Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಈ ಸಲದ ಆರ್ಥಿಕ ವರ್ಷದ ಅಂತ್ಯದಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಇ-ಆಫೀಸ್ ವ್ಯವಸ್ಥೆಯನ್ನು ವಿಸ್ತರಿಸಲಾಗುವುದು ಎಂದು ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ರಾಜ್ಯ ಸರ್ಕಾರ ರೈತರ ಪರವಾಗಿದೆ ಎನ್ನುವುದಕ್ಕೆ ಹಲವು ನಿದರ್ಶನಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ರೈತರ ಹಿತಾಸಕ್ತಿಗಾಗಿ ಹಾಗೂ ರೈತರು ಸರ್ಕಾರಿ ಕಛೇರಿಗೆ ಅಲೆದಾಡುವ ಸಮಯ ಉಳಿಸುವುದಕ್ಕಾಗಿ ಇ-ಆಡಳಿತ ವ್ಯವಸ್ಥೆಯನ್ನು ಮತ್ತಷ್ಟೂ ಚುರುಕುಗೊಳಿಸಿರುವುದು ಅನ್ನದಾತರಿಗೆ ಅನುಕೂಲವಾಗಲಿದೆ. ಇ-ಆಡಳಿತ ಇಲಾಖೆಯು ರಾಜ್ಯ ದತ್ತಾಂಶ ಕೇಂದ್ರ, ರಾಜ್ಯವ್ಯಾಪಿ ವಲಯ ಜಾಲ, ನೇರ ನಗದು ವರ್ಗಾವಣೆ ವೇದಿಕೆ, ಕುಟುಂಬ, ರೈತರ ದತ್ತಾಂಶ (FRUITS), ಸೇವಾ ಸಿಂಧು, ಸಕಾಲ, ಕರ್ನಾಟಕ ಒನ್, ಗ್ರಾಮ ಒನ್ ಮುಂತಾದ ನಿರ್ಣಾಯಕ ಸೇವೆಗಳನ್ನು ನಿರ್ವಹಿಸುತ್ತಿವೆ. ಸರ್ಕಾರ ಇಂತಹ ಪ್ರಮುಖ ಸಾಧನೆಗಳನ್ನು ಇ-ಆಡಳಿತ ಇಲಾಖೆಯ ಅಡಿಯಲ್ಲಿ ಬರುವಂತೆ ಈ ವರ್ಷದಿಂದ ಜಾರಿ ಮಾಡಿದೆ ಎಂದರು. ಸರ್ಕಾರ ಇ-ಆಫೀಸ್ ವ್ಯವಸ್ಥೆಯನ್ನು ಎಲ್ಲಾ ತಾಲ್ಲೂಕು ಮಟ್ಟದ ಕಚೇರಿಗಳು, 395 ನಾಡಕಚೇರಿಗಳು ಮತ್ತು 427 ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಲಾಗಿದೆ. ಈ…
ಬೆಂಗಳೂರು : ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಫೆಬ್ರವರಿ 27 ರ ಇಂದಿನಿಂದ ಮಾರ್ಚ್ 3ರವರೆಗೆ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು, ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮೇಳದಲ್ಲಿ ಪುಸ್ತಕಗಳ ಬಿಡುಗಡೆ, ಚರ್ಚೆ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಶಾಸಕರು ತಮ್ಮ ನಿಧಿಯಿಂದ 2 ರಿಂದ 3 ಲಕ್ಷ ರೂ.ಗಳವರೆಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಸಾರ್ವಜನಿಕ ಗ್ರಂಥಾಲಯ ಹಾಗೂ ಶಾಲೆಗಳಿಗೆ ಪೂರೈಸಲು ಅವಕಾಶವಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಫೆಬ್ರವರಿ 27 ರಿಂದ ಮಾರ್ಚ್ 3ರ ವರೆಗೆ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು, ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮೇಳದಲ್ಲಿ ಪುಸ್ತಕಗಳ ಬಿಡುಗಡೆ, ಚರ್ಚೆ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಶಾಸಕರು ತಮ್ಮ ನಿಧಿಯಿಂದ 2 ರಿಂದ 3 ಲಕ್ಷ ರೂ.ಗಳವರೆಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಸಾರ್ವಜನಿಕ ಗ್ರಂಥಾಲಯ ಹಾಗೂ ಶಾಲೆಗಳಿಗೆ ಪೂರೈಸಲು ಅವಕಾಶವಿದೆ.
ಮಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ಜನತೆಗೆ ಹವಾಮಾನ ಇಲಾಖೆ ಶಾಕ್ ನೀಡಿದ್ದು, ಕರಾವಳಿ ಪ್ರದೇಶಗಳಲ್ಲಿ ಇಂದು ಉಷ್ಣ ಅಲೆ (ಹೀಟ್ ವೇವ್) ಎಚ್ಚರಿಕೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಉಷ್ಟ ಅಲೆ ಎಚ್ಚರಿಕೆ ನೀಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಸೂಚನೆ ನೀಡಲಾಗಿದೆ. ಉಷ್ಣ ಅಲೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಪಮಾನ ಬುಧವಾರ ಭಾರೀ ಏರಿಕೆ ಕಂಡಿದೆ. ಫೆಬ್ರವರಿ ತಿಂಗಳಲ್ಲೇ ಅತ್ಯಂತ ಗರಿಷ್ಠ 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೆ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ವಿತ್ತು. ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳಲ್ಲಿ ಕಂಡು ಬರುವ ಉಷ್ಣಾಂಶ ಈಗಲೇ ದಾಖಲಾಗಿರುವುದು ಆತಂಕ ಹೆಚ್ಚಿಸಿದೆ. ಸಾರ್ವಜನಿಕರು ಆರೋಗ್ಯ ರಕ್ಷಣೆಗೆ ತಪ್ಪದೇ ಈ ʻಸಲಹೆʼಗಳನ್ನು ಅನುಸರಿಸಿ ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ (ಛತ್ರಿ) ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಸಿ. ತೆಳುವಾದ ಸಡಿಲವಾದ ಹತ್ತಿಯ…
ಬೆಂಗಳೂರು: 66/11 kV ಪದ್ಮನಾಭನಗರ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.02.2025 (ಶುಕ್ರವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಬನಗಿರಿನಗರ, ಜಯನಗರ 7ನೇ ಬ್ಲಾಕ್, ಬನಶಂಕರಿ 2ನೇ ಹಂತ, ಬಿಡಿಎ ಕಾಪ್ಲೆಕ್ಸ್, ಚನ್ನಮ್ಮನಕೆರೆ ಅಚ್ಚುಕಟ್ಟು, ಸರೋಜಾ ಕಾಂಪ್ಲೆಕ್ಸ್, ರಾಜೀವನಗರ, ಪದ್ಮನಾಭನಗರ, ಯಾರಬನಗರ, ಟಾಟಾ ಸಿಲ್ಕ್ ಫಾರ್ಮ್, ಶಾಸ್ತ್ರಿನಗರ, ಎಸ್ 9 ಉಪವಿಭಾಗ ಆವರಣ, 9ನೇ ಮುಖ್ಯ ಬಾಟಾ ಶೋರೊಂಮತ್ತು ಸುತ್ತಮುತ್ತಲ ಪ್ರದೇಶಗಳ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ.
ಅಸ್ಸಾಂ : ಅಸ್ಸಾಂನ ಮೋರಿಗಾಂವ್ನಲ್ಲಿ ತಡರಾತ್ರಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5 ತೀವ್ರತೆಯ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ತಡರಾತ್ರಿ 2.25 ಕ್ಕೆ ಕಂಪನ ಸಂಭವಿಸಿದೆ. ಭೂಕಂಪನ ಚಟುವಟಿಕೆಯ ಕೇಂದ್ರಬಿಂದು ಮತ್ತು ಪ್ರಭಾವದ ಬಗ್ಗೆ ವಿವರಗಳು ತಕ್ಷಣ ಸ್ಪಷ್ಟವಾಗಿಲ್ಲ. 5 ತೀವ್ರತೆಯ ಭೂಕಂಪವನ್ನು ಮಧ್ಯಮ ಭೂಕಂಪವೆಂದು ಪರಿಗಣಿಸಲಾಗುತ್ತದೆ, ಒಳಾಂಗಣ ವಸ್ತುಗಳ ಗಮನಾರ್ಹ ಅಲುಗಾಡುವಿಕೆ, ಗದ್ದಲದ ಶಬ್ದಗಳು ಮತ್ತು ಸಣ್ಣ ಹಾನಿಯನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ. https://twitter.com/ANI/status/1894860445695308045?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು: ಫೆಬ್ರವರಿ 28ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನೆಲೆಯಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ನಾಗರಿಕರಲ್ಲಿ ಬೆಳೆಸುವುದು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯವಾಗಿದ್ದು, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ನಮ್ಮ ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದಿದೆ. ಈ ನಿಟ್ಟಿನಲ್ಲಿ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಏಕಕಾಲದಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಪ್ರತಿಜ್ಞಾವಿಧಿ ಸ್ವೀಕರಿಸಿ, ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಆದ್ದರಿಂದ ಎಲ್ಲಾ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಈ ಪ್ರತಿಜ್ಞಾ ವಿಧಿ ಸ್ವೀಕರಿಸಲು ಕ್ರಮವಹಿಸುವಂತೆ ಈ ಮೂಲಕ ಕೋರಲಾಗಿದೆ. ಪ್ರತಿಜ್ಞಾ ವಿಧಿಯನ್ನು ದಿನಾಂಕ: 28.02.2025, ಶುಕ್ರವಾರದಂದು ಪೂರ್ವಾಹ್ನ 10.30 ಕ್ಕೆ ರಾಜಾದ್ಯಂತ…
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರವು ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಮಾಹಿತಿ ನೀಡಿದ್ದು, ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ ಎಂದಿದ್ದಾರೆ. ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ ಬಸ್ಗಳನ್ನು ಖರೀದಿಸಲಾಗಿದೆ. ಈ ಮೂಲಕ ಉದ್ಯೋಗ ಸೃಷ್ಟಿಯು ಹೆಚ್ಚಾಗಿದೆ. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡುವುದರ ಜೊತೆಗೆ 2,000 ಚಾಲಕ ಕಂ ನಿರ್ವಾಹಕರು ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1894718627519344691 ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಈ ಹಿನ್ನೆಲೆ ಹೊಸದಾಗಿ…
ನವದೆಹಲಿ: ರೈಲ್ವೆಯಲ್ಲಿ 32,438 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ನಡೆಯುತ್ತಿದೆ. ಈಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮಾರ್ಚ್ 1, 2025 ರವರೆಗೆ ವಿಸ್ತರಿಸಲಾಗಿದೆ. ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ತಮ್ಮ ಅರ್ಜಿ ಪ್ರಕ್ರಿಯೆಯನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಬೇಕು ಏಕೆಂದರೆ ಕೊನೆಯ ದಿನಾಂಕದ ನಂತರ ರೈಲ್ವೆ ನೇಮಕಾತಿ ಮಂಡಳಿಯು ಅರ್ಜಿ ವಿಂಡೋವನ್ನು ಮುಚ್ಚುತ್ತದೆ. ಪ್ರಮುಖ ದಿನಾಂಕಗಳು: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 23-01-2025 ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 01-03-2025 ರೈಲ್ವೆ ಗ್ರೂಪ್ ಡಿ ಹುದ್ದೆಗಳ ವಿವರ ಹೀಗಿದೆ ಟ್ರ್ಯಾಕ್ ಮೇಂಟೆನರ್ ಗ್ರೇಡ್ IV ತಾಂತ್ರಿಕ ವಿಭಾಗದ ಸಹಾಯಕ ಅಸಿಸ್ಟಂಟ್ ಪಾಯಿಂಟ್ಸ್ಮನ್ ಟ್ರ್ಯಾಕ್ ಮನ್ ಅಸಿಸ್ಟಂಟ್ ಬ್ರಿಡ್ಜ್ ಇತರೆ ಹಲವು ವಿಭಾಗಗಳ ಲೆವೆಲ್ 1 ಪೋಸ್ಟ್ಗಳು: ಆರ್ಆರ್ಬಿ ಗ್ರೂಪ್ ಡಿ ಅರ್ಹತಾ 2025 ಎನ್ಸಿವಿಟಿ / ಎಸ್ಸಿವಿಟಿಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪ್ರೌಢಶಾಲಾ (10 ನೇ ತರಗತಿ) ಪೂರ್ಣಗೊಳಿಸಿದ ಅಥವಾ ಎನ್ಸಿವಿಟಿ…
ಬೆಂಗಳೂರು : ನಾಡಿನ ಕಲೆ, ವಾಸ್ತುಶಿಲ್ಪದ ತೊಟ್ಟಿಲು, ವಿಶ್ವಪ್ರಸಿದ್ಧ ಹಂಪಿಯಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 2ರ ವರೆಗೆ 3 ದಿನಗಳ ಕಾಲ ಹಂಪಿ ಉತ್ಸವ ನಡೆಯಲಿದ್ದು, ಫೆ. 28ರಂದು ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಹಂಪಿ ಉತ್ಸವ ನಡೆಸುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹ್ಮದ್ ಅವರಿಗೆ ಸೂಚನೆ ನೀಡಿದ್ದು, ಫೆಬ್ರುವರಿ 28ರಂದು ದಿನಾಂಕ ನಿಗದಿಯಾಗಿದ್ದು ಫೆಬ್ರವರಿ 28ರಿಂದ ಮಾರ್ಚ್ 1 ಮತ್ತು 2ನೇ ತಾರೀಖಿನವರೆಗೂ ಸುಮಾರು ಮೂರು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಬೆಂಗಳೂರು : ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಫೆಬ್ರವರಿ 27 ರ ನಾಳೆಯಿಂದ ಮಾರ್ಚ್ 3ರವರೆಗೆ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು, ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮೇಳದಲ್ಲಿ ಪುಸ್ತಕಗಳ ಬಿಡುಗಡೆ, ಚರ್ಚೆ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಶಾಸಕರು ತಮ್ಮ ನಿಧಿಯಿಂದ 2 ರಿಂದ 3 ಲಕ್ಷ ರೂ.ಗಳವರೆಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಸಾರ್ವಜನಿಕ ಗ್ರಂಥಾಲಯ ಹಾಗೂ ಶಾಲೆಗಳಿಗೆ ಪೂರೈಸಲು ಅವಕಾಶವಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ. ಫೆಬ್ರವರಿ 27 ರಿಂದ ಮಾರ್ಚ್ 3ರ ವರೆಗೆ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು, ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮೇಳದಲ್ಲಿ ಪುಸ್ತಕಗಳ ಬಿಡುಗಡೆ, ಚರ್ಚೆ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಶಾಸಕರು ತಮ್ಮ ನಿಧಿಯಿಂದ 2 ರಿಂದ 3 ಲಕ್ಷ ರೂ.ಗಳವರೆಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಸಾರ್ವಜನಿಕ ಗ್ರಂಥಾಲಯ ಹಾಗೂ ಶಾಲೆಗಳಿಗೆ ಪೂರೈಸಲು ಅವಕಾಶವಿದೆ.