Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನ ಲಾಲ್ ಬಾಗ್ ಬಳಿಯಿರುವ ಕಾಲೇಜಿನಲ್ಲಿ ರ್ಯಾಗಿಂಗ್ ವಿಚಾರಕ್ಕೆ ಲಾಂಗು, ಮಚ್ಚುಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹೌದು, ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಆಗಿದ್ದು, ಹಲ್ಲೆ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿವೆ. ಇಬ್ಬರು ವಿದ್ಯಾರ್ಥಿಗಳ ಲಾಂಗು, ಮಚ್ಚುಗಳಿಂದ ಹಲ್ಲೆಗೆ ಯತ್ನಿಸಲಾಗಿದೆ. ಸೆಪ್ಟೆಂಬರ್ 2 ರಂದು ನಡೆದ ಘಟನೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.
ನವದೆಹಲಿ : ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಶಿಖರ್ ಧವನ್ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್ ಮೂಲಕ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಂದು ಧವನ್ ಅವರನ್ನು ಪ್ರಶ್ನಿಸಲಿದೆ ಎಂದು ತಿಳಿದುಬಂದಿದೆ. ಧವನ್ ಅನುಮೋದನೆಗಳ ಮೂಲಕ ಅಪ್ಲಿಕೇಶನ್ಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾಗಿದೆ. ಅಕ್ರಮ ಬೆಟ್ಟಿಂಗ್ ಅರ್ಜಿಗಳಿಗೆ ಸಂಬಂಧಿಸಿದ ಹಲವಾರು ಪ್ರಕರಣಗಳನ್ನು ಸಂಸ್ಥೆ ತನಿಖೆ ನಡೆಸುತ್ತಿದೆ. ಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ. ವರದಿಗಳ ಪ್ರಕಾರ, ತನಿಖೆಯು ಆನ್ಲೈನ್ ಬೆಟ್ಟಿಂಗ್ ವೇದಿಕೆಯಾದ 1xBet ಗೆ ಸಂಬಂಧಿಸಿದೆ, ಇದು ಹಣ ವರ್ಗಾವಣೆ ಆರೋಪದ ಮೇಲೆ ಪರಿಶೀಲನೆಯಲ್ಲಿದೆ. ಧವನ್ ಸಾಮಾಜಿಕ ಮಾಧ್ಯಮದಲ್ಲಿ ಬೆಟ್ಟಿಂಗ್ ಆ್ಯಪ್ ಅನ್ನು ಪ್ರಚಾರ ಮಾಡಿದ್ದಾರೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ. ಪ್ರಚಾರ ಚಟುವಟಿಕೆಗಳಲ್ಲಿ ಅವರ ಪಾತ್ರವನ್ನು ಸ್ಪಷ್ಟಪಡಿಸಲು ತನಿಖೆಗೆ ಹಾಜರಾಗಲು ಇಡಿ ಈಗ ಕ್ರಿಕೆಟಿಗನನ್ನು ಕೇಳಿದೆ. https://twitter.com/ANI/status/1963473221912559702?ref_src=twsrc%5Etfw%7Ctwcamp%5Etweetembed%7Ctwterm%5E1963473221912559702%7Ctwgr%5E8f44ad3ef79b7965752f2a07138d2af3d3082297%7Ctwcon%5Es1_c10&ref_url=https%3A%2F%2Fkannadadunia.com%2Fonline-betting-app-case-ed-summons-cricketer-shikhar-dhawan%2F
ಇಂದೋರ್ : ಮಧ್ಯಪ್ರದೇಶದ ಇಂದೋರ್ನಲ್ಲಿರುವ ರಾಜ್ಯದ ಅತಿದೊಡ್ಡ ಆಸ್ಪತ್ರೆಯಾದ ಎಂವೈ ಆಸ್ಪತ್ರೆಯಲ್ಲಿ ಸೋಮವಾರ (ಸೆಪ್ಟೆಂಬರ್ 1) ಆಸ್ಪತ್ರೆಯ ಐಸಿಯುನಲ್ಲಿ ಇಬ್ಬರು ನವಜಾತ ಶಿಶುಗಳನ್ನು ಇಲಿಗಳು ಕಚ್ಚಿವೆ. ಒಂದು ಮಗು ನಿನ್ನೆ ಸಾವನ್ನಪ್ಪಿದರೆ, ಇನ್ನೊಂದು 3 ದಿನಗಳ ನವಜಾತ ಶಿಶು ಇಂದು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದೆ. ಹೌದು, ಈ ಮಕ್ಕಳನ್ನು ಮಹಾರಾಜ ಯಶವಂತ್ ರಾವ್ ಆಸ್ಪತ್ರೆಯ ಅಂದರೆ ಎಂವೈ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿದೆ. ವಿಷಯ ಬೆಳಕಿಗೆ ಬಂದ ತಕ್ಷಣ, ಡೀನ್ ಕರ್ತವ್ಯದಲ್ಲಿದ್ದ ನರ್ಸ್ ಮತ್ತು ನರ್ಸಿಂಗ್ ಸೂಪರಿಂಟೆಂಡೆಂಟ್ ಅನ್ನು ಅಮಾನತುಗೊಳಿಸಿದರು. ಅಲ್ಲದೆ, ಎಚ್ಒಡಿ ಮತ್ತು ಎಂವೈ ಸೂಪರಿಂಟೆಂಡೆಂಟ್ಗೆ ‘ಶೋಕಾಸ್’ ನೋಟಿಸ್ ನೀಡಲಾಯಿತು. ಇದಲ್ಲದೆ, ಕೀಟ ನಿಯಂತ್ರಣ ಕಂಪನಿಯ ಮೇಲೆ ಭಾರಿ ದಂಡವನ್ನು ವಿಧಿಸಲಾಯಿತು. ಈ ನಿರ್ಲಕ್ಷ್ಯದ ಆಳವನ್ನು ತಿಳಿಯಲು 5 ವೈದ್ಯರ ತಂಡವನ್ನು ರಚಿಸಲಾಗಿದೆ. ಸೆಪ್ಟೆಂಬರ್ 1 (ಸೋಮವಾರ) ರಂದು ಎಂವೈ ಆಸ್ಪತ್ರೆಯ ಮಕ್ಕಳ ಶಸ್ತ್ರಚಿಕಿತ್ಸಾ ವಾರ್ಡ್ನಲ್ಲಿ ದಾಖಲಾದ ಮಕ್ಕಳನ್ನು ಇಲಿಗಳು ಕಚ್ಚಿವೆ. ನವಜಾತ ಶಿಶುಗಳ ಕೈ, ಕಾಲು ಮತ್ತು ಭುಜಗಳ ಮೇಲೆ…
ಬೆಂಗಳೂರು : ಬೆಂಗಳೂರು ನಗರದ ನಾಗರೀಕರಿಗೆ ಸಮರ್ಥ ಮತ್ತು ಉತ್ತಮ ಸೇವೆ ನೀಡುವ ಸಲುವಾಗಿ ಐದು ನಗರ ಪಾಲಿಕೆಗಳು ಹಾಗೂ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ʼಗ್ರೇಟರ್ ಬೆಂಗಳೂರು ಪ್ರಾಧಿಕಾರʼದ (ಜಿಬಿಎ) ಅಡಿಯಲ್ಲಿ ಐದು ನಗರ ಪಾಲಿಕೆಗಳು ರಚನೆಯಾಗಿವೆ. https://twitter.com/KarnatakaVarthe/status/1963216545015894132 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ʼಗ್ರೇಟರ್ ಬೆಂಗಳೂರು ಪ್ರಾಧಿಕಾರʼದ (ಜಿಬಿಎ) ಅಡಿಯಲ್ಲಿ ಐದು ನಗರ ಪಾಲಿಕೆಗಳು ರಚನೆಯಾಗಿವೆ. https://twitter.com/KarnatakaVarthe/status/1963216623793500391 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ʼಗ್ರೇಟರ್ ಬೆಂಗಳೂರು ಪ್ರಾಧಿಕಾರʼದ (ಜಿಬಿಎ) ಅಡಿಯಲ್ಲಿ ಐದು ನಗರ ಪಾಲಿಕೆಗಳು ರಚನೆಯಾಗಿವೆ. https://twitter.com/KarnatakaVarthe/status/1963216685693063456 https://twitter.com/KarnatakaVarthe/status/1963115772089147468
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (THE KARNATAKA AROGYA SANJEEVINI SCHEME KASS) ಅನುಷ್ಠಾನಗೊಳಿಸಲು ರಚಿಸಲಾದ KASS ಉನ್ನತ (KASS HIGH LEVEL POLICY COMMITTEE)ಯ ಸಂಯೋಜನೆಯನ್ನು ಮಾರ್ಪಡಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ (1)ರ ದಿನಾಂಕ: 27.09.2024 ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ರೂಪಿಸಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ-(KASS)’ಯನ್ನು ಪರಿಣಾಮಕಾರಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸರ್ಕಾರವು ನಾಲ್ಕು ವಿವಿಧ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿದೆ. ಈ ಪೈಕಿ, ಈ ಕೆಳಕಂಡ ಸದಸ್ಯರನ್ನು ಒಳಗೊಂಡ KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿಯನ್ನು (KASS HIGH LEVEL POLICY COMMITTEE) ರಚಿಸಲಾಗಿದೆ. ಸಮಿತಿಯು ಅಗತ್ಯ ಸಂದರ್ಭಗಳಲ್ಲಿ-ಸರ್ಕಾರದ ಕಾರ್ಯದರ್ಶಿ, ಸಿಆಸುಇ (ಇ-ಆಡಳಿತ) ಇವರು ನಿಯೋಜಿಸುವ…
ಬೆಂಗಳೂರು : ಬೆಂಗಳೂರು ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ ವಿತರಿಸುವ ಸಂಬಂಧ ಆರೋಗ್ಯ ಇಲಾಖೆಯು ಇಸ್ಕಾನ್ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಹೌದು, ಬಡರೋಗಿಗಳಿಗೆ ವಿಶೇಷ ಪೌಷ್ಠಿಕ ಆಹಾರ ವಿತರಿಸಲು ಆರೋಗ್ಯ ಇಲಾಖೆಯು ಇಸ್ಕಾನ್ ಜೊತೆಗೆ ಒಪ್ಪಂದ ಮಾಡಿಕೊಂಡಿದೆ ಇದರಿಂದ ಪ್ರತಿ ಆಸ್ಪತ್ರೆಯ 250 ರೋಗಿಗಳಿಗೆ ಪ್ರತಿ ದಿನ ಆಹಾರ ಸರಬರಾಜು ಮಾಡಲಾಗುತ್ತದೆ. ಇದಕ್ಕಾಗಿ 9 ತಿಂಗಳ ಅವಧಿಗೆ ₹1.37 ಕೋಟಿಯನ್ನು ಆರೋಗ್ಯ ಇಲಾಖೆಯಿಂದ ಭರಿಸಲಾಗುತ್ತದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1963221638054338565 ಬೆಂಗಳೂರಿನ ಸಿ.ವಿ. ರಾಮನ್ ನಗರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಊಟ ವಿತರಿಸುವ ಮೂಲಕ ವಿಶೇಷ ಪೌಷ್ಟಿಕ ಆಹಾರ ಯೋಜನೆಗೆ ಚಾಲನೆ ನೀಡಿದ ದಿನೇಶ್ ಗುಂಡೂರಾವ್, ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಯೋಜನೆ ಅನುಷ್ಠಾನಕ್ಕೆ ಬರಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ. ಪ್ರತಿದಿನ ಬೆಳಗಿನ ಉಪಹಾರ, ಸಂಜೆ ಲಘು ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟವನ್ನು ರೋಗಿಗಳಿಗೆ ವಿತರಿಸಲಾಗುವುದು. ರೋಗಿಗಳ…
ಕೆ.ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ ನಿಂದ ಕೋಲಾರ ಜಿಲ್ಲೆಯ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ. ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲ್ಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ – ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ. ಯೋಜನೆ ಬಗ್ಗೆ ಕೆಲವರು ಅಪಪ್ರಚಾರ ಮಾಡಿದರೂ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಬೆಳೆಗಳಿಗೆ, ದನಕರುಗಳಿಗೆ ಯಾವುದೇ ತೊಂದರೆ…
ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ. ಇಂದು ನಾಡಹಬ್ಬ ದಸರಾದ ಕರೆಯೋಲೆ ನೀಡಿ, ನನ್ನನ್ನು ಪ್ರೀತಿಯಿಂದ ಆಮಂತ್ರಿಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಜಿಲ್ಲಾಡಳಿತಕ್ಕೆ ಧನ್ಯವಾದಗಳು. ನಾವೆಲ್ಲರೂ ಜೊತೆಗೂಡಿ ಈ ಬಾರಿಯ ದಸರಾ ಹಬ್ಬವನ್ನು ಮತ್ತಷ್ಟು ಸಂಭ್ರಮದಿಂದ ಆಚರಿಸೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. https://twitter.com/siddaramaiah/status/1963521982462308587
ಸಮಾಜ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಹಾಗೂ ಮೆಟ್ರಿಕ್ ನಂತರದ ಎಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಸುರಕ್ಷಾ ಕ್ರಮಗಳ ಬಗ್ಗೆ ಜಿ.ಪಂ. ಸಿಇಓ ಸುತ್ತೋಲೆ ಹೊರಡಿಸಿದ್ದಾರೆ. ನಿಲಯ ಮೇಲ್ವಿಚಾರಕರು ವಿದ್ಯಾರ್ಥಿನಿಲಯಗಳಲ್ಲಿ ಅಳವಡಿಸಿರುವ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಸಿ.ಸಿ.ಟಿವಿ ಕ್ಯಾಮಾರ ಕೆಟ್ಟು ಹೋದ ಸಂದರ್ಭದಲ್ಲಿ ತಕ್ಷಣವೇ ದುರಸ್ತಿ ಮಾಡಿಸಿ ಚಾಲ್ತಿಯಲ್ಲಿರುವಂತೆ ನೋಡಿ ಕೊಳ್ಳಬೇಕು. ಪ್ರತಿ ತಿಂಗಳು ಸಿ.ಸಿ.ಟಿವಿ ವೀಡಿಯೋ ದೃಶ್ಯಗಳನ್ನು ಸಿ.ಡಿ. ಅಥವಾ ಪೆನ್ಡ್ರೈ ವ್ನಓಲ್ಲಿ ಸಂಗ್ರಹಿಸಿಡಬೇಕು. ವಿದ್ಯಾರ್ಥಿನಿಲಯದ ದ್ವಾರದಲ್ಲಿ ಸಿಬ್ಬಂದಿ ಹಾಗೂ ರಿಜಿಸ್ಟರ್ ಇರಿಸಿ, ವಿದ್ಯಾರ್ಥಿಗಳು ಹೊರಗೆ ತೆರಳುವ ಹಾಗೂ ಒಳಗೆ ಬರುವ ಮುನ್ನ ಹೆಸರು, ಹೊಗುವ ಸಮಯ, ಸ್ಥಳ ಮತ್ತು ದಿನಾಂಕವನ್ನು ಕಡ್ಡಾಯವಾಗಿ ನಮೂದಿಸಬೇಕು. ವಿದ್ಯಾರ್ಥಿಗಳು ರಜೆ ಕೋರಿದ್ದಲ್ಲಿ ಪೋಷಕರಿಗೆ ಅಥವಾ ಪತ್ರದ ಮೂಲಕ ಖಾತರಿಪಡಿಸಿಕೊಂಡ ನಂತರವೇ ವಿದ್ಯಾರ್ಥಿಗಳಿಂದ ರಜೆ ಅರ್ಜಿ ಪಡೆದು ಮಂಜೂರು ಮಾಡಬೇಕು. ವಿದ್ಯಾರ್ಥಿನಿಯರು ರಜೆ ಮೇಲೆ ತೆರಳಿದ ಸಂದರ್ಭದಲ್ಲಿ ಪೋಷಕರ ಮೋಬೈಲ್ ಸಂಖ್ಯೆಗೆ ವಿಡಿಯೋ ಕರೆ ಮಾಡಿ ಸುರಕ್ಷಿತವಾಗಿ…
ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ನಾಡ ಕಛೇರಿಯ 44 ಸೇವೆಗಳು ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರದಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000 ಕ್ಕೆ ಕರೆಮಾಡಿ. ಪಂಚಮಿತ್ರ ಸಹಾಯವಾಣಿ- ಸದಾ ನಿಮ್ಮೊಂದಿಗೆ. ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಈಗ ನಾಡಕಚೇರಿ ಸೇವೆಗಳು ಲಭ್ಯ, ಜಾತಿ ಮತ್ತು ಆದಾಯ ಪ್ರಮಾಣಕ್ಕೆ ಅಲೆದಾಡುವ ಅಗತ್ಯವಿಲ್ಲ, ನಾಡಕಚೇರಿಯ 44 ಸೇವೆಗಳು ಬಾಪೂಜಿ ಸೇವಾಕೇಂದ್ರಗಳಲ್ಲಿ ಸಿಗಲಿವೆ. ಸಾರ್ವಜನಿಕರ ಅನುಕೂಲಕ್ಕಾಗಿ ಬಾಪೂಜಿ ಸೇವಾ ಕೇಂದ್ರಗಳಲ್ಇ 85 ಸೇವೆಗಳು ಲಭ್ಯವಿವೆ.