Author: kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಅವಧಿ ಮೀರಿ ತೆಗೆದಿದ್ದ ಪಬ್‌ ಗಳ ಮೇಲೆ ಡಿಸಿಪಿ ಟಿ.ಹೆಚ್.ಶೇಖರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅವಧಿ ಮೀರಿ ಪಬ್ ಗಳ ಬಾಗಿಲು ತೆರೆದಿರುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ತಡರಾತ್ರಿ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಸೇರಿ ಹಲವು ಪಬ್ ಗಳ ಮೇಲೆ ತಡ ರಾತ್ರಿ ದಿಢೀರ್ ದಾಳಿ ನಡೆಸಿದ ಪೊಲೀಸರು, 1 ಗಂಟೆಯೊಳಗೆ ಬಾಗಿಲು ಮುಚ್ಚಿಸಿದ್ದಾರೆ. ಕೆಲ ದಿನಗಳ ಹಿಂದೆ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಸೇರಿದಂತೆ 15 ಪಬ್ ಗಳ ವಿರುದ್ಧ ದೂರು ದಾಖಲಿಸಲಾಗಿತ್ತು. ಇದೀಗ ಬೆಂಗಳೂರಿನ ಹಲವಡೆ ಡಿಸಿಪಿ ಶೇಖರ್ ನೇತೃತ್ವದಲ್ಲಿ ವೀಕೆಂಡ್ ಹೊತ್ತಲ್ಲಿ ಸ್ಪೆಷಲ್ ಡ್ರೈವ್ ಮಾಡಲಾಗಿದ್ದು, ಪಬ್ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

Read More

ಬೆಂಗಳೂರು : ಕರ್ತವ್ಯದ ವೇಳೆ ರೀಲ್ಸ್‌ ಮಾಡುವ ಕೆಎಸ್‌ ಆರ್‌ ಟಿಸಿ (KSRTC), ಬಿಎಂಟಿಸಿ (BMTC) ನೌಕಕರಿಗೆ ಸಾರಿಗೆ ಇಲಾಖೆ ಬಿಗ್‌ ಶಾಕ್‌ ನೀಡಿದ್ದು, ರೀಲ್ಸ್‌ ಮಾಡಿದ್ರೆ ಅಮಾನತು ಮಡುವುದಾಗಿ ಇಲಾಖೆ ಖಡಕ್‌ ಎಚ್ಚರಿಕೆ ನೀಡಿದೆ. ಕರ್ತವ್ಯದ ವೇಳೆ ಬಸ್‌ ಡ್ರೈವರ್‌, ಕಂಡಕ್ಟರ್‌ ಗಳು ರೀಲ್ಸ್‌ ಮಾಡುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಗೆ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಡ್ಯೂಟಿ ಟೈಮ್‌ ನಲ್ಲಿ ಕೆಎಸ್.‌ ಆರ್‌ ಟಿಸಿ, ಬಿಎಂಟಿಸಿ ಬಸ್‌ ಚಾಲಕರು, ನಿರ್ವಾಹಕರು ರೀಲ್ಸ್‌ ಮಾಡಿದ್ರೆ ಅವರನ್ನು ಅಮಾನತು ಮಾಡಲಾಗುವುದು ಎಂದು ಸಾರಿಗೆ ಖಡಕ್‌ ಎಚ್ಚರಿಕೆ ನೀಡಿದೆ.

Read More

ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 82ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಅಕ್ಟೋಬರ್ 2022 ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಖರ್ಗೆ ಅವರು ಭಾನುವಾರ 82 ನೇ ವರ್ಷಕ್ಕೆ ಕಾಲಿಟ್ಟರು. “ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಶ್ರೀ ಮಲ್ಲಿಕಾರ್ಜುನ ಖರ್ಗೆ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಹೇಳಿದ್ದಾರೆ. https://twitter.com/narendramodi/status/1814860709970268658?ref_src=twsrc%5Etfw%7Ctwcamp%5Etweetembed%7Ctwterm%5E1814860709970268658%7Ctwgr%5Eb3c17032865feb7417cf8a505beb3c352cfb5999%7Ctwcon%5Es1_c10&ref_url=https%3A%2F%2Fapi-news.dailyhunt.in%2F

Read More

ಮಂಡ್ಯ : ಕಾವೇರಿ ನದಿ ಕೊಳ್ಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್‌ ಎಸ್‌ ಡ್ಯಾಂಗೆ ನೀರು ಹರಿದುಬರುತ್ತಿದ್ದು, ನದಿಗೆ ನೀರು ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಕೆ.ಆರ್.ಎಸ್ ಜಲಾಶಯದಿಂದ ಸುಮಾರು 50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಾನಗಳಿಗೆ ತೆರಳಲು ಕಾವೇರಿ ನೀರವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.

Read More

ಬೆಂಗಳೂರು : ಅಕ್ಷರ ಕಲಿಸಿದ ರಾಜಪ್ಪ ಮೇಸ್ಟ್ರು ನೆನೆದ ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಗುರು ಪೂರ್ಣಿಮೆಯ ದಿನದ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಗುರುಪೂರ್ಣಿಮೆಯ ದಿನದಂದು ಅಕ್ಷರ ಕಲಿಸಿದ ರಾಜಪ್ಪ ಮೇಸ್ಟ್ರು, ಹೋರಾಟದ ಚಿಂತನೆಗೆ ದಿಕ್ಕುತೋರಿದ ಪ್ರೊ. ನಂಜುಂಡಸ್ವಾಮಿ, ಅರಿವಿನ ಗುರುಗಳಾದ ಬುದ್ಧ, ಬಸವಣ್ಣ, ಬಾಬಾ ಸಾಹೇಬರು, ಕನಕದಾಸರು, ನಾರಾಯಣ ಗುರುಗಳನ್ನು ಗೌರವದಿಂದ ಸ್ಮರಿಸಿ ನಮಿಸುತ್ತೇನೆ. ನಾಡಿನ ಜನತೆಗೆ ಗುರು ಪೂರ್ಣಿಮೆಯ ಶುಭಾಶಯಗಳು ಎಂದು ಹೇಳಿದ್ದಾರೆ. ಇಂದು ಅಂದರೆ ಜುಲೈ 21 ರಂದು ಗುರು ಪೂರ್ಣಿಮಾ ಹಬ್ಬವನ್ನು ಆಚರಿಸಲಾಗುತ್ತಿದೆ. ಮಹಾಭಾರತದ ಲೇಖಕ ವೇದವ್ಯಾಸರು ಗುರು ಪೂರ್ಣಿಮೆಯ ದಿನದಂದು ಜನಿಸಿದರು. ಈ ದಿನವನ್ನು ಗುರುಗಳ ಗೌರವಾರ್ಥವಾಗಿ ಆಚರಿಸಲಾಗುತ್ತದೆ.

Read More

ನವದೆಹಲಿ: ಯುನೆಸ್ಕೋದ ಪ್ರಮುಖ ಕಾರ್ಯಕ್ರಮವಾದ ಜುಲೈ 21 ರಿಂದ 31 ರವರೆಗೆ ಭಾರತವು ಆತಿಥ್ಯ ವಹಿಸುತ್ತಿರುವ ವಿಶ್ವ ಪರಂಪರೆ ಸಮಿತಿಯ 46 ನೇ ಅಧಿವೇಶನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಯುನೆಸ್ಕೋದ ಮಹಾನಿರ್ದೇಶಕ ಆಡ್ರೆ ಅಝೌಲೆ ಅವರು ಭಾರತ್ ಮಂಟಪಂನಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಭೆಯಲ್ಲಿ 150 ಕ್ಕೂ ಹೆಚ್ಚು ದೇಶಗಳಿಂದ 2,000 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ, ಈ ಕಾರ್ಯಕ್ರಮವು ಪರಂಪರೆಯನ್ನು ಸಂರಕ್ಷಿಸುವ ಮಾರ್ಗಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಒಂದು ಪ್ರಮುಖ ವೇದಿಕೆಯಾಗಿದೆ ಎಂದು ಪ್ರಧಾನಿ ಹೇಳಿದರು. “ವಿಶ್ವ ಪರಂಪರೆ ಸಮಿತಿಯ ಸಭೆಯನ್ನು ಭಾರತವು ನವದೆಹಲಿಯಲ್ಲಿ ಆಯೋಜಿಸುತ್ತಿರುವುದು ಅಪಾರ ಸಂತೋಷದ ವಿಷಯವಾಗಿದೆ. ನಮ್ಮ ರಾಷ್ಟ್ರವು ಈ ಸಮಿತಿಗೆ ಆತಿಥ್ಯ ವಹಿಸುತ್ತಿರುವುದು ಇದೇ ಮೊದಲು. “ನಾಳೆ ಸಂಜೆ 7 ಗಂಟೆಗೆ ನಡೆಯುವ…

Read More

ನಿಮ್ಮ ಜೀವನದಲ್ಲಿ ಹಣಕಾಸಿನ ಸಮಸ್ಯೆ ಇದ್ದರೆ ಹಾಗೂ ಬಹಳ ದಿನದಿಂದ ಸಾಲದ ಸಮಸ್ಯೆ ಇದ್ದರೆ ಅಥವಾ ನೀವು ಕೊಟ್ಟಿರುವ ಸಾಲ ಮರುಪಾವತಿ ಆಗುತ್ತಿಲ್ಲ ಅಂದರೆ 6 ಏಲಕ್ಕಿಯಿಂದ 4 ಶುಕ್ರವಾರ ಕೆಳಗೆ ಹೇಳಿರುವ ಹಾಗೆ ಪ್ರಯೋಗ ಮಾಡಿ ನೋಡಿ ಅಚ್ಚರಿ ಫಲಿತಾಂಶ ಸಿಗಲಿದೆ. ಪ್ರತಿನಿತ್ಯ ಬಳಸುವ ಆಹಾರ ಪದಾರ್ಥಗಲಾಗಿರುವ ಏಲಕ್ಕಿಗೆ ವಿಶೇಷವಾದ ಶಕ್ತಿ ಇದೆ ಆದ್ದರಿಂದ ನಾವು ಹೇಳುವ ಹಾಗೆ 6 ಏಲಕ್ಕಿಯನ್ನು 4 ಶುಕ್ರವಾರ ನಾವು ಹೇಳಿದ ಹಾಗೆ ಪ್ರಯೋಗ ಮಾಡಿದರೆ ನೀವು ಕೊಟ್ಟಿರುವಂತಹ ಸಾಲ ವಾಪಸ್ ಬರುತ್ತದೆ. ಮೊದಲನೇ ಶುಕ್ರವಾರ ಸಿಪ್ಪೆ ಬಿಡಿಸದ ಆರು ಏಲಕ್ಕಿಯನ್ನು ನಿಮ್ಮ ಪರ್ಸಿನಲ್ಲಿ, ಹುಡುಗಿಯಾದರೆ ವ್ಯಾನಿಟಿ ಬ್ಯಾಗಿನಲ್ಲಿ ಒಂದು ಬಟ್ಟೆ ಕಟ್ಟಿ ಇಟ್ಟುಕೊಳ್ಳಬೇಕು. ಎರಡನೇ ಶುಕ್ರವಾರ ನೀವು ಕೊಟ್ಟಿರುವಂತಹ ಏಲಕ್ಕಿಯನ್ನು ನಿರ್ಜನ ಪ್ರದೇಶದಲ್ಲಿರುವ ಆಲದಮರ ಅಥವಾ ತೆಂಗಿನ ಮರದ ಬುಡಕ್ಕೆ ಹೋಗಿ ಇಟ್ಟು ಬರಬೇಕು ಇದಕ್ಕೂ ಮೊದಲು ಹೊಸದಾಗಿ 6 ಏಲಕ್ಕಿಯನ್ನು ಬಟ್ಟೆಯಲ್ಲಿ ಕಟ್ಟಿ ಪರ್ಸಿನಲ್ಲಿ ಅಥವಾ ವ್ಯಾನಿಟಿ ಬ್ಯಾಗಿನಲ್ಲಿ ಇಟ್ಟುಕೊಳ್ಳಬೇಕು. ಮೂರನೇ…

Read More

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) 6 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದ ಪಠ್ಯಕ್ರಮವನ್ನು ಬದಲಾಯಿಸಿದೆ. ಈ ಹಿಂದೆ, 6 ನೇ ತರಗತಿಯಲ್ಲಿ ಸಮಾಜ ವಿಜ್ಞಾನದ ಮೂರು ವಿಭಿನ್ನ ಪುಸ್ತಕಗಳು ಇದ್ದವು, ಆದರೆ ಈಗ ಅವುಗಳನ್ನು ವಿಲೀನಗೊಳಿಸಿ ಒಂದೇ ಪುಸ್ತಕದಲ್ಲಿ ಸಂಗ್ರಹಿಸಲಾಗಿದೆ. ಇತಿಹಾಸ, ಭೂಗೋಳಶಾಸ್ತ್ರ ಮತ್ತು ನಾಗರಿಕತೆಯನ್ನು ಒಂದೇ ಪುಸ್ತಕವಾಗಿ ವಿಂಗಡಿಸಲಾಗಿದೆ. ಈ ವರ್ಷ, 3 ಮತ್ತು 6 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೊಸ ಪುಸ್ತಕಗಳು ಸಿಗಲಿವೆ, ಈ ಪುಸ್ತಕಗಳ ಪಠ್ಯಕ್ರಮವನ್ನು ಸಹ ಬದಲಾಯಿಸಲಾಗಿದೆ. ಮಹಾಭಾರತ-ಪುರಾಣದ ಉಲ್ಲೇಖ ಹೊಸ ಪಠ್ಯಪುಸ್ತಕದಲ್ಲಿ 5 ನೇ ಅಧ್ಯಾಯವನ್ನು ಸೇರಿಸಲಾಗಿದೆ, ಅದು “ಭಾರತ, ಅದು ಭಾರತ”, ಇದು ಭಾರತದ ವಿಕಾಸವನ್ನು ವಿವರವಾಗಿ ವ್ಯವಹರಿಸುತ್ತದೆ. ಇದು ಪ್ರಾಚೀನ ಭಾರತೀಯ ಗ್ರಂಥಗಳಾದ ಮಹಾಭಾರತ ಮತ್ತು ವಿಷ್ಣು ಪುರಾಣವನ್ನು ಉಲ್ಲೇಖಿಸುತ್ತದೆ. ಮಹಾಭಾರತವು ಕಾಶ್ಮೀರ, ಕುರುಕ್ಷೇತ್ರ, ವಂಗಾ, ಕಚ್ ಮತ್ತು ಕೇರಳದಂತಹ ಪ್ರದೇಶಗಳನ್ನು ಪಟ್ಟಿ ಮಾಡುತ್ತದೆ. ಸರಿಯಾದ ಉಚ್ಚಾರಣೆಯನ್ನು ಖಚಿತಪಡಿಸಿಕೊಳ್ಳಲು ಡಯಾಕ್ರಿಟಿಕ್ ಗುರುತುಗಳೊಂದಿಗೆ ಅನೇಕ ಸಂಸ್ಕೃತ…

Read More

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದವರ ಸಂಖ್ಯೆ ಏರುತ್ತಲೇ ಇದ್ದು, ಇದೀಗ ತನ್ನ ಮಗನನ್ನು ಹುಡುಕಿಕೊಡಿ ಎಂದು ತಾಯಿಯೊಬ್ಬರು ದೂರು ನೀಡಿದ್ದಾರೆ. ಗೋಕರ್ಣ ಬಳಿಯ ಗಂಗೆಕೊಳ್ಳದ ಯುವಕ ಲೋಕೇಶ್ ನಾಪತ್ತೆಯಾಗಿದ್ದು, ಮಗನನ್ನು ಹುಡುಕಿಕೊಡಿ ಎಂದು ಲೋಕೇಶ್ ತಾಯಿ ಮಾಹಾದೇವಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಳೆದ ಐದು ದಿನಗಳಿಂದ ಲೋಕೇಶ್ ಮನೆಗೆ ಬಂದಿಲ್ಲ. ಗುಡ್ಡ ಕುಸಿತದ ದಿನ ಅಲ್ಲಿನ ಹೋಟೆಲ್ ನಲ್ಲಿ ಲೋಕೇಶ್ ಇದ್ದ ಎಂಬ ಮಾಹಿತಿ ಇದೆ. ಹೋಟೆಲ್ ನಲ್ಲಿ ಲೋಕೇಶ್ ಇದ್ದ ಬಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಕೂಡ ನೋಡಿದ್ದರಂತೆ. ಬಸ್ ಪಾಸ್ ಆದ ಕೆಲವೇ ನಿಮಿಷಗಳಲ್ಲಿ ಗುಡ್ಡ ಕುಸಿತವಾಗಿದೆ ಎಂದು ತಿಳಿಸಿದ್ದಾರೆ. ಗೋವಾದಲ್ಲಿ ಕೆಲಸ ಮಾಡುತ್ತಿದ್ದ ಲೋಕೇಶ್, ರಜೆ ಮೇಲೆ ಊರಿಗೆ ಬಂದಿದ್ದ, ಗುಡ್ಡ ಕುಸಿತದ ದಿನ ಶೃಂಗೇರಿಗೆ ಹೋಗಿ ಬರುವುದಾಗಿ ಹೇಳಿ ಹೊರಟಿದ್ದ. ಐದು ದಿನಗಳಿಂದ ಶೃಂಗೇರಿಗೂ…

Read More

ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಇದೀಗ ಟೊಮ್ಯಾಟೊ ಬೆಲೆಯಲ್ಲೂ ಏರಿಕೆಯಾಗಿದ್ದು, ಪ್ರತಿ ಕೆಜಿಗೆ 100 ರೂ. ಗಡಿ ದಾಟಿದೆ. ರಾಜ್ಯಾದ್ಯಂತ ಮಳೆಗೆ ಬೆಳೆಗಳು ನಾಶವಾಗಿವೆ. ಈ ಹಿನ್ನೆಲೆಯಲ್ಲಿ ಟೊಮ್ಯಾಟೊ ಬೆಲೆಕೆಜಿಗೆ 100 ರೂಪಾಯಿ ಆಗಿದೆ. ಬೆಂಗಳೂರಲ್ಲೂ ಕೂಡ ಕೆಲವು ಚಿಲ್ಲರೆ ವ್ಯಾಪಾರಿಗಳು ಟೊಮ್ಯಾಟೊವನ್ನ ಕೆಜಿಗೆ 100ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಕೊತ್ತಂಬರಿ ಸೊಪ್ಪು ಕೂಡ ದುಬಾರಿಯಾಗಿದೆ. ಸಬ್ಬಸಿಗೆ, ಕರಿಬೇವು ಎಲ್ಲವೂ ಬಾಯಿಗೆ ಕಹಿ ಎಂಬಂತಾಗಿವೆ. ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತರಕಾರಿ ಬೆಳೆಗಳಿಗೆ ಹಾನಿಯಾಗಿದೆ. ಕೊಳೆತು ಹೋಗುತ್ತಿವೆ. ಇದೇ ಕಾರಣಕ್ಕೆ ಮಾರುಕಟ್ಟೆಯಲ್ಲಿ ಬೆಲೆ ಏರುತ್ತಿದೆ ಎನ್ನಲಾಗಿದೆ. ಟೊಮ್ಯಾಟೊ ಎಲ್ಲ ಕಡೆ 100 ರೂ.ಗಡಿ ದಾಟಿದೆ.

Read More