Author: kannadanewsnow57

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ಬೆಂಗಳೂರು ನಗರ ಮತ್ತು ಹೊರವಲಯದ ಪ್ರದೇಶಗಳ ಸಾರ್ವಜನಿಕ ಪ್ರಯಾಣಿಕರಿಗೆ, ಸುರಕ್ಷಿತ ಹಾಗೂ ಮಿತವ್ಯಯಕರ ಪ್ರಯಾಣ ದರಗಳಲ್ಲಿ ವಿವಿಧ ಮಾದರಿಯ ಬಸ್ಸುಗಳೊಂದಿಗೆ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಪ್ರಸ್ತುತ, ಬೆಂ.ಮ.ಸಾ.ಸಂಸ್ಥೆಯು ಪ್ರತಿದಿನ 5725 ಬಸ್ಸುಗಳಿಂದ 11.73 ಲಕ್ಷ ಕಿ.ಮೀಗಳಲ್ಲಿ 59,709 ಸರತಿಗಳನ್ನು ಕಾರ್ಯಾಚರಣೆಗೊಳಿಸುತ್ತಿದ್ದು, ಪ್ರತಿದಿನ 40.00 ಲಕ್ಷಕ್ಕೂ ಅಧಿಕ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ವಾಯುಮಾಲಿನ್ಯ ತಗ್ಗಿಸುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕ ಪ್ರಯಾಣಿಕರಿಗೆ ಹೆಚ್ಚಿನ ಹಾಗೂ ಉತ್ತಮ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿಯಲ್ಲಿ Gross Cost Contract (GCC) ಆಧಾರದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ಸುಗಳನ್ನು ಆಚರಿಸುತ್ತಿದೆ. GCC ಆಧಾರದಲ್ಲಿ ಕಾರ್ಯಾಚರಿಸುತ್ತಿರುವ ಮತ್ತು ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳು : 1) Bengaluru Smart City ಯೋಜನೆ ಅಡಿಯಲ್ಲಿ 09 ಮೀಟರ್ ಉದ್ದದ 90 ಹವಾನಿಯಂತ್ರಣ ರಹಿತ…

Read More

ಬೆಂಗಳೂರು : ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣ ಮಾಡಲಾಗುವುದು. ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಾಣ ಮಾಡಬೇಕು. ಚಿತ್ರನಗರಿಯಲ್ಲಿ ಥಿಯೇಟರ್‌, ಸ್ಟುಡಿಯೋ, ಮಲ್ಟಿಪ್ಲೆಕ್ಸ್‌, ಥೀಮ್‌ ಪಾರ್ಕ್‌, ಹೋಟೆಲ್‌ಗಳನ್ನೂ ನಿರ್ಮಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಸೂಚನೆಗಳನ್ನು ನೀಡಿದ್ದಾರೆ. ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ ಆದೇಶ ಹೊರಡಿಸಬೇಕು. ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಭೂಮಿ ಗುರುತಿಸಬೇಕು. ಮೊದಲ ಹಂತದ ಯೋಜನೆಯನ್ನು ಕೂಡಲೇ ಪ್ರಾರಂಭಿಸಬೇಕು. 2015-16 ರಲ್ಲಿ ಆಯವ್ಯಯ ಘೋಷಣೆ ಮಾಡಲಾಗಿತ್ತು. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ ಮಾಡಲು ಟೆಂಡರ್‌ ಕರೆಯಬೇಕು ಎಂದು ಹೇಳಿದ್ದಾರೆ. ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದ ನಂತರ ಪಿಪಿಪಿ ಮಾದರಿಯಲ್ಲಿ ಎಕ್ಸ್‌ಪ್ರೆಷನ್‌…

Read More

ನವದೆಹಲಿ : ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಒಂದು ರಾಷ್ಟ್ರ, ಒಂದು ಚುನಾವಣೆ ವರದಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಪ್ರಸ್ತಾಪಿಸಲಾಗಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಚಿಸಲಾದ ಸಮಿತಿಯು ಇತರ ದೇಶಗಳ ಚುನಾವಣಾ ಪ್ರಕ್ರಿಯೆಗಳನ್ನು ಅಧ್ಯಯನ ಮಾಡಿದೆ. ಅಲ್ಲದೆ, 39 ರಾಜಕೀಯ ಪಕ್ಷಗಳು, ಅರ್ಥಶಾಸ್ತ್ರಜ್ಞರು ಮತ್ತು ಭಾರತದ ಚುನಾವಣಾ ಆಯೋಗವನ್ನು ಸಹ ಸಮಾಲೋಚಿಸಲಾಗಿದೆ. ಈ ನಿಟ್ಟಿನಲ್ಲಿ ಸುಮಾರು 18,000 ಪುಟಗಳ ವರದಿಯನ್ನು ಮಂಡಿಸಲಾಗಿದೆ. ಈ ಪ್ರಸ್ತಾವನೆಯನ್ನು ಮೋದಿ ಸರ್ಕಾರವು ದೀರ್ಘಕಾಲದಿಂದ ಬೆಂಬಲಿಸುತ್ತಿದೆ. ಸಮಿತಿಯ ಶಿಫಾರಸುಗಳು ಮತ್ತು ಅದು ಹೇಗೆ ಕೆಲಸ ಮಾಡುತ್ತದೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಿ ನಂತರ 100 ದಿನಗಳಲ್ಲಿ ಏಕಕಾಲದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ಶಿಫಾರಸು…

Read More

ಬೆಂಗಳೂರು : ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ. ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್‌ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿನ ಡ್ರಗ್ಸ್ ಪಿಡುಗನ್ನು ಸಮರ್ಪಕವಾಗಿ ತಡೆಗಟ್ಟುವ ಉದ್ದೇಶದಿಂದ ಈ ಕೆಳಕಂಡಂತೆ ಮಾನ್ಯ ಸಚಿವರುಗಳನ್ನೊಳಗೊಂಡ ಕಾರ್ಯಪಡೆಯನ್ನು ರಚಿಸಲಾಗಿದೆ. ಸದರಿ ಕಾರ್ಯಪಡೆಯು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ತಿಂಗಳಿಗೊಮ್ಮೆ ಸಭೆ ನಡೆಸಿ, ರಾಜ್ಯದಲ್ಲಿ ಡ್ರಗ್ಸ್ ಪಿಡುಗನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೋರಿದೆ. ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದಕ್ಕಾಗಿ ಇನ್ನಷ್ಟು…

Read More

ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸೆಪ್ಟೆಂಬರ್ 19 ರ ಇಂದು ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 19-09-2024ರಂದು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದೆ. ಇಂದು ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ 2ನೆ ಬ್ಲಾಕ್& 6ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದ್ರನಗರ, ಶಂಕರಮಠ, ಬ್ರೀಗೆಡ್ ಅಪಾರ್ಟಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್ ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೊಸಹಳ್ಳಿ ಮುಖ್ಯರಸ್ತೆ, ರ‍್ಫತ್ ನಗರ ಪಾದರಾಯನಪುರ ಪರ‍್ವ ಮತ್ತು ಪಶ್ಚಿಮ, ದೇವರಾಜ್ ರ‍್ಸ್ ನಗರ, ಸುಜಾತಾ…

Read More

ಬೆಂಗಳೂರು : 2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿರುವ ಅಜೀಂ ಪ್ರೇಮ್‌ಜಿ ಫೌಂಡೇಶನ್ ಫಾರ್ ಡವಲಪ್‌ಮೆಂಟ್ (APF) ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸೇರಿದಂತೆ ಸರ್ಕಾರಿ, ಅನುದಾನಿತ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಎಲ್ಲಾ ಆರು ದಿನಗಳಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ,/ಬಾಳಹಣ್ಣು/ ಶೇಂಗಾ ಚಿಕ್ಕಿಯನ್ನು ವಿತರಿಸುತ್ತಿದ್ದು ಅಧಿಕೃತವಾಗಿ ಚಾಲನೆ ನೀಡುವ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಹಂತದಲ್ಲಿ 25-09-2024 ರಂದು ನಡೆಸುವ ಬಗ್ಗೆ ರಾಜ್ಯ ಸರ್ಕಾರವು ಸೂಚನೆ ನೀಡಿದೆ. ರಾಜ್ಯ ಸರ್ಕಾರವು ಹಿಂದಿನ ವರ್ಷಗಳಂತೆ ಈ ವರ್ಷವೂ ಸಹ ತನ್ನ ವಾರ್ಷಿಕ ಶೇಕಡಾ 100 ರ ಆರ್ಥಿಕ ಅನುದಾನದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಪೂರ್ವಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಅವರಲ್ಲಿರುವ ಅಪೌಷ್ಠಿಕತೆ ನಿವಾರಿಸಲು, ರಕ್ತ ಹೀನತೆ ತಡೆಗಟ್ಟಲು, ಬಹು ಪೋಷಕಾಂಶಗಳ ನ್ಯೂನತೆಯನ್ನು ಹೋಗಲಾಡಿಸಲು, ಅವರ ಆರೋಗ್ಯಕರ ದೈಹಿಕ ಮಾನಸಿಕ ಬೆಳವಣಿಗೆಯನ್ನು ನಿರಂತರ ಕಲಿಕೆಯನ್ನು ಪ್ರೋತ್ಸಾಹಿಸಲು ಮತ್ತು ಅವರ ಶಾಲಾ ತರಗತಿ ದಾಖಲಾತಿಯನ್ನು…

Read More

ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರು ಕಡ್ಡಾಯವಾಗಿ ಹೆಚ್‌ಆರ್‌ಎಂಎಸ್‌ನ ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸದಂತೆ, ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲು ಹೆಚ್‌ಆರ್ ಎಂಎಸ್‌ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ಅನ್ನು ಸಿದ್ಧಪಡಿಸಿದೆ. ಸದರಿ ಪೋರ್ಟಲ್ ಬಳಕೆದಾರರ ಸ್ನೇಹಿಯಾಗಿದ್ದು, ಈ ಕೆಳಕಂಡಂತೆ ಹಲವು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ. 1) ವೇತನ ಚೀಟಿ (Pay Slip) ಸರ್ಕಾರಿ ನೌಕರರು ತಮ್ಮ ಕೆಜಿಐಡಿ ಸಂಖ್ಯೆಯ ಮೂಲಕ ನೋಂದಣಿಯಾಗಿ ನೇರವಾಗಿ ತಮ್ಮ ವೇತನ ಚೀಟಿಯನ್ನು (Pay Slip) ಅನ್ನು ಪಡೆಯಬಹುದು. 2) ರಜೆ ಬಾಕಿ (Leave Balance) ನೌಕರರು ತಮ್ಮ ರಜೆ ಬಾಕಿಯನ್ನು ವೀಕ್ಷಿಸಬಹುದು. 3) ಸಾಲ/ಮುಂಗಡ (Loan/Advance) ನೌಕರರು ಸಾಲ/ಮುಂಗಡದ ವಿವರಗಳನ್ನು ವೀಕ್ಷಿಸಬಹುದು. 4) ಕಡಿತದ ವಿವರಗಳು (Deduction Details) ನೌಕರರು ತಮ್ಮ ಕಡಿತಗಳಾದ ಆದಾಯ ತೆರಿಗೆ (IT), ಕೆಜಿಐಡಿ, ಸಾಮಾನ್ಯ ಭವಿಷ್ಯ ನಿಧಿ (GPF), ಎನ್‌ಪಿಎಸ್, ಮುಂತಾದವುಗಳನ್ನು ವೀಕ್ಷಿಸಬಹುದು. 5)…

Read More

ನವದೆಹಲಿ : ಇನ್ನು ಕೆಲವೇ ದಿನಗಳಲ್ಲಿ ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕಾಗಿ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏಳು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. ಹರಿಯಾಣದ ಎಲ್ಲಾ ವಿಧಾನಸಭಾ ಕ್ಷೇತ್ರಗಳು 90. ಎಲ್ಲಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಿಗದಿಯಾಗಿದೆ. ಅಕ್ಟೋಬರ್ 5 ರಂದು ಮತದಾನ ನಡೆಯಲಿದೆ. 8ರಂದು ಮತ ಎಣಿಕೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಜೊತೆಗೆ ಇಲ್ಲಿ ಚಲಾವಣೆಯಾದ ಮತಗಳನ್ನೂ ಅದೇ ದಿನ ಎಣಿಕೆ ಮಾಡಲಾಗುತ್ತದೆ. ಒಟ್ಟು 90 ವಿಧಾನಸಭಾ ಕ್ಷೇತ್ರಗಳಲ್ಲಿ 73 ಸಾಮಾನ್ಯ ಸ್ಥಾನಗಳು. 17 ಸ್ಥಾನಗಳು ಎಸ್‌ಸಿ ಮೀಸಲು. ಒಟ್ಟು 20.1 ಮಿಲಿಯನ್ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಇದರಲ್ಲಿ 10.6 ಮಿಲಿಯನ್ ಪುರುಷರು ಮತ್ತು 9.5 ಮಿಲಿಯನ್ ಮಹಿಳೆಯರು ಸೇರಿದ್ದಾರೆ. 4,52,000 ಜನರು ಮೊದಲ ಬಾರಿಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು…

Read More

ಸನಾತನ ಧರ್ಮದಲ್ಲಿ ಪಿತೃ ಪಕ್ಷಕ್ಕೆ ವಿಶೇಷ ಮಹತ್ವವಿದೆ. ಈ ಸಮಯದಲ್ಲಿ ಜನರು ತಮ್ಮ ಪೂರ್ವಜರನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಅವರಿಗೆ ತಿಥಿ ಕಾರ್ಯವನ್ನು ಮಾಡುತ್ತಾರೆ. ವಾಸ್ತವವಾಗಿ, ಶ್ರಾದ್ಧ ಪಕ್ಷದ 16 ದಿನಗಳ ಅವಧಿಯಲ್ಲಿ, ಸತ್ತವರು ಭೂಮಿಗೆ ಬರುತ್ತಾರೆ ಮತ್ತು ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಶ್ರಾದ್ಧವನ್ನು ಮಾಡಿದರೆ ಅದು ಅವರ ಆತ್ಮಕ್ಕೆ ಶಾಂತಿಯನ್ನು ನೀಡುತ್ತದೆ ಎಂದು ನಂಬಲಾಗಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಪಿತೃ ಪಕ್ಷದ ಸಂದರ್ಭದಲ್ಲಿ ಜನರು ತಮ್ಮ ಪೂರ್ವಜರಿಗೆ ಶ್ರಾದ್ಧ ಮತ್ತು ತಪರ್ಣವನ್ನು ಮಾಡುತ್ತಾರೆ. ಪಿತ್ರ ಪಕ್ಷದ ಬಗ್ಗೆ ಪ್ರತಿಯೊಂದು ಸಣ್ಣ ಮಾಹಿತಿಯನ್ನು…

Read More

ಬೆಂಗಳೂರು : ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರು ಕಡ್ಡಾಯವಾಗಿ ಹೆಚ್‌ಆರ್‌ಎಂಎಸ್‌ನ ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸದಂತೆ, ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲು ಹೆಚ್‌ಆರ್ ಎಂಎಸ್‌ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್‌ಅನ್ನು ಸಿದ್ಧಪಡಿಸಿದೆ. ಸದರಿ ಪೋರ್ಟಲ್ ಬಳಕೆದಾರರ ಸ್ನೇಹಿಯಾಗಿದ್ದು, ಈ ಕೆಳಕಂಡಂತೆ ಹಲವು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ. 1) ವೇತನ ಚೀಟಿ (Pay Slip) ಸರ್ಕಾರಿ ನೌಕರರು ತಮ್ಮ ಕೆಜಿಐಡಿ ಸಂಖ್ಯೆಯ ಮೂಲಕ ನೋಂದಣಿಯಾಗಿ ನೇರವಾಗಿ ತಮ್ಮ ವೇತನ ಚೀಟಿಯನ್ನು (Pay Slip) ಅನ್ನು ಪಡೆಯಬಹುದು. 2) ರಜೆ ಬಾಕಿ (Leave Balance) ನೌಕರರು ತಮ್ಮ ರಜೆ ಬಾಕಿಯನ್ನು ವೀಕ್ಷಿಸಬಹುದು. 3) ಸಾಲ/ಮುಂಗಡ (Loan/Advance) ನೌಕರರು ಸಾಲ/ಮುಂಗಡದ ವಿವರಗಳನ್ನು ವೀಕ್ಷಿಸಬಹುದು. 4) ಕಡಿತದ ವಿವರಗಳು (Deduction Details) ನೌಕರರು ತಮ್ಮ ಕಡಿತಗಳಾದ ಆದಾಯ ತೆರಿಗೆ (IT), ಕೆಜಿಐಡಿ, ಸಾಮಾನ್ಯ ಭವಿಷ್ಯ ನಿಧಿ (GPF), ಎನ್‌ಪಿಎಸ್, ಮುಂತಾದವುಗಳನ್ನು ವೀಕ್ಷಿಸಬಹುದು. 5)…

Read More