Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಮೈಕೋ ಲೇಔಟ್ ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫ್ಲೈಓವರ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ನಿನ್ನೆ ರಾತ್ರಿ 7.40 ರ ಸುಮಾರಿಗೆ ಘಟನೆ ನಡೆದಿದೆ. ಮೈಕೋ ಲೇಔಟ್ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬಾಯಿ ದುರ್ವಾಸನೆಯಿಂದ ಬಳಲುತ್ತಿರುವವರು ಕೇವಲ ಒಂದು ಪೇರಲ ಎಲೆಯಿಂದ ಸಮಸ್ಯೆಯನ್ನು ಪರಿಹರಿಸಬಹುದು. ಈಗ ಹೇಳಲಾದ ವಿಧಾನಗಳಲ್ಲಿ ಬಳಸಿದರೆ, ಹಲ್ಲು ನೋವು ಸಹ ಕಡಿಮೆಯಾಗುತ್ತದೆ. ಹೌದು. ಪೇರಲ ಎಲೆಗಳಿಂದ ಬಾಯಿಯ ಆರೋಗ್ಯ ಸುಧಾರಿಸುತ್ತದೆ ಎಂದು ಅನೇಕ ತಜ್ಞರು ಈಗಾಗಲೇ ಹೇಳಿದ್ದಾರೆ. ಆದಾಗ್ಯೂ..ಈಗ ಒಬ್ಬ ಆಹಾರ ತಜ್ಞರು ಸಹ ಇದನ್ನೇ ನೆನಪಿಸಿದ್ದಾರೆ. ಪೇರಲ ಎಲೆಗಳು ಬಾಯಿ ದುರ್ವಾಸನೆಯನ್ನು ತೊಡೆದುಹಾಕುವುದರಿಂದ ಹುಣ್ಣು ಮತ್ತು ಹುಳುಕು ಹಲ್ಲಿನ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುತ್ತವೆ ಎಂದು ಅವರು ಹೇಳಿದರು. ಪೇರಲ ಎಲೆಗಳಿಂದ ನೈಸರ್ಗಿಕ ಬಾಯಿ ಫ್ರೆಶ್ನರ್ ಅನ್ನು ಹೇಗೆ ತಯಾರಿಸುವುದು? ಇಲ್ಲಿದೆ ಮಾಹಿತಿ ಪೇರಳೆ ಎಲೆ ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಉಪಯುಕ್ತವಾದ ಎಲೆಗಳಲ್ಲಿ ಪೇರಳೆ ಒಂದು. ಚಯಾಪಚಯ ಕ್ರಿಯೆಯನ್ನು ಸುಧಾರಿಸಲು, ಮಧುಮೇಹವನ್ನು ಕಡಿಮೆ ಮಾಡಲು ಅಥವಾ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಪೇರಳೆ ಎಲೆಗಳು ಎಲ್ಲದಕ್ಕೂ ಪರಿಹಾರವಾಗಿದೆ. ಅವು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿಂದ ಸಮೃದ್ಧವಾಗಿವೆ. ಅಷ್ಟೇ ಅಲ್ಲ. ಅವುಗಳಲ್ಲಿ ಫೈಬರ್ ಸಮೃದ್ಧವಾಗಿದೆ. ಅದಕ್ಕಾಗಿಯೇ ಅವು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತವೆ. ಈ…
ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ಜುಲೈ 31, ಗುರುವಾರ ವಾಣಿಜ್ಯ LPG ಸಿಲಿಂಡರ್ಗಳ ಬೆಲೆ ಕಡಿತವನ್ನು ಘೋಷಿಸಿದ್ದು, ಬೃಹತ್ ಅಡುಗೆ ಇಂಧನವನ್ನು ಅವಲಂಬಿಸಿರುವ ವ್ಯವಹಾರಗಳು ಮತ್ತು ಕೈಗಾರಿಕೆಗಳಿಗೆ ಪರಿಹಾರವನ್ನು ನೀಡುತ್ತಿವೆ. 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್ನ ಬೆಲೆಯನ್ನು ಸುಮಾರು 33.50 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ವಾಣಿಜ್ಯ LPG ಸಿಲಿಂಡರ್ನ ಹೊಸ ಬೆಲೆ ಆಗಸ್ಟ್ 1 ರ ಇಂದಿನಿಂದ ಜಾರಿಗೆ ಬರಲಿದೆ. ಪರಿಷ್ಕೃತ ಬೆಲೆಗಳು ದೈನಂದಿನ ಕಾರ್ಯಾಚರಣೆಗಳಿಗೆ ಈ ಸಿಲಿಂಡರ್ಗಳನ್ನು ಬಳಸುವ ರೆಸ್ಟೋರೆಂಟ್ಗಳು, ಹೋಟೆಲ್ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳಿಗೆ ಪ್ರಯೋಜನವನ್ನು ನೀಡುತ್ತವೆ. ಆದಾಗ್ಯೂ, ದೇಶೀಯ LPG ಸಿಲಿಂಡರ್ ದರಗಳಲ್ಲಿ ಅಂತಹ ಯಾವುದೇ ಬದಲಾವಣೆ ಇಲ್ಲದಿರುವುದರಿಂದ ಮನೆಗಳಿಗೆ ಸ್ವಲ್ಪ ಪರಿಹಾರವಿದೆ. ಪ್ರಮುಖ ನಗರಗಳಲ್ಲಿ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಹೊಸ ದರಗಳನ್ನು ನೋಡೋಣ (ಆಗಸ್ಟ್ 1, 2025) ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ, ಆಗಸ್ಟ್ 1 ರಿಂದ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ನ ಬೆಲೆ 1,631.50 ರೂ.…
ಬೆಂಗಳೂರು : ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅನಕ್ಷರಸ್ಥರು, ವಿಧವೆಯರು ಅರ್ಜಿ ಸಲ್ಲಿಸಿದ ವೇಳೆ ಅಧಿಕಾರಿಗಳು ನೆರವಾಗಲು ಅಗತ್ಯ ಪೂರ್ವಭಾವಿ ಕ್ರಮ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ಸೂಚಿಸಿದೆ. ಕಲಬುರಗಿ ಜಿಲ್ಲೆ ಜೇವರ್ಗಿ ತಹಶೀಲ್ದಾರ್ ಕಚೇರಿಯಲ್ಲಿ ಜವಾನ ಆಗಿದ್ದ ರಾಜಾ ಪಟೇಲ್ ನಿಧನದ ನಂತರ ಆತನ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಸರ್ಕಾರ ವಿಳಂಬ ಮಾಡಿದ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಎಂಟು ವಾರದಲ್ಲಿ ಮೃತ ನೌಕರನ ಪುತ್ರ ಮಹಿಬೂಬ್ ಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವಂತೆ ಸೂಚಿಸಿದೆ. ಅನುಕಂಪದ ನೇಮಕಾತಿ ಅರ್ಜಿಗಳ ನಿರ್ವಹಣೆ ವಿಚಾರವಾಗಿ ಎಲ್ಲ ಇಲಾಖೆಗಳು ಏಕರೂಪದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ರೂಪಿಸಬೇಕು. ಜತೆಗೆ, ಅರ್ಜಿಗಳ ಲೋಪವಾಗದಂತೆ ನಿರ್ವಹಣೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತರಬೇತಿ ನೀಡಬೇಕು ಎಂದು ಪೀಠ ಹೇಳಿದೆ. ಅನುಕಂಪದ ನೇಮಕಾತಿ ಅರ್ಜಿಗಳನ್ನು 30 ದಿನಗಳ ಒಳಗೆ ಲಿಖಿತವಾಗಿ ಸ್ವೀಕರಿಸಬೇಕು. ಅರ್ಜಿ…
ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 111(iv)ರ ಘೋಷಣೆಯಂತೆ “ಓದು ಕರ್ನಾಟಕ” ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1)ರಲ್ಲಿನ ಆದೇಶದಲ್ಲಿ 2024-25ನೇ ಸಾಲಿಗೆ ಪೂರಕವಾಗಿ ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕನ್ನಡ, ಉರ್ದು ಮತ್ತು ಮರಾಠಿ ಮಾಧ್ಯಮದ 4 ಮತ್ತು 5ನೇ ತರಗತಿಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿನ್ಯಾಸಗೊಳಿಸಿ, ಮುದ್ರಿಸಿ, ವಿತರಿಸಲು ಸಮಗ್ರ ಶಿಕ್ಷಣ ಕರ್ನಾಟಕ-ಯೋಜನಾ ಅನುಮೋದನಾ ಮಂಡಳಿಯಿಂದ 2023-24ರ ‘ನಿಪುಣ್ ಭಾರತ್ ಮಿಷನ್’ ಚಟುವಟಿಕೆಗಳ ಅನುಷ್ಠಾನಕ್ಕಾಗಿ ಅನುಮೋದಿತ ರೂ.1242.84 ಲಕ್ಷಗಳಲ್ಲಿ ಹಾಗೂ ಶಿಕ್ಷಕರಿಗೆ ತರಬೇತಿ ನೀಡಲು ರೂ.182.00 ಲಕ್ಷಗಳು ಸೇರಿ ಒಟ್ಟು ರೂ.1424.84 ಲಕ್ಷಗಳ ಮಿತಿಯೊಳಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆವತಿಯಿಂದ ಅನುಷ್ಠಾನಗೊಳಿಸಲು ಅನುಮೋದನೆ ನೀಡಿ ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2)ರಲ್ಲಿನ 2025-26ನೇ…
ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ತಾಲ್ಲೂಕು ಆಸ್ಪತ್ರೆಗಳಲ್ಲಿ ತಾಯಿ ಮತ್ತು ಮಗು ಸೇವೆಯು ದಿನವಿಡೀ ಲಭ್ಯವಿರಬೇಕು ಎಂಬ ವ್ಯವಸ್ಥೆ ತರಲು ನಿರ್ಧಾರ ಮಾಡಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ ಇಬ್ಬರು ಪ್ರಸೂತಿ ತಜ್ಞರು, ಅರಿವಳಿಕೆ ತಜ್ಞರು, ಮಕ್ಕಳ ತಜ್ಞರನ್ನು ನೇಮಿಸಲಾಗುತ್ತದೆ. ರಾಜ್ಯದಲ್ಲಿ ಖಾಲಿ ಇರುವ 223 ವೈದ್ಯರು, 400 ಫಾರ್ಮಸಿಸ್ಟ್ ಟೆಕ್ನಿಷಿಯನ್ಸ್, 1300 ಪಿಎಚ್ಸಿಒ, ಆರೋಗ್ಯ ನಿರೀಕ್ಷಕರ ನೇಮಕಕ್ಕೆ ಸರ್ಕಾರದಿಂದ ಅನುಮತಿ ಸಿಕ್ಕಿದೆ ಎಂದು ಹೇಳಿದ್ದಾರೆ. ಓಲಾ, ಉಬರ್ ಆ್ಯಪ್ ರೀತಿಯಲ್ಲಿ ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶ ಆಂಬ್ಯುಲೆನ್ಸ್ ಸೇವಾ ಗ್ರಾಹಕರಿಗೂ ನೀಡಬೇಕಿದೆ. ಈ ನಿಟ್ಟಿನಲ್ಲಿ ಪಾರದರ್ಶಕ ಆಯ್ಕೆ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ. ಜೊತೆಗೆ ಖಾಸಗಿ ಸಂಸ್ಥೆ ಮೂಲಕ ನಡೆಸುತ್ತಿರುವ 108 ಆರೋಗ್ಯ ಸೇವೆಯನ್ನು ಕೂಡ ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲಾಗುವುದು. ಮುಂದೆ ಈ ವಾಹನಗಳು ಡಿಸಿ, ಸಿಇಒ, ಡಿಎಚ್ಒ ಕಂಟ್ರೋಲ್ನಲ್ಲಿ ಇರಲಿವೆ ಎಂದು ತಿಳಿಸಿದ್ದಾರೆ. ಮುಂದಿನ ಅಧಿವೇಶನದಲ್ಲಿ…
‘ಅನಕ್ಷರಸ್ಥ ವಿಧವೆ’ಯರು ಅನುಕಂಪ ಆಧಾರದಲ್ಲಿ ಉದ್ಯೋಗಕ್ಕೆ ಅರ್ಹ: ಸೂಕ್ತ ನೆರವಿಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು : ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅನಕ್ಷರಸ್ಥರು, ವಿಧವೆಯರು ಅರ್ಜಿ ಸಲ್ಲಿಸಿದ ವೇಳೆ ಅಧಿಕಾರಿಗಳು ನೆರವಾಗಲು ಅಗತ್ಯ ಪೂರ್ವಭಾವಿ ಕ್ರಮ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ಸೂಚಿಸಿದೆ. ಕಲಬುರಗಿ ಜಿಲ್ಲೆ ಜೇವರ್ಗಿ ತಹಶೀಲ್ದಾರ್ ಕಚೇರಿಯಲ್ಲಿ ಜವಾನ ಆಗಿದ್ದ ರಾಜಾ ಪಟೇಲ್ ನಿಧನದ ನಂತರ ಆತನ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಸರ್ಕಾರ ವಿಳಂಬ ಮಾಡಿದ ಪ್ರಕರಣದ ಕುರಿತಾಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಎಂಟು ವಾರದಲ್ಲಿ ಮೃತ ನೌಕರನ ಪುತ್ರ ಮಹಿಬೂಬ್ ಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವಂತೆ ಸೂಚಿಸಿದೆ. ಅನುಕಂಪದ ನೇಮಕಾತಿ ಅರ್ಜಿಗಳ ನಿರ್ವಹಣೆ ವಿಚಾರವಾಗಿ ಎಲ್ಲ ಇಲಾಖೆಗಳು ಏಕರೂಪದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್ಒಪಿ) ರೂಪಿಸಬೇಕು. ಜತೆಗೆ, ಅರ್ಜಿಗಳ ಲೋಪವಾಗದಂತೆ ನಿರ್ವಹಣೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತರಬೇತಿ ನೀಡಬೇಕು ಎಂದು ಪೀಠ ಹೇಳಿದೆ. ಅನುಕಂಪದ ನೇಮಕಾತಿ ಅರ್ಜಿಗಳನ್ನು 30 ದಿನಗಳ ಒಳಗೆ ಲಿಖಿತವಾಗಿ ಸ್ವೀಕರಿಸಬೇಕು. ಅರ್ಜಿ…
ಬೆಂಗಳೂರು : ರಾಜ್ಯದಲ್ಲಿ ಖಾಲಿ ಇರುವ 223 ವೈದ್ಯರು, 400 ಫಾರ್ಮಸಿಸ್ಟ್ ಟೆಕ್ನಿಷಿಯನ್ಸ್, 1300 ಪಿಎಚ್ಸಿಒ, ಆರೋಗ್ಯ ನಿರೀಕ್ಷಕರ ನೇಮಕಕ್ಕೆ ಸರ್ಕಾರದಿಂದ ಅನುಮತಿ ಸಿಕ್ಕಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ತಾಲ್ಲೂಕು ಆಸ್ಪತ್ರೆಗಳಲ್ಲಿ ತಾಯಿ ಮತ್ತು ಮಗು ಸೇವೆಯು ದಿನವಿಡೀ ಲಭ್ಯವಿರಬೇಕು ಎಂಬ ವ್ಯವಸ್ಥೆ ತರಲು ನಿರ್ಧಾರ ಮಾಡಲಾಗಿದೆ. ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ ಇಬ್ಬರು ಪ್ರಸೂತಿ ತಜ್ಞರು, ಅರಿವಳಿಕೆ ತಜ್ಞರು, ಮಕ್ಕಳ ತಜ್ಞರನ್ನು ನೇಮಿಸಲಾಗುತ್ತದೆ. ರಾಜ್ಯದಲ್ಲಿ ಖಾಲಿ ಇರುವ 223 ವೈದ್ಯರು, 400 ಫಾರ್ಮಸಿಸ್ಟ್ ಟೆಕ್ನಿಷಿಯನ್ಸ್, 1300 ಪಿಎಚ್ಸಿಒ, ಆರೋಗ್ಯ ನಿರೀಕ್ಷಕರ ನೇಮಕಕ್ಕೆ ಸರ್ಕಾರದಿಂದ ಅನುಮತಿ ಸಿಕ್ಕಿದೆ ಎಂದು ಹೇಳಿದ್ದಾರೆ. ಓಲಾ, ಉಬರ್ ಆ್ಯಪ್ ರೀತಿಯಲ್ಲಿ ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶ ಆಂಬ್ಯುಲೆನ್ಸ್ ಸೇವಾ ಗ್ರಾಹಕರಿಗೂ ನೀಡಬೇಕಿದೆ. ಈ ನಿಟ್ಟಿನಲ್ಲಿ ಪಾರದರ್ಶಕ ಆಯ್ಕೆ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ. ಜೊತೆಗೆ ಖಾಸಗಿ ಸಂಸ್ಥೆ ಮೂಲಕ ನಡೆಸುತ್ತಿರುವ 108 ಆರೋಗ್ಯ ಸೇವೆಯನ್ನು…
ನವದೆಹಲಿ : ಇಂದು ಎಲ್ಲರೂ UPI (ಏಕೀಕೃತ ಪಾವತಿ ಸೇವೆಗಳು) ಬಳಸುತ್ತಿದ್ದಾರೆ. ಇಂದು ನಾವು ಪ್ರತಿಯೊಂದು ಸಣ್ಣ ಮತ್ತು ದೊಡ್ಡ ಅಗತ್ಯಕ್ಕೂ UPI ಅನ್ನು ಬಳಸುತ್ತೇವೆ. ಆಗಸ್ಟ್ 1 ರಿಂದ UPI ಸೇವೆಯಲ್ಲಿ ಅನೇಕ ದೊಡ್ಡ ಬದಲಾವಣೆಗಳು ಸಂಭವಿಸಲಿವೆ. ಇವು ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತವೆ. UPI ಗೆ ಸಂಬಂಧಿಸಿದ ಯಾವ ನಿಯಮಗಳು ಬದಲಾಗಲಿವೆ ಎಂಬುದರ ಕುರಿತು ಇಲ್ಲಿದೆ ಮಾಹಿತಿ ಬ್ಯಾಲೆನ್ಸ್ ಚೆಕ್ ಮಿತಿ UPI ಬ್ಯಾಲೆನ್ಸ್ ಅನ್ನು ಪದೇ ಪದೇ ಪರಿಶೀಲಿಸುವ ಅಭ್ಯಾಸ ಹೊಂದಿರುವ ಬಳಕೆದಾರರು ಸಮಸ್ಯೆಗಳನ್ನು ಎದುರಿಸಬಹುದು. ಇದರ ಹೊರತಾಗಿ, ಒಂದೇ ಸಂಖ್ಯೆಗೆ ವಿಭಿನ್ನ ಖಾತೆಗಳನ್ನು ಲಿಂಕ್ ಮಾಡಿರುವ ಜನರು ಸಹ ಸಮಸ್ಯೆಗಳನ್ನು ಎದುರಿಸಬಹುದು. ಹೊಸ ನಿಯಮದ ಅಡಿಯಲ್ಲಿ, ನೀವು UPI ಅಪ್ಲಿಕೇಶನ್ನಲ್ಲಿ ದಿನಕ್ಕೆ 50 ಬಾರಿ ಮಾತ್ರ ಬ್ಯಾಲೆನ್ಸ್ ಪರಿಶೀಲಿಸಬಹುದು. ಆಟೋ ಪೇಮೆಂಟ್ ನಲ್ಲಿ ಬದಲಾವಣೆಗಳು ಈಗ ನೀವು ನೆಟ್ಫ್ಲಿಕ್ಸ್ ಚಂದಾದಾರಿಕೆ ಮತ್ತು SIP ಪಾವತಿಯಂತಹ UPI ಸಂಬಂಧಿತ ಆಟೋ ಪೇಮೆಂಟ್ಗಳನ್ನು ಪೀಕ್…
ಯುವನಿಧಿ ಯೋಜನೆಯಡಿಯಲ್ಲಿ ನೋಂದಣಿಯಾದ ಫಲಾನುಭವಿಗಳು ಕಡ್ಡಾಯವಾಗಿ ಯುವನಿಧಿ-ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು ನೋಂದಾಯಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ. ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡು ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಯುವಕ, ಯುವತಿಯರಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಜಿಲ್ಲೆಯ ಜಿಟಿಟಿಸಿ, ಸಿಡಾಕ್, ಸರ್ಕಾರಿ ಐಟಿಐ ಹಾಗೂ ಕೌಶಲ್ಯಾಭಿವೃದ್ಧಿ ಸಂಸ್ಥೆಗಳ ಮುಖಾಂತರ ನೀಡಲಾಗುತ್ತದೆ. ಆದ್ದರಿಂದ ಫಲಾನುಭವಿಗಳು ತರಬೇತಿಯನ್ನು ಪಡೆಯಲು ಪೋರ್ಟಲ್ https://www.kaushalkar.com/ ನಲ್ಲಿ ಕಡ್ಡಾಯವಾಗಿ ನೋಂದಾಯಿಸಬೇಕು. ಒಂದು ವೇಳೆ ತರಬೇತಿಯನ್ನು ಪಡೆಯಲು ನೋಂದಾಯಿಸದೆ ಇದ್ದಲ್ಲಿ ಅಂತಹ ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆಯನ್ನು ಸ್ಥಗಿತಗೊಳಿಸಲಾಗುವುದು. ಪ್ರಸ್ತುತ ಯುವನಿಧಿ ಫಲಾನುಭವಿಗಳು ಯುವನಿಧಿ-ಪ್ಲಸ್ ಕಾರ್ಯಕ್ರಮದಡಿ ತರಬೇತಿಯನ್ನು ಪಡೆದರೂ ಸರ್ಕಾರವು ನಿಗದಿಪಡಿಸಿರುವ ಅವಧಿಯವರೆಗೆ ನಿರುದ್ಯೋಗ ಭತ್ಯೆಯನ್ನು ಪಡೆಯಲು ಯಾವುದೇ ತೊಂದರೆಗಳು ಇರುವುದಿಲ್ಲ. ಪೋರ್ಟಲ್ನಲ್ಲಿನ ನೋಂದಣಿ ಸಂಬಂಧದ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಕೆ.ಜಿ.ಐ.ಡಿ ಕಚೇರಿ ಎದುರುಗಡೆ, ಜಿಲ್ಲಾಡಳಿತ ಭವನ ಕೊಪ್ಪಳ ರವರನ್ನು ಸಂಪರ್ಕಿಸಬಹುದಾಗಿದೆ…