Subscribe to Updates
Get the latest creative news from FooBar about art, design and business.
Author: kannadanewsnow57
ಅಮೆರಿಕದ ಕಾಲಮಾನ ಶುಕ್ರವಾರ ಬೆಳಿಗ್ಗೆ ಟೆನ್ನೆಸ್ಸೀಯಲ್ಲಿರುವ ಸ್ಥಾವರವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸ್ಫೋಟದಿಂದಾಗಿ ಹತ್ತಿರದ ಕಾರುಗಳು ಸ್ಫೋಟಗೊಂಡವು. ಬೆಂಕಿ ಹರಡಿತು. ಬೆಂಕಿ ಕಾರುಗಳಿಗೂ ಹರಡಿ, ಅಪಘಾತ ಇನ್ನಷ್ಟು ಹದಗೆಟ್ಟಿತು. ಆಕಾಶದಲ್ಲಿ ದಟ್ಟವಾದ ಹೊಗೆ ಹರಡಿತು. ಸ್ಥಾವರದಲ್ಲಿನ ಸ್ಫೋಟವು ಇಡೀ ಟೆನ್ನೆಸ್ಸೀಯನ್ನು ನಡುಗಿಸಿತು ಎಂದು ಸ್ಥಳೀಯರು ಹೇಳುತ್ತಾರೆ. ಶಬ್ದವು ದೂರದವರೆಗೆ ಕೇಳಿಸಿತು ಎಂದು ಹೇಳಲಾಗುತ್ತದೆ. ಹತ್ತಿರದ ಎಲ್ಲಾ ಮನೆಗಳು ಮತ್ತು ವಾಹನಗಳು ನಡುಗಿದವು. ನೆಲವೂ ನಡುಗಿತು, ಭೂಕಂಪ ಸಂಭವಿಸಿದೆ ಎಂದು ಶಂಕಿಸಿ ಜನರು ಓಡಿಹೋದರು. ಆದಾಗ್ಯೂ, ನಂತರ ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿತು. ಸ್ಫೋಟದ ಕಾರಣಗಳು ಇನ್ನೂ ತಿಳಿದಿಲ್ಲ. ಎಫ್ಬಿಐ ಸ್ಥಳದಲ್ಲಿದ್ದು ತನಿಖೆ ನಡೆಸುತ್ತಿದೆ ಎಂದು ಹಂಫ್ರೀಸ್ ಕೌಂಟಿ ಶೆರಿಫ್ ಕ್ರಿಸ್ ಡೇವಿಸ್ ಹೇಳಿದ್ದಾರೆ. ಸ್ಫೋಟಕಗಳನ್ನು ಅಭಿವೃದ್ಧಿಪಡಿಸುವ, ತಯಾರಿಸುವ ಮತ್ತು ನಿರ್ವಹಿಸುವ ನಿಖರ ಎನರ್ಜಿಟಿಕ್ ಸಿಸ್ಟಮ್ಸ್ ಕಾರ್ಖಾನೆಯಲ್ಲಿ ಈ ಸ್ಫೋಟ ಸಂಭವಿಸಿದೆ. https://twitter.com/alexcmhwee/status/1976808981449654464?ref_src=twsrc%5Etfw%7Ctwcamp%5Etweetembed%7Ctwterm%5E1976808981449654464%7Ctwgr%5Ec8100fb4d54ddad141bc0ce7bfda5ce599735b9a%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Ftelugu%3Fmode%3Dpwalangchange%3Dtrue https://twitter.com/clashreport/status/1976731875873112079?ref_src=twsrc%5Etfw%7Ctwcamp%5Etweetembed%7Ctwterm%5E1976731875873112079%7Ctwgr%5Ec8100fb4d54ddad141bc0ce7bfda5ce599735b9a%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Ftelugu%3Fmode%3Dpwalangchange%3Dtrue
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಸ್ನೇಹಿತರೊಂದಿಗೆ ರೆಸ್ಟೋರೆಂಟ್ ಗೆ ಊಟಕ್ಕೆ ತೆರಳಿದ್ದ ಬ್ಯಾಂಕ್ ಮ್ಯಾನೇಜರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರಿನ ಮೇಘಾನಂದ (31) ಮೃತ ವ್ಯಕ್ತಿಯಾಗಿದ್ದು, ನಗರದ ಉಲ್ಲಾಳದಲ್ಲಿ ಪತ್ನಿ ಹಾಗೂ 5 ತಿಂಗಳ ಮಗುವಿನೊಂದಿಗೆ ವಾಸವಾಗಿದ್ದರು. ಖಾಸಗಿ ಬ್ಯಾಂಕ್ವೊಂದರಲ್ಲಿ ಮ್ಯಾನೇಜರ್ ಆಗಿ ಮೇಘಾನಂದ ಕಾರ್ಯನಿರ್ವಹಿಸುತ್ತಿದ್ದರು. ಆರ್.ಆರ್. ನಗರದ ಮುಖ್ಯರಸ್ತೆಯಲ್ಲಿರುವ ರೆಸ್ಟೋರೆಂಟ್ಗೆ ಮೂವರು ಸ್ನೇಹಿತರೊಂದಿಗೆ ಗುರುವಾರ ರಾತ್ರಿ ಊಟಕ್ಕೆ ತೆರಳಿದ್ದರು. ಊಟದ ನಂತರ ಬಿಲ್ ಪಾವತಿಸಿ ಹೊರ ಹೋಗಿದ್ದರು. ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಶೌಚಗೃಹಕ್ಕೆ ಹೋಗಿರುವುದು ಕಂಡು ಬಂದಿದೆ. ತಕ್ಷಣ ಸ್ನೇಹಿತರು ಬಾಗಿಲು ತಟ್ಟಿ ಕೂಗಿದ್ದಾರೆ. ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಗಾಬರಿಯಾಗಿ ರೆಸ್ಟೋರೆಂಟ್ ಮ್ಯಾನೇಜರ್ಗೆ ತಿಳಿಸಿದ್ದಾರೆ. ಬಾಗಿಲು ಒಡೆದು ನೋಡಿದಾಗ ಮೇಘಾನಂದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನವದೆಹಲಿ: ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆ, 2021 ರ ಜಾರಿಗೆ ಬರುವ ಮೊದಲು ಮಗುವನ್ನು ಹೊಂದುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ ಎಲ್ಲಾ ಉದ್ದೇಶಿತ ದಂಪತಿಗಳಿಗೆ ವಯಸ್ಸಿನ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪಿನಲ್ಲಿ ಹೇಳಿದೆ. 25 ಜನವರಿ 2022 ರಂದು ಕಾನೂನು ಜಾರಿಗೆ ಬರುವ ಮೊದಲು ಭ್ರೂಣಗಳನ್ನು ಹೆಪ್ಪುಗಟ್ಟಿದ ದಂಪತಿಗಳಿಗೆ ಅವರ ವಯಸ್ಸನ್ನು ಲೆಕ್ಕಿಸದೆ ಬಾಡಿಗೆ ತಾಯ್ತನದೊಂದಿಗೆ ಮುಂದುವರಿಯಲು ಅನುಮತಿಸಲಾಗುವುದು ಎಂದು ನ್ಯಾಯಾಲಯ ತೀರ್ಪು ನೀಡಿದೆ. “ಬಾಡಿಗೆ ತಾಯ್ತನ ಸೇರಿದಂತೆ ಸಂತಾನೋತ್ಪತ್ತಿ ಆಯ್ಕೆಗಳನ್ನು ಮಾಡುವ ಹಕ್ಕು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ರಕ್ಷಿಸಲ್ಪಟ್ಟ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಗೌಪ್ಯತೆಯ ಒಂದು ಅಂಶವಾಗಿದೆ” ಎಂದು ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ಹೇಳಿದೆ. ಬಾಡಿಗೆ ತಾಯ್ತನದ ಮೂಲಕ ಜನಿಸಿದ ಮಕ್ಕಳನ್ನು ವಯಸ್ಸಾದ ದಂಪತಿಗಳು ಸರಿಯಾಗಿ ನೋಡಿಕೊಳ್ಳುವುದಿಲ್ಲ ಎಂದು ವಾದಿಸಿದ ಕೇಂದ್ರದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಭ್ರೂಣಗಳ ರಚನೆ ಮತ್ತು ಹೆಪ್ಪುಗಟ್ಟುವಿಕೆಯು ಪ್ರಕ್ರಿಯೆಯ “ಸ್ಫಟಿಕೀಕರಣ”ವನ್ನು ಪ್ರತಿನಿಧಿಸುತ್ತದೆ…
ನವದೆಹಲಿ : ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಾಗಿದ್ದರೆ ಮತ್ತು ಆನ್ಲೈನ್ ಬ್ಯಾಂಕಿಂಗ್ ಅಥವಾ UPI ಬಳಸುತ್ತಿದ್ದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯ. ಅಕ್ಟೋಬರ್ 11 ರ ರಾತ್ರಿ ತನ್ನ ಹಲವು ಡಿಜಿಟಲ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ SBI ಅಧಿಕೃತವಾಗಿ ಘೋಷಿಸಿದೆ. ಈ ಸ್ಥಗಿತಗೊಳಿಸುವಿಕೆಯು ಯಾವುದೇ ತಾಂತ್ರಿಕ ದೋಷದಿಂದಾಗಿ ಅಲ್ಲ, ಬದಲಾಗಿ ಬ್ಯಾಂಕ್ ನಡೆಸುತ್ತಿರುವ ನಿಯಮಿತ ನಿರ್ವಹಣೆಯಿಂದಾಗಿ. ಈ ಸಮಯದಲ್ಲಿ, ಭವಿಷ್ಯದಲ್ಲಿ ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಖಚಿತಪಡಿಸಿಕೊಳ್ಳಲು ಬ್ಯಾಂಕ್ ತನ್ನ ವ್ಯವಸ್ಥೆಗಳನ್ನು ನವೀಕರಿಸುತ್ತದೆ. ಯಾವ ಸೇವೆಗಳು ಮತ್ತು ಯಾವಾಗ ಪರಿಣಾಮ ಬೀರುತ್ತವೆ? ಈ ನಿಗದಿತ ನಿರ್ವಹಣೆಯ ಸಮಯದಲ್ಲಿ, SBI ನ UPI, YONO ಅಪ್ಲಿಕೇಶನ್, ಇಂಟರ್ನೆಟ್ ಬ್ಯಾಂಕಿಂಗ್, NEFT, RTGS ಮತ್ತು IMPS ಸೇವೆಗಳು ಕಾರ್ಯನಿರ್ವಹಿಸುವುದಿಲ್ಲ. ಇದರರ್ಥ ನೀವು YONO ಅಪ್ಲಿಕೇಶನ್ ಮೂಲಕ ಯಾವುದೇ ವಹಿವಾಟುಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಅಥವಾ ಈ ಸಮಯದಲ್ಲಿ ನೀವು UPI ಮೂಲಕ ಹಣವನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗುವುದಿಲ್ಲ. ಈ ಸೇವೆ…
ಬೆಂಗಳೂರು: ಮುಸ್ಲಿಂ ದಂಪತಿಗೆ ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರ ವಕ್ಫ್ ಮಂಡಳಿಗೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರ 2023ರ ಆ.30ರಂದು ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ಬೆಂಗಳೂರಿನ ಎ.ಆಲಂ ಪಾಷಾ ಎಂಬುವರು 2024ರಲ್ಲಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಸರ್ಕಾರದ ಪರ ವಕೀಲರು, 2023ರ ಆ.30ರಂದು ಹೊರಡಿಸಿದ್ದ ಆದೇಶ ಹಿಂಪಡೆಯಲಾಗಿದೆ ಎಂದು ತಿಳಿಸಿ ಪ್ರಮಾಣ ಪತ್ರ ಸಲ್ಲಿಸಿದರು. ಸರ್ಕಾರದ ಪರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಮುಸ್ಲಿಂ ದಂಪತಿಗೆ ಮದುವೆ ಸರ್ಟಿಫಿಕೆಟ್ ನೀಡುವ ಅಧಿಕಾರ ವಕ್ಫ್ ಮಂಡಳಿಗೆ ಇಲ್ಲ ಎಂದು ಆದೇಶಿಸಿದೆ.
ಬೆಂಗಳೂರು: ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇಮಕಾತಿಯಲ್ಲಿ ನೇರ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 3 ವಯೋಮಿತಿಯಲ್ಲಿ ವರ್ಷಗಳನ್ನು ಸಡಿಲಿಸಿ ದಿನಾಂಕ 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಒಳಮೀಸಲಾತಿ ಹಿನ್ನೆಲೆಯಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳುವವರೆಗೆ ನೇರ ನೇಮಕಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದರಿಂದ ಆಯಾ ನೇಮಕಾತಿಗಳಿಗೆ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ ಸಡಿಲಿಕೆ ನೀಡಲು ಹೊರಡಿಸಿರುವ ಮಯೋಮಿತಿಯಲ್ಲಿ 3 ವರ್ಷ ಮಂಜೂರಾತಿ ನೀಡಲು ಪ್ರಸ್ತಾಪಿಸಲಾಗಿತ್ತು. ರಾಜ್ಯ ಸಿವಿಲ್ ಸೇವೆ ನೇಮಕಾತಿ ಮೂಲಕ ಹುದ್ದೆಗಳಿಗೆ ನೇರ ಭರ್ತಿ ಮಾಡಲು ಮುಂದಿನ ದಿನಾಂಕ: 31.12.2027 ರವರೆಗೆ ಹೊರಡಿಸಲಾಗುವ ಎಲ್ಲಾ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಪ್ರವರ್ಗಗಳ ಬಾರಿಗೆ ಅನ್ವಯವಾಗುವಂತೆ (One time measure) ಗರಿಷ್ಠ ವಯೋಮಿತಿಯನ್ನು…
ಬೆಂಗಳೂರು : ಹೆಚ್.ಎ.ಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಣತ್ತೂರು ಮುಖ್ಯ ರಸ್ತೆಯಲ್ಲಿ ಬಿ.ಬಿ.ಎಂ.ಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳುವ ಸಂಬಂಧ ದಿನಾಂಕ: 10.10.2025 ರಿಂದ 21 ದಿನಗಳ ಕಾಲ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ. ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ : * ಪಣತ್ತೂರು ಮುಖ್ಯ ರಸ್ತೆಯ ಪಣತ್ತೂರು ರೈಲ್ವೇ ಬ್ರಿಡ್ಜ್ ಜಂಕ್ಷನ್ನಿಂದ ಬೋಗನಹಳ್ಳಿ ಜಂಕ್ಷನ್ ವರಗೆ ಎರಡು ಬದಿಯ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ. ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ : * ವೈಟ್ ಫೀಲ್ಡ್ ಮತ್ತು ವರ್ತೂರು ಕಡೆಯಿಂದ ಪಣತ್ತೂರು ಮುಖ್ಯ ರಸ್ತೆಯ ಮುಖಾಂತರ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಚಲಿಸುವ ವಾಹನಗಳು ಬಳಗೆರೆ ಟಿ ಜಂಕ್ಷನ್ ಹತ್ತಿರ ಬಲ ತಿರುವು ಪಡೆದು ವಿಬ್ ಗಯಾರ್ ರಸ್ತೆಯ ಮುಖಾಂತರ ವರ್ತೂರು ಮುಖ್ಯ ರಸ್ತೆ ಕಡೆಗೆ ಸಂಚರಿಸಿ ಮಾರತ್ತಹಳ್ಳಿ ಬ್ರಿಡ್ಜ್ ಹತ್ತಿರ ಎಡ ತಿರುವು ಪಡೆದು ಹೊರ ವರ್ತುಲ ರಸ್ತೆ…
ಬೆಂಗಳೂರು: ಬಾಂಬೆ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯ ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳಗೇರಿ ಪ್ರದೇಶಗಳಿದ್ದು ಅವುಗಳ ಅಭಿವೃದ್ಧಿ ಆಗಬೇಕು ಎಂದು ವಿಷಯ ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನಲ್ಲಿ ಈ ಹಿಂದೆ ಶಾಂತಿನಗರದಲ್ಲಿ ಈ ಪ್ರಯತ್ನಕ್ಕೆ ಮುಂದಾಗಿದ್ದೆವು. ಅದು ಯಶಸ್ವಿಯಾಗಲಿಲ್ಲ. ಹೀಗಾಗಿ ಜನರು ಈ ವಿಚಾರದಲ್ಲಿ ಹಿಂಜರಿಯುತ್ತಾರೆ. ಅದಕ್ಕಾಗಿ ಈ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ” ಎಂದು ತಿಳಿಸಿದರು. ನಮ್ಮ ಕ್ಷೇತ್ರದಲ್ಲಿ ಕಸದ ಸಮಸ್ಯೆ ಹೆಚ್ಚಾಗಿದ್ದು ಇದಕ್ಕೆ ಪರಿಹಾರ ಬೇಕು. ಇದನ್ನು ಜಿಬಿಎ ನಿಭಾಯಿಸುವುದೇ ಅಥವಾ ಪಾಲಿಕೆ ನಿಭಾಯಿಸುವುದೇ ಎಂದು ಶಾಸಕ ಎ.ಸಿ. ಶ್ರೀನಿವಾಸ್ ಅವರು ಕೇಳಿದಾಗ, “ಕಸ ವಿಲೇವಾರಿ ವಿಚಾರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 33 ಪ್ಯಾಕೇಜ್ ಟೆಂಡರ್ ಕರೆಯಲಾಗುವುದು.…
ಬೆಂಗಳೂರು : ಬೆಂಗಳೂರಿನ ಸಾಮಾನ್ಯ ನಾಗರಿಕರ ಬಳಿ ನಾನು ಮಾತನಾಡಬೇಕು. ಅವರ ಸಮಸ್ಯೆ, ಅಭಿಪ್ರಾಯಗಳನ್ನು ಆಲಿಸಬೇಕು. ಈ ಕಾರಣಕ್ಕಾಗಿ ಪ್ರತಿ ಶನಿವಾರ ಹಾಗೂ ಭಾನುವಾರದ ಬೆಳಿಗ್ಗೆ ವೇಳೆ ಪಾಲಿಕೆವಾರು ‘ಉದ್ಯಾನ ನಡಿಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬಿಜಿಎ ಸಭಾಂಗಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಪಾಲಿಕೆವಾರು ಭದ್ಯಾನಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ಇದೇ ಶನಿವಾರ ಲಾಲ್ ಬಾಗ್ ನಲ್ಲಿ ಹಾಗೂ ಭಾನುವಾರ ಜೆ.ಪಿ. ಪಾರ್ಕ್ ನಲ್ಲಿ ಈ ನಡಿಗೆ ಕಾರ್ಯಕ್ರಮ ಇಟ್ಟುಕೊಂಡಿದ್ದೇನೆ. ಇದೇ ರೀತಿ ಮೊದಲ ಹಂತದಲ್ಲಿ 10 ದಿನ 10 ಉದ್ಯಾನಗಳಲ್ಲಿ ಈ ಕಾರ್ಯಕ್ರಮ ಮಾಡಲಿದ್ದೇನೆ. ಸಾರ್ವಜನಿಕರ ಅಭಿಪ್ರಾಯ, ಸಲಹೆ ಪಡೆದು ಅಗತ್ಯ ಬದಲಾವಣೆ ತಿದ್ದುಪಡಿ ಮಾಡಿಕೊಳ್ಳಲು ಈ ಕಾರ್ಯಕ್ರಮ. ನಡಿಗೆಯ ಅವಧಿ ಒಂದು ಗಂಟೆಯಿರುತ್ತದೆ. ಈ ವೇಳೆ ಜನ ಸಾಮಾನ್ಯರ ಬಳಿ ವಿಚಾರಗಳ ವಿನಿಮಯ ಹಾಗೂ ಚರ್ಚೆ ನಡೆಸಲಾಗುವುದು. ಏಕೆಂದರೆ ನಾಯಕರೇ ಒಂದು ಹೇಳುತ್ತಾರೆ. ಜನಸಾಮಾನ್ಯರೇ ಒಂದಷ್ಟು ಹೇಳುತ್ತಾರೆ. ಜನರ…
ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಸರ್ಕಾರದ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ, ವಿದೇಯಕ, 2024 ಈ ಸಂಬಂಧ ಫೆಬ್ರವರಿ, 25 ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು. ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ…














