ನೆಲಮಹಡಿ + 3 ಅಂತಸ್ತುಗಳು (G + 3) ಅಥವಾ ಸ್ಟಿಲ್ಟ್ ಪಾರ್ಕಿಂಗ್ + 4 ಮಹಡಿಗಳನ್ನು (Stilt Parking + 4) ಹೊಂದಿರುವ ವಸತಿ ಕಟ್ಟಡಗಳು.…

Read More

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಫಲಾನುಭವಿಗಳಿಗೆ ವಾರ್ಷಿಕವಾಗಿ ಸಿಗುತ್ತಿದ್ದ ಸಬ್ಸಿಡಿ ಅಡುಗೆ ಅನಿಲ (LPG) ಸಿಲಿಂಡರ್ಗಳ ಸಂಖ್ಯೆಯನ್ನು ಕೇಂದ್ರ ಸರ್ಕಾರವು 9 ರಿಂದ 4 ಕ್ಕೆ ಕಡಿತಗೊಳಿಸಿದೆ. ಸಾಮಾನ್ಯ ಕುಟುಂಬಗಳ ಸರಾಸರಿ ಬಳಕೆಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೇ 2016 ರಲ್ಲಿ ಪ್ರಾರಂಭವಾದ ಈ ಪ್ರಮುಖ ಯೋಜನೆಯಡಿ, ಫಲಾನುಭವಿಗಳಿಗೆ ಆರಂಭದಲ್ಲಿ ವರ್ಷಕ್ಕೆ 12 ಸಬ್ಸಿಡಿ ಸಿಲಿಂಡರ್ಗಳನ್ನು (14.2 ಕೆಜಿ) ನೀಡಲಾಗುತ್ತಿತ್ತು. ಕಳೆದ ವರ್ಷ ಈ ಕೋಟಾವನ್ನು 9 ಕ್ಕೆ ಇಳಿಸಲಾಗಿತ್ತು, ಇದೀಗ ಅದನ್ನು ಮತ್ತಷ್ಟು ಕಡಿತಗೊಳಿಸಿ 4 ಕ್ಕೆ ನಿಗದಿಪಡಿಸಲಾಗಿದೆ. ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಪ್ರವೀಣ್ ಮಾಲ್ ಖಾನೂಜಾ ಅವರು, ಪರಿಷ್ಕೃತ ಕೋಟಾವು ಉಜ್ವಲ ಫಲಾನುಭವಿಗಳ ಸರಾಸರಿ ವಾರ್ಷಿಕ ಬಳಕೆಯ ಮಾದರಿಗೆ ಅನುಗುಣವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಬ್ಸಿಡಿ ಮತ್ತು ಬೆಲೆ ಏರಿಕೆಯ ವಿವರಗಳು ಪ್ರಸ್ತುತ ಸಬ್ಸಿಡಿ: ಸ್ವಚ್ಛ ಅಡುಗೆ…

Read More

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,991 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 10ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತಿಳಿಸಿದೆ. ಹುದ್ದೆಗಳ ವಿವರ: ಒಟ್ಟು 3,991 ಹುದ್ದೆಗಳಲ್ಲಿ ವರ್ಗಾವಣೆ ಹೀಗಿದೆ: ಕಲ್ಯಾಣ ಕರ್ನಾಟಕ ಪ್ರದೇಶ: 596 ಹುದ್ದೆಗಳು ಉಳಿಕೆ ಮೂಲ ವೃಂದ (ಮಿಕ್ಕಿದ ಭಾಗ): 3,395 ಹುದ್ದೆಗಳು ಪ್ರಮುಖ ಸೂಚನೆಗಳು: ಪರಿಶಿಷ್ಟ ಜಾತಿಯ (SC) ಅಭ್ಯರ್ಥಿಗಳು ಒಳಮೀಸಲಾತಿ ಪ್ರಕಾರ ತಮಗೆ ಅನ್ವಯವಾಗುವ ಎಸ್‌ಸಿ-ಎ, ಎಸ್‌ಸಿ-ಬಿ ಮತ್ತು ಎಸ್‌ಸಿ-ಸಿ ಜಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆಯನ್ನು (RD Number) ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಕೊನೆಯ ದಿನಾಂಕ: ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 3 ಕೊನೆಯ ದಿನವಾಗಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. https://twitter.com/KEA_karnataka/status/2063990838485770621?ref_src=twsrc%5Etfw%7Ctwcamp%5Etweetembed%7Ctwterm%5E2063990838485770621%7Ctwgr%5E4007b5efa2800bae42c638adb76c67fc4b07ca22%7Ctwcon%5Es1_c10&ref_url=https%3A%2F%2Fkannadadunia.com%2Fgood-news-for-those-who-want-to-join-the-police-department-kea-important-information-about-the-recruitment-of-3991-civil-police-posts-police-recruitment%2F

Read More

ಬೆಂಗಳೂರು : ರಾಜ್ಯದ ಸಾರ್ವಜನಿಕರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದಿನಿಂದ (ಜೂನ್ 9) ರಾಜ್ಯದಾದ್ಯಂತ ಸಂಚರಿಸುವ ಖಾಸಗಿ  ವಾಹನ ಬಸ್‌ ಗಳ ಪ್ರಯಾಣ ದರವನ್ನು ಶೇಕಡಾ 5ರಿಂದ 8ರಷ್ಟು ಹೆಚ್ಚಿಸಲಾಗಿದೆ. ಈ ಪರಿಷ್ಕೃತ ದರ ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಲಕ್ಷಾಂತರ ಪ್ರಯಾಣಿಕರ ಮಾಸಿಕ ಖರ್ಚಿನ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಖಾಸಗಿ ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದಾರೆ.ಖಾಸಗಿ ಬಸ್ ಉದ್ಯಮ ಕಳೆದ ಕೆಲವು ವರ್ಷಗಳಿಂದ ನಿರಂತರ ಆರ್ಥಿಕ ಒತ್ತಡವನ್ನು ಎದುರಿಸುತ್ತಿದೆ ಎಂದು ಬಸ್ ಮಾಲೀಕರು ತಿಳಿಸಿದ್ದಾರೆ. ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಅವರು ವಿವರಿಸಿದರು. ಇಂಧನ ವೆಚ್ಚ ನಿರಂತರವಾಗಿ ಹೆಚ್ಚುತ್ತಿರುವುದರಿಂದ ಬಸ್ ನಿರ್ವಹಣೆ ದುಬಾರಿಯಾಗಿದೆ. ಟೈರ್, ಸ್ಪೇರ್ ಪಾರ್ಟ್ಸ್, ದುರಸ್ತಿ ಮತ್ತು ನಿರ್ವಹಣಾ ವೆಚ್ಚಗಳು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಗಣನೀಯವಾಗಿ ಏರಿವೆ. ಚಾಲಕರು…

Read More