Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದ್ದು, ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಲಿದೆ.
ಅಗತ್ಯವಿರುವ ಜನರಿಗೆ ಅಕ್ಕಿ, ಗೋಧಿ ಮುಂತಾದ ಪಡಿತರವನ್ನು ಪಡಿತರ ಚೀಟಿ ಮೂಲಕ ನೀಡಲಾಗುತ್ತದೆ. ಈ ಪಡಿತರ ಉಚಿತವಾಗಿ ಲಭ್ಯವಿದೆ. ಆದಾಗ್ಯೂ, ಇದಕ್ಕೂ ಅರ್ಹತೆಯನ್ನು ಕಾಯ್ದಿರಿಸಲಾಗಿದೆ. ಈಗ ಪಡಿತರ ಚೀಟಿಯ KYC ಮಾಡುವುದು ಕಡ್ಡಾಯವಾಗಿದೆ. ಪ್ರಸ್ತುತ, ನಿಮ್ಮನ್ನು ಪಡಿತರ ಚೀಟಿ ಇ-ಕೆವೈಸಿ ಮಾಡಲು ಕೇಳಲಾಗುತ್ತಿದ್ದರೆ, ಮೊದಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ನವೀಕರಿಸಿ. ಮೊಬೈಲ್ ಸಂಖ್ಯೆಯನ್ನು ನವೀಕರಿಸದೆ, ನೀವು ಪಡಿತರ ಚೀಟಿ KYC ಮಾಡಲು ಸಾಧ್ಯವಾಗುವುದಿಲ್ಲ. ಆದರೆ ಎಲ್ಲಾ ಪಡಿತರ ಚೀಟಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ನವೀಕರಿಸಬೇಕಾಗಿಲ್ಲ (Ration Card Mobile Number Update). ಮೊಬೈಲ್ ಸಂಖ್ಯೆಯನ್ನು ಯಾರು ನವೀಕರಿಸಬೇಕು? ನೀವು ಇತ್ತೀಚೆಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಿದ್ದರೆ. ನೀವು ಇನ್ನು ಮುಂದೆ ಪಡಿತರ ಚೀಟಿಯಲ್ಲಿ ನೋಂದಾಯಿಸಲಾದ ಫೋನ್ ಸಂಖ್ಯೆಯನ್ನು ಬಳಸುತ್ತಿಲ್ಲದಿದ್ದರೆ, ಮೊಬೈಲ್ ಸಂಖ್ಯೆಯನ್ನು ನವೀಕರಿಸಬೇಕಾಗುತ್ತದೆ. ಏಕೆಂದರೆ KYC ಮಾಡುವಾಗ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ. OTP ಇಲ್ಲದೆ KYC ಮಾಡುವುದು ಅಸಾಧ್ಯ. ಪಡಿತರ ಚೀಟಿಯಲ್ಲಿ ಮೊಬೈಲ್ ಸಂಖ್ಯೆಯನ್ನು ನವೀಕರಿಸುವುದು ಹೇಗೆ?…
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತೆ ನೀಡಿದ ದೂರಿನ ಆಧಾರದ ಮೇಲೆ ಶಾಸಕ ಮುನಿರತ್ನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತೆ ಮುನಿರತ್ನ ಸೇರಿ ಬೆಂಬಲಿಗಾರದ ವಸಂತ್, ಚನ್ನಕೇಶವ ವಿರುದ್ಧ ದೂರು ದಾಖಲಿಸಿದ್ದಾರೆ. 2013 ರಲ್ಲಿ ಸಾಮೂಹಿಕ ಅತ್ಯಾಚಾರ ಎಂದು ಮಹಿಳೆ ದೂರು ನೀಡಿದ್ದು, ಜೆಪಿ ಪಾರ್ಕ್ ನ ಶಾಸಕರ ಕಚೇರಿಯಲ್ಲಿ ಅತ್ಯಾಚಾರ ಎಸಗಲಾಗಿತ್ತು ಎಂದು ಆರೋಪಿಸಿದ್ದಾರೆ. ಅಪರಿಚಿತನಿಂದ ಇಂಜೆಕ್ಷನ್ ತರಿಸಿ ಇಂಜೆಕ್ಟ್ ಮಾಡಿದ್ದಾರೆ. ಇಂಜೆಕ್ಷನ್ ನಿಂದ ನನಗೆ ಇಡಿಆರ್ ಕಾಯಿಲೆಯಿದೆ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಮಹಿಳೆ ಆರೋಪಿಸಿದ್ದಾರೆ.
ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಕಾರಿನಲ್ಲಿದ್ದ ಓರ್ವ ಸಾನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮನಗೂಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಅಪಘಾತ ಸಂಭವಿಸಿದೆ. ಸ್ಕಾರ್ಪಿಯೋ ಕಾರು ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿದ್ದು, ಸ್ಕಾರ್ಪಿಯೋದಲ್ಲಿದ್ದ ನಾಲ್ವರು ಹಾಗೂ ಕಾರಿನಲ್ಲಿದ್ದ ಓರ್ವ ಸಾನ್ನಪ್ಪಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆಯೊಂದು ನಡೆದಿದ್ದು, ಸಾಮಾಜಿಕ ಬಹಿಷ್ಕಾರಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ ಗ್ರಾಮದ ನಿವಾಸಿ ರಂಗಸ್ವಾಮಿ ಎಂಬುವರು ಸಾಮಾಜಿಕ ಬಹಿಷ್ಕಾರಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗದಗ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯವೊಂದು ನಡೆದಿದ್ದು, ಲವರ್ ಜೊತೆಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ ಶಂಕ್ರಪ್ಪ ಅಲಿಯಾಸ್ ಮತ್ತು ಕೊಳ್ಳಿ ಎಂಬ ವ್ಯಕ್ತಿಯನ್ನು ಪತ್ನಿಯೇ ಲವರ್ ಜೊತೆಗೆ ಸೇರಿಕೊಂಡು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಚಾಲಕನಾಗಿ ಕೆಲಸ ಮಾಡುತ್ತಿದ್ದ ಶಂಕ್ರಪ್ಪ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ವಿದ್ಯಾರನ್ನು ಪ್ರೀತಿಸಿ ಮದುವೆಯಾಗಿದ್ದ. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಈ ನಡುವೆ ಶಿವಕುಮಾರ್ ಎಂಬುವರೊಂದಿಗೆ ವಿದ್ಯಾಗೆ ಅಕ್ರಮ ಸಂಬಂಧ ಬೆಳೆದಿತ್ತು. ಈ ವಿಷಯ ಶಂಕ್ರಪ್ಪನಿಗೆ ಗೊತ್ತಾಗಿದ್ದರಿಂದ ಹೆದರಿದ ಶಿವಕುಮಾರ್ ಮತ್ತು ವಿದ್ಯಾ ಶಂಕ್ರಪ್ಪನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆ ಮಾಡಿದ ನಂತರ ಶವವನ್ನು ಕೈಕಾಲು ಕಟ್ಟಿ ಹಾಸಿಗೆಯಲ್ಲಿ ಸುತ್ತಿ ಮುಗಳಿ ಗ್ರಾಮದ ಜಮೀನಿನ ಬಾವಿಯಲ್ಲಿ ಎಸೆದಿದ್ದಾರೆ. ಘಟನೆ ಸಂಬಂಧ ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಲೇಖಕಿ ಬಾನು ಮುಸ್ತಾಕ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು. ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಸ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ. ಬೂಕರ್ ಪ್ರಶಸ್ತಿಗೆ ಭಾಜನವಾಗಿರುವ ಅವರ ಕೃತಿ ‘ಹೃದಯ ದೀಪ’ವನ್ನು ಇಂಗ್ಲೀಷ್ ಗೆ ಅನುವಾದಿಸಿರುವ ಪ್ರತಿಭಾವಂತ ಲೇಖಕಿ ದೀಪಾ ಭಸ್ತಿ ಅವರಿಗೂ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ರಾಯಚೂರು : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ರಾಯಚೂರಿನಲ್ಲಿ ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಮಳೆಗೆ ಸಾವನ್ನಪ್ಪಿದವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಜಮೀನಿನಲ್ಲಿ ಫೋನಿನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ದೇವಕಿ ಮ್ಯಾಗೇರಿ (40) ಸಾವನ್ನಪ್ಪಿದ್ದಾರೆ. ಮಳೆ ನಿಂತ ನಂತರ ಗ್ರಾಮಸ್ಥರು ಸ್ಥಳಕ್ಕೆ ಓಡಿ ಹೋಗಿ ನೋಡಿದಾಗ ಸಿಡಿಲು ಬಡಿದು ದೇವಕಿ ಮೃತಪಟ್ಟಿರುವುದು ತಿಳಿದುಬಂದಿದೆ.
ನವದೆಹಲಿ : ಭಯೋತ್ಪಾದನೆ ವಿರುದ್ಧದ ಆಪರೇಷನ್ ಸಿಂಧೂರ್ ಬಗ್ಗೆ ಭಾರತದ ನಿಲುವು ತುಂಬಾ ಸ್ಪಷ್ಟವಾಗಿದೆ. ಸರ್ಕಾರ ಮತ್ತು ಸೇನೆಯು ಒಂದಲ್ಲ ಹಲವಾರು ಬಾರಿ ಆಪರೇಷನ್ ಸಿಂಧೂರ್ ಮುಗಿದಿಲ್ಲ ಎಂದು ಹೇಳಿವೆ. ಈ ಸಂಬಂಧ ಮಂಗಳವಾರ ಭಾರತೀಯ ಸೇನೆಯ ಹಿರಿಯ ಅಧಿಕಾರಿಯೊಬ್ಬರು, ಆಪರೇಷನ್ ಸಿಂಧೂರ್ ಇನ್ನೂ ಕೊನೆಗೊಂಡಿಲ್ಲ ಅದನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಹೇಳಿದರು. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಬ್ರಿಗೇಡ್ ಕಮಾಂಡರ್ ಮುದಿತ್ ಮಹಾಜನ್ ಮಾತನಾಡಿ, ಭಾರತೀಯ ಸೇನೆಯು ಜಾಗರೂಕವಾಗಿದೆ ಮತ್ತು ಸನ್ನದ್ಧವಾಗಿದೆ. ಮತ್ತೊಮ್ಮೆ ಸವಾಲು ಹಾಕಲು ಪ್ರಯತ್ನಿಸಿದರೆ, ಸೂಕ್ತ ಉತ್ತರ ನೀಡಲಾಗುವುದು. ಆಪರೇಷನ್ ಸಿಂಧೂರ್ ಅನ್ನು ಸದ್ಯಕ್ಕೆ ಮುಂದೂಡಲಾಗಿದೆ. ಭಾರತೀಯ ಸೇನೆಯು ಜಾಗರೂಕವಾಗಿದೆ ಮತ್ತು ಸನ್ನದ್ಧವಾಗಿದೆ. ಮತ್ತೆ ಸವಾಲು ಹಾಕಿದರೆ, ನಾವು ಮತ್ತೆ ಪ್ರತಿಕ್ರಿಯಿಸುತ್ತೇವೆ ಎಂದು ಹೇಳಿದ್ದಾರೆ. ಪಾಕಿಸ್ತಾನಿ ಸೇನೆಯು ಸಂಖ್ಯೆಯಲ್ಲಿ ಮಾತ್ರವಲ್ಲದೆ ನೈತಿಕತೆ ಮತ್ತು ಉಪಕ್ರಮದಲ್ಲೂ ನಷ್ಟವನ್ನು ಅನುಭವಿಸಿದೆ ಎಂದು ಅವರು ಹೇಳಿದರು. ಪಾಕಿಸ್ತಾನ ತನ್ನದೇ ದೇಶದಲ್ಲಿ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ನಮಗೆ ಇದುವರೆಗಿನ ಮಾಹಿತಿಯ ಪ್ರಕಾರ ಪಾಕಿಸ್ತಾನ ಭಾರೀ…