Author: kannadanewsnow57

ಕೋಲಾರ : ಕೋಲಾರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು,  ಒಂದೇ ಕುಣಿಕೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಗQನೆ ನಡೆದಿದೆ.  ಕೋಲಾರ ತಾಲೂಕಿನ ಕಲ್ವಮಂಜಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನೇಣುಬಿಗಿದುಕೊಂಡು ಲಕ್ಷ್ಮಣ್‌ ಹಾಗೂ ಮಾಲಾಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷ್ಮಣ್‌ ಆಟೋ ಚಾಲಕನಾಗಿದ್ದು, ಪತ್ನಿ ಮಾಲಾಶ್ರೀ ಅಕ್ಷರ ದಾಸೋಹದ ಸಹಾಯಕಿಯಾಗಿದ್ದರು. ದಂಪತಿ ಸಾವಿಗೆ ಕಾರಣ ತಿಳಿದುಬಂದಿಲ್ಲ.  ವೇಮಗಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಶಿವಮೊಗ್ಗ : ರಾಜ್ಯ ಸರ್ಕಾರಿ ನೌಕರರು ತಮ್ಮ ನ್ಯಾಯೋಚಿತ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಕುರಿತಂತೆ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಹೇಳಿದರು. ಅವರು ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಶಾಸಕರ ಭವನದಲ್ಲಿ ಭೇಟಿ ಮಾಡಿ ಸಲ್ಲಿಸಿದ ಮನವಿಯ ಕುರಿತು ಮಾತನಾಡುತ್ತಿದ್ದರು. ಕಾಲಕಾಲಿಕವಾಗಿ ಸರ್ಕಾರವು ನೌಕರರಿಗೆ ನೀಡುವ ವೇತನ ಭತ್ಯೆಗಳನ್ನು ಪರಿಷ್ಕರಿಸಿ ನೀಡಬೇಕು. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ನೌಕರರ ಪಾತ್ರ ಮಹತ್ವದ್ದಾಗಿದೆ ಎಂದರು. ಎಲ್ಲಾ ಸಂದರ್ಭಗಳಲ್ಲಿಯೂ ಸರ್ಕಾರದ ಜೊತೆಗಿದ್ದು ಕಾರ್ಯನಿರ್ವಹಿಸುವ ನೌಕರರ ಹಿತಕಾಯುವಲ್ಲಿಯೂ ಸರ್ಕಾರವ ವಿಶೇಷ ಕಾಳಜಿ ವಹಿಸಬೇಕು ಎಂದ ಅವರು, ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿ.ಎಸ್.ಟಿ. ತೆರಿಗೆ ಸಂಗ್ರಹಣೆಯಲ್ಲಿ ಇಡೀ…

Read More

ಬೆಂಗಳೂರು : ರಾಜ್ಯ ಸರ್ಕಾರವು ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂಬುದರ ಕುರಿತಂತೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದ್ದು, ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಆಹ್ವಾನಿಸಲಾಗಿದೆ ಎಂಬುದು ವದಂತಿಯಾಗಿದೆ ಎಂದು ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಕರೆಯಲಾಗಿದ್ದು, ಇಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೭ ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂಬ ವದಂತಿ ಹಬ್ಬಿದೆ. ಆದರೆ ಇದಕ್ಕೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದ್ದು, ರೇಷನ್‌ ಕಾರಡ್ಡ ನಲ್ಲಿ ತಿದ್ದುಪಡಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ. ಸಾರ್ವಜನಿಕರು ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಲು ಗ್ರಾಮ್‌ ಒನ್‌ ಕೇಂದ್ರ, ನೋಂದಣಿ ಕೇಂದ್ರಗಳತ್ತ ಮುಗಿ ಬೀಳುತ್ತಿದ್ದಾರೆ. ಆದರೆ ಇದಕ್ಕೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದ್ದು, ಕೇವಲ ತಿದ್ದುಪಡಿಗೆ ಮಾತ್ರ ಅವಕಾಶ ನೀಡಿದೆ ಎಂದು ತಿಳಿಸಿದೆ. ಸದ್ಯ ಆರೋಗ್ಯ ಸೌಲಭ್ಯಕ್ಕಾಗಿ ಮಾತ್ರ ಅವಶ್ಯಕತೆ ಇದ್ದವರಿಗೆ ಬಿಪಿಎಲ್‌ ಕಾರ್ಡ್‌ ನೀಡಲು ರಾಜ್ಯ…

Read More

ಹುಬ್ಬಳ್ಳಿ : ರಾಜ್ಯದಲ್ಲಿ ಗೇಮ್‌ ಚಟಕ್ಕೆ ಮತ್ತೊಂದು ಬಲಿಯಾಗಿದ್ದು, ಆನ್‌ ಲೈನ್‌ ಗೇಮ್‌ ನಿಂದ ಹಣ ಕಳೆದುಕೊಂಡು ಬಿಇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ಬಿಇ ವಿದ್ಯಾರ್ಥಿ ರಾಕೇಶ್‌ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಕೇಶ್‌ ಪ್ರತಿದಿನ ಆನ್‌ ಲೈನ್‌ ಗೇಮ್‌ ಆಡುತ್ತಿದ್ದ. ಅನ್‌ ಲೈನ್‌ ಗೇಮ್‌ ನಿಂದ ಸಾಕಷ್ಟು ಸಾಲ ಮಾಡಿಕೊಂಡಿದ್ದ ರಾಕೇಶ್‌ ಮನನೊಂದು ವಸಇ ನಿಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ವಸತಿ ನಿಲಯಕ್ಕೆ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂಬುದರ ಕುರಿತಂತೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದ್ದು, ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಆಹ್ವಾನಿಸಲಾಗಿದೆ ಎಂಬುದು ವದಂತಿಯಾಗಿದೆ ಎಂದು ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹೊಸ ರೇಷನ್‌ ಕಾರ್ಡ್‌ ಗೆ ಅರ್ಜಿ ಕರೆಯಲಾಗಿದ್ದು, ಇಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೭ ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂಬ ವದಂತಿ ಹಬ್ಬಿದೆ. ಆದರೆ ಇದಕ್ಕೆ ಆಹಾರ ಇಲಾಖೆ ಸ್ಪಷ್ಟನೆ ನೀಡಿದ್ದು, ರೇಷನ್‌ ಕಾರಡ್ಡ ನಲ್ಲಿ ತಿದ್ದುಪಡಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ. ಸದ್ಯ ಆರೋಗ್ಯ ಸೌಲಭ್ಯಕ್ಕಾಗಿ ಮಾತ್ರ ಅವಶ್ಯಕತೆ ಇದ್ದವರಿಗೆ ಬಿಪಿಎಲ್‌ ಕಾರ್ಡ್‌ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಶೀಘ್ರವೇ ಅನರ್ಹ ಬಿಪಿಎಲ್‌ ಕಾರ್ಡ್‌ ಗಳನ್ನು ರದ್ದು ಮಾಡಿ ಅರ್ಹ ಫಲಾನುಭವಿಗಳಿಗೆ ಕಾರ್ಡ್‌ ವಿತರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Read More

ಪ್ರತಾಪಗಢ: ಉತ್ತರ ಪ್ರದೇಶದಲ್ಲಿ ಘೋರ ದುರಂತ ಸಂಭವಿಸಿದ್ದು, ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು ನಿನ್ನೆ ಒಂದೇ ದಿನ 37 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ಸಿಡಿಲು ಬಡಿದು ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಬುಧವಾರ ಸಂಜೆ ಭಾರಿ ಮಳೆಯ ಸಮಯದಲ್ಲಿ ಐದು ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಇಡೀ ಜಿಲ್ಲೆಯಲ್ಲಿ ಕೋಲಾಹಲ ಉಂಟಾಗಿದೆ. ಘಟನೆಯ ಮಾಹಿತಿಯ ನಂತರ, ಜಿಲ್ಲಾಡಳಿತವು ಸ್ಥಳಕ್ಕೆ ತಲುಪಿ ಮೃತ ದೇಹಗಳನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ. ಸಂತ್ರಸ್ತರ ಕುಟುಂಬಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡಲಾಗುವುದು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಪಿಲಿಭಿತ್ ಮತ್ತು ಲಖಿಂಪುರ್ ಖೇರಿ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಮತ್ತು ಸ್ಥಳ ಪರಿಶೀಲನೆ ನಡೆಸಿದರು ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ, ಸರ್ಕಾರವು ಎಲ್ಲಾ ಪ್ರವಾಹ…

Read More

ಫಿಲಿಪೈನ್ಸ್ನಲ್ಲಿ ಇಂದು ಪ್ರಬಲ ಭೂಕಂಪನ ಸಂಭವಿಸಿದೆ. ಫಿಲಿಪೈನ್ಸ್ನ ಸ್ಯಾಕ್ಸರ್ಗೆನ್ನಿಂದ 106 ಕಿಲೋಮೀಟರ್ ದೂರದಲ್ಲಿರುವ ಸೆಲೆಬೆಸ್ ಸಮುದ್ರದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 7.1 ರಷ್ಟಿತ್ತು. ಭೂಕಂಪದ ಆಳವು 620 ಕಿ.ಮೀ ಆಗಿದ್ದು, ಇದರ ಪರಿಣಾಮವು ದೊಡ್ಡ ಪ್ರದೇಶದಲ್ಲಿ ಕಂಡುಬಂದಿದೆ. ಆದಾಗ್ಯೂ, ಅಂತಹ ಪ್ರಬಲ ಭೂಕಂಪನದ ನಂತರವೂ, ಯಾವುದೇ ದೊಡ್ಡ ಹಾನಿ ವರದಿಯಾಗಿಲ್ಲ. ಭೂಕಂಪದ ನಂತರ ಯಾವುದೇ ಸುನಾಮಿ ಎಚ್ಚರಿಕೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಫಿಲಿಪೈನ್ಸ್ನ ಮಿಂಡನಾವೊದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಇದರ ಆಳ 650 ಕಿಲೋಮೀಟರ್. https://twitter.com/NCS_Earthquake/status/1811225929840271606?ref_src=twsrc%5Etfw%7Ctwcamp%5Etweetembed%7Ctwterm%5E1811225929840271606%7Ctwgr%5E718d18269755089dfba86acba0ab2f556864869e%7Ctwcon%5Es1_c10&ref_url=https%3A%2F%2Fapi-news.dailyhunt.in%2F

Read More

ಬೆಂಗಳೂರು : ನಡುರಸ್ತೆಯಲ್ಲೇ ಲಾರಿ ಹೊತ್ತಿ ಉರಿದ ಪರಿಣಾಮ ಟಿವಿಎಸ್‌ ಕಂಪನಿಯ 40 ಕ್ಕೂ ಹೆಚ್ಚು ಬೈಕ್‌ ಗಳು ಸುಟ್ಟುಭಸ್ಮವಾಗಿರುವ ಘಟನೆ ನಡೆದಿದೆ. ತಮಿಳುನಾಡಿನ ಟಿವಿಎಸ್‌ ಕಂಪನಿಗೆ ಸೇರಿದ ಲಾರಿವೊಂದು ಹೊಸ ಟಿವಿಎಸ್‌ ಬೈಕ್‌ ಗಳನ್ನು ಸಾಗಿಸುತ್ತಿದ್ದ ವೇಳೆ ಆನೇಕಲ್‌ ಬಳಿಯ ಧಮ್ಮರನಹಳ್ಳಿಯಲ್ಲಿ ಏಕಾಏಕಿ ಹೊತ್ತಿ ಉರಿದಿದೆ. ಕೂಡಲೇ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ 40 ಕ್ಕೂ ಹೆಚ್ಚು ಹೊಸ ಟಿವಿಎಸ್‌ ಬೈಕ್‌ ಗಳು ಸುಟ್ಟು ಕರಕಲಾಗಿವೆ.

Read More

ಮೈಸೂರು :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದಿನಾಂಕ 10.07.2024 ರಂದು ಮಾನ್ಯ ಲೋಕಾಯುಕ್ತ ಕಚೇರಿಗೆ, ಮಾನವ ಹಕ್ಕುಗಳ ಆಯೋಗಕ್ಕೆ, ಚುನಾವಣಾ ಆಯೋಗಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ದೂರು ಸಲ್ಲಿಸಲಾಗಿದ್ದು ಆಗಿರುವ ವಂಚನೆಗಳಿಗೆ, ಸರ್ಕಾರದ ತಾರತಮ್ಯ ಧೋರಣೆಗಳಿಗೆ, ಚುನಾವಣೆ ಕಚೇರಿಗೆ ತಪ್ಪು ಮಾಹಿತಿ ನೀಡಿರುವ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ರೀತಿಯ ಕ್ರಮವನ್ನು ತೆಗೆದುಕೊಳ್ಳುವಂತೆ ಕೊರಳಾಗಿರುತ್ತದೆ.

Read More

ಬೆಂಗಳೂರು : ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಗೀಸರ್ ಬಳಸುತ್ತಾರೆ. ಅದರಲ್ಲೂ ಮಳೆಗಾಲ ಆರಂಭವಾಗಿದ್ದು, ಹೆಚ್ಚಾಗಿ ಬಿಸಿ ನೀರನ್ನು ಬಳಸುತ್ತಾರೆ. ಗೀಸರ್ ಬಳಸುವಾಗ ಹೆಚ್ಚು ಜಾಗೃತರಾಗಿರಬೇಕು. ಇಲ್ಲದಿದ್ದರೆ ಅಪಾಯ ಖಂಡಿತ. ಅದನ್ನು ಬಳಸುವ ಮೊದಲು ಇಲ್ಲಿದೆ ನೀವು ತಿಳಿಯಬೇಕಾದ ಪ್ರಮುಖ ಅಂಶಗಳು. ಮಾರುಕಟ್ಟೆಯಲ್ಲಿ ಮುಖ್ಯವಾಗಿ ನಾಲ್ಕು ವಿಧದ ಗೀಸರ್ ಗಳು ಲಭ್ಯವಿದ್ದು, ಇದರಲ್ಲಿ ಎಲೆಕ್ಟ್ರಿಕ್ ವಾಟರ್ ಗೀಸರ್, ಇನ್ ಸ್ಟಂಟ್ ವಾಟರ್ ಗೀಸರ್, ಸ್ಟೋರೇಜ್ ಗೀಸರ್, ಗ್ಯಾಸ್ ಗೀಸರ್ ಸೇರಿವೆ. ಈ ವಿವಿಧ ರೀತಿಯ ಗೀಸರ್‌ಗಳಿಗೆ ಸುರಕ್ಷತೆ, ಮುನ್ನೆಚ್ಚರಿಕೆಗಳು ಮತ್ತು ನಿರ್ವಹಣೆ ವಿಭಿನ್ನವಾಗಿದೆ. ಗೀಸರ್ ಸುರಕ್ಷತಾ ಸಲಹೆಗಳು ಗೀಸರ್ ಅನ್ನು ಸರಿಯಾದ ತಾಪಮಾನದಲ್ಲಿ ಹೊಂದಸಬೇಕು ಗೀಸರ್ ಅನ್ನು ಬಳಸುವಾಗ ಸರಿಯಾದ ತಾಪಮಾನವನ್ನು ಹೊಂದಿಸಬೇಕು. ಹೆಚ್ಚಿನ ತಾಪಮಾನದ ಸೆಟ್‌ನಿಂದಾಗಿ ನೀರು ಹೆಚ್ಚಾಗಿ ಬಿಸಿಯಾಗುತ್ತದೆ. ಇದಲ್ಲದೇ ವಿದ್ಯುತ್ ಕೂಡ ವ್ಯರ್ಥವಾಗುತ್ತಿದೆ. ಇದರ ಜೊತೆಗೆ ಗೀಸರ್‌ ತಾಪಮಾನವನ್ನು ಪರಿಶೀಲಿಸುವುದು ಮುಖ್ಯವಾಗಿದೆ. ಸಾಮಾನ್ಯವಾಗಿ ಗೀಸರ್ ತಾಪಮಾನವನ್ನು 45-40 ಡಿಗ್ರಿಗಳ ನಡುವೆ ಇಡಬೇಕು. ಗೀಸರ್ ಅನ್ನು ಸುಡುವ ವಸ್ತುಗಳಿಂದ ದೂರವಿಡಿ…

Read More