Author: kannadanewsnow57

ಬೆಂಗಳೂರು : ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಕ್ಲರಿಕಲ್ ಮತ್ತು ಪ್ರೊಬೇಶನರಿ ಆಫಿûೀಸರ್ ಹುದ್ದೆಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ ಐಬಿಪಿಎಸ್ ಸಂಸ್ಥೆ ಈಗಾಗಲೇ ಅರ್ಜಿ ಆಹ್ವಾನಿಸಿದೆ. ಈ ವರ್ಷದಲ್ಲಿ ಇಲ್ಲಿಯವರೆಗೆ ಒಟ್ಟು 15,215 ಕ್ಕೂ ಹೆಚ್ಚಿನ ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಪೆÇ್ರಬೇಶನರಿ ಆಫಿûೀಸರ್ ಹುದ್ದೆಗಳು, ಎಸ್‍ಬಿಐ, ಆರ್‍ಬಿಐ ಹಾಗೂ ಖಾಸಗಿ ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಸಾವಿರಾರು ಕ್ಲರಿಕಲ್ ಹಾಗೂ ಪೆÇ್ರಬೇಶನರಿ ಆಫಿûೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುವುದು ತಿಳಿದು ಬಂದಿದೆ. ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್‍ನಲ್ಲಿ ಬ್ಯಾಂಕ್ ನೇಮಕಾತಿ ಪರೀಕ್ಷೆಗಳ ತಯಾರಿಗೆ ಜುಲೈ, 16 ರಿಂದ 18 ರವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಡೆಮೋ ಉಚಿತ ತರಗತಿಗಳನ್ನು ಆಯೋಜಿಸಲಾಗಿದ್ದು, ಆಸಕ್ತರು ಈ ಅವಕಾಶದ ಉಪಯೋಗಪಡೆದುಕೊಳ್ಳಲು ಕೂಡಲೇ ಮೊಬೈಲ್ ಸಂಖ್ಯೆ 8660217739 ಸಂಪರ್ಕಿಸಿ ಉಚಿತ ಡೆಮೋ ತರಗತಿಗಳಿಗೆ…

Read More

ನವದೆಹಲಿ: ಅತ್ಯಂತ ಹಿಂದುಳಿದ ವರ್ಗಗಳಿಂದ (ಇಬಿಸಿ) ‘ತಂತಿ-ತಂತ್ರ’ ಜಾತಿಯನ್ನು ತೆಗೆದುಹಾಕಿ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ‘ಪಾನ್ / ಸವಾಸಿ’ ಜಾತಿಯೊಂದಿಗೆ ವಿಲೀನಗೊಳಿಸಿದ ಬಿಹಾರ ಸರ್ಕಾರದ 2015 ರ ಅಧಿಸೂಚನೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ನ್ಯಾಯಪೀಠವು ಸಂವಿಧಾನದ 341 ನೇ ವಿಧಿಯ ಅಡಿಯಲ್ಲಿ ಪ್ರಕಟವಾದ ಪರಿಶಿಷ್ಟ ಜಾತಿಗಳ ಪಟ್ಟಿಯನ್ನು ಬದಲಾವಣೆ ರಾಜ್ಯ ಸರ್ಕಾರಕ್ಕೆ ಯಾವುದೇ ಸಾಮರ್ಥ್ಯ ಅಥವಾ ಅಧಿಕಾರವಿಲ್ಲ ಎಂದು ಹೇಳಿದೆ. ಕಲಂ -1 ರ ಅಡಿಯಲ್ಲಿ ಅಧಿಸೂಚನೆಯ ಅಡಿಯಲ್ಲಿ ನಿರ್ದಿಷ್ಟಪಡಿಸಿದ ಪರಿಶಿಷ್ಟ ಜಾತಿಗಳ ಪಟ್ಟಿಯನ್ನು ಸಂಸತ್ತು ಮಾಡಿದ ಕಾನೂನಿನ ಮೂಲಕ ಮಾತ್ರ ತಿದ್ದುಪಡಿ ಮಾಡಬಹುದು ಅಥವಾ ಬದಲಾಯಿಸಬಹುದು ಎಂದು ನ್ಯಾಯಪೀಠ ಹೇಳಿದೆ. ಆರ್ಟಿಕಲ್ 341 ರ ಪ್ರಕಾರ, ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಾತಿಗಳನ್ನು ನಿರ್ದಿಷ್ಟಪಡಿಸಿ ಸಂಸತ್ತು ಮಾಡಿದ ಕಾನೂನು ಇಲ್ಲದೆ ಕೇಂದ್ರ ಸರ್ಕಾರ ಅಥವಾ ರಾಷ್ಟ್ರಪತಿಗಳು ಕಲಂ -1 ರ ಅಡಿಯಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿ ಯಾವುದೇ ತಿದ್ದುಪಡಿಗಳು…

Read More

ಮಸ್ಕತ್‌ : ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾದ ಪರಿಣಾಮ 13 ಭಾರತೀಯರು ಸೇರಿದಂತೆ 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಭಾರತೀಯರು ಸೇರಿದಂತೆ ಇತರರ ಯಾವುದೇ ಕುರುಹು ಇಲ್ಲಿಯವರೆಗೆ ಕಂಡುಬಂದಿಲ್ಲ. ಬಂದರು ನಗರ ಡುಕ್ಮ್ ಬಳಿ ರಾಸ್ ಮದಕಾದ ಆಗ್ನೇಯಕ್ಕೆ 25 ನಾಟಿಕಲ್ ಮೈಲಿ ದೂರದಲ್ಲಿ ಕೊಮೊರೊಸ್ ಧ್ವಜ ಹೊಂದಿರುವ ತೈಲ ಟ್ಯಾಂಕರ್ ಮುಳುಗಿದೆ ಎಂದು ಎಂಎಸ್ಸಿ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ. https://Twitter.com/OMAN_MSC/status/1812902199963369815?ref_src=twsrc%5Etfw%7Ctwcamp%5Etweetembed%7Ctwterm%5E1812902199963369815%7Ctwgr%5E826b2bc3ea17904d6967811dc284ee9662f123a8%7Ctwcon%5Es1_&ref_url=https%3A%2F%2Fkannadadunia.com%2Flive-news%2F13-indian-crews-missing-after-oil-tanker-capsizes-off-oman-maritime-centre-says-search-still-on%2F ಡುಕ್ಮ್ ಬಂದರು ಒಮಾನ್ ನ ನೈಋತ್ಯ ಕರಾವಳಿಯಲ್ಲಿದೆ, ಸುಲ್ತಾನರ ಪ್ರಮುಖ ತೈಲ ಮತ್ತು ಅನಿಲ ಗಣಿಗಾರಿಕೆ ಯೋಜನೆಗಳಿಗೆ ಹತ್ತಿರದಲ್ಲಿದೆ, ಇದರಲ್ಲಿ ಪ್ರಮುಖ ತೈಲ ಸಂಸ್ಕರಣಾಗಾರವೂ ಸೇರಿದೆ, ಇದು ಒಮಾನ್ ನ ಅತಿದೊಡ್ಡ ಏಕ ಆರ್ಥಿಕ ಯೋಜನೆಯಾದ ಡುಕ್ಮ್ ನ ವಿಶಾಲ ಕೈಗಾರಿಕಾ ವಲಯದ ಭಾಗವಾಗಿದೆ. ಕಾಣೆಯಾದವರಿಗಾಗಿ ಶೋಧ ಮುಂದುವರೆದಿದೆ ಹಡಗನ್ನು ಪ್ರೆಸ್ಟೀಜ್ ಫಾಲ್ಕನ್ ಎಂದು ಗುರುತಿಸಲಾಗಿದೆ. ಹಡಗಿನ ಸಿಬ್ಬಂದಿ ಇನ್ನೂ ಕಾಣೆಯಾಗಿದ್ದಾರೆ ಮತ್ತು ಶೋಧ ನಡೆಯುತ್ತಿದೆ ಎಂದು ಎಂಎಸ್ಸಿ ತಿಳಿಸಿದೆ. ಈ…

Read More

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಮೇಲ್ನೊಂದಿಗೆ ಮೊದಲ ರಾಷ್ಟ್ರೀಯ ಟೋಲ್-ಫ್ರೀ ದೂರವಾಣಿ ಸಹಾಯವಾಣಿ – 1933 ಗೆ ಚಾಲನೆ ನೀಡಲಿದ್ದಾರೆ. ಇದು ಯಾವುದೇ ವ್ಯಕ್ತಿಗೆ ಮಾದಕವಸ್ತು ಅಪರಾಧಗಳು ಮತ್ತು ಸಂಬಂಧಿತ ವಿಷಯಗಳ ಬಗ್ಗೆ ಎನ್ಸಿಬಿಗೆ ಸುಳಿವು ನೀಡಲು ಅನುವು ಮಾಡಿಕೊಡುತ್ತದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ. ಜುಲೈ 18 ರಂದು ಇಲ್ಲಿ ನಡೆಯಲಿರುವ ನಾರ್ಕೋ-ಕೋಆರ್ಡಿನೇಷನ್ ಸೆಂಟರ್ (ಎನ್ಸಿಒಆರ್ಡಿ) ನ ಏಳನೇ ಉನ್ನತ ಮಟ್ಟದ ಸಭೆಯಲ್ಲಿ ಮನಸ್ ಎಂಬ ಸಹಾಯವಾಣಿಯನ್ನು ಹೊರತರಲಾಗುವುದು. ಕೇಂದ್ರ ಮತ್ತು ರಾಜ್ಯ ಮಾದಕವಸ್ತು ವಿರೋಧಿ ಏಜೆನ್ಸಿಗಳು ಮತ್ತು ಇಲಾಖೆಗಳು, ವಿಶೇಷ ಬ್ಯೂರೋಗಳು ಮತ್ತು ಪೊಲೀಸರ ಭಾಗವಹಿಸುವವರು ಮತ್ತು ಅಧಿಕಾರಿಗಳು ಭಾಗವಹಿಸುವ ಸಭೆಯ ಅಧ್ಯಕ್ಷತೆಯನ್ನು ಶಾ ವಹಿಸಲಿದ್ದಾರೆ. “ಮನಸ್ (ರಾಷ್ಟ್ರೀಯ ಮಾದಕವಸ್ತು ಸಹಾಯವಾಣಿ) ಗೆ ಟೋಲ್ ಫ್ರೀ ಸಂಖ್ಯೆ 1933 ಆಗಿರುತ್ತದೆ ಮತ್ತು email–info.ncbmanas@gov.in. ವೆಬ್ಸೈಟ್ನಲ್ಲಿ ಲಾಗಿನ್ ಆಗುವ ಮೂಲಕ ಸಲಹೆಗಳನ್ನು ಸಲ್ಲಿಸಬಹುದು – ncbmanas.gov.in. ಜೂನ್ 18 ರಂದು ಅಮಿತ್ ಶಾ ಈ…

Read More

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ , ಇದುವರೆಗೂ 6 ಜನರ ಮೃತದೇಹ ಗಳು ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇನ್ನು ಈ ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್​ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್​​​​ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಇನ್ನು ಈ ಗುಡ್ಡ ಕುಸಿತ ಸ್ಥಳದಲ್ಲಿ ಮೊದಲು ಓರ್ವ ಮಹಿಳೆ ಶವ ಪತ್ತೆಯಾಗಿತ್ತು. ಬಳಿಕ ಐದು ಜನರ ಮೃತದೇಹ ಸಿಕ್ಕಿತ್ತು. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತರಾದರೆ, ಇನ್ನುಳಿದ ಇರ್ವರು ಯಾರು ಎಂಬುವುದು ಗುರುತು ಸಿಗುತ್ತಿಲ್ಲ. ಇದೀಗ ಕೊನೆಗೂ ದರ್ಘಟನಾ ಸ್ಥಳಕ್ಕೆ ಹಿಟಾಚಿ ಬಂದಿದ್ದು, ಮಣ್ಣು ತೆರವು ಕಾರ್ಯ ಮಾಡುತ್ತಿದೆ.

Read More

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಇಂದೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಒಂದು ವಾರ ಮಳೆ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.17 ಮತ್ತು 18ರಂದು ಹಾಗೂ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಮುಂದಿನ 24 ಗಂಟೆ ರೆಡ್ ಅಲರ್ಟ್ ನೀಡಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ ಪಡೆಯಬಹುದಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮೀ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್‍ಜೆಂಡರ್ ಪರ್ಸನ್ (NATIONAL PORTAL FOR TRANS GENDER PERSON) ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರ ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ. ಜುಲೈ 8 ರಿಂದ ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ, ಪಾಸ್‍ಪೋರ್ಟ್ ಸೈಜ್ ಪೋಟೊ ಮತ್ತು ಆಧಾರ್ ಕಾರ್ಡ್ ಕಡ್ಡಾಯವಾಗಿ ನೀಡಬೇಕಾಗಿರುತ್ತದೆ.

Read More

ಬೆಂಗಳೂರು: ರಾಜ್ಯದ ಬಿಸಿಯೂಟ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಬಿಸಿಯೂಟ ನಿವೃತ್ತ ನೌಕರರಿಗೆ ಇಡುಗಂಟು ನೀಡುವುದಾಗಿ ಭರವಸೆ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಮಹಿಳಾ ನೌಕರರು ತಮಗೆ ನಿವೃತ್ತಿ ಬಳಿಕ ಇಡುಗಂಟು ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಇಡುಗಂಟು ನೀಡುವ ಕುರಿತು ಭರವಸೆ ನೀಡಿದೆ. ನಿವೃತ್ತಿ ಹೊಂದಿದ ಹಾಗೂ ನಿವೃತ್ತಿ ಹೊಂದುತ್ತಿರುವ ಬಿಸಿಯೂಟ ನೌಕರರಿಗೆ ತಲಾ 1 ಲಕ್ಷ ರೂ. ಮೊತ್ತದ ಇಡುಗಂಟು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ಸದಸ್ಯರು ಸ್ವಾತಂತ್ತ್ಯ ಉದ್ಯಾನದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದರು.

Read More

ಬೆಂಗಳೂರು : ರಾಜ್ಯದಲ್ಲಿ ಕಾಲುವೆಗಳಿಗೆ ಅಕ್ರಮ ಪಂಪ್‌ ಸೆಟ್‌ ಅಳವಡಿಕೆ ತೆಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮಕೈಗೊಂಡಿದ್ದು, ಶೀಘ್ರವೇ ಇದೇ ಅಧಿವೇಶನದಲ್ಲಿ ಅಗತ್ಯ ಮಸೂದೆ ಮಂಡಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಸದನದಲ್ಲಿ ಜಮಖಂಡಿ ಸದಸ್ಯ ಜಗದೀಶ್ ಶಿವಣ್ಣ ಗುಡಗುಂಟಿ ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ರಾಜ್ಯದ ನೀರಾವರಿ ಯೋಜನೆಗಳಲ್ಲಿ ರೈತರು ಅಕ್ರಮವಾಗಿ ಕೆನಾಲ್‌ಗಳಿಗೆ ಪಂಪ್‌ಸೆಟ್ ಅಳವಡಿಸಿ ನೀರು ಎತ್ತುತ್ತಿರುವುದರಿಂದ ಯೋಜನೆಯ ಕೊನೆಯ ಭಾಗದ ಹಳ್ಳಿಗಳಿಗೆ ನೀರು ತಲುಪುತ್ತಿಲ್ಲ. ಇದನ್ನು ತಡೆಯಲು ಇದೇ ಅಧಿವೇಶನದಲ್ಲೇ ಅಗತ್ಯ ಮಸೂದೆ ಮಂಡಿಸಲಾಗುವುದು ಹೇಳಿದ್ದಾರೆ. ಮಂಡ್ಯ, ಹಾಸನ, ಬಾಗಲಕೋಟೆ ಸೇರಿದಂತೆ ರಾಜ್ಯದ ನೀರಾವರಿ ಪ್ರದೇಶಗಳ ಕೊನೆಯ ಭಾಗಗಳಿಗೆ ನೀರು ತಲುಪುತ್ತಿಲ್ಲ. ಏತ ನೀರಾವರಿ ಮಾಡಿದರೂ ಸಹ ಶೇ .50 ರಷ್ಟು ನೀರು ಸಹ ಹೋಗುತ್ತಿಲ್ಲ. ಇದನ್ನು ತಡೆಯಲು ವಾರದೊಳಗೆ ಮಸೂದೆ ತಯಾರು ಮಾಡಿ ಮಂಡಿಸಲಾಗುವುದು ಎಂದರು.

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಆಗಸ್ಟ್‌ 1 ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಅದರಿಂದ ಮೂಲಕ ವೇತನ ಪಿಂಚಣಿಯಲ್ಲಿ ಶೇ.58.50 ರಷ್ಟು ಹೆಚ್ಚಳವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಆಗಸ್ಟ್.1ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ಜಾರಿಗೊಳಿಸುವ ಸಂಬಂಧ ಸಿಎಂ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡಿದ್ದರು.  ಈ ಕುರಿತಂತೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರ ವೇತನ, ಪಿಂಚಣಿಯನ್ನು ಶೇ.58ರಷ್ಟು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಹೇಳಿಕೆ ನೀಡಿದರು. 1) ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು ದಿನಾಂಕ: 19.11.2022ರಂದು 7ನೇ ರಾಜ್ಯ ವೇತನ ಆಯೋಗವನ್ನು…

Read More