Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: CIBIL ಸ್ಕೋರ್ ಇಲ್ಲದ ಕಾರಣಕ್ಕೆ ಮೊದಲ ಬಾರಿಗೆ ಸಾಲ ಪಡೆಯುವವರಿಗೆ ಸಾಲ ನಿರಾಕರಿಸಲಾಗುವುದಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. ಮಳೆಗಾಲದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಉತ್ತರಿಸಿದ ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ, ಹೊಸ ಸಾಲ ಪಡೆಯುವವರ ಸಾಲ ಅರ್ಜಿಗಳನ್ನು ಅವರಿಗೆ ಹಿಂದಿನ ಸಾಲ ಇತಿಹಾಸವಿಲ್ಲ ಎಂಬ ಕಾರಣಕ್ಕಾಗಿ ತಿರಸ್ಕರಿಸಲಾಗುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕುಗಳು ಮತ್ತು ಕ್ರೆಡಿಟ್ ಸಂಸ್ಥೆಗಳಿಗೆ ಸೂಚನೆ ನೀಡಿದೆ ಎಂದು ಹೇಳಿದರು. “ಕ್ರೆಡಿಟ್ ಸಂಸ್ಥೆಗಳಿಗೆ ಉತ್ತಮ ಅಭ್ಯಾಸಗಳ ಭಾಗವಾಗಿ, ಮೊದಲ ಬಾರಿಗೆ ಸಾಲ ಪಡೆಯುವವರ ಸಾಲ ಅರ್ಜಿಗಳನ್ನು ಅವರಿಗೆ ಕ್ರೆಡಿಟ್ ಇತಿಹಾಸವಿಲ್ಲ ಎಂಬ ಕಾರಣಕ್ಕಾಗಿ ತಿರಸ್ಕರಿಸಬಾರದು ಎಂದು RBI ಸಲಹೆ ನೀಡಿದೆ” ಎಂದು ಚೌಧರಿ ಹೇಳಿದರು. ಕನಿಷ್ಠ ಸ್ಕೋರ್ ಅನ್ನು ಸೂಚಿಸಲಾಗಿಲ್ಲ ಆರ್ಬಿಐ ಸಾಲಗಾರರಿಗೆ ಯಾವುದೇ ಕನಿಷ್ಠ ಕ್ರೆಡಿಟ್ ಸ್ಕೋರ್ ಅನ್ನು ನಿಗದಿಪಡಿಸಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. “ಅನಿಯಂತ್ರಿತ ಕ್ರೆಡಿಟ್ ವಾತಾವರಣದಲ್ಲಿ, ಸಾಲದಾತರು ಮಂಡಳಿಯು ಅನುಮೋದಿಸಿದ ನೀತಿಗಳು ಮತ್ತು ವಿಶಾಲ ನಿಯಂತ್ರಕ ಮಾರ್ಗಸೂಚಿಗಳ ಆಧಾರದ…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಆಗಸ್ಟ್ 28ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆ.28 ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಮಾರುತಗಳು ಚುರುಕುಗೊಳ್ಳಲಿದ್ದು, ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಬಿರುಸುಗೊಳ್ಳಲಿದೆ. ಆ.25ಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಹಾಗೂ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕಲಬುರಗಿ, ಬೀದರ್ನಲ್ಲಿ ಆ.28ರಿಂದ ಮುಂದಿನ 2 ದಿನ ಹಾಗೂ ಕೊಡಗು, ಬೆಳಗಾವಿಯಲ್ಲಿ ಆ.29ರಂದು ಬಿರುಸಾಗಿ ಸುರಿಯುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಯಾದಗಿರಿಯಲ್ಲಿ ಆ.28ರಂದು ಯೆಲ್ಲೋ ಅಲರ್ಟ್ ಇರಲಿದೆ…
ಬೆಂಗಳೂರು : ಗಣೇಶ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿ 1,500 ಹೆಚ್ಚುವರಿ ಬಸ್ಗಳನ್ನು ರಸ್ತೆಗಿಳಿಸಲಿದೆ. ಆಗಸ್ಟ್ 25 ಮತ್ತು 26ರಂದು ಬೆಂಗಳೂರಿನಿಂದ ವಿಶೇಷ ಬಸ್ ಸೇವೆ ಇರಲಿದೆ. ದಿನಾಂಕ: 26.08.2025 ರಂದು ಸ್ವರ್ಣಗೌರಿ ವ್ರತ, ದಿನಾಂಕ 27.08.2025ರಂದು ಗಣೇಶ ಚತುರ್ಥಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:25.08.2025 ಹಾಗೂ 26.08.2025 ರಂದು ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:27.08.2025 ಹಾಗೂ 31.08.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. https://twitter.com/KarnatakaVarthe/status/1959225292607865075 • ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ. • ಮೈಸೂರು ರಸ್ತೆ…
ಬೆಂಗಳೂರು : ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ವಿಶೇಷ ಸಾಂರ್ಭಿಕ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಖಾಸಗಿ ಅನುದಾನಿತ ಕಾಲೇಜಿನ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಉಲ್ಲೇಖ(1)ರಲ್ಲಿ ಕೋರಲಾಗಿತ್ತು. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು “ರಾಜ್ಯ ಸರ್ಕಾರಿ ನೌಕರರಿಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಗರಿಷ್ಟ 06 ತಿಂಗಳುಗಳ ಮಿತಿಗೊಳಪಟ್ಟು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಮಂಜೂರು ಮಾಡಿರುವಂತೆಯೇ ಖಾಸಗಿ ಅನುದಾನಿತ ಶಿಕ್ಷಣ ಸಿಬ್ಬಂದಿಗಳಿಗೆ ಸ್ವಯಂ ಚಾಲಿತವಾಗಿ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಪರಿಗಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಸಂದರ್ಭಗಳಲ್ಲಿ ಸಂಬಂಧಪಟ್ಟ ಸಿಬ್ಬಂದಿಗಳಿಗೆ ಲಭ್ಯವಿರುವ ಅಸಾಧಾರಣ ರಜೆಗಳನ್ನು ಒಳಗೊಂಡಂತೆ ಎಲ್ಲಾ ರಜೆಗಳನ್ನು ಮೊದಲು ಬಳಸಿಕೊಂಡು ನಂತರ ಅಗತ್ಯವಿದ್ದರೆ ಆರ್ಥಿಕ ಇಲಾಖೆಯ ಸಹಮತಿ ಪಡೆದು ವಿಶೇಷ…
ಬುಲಂದರ್ ಶಹರ್ : ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಬುಲಂದರ್ ಶಹರ್ ಬಳಿ ಕಂಟೈನರ್, ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಟ್ರ್ಯಾಕ್ಟರ್ ನಲ್ಲಿದ್ದ 8 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಬುಲಂದ್ಶಹರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 34 ರ ಘಾಟಲ್ ಗ್ರಾಮದ ಬಳಿಯ ಕಾಸ್ಗಂಜ್ನಿಂದ ರಾಜಸ್ಥಾನದ ಗೋಗಾಮಿಡಿಗೆ ಹೋಗುತ್ತಿದ್ದ ಗೋಗಾಜಿ ಭಕ್ತರಿಂದ ತುಂಬಿದ್ದ ಟ್ರ್ಯಾಕ್ಟರ್ಗೆ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ 8 ಜನರು ಸಾವನ್ನಪ್ಪಿ 43 ಜನರು ಗಾಯಗೊಂಡಿದ್ದಾರೆ. ಅಪಘಾತದ ನಂತರ ಸ್ಥಳೀಯ ಜನರು ತಕ್ಷಣ ಗಾಯಾಳುಗಳನ್ನು ರಸ್ತೆಯಿಂದ ಹೊರತೆಗೆದು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿದರು. ಅನೇಕ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಎಲ್ಲಾ ಭಕ್ತರು ರಾಜಸ್ಥಾನದ ಗೋಗಾಮಿಡಿಯಲ್ಲಿರುವ ಜಹರ್ವೀರ್ (ಗೋಗಾಜಿ) ಭೇಟಿ ನೀಡಲು ಯುಪಿಯ ಕಾಸ್ಗಂಜ್ನಿಂದ ಹೋಗುತ್ತಿದ್ದರು. https://twitter.com/ANI/status/1959780144517972351?ref_src=twsrc%5Egoogle%7Ctwcamp%5Eserp%7Ctwgr%5Etweet
ಕೊಪ್ಪಳ: ರಾಜ್ಯದಲ್ಲಿ ಗಣೇಶೋತ್ಸವದಲ್ಲಿ ಡಿಜೆ ಬಳಕೆ ನಿಷೇಧ ಮಾಡಿಲ್ಲ. ನಿಯಮಗಳ ಪ್ರಕಾರ ಬಳಕೆ ಮಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ಹಬ್ಬದ ವೇಳೆ ಡಿಜೆ ಬಳಕೆ ಕುರಿತು ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆಸಲಾಗುವುದು. ಈ ವಿಷಯದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ. ಆದರೆ ಡಿಜೆ ನಿಷೇಧ ಮಾಡಿಲ್ಲ ಎಂದರು. ಡಿಜೆ ನಿಷೇಧ ಎನ್ನುವ ಬಿಜೆಪಿಯ ಮಾತು ಕೇಳಬೇಡಿ. ಡಿಜೆ ಬಳಕೆಗೆ ಕೋರ್ಟ್ ಮಾರ್ಗಸೂಚಿಯ ಪ್ರಕಾರ ಇಂತಿಷ್ಟು ಡೆಸಿಬಲ್ ಇರಬೇಕು ಎನ್ನುವ ನಿಯಮವಿದೆ. ಆ ಪ್ರಕಾರ ನೋಡಿಕೊಳ್ಳಬೇಕು. ಯುವಕರಿಗೆ 18ನೇ ವರ್ಷಕ್ಕೆ ಮತದಾನದ ಹಕ್ಕು ನೀಡಿದ್ದು ನಮ್ಮ ಕಾಂಗ್ರೆಸ್. ಹೀಗಿರುವಾಗ ನಾವು ಯುವಕರಿಗೆ ಹೇಗೆ ಡಿಜೆ ಬಳಕೆಗೆ ನಿಷೇಧ ಹೇರಲು ಸಾಧ್ಯವೇ ಎಂದು ಹೇಳಿದ್ದಾರೆ.
ಗಡಿ ಭದ್ರತಾ ಪಡೆ (BSF) ಇಂದಿನಿಂದ ಹೆಡ್ ಕಾನ್ಸ್ಟೇಬಲ್, ರೇಡಿಯೋ ಆಪರೇಟರ್ (RO) ಮತ್ತು ರೇಡಿಯೋ ಮೆಕ್ಯಾನಿಕ್ (RM) ಹುದ್ದೆಗಳು 2025 ರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 1121 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. BSF ನ ಅಧಿಕೃತ ವೆಬ್ಸೈಟ್ rectt.bsf.gov.in ನಲ್ಲಿ ಸೆಪ್ಟೆಂಬರ್ 23, 2025 ರವರೆಗೆ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. BSF ಹೆಡ್ ಕಾನ್ಸ್ಟೇಬಲ್ ನೇಮಕಾತಿ 2025 ರಲ್ಲಿ ಒಟ್ಟು 1121 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇವುಗಳಲ್ಲಿ, 910 ಹುದ್ದೆಗಳು ಹೆಡ್ ಕಾನ್ಸ್ಟೇಬಲ್ (RO) ಮತ್ತು 211 ಹುದ್ದೆಗಳು ಹೆಡ್ ಕಾನ್ಸ್ಟೇಬಲ್ (RM) ಹುದ್ದೆಗಳಾಗಿವೆ. ಶೈಕ್ಷಣಿಕ ಅರ್ಹತೆ ಈ ನೇಮಕಾತಿಗೆ ಸೇರಲು ಅಭ್ಯರ್ಥಿಗಳು 10 ನೇ ತರಗತಿ ಪಾಸ್ + ಐಟಿಐ ಡಿಪ್ಲೊಮಾ ಹೊಂದಿರಬೇಕು. ರೇಡಿಯೋ ಆಪರೇಟರ್ (RO) ಹುದ್ದೆಗೆ ಐಟಿಐ ಡಿಪ್ಲೊಮಾ ಈ ಕೆಳಗಿನ ವಿಷಯಗಳಲ್ಲಿರಬೇಕು: ರೇಡಿಯೋ, ಟೆಲಿವಿಷನ್, ಎಲೆಕ್ಟ್ರಾನಿಕ್ಸ್, COPA, ಜನರಲ್ ಎಲೆಕ್ಟ್ರಾನಿಕ್ಸ್ ಮತ್ತು ಡೇಟಾ ಎಂಟ್ರಿ ಆಪರೇಟರ್. ಅದೇ ಸಮಯದಲ್ಲಿ,…
ಬೆಳ್ತಂಗಡಿ : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಅವರು ಬೆಳ್ತಂಗಡಿಯ ಪೊಲೀಸ್ ಠಾಣೆಗೆ ವಿಚಾರಣೆ ಹಾಜರಾಗಿದ್ದಾರೆ. ಯೂಟ್ಯೂಬರ್ ಸಮೀರ್ ಗೆ ಆಗಸ್ಟ್ 24 ರಂದು ವಿಚಾರಣೆಗೆ ಹಾಜರಾಗುಂತೆ ಪೊಲೀಸರು ನೋಟಿಸ್ ನೀಡಿದ್ದರು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುಂತೆ ನೋಟಿಸ್ ನೀಡಿದ್ದರು. ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವು ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್.19ರಂದು ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಮುಂಬೈ : ಟೀಂ ಇಂಡಿಯಾದ ಕ್ರಿಕೆಟ್ ಆಟಗಾರ ಚೇತೇಶ್ವರ್ ಪೂಜಾರ್ ಅವರು ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಚೇತೇಶ್ವರ ಪೂಜಾರ ಅವರು ಭಾರತೀಯ ಕ್ರಿಕೆಟ್ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಮತ್ತು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವುದು ಪದಗಳಿಗೆ ನಿಲುಕದ ಅನುಭವ ಎಂದು ಭಾವನಾತ್ಮಕ ಹೇಳಿಕೆಯಲ್ಲಿ ಅವರು ಹೇಳಿದರು. ಅಭಿಮಾನಿಗಳ ನಿರಂತರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಹೇಳಿದ ಪೂಜಾರ, ಈ ಅಧ್ಯಾಯವನ್ನು ಮುಕ್ತಾಯಗೊಳಿಸುತ್ತಿರುವುದರಿಂದ ಅಪಾರ ಕೃತಜ್ಞತೆಯಿಂದ ತುಂಬಿದ್ದೇನೆ ಎಂದು ಹೇಳಿದರು. ಚೇತೇಶ್ವರ್ ಪೂಜಾರ್ ಅವರು ಭಾರತದ ಪರ 103 ಟೆಸ್ಟ್ , 5 ಏಕದಿನ ಪಂದ್ಯಗಳನ್ನು ಆಡಿದ್ದಾರೆ. https://twitter.com/cheteshwar1/status/1959491168439538000 ಚೇತೇಶ್ವರ ಪೂಜಾರ ಕ್ರಿಕೆಟ್ನ ಎಲ್ಲಾ ಸ್ವರೂಪಗಳಿಂದ ನಿವೃತ್ತರಾಗಿದ್ದಾರೆ. ಅವರು 20 ವರ್ಷಗಳ ಕಾಲ ಕ್ರಿಕೆಟ್ ಆಡಿದ್ದಾರೆ, ಅದರಲ್ಲಿ 4 ವರ್ಷಗಳನ್ನು ಅವರು ಅಂತರರಾಷ್ಟ್ರೀಯ ಕ್ರಿಕೆಟ್ನ ಪಿಚ್ನಲ್ಲಿ ಕಳೆದರು. ಚೇತೇಶ್ವರ ಪೂಜಾರ 2005 ರಲ್ಲಿ…
ಮುಂಬೈ : ಟೀಂ ಇಂಡಿಯಾದ ಕ್ರಿಕೆಟ್ ಆಟಗಾರ ಚೇತೇಶ್ವರ್ ಪೂಜಾರ್ ಅವರು ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಚೇತೇಶ್ವರ ಪೂಜಾರ ಅವರು ಭಾರತೀಯ ಕ್ರಿಕೆಟ್ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಮತ್ತು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವುದು ಪದಗಳಿಗೆ ನಿಲುಕದ ಅನುಭವ ಎಂದು ಭಾವನಾತ್ಮಕ ಹೇಳಿಕೆಯಲ್ಲಿ ಅವರು ಹೇಳಿದರು. ಅಭಿಮಾನಿಗಳ ನಿರಂತರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಹೇಳಿದ ಪೂಜಾರ, ಈ ಅಧ್ಯಾಯವನ್ನು ಮುಕ್ತಾಯಗೊಳಿಸುತ್ತಿರುವುದರಿಂದ ಅಪಾರ ಕೃತಜ್ಞತೆಯಿಂದ ತುಂಬಿದ್ದೇನೆ ಎಂದು ಹೇಳಿದರು. ಚೇತೇಶ್ವರ್ ಪೂಜಾರ್ ಅವರು ಭಾರತದ ಪರ 103 ಟೆಸ್ಟ್, 5 ಏಕದಿನ ಪಂದ್ಯಗಳನ್ನು ಆಡಿದ್ದಾರೆ. https://twitter.com/cheteshwar1/status/1959491168439538000













