Author: kannadanewsnow57

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿರುವ ನಟ ದರ್ಶನ್ 7 ಗ್ಯಾಂಗ್ ನ ಸ್ಥಳಾಂತರಕ್ಕೆ ಕೋರಿ ಪ್ರಾಸಿಕ್ಯೂಷನ್ ಪರ ಅಭಿಯೋಜಕರಿಂದ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಹೌದು, ನಟ ದರ್ಶನ್ ಸೇರಿ ಇತರೆ ಆರೋಪಿಗಳನ್ನು ಜಾಮೀನಿಗೂ ಮುಂಚಿನ ಜೈಲುಗಳಿಗೆ ವರ್ಗಾವಣೆ ಮಾಡುವಂತೆ ಕೋರ್ಟ್ ಗೆ ಮನವಿ ಮಾಡಲಾಗಿದೆ. ಈ ಸಂಬಂಧ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಬೆಂಗಳೂರಿನ ಜೈಲಿನಲ್ಲಿ ರಾಜಾತಿಥ್ಯ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಜಾಮೀನಿಗೂ ಮುಂಚೆ ಇದ್ದ ಜೈಲಿಗೆ ದರ್ಶನ್ ಸೇರಿ ಇತರೆ ಆರೋಪಿಗಳನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಮೂಲಕ ನಟ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

Read More

ಬೆಂಗಳೂರು : ರಾಜ್ಯಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿರುವ ಧರ್ಮಸ್ಥಳದ ಪ್ರಕರಣದ ಎಸ್ಐಟಿ ತನಿಖೆ ಪ್ರಗತಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ವಿಧಾನ ಸಭೆಯಲ್ಲಿ ಉತ್ತರ ನೀಡಲಿದ್ದಾರೆ. ‘ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರುವವರ ಹೆಸರು ಬಹಿರಂಗಪಡಿಸಬೇಕು. ಮುಸುಕುಧಾರಿಯನ್ನು ಬಂಧಿಸಿ ಎಸ್ಐಟಿ ತನಿಖಾ ವರದಿಯನ್ನು ಸದನದಲ್ಲಿ ಮಂಡಿಸ ಬೇಕು ಎಂದು ಪ್ರತಿಪಕ್ಷ ಬಿಜೆಪಿ ಪಟ್ಟು ಹಿಡಿವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದಿನ ಕಲಾಪ ತೀವ್ರ ಕುತೂಹಲ ಮೂಡಿಸಿದೆ. ಅನಾಮಧೇಯ ವ್ಯಕ್ತಿ ನೀಡಿದ ದೂರಿನ ಮೇಲೆ ಎಸ್ಐಟಿ ರಚನೆ ಮಾಡಿರುವುದು, ಧರ್ಮಸ್ಥಳ ಗ್ರಾಮದಲ್ಲಿ ಹೂತಿಟ್ಟಿರುವ ಶವಗಳಿಗಾಗಿ 15 ದಿನಕ್ಕೂ ಹೆಚ್ಚು ದಿನಗಳಿಂದ ಗುಂಡಿ ತೋಡುತ್ತಿದ್ದರೂ ಏನೂ ದೊರೆಯದ ವಿಚಾರವಾಗಿ ಬಿಜೆಪಿ ನಾಯಕರು ಸದನದಲ್ಲಿ ತೀವ್ರ ಗದ್ದಲ ಸೃಷ್ಟಿಸುವ ನಿರೀಕ್ಷೆಯಿದೆ. ಧರ್ಮಸ್ಥಳ ಕೇಸಿನ ಬಗ್ಗೆ ಸೋಮವಾರ ವಿಧಾನಸಭೆಯಲ್ಲಿ ಪೂರ್ಣ ಉತ್ತರ ನೀಡುವೆ. ಯಾರೂ ರಾಜಕೀಯ ಮಾಡಬಾರದು. ಇದು ಕಾನೂನಾತ್ಮಕ ಕೇಸಾ ಗಿದ್ದು, ಪೊಲೀಸರು ಎಫ್ ಐಆರ್ ಹಾಕಿ ತನಿಖೆ ಮಾಡ್ತಾರೆ. ತಪ್ಪು ಇದ್ದರೆ ಮಾತ್ರ ಕೇಸ್…

Read More

ಬೆಂಗಳೂರು : ಧರ್ಮಸ್ಥಳದಲ್ಲಿರುವ ಶ್ರೀಮಂಜುನಾಥನ ರಕ್ಷಿಸಿ ಎಂದು ಧರ್ಮಸ್ಥಳದ ಪೋಸ್ಟರ್ ಹಿಡಿದು ಜೆಡಿಎಸ್ ಶಾಸಕ ಕಂದಕೂರ್ ಅವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನಸೌಧಕ್ಕೆ ಇಂದು ಜೆಡಿಎಸ್ ಶಾಸಕ ಕಂದಕೂರ್ ಸ್ವಾಮಿ ಮಂಜುನಾಥನನ್ನು ರಕ್ಷಿಸಿ, ಅಪಪ್ರಚಾರಿಗಳನ್ನು ಶಿಕ್ಷಿಸಿ, ಸತ್ಯ ಮೇವ ಜಯತೆ ಎಂಬ ಪೋಸ್ಟರ್ ಹಿಡಿದು ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇಂದು ಧರ್ಮಸ್ಥಳ ಪ್ರಕರಣದ ಬಗ್ಗೆ ಗೃಹ ಸಚಿವರು ಉತ್ತರ ಕೊಡಲಿದ್ದಾರೆ. ಧರ್ಮಸ್ಥಳವನ್ನು ರಕ್ಷಿಸುವ ಕೆಲಸ ಸರ್ಕಾರ ಮಾಡದೇ ಇದ್ದರೆ, ಯಾರು ಪಿತೂರಿ ಮಾಡುತ್ತಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಇಲ್ಲದಿದ್ದರೆ ಮಂಜುನಾಥನೇ ಸರ್ಕಾರಕ್ಕೆ ಶಿಕ್ಷೆ ಕೊಡುವ ದಿನ ದೂರವಿಲ್ಲ ಎಂದು ಹೇಳಿದ್ದಾರೆ.

Read More

ನವದೆಹಲಿ: ಉತ್ತರ ಪ್ರದೇಶದ ಮೀರತ್ನಲ್ಲಿ ಭಾನುವಾರ ರಾತ್ರಿ ಟೋಲ್ ಪ್ಲಾಜಾದ ಕಾರ್ಮಿಕರು ಸೇನಾ ಯೋಧನ ಮೇಲೆ ಹಲ್ಲೆ ನಡೆಸಿದ್ದಾರೆ.ಆ ಯೋಧನನ್ನು ಕಪಿಲ್ ಕವಡ್ ಎಂದು ಗುರುತಿಸಲಾಗಿದೆ. ತನ್ನ ಸೋದರಸಂಬಂಧಿಯೊಂದಿಗೆ ಕರ್ತವ್ಯಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಗಲಾಟೆ ಸಂಭವಿಸಿದೆ. ಮೀರತ್-ಕರ್ನಾಲ್ ಹೆದ್ದಾರಿಯಲ್ಲಿರುವ ಭುನಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವೀಡಿಯೊ ದೃಶ್ಯಾವಳಿಗಳಲ್ಲಿ ಹಲವಾರು ಟೋಲ್ ನೌಕರರು ಕವಡ್ ಅವರನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವುದು ತೋರಿಸಲಾಗಿದೆ. ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ ಮತ್ತು ತನಿಖೆಯ ಭಾಗವಾಗಿ ಟೋಲ್ ಪ್ಲಾಜಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. https://twitter.com/JaipurDialogues/status/1957166917191676343?ref_src=twsrc%5Etfw%7Ctwcamp%5Etweetembed%7Ctwterm%5E1957166917191676343%7Ctwgr%5Ead3bedd088b55b2a91c9d42930efb86ff114d72d%7Ctwcon%5Es1_c10&ref_url=https%3A%2F%2Fkannadadunia.com%2Ffour-toll-plaza-employees-arrested-for-tying-a-soldier-to-a-pole-and-beating-him-video-goes-viral-watch-video%2F https://twitter.com/meerutpolice/status/1957252403729998263?ref_src=twsrc%5Etfw%7Ctwcamp%5Etweetembed%7Ctwterm%5E1957252403729998263%7Ctwgr%5Ead3bedd088b55b2a91c9d42930efb86ff114d72d%7Ctwcon%5Es1_c10&ref_url=https%3A%2F%2Fkannadadunia.com%2Ffour-toll-plaza-employees-arrested-for-tying-a-soldier-to-a-pole-and-beating-him-video-goes-viral-watch-video%2F

Read More

ಬೆಂಗಳೂರು: ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದ್ದಾರೆ. ಈಗಾಗಲೇ 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ರ್ಯಾಂಪ್ ಮೂಲಕ ಸುಲಭವಾಗಿ ಹೋಗಲು ಈ ರಾಂಪ್ ಸಹಾಯ ಮಾಡುತ್ತದೆ. ಆದರೆ, ಇದರಿಂದ ಮೆಖ್ರಿ ಸರ್ಕಲ್ನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಬಹುದು ಎಂದು ಟ್ರಯಲ್ ರನ್ನಲ್ಲಿ ತಿಳಿದುಬಂದಿದೆ. 700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರೀ ಸರ್ಕಲ್ವರೆಗೆ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.

Read More

ಕಳೆದ ಕೆಲವು ವರ್ಷಗಳಲ್ಲಿ, ಸೈಬರ್ ಅಪರಾಧ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ತಡೆಗಟ್ಟುವಿಕೆಗಾಗಿ ಸರ್ಕಾರ ಮತ್ತು ತಂತ್ರಜ್ಞಾನ ಕಂಪನಿಗಳು ವಿವಿಧ ಮಾರ್ಗಸೂಚಿಗಳನ್ನು ಹೊರಡಿಸಿವೆ. ನಿರ್ಲಕ್ಷ್ಯ ವಹಿಸಿದರೆ ವೈಯಕ್ತಿಕ ಮಾಹಿತಿ ಸೋರಿಕೆಯಾಗಬಹುದು ಎಂದು ಎಲ್ಲರೂ ತಿಳಿದುಕೊಳ್ಳುವುದು ಬಹಳ ಮುಖ್ಯ. ಬ್ಯಾಂಕ್ ಖಾತೆಯನ್ನು ಸಹ ಖಾಲಿ ಮಾಡಬಹುದು. ಜನರನ್ನು ವಂಚಿಸಲು ಸೈಬರ್ ಅಪರಾಧಿಗಳು ವಿಭಿನ್ನ ವಿಧಾನಗಳನ್ನು ಅಳವಡಿಸಿಕೊಳ್ಳುತ್ತಾರೆ. ಮೊಬೈಲ್ ಫೋನ್ ಬಳಕೆದಾರರಿಗೆ ಬೆದರಿಕೆಗಿಂತ ಕಡಿಮೆಯಿಲ್ಲದ ಕೆಲವು ಅಪಾಯಕಾರಿ ಅಪ್ಲಿಕೇಶನ್‌ಗಳು ಸಂಶೋಧನೆಯಲ್ಲಿ ಬಹಿರಂಗಗೊಂಡಿವೆ. ಸಂಶೋಧನೆಯಲ್ಲಿ ನಕಲಿ ಅಪ್ಲಿಕೇಶನ್‌ಗಳು ಬಹಿರಂಗಗೊಂಡಿವೆ ಸೈಬಲ್ ರಿಸರ್ಚ್ ಮತ್ತು ಇಂಟೆಲಿಜೆನ್ಸ್ ಲ್ಯಾಬ್ಸ್ (CRIL) ತನ್ನ ಒಂದು ಸಂಶೋಧನೆಯ ಮೂಲಕ ಸುಮಾರು 20 ಅಪ್ಲಿಕೇಶನ್‌ಗಳನ್ನು ಬಹಿರಂಗಪಡಿಸಿದೆ. ಈ ಎಲ್ಲಾ ಅಪ್ಲಿಕೇಶನ್‌ಗಳು ಬಳಕೆದಾರರ ವೈಯಕ್ತಿಕ ಡೇಟಾವನ್ನು ಕದಿಯುತ್ತಿವೆ ಎಂದು ಹೇಳಲಾಗುತ್ತಿದೆ. ಅಂತಹ ಪರಿಸ್ಥಿತಿಯಲ್ಲಿ, ಬಳಕೆದಾರರ ಗೌಪ್ಯತೆಯು ಅಪಾಯದಲ್ಲಿದೆ. ಬಹಿರಂಗಪಡಿಸುವುದರ ಜೊತೆಗೆ, ಈ ಅಪ್ಲಿಕೇಶನ್‌ಗಳನ್ನು ಫೋನ್‌ನಿಂದ ತೆಗೆದುಹಾಕಲು ಸೂಚಿಸಲಾಗಿದೆ. ಯಾವ ರೀತಿಯ ಅಪ್ಲಿಕೇಶನ್‌ಗಳು ಅಪಾಯಕಾರಿ? CRIL ಪ್ರಕಾರ, ಬಳಕೆದಾರರ ವೈಯಕ್ತಿಕ ಡೇಟಾ ಮತ್ತು ಗೌಪ್ಯತೆಗೆ ಅಪಾಯಕಾರಿಯಾದ…

Read More

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಅಶ್ವಿನಿ ಕುಮಾರರ ಹೆಸರನ್ನು ಕೇಳಿರುತ್ತೀರಿ ಇವರು ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ, ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ…

Read More

ಅಹಮದಾಬಾದ್ : ಇಂಧನ ಸ್ವಿಚ್ ಆಫ್ ನಿಂದ `ಏರ್ ಇಂಡಿಯಾ ಬೋಯಿಂಗ್ 787 ವಿಮಾನ ಪತಗೊಂಡಿಲ್ಲ ಎಂದು ಏರ್ ಇಂಡಿಯಾ ಅಧಿಕೃತ ಮಾಹಿತಿ ನೀಡಿದೆ. ಬೋಯಿಂಗ್ 787 ವಿಮಾನಗಳ ಫ್ಲೀಟ್‌ನಲ್ಲಿ ಇಂಧನ ನಿಯಂತ್ರಣ ಸ್ವಿಚ್‌ಗಳ (FCS) ಲಾಕಿಂಗ್ ಕಾರ್ಯವಿಧಾನದ ಮುನ್ನೆಚ್ಚರಿಕೆ ಪರಿಶೀಲನೆಗಳನ್ನು ಏರ್ ಇಂಡಿಯಾ ಪೂರ್ಣಗೊಳಿಸಿದೆ ಮತ್ತು ಯಾವುದೇ ಸಮಸ್ಯೆಗಳಿಲ್ಲ ಎಂದು ಬುಧವಾರ ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೋಯಿಂಗ್ 787 ಮತ್ತು 737 ವಿಮಾನಗಳನ್ನು ನಿರ್ವಹಿಸುವ ಎಲ್ಲಾ ವಿಮಾನಯಾನ ಸಂಸ್ಥೆಗಳು ಇಂಧನ ಸ್ವಿಚ್ ಲಾಕಿಂಗ್ ವ್ಯವಸ್ಥೆಗಳನ್ನು ಪರೀಕ್ಷಿಸುವಂತೆ ವಾಯುಯಾನ ನಿಯಂತ್ರಕ DGCA ಈ ವಾರದ ಆರಂಭದಲ್ಲಿ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಈ ತಪಾಸಣೆ ನಡೆದಿದೆ. ಅಧಿಕಾರಿಯ ಪ್ರಕಾರ, ವಿಮಾನಯಾನದ ಎಂಜಿನಿಯರಿಂಗ್ ತಂಡವು ವಾರಾಂತ್ಯದಲ್ಲಿ ತಪಾಸಣೆಗಳನ್ನು ನಡೆಸಿ ಆಂತರಿಕ ಸಂದೇಶದ ಮೂಲಕ ಪೈಲಟ್‌ಗಳಿಗೆ ಫಲಿತಾಂಶವನ್ನು ತಿಳಿಸಿತು. “ತಪಾಸಣೆಗಳು ಪೂರ್ಣಗೊಂಡಿವೆ, ಮತ್ತು ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ” ಎಂದು ಅಧಿಕಾರಿ ಹೇಳಿದರು, ಎಲ್ಲಾ ಬೋಯಿಂಗ್ 787-8 ವಿಮಾನಗಳು ಈಗಾಗಲೇ ಬೋಯಿಂಗ್‌ನ ನಿರ್ವಹಣಾ ವೇಳಾಪಟ್ಟಿಯ ಪ್ರಕಾರ ಥ್ರೊಟಲ್…

Read More

ಕಲತಾ : ಕಲಾತ್ ಮತ್ತು ಕ್ವೆಟ್ಟಾದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 29 ಪಾಕಿಸ್ತಾನಿ ಭದ್ರತಾ ಪಡೆಗಳನ್ನು ಕೊಂದಿರುವುದಾಗಿ ಬಲೂಚ್ ಲಿಬರೇಶನ್ ಆರ್ಮಿ (BLA) ಹೇಳಿಕೊಂಡಿದೆ. ಪಾಕಿಸ್ತಾನಿ ಸೇನೆಯ ವಿರುದ್ಧ ಈ ಯುದ್ಧವನ್ನು ಮುಂದುವರಿಸುವುದಾಗಿ BLA ಹೇಳಿದೆ. ಕ್ವೆಟ್ಟಾದಲ್ಲಿ, BLA ಯ ವಿಶೇಷ ಘಟಕ ಫತಾಹ್ ಸ್ಕ್ವಾಡ್ ಪಾಕಿಸ್ತಾನಿ ಮಿಲಿಟರಿ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಅನ್ನು ಗುರಿಯಾಗಿಸಿಕೊಂಡು IED ದಾಳಿ ನಡೆಸಿದೆ ಎಂದು ಬಲೂಚ್ ಲಿಬರೇಶನ್ ಆರ್ಮಿ ಹೇಳಿಕೆ ನೀಡಿದೆ. ತನ್ನ ಗುಪ್ತಚರ ಘಟಕ ZIRAB ನಿಂದ ಗುಪ್ತಚರ ಮಾಹಿತಿಯ ನಂತರ ಬಲೂಚ್ ಲಿಬರೇಶನ್ ಆರ್ಮಿ ಈ ದಾಳಿಯನ್ನು ನಡೆಸಿತು. ಪಾಕಿಸ್ತಾನಿ ಮಿಲಿಟರಿ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಅನ್ನು ZIRAB ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿತ್ತು. ಈ ಬಸ್ ಕರಾಚಿಯಿಂದ ಕ್ವೆಟ್ಟಾಗೆ ಪಾಕಿಸ್ತಾನಿ ಮಿಲಿಟರಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿತ್ತು. ಈ ದಾಳಿಯಲ್ಲಿ, 27 ಪಾಕಿಸ್ತಾನಿ ಮಿಲಿಟರಿ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಅನೇಕರು ಗಂಭೀರವಾಗಿ ಗಾಯಗೊಂಡರು. ಈ ಬಸ್‌ನಲ್ಲಿ ಕವ್ವಾಲಿ ಗಾಯಕರೂ ಇದ್ದರು. ಈ…

Read More

ಹಾವೇರಿ : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದ್ದು, ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪಕ್ಕಿರೇಶ ಮಲ್ಲೇಶಣ್ಣನವರ್ (25) ಎಂದು ಗುರುತಿಸಲಾಗಿದೆ. ಶಾಲೆಯ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ಮಕ್ಕಳನ್ನ ಮನೆಗೆ ಬಿಡುವ ವೇಳೆ ಧಿಡೀರ್ ಆಗಿ ಹೃದಯಾಘಾತ ಕಾಣಿಸಿಕೊಂಡಿದೆ. ನಂತರ ಮಕ್ಕಳ ಚೀರಾಟ ಕೇಳಿ ಸ್ಥಳೀಯರು ಬಂದು ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲೇ ಚಾಲಕ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಹೃದಯಾಘಾತದಿಂದ ನಿನ್ನೆ ಒಂದೇ ದಿನ 5 ಜನರು ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ 26ರ ಯುವತಿ, ಸವಣೂರಲ್ಲಿ 25ರ ಯುವಕ ಸೇರಿ ನಿನ್ನೆ 5 ಜನ ಹೃದಯಾ ಘಾತಕ್ಕೆ ಬಲಿಯಾಗಿದ್ದಾರೆ. ಕೊಪ್ಪಳದ 26 ವರ್ಷದ ಮಹಿಳೆ ಮಂಜುಳಾ ಹೂಗಾರ(26) ಹೃದಯಾಘಾತದಿಂದಬುಧವಾರಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಕೊಟ್ಟೂರಿನ ಎಚ್.ಕೆ.ರೇಖಾ (37), ಮಂಡ್ಯದ ಪಾಂಡವಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ಮಂಜುನಾಥ್ (44), ಬಾಗಲಕೋಟೆಯ ಜಮಖಂಡಿಯಲ್ಲಿ ಸಿದ್ದು…

Read More