Subscribe to Updates
Get the latest creative news from FooBar about art, design and business.
Author: kannadanewsnow57
ಹಿಂದೂ ಧರ್ಮದಲ್ಲಿ ಗಣೇಶ ಚತುರ್ಥಿಗೆ ವಿಶೇಷ ಮಹತ್ವವಿದೆ. ವೈದಿಕ ಕ್ಯಾಲೆಂಡರ್ ಪ್ರಕಾರ, ಪ್ರತಿ ವರ್ಷ ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿ ದಿನಾಂಕದಂದು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಈ ಸಮಯದಲ್ಲಿ, ಭಕ್ತರು ಮನೆಗಳು, ಕಚೇರಿಗಳು, ಅಂಗಡಿಗಳು ಮತ್ತು ದೇವಾಲಯಗಳಲ್ಲಿ ಗಣಪತಿಯ ವಿಗ್ರಹವನ್ನು ಸ್ಥಾಪಿಸಿ 10 ದಿನಗಳ ಕಾಲ ವಿಧಾನದ ಪ್ರಕಾರ ಪೂಜಿಸುತ್ತಾರೆ. ಈ ವರ್ಷ ಗಣೇಶ ಚತುರ್ಥಿ ಹಬ್ಬವನ್ನು ಆಗಸ್ಟ್ 27 ರಂದು ಆಚರಿಸಲಾಗುತ್ತದೆ ಮತ್ತು ಸೆಪ್ಟೆಂಬರ್ 6 ರಂದು ಮುಕ್ತಾಯಗೊಳ್ಳುತ್ತದೆ. ಈ ಬಾರಿ ಗಣೇಶ ಚತುರ್ಥಿಯಂದು, ಪ್ರೀತಿ, ಸರ್ವಾರ್ಥ ಸಿದ್ಧಿ, ರವಿ ಮತ್ತು ಇಂದ್ರ-ಬ್ರಹ್ಮ ಯೋಗದ ಸಂಯೋಜನೆ ಇರುತ್ತದೆ. ಗಣೇಶ ಚತುರ್ಥಿ ದಿನಾಂಕ 2025 ವೇದ ಕ್ಯಾಲೆಂಡರ್ ಪ್ರಕಾರ, ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿ ದಿನಾಂಕ ಆಗಸ್ಟ್ 26 ರಂದು ಮಧ್ಯಾಹ್ನ 1:53 ಕ್ಕೆ ಪ್ರಾರಂಭವಾಗುತ್ತದೆ. ಇದು ಆಗಸ್ಟ್ 27 ರಂದು ಮಧ್ಯಾಹ್ನ 3:43 ಕ್ಕೆ ಕೊನೆಗೊಳ್ಳುತ್ತದೆ. ಉದಯ ದಿನಾಂಕದ ಪ್ರಕಾರ, ಗಣೇಶ ಚತುರ್ಥಿಯ ಹಬ್ಬವನ್ನು ಆಗಸ್ಟ್ 27…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಗಾಳಿ ಸಹಿತ ಜೋರು ಮಳೆಯಾಗುವ ಸಂಭವವಿದೆ. ಕೆಲವು ಕಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ಹಾವೇರಿ, ಗದಗ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ ಬೀಸಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಾಗಲಿದ್ದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯುವಕನೊಬ್ಬ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲು ರೀಲ್ ರೆಕಾರ್ಡ್ ಮಾಡಲು ಮಾಡಿದ ಧೈರ್ಯಶಾಲಿ ಸಾಹಸಕ್ಕಾಗಿ ಇಂಟರ್ನೆಟ್ನಲ್ಲಿ ವೈರಲ್ ಆಗಿದ್ದಾನೆ. ವೈರಲ್ ವಿಡಿಯೋದಲ್ಲಿರುವ ಯುವಕನೊಬ್ಬ ಸೇತುವೆಯ ಕೆಳಗೆ ಹಾದುಹೋಗುವ ಟ್ರಾಲಿ ವ್ಯಾನ್ಗೆ ಜಿಗಿಯುವ ಗುರಿಯನ್ನು ಹೊಂದಿದ್ದಾನೆ ಆದರೆ ಅವನ ಜಂಪ್ ಮತ್ತು ಲ್ಯಾಂಡಿಂಗ್ನ ತೀರ್ಪು ವಿಫಲಗೊಳ್ಳುತ್ತದೆ ಮತ್ತು ವಾಹನಕ್ಕೆ ಹಾರಿಹೋಗುವ ಬದಲು ಅವನು ರಸ್ತೆಗೆ ಬಿದ್ದು ನೋವಿನಿಂದ ಜೋರಾಗಿ ಅಳುತ್ತಾನೆ. ಇತ್ತೀಚಿನ ದಿನಗಳಲ್ಲಿ ವೈರಲ್ ರೀಲ್ಗಳನ್ನು ಚಿತ್ರೀಕರಿಸಲು ಜನರು ಮಿತಿಗಳನ್ನು ಮೀರುತ್ತಿದ್ದಾರೆ, ಅದೇ ರೀತಿ, ಈ ಘಟನೆಯಲ್ಲಿ ಆ ವ್ಯಕ್ತಿ ಫ್ಲೈ-ಓವರ್ ಹತ್ತುತ್ತಾನೆ, ಅದರ ಅಂಚಿನಲ್ಲಿ ನಿಂತು, ಜಿಗಿಯಲು ಸರಿಯಾದ ಕ್ಷಣಕ್ಕಾಗಿ ಕಾಯುತ್ತಾನೆ. ಇದಲ್ಲದೆ, ಸೇತುವೆಯ ಕೆಳಗೆ ಹಾದುಹೋಗುವ ಟ್ರಾಲಿ ವ್ಯಾನ್ನಲ್ಲಿ ಇಳಿಯಲು ಅವನು ನಿರ್ಧರಿಸಿದಾಗ. ವೀಡಿಯೊದಲ್ಲಿ ಕಂಡುಬರುವಂತೆ, ಟೆಂಪೋ ಹಾದುಹೋಗುತ್ತದೆ ಆದರೆ ಯುವಕನು ತನ್ನ ಸ್ಥಾನದಿಂದ ಜಿಗಿಯುತ್ತಾನೆ, ಕೆಲವು ಸೆಕೆಂಡುಗಳು ತಡವಾಗಿ. ಅವನ ಗುರಿ ತಪ್ಪಿ, ಇಳಿಯಲು 2 ಸೆಕೆಂಡುಗಳು ವಿಳಂಬವಾದಾಗ ಟೆಂಪೋಗೆ ಹಾರುವ ಬದಲು, ಅವನು ನೇರವಾಗಿ ರಸ್ತೆಗೆ ಬಿದ್ದು…
ನವದೆಹಲಿ : ದೆಹಲಿ ಮೀರತ್ ಎಕ್ಸ್ಪ್ರೆಸ್ ವೇಯಲ್ಲಿ ಕಾರು ಡಿಕ್ಕಿಯಾಗಿ ಟ್ರಾಫಿಕ್ ಪೊಲೀಸ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸದ್ಯ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ವೈರಲ್ ವೀಡಿಯೊದಲ್ಲಿ, ವೇಗವಾಗಿ ಬಂದ ಎರ್ಟಿಗಾ ಕಾರು ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್ ಅಧಿಕಾರಿಗೆ ಡಿಕ್ಕಿ ಹೊಡೆಯುವುದನ್ನು ಕಾಣಬಹುದು. ಡಿಕ್ಕಿ ಎಷ್ಟು ಭೀಕರವಾಗಿತ್ತೆಂದರೆ, ವಿಪಿನ್ ಕುಮಾರ್ ಎಂಬ ಸಂಚಾರ ಪೊಲೀಸ್ ಅಧಿಕಾರಿ ಗಾಳಿಯಲ್ಲಿ ಹಲವಾರು ಅಡಿಗಳಷ್ಟು ಮೇಲಕ್ಕೆ ಹಾರಿ ದೂರ ಬೀಳುತ್ತಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗುತ್ತದೆ, ಆದರೆ ಗಂಭೀರ ಅಪಘಾತದಲ್ಲಿ ಉಂಟಾದ ಗಾಯಗಳಿಂದಾಗಿ ಸಾವನ್ನಪ್ಪಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇಬ್ಬರು ಸಂಚಾರ ಪೊಲೀಸರು ಎಕ್ಸ್ಪ್ರೆಸ್ವೇಯಲ್ಲಿ ನಿಂತಿರುವುದನ್ನು ತೋರಿಸಲಾಗಿದೆ. ಆ ಹೊತ್ತಿಗೆ ವೇಗವಾಗಿ ಬಂದ ಎರ್ಟಿಗಾ ಕಾರು ಬರುತ್ತಿರುವುದು ಕಂಡುಬರುತ್ತದೆ. ವಿಪಿನ್ ಕುಮಾರ್ ನಿಯಂತ್ರಣ ತಪ್ಪಿದ ಕಾರು ತನ್ನ ಕಡೆಗೆ ಚಲಿಸುತ್ತಿರುವುದನ್ನು ನೋಡಿ ತಕ್ಷಣವೇ ಮುಂಭಾಗದಿಂದ ದೂರ ಸರಿಯಲು ಪ್ರಯತ್ನಿಸುತ್ತಾರೆ, ಆದರೆ ಆಗ ತುಂಬಾ ತಡವಾಗಿರುತ್ತದೆ. ನಿಯಂತ್ರಣ ತಪ್ಪಿದ ಕಾರು ಅವನಿಗೆ ಎಷ್ಟು ಬಲವಾಗಿ ಡಿಕ್ಕಿ…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಮುಖ ಆರೋಪಿ ಆಗಿರುವಂತಹ ಜಗದೀಶ್ ಅಲಿಯಾಸ್ ಜಗ್ಗನನ್ನು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಮುಖ ಆರೋಪಿ ಆಗಿರುವಂತಹ ಜಗ್ಗ ಕೊಲೆಯಾದ ದಿನವೇ ಭಾರತ ಬಿಟ್ಟು ದುಬೈಗೆ ಪರಾರಿಯಾಗಿದ್ದ. ಇದೀಗ ಸಿಐಡಿ ಅಧಿಕಾರಿಗಳು ಆರೋಪಿ ಜಗ್ಗನನ್ನು ಬಂಧಿಸಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಗದೀಶ್ ಅಲಿಯಾಸ್ ಜಗ್ಗನಿಗೆ ಸಿಐಡಿ ಪೋಲೀಸರು ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದ್ದು, ಕೆಲ ದಿನಗಳಿಂದ ಆರೋಪಿಗಾಗಿ ಹುಡುಕಾಟ ನಡೆಸಿದ್ದು, ಇಂದು ಆರೋಪಿ ಜಗ್ಗನನ್ನು ಬಂಧಿಸಲಾಗಿದೆ. ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದ್ದು, ಬೈರತಿ ಬಸವರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಭಾರತಿನಗರ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.…
ಉಡುಪಿ : ಅನ್ಯಾನ್ಯ ಭಟ್ ನಾಪತ್ತೆ ಪ್ರಕರಣ ಸಂಬಂಧ ಇಂದು ಬೆಳ್ಳಂಬೆಳಗ್ಗೆ ಸುಜಾತ್ ಭಟ್ ಅವರು ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಆಗಮಿಸಿದ್ದಾರೆ. ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿದ್ದು, ಇದೀಗ ಸುಜಾತಾ ಭಟ್ ಗೆ ಎಸ್ ಐಟಿ ನೋಡಿಸ್ ನೀಡಿದೆ. ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿಯಿಂದ ಸುಜಾತ್ ಭಟ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ವಿವರ ನೀಡುವಂತೆ ಸುಜಾತ್ ಭಟ್ ಗೆ ಎಸ್ ಐಟಿ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಬೆಳ್ತಂಗಡಿಯ ಎಸ್ ಐಟಿ ವಿಚಾರಣೆಗೆ ಆಗಮಿಸಿದ್ದಾರೆ.
ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು. ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು…
ಜೋಧ್ಪುರ : ವರದಕ್ಷಿಣೆ ಕಿರುಕುಳದಿಂದ ಉಪನ್ಯಾಸಕಿಯೊಬ್ಬಳು ತನ್ನ ಮೂರು ವರ್ಷದ ಮಗಳಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ. ಸಂಜು ಬಿಷ್ಣೋಯ್ ಎಂಬ ಮಹಿಳೆ ತನ್ನ ಪತಿ ಮತ್ತು ಅತ್ತೆ ಮಾವಂದಿರಿಂದ ವರದಕ್ಷಿಣೆಗಾಗಿ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮಗು ಸ್ಥಳದಲ್ಲೇ ಮೃತಪಟ್ಟರೆ, ಸಂಜು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾಳೆ. ಜೋಧಪುರದ ಡಂಗಿಯಾವಾಸ್ ಪೊಲೀಸ್ ಠಾಣೆ ಪ್ರದೇಶದ ಸರ್ನಾಡಾ ಗ್ರಾಮದಲ್ಲಿರುವ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ವರದಿಯ ಪ್ರಕಾರ, ಸಂಜು ಮಧ್ಯಾಹ್ನ ಶಾಲೆಯಿಂದ ಹಿಂತಿರುಗಿ, ತನ್ನ ಮತ್ತು ತನ್ನ ಮಗಳ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಘಟನೆಯ ವೇಳೆ ಪತಿ ಅಥವಾ ಅತ್ತೆ ಮಾವ ಮನೆಯಲ್ಲಿ ಇರಲಿಲ್ಲ. ಆಕೆ ಬೆಂಕಿ ಹಚ್ಚಿದ ನಂತರ, ಮನೆಯಿಂದ ಹೊಗೆ ಹೊರಬರುತ್ತಿರುವುದನ್ನು ನೆರೆಹೊರೆಯವರು ಗುರುತಿಸಿದರು, ಅವರು ತಕ್ಷಣ ಪೊಲೀಸರಿಗೆ ಮತ್ತು ಕುಟುಂಬಕ್ಕೆ ಮಾಹಿತಿ ನೀಡಿದರು. ಕುಟುಂಬ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದರು ಆದರೆ ಮಗು ಸಾವನ್ನಪ್ಪಿತ್ತು.…
ಬೆಂಗಳೂರು : ಬೆಂಗಳೂರಿನಲ್ಲಿ ರಾತ್ರೋರಾತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ಯಲಹಂಕ ವಿಧಾನಸಭಾ ಕ್ಷೇತ್ರದ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯ ಗುಣಮಟ್ಟವನ್ನು ಖುದ್ದು ಪರಿಶೀಲಿಸಿದ್ದಾರೆ. ರಸ್ತೆಗುಂಡಿಗಳನ್ನು ಕೂಡಲೇ ಮುಚ್ಚಿ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. https://twitter.com/DKShivakumar/status/1960084220967375017 ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕರು ಸುಲಭವಾಗಿ ಮಾಹಿತಿ ನೀಡಲು, ‘ಗುಂಡಿ ಗಮನ’ ಎಂಬ ಮೊಬೈಲ್ ಆ್ಯಪ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿದರೆ, ನಾವು ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 16 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.














