Subscribe to Updates
Get the latest creative news from FooBar about art, design and business.
Author: kannadanewsnow57
ಅತಿಯಾದ ಕೂದಲು ಉದುರುವಿಕೆಗೆ ಕಾರಣ ಸರಿಯಾದ ಪೋಷಕಾಂಶಗಳ ಕೊರತೆ. ಎಣ್ಣೆ ಮತ್ತು ಶಾಂಪೂಗಳಿಂದ ಇದು ಕಡಿಮೆಯಾಗುವುದಿಲ್ಲ.ನಾವು ತಿನ್ನುವ ಆಹಾರದಿಂದ ಮಾತ್ರ ಇದು ಕಡಿಮೆಯಾಗುತ್ತದೆ.ಅದಕ್ಕಾಗಿಯೇ ಪ್ರೋಟೀನ್ ಅಧಿಕವಾಗಿರುವ ಆಹಾರಗಳನ್ನು ಖಂಡಿತವಾಗಿಯೂ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ, ಕೂದಲು ಉದುರುವಿಕೆಯ ಸಮಸ್ಯೆಯಿಂದ ಬಳಲುತ್ತಿರುವ ಅನೇಕ ಜನರಿದ್ದಾರೆ. ಹಿಂದೆ, ನಮ್ಮ ಅಜ್ಜಿ ಮತ್ತು ಮುತ್ತಜ್ಜಿಯರು ದುಬಾರಿ ಶಾಂಪೂಗಳು, ಕಂಡಿಷನರ್ಗಳು ಮತ್ತು ಎಣ್ಣೆಗಳನ್ನು ಬಳಸದಿದ್ದರೂ ಸಹ ಅವರಿಗೆ ದಪ್ಪ, ಉದ್ದ ಕೂದಲು ಇತ್ತು. ಆದರೆ, ಈಗ ನಾವು ಎಷ್ಟೇ ಕಾಳಜಿ ವಹಿಸಿದರೂ ನಾವು ಎಷ್ಟೇ ದುಬಾರಿ ಎಣ್ಣೆ ಮತ್ತು ಶಾಂಪೂಗಳನ್ನು ಬಳಸಿದರೂ, ಅಥವಾ ನಾವು ಎಷ್ಟು ಕೂದಲು ಚಿಕಿತ್ಸೆಗಳನ್ನು ಪಡೆದರೂ ಕೂದಲು ಉದುರುತ್ತಿದೆ. ಈ ರೀತಿಯ ಅತಿಯಾದ ಕೂದಲು ಉದುರುವಿಕೆಗೆ ಕಾರಣ ಸರಿಯಾದ ಪೋಷಕಾಂಶಗಳ ಕೊರತೆ. ಎಣ್ಣೆ ಮತ್ತು ಶಾಂಪೂಗಳಿಂದ ಇದು ಕಡಿಮೆಯಾಗುವುದಿಲ್ಲ. ನಾವು ತಿನ್ನುವ ಆಹಾರದಿಂದ ಮಾತ್ರ ಇದು ಕಡಿಮೆಯಾಗುತ್ತದೆ. ಮುಖ್ಯವಾಗಿ, ನೀವು ನಿಯಮಿತವಾಗಿ ಪ್ರೋಟೀನ್ ಅಧಿಕವಾಗಿರುವ ಐದು ಆಹಾರಗಳನ್ನು ಸೇವಿಸಿದರೆ, ನಿಮ್ಮ ಕೂದಲು ಆರೋಗ್ಯಕರ…
ಕೋಲಾರ : ಕೋಲಾರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರ ಶವಗಳು ಬಾವಿಯಲ್ಲಿ ಪತ್ತೆಯಾಗಿವೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿ ಇಬ್ಬರು ಬಾಲಕಿಯರ ಶವ ಪತ್ತೆಯಾಗಿದೆ. ಈ ಇಬ್ಬರು ಬಾಲಕಿಯರು ಅ.2ರಂದು ಮುಳಬಾಗಿಲು ತಾಲೂಕಿನ ಯಳಚೇಪಲ್ಲಿಯಿಂದ ನಾಪತ್ತೆಯಾಗಿದ್ದರು. ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿಯ ಬಾವಿಯಲ್ಲಿ ನಾಪತ್ತೆಯಾಗಿದ್ದ ಧನ್ಯಬಾಯಿ (13) ಹಾಗೂ ಚೈತ್ರಾ ಬಾಯಿ (13) ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಬಾಲಕಿಯರನ್ನು ಕೊಂದು ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಮಧ್ಯಪ್ರದೇಶ ಹಾಗು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಸರಣಿ ಸಾವು ಸಂಭವಿಸಿದ್ದು, ಇದುವರೆಗೂ ಕೆಮಿನ ಸಿರಪ್ ಸೇವಿಸಿ ಮೃತಪಟ್ಟ ಮಕ್ಕಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಿರಪ್ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಎರಡು ವರ್ಷದೊಳಗಿನ ಮಕ್ಕಳಿಗೆ ಶೀತ ಕೆಮ್ಮು ಔಷಧಿ ನೀಡಬೇಡಿ, 5 ವರ್ಷದೊಳಗಿನ ಮಕ್ಕಳಿಗೆ ಕಾಫ್ ಸಿರಪ್ ನೀಡಬೇಕಾದರೆ ಎಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದ್ದು, ಎಚ್ಚರಿಕೆ ಕ್ರಮ ಕೈಗೊಳ್ಳುವುದಕ್ಕೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಮೊದಲು ಹೈಡ್ರೇಶನ್ ಹಾಗೂ ರೆಸ್ಟ್ ಮಾಡುವುದು ಮೊದಲ ಆದ್ಯತೆ ಆಗಿರಬೇಕು ಎಂದು ಸೂಚನೆ ನೀಡಿದೆ. ಔಷಧ ನಿಯಂತ್ರಕ ಅಮಾನತು ಕೆಮ್ಮು ಅಂತ ಕೊಟ್ಟ ಸಿರಪ್ ಗೆ ಮೃತ ಮಕ್ಕಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮಧ್ಯಪ್ರದೇಶದಲ್ಲಿ 9 ಮತ್ತು ರಾಜಸ್ಥಾನದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಕೇಸರ್ ಫಾರ್ಮಾ ಕಂಪನಿಯ 19 ಮೆಡಿಸನ್ ಇದೀಗ ಸ್ಥಗಿತಗೊಳಿಸಲಾಗಿದೆ.…
ಶನಿಯ ಮಹಾ ಪ್ರದೋಷಕ್ಕೆ ಪರಿಹಾರ ಶಿವನಿಗೆ ಶುಭ ದಿನ ಪ್ರದೋಷ, ಮತ್ತು ಶನಿ ಮಹಾ ಪ್ರದೋಷವು ವಿಶೇಷ ಪ್ರದೋಷ ಎಂದು ನಮಗೆಲ್ಲರಿಗೂ ತಿಳಿದಿದೆ. ಇತರ ಪ್ರದೋಷಗಳ ಸಮಯದಲ್ಲಿ ಉಪವಾಸ ಮಾಡಿ ಶಿವನನ್ನು ಪೂಜಿಸದವರೂ ಸಹ, ಶನಿ ಮಹಾ ಪ್ರದೋಷದ ದಿನದಂದು ಉಪವಾಸ ಮಾಡಿ ಶಿವನನ್ನು ಪೂಜಿಸುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ,…
ಬೆಂಗಳೂರು : ಬೆಂಗಳೂರಿನ ಕೊತ್ತನೂರು ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಬೆಂಗಳೂರು ನಗರದ ಕೊತ್ತನೂರು ಬಳಿಯ ಸಮೃದ್ಧಿ ಅಪಾರ್ಟ್ ಮೆಂಟ್ ನಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಸುಮಾರು 6 ರಿಂದ 8 ತಿಂಗಳ ಹಿಂದೆ ಮೃತಪಟ್ಟಿರುವ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ. ನಿನ್ನೆ ಸಂಜೆ ಕಟ್ಟಡ ಕಾರ್ಮಿಕರ ಕಣ್ಣಿಗೆ ಅಸ್ಥಿಪಂಜರ ಬಿದ್ದಿದೆ. ನಿನ್ನೆ ಅಪಾರ್ಟ್ ಮೆಂಟ್ ಸೆಕ್ಯೂರಿಟಿ ಗಾರ್ಡ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೊತ್ತನೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಸ್ಥಿಪಂಜರವನ್ನು ಎಫ್ ಎಸ್ ಎಲ್ ಗೆ ರವಾನೆ ಮಾಡಿದ್ದಾರೆ. ಮೇಲ್ನೋಟಕ್ಕೆ 35 ರಿಂದ 40 ವರ್ಷದ ಪುರುಷನ ಅಸ್ಥಿಪಂಜರ ಎಂದು ಶಂಕಿಸಲಾಗಿದೆ. ದೊಡ್ಡಗುಬ್ಬಿಯ ಶ್ರೀಧರ್ ಎಂಬುವರಿಗೆ ಸೇರಿದ ಅಪಾರ್ಟ್ ಮೆಂಟ್ ನಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿದೆ.
ಈತ ವೀರೇಶ. ನನ್ನ ತಮ್ಮನ ಮಗ. ಮೊಬೈಲ್ ಎಂದರೆ ಎಲ್ಲರಂತೆ ಈತನಿಗೂ ಪ್ರೀತಿ ಮತ್ತು ಅದಕ್ಕಾಗಿ ಹಠ. ಮೊಬೈಲ್ ಅನುಕೂಲಕ್ಕಿಂತ ಅನಾನುಕೂಲಮಾಡಿದ್ದೆ ಹೆಚ್ಚು. ಅದಕ್ಕಾಗಿ ಒಂದು ಐಡಿಯಾ ಮಾಡಿದೆ. ಚುಕ್ಕಿ ಚಿಕ್ಕವಳಿದ್ದಾಗ ಅವಳಲ್ಲಿ ಸೃಜನಶೀಲ ಆಸಕ್ತಿ ಬೆಳೆಸಬೇಕೆಂಬ ಇಚ್ಛೆಯಿಂದ ಈ ಐಡಿಯಾ ಮಾಡಿದ್ದೆ. ಅದು ಸಂಪೂರ್ಣ ಯಶಸ್ಸು ಕೊಟ್ಟಿತ್ತು. ಆ ಐಡಿಯಾವನ್ನ ನಮ್ಮ ವೀರೇಶನಿಗೂ ಬಳಸಿದೆ. ಸುಮ್ಮನೆ ಒಂದು ಗೋಡೆಯ ಮೇಲೆ ಒಂದು ಕಾರ್ಡ್ ಶೀಟನ್ನು ಅಂಟಿಸಿ. ಅದರ ಪಕ್ಕದಲ್ಲೇ ಕೆಲವು ಬಣ್ಣದ ಸ್ಕೆಚ್ ಪೆನ್ ಗಳನ್ನ ಇಟ್ಟಿದ್ದೆ. ವೀರೇಶ ಬಂದವನೇ ಆ ಕಾರ್ಡ್ ಶೀಟನ್ನ ಖುಷಿಯಿಂದ ನೋಡಿದ. ಸ್ಕೆಚ್ ಪೆನ್ ಕೈಯಲ್ಲಿ ಹಿಡಿದು “ದೊಡ್ಡಪ್ಪ ಏನ್ ಬರೀಲಿ?” ಎಂದ. ನಾನು “ಏನಾದರೂ ಬರೀ ಮಗು, ನಿನಗೆ ಇಷ್ಟಬಂದಿದ್ದು, ಏನಾದರೂ ಬರೀ… ಇಷ್ಟಾದರೂ ಬರೀ ” ಎಂದೆ. ಖುಷಿಗೊಂಡ. ಬರೀತಾ ಬರೀತಾ ಅವನು ಅದರಲ್ಲಿ ತಲ್ಲೀನನಾದ… ದೊಡ್ಡಪ್ಪ ಇದು ಅಜ್ಜ, ಇದು ಮನಿ, ಇದು ಟಿವಿ, ಇದು ನಾಯಿ, ಇದು ಮನಿ……
ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲು ಡೇಟ್ ಫಿಕ್ಸ್ ಆಗಿದೆ. ಅಕ್ಟೋಬರ್ 9 ರಂದು ಬಾಗಿಲು ಓಪನ್ ಆಗಲಿದ್ದು, ಅಕ್ಟೋಬರ್ 23ರಂದು ಬಾಗಿಲು ಮುಚ್ಚಲಾಗುವುದು. ಹಾಸನ ನಗರದಲ್ಲಿ ಸ್ವಾಗತ ಕಮಾನು, ಲೈಟಿಂಗ್ಸ್, ಎಲ್ಇಡಿ ಅಳವಡಿಕೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಭಕ್ತರಿಗೆ ಅನುಕೂಲ ಕಲ್ಪಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹಾಸನಾಂಬ ಮತ್ತು ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಈಗಾಗಲೇ ಜಿಲ್ಲಾ ಉಸ್ತುವಾರಿ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಪೂರ್ವ ತಯಾರಿಯೊಂದಿಗೆ ಭರದಿಂದ ಸಿದ್ಧತೆ ಸಾಗಿದೆ. ಕಳೆದ ಬಾರಿ 20 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ಬಾರಿ ಇನ್ನೂ ಭಕ್ತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ನೂಕುನುಗ್ಗಲು ಆಗದಂತೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಅಗತ್ಯ ಕ್ರಮಕ್ಕೆ ಮುಂದಾಗಿದೆ. ವಿಶೇಷ ದರ್ಶನಕ್ಕೆ ಬರುವಂತಹ ಭಕ್ತರಿಗೆ 300 ರೂ. ಹಾಗೂ 1000 ರೂ. ಪಾಸ್ ವ್ಯವಸ್ಥೆ ಮಾಡಲಾಗಿದೆ. ಇದೇ ಮೊದಲ…
BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಒಂಟಿ ಮಹಿಳೆ ಹಲ್ಲೆಗೈದು 16 ಲಕ್ಷ ರೂ.ಮೌಲ್ಯದ ಚಿನ್ನಾಭರಣ ದೋಚಿ ಪರಾರಿ.!
ದಾವಣಗೆರೆ : ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಒಂಟಿ ಮಹಿಳೆ ಮೇಲೆ ಹಲ್ಲೆಗೈದು ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಕಾರಿಗನೂರು ಕ್ರಾಸ್ ಬಳಿ ಒಂಟಿ ಮಹಿಳೆ ಮೇಲೆ ಹಲ್ಲೆಗೈದು ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ ಈರಮ್ಮ (60) ಹಲ್ಲೆಗೈದು ದರೋಡೆಕೋರರು 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಮನೆಗೆ ನುಗ್ಗಿದ ದರೋಡೆಕೋರರು ಮೊದಲಿಗೆ ಮಾರಕಾಸ್ತ್ರಗಳಿಂದ ಈರಮ್ಮ ಮೇಲೆ ಹಲ್ಲೆಗೈದಿದ್ದಾರೆ. ಪತಿ ಮನೆಗೆ ಬಂದಾಗ ಈರಮ್ಮ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಸದ್ಯ ಈರಮ್ಮರನ್ನು ದಾವಣಗೆರೆಯ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ದಾವಣಗೆರೆ ಎಸ್ ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೈದರಾಬಾದ್ : ಜಾನಪದ ಗೀತೆಗಳು ಮತ್ತು ಪ್ರೇಮ ವೈಫಲ್ಯ ಗೀತೆಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದ ಖ್ಯಾತ ಜಾನಪದ ಕಲಾವಿದ ಗಡ್ಡಂ ರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘಟನೆಯು ಅವರ ಅಭಿಮಾನಿಗಳು, ಜಾನಪದ ಸಂಗೀತ ಉದ್ಯಮ ಮತ್ತು ಚಲನಚಿತ್ರೋದ್ಯಮವನ್ನು ತೀವ್ರ ಆಘಾತಕ್ಕೆ ದೂಡಿದೆ. ಜಾನಪದ ನಟ ಗಡ್ಡಂ ರಾಜು ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಪತ್ನಿಯ ಕಿರುಕುಳದಿಂದ ತಾನು ಸಾಯುತ್ತಿದ್ದೇನೆ ಎಂದು ಸೆಲ್ಫಿ ವಿಡಿಯೋ ಮಾಡಿ ರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬ ಸದಸ್ಯರು ಆತನನ್ನು ಗಮನಿಸಿದಾಗ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ಚಿಕಿತ್ಸೆ ಪಡೆಯುತ್ತಿದ್ದಾಗ ಆತ ಸಾವನ್ನಪ್ಪಿದ್ದಾನೆ. ಆತನ ಅಂತ್ಯಕ್ರಿಯೆ ಕೂಡ ಇತ್ತೀಚೆಗೆ ಪೂರ್ಣಗೊಂಡಿದೆ. ಈ ಮಧ್ಯೆ, ರಾಜುವಿನ ಸೆಲ್ಫಿ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಕಲ್ವ ಶ್ರೀರಾಂಪುರ ಮಂಡಲದ ಜಾಫರ್ ಖಾನ್ ಪೇಟಾ ನಿವಾಸಿ ರಾಜು ಜಾನಪದ ಗೀತೆಗಳ ವಿಡಿಯೋಗಳನ್ನು ಮಾಡುತ್ತಿದ್ದರು. ಆದರೆ, ರಾಜು ಒಬ್ಬ ಯುವತಿಯನ್ನು ಪ್ರೀತಿಸಿ ಆರು ತಿಂಗಳ ಹಿಂದೆ ಮದುವೆಯಾದ. ಆದರೆ ಅವನ…
ಬೆಂಗಳೂರು : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಗದೀಶ.ಜಿ ನಿರ್ದೇಶನ ನೀಡಿದರು. ಇಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿ ಮಾಡುವ ಸಂಬಂಧ ಕರೆಯಲಾಗಿದ್ದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತೀ ಕ್ವಿಂಟಲ್ ರಾಗಿಗೆ 4,886 ರೂ.ಗಳ ಬೆಂಬಲ ಬೆಲೆಯನ್ನು ಸರ್ಕಾರ ನಿಗಧಿಪಡಿಸಿದ್ದು, 2025ರ ಅಕ್ಟೋಬರ್ 01 ರಿಂದ ಡಿಸೆಂಬರ್ 15 2025 ರ ವರೆಗೆ ನೊಂದಣಿ ಕಾರ್ಯ ಕೈಗೊಳ್ಳಲಾಗುವುದು ಹಾಗೂ ಜನವರಿ 01 2026 ರಿಂದ ಮಾರ್ಚ್ 31 2026 ರವರೆಗೆ ರಾಗಿ ಖರೀದಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು. ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್.ಪುರಂ, ಬೆಂಗಳೂರು…














