Author: kannadanewsnow57

ಬೆಂಗಳೂರು : 2025ರ ಜುಲೈ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-3ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳ ವಿತರಣೆ ಕುರಿತು ಆದೇಶ ಹೊರಡಿಸಲಾಗಿದೆ. 2025ರ ಜುಲೈ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-3ಕ್ಕೆ ಹಾಜರಾಗುತ್ತಿರುವ 2025ರ ಪರೀಕ್ಷೆ-1 ಮತ್ತು ಪರೀಕ್ಷೆ-2ಕ್ಕೆ ಗೈರು ಹಾಜರಾದ / ಪೂರ್ಣಗೊಳಿಸಲಾಗಿಲ್ಲದ [Not Completed] / ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ:26.06.2025 ರಂದು ಅಪರಾಹ್ನ ಮಂಡಳಿಯ ಜಾಲತಾಣದ ಶಾಲಾ ಲಾಗಿನ್ನಲ್ಲಿ ಅಪ್ಲೋಡ್ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪ್ರವೇಶ ಪತ್ರಗಳನ್ನು ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್ ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು. ಒಂದು ವೇಳೆ ಏನಾದರೂ ವ್ಯತ್ಯಯಗಳು ಕಂಡು ಬಂದಲ್ಲಿ ಕೂಡಲೇ ಮಂಡಳಿಯ ಸಂಬಂಧಿಸಿದ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು. ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ, ಡೌನ್ಲೋಡ್ ಮಾಡಿಕೊಂಡ ಪ್ರವೇಶ…

Read More

ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆರೋಗ್ಯ ಭಾಗ್ಯ ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ನಮ್ಮ ಸರಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆ ನಿರ್ಮಾಣ ಮಾಡಲಿದೆ ಎಂದು ತಿಳಿಸಿದರು. ಪ್ರತಿ ಜಿಲ್ಲೆಯಲ್ಲಿ ಎಲ್ಲರಿಗೂ, ಸುಲಭ ಹಾಗೂ ಸುಲಲಿತವಾಗಿ ಚಿಕಿತ್ಸೆ ದೊರೆಯುವಂತೆ ಮಾಡಲಾಗುವುದು. ನಾಗರಿಕರ ಯೋಗ ಕ್ಷೇಮದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು. ಹುಬ್ಬಳ್ಳಿ ಮತ್ತು ಬೆಳಗಾವಿ ಭಾಗದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಶಾಖೆ ಶೀಘ್ರವಾಗಿ ಲೋಕಾರ್ಪಣೆ ಆಗಲಿದೆ ಎಂದರು. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ತಂದಿದ್ದೇವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ರಾಜ್ಯಾದ್ಯಂತ ಮಾಡಲು ಆರಂಭಿಸಿದ್ದೇವೆ. ಕಲಬುರಗಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾರ್ಯಾರಂಭವಾಗಿದೆ. ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಇದೆ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ದ್ವಿಚಕ್ರ ಹೊರತುಪಡಿಸಿ, ಇನ್ನುಳಿದ ಎಲ್ಲಾ ಮಾದರಿಯ ವಾಹನಗಳಿಗೆ ಟೋಲ್ ಫ್ಲಾಜಾಗಳಲ್ಲಿ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ. ಆದರೇ ಜುಲೈ.15ರಿಂದ ದ್ವಿಚಕ್ರ ವಾಹನಗಳಿಗೂ ಟೋಲ್ ಶುಲ್ಕ ವಿಧಿಸಲಾಗುತ್ತದೆ ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿದೆ. ಇದು ನಿಜವೇ ಎನ್ನುವ ಅಸಲಿ ಸತ್ಯ ಮುಂದಿದೆ ಓದಿ. ಜುಲೈ 15 ರಿಂದ ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕವನ್ನು ಪರಿಚಯಿಸಬಹುದು ಎಂಬ ಹೆಚ್ಚುತ್ತಿರುವ ಊಹಾಪೋಹಗಳು ಮತ್ತು ವ್ಯಾಪಕ ಮಾಧ್ಯಮ ವರದಿಗಳ ಮಧ್ಯೆ, ಭಾರತ ಸರ್ಕಾರವು ಅಂತಹ ಹೇಳಿಕೆಗಳನ್ನು ಅಧಿಕೃತವಾಗಿ ತಳ್ಳಿಹಾಕಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಈ ವರದಿಗಳನ್ನು “ಆಧಾರರಹಿತ” ಎಂದು ಕರೆದು ಬಲವಾದ ಸ್ಪಷ್ಟೀಕರಣವನ್ನು ನೀಡಿದೆ ಮತ್ತು ಅಂತಹ ಯಾವುದೇ ಪ್ರಸ್ತಾಪವು ಸಕ್ರಿಯ ಪರಿಗಣನೆಯಲ್ಲಿಲ್ಲ ಎಂದು ದೃಢಪಡಿಸಿದೆ. https://twitter.com/NHAI_Official/status/1938155675445588222 ಗುರುವಾರ NHAI ಸಾಮಾಜಿಕ ಮಾಧ್ಯಮ ಮತ್ತು ಅಧಿಕೃತ ಚಾನೆಲ್‌ಗಳ ಮೂಲಕ ಹೇಳಿಕೆಯನ್ನು ಬಿಡುಗಡೆ ಮಾಡಿತು. ಭಾರತ ಸರ್ಕಾರವು ದ್ವಿಚಕ್ರ ವಾಹನಗಳ ಮೇಲೆ ಬಳಕೆದಾರ ಶುಲ್ಕವನ್ನು ವಿಧಿಸಲು ಯೋಜಿಸುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ…

Read More

ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನ ಈ ಕೆಳಕಂಡ ಅರೆ ವೈದ್ಯಕೀಯ ಡಿಪ್ಲೋಮ ಕೋರ್ಸ್ಗಿಳಿಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇತರೆ ಸರ್ಕಾರಿ ಆಸ್ಪತ್ರೆಗಳು ಹಾಗೂ ರಾಜ್ಯದಲ್ಲಿನ ವಿವಿಧ ಖಾಸಗಿ ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು 1 ರಿಂದ 10ನೇ ತರಗತಿ ಅಥವಾ ಪಿಯುಸಿಯವರೆಗೆ ಕನಿಷ್ಠ 07 ವರ್ಷಗಳು ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು. ಇದಕ್ಕೆ ಸಂಬಂಧಿಸಿದ ದೃಢೀಕರಣ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸುವುದು. ಕೋರ್ಸಿನ ಅವಧಿ: ಪಿಯುಸಿ ಅಭ್ಯರ್ಥಿಗಳಿಗೆ 2 ವರ್ಷಗಳು + 3 ತಿಂಗಳು ಇಂಟರ್ನ್ಶಿಪ್ ಮತ್ತು ಎಸ್.ಎಸ್.ಎಲ್.ಸಿ ಅಭ್ಯರ್ಥಿಗಳಿಗೆ 3 ವರ್ಷಗಳು + 3 ತಿಂಗಳ ಇಂಟರ್ನ್ಶಿಪ್. ವಯೋಮಿತಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು, ಪ.ಜಾ/ಪ.ಪಂ ಹಾಗೂ ಸೇವಾನಿರತ ಅಭ್ಯರ್ಥಿಗಳಿಗೆ 40 ವರ್ಷಗಳು ಮೀರಿರಬಾರದು. ಅರ್ಜಿ ನಮೂನೆಗಳು: ಮಂಡಳಿಯ ಜಾಲತಾಣದಲ್ಲಿ ಲಭ್ಯವಿದ್ದು ಎಲ್ಲಾ ವಿದ್ಯಾರ್ಥಿಗಳು ಆನ್-ಲೈನ್ ಮೂಲಕ ಅರ್ಜಿಯನ್ನು ತುಂಬಬೇಕಾಗಿರುತ್ತದೆ. ಅರ್ಜಿಯ…

Read More

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯ ಬೋಧಕೇತರ ನೌಕರರ ಸಾರ್ವತ್ರಿಕ ವರ್ಗಾವಣೆಗಳ ಬಗ್ಗೆ ಶಿಕ್ಷಣ ಇಲಾಖೆಯು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಸರ್ಕಾರದ ಉಲ್ಲೇಖಿತ 9 ರ ಆದೇಶದಲ್ಲಿ ವರ್ಗಾವಣೆಯ ಬಗ್ಗೆ ಮಾರ್ಗಸೂಚಿಗಳನ್ನಯ ಉಲ್ಲೇಖ-10ರ ಈ ಕಛೇರಿ ಅಧಿಸೂಚನೆಯಂತೆ ವರ್ಗಾವಣೆ ಹಮ್ಮಿಕೊಂಡು ಮೊದಲನೇ ಸುತ್ತಿನ ವರ್ಗಾವಣೆಯನ್ನು ಜಾರಿಗೊಳಿಸಲಾಗಿದೆ. ಆದರೆ ಉಲ್ಲೇಖ-11ರಲ್ಲಿ ಸದರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳೊಂದಿಗೆ ಪ್ರಸ್ತುತ 2025-26 ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಸಂಬಂಧಿಸಿದ ವೃಂದದ ಕಾರ್ಯನಿರತ ವೃಂದ ಬಲದ (working strength) ಶೇಕಡ 6 ಕ್ಕೆ ಸೀಮಿತಗೊಳಿಸಿ ದಿನಾಂಕ: 30-06-2025 ರೊಳಗೆ ಪೂರ್ಣಗೊಳಿಸಲು ದಿನಾಂಕ ವಿಸ್ತರಿಸಿ ಆದೇಶಿಸಲಾಗಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ವೇಳಾಪಟ್ಟಿಯನ್ನು ಕೆಳಕಂಡ ಷರತ್ತುಗಳೊಂದಿಗೆ ಹೊರಡಿಸಿದೆ. 1. ಉಲ್ಲೇಖ-09 ಮತ್ತು 10ರ ಎಲ್ಲಾ ಷರತ್ತುಗಳು ಯಥಾ ವತ್ತಾಗಿ ಮುಂದುವರೆಯುತ್ತವೆ. 2. ಈಗಾಗಲೇ ಅರ್ಜಿ ಸಲ್ಲಿಸಿ ವರ್ಗಾವಣೆ ಪಡೆದಿರುವ ಅಥವಾ ಅರ್ಜಿ ಸಲ್ಲಿಸಿ ಕೌನ್ಸಿಲಿಂಗ್ ನಲ್ಲಿ ಗೈರು ಹಾಜರಿ/ತಿರಸ್ಕರಿಸಿದ ನೌಕರರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಂತಹವರನ್ನು ಹೊರತುಪಡಿಸಿ ಉಳಿದ…

Read More

ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೊಸ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಕರ್ನಾಟಕ ಒನ್ ಕೇಂದ್ರಗಳಲ್ಲಿ ವಿದ್ಯುನ್ಮಾನ ನಾಗರೀಕ ವಿತರಣಾ ನಿರ್ದೇಶನಾಲಯವು ನಿಗಧಿಪಡಿಸಲಾಗಿರುವ ಶುಲ್ಕವನ್ನು ಪಾವತಿಸಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಖಾತಾ ಸೃಜನೆಗೆ ಅರ್ಜಿ ಸಲ್ಲಿಸಬಹುದು. ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2.0 ತಂತ್ರಾಂಶದೊಂದಿಗೆ ಜೋಡಣೆಗೊಳಿಸಲಾಗಿದ್ದು, ಇ-ಆಸ್ತಿ ತಂತ್ರಾಂಶದಲ್ಲಿ ಏಪ್ರಿಲ್ 2024 ರ ನಂತರದ ನೋಂದಾಯಿತ ದಾಖಲೆಗಳು ಮತ್ತು ಋಣಭಾರರಾಹಿತ್ಯ ಪ್ರಮಾಣ ಪತ್ರಗಳನ್ನು ಜೋಡಣೆ ಮಾಡಲಾಗಿದ್ದು ವೀಕ್ಷಿಸಬಹುದು. ಸಾರ್ವಜನಿಕರು ಖಾತಾ ಸೃಜನೆಗೆ ಅರ್ಜಿ ಸಲ್ಲಿಸುವಾಗ ದಿನಾಂಕ: 01-04-2024 ರ ನಂತರದ ನೋಂದಾಯಿತ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಿಡ್ ಮಾಡುವ ಅವಶ್ಯಕತೆ ಇರುವುದಿಲ್ಲ. ನೋಂದಾಯಿತ ಪತ್ರ ಮತ್ತು ಋಣಭಾರರಾಹಿತ್ಯ ಪ್ರಮಾಣ ಪತ್ರಗಳ ಸಂಖ್ಯೆಯನ್ನು ದಾಖಲಿಸಿ, ವಿವರಗಳನ್ನು ಪರಿಶೀಲಿಸಿ ಸರಿಯಿರುವ ಬಗ್ಗೆ ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಬೇಕು. ಇ-ಆಸ್ತಿ ತಂತ್ರಾಂಶದಲ್ಲಿ ಕಲ್ಪಿಸಲಾಗಿರುವ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ಇ-ಆಸ್ತಿ ಖಾತಾ ದಾಖಲೆಗಳನ್ನು ಪಡೆಯಲು ಅರ್ಜಿಸಲ್ಲಿಸಬಹುದು.

Read More

ಬೆಂಗಳೂರು :ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟ ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆಯನ್ನು ಪಡೆಯುವ ಮುಂಚಿತವಾಗಿ ಮೃತಪಟ್ಟಲ್ಲಿ ಕುಟುಂಬ ಪಿಂಚಣಿ ಮಂಜೂರು ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ (1) ರ ಆದೇಶದಲ್ಲಿ ದಿನಾಂಕ: 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್.ಪಿ.ಎಸ್.) ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಮೇಲೆ ಓದಲಾದ (2) ರ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ನಲ್ಲಿ ಅವರ ಕುಟುಂಬಕ್ಕೆ ಇಡಿಗಂಟಿನ ಪರಿಹಾರ ಸೌಲಭ್ಯವನ್ನು ವಿಸ್ತರಿಸಿ ಆದೇಶಿಸಲಾಗಿದೆ. ಮೇಲೆ ಓದಲಾದ (3) ರ ಆದೇಶದಲ್ಲಿ ದಿನಾಂಕ: 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿದ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಮೃತರ ನಾಮನಿರ್ದೇಶಿತರಿಗೆ ಕುಟುಂಬ ಪಿಂಚಣಿಯನ್ನು ಮೃತರ ನಾಮನಿರ್ದೇಶಿತರು ಆಯ್ಕೆ ಮಾಡಿಕೊಂಡಲ್ಲಿ ಮೃತ ನೌಕರರ ಪ್ರಾನ್ ಖಾತೆಯಲ್ಲಿರುವ ಸಂಪೂರ್ಣ ಮೊತ್ತವನ್ನು ಸರ್ಕಾರವು…

Read More

ಪ್ರಸಕ್ತ(2025-26) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣ ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತವಾಗಿ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರದಿಂದ ಪಡೆದು ತಮ್ಮ ಅರ್ಜಿಯೊಂದಿಗೆ ಪಹಣಿ(ಆರ್ಟಿ ಸಿ), ಆಧಾರ್ ಕಾರ್ಡ್ನದ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ, ರೂ.100ರ ಛಾಪಾಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕೋರಿದೆ. ಕೃಷಿ ಉಪಕರಣಗಳಾದ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ…

Read More

ಬೆಂಗಳೂರು : 2025-26ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತವಾಗಿ ಒದಗಿಸಲಾಗುತ್ತಿರುವ ಶೂ ಮತ್ತು ಸಾಕ್ಸ್ ಖರೀದಿ ಮಾಡುವ ಬಗ್ಗೆ  ಹಣ ಬಿಡುಗಡೆ ಮಾಡಲಾಗಿದೆ. 2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುತ್ತಿರುವ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 40.68 ಲಕ್ಷ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಒಟ್ಟು ರೂ.11188.00 ಲಕ್ಷಗಳ ವೆಚ್ಚದಲ್ಲಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ಅಥವಾ ಸ್ಯಾಂಡಲ್‌ಗಳನ್ನು ವಿತರಿಸಬೇಕಾಗಿದೆ. ವಿದ್ಯಾರ್ಥಿಗಳ ಸ್ಯಾಂಡಲ್‌ಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಸ್ಯಾಂಡಲ್‌ಗಳನ್ನು ಸ್ಥಳೀಯವಾಗಿ ಖರೀGood news for all government school children in the state: Government releases funds for distribution of free pairs of shoes and socksದಿಸಿ, ವಿತರಣೆ ಮಾಡುವ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲೆಯ ಶಾಲಾಭಿವೃದ್ಧಿ ಹಾಗೂ…

Read More

ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಜೂನ್ 30ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಜುಲೈ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ಇ-ಕೆವೈಸಿ ಮಾಡುವುದು ನಿಮ್ಮ ಸ್ಥಳೀಯ ಪಡಿತರ ಅಥವಾ ಪಿಡಿಎಸ್ ಡೀಲರ್‌ಗೆ ಭೇಟಿ ನೀಡಿ ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಯನ್ನು…

Read More