Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಇಂದೇ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ಕಾಪಿರೈಟ್ ಉಲ್ಲಂಘನೆ ಪ್ರಕರಣ ಸಂಬಂಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಶಖಲಾಗಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಪತ್ರದ ಮುಖಾಂತರ ಪೊಲೀಸರು ನಟ ರಕ್ಷಿತ್ ಶೆಟ್ಟಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನ್ಯಾಯ ಎಲ್ಲಿದೆ ಹಾಗೂ ಗಾಳಿಮಾತು ಚಿತ್ರದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಎಂಆರ್ ಟಿ ಮ್ಯೂಸಿಕ ಪಾಲುದಾರ ನವೀಕ್ ಕುಮಾರ್ ಎಂಬುವರು ದೂರು ನೀಡಿದ್ದು, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಚೆನ್ನೈ : ಕಾವೇರಿ ನೀರು ಹರಿಸುವ ಸಂಬಂಧ ತಮಿಳುನಾಡು ಸರ್ಕಾರ ನಾಳೆ ಮಹತ್ವದ ಸಭೆ ನಡೆಸಲಿದ್ದು, ಜಲಸಂಪನ್ಮೂಲ ಸಚಿವ ದೊರೈಮುರುಗನ್ ಸರ್ವಪಕ್ಷ ಸಭೆ ಕರೆದಿದ್ದಾರೆ. ನಾಳೆ ಚೆನ್ನೈನಲ್ಲಿ ಕಾವೇರಿ ನೀರು ಹಂಚಿಕೆ ಸಂಬಂಧ ಸರ್ವಪಕ್ಷ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ ಎಂದು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ತಿಳಿಸಿದ್ದಾರೆ. ತಮಿಳುನಾಡಿಗೆ ನಿತ್ಯ ಒಂದು ಟಿಎಂಸಿ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಸೂಚನೆ ನೀಡಿತ್ತು. ಆದರೆ ರಾಜ್ಯ ಸರ್ಕಾರವು ನಿನ್ನೆ ನಡೆದ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡಿಗೆ ಒಂದು ಟಿಎಂಸಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ.
ಬೆಂಗಳೂರು : ಮೈಸೂರು ನರಗಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯನವರೇ ಆರೋಪಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯ ಉವಾಚಾ! ಮೂಡಾ :- ಹಗರಣ ಎಂದರೆ ಏನು? * ಮೂಡಾ :- ಹಗರಣ ನಡದೇ ಇಲ್ಲ! * ಮೂಡಾ:- ಹಗರಣ ನಡೆದಿದ್ದರೇ ತನಿಖೆ ಮಾಡಿಸುತ್ತೇವೆ! * ಮೂಡಾ :- ಹಗರಣ ನಡೆದಿರುವುದು ಅಧಿಕಾರಿಗಳ ಲೆವೆಲ್ ನಲ್ಲಿ, ನನಗೇನು ಗೊತ್ತಿಲ್ಲ. * ಮೂಡಾ :- ಅಧಿಕಾರಿಗಳು ತಪ್ಪು ಮಾಡಿದ್ದಾರೆ, ನನಗೆ 62 ಕೋಟಿ ಪರಿಹಾರ ನೀಡಿ, ಸೈಟ್ ವಾಪಾಸ್ ತೆಗೆದುಕೊಳ್ಳಿ. * ಮೂಡಾ :- ಅಧಿಕಾರಿಗಳು ಬಿಜೆಪಿ ಸರ್ಕಾರದಲ್ಲಿ ಅಕ್ರಮವೆಸಗಿದ್ದಾರೆ, ಜೆಡಿಎಸ್ ಶಾಮೀಲಾಗಿದೆ. * ಮೂಡಾ :- ನಾನು ಹಿಂದುಳಿದವರ್ಗದಿಂದ ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವುದನ್ನು ಸಹಿಸುತ್ತಿಲ್ಲ, ಅದಕ್ಕೆ ಆರೋಪ ಮಾಡಿದ್ದಾರೆ. * ಮೂಡಾ :- ನಿವೃತ್ತ ನ್ಯಾ. ಪಿ. ಏನ್ ದೇಸಾಯಿ ನೇತೃತ್ವದಲ್ಲಿ ತನಿಖಾ ಸಮಿತಿ…
ನವದೆಹಲಿ : ಜೂನ್ ತಿಂಗಳ ಸಗಟು ಹಣದುಬ್ಬರ ದರ ಬಂದಿದ್ದು, ಅದು ಶೇ.3 ದಾಟಿದೆ. ಸಗಟು ಹಣದುಬ್ಬರವು ಜೂನ್ ನಲ್ಲಿ ಶೇ.3.36ಕ್ಕೆ ಇಳಿದಿದೆ. ಹಿಂದಿನ ತಿಂಗಳಲ್ಲಿ ಅಂದರೆ ಮೇ 2024 ರಲ್ಲಿ, ಇದು ಶೇಕಡಾ 2.61 ರಷ್ಟಿತ್ತು. ಆಹಾರ ಪದಾರ್ಥಗಳ ದರವು ಮುಖ್ಯವಾಗಿ ಹೆಚ್ಚಾಗಿದೆ, ಇದು ಸಗಟು ಹಣದುಬ್ಬರ ದರದ ಮೇಲೆ ಪರಿಣಾಮ ಬೀರಿದೆ. ಮೇ ತಿಂಗಳಲ್ಲಿ ಶೇ.7.40ರಷ್ಟಿದ್ದ ಆಹಾರ ಹಣದುಬ್ಬರವು ಜೂನ್ನಲ್ಲಿ ಶೇ.8.68ಕ್ಕೆ ಏರಿಕೆಯಾಗಿದೆ. ಪ್ರಾಥಮಿಕ ವಸ್ತುಗಳ ಹಣದುಬ್ಬರ ದರ ಪ್ರಾಥಮಿಕ ವಸ್ತುಗಳ ಹಣದುಬ್ಬರವು ಜೂನ್ನಲ್ಲಿ ಶೇಕಡಾ 8.80 ಕ್ಕೆ ಏರಿದೆ, ಹಿಂದಿನ ತಿಂಗಳಲ್ಲಿ ಇದು ಶೇಕಡಾ 7.20 ರಷ್ಟಿತ್ತು. ಇಂಧನ ಮತ್ತು ವಿದ್ಯುತ್ ಸಗಟು ಹಣದುಬ್ಬರ ಶೇ.1.35ರಿಂದ ಶೇ.1.03ಕ್ಕೆ ಇಳಿಕೆಯಾಗಿದೆ. ಉತ್ಪಾದನಾ ಉತ್ಪನ್ನಗಳ ಸಗಟು ಹಣದುಬ್ಬರವೂ ಹೆಚ್ಚಾಗಿದೆ ಉತ್ಪಾದಿತ ಉತ್ಪನ್ನಗಳ ಹಣದುಬ್ಬರವೂ ಹೆಚ್ಚಾಗಿದೆ ಮತ್ತು ಇದು ಜೂನ್ ನಲ್ಲಿ ಶೇಕಡಾ 1.43 ರಷ್ಟಿತ್ತು. ಮೇ 2024 ರಲ್ಲಿ, ಈ ಅಂಕಿ ಅಂಶವು ಶೇಕಡಾ 0.78 ರಷ್ಟಿತ್ತು. ಸಾಮಾನ್ಯ ಜನರ…
ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಡಿಸಿಎಂ ಡಿ.ಕೆ.ಶಿವಕುಮಾಮಾರ್ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ ರದ್ದು ಕೋರಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಇದೀಗ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಸಿಬಿಐ 2020ರ ಅಕ್ಟೋಬರ್ 3 ರಂದು ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. ಈ ಮಧ್ಯೆ, 2023ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದು ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು.
ನವದೆಹಲಿ : ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಡಿಸಿಎಂ ಡಿ.ಕೆ.ಶಿವಕುಮಾಮಾರ್ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ ರದ್ದು ಕೋರಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಇದೀಗ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಸಿಬಿಐ 2020ರ ಅಕ್ಟೋಬರ್ 3 ರಂದು ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. ಈ ಮಧ್ಯೆ, 2023ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಯಿಂದ ಹಿಂಪಡೆದು ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು.
2024ರ ಪ್ಯಾರಿಸ್ ಒಲಿಂಪಿಕ್ಸ್ ಜುಲೈ 26ರಿಂದ ಆರಂಭವಾಗಲಿದೆ. ಒಲಿಂಪಿಕ್ಸ್ನಲ್ಲಿ ಭಾಗವಹಿಸುವ ಭಾರತೀಯ ಕ್ರೀಡಾಪಟುಗಳಿಗೆ ವಿರಾಟ್ ಕೊಹ್ಲಿ ಸಾಮಾಜಿಕ ಮಾಧ್ಯಮದ ಮೂಲಕ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ವಿಶೇಷ ಸಂದೇಶವನ್ನು ನೀಡಿದ್ದಾರೆ. ಕಿಂಗ್ ಕೊಹ್ಲಿ ವೀಡಿಯೊದಲ್ಲಿ, “ಭಾರತ. ಇಂಡಿಯಾ, ಹಿಂದಿನ ಹೆಸರು ಹಿಂದೂಸ್ಥಾನ. ಒಂದು ಕಾಲದಲ್ಲಿ ಭಾರತವನ್ನು ಪ್ರಪಂಚದಾದ್ಯಂತ ಹಾವಾಡಿಗರು ಮತ್ತು ಆನೆಗಳ ನಾಡು ಎಂದು ಮಾತ್ರ ನೋಡಬಹುದಾಗಿತ್ತು. ಇದು ಕಾಲಾನಂತರದಲ್ಲಿ ಬದಲಾಗಿದೆ. ಇಂದು ನಾವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ, ಗ್ಲೋಬಲ್ ಟೆಕ್ ಹಬ್ ಎಂದು ಕರೆಯಲ್ಪಡುತ್ತೇವೆ. ನಾವು ಕ್ರಿಕೆಟ್, ಬಾಲಿವುಡ್, ಸ್ಟಾರ್ಟ್ ಅಪ್ ಯುನಿಕಾರ್ನ್ ಗಳಿಗೆ ಹೆಸರುವಾಸಿಯಾಗಿದ್ದೇವೆ ಮತ್ತು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದೇವೆ. ಕಿಂಗ್ ಕೊಹ್ಲಿ, “ಈಗ ಈ ಮಹಾನ್ ದೇಶಕ್ಕೆ ದೊಡ್ಡ ವಿಷಯವೇನು? ಸರಿ, ಇದು ಹೆಚ್ಚು ಚಿನ್ನ, ಮತ್ತು ಬೆಳ್ಳಿ ಮತ್ತು ಕಂಚು ಆಗಿರುತ್ತದೆ. ನಮ್ಮ ಸಹೋದರ ಸಹೋದರಿಯರು ಪ್ಯಾರಿಸ್ ಗೆ ಹೋಗಿ ಪದಕಗಳಿಗಾಗಿ ಹಸಿದಿದ್ದಾರೆ. ನಮ್ಮಲ್ಲಿ ಶತಕೋಟಿ ಜನರು ಅವರನ್ನು ನೋಡುತ್ತಾರೆ, ಆತಂಕ ಮತ್ತು ಉತ್ಸುಕರಾಗಿರುತ್ತಾರೆ. ನಮ್ಮ…
ಬೆಂಗಳೂರು : ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದ ಆತಂಕದ ನಡುವೆಯೇ ಇದೀಗ ಜಾಂಡೀಸ್ ಆತಂಕ ಶುರುವಾಗಿದ್ದು, ಮಕ್ಕಳಲ್ಲಿ ಜಾಂಡೀಸ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 445 ಜನರಿಗೆ ರಾಜ್ಯಾಧ್ಯಂತ ಡೆಂಗ್ಯೂ ಪಾಸಿಟಿವ್ ಅಂತ ತಿಳಿದು ಬಂದಿದೆ. ಹೀಗಾಗಿ ಸಕ್ರೀಯ ಪ್ರಕರಣಗಳ ಸಂಖ್ಯೆ 9,527ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 2630 ಜನರನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 445 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಅಂತ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 294, ತುಮಕೂರು 19, ಧಾರವಾಡ 12, ಬೀದರ್ 72, ಬಳ್ಳಾರಿ 3, ಮಂಡ್ಯ 33, ದಕ್ಷಿಣ ಕನ್ನಡ 62, ಉಡುಪಿ 5 ಹಾಗೂ ಚಿಕ್ಕಮಗಳೂರು 13 ಸೇರಿದಂತೆ 445 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಿಂದ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಕಳೆದ ಕೆಲದಿನಗಳಿಂದ ಡೆಂಗ್ಯೂ ಜ್ವರ ಅಬ್ಬರ ಶುರುವಾಗಿದ್ದು, ಈ ನಡುವೆ ಇದೀಗ ಜಾಂಡೀಸ್ ಸೋಂಕಿನ…
ಬೆಂಗಳೂರು : ಇಂದಿನಿಂದ ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದು, ಪರಿಷತ್ ಸಭಾನಾಯಕರಾಗಿ ಎನ್.ಎಸ್. ಭೋಸರಾಜು ಅವರು ನೇಮಕರಾಗಿದ್ದಾರೆ. ವಿಧಾನ ಪರಿಷತ್ ಸಭಾನಾಯಕರಾಗಿ ಜೆಡಿಎಸ್ ನ ವಿಧಾನಪರಿಷತ್ ಸದಸ್ಯರಾಗಿರುವ ಎನ್.ಎಸ್. ಬೋಸರಾಜು ಅವರು ನೇಮಕರಾಗಿದ್ದಾರೆ. ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗಿದೆ.
ನವದೆಹಲಿ : ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್ ಮಿಸ್ರಿ ಸೋಮವಾರ ಅಧಿಕಾರ ಸ್ವೀಕರಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಅವರಿಗೆ ಮುಂಬರುವ ಯಶಸ್ವಿ ಅಧಿಕಾರಾವಧಿಗಾಗಿ ಆತ್ಮೀಯ ಗೌರವ ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದೆ. “ಶ್ರೀ ವಿಕ್ರಮ್ ಮಿಸ್ರಿ ಅವರು ಇಂದು ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. #TeamMEA ವಿದೇಶಾಂಗ ಕಾರ್ಯದರ್ಶಿ ಮಿಸ್ರಿ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡುತ್ತೇವೆ ಮತ್ತು ಅವರ ಮುಂದಿನ ಯಶಸ್ವಿ ಅಧಿಕಾರಾವಧಿಯನ್ನು ಬಯಸುತ್ತೇವೆ” ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ವಿನಯ್ ಮೋಹನ್ ಕ್ವಾತ್ರಾ ಅವರ ನಂತರ ವಿಕ್ರಮ್ ಮಿಸ್ರಿ ಅವರನ್ನು ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಿಸಲು ವಿದೇಶಾಂಗ ಸಚಿವಾಲಯ ಮಾಡಿದ ಪ್ರಸ್ತಾಪವನ್ನು ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ಅನುಮೋದಿಸಿದೆ. ಜುಲೈ 14 ರಂದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ನಿರ್ಗಮಿತ ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ ಅವರಿಗೆ ವಿದಾಯ ಹೇಳಿದರು, ಕಳೆದ ದಶಕದಲ್ಲಿ ಭಾರತದ ವಿದೇಶಾಂಗ ನೀತಿ ಮತ್ತು ರಾಷ್ಟ್ರೀಯ ಭದ್ರತೆಗೆ…