Subscribe to Updates
Get the latest creative news from FooBar about art, design and business.
Author: kannadanewsnow57
ದಾವಣಗೆರೆ : ರಾಜ್ಯದಲ್ಲಿ ಬೀದಿ ನಾಯಿಗಳ ಅಟ್ಟಹಾಸ ಮುಂದುವರೆದಿದ್ದು, ಬೀದಿ ನಾಯಿ ದಾಳಿಗೆ ಒಳಗಾಗಿದ್ದ 4 ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ದಾವಣಗೆರೆಯ ಶಾಸ್ತ್ರಿ ಬಡಾವಣೆ ನಲ್ಲಿ ಆಟವಾಡುವಾಗ ಬೀದಿನಾಯಿ ದಾಳಿಗೆ ಒಳಗಾಗಿದ್ದ 4 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾಳೆ. ಖದೀರಾ ಬಾನು ಮೃತ ಬಾಲಕಿ. ಬೆಂಗಳೂರು ಮತ್ತಿತರ ಕಡೆ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಬಾಲಕಿಗೆ ರೇಬಿಸ್ ಕಾಯಿಲೆಗೆ ಚಿಕಿತ್ಸೆ ನೀಡಲಾಗಿತ್ತು. ಆದರೂ ಪ್ರಯೋಜನವಾಗದೇ ಬಾಲಕಿ ಮೃತಪಟ್ಟಿದ್ದಾಳೆ.
ಬೆಂಗಳೂರು: ಹಠಾತ್ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪರಿಷತ್ ಸದಸ್ಯ ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆಯಿಂದಾಗಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ತಪಾಸಣೆಗೆ ಅನುಕೂಲವಾಗಲಿದೆ ಎಂದರು. ಟೆಲಿ ಇ.ಸಿ.ಜಿ ಮೂಲಕ ತಜ್ಞವೈದ್ಯರಿಂದ ಅಗತ್ಯ ಮಾರ್ಗದರ್ಶನ ದೊರೆಯಲಿದೆ. ಹಠಾತ್ ಹೃದಯಘಾತಗಳನ್ನ ಪ್ರಿವೆಂಟ್ ಮಾಡಲು ಅವಕಾಶವಿದ್ದು, ಆರಂಭದಲ್ಲೇ ಪತ್ತೆ ಹಚ್ಚುವತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಟೆಲಿ ಇಸಿಜಿ ಸಹಕಾರಿಯಾಗಲಿದೆ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು ಹಬ್ ಮತ್ರು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಹೃದಯ ಜ್ಯೋತಿ ಯೋಜನೆ ಇಂದು ಸಾವಿರಾರು ಜನರ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ ಹಾಗೂ…
ಮುಂಬೈ : ಬಾಲಿವುಡ್ ನ 3 ಈಡಿಯಟ್ಸ್ ಸಿನಿಮಾದಲ್ಲಿ ಪ್ರಾಧ್ಯಾಪಕನ ಪಾತ್ರದಿಂದ ಪ್ರಸಿದ್ಧರಾದ ಹಿರಿಯ ನಟ ಅಚ್ಯುತ ಪೋತರ್ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ನಟ ಥಾಣೆಯ ಜುಪಿಟರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆಗಸ್ಟ್ 19 ರಂದು ಥಾಣೆಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಸಿನಿಮಾದಲ್ಲಿ ತಮ್ಮ ಛಾಪು ಮೂಡಿಸುವ ಮೊದಲು, ಅಚ್ಯುತ ಪೋತರ್ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದರು ಮತ್ತು ನಂತರ ಇಂಡಿಯನ್ ಆಯಿಲ್ ಕಂಪನಿಯಲ್ಲಿಯೂ ಕೆಲಸ ಮಾಡಿದರು. ನಟನೆಯ ಮೇಲಿನ ಅವರ ಉತ್ಸಾಹವು 1980 ರ ದಶಕದಲ್ಲಿ ಚಲನಚಿತ್ರಗಳು ಮತ್ತು ದೂರದರ್ಶನಕ್ಕೆ ಪ್ರವೇಶವನ್ನು ನೀಡಿತು ಮತ್ತು ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವೃತ್ತಿಜೀವನವನ್ನು ಹೊಂದಿದ್ದರು. 125 ಕ್ಕೂ ಹೆಚ್ಚು ಹಿಂದಿ ಮತ್ತು ಮರಾಠಿ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ ಪೋತರ್ ಹಿಂದಿ ಮತ್ತು ಮರಾಠಿ ಸಿನಿಮಾದಲ್ಲಿ 125 ಕ್ಕೂ ಹೆಚ್ಚು ಚಿತ್ರಗಳಲ್ಲಿ…
ತಿರುವನಂತಪುರ: ಕೇರಳದಲ್ಲಿ ತಾಯಿಯ ಗರ್ಭದಲ್ಲೇ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದ 6 ತಿಂಗಳ ಭ್ರೂಣಕ್ಕೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೀಡಲಾಗಿದೆ. ಕೇರಳದ ಕಲ್ಲಿಕೋಟೆಯ ವೈದ್ಯರು ಇನ್ನೂ ತಾಯಿಯ ಗರ್ಭದಲ್ಲಿ ಇದ್ದ 6 ತಿಂಗಳ ಭ್ರೂಣಕ್ಕೆ ಯಶಸ್ವಿಯಾಗಿ ಹೃದಯದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದು ಕೇರಳ ರಾಜ್ಯದ ಮೊದಲ, ದೇಶದ 5ನೇ ಪ್ರಕರಣವಾಗಿದೆ. ವಾಲ್ವೋಟಮಿ ಶಸ್ತ್ರಚಿಕಿತ್ಸೆಯನ್ನು 25 ವರ್ಷದ ಗರ್ಭಿಣಿ ಮುಹ್ಸಿನಾ ಅವರ ಆರು ತಿಂಗಳ ಭ್ರೂಣದ ಮೇಲೆ ಅಪರೂಪದ ಮತ್ತು ಸಂಕೀರ್ಣವಾದ ಕೀಹೋಲ್ ಹೃದಯ ಕವಾಟದ ಹಸ್ತಕ್ಷೇಪವನ್ನು ಮಾಡುವ ಮೂಲಕ ವೈದ್ಯಕೀಯ ಇತಿಹಾಸವನ್ನು ನಿರ್ಮಿಸಿದೆ. ಕಲ್ಲಿಕೋಟೆಯ ವೈದ್ಯರು 25 ವರ್ಷದ ಮುಹ್ಸಿನಾ ಎಂಬಾಕೆಯ 6 ತಿಂಗಳ ಭ್ರೂಣಕ್ಕೆ ಮಹಾಅಪಧಮನಿಯ ವಾಲ್ಲೋಟಮಿ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಕೆಲ ತಿಂಗಳ ಬಳಿಕ ಮುಹ್ಸಿನಾ ಅವರು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮನೆಯ ಕಾಂಪೌಂಡ್ ಒಳಗೆ ಇದ್ದ ಬಾಲಕಿಯ ಮೇಲೆ ನಾಲ್ಕೈದು ಬೀದಿನಾಯಿಗಳು ಭಯಾನಕ ದಾಳಿ ನಡೆಸಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ಇತ್ತೀಚಿನ ದಿನಗಳಲ್ಲಿ, ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ವೈರಲ್ ಆಗುತ್ತಿದೆ. ಇದು ಎಲ್ಲರನ್ನೂ ಭಯದಿಂದ ನಡುಗುವಂತೆ ಮಾಡುತ್ತದೆ. ಈ ವಿಡಿಯೋ ಹಾರರ್ ಸಿನಿಮಾದ ದೃಶ್ಯದಂತೆ ಕಾಣುತ್ತದೆ. ಆದರೆ ಇದು ನಿಜ. ಮೂರರಿಂದ ನಾಲ್ಕು ಬೀದಿ ನಾಯಿಗಳು ಶಾಂತ, ಸಾಮಾನ್ಯ ಮನೆಯೊಳಗೆ ನುಗ್ಗಿ ಮಗುವಿನ ಮೇಲೆ ದಾಳಿ ಮಾಡಿವೆಆ ಮಗುವಿನ ಮೇಲೆ ನಾಯಿಗಳ ದಾಳಿಯನ್ನು ನೋಡಿದರೆ ನೀವು ಎಲ್ಲಿಯಾದರೂ ಬೀದಿ ನಾಯಿಗಳನ್ನು ಕಂಡರೆ ಭಯಪಡುತ್ತೀರಿ. ವೀಡಿಯೊದಲ್ಲಿ, ನಾಯಿಗಳು ಬಾಲಕಿಯನ್ನು ಕೆರೆದು ಕಚ್ಚಿ ದಾಳಿ ಮಾಡುತ್ತವೆ. ಆಕೆಯ ಜೀವ ಉಳಿಸಲು ಅವಳು ಮಾಡಿದ ಸಣ್ಣ ಪ್ರಯತ್ನಗಳು ಸಂಪೂರ್ಣವಾಗಿ ವಿಫಲವಾಗುತ್ತಿವೆ ಎಂದು ತೋರುತ್ತದೆ. ನಂತರ ಇದ್ದಕ್ಕಿದ್ದಂತೆ, ಒಬ್ಬ ವ್ಯಕ್ತಿ ಓಡಿ ಬಂದು ನಾಯಿಗಳನ್ನು ಓಡಿಸಲು ಪ್ರಯತ್ನಿಸುತ್ತಾನೆ. ಆಗ, ಒಬ್ಬ ಮಹಿಳೆ ಬರುತ್ತಾಳೆ ಮತ್ತು ಈ ನಾಯಿಗಳು ಅಲ್ಲಿಂದ ತಪ್ಪಿಸಿಕೊಳ್ಳುತ್ತವೆ. ಪ್ರಸ್ತುತ, ಈ…
ಬೆಂಗಳೂರು : ರಾಜ್ಯದ ಜನತೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸಿಹಿಸುದ್ದಿ ನೀಡಿದ್ದು, ರಾಜ್ಯದ ಪ್ರತಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, 5 ವರ್ಷಗಳಲ್ಲಿ ಪ್ರತಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನರ್ಚಿಕಿತ್ಸಾ ಆಸ್ಪತ್ರೆ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದ್ದಾರೆ. ರಾಜ್ಯದ ವಿವಿಧ ಕಡೆಗಳಲ್ಲಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಡಿ ಉಪಘಟಕಗಳ ಶಾಖೆಗಳನ್ನು ತೆರೆಯಲಾಗಿದೆ. ಹುಬ್ಬಳ್ಳಿಆಸ್ಪತ್ರೆ ಕಾಮಗಾರಿ ಶೇ.80 ರಷ್ಟು ಮುಗಿದಿದ್ದು, ಇನ್ನೆಂಟು ತಿಂಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಕೊಪ್ಪಳ, ಬಳ್ಳಾರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಉದ್ದೇಶಿಸಲಾಗಿದೆ ಎಂದರು. https://twitter.com/KarnatakaVarthe/status/1957433421187412115
ಬೆಂಗಳೂರು: ದಿನಾಂಕ 19.08.2025 (ಮಂಗಳವಾರ) ಬೆಳಿಗ್ಗೆ 10:30 ಗಂಟೆಯಿAದ ಮದ್ಯಾಹ್ನ 17:00 ಗಂಟೆಯವರೆಗೆ ‘66/11ಕೆ.ವಿ ಯೆಲ್ಲಾರ್ ಬಂಡೆ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲುö್ಯ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ. ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ರಿö್ಟ ಪಾಳ್ಯ, ರಾಯಲ್ ಎನ್ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ…
ಬೆಂಗಳೂರು: ಬಗರ್ ಹುಕುಂ ಅರ್ಜಿಗಳ ವಿಲೇ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ, ಒಂದು ವೇಳೆ ರೈತರಿಗೆ ಅನ್ಯಾಯವಾಗಿದ್ದರೆ ನಮ್ಮ ಗಮನಕ್ಕೆ ತನ್ನಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಸದನದಲ್ಲಿ ಭರವಸೆ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ಪ್ರಶ್ನಾವಳಿ ವೇಳೆ ಶಾಸಕರಾದ ಎಂ.ಟಿ. ಕೃಷ್ಣಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಬಗರ್ ಹುಕುಂ ಸಮಿತಿ ಮುಂದೆ ಅಧಿಕಾರಿಗಳು ಅರ್ಹ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು ಎಂಬ ಕಾನೂನು ಇದೆ. ಹೀಗಾಗಿ ಅಧಿಕಾರಿಗಳು ಅನರ್ಹ ಅರ್ಜಿಗಳನ್ನು ಆರಂಭಿಕ ಹಂತದಲ್ಲೇ ತ್ಯಜಿಸಿಬಿಡುತ್ತಾರೆ. ಈ ಎಲ್ಲಾ ಪ್ರಕ್ರಿಯೆಗಳೂ ಕಾನೂನಿನಲ್ಲೇ ಇದ್ದು, ಕಾನೂನು ಮೀರಿ ಏನೂ ಮಾಡಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಒಂದೆರಡು ರೈತರಿಗೆ ಅನ್ಯಾಯ ಆಗಿದ್ದರೆ ಶಾಸಕರು ನನ್ನ ಗಮನಕ್ಕೆ ತನ್ನಿ, ಸಮಸ್ಯೆಯನ್ನು ನಾನು ಸರಿಪಡಿಸುತ್ತೇನೆ” ಎಂದು ಆಶ್ವಾಸನೆ ನೀಡಿದರು. ಇದೇ ವೇಳೆ ಬಗರ್ ಹುಕುಂ ಹೆಸರಿನಲ್ಲಿ ಭೂ ಮಂಜೂರಾತಿಗೆ ಯಾವ್ಯಾವ ರೀತಿಯ ಅನರ್ಹ ಅರ್ಜಿಗಳು ಸಲ್ಲಿಕೆಯಾಗುತ್ತವೆ ಎಂದೂ…
ಬೆಂಗಳೂರು : ಜಗಳದ ಸಂದರ್ಭದಲ್ಲಿ ಹೋಗಿ ಸಾಯಿ ಎಂದು ಹೇಳಿರುವ ಮಾತು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗದು ಎಂದು ಹೈಕೋರ್ಟ್ ತೀರ್ಪು ನೀಡಿದ್ದು, ಪತಿಯ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪದಡಿ ಮಹಿಳೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ತನ್ನ ಪತಿಯ ಆತ್ಮಹತ್ಯೆಗೆ ಪ್ರಚೋದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೂರು ಮತ್ತು ಪ್ರಥಮ ಮಾಹಿತಿ ವರದಿ (‘ಎಫ್ಐಆರ್’) ರದ್ದುಗೊಳಿಸುವಂತೆ ಕೋರಿ ಹುಬ್ಬಳ್ಳಿ ಮೂಲದ ಫಿಬಿ ಗೌತಮ್ ಅವರು ಸಲ್ಲಿಸಿದ್ದ ಸಲ್ಲಿಸಿದ ಕ್ರಿಮಿನಲ್ ಅರ್ಜಿಯಲ್ಲಿ, ಎಸ್. ವಿಶ್ವಜಿತ್ ಶೆಟ್ಟಿ, ಜೆ. ಅವರ ಏಕಸದಸ್ಯ ಪೀಠವು ಆತ್ಮಹತ್ಯೆಗೆ ಪ್ರಚೋದನೆಗಾಗಿ ಎಫ್ಐಆರ್ ಅನ್ನು ರದ್ದುಗೊಳಿಸಿತು ಮತ್ತು ಪತ್ನಿಯ ಆಪಾದಿತ ಚಿತ್ರಹಿಂಸೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ‘ಹೋಗಿ ಸಾಯಿ’ ಎಂಬ ಹೇಳಿಕೆಯು ಭಾರತೀಯ ನ್ಯಾಯ ಸಂಹಿತಾ, 2023 (‘ಬಿಎನ್ಎಸ್’) ನ ಸೆಕ್ಷನ್ 108 ರ ಅಡಿಯಲ್ಲಿ ಅಪರಾಧವನ್ನು ಸ್ಥಾಪಿಸಲು ಅಗತ್ಯವಾದ ನೇರ ಪ್ರಚೋದನೆಯ ಕೃತ್ಯವಲ್ಲ ಎಂದು ತೀರ್ಪು ನೀಡಿತು. ಸುಪ್ರೀಂ ಕೋರ್ಟ್ನ ವಿವಿಧ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಾಲಯವು,…
ಬೆಂಗಳೂರು : ನಕ್ಷೆ ಮಂಜೂರಾತಿ ಪ್ರಕಾರ ಕಟ್ಟಡ ನಿರ್ಮಿಸಿ ವಾಸ ಯೋಗ್ಯ ಪ್ರಮಾಣ ಪತ್ರ ಪಡೆಯಬೇಕು. ಓಸಿ ಇಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕ ನೀಡಬಾರದು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 4 ಲಕ್ಷ ಸಂಪರ್ಕಗಳನ್ನು ನಿಲ್ಲಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದಂತೆ ವಾಸ ಯೋಗ್ಯ ಪ್ರಮಾಣ ಪತ್ರ(ಓಸಿ) ಪಡೆದುಕೊಳ್ಳದ 4 ಲಕ್ಷ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರು ನಿಲ್ಲಿಸಲಾಗಿದೆ. ಇವುಗಳಲ್ಲಿ 30X40 ಅಳತೆಯ ಎರಡು ಮಹಡಿ ಕಟ್ಟಡಗಳಿಗೆ ವಿನಾಯಿತಿ ನೀಡುವ ಕುರಿತಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ ಹೆಚ್ಚಾಗಿದೆ. ನಗರದಲ್ಲಿ ಶೇಕಡ 70ರಷ್ಟು ಕಟ್ಟಡ ನಿರ್ಮಾಣ ಅಕ್ರಮವಾಗಿದೆ. ಸಾಮರ್ಥ್ಯಕ್ಕಿಂತ ಹೆಚ್ಚು ಮಹಡಿ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕಾಗಿಯೇ ಸುಪ್ರೀಂಕೋರ್ಟ್ ಆದೇಶ ಮಾಡಿದ್ದು, ನಕ್ಷೆ ಮಂಜೂರಾತಿ ಪ್ರಕಾರ ಕಟ್ಟಡ ನಿರ್ಮಿಸಿ ವಾಸ ಯೋಗ್ಯ ಪ್ರಮಾಣ ಪತ್ರ ಪಡೆಯಬೇಕು.…











