Author: kannadanewsnow57

ನವದೆಹಲಿ: ಟಿ20 ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನದ ಪಂದ್ಯಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಭಾರತ, ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ನೀಡಲಾಗಿದ್ದು, ಸೆಪ್ಟೆಂಬರ್ 14ರಂದು ಭಾರತ- ಪಾಕಿಸ್ತಾನ ದುಬೈನಲ್ಲಿ ಮುಖಾಮುಖಿಯಾಗಲಿವೆ. 2025ರ ಏಷ್ಯಾ ಕಪ್‌ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯು ಕ್ರಿಕೆಟ್‌’ನ ಆಚೆಗೂ ವಿಸ್ತರಿಸಿರುವ ತೀವ್ರ ಚರ್ಚೆಯನ್ನ ಮತ್ತೆ ಹುಟ್ಟುಹಾಕಿದೆ. ಈ ವರ್ಷದ ಆರಂಭದಲ್ಲಿ ಪಹಲ್ಗಾಮ್‌’ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸಾರ್ವಜನಿಕರ ಭಾವನೆ ಹೆಚ್ಚುತ್ತಿರುವ ಕಾರಣ, ಪಂದ್ಯಾವಳಿಯನ್ನು ಬಹಿಷ್ಕರಿಸಬೇಕೆಂಬ ಕೂಗು ಜೋರಾಗಿತ್ತು. ಆದಾಗ್ಯೂ, ಭಾರತವನ್ನ ಪಂದ್ಯಾವಳಿಯಲ್ಲಿ ಭಾಗವಹಿಸುವುದನ್ನು ತಡೆಯಲಾಗುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವಾಲಯ ಹೇಳಿದೆ. ಪಾಕಿಸ್ತಾನದೊಂದಿಗಿನ ಕ್ರೀಡೆಗಳ ಬಗ್ಗೆ ಭಾರತದ ನಿಲುವು ಅದರ ವಿಶಾಲ ರಾಜತಾಂತ್ರಿಕ ವಿಧಾನಕ್ಕೆ ಅನುಗುಣವಾಗಿದೆ ಎಂದು ಸರ್ಕಾರ ಪುನರುಚ್ಚರಿಸಿತು. ಪಾಕಿಸ್ತಾನವನ್ನು ಒಳಗೊಂಡ ಕ್ರೀಡಾಕೂಟಗಳಿಗೆ ಭಾರತದ ವಿಧಾನವು ಆ ದೇಶದೊಂದಿಗೆ ವ್ಯವಹರಿಸುವಾಗ ಅದರ ಒಟ್ಟಾರೆ ನೀತಿಯನ್ನು ಪ್ರತಿಬಿಂಬಿಸುತ್ತದೆ. ಪರಸ್ಪರರ ದೇಶದಲ್ಲಿ ದ್ವಿಪಕ್ಷೀಯ ಕ್ರೀಡಾಕೂಟಗಳಿಗೆ ಸಂಬಂಧಿಸಿದಂತೆ, ಭಾರತೀಯ ತಂಡಗಳು ಪಾಕಿಸ್ತಾನದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸುವುದಿಲ್ಲ. ಪಾಕಿಸ್ತಾನಿ…

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಒಳ ಮೀಸಲಾತಿಯ ಆದೇಶ ಹೊರಬಿದ್ದ ನಂತರ ಎಲ್ಲಾ ನೇಮಕಾತಿ ಪ್ರಕ್ರಿಯೆಗಳು ಪ್ರಾರಂಭಗೊಳಲಿದ್ದು, ಒಂದು ಬಾರಿಗೆ ವಯೋಮಿತಿ ಸಡಿಲಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಕಟಿಬದ್ಧವಾಗಿದ್ದು ಈ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ತಿಳಿಸಿದರು. ಒಳಮೀಸಲಾತಿ ಕುರಿತು ವಿಧಾನ ಪರಿಷತ್ನಲ್ಲಿ ಉತ್ತರಿಸಿದ ಮುಖ್ಯಮಂತ್ರಿಗಳು ಮಾನ್ಯ ಸರ್ವೋಚ್ಛ ನ್ಯಾಯಾಲಯವು 2024ರಲ್ಲಿ ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ ನೀಡಲಾದ ತೀರ್ಪಿನಲ್ಲಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರವಿದ್ದು, ಸಂವಿಧಾನದ ಅನುಚ್ಚೇದ 14, 15 ಮತ್ತು 16 ರ ಮೂಲ ಆಶಯವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಒಳ ಮೀಸಲಾತಿ ವ್ಯವಸ್ಥೆ ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರವು 12.11.2024 ರ ಆದೇಶದಂತೆ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗವನ್ನು…

Read More

ಸೇವಾನಿರತ ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳ ಮೇಲೆ ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರು ಯಾವುದೇ ಆತಂಕಗಳಿಲ್ಲದೇ ನಿರ್ಭೀತಿಯಿಂದ ಪ್ರಮಾಣಿಕವಾಗಿ ಜನಸಾಮಾನ್ಯರ ಸೇವೆಗೆ ಸಮರ್ಪಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸರ್ಕಾರಿ ನೌಕರರ ಕುಂದು-ಕೊರತೆ, ಸಮಸ್ಯೆ, ಸೇವಾಸೌಲಭ್ಯಗಳ ತ್ವರಿತ ಸ್ಪಂದನೆಗಾಗಿ ರಚಿಸಲಾಗಿರುವ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನೌಕರರಿಗೆ ತಮ್ಮ ಕಾರ್ಯಕ್ಷೇತ್ರದಲ್ಲಿ ಯಾವುದೇ ಅಭದ್ರತೆ ಕಾಡದಂತೆ ನೋಡಿಕೊಳ್ಳಬೇಕಾದುದು ಹಾಗೂ ವ್ಯವಸ್ಥೆಗೆ ಪೂರಕವಾಗಿ ಸಹಕರಿಸಬೇಕಾದುದು ನಾಗರೀಕರೆಲ್ಲರ ಕರ್ತವ್ಯವಾಗಿದೆ ಎಂದ ಅವರು, ಸಾರ್ವಜನಿಕ ಜೀವನದಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಸೂಕ್ತ ರಕ್ಷಣೆ ಸಿಗಬೇಕು. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನೌಕರರ ಮೇಲೆ ಸಲ್ಲದ ಕಾರಣಕ್ಕೆ ಹಲ್ಲೆಗೆ ಮುಂದಾಗುವುದು, ಅನುಚಿತವಾಗಿ ವರ್ತಿಸುವುದನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ದಂಡನೆಗೆ ಗುರುಪಡಿಸಲಾಗುವುದು ಎಂದವರು ನುಡಿದರು. ಇತ್ತೀಚಿನ ದಿನಗಳಲ್ಲಿ ಆರ್.ಟಿ.ಐ. ಅರ್ಜಿಗಳನ್ನು ಸಲ್ಲಿಸಿ, ಅಧಿಕಾರಿಗಳಿಗೆ ಇನ್ನಿಲ್ಲದಂತೆ ಕಾಡುವುದು, ಬೇಡಿಕೆ ಸಲ್ಲಿಸುವುದು, ಸೇವಾ ಕ್ಷೇತ್ರದಲ್ಲಿ…

Read More

ನವದೆಹಲಿ : ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಈ ಅಧಿವೇಶನದಿಂದ ಹೊಸ ನಿಯಮವನ್ನು ಜಾರಿಗೆ ತರಲಿದೆ. 2026 ರಲ್ಲಿ, 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಪ್ರತಿಗಳನ್ನು ಡಿಜಿಟಲ್ ರೂಪದಲ್ಲಿ ಮೌಲ್ಯಮಾಪನ ಮಾಡಲಾಗುತ್ತದೆ. ಆದಾಗ್ಯೂ, ಮಂಡಳಿಯು ಕೆಲವು ಪ್ರಾದೇಶಿಕ ಕಚೇರಿಗಳಲ್ಲಿ ಮತ್ತು ಆಯ್ದ ವಿಷಯಗಳಲ್ಲಿ ಮಾತ್ರ ಪ್ರಾಯೋಗಿಕ ಯೋಜನೆಯಾಗಿ ಡಿಜಿಟಲ್ ಮೌಲ್ಯಮಾಪನವನ್ನು ಮಾಡುತ್ತದೆ. ಪ್ರಾಯೋಗಿಕ ಯೋಜನೆ ಯಶಸ್ವಿಯಾದರೆ, ಅದನ್ನು ಮುಂದೆ ಎಲ್ಲಾ ಕೇಂದ್ರಗಳಲ್ಲಿ ಕಾರ್ಯಗತಗೊಳಿಸಲು ನಿರ್ಧರಿಸಲಾಗುತ್ತದೆ. ಪರೀಕ್ಷೆಯ ನಂತರ, ಪ್ರತಿಗಳನ್ನು ತ್ವರಿತವಾಗಿ ಮೌಲ್ಯಮಾಪನ ಮಾಡಬಹುದು ಮತ್ತು ಫಲಿತಾಂಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಬಹುದು ಎಂಬ ಉದ್ದೇಶದಿಂದ ಮಂಡಳಿಯು ಈ ಯೋಜನೆಯನ್ನು ಪ್ರಾರಂಭಿಸುತ್ತಿದೆ. ಇತ್ತೀಚಿನ ಆಡಳಿತ ಮಂಡಳಿ ಸಭೆಯಲ್ಲಿ CBSE ಮಂಡಳಿಯು ಈ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. 2014 ರ ಆರಂಭದಲ್ಲಿ, ಕೆಲವು ವಿಷಯಗಳಲ್ಲಿ 10 ಮತ್ತು 12 ನೇ ತರಗತಿಯ ಪರೀಕ್ಷೆಗಳ ಪ್ರತಿಗಳನ್ನು CBSE ಡಿಜಿಟಲ್ ರೂಪದಲ್ಲಿ ಪರಿಶೀಲಿಸಿದೆ ಎಂದು ನಾವು ನಿಮಗೆ ಹೇಳೋಣ. ಆದರೆ ನಂತರ ಈ…

Read More

ಬೆಂಗಳೂರು : ರಸ್ತೆಗಳಲ್ಲಿ ವೀಲಿಂಗ್ ಮಾಡಿ ವಾಹನ ಚಲಾಯಿಸುವ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿ ವಾಹನ ಪರವಾನಿಗೆಯನ್ನು ಖಾಯಂ ಆಗಿ ರದ್ದುಗೊಳಿಸಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರ ಮಾತನಾಡಿದರು. ನಗರದಲ್ಲಿ ಮಕ್ಕಳು ರಸ್ತೆ ದಾಟುವಾಗ ಆಗುವ ಅಪಘಾತಗಳು ಹೆಚ್ಚಾಗಿದ್ದು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಲ್ಲಿ ರಸ್ತೆ ಅಪಘಾತ ಕುರಿತು ಜಾಗೃತಿ ಮೂಡಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು. ಮಕ್ಕಳು ರಸ್ತೆ ದಾಟುವಾಗ ಶಾಲೆಯ ಆಯಾಗಳೊಂದಿಗೆ ದಾಟುವುದು,ಶಾಲಾ ವಾಹನಗಳನ್ನು ಓಡಿಸುವ ಚಾಲಕರನ್ನು ಕಡ್ಡಾಯ ತಪಾಸಣೆ ಹಾಗೂ ವಾಹನದಲ್ಲಿ ಸೀಮಿತ ಸಂಖ್ಯೆಗಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಶಾಲೆಗಳು ಮುಂಜಾಗ್ರತೆ ವಹಿಸಬೇಕೆಂದು ಹೇಳಿದರು. ಅಪಘಾತ ನಿಯಂತ್ರಿಸಲು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ ಅಲ್ಲಿ…

Read More

ದಕ್ಷಿಣ ಕನ್ನಡ : ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಆರೋಪದ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಯೂಟ್ಯೂಬರ್ ಸಮೀರ್, ಸುಜಾತ್ ಭಟ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ.

Read More

ರೋಗಮುಕ್ತ ಜೀವನವೇ ಪರಿಪೂರ್ಣ ಸಂಪತ್ತು ಎಂದು ಅವರು ಹೇಳುತ್ತಾರೆ. ಆದರೆ ಇಂದಿನ ಪರಿಸ್ಥಿತಿಯಲ್ಲಿ, ನಾವು ಪರಿಪೂರ್ಣ ಸಂಪತ್ತನ್ನು ಹುಡುಕುತ್ತಾ ಓಡಾಡಬೇಕಾದ ಅನಿವಾರ್ಯತೆ ಇದೆ ಮತ್ತು ರೋಗ ಬರಲಿ. ಈ ಭೂಮಿಯಲ್ಲಿ ರೋಗಮುಕ್ತರು ಯಾರೂ ಇಲ್ಲ. ಔಷಧ ಸೇವಿಸದ ಜನರೇ ಇಲ್ಲ ಎಂಬ ಪರಿಸ್ಥಿತಿ ಇದೆ. ಅನಾರೋಗ್ಯದಿಂದ ಮುಕ್ತಿ ಪಡೆಯಲು ಧನ್ವಂತರಿ ಮಂತ್ರ ಪ್ರಧಾನ ಗುರುಗಳು ಹಾಗೂ ಭಾರತದ ಪ್ರಮುಖ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ಇದರಿಂದ ತಪ್ಪಿಸಿಕೊಳ್ಳುವ ಮಾರ್ಗವೇನು? ಒಳ್ಳೆಯ ಆಹಾರ, ಒಳ್ಳೆಯ ನಿದ್ರೆ, ಒಳ್ಳೆಯ ವಿಶ್ರಾಂತಿ, ಒತ್ತಡ ರಹಿತ ಜೀವನ, ಸಂತೋಷದ ಜೀವನ, ಇವೆಲ್ಲವೂ ಒಬ್ಬ ವ್ಯಕ್ತಿಯಲ್ಲಿ ಇದ್ದರೆ, ಅವನು ಖಂಡಿತವಾಗಿಯೂ ಈ ಸಮಸ್ಯೆಗಳಿಂದ ಮುಕ್ತನಾಗಬಹುದು. ಆದರೆ ಇಂದಿನ ಪರಿಸ್ಥಿತಿಯಲ್ಲಿ ಕಲಬೆರಕೆಯಿಲ್ಲದ ಆಹಾರ, ಒಳ್ಳೆಯ ನಿದ್ರೆ ಮತ್ತು…

Read More

ಭಿಲಾಯಿ: ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಚಲಿಸುವ ಬೈಕ್ನಲ್ಲಿ ಪ್ರೇಮಿಗಳು ಸಿನಿಮೀಯ ಶೈಲಿಯಲ್ಲಿ ಪ್ರಣಯ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಚಲಿಸುವ ಬೈಕ್ನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿದ್ದ ಹುಡುಗಿ, ಸವಾರನನ್ನು ತಬ್ಬಿಕೊಂಡು, ಸಂಚಾರ ನಿಯಮಗಳನ್ನು ನಿರ್ಲಜ್ಜವಾಗಿ ಉಲ್ಲಂಘಿಸುತ್ತಿರುವುದನ್ನು ಈ ದೃಶ್ಯಗಳು ತೋರಿಸುತ್ತವೆ. ಈ ವಿಡಿಯೋ ಭಿಲಾಯಿ ಟೌನ್ಶಿಪ್ನ ಸೆಕ್ಟರ್ 10 ರದ್ದಾಗಿದೆ ಎಂದು ವರದಿಯಾಗಿದೆ. ಅವರಿಬ್ಬರೂ ಹೆಲ್ಮೆಟ್ ಧರಿಸಿಲ್ಲ. ಬೈಕ್ ಹಿಂದೆ ಕಾರು ಚಾಲನೆ ಮಾಡುತ್ತಿದ್ದಾಗ ಈ ವಿಡಿಯೋ ಚಿತ್ರೀಕರಣಗೊಂಡಿರುವಂತೆ ತೋರುತ್ತಿದೆ. ವೈರಲ್ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು, ಭಿಲಾಯಿ ನಗರ ಪೊಲೀಸರು ಬೈಕ್ ಸವಾರಿ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮೋಟಾರ್ ವಾಹನ ಕಾಯ್ದೆಯಡಿಯಲ್ಲಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಯುವಕನನ್ನು ಮನೀಷ್ ಎಂದು ಗುರುತಿಸಲಾಗಿದೆ. https://twitter.com/JayManikpuri2/status/1957720975262548022?ref_src=twsrc%5Etfw%7Ctwcamp%5Etweetembed%7Ctwterm%5E1957720975262548022%7Ctwgr%5Ecff95565cc28fde269cd24e31a37f4302633b3a6%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fenglish%3Fmode%3Dpwalangchange%3Dtrue

Read More

ಉಡುಪಿ: ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಯ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಠಾಣೆ ಬಳಿ ಬಿಗಿ ಭದ್ರತೆ ನೀಡಲಾಗಿದೆ. ಠಾಣೆ ಬಳಿ ಗುಂಪು ಸೇರುವಂತಿಲ್ಲ, ಪ್ರತಿಭಟನೆ ನಡೆಸುವಂತಿಲ್ಲ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿಯ ಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಆಗಮಿಸಿ ವಶಕ್ಕೆ ಪಡೆದಿದೆ. ಆಗಸ್ಟ್ 16 ರಂದು ಫೇಸ್ಬುಕ್ ಪೇಜ್ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ರವರ…

Read More

ಉಡುಪಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿಯ ಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಆಗಮಿಸಿ ವಶಕ್ಕೆ ಪಡೆದಿದೆ. ಆಗಸ್ಟ್ 16 ರಂದು ಫೇಸ್ಬುಕ್ ಪೇಜ್ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ರವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ…

Read More