Author: kannadanewsnow57

ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರಿತ ಕೃಷಿಯಿಂದ ಸುಸ್ಥಿರ ಕೃಷಿಯನ್ನಾಗಿ ರೈತರ ಜೀವನಮಟ್ಟವನ್ನು ಉತ್ತಮಪಡಿಸಲು ಕೃಷಿ ಭಾಗ್ಯ ಮತ್ತು ಕೃಷಿ ಭಾಗ್ಯ ಎಸ್ಡಿಎಮ್ಎಫ್ ಈ ಯೋಜನೆಯನ್ನು ಪ್ಯಾಕೇಜ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಧಾರವಾಡ ಜಿಲ್ಲೆಗೆ ಪ್ರಸ್ತುತ ಸಾಲಿಗೆ ಈ ಕಾರ್ಯಕ್ರಮ ನಿಗದಿಯಾಗಿರುತ್ತದೆ. ಕೃಷಿ ಭಾಗ್ಯ ಯೋಜನೆಯಡಿ ಒಟ್ಟಾರೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಎಲ್ಲಾ ಘಟಕಗಳನ್ನು ರೈತ ಫಲಾನುಭವಿಗಳು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ತಪ್ಪದೇ ಅಳವಡಿಕೆ ಮಾಡಬೇಕಾಗುತ್ತದೆ. ಕೃಷಿ ಭಾಗ್ಯ ಯೋಜನೆಗಳು ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ ನಿರ್ಮಾಣ (ಕೃಷಿಹೊಂಡ), ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್, ಪೆಟ್ರೋಲ್, ಸೋಲಾರ್ ಪಂಪ್ಸೆಟ್, ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು ಹನಿ) ನೀರಾವರಿ. ಸದರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಅನುದಾನ ಲಭ್ಯವಿದ್ದು, ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಿದ ಕೂಡಲೇ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಆದ್ದರಿಂದ ಯೋಜನೆಯ ಅನುಕೂಲ ಪಡೆದುಕೊಳ್ಳಲು…

Read More

ಬೆಳಗಾವಿ ಸುವರ್ಣ ವಿಧಾನಸೌಧ :  ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಮಕ್ಕಳಿಗೂ ಶೂ-ಸಾಕ್ಸ್ ವಿತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವÀ  ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿಷಯವಾರು ಹಾಗೂ ಭಾಷಾವಾರು ಖಾಲಿ ಹುದ್ದೆಗಳಿಗೆ ಅತಿಥಿ…

Read More

ಬೆಳಗಾವಿ : ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ನಾನಾ ಕ್ರಮ ತೆಗೆದುಕೊಳ್ಳಲಾಗಿದೆ. ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 111 ಅನ್ನು ಅಳವಡಿಸಿ ನಿಯಮಾನುಸಾರ ಅಗತ್ಯವಾದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕ್ರಮದ ಮೂಲಕ ಸಂಘಟಿತ ಅಪರಾಧ ಚಟುವಟಿಕೆಗಳಿಗೆ ಅಡ್ಡಿ ಉಂಟಾಗುವಂತೆ ಹಾಗೂ ವಾಹನ ಕಳವು ಪ್ರಕರಣಗಳ ಪತ್ತೆ ಮತ್ತು ತಡೆಗಟ್ಟುವಿಕೆಯಲ್ಲಿ ಪರಿಣಾಮಕಾರಿ ಕ್ರಮ ಜರುಗುವಂತೆ ನೋಡಿಕೊಳ್ಳಲಾಗಿದೆ. ಆರೋಪಿಗಳಿಗೆ ಸುಲಭವಾಗಿ ಜಾಮೀನು ದೊರೆಯದಂತೆ ಕಠಿಣ ಕಾನೂನು ಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಆರೋಪಿಗಳ ಮೇಲಿನ ನಿಗಾವನ್ನು ಮತ್ತಷ್ಟು…

Read More

ಬೆಳಗಾವಿ : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದರಾಮಯ್ಯ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು. ಇನ್ನು ರಾಜ್ಯ ಸರ್ಕಾರ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್…

Read More

ಬೆಳಗಾವಿ ಸುವರ್ಣವಿಧಾನಸೌಧ : ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಶೇ.80ರವರೆಗೆ ಹುದ್ದೆಗಳ ನೇಮಕಾತಿಯನ್ನು ಆಡಳಿತ ಇಲಾಖೆಗಳ ಹಂತದಲ್ಲಿಯೇ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಇಲಾಖಾ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು. ಮೇಲ್ಮನೆಯಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರದ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ನಿಯಮ 42ರಲ್ಲಿ ರಾಜ್ಯದ ಹಣಕಾಸಿನ ಮೇಲೆ ಪರಿಣಾಮ ಉಂಟು ಮಾಡುವಂತಹ ವಿಶೇಷವಾಗಿ ಯಾವುದೇ ಹುದ್ದೆಯನ್ನು ಸಾರ್ವಜನಿಕ ಹುದ್ದೆಗೆ ಸೇರಿಸುವ ಅಥವಾ ಸಾರ್ವಜನಿಕ ಸೇವೆಯಿಂದ ರದ್ದುಪಡಿಸುವ ಅಥವಾ ಯಾವುದೇ ಹುದ್ದೆಯ ಅವಧಿಯನ್ನು ಅಥವಾ ಉಪಲಬ್ದಗಳನ್ನು ವ್ಯತ್ಯಾಸ ಮಾಡುವ ಪ್ರಸ್ತಾವನೆಗಳಿಗೆ ಆರ್ಥಿಕ ಇಲಾಖೆಯ ಅನುಮತಿ ಪಡೆಯಲು ತಿಳಿಸಲಾಗಿರುತ್ತದೆ. ಆದ್ದರಿಂದ ಹುದ್ದೆಗಳ ಸೃಜನ ಅಥವಾ ಹುದ್ದೆಗಳ ಸಂಖ್ಯೆಯನ್ನು ಒಳಗೊಂಡ ಪ್ರಸ್ತಾವನೆ, ಯೋಜನೆಗಳ ಕುರಿತು ಆದೇಶಗಳನ್ನು ಹೊರಡಿಸುವ ಪೂರ್ವದಲ್ಲಿ ಆರ್ಥಿಕ ಇಲಾಖೆಯ ಸಹಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಆರ್ಥಿಕ ಇಲಾಖೆಯ ಪೂರ್ವಾನುಮತಿಯನ್ನು ಪಡೆಯದೇ ಆಡಳಿತ ಇಲಾಖೆಗಳು ಹುದ್ದೆಗಳನ್ನು…

Read More

ರಾಜ್ಯ ಸರಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ಆರೋಗ್ಯ ಸಂಜೀವಿನಿ ಯೋಜನೆಗೆ ಧಾರವಾಡ ಜಿಲ್ಲೆಯಲ್ಲಿ 16 ಆಸ್ಪತ್ರೆಗಳು ಸೇರ್ಪಡೆಯಾಗಿದ್ದು, ಹುಬ್ಬಳ್ಳಿ ಹಾಗೂ ಧಾರವಾಡದ ತಲಾ ಒಂದು ಆಸ್ಪತ್ರೆಗಳು ಯೋಜನೆಗೆ ಒಳಪಡಲು ಒಪ್ಪಿಗೆ ಸೂಚಿಸಿದ್ದು, ಸರ್ಕಾರದೊಂದಿಗೆ ಎಂಓಯು ಹಂತದಲ್ಲಿದೆ. ಹುಬ್ಬಳ್ಳಿ ಧಾರವಾಡ ಅವಳಿ ನಗರದ ಪ್ರಮುಖ ನರ್ಸಿಂಗ್ ಆಸ್ಪತ್ರೆಗಳು ಈ ಯೋಜನೆಗೆ ಸ್ವಯಂ ಪ್ರೇರಣೆಯಿಂದ ಒಳಪಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮನವಿ ಮಾಡಿದರು. ಅವರು (ಡಿ.10) ದಿನ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕೆಪಿಎಂಇ ಕಾನೂನುನಡಿ ನೋಂದಾಯಿತರಾಗಿರುವ ಹುಬ್ಬಳ್ಳಿ ಧಾರವಾಡ ಅವಳಿ ನಗರದ ಪ್ರಮುಖ ಆಸ್ಪತ್ರೆಗಳ ವೈದ್ಯರ ಹಾಗೂ ಮುಖ್ಯಸ್ಥರ, ಪ್ರತಿನಿಧಿಗಳ ಸಭೆ ಜರುಗಿಸಿ, ಮಾತನಾಡಿದರು. ಜಿಲ್ಲೆಯಲ್ಲಿರುವ ಸುಮಾರು 23 ಲಕ್ಷ ಜನರಿಗೆ ಸರ್ಕಾರದ ವಿವಿಧ ಯೋಜನೆ, ಕಾಮಗಾರಿ, ಕಾರ್ಯಕ್ರಮಗಳ ಸೇವೆ ನೀಡಲು ವಿವಿಧ ಹಂತದಲ್ಲಿ ಅಂದಾಜು 22 ರಿಂದ 23 ಸಾವಿರ ಸರ್ಕಾರಿ ನೌಕರರಿದ್ದಾರೆ. ಅವರ ಮಾನಸಿಕ, ದೈಹಿಕ ಆರೋಗ್ಯವು ಉತ್ತಮ…

Read More

ಧಾರವಾಡ : ಕಳೆದ ಕೆಲವು ತಿಂಗಳುಗಳ ಹಿಂದೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್‌ ಮಾಡುವ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿ ಮಹತ್ವದ ಆದೇಶ ಪ್ರಕಟಿಸಿದೆ.ಈ ಪ್ರಕರಣ ನ್ಯಾಯಾಲಯಕ್ಕೆ ಬಾರಬಾರದಿತ್ತು. ಜನೌಷಧಿ ಅಂಗಡಿ ಇಡಲು ಅವಕಾಶ ಕೊಡದೇ ಇದ್ದರೆ ಜನರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಕಾಣುತ್ತದೆ ಎಂದು ಅಭಿಪ್ರಾಯಪಟ್ಟು ಸರ್ಕಾರದ ಆದೇಶವನ್ನು ರದ್ದು ಮಾಡಿದೆ. ಜನೌಷಧಿ ಅಂಗಡಿಯವರ ಲೀಸ್ ತಿಂಗಳು ಮುಗಿದ ಹಿನ್ನೆಲೆ ಅವರಿಗೆ ಸರ್ಕಾರಿ ಆಸ್ಪತ್ರೆ ಆವರಣದಿಂದ ಹೊರಗೆ ಔಷಧಿ ಅಂಗಡಿ ಇಡಲು ಸೂಚಿಸಲಾಗಿದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದರು. ಜನೌಷಧಿ ಅಂಗಡಿಯಲ್ಲಿ ಕಡಿಮೆ ಬೆಲೆಗೆ ಹಣ ಪಾವತಿಸಿ ಔಷಧಿ ತೆಗೆದುಕೊಳ್ಳುತ್ತಾರೆ. ಹೀಗಾಗಿ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ಎರಡು ಕಡೆಯ ವಾದ ಆಲಿಸಿದ ನ್ಯಾಯಾಲಯ, 120 ಚದರ ಅಡಿ ಜಾಗದಲ್ಲಿ ಜನೌಷಧಿ ಇಟ್ಟು ಬಡವರಿಗೆ…

Read More

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಂಟಿ ರೇಬೀಸ್ ವ್ಯಾಕ್ಸಿನ್ (ARV) ಮತ್ತು ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (RIG) ಉಚಿತವಾಗಿ ಒದಗಿಸುವುದಕ್ಕಾಗಿ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಅಂಟಿ ರೇಬೀಸ್ ಲಸಿಕೆ (ARV) ಮತ್ತು Equine ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ERIG) ಒದಗಿಸುವ ಬಗ್ಗೆ ಹಿಂದಿನ ಸುತ್ತೋಲೆಯನ್ನು ಉಲ್ಲೇಖಿಸಿ, ಈ ಅಗತ್ಯ ಚಿಕಿತ್ಸೆಗಳ ಲಭ್ಯತೆಯನ್ನು ಸುಗಮಗೊಳಿಸಲು ಈ ಕೆಳಗಿನ ಪರಿಷ್ಕೃತ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ರೇಬೀಸ್ ವಿರೋಧಿ ಲಸಿಕೆ (ARV) ಮತ್ತು Equine ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ERIG) ಒದಗಿಸುವ ಕುರಿತು 30.11.2024 ರಂದು ಹೊರಡಿಸಲಾದ ಅದೇ ಸಮ ಸಂಖ್ಯೆಯ ಹಿಂದಿನ ಸುತ್ತೋಲೆಯನ್ನು ಉಲ್ಲೇಖಿಸಿ, 2025 ರ 07.11.2025 ರ ರಿಟ್ ಅರ್ಜಿ (ಸಿವಿಲ್) ಸಂಖ್ಯೆ (ಗಳು) 5 ರಲ್ಲಿ ಭಾರತದ ಗೌರವಾನ್ವಿತ ಸುಪ್ರೀಂ ಕೋರ್ಟ್‌ ಆದೇಶಗಳು ಮತ್ತು ಕರ್ನಾಟಕ ಸರ್ಕಾರದ ಸಚಿವಾಲಯದಿಂದ ಹೊರಡಿಸಲಾದ ಸುತ್ತೋಲೆಯನ್ನು ಗಮನದಲ್ಲಿಟ್ಟುಕೊಂಡು…

Read More

ಬೆಂಗಳೂರು : ರಾಜ್ಯದ ಕ್ರೀಡಾಪಟುಗಳಿಗೆ ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ ನೀಡಲಾಗುತ್ತದೆ ಅಂತ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜ ಪ್ರಶ್ನೆ ಕೇಳಿದ್ರು. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳು ಕೊಡಬೇಕು. ಈವರೆಗೂ 13 ಜನಕ್ಕೆ ಮಾತ್ರ ಹುದ್ದೆ ನೀಡಲಾಗಿದೆ. ನೇರ ನೇಮಕಾತಿಯಲ್ಲಿ 3% ಹುದ್ದೆ ಕ್ರೀಡಾಪಟುಗಳಿಗೆ ಮೀಸಲು ಇಡಬೇಕು. ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಪ್ರೋತ್ಸಾಹ ಕೊಡಲು ಒಂದು ಪಾಲಿಸಿ ತರಬೇಕು. ಕಬಡ್ಡಿಗೂ ಪ್ರೋತ್ಸಾಹ ಕೊಡಬೇಕು ಮನವಿ ಮಾಡಿದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿ, ಈವರೆಗೂ 13 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಕೊಡಲಾಗಿದೆ. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್ ಗೆದ್ದವರಿಗೆ ಹುದ್ದೆ ಕೊಡ್ತೀವಿ. ಪೊಲೀಸ್ ಇಲಾಖೆಯಲ್ಲಿ, ಅರಣ್ಯ ಇಲಾಖೆಯಲ್ಲಿ 3% ಮೀಸಲಾತಿ ಮಾಡಿದ್ದೇವೆ. ಉಳಿದ ಇಲಾಖೆಯಲ್ಲಿ 2% ಮೀಸಲಾತಿ ನೀಡಲು ನಿರ್ಧಾರ ಮಾಡಿದ್ದೇವೆ. ಆದಷ್ಟೂ ಬೇಗ ಆದೇಶ ಮಾಡ್ತಿವಿ.ಕಬಡ್ಡಿಗೂ ಪ್ರೋತ್ಸಾಹ ಕೊಡಲು ಪರಿಶೀಲನೆ…

Read More

ಬೆಂಗಳೂರು : ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ / ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿ.ಎಸ್.ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ 50% (ಶೇ.ಐವತ್ತರಷ್ಟು ಮಾತ್ರ) ರಷ್ಟು ರಿಯಾಯಿತಿ ನೀಡಿ ನವೆಂಬರ್ 21,2025 ರಿಂದ ಡಿಸೆಂಬರ್ 12, 2025ರ ವರೆಗೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಕಲಾವಕಾಶ ನೀಡಲಾಗಿದೆ. ವಾಹನದ ಮಾಲೀಕರು ಈ ಅವಧಿಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ದಂಡದ ಶೇ. 50ರಷ್ಟು ಮೊತ್ತವನ್ನು ಹತ್ತಿರದ ಹಿರಿಯ ಪ್ರಾದೇಶಿಕ ಸಾರಿಗೆ / ಪ್ರಾದೇಶಿಕ ಸಾರಿಗೆ / ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪಾವತಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಿಯಾಯಿತಿಯೊಂದಿಗೆ ಪಾವತಿ ಮಾಡುವ ವಿಧಾನ: 1.ಈ ಕೆಳಗಿನ ಮೊಬೈಲ್ ಆಪ್ಗಳನ್ನು ಬಳಸಿ (ಪ್ಲೇ ಸ್ಟೋರ್ ಮತ್ತು ಅಪಲ್ ಸ್ಟೋರ್ನಲ್ಲಿ ಲಭ್ಯ): ಕರ್ನಾಟಕ ರಾಜ್ಯ ಪೊಲೀಸ್ ಆಪ್…

Read More