Author: kannadanewsnow57

ಬೆಂಗಳೂರು : ಕಳೆದ ವರ್ಷ ಚಿತ್ರದುರ್ಗದ ರೇಣುಕಾ ಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿದ್ದರು. ರೇಣುಕಾಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಹದಿನೇಳು ಆರೋಪಿಗಳು ಜೈಲು ಶಿಕ್ಷೆ ಅನುಭವಿಸಿದ್ದರು. ಇದೀಗ ಬೆಂಗಳೂರಿನಲ್ಲಿ ರೇಣುಕಾಸ್ವಾಮಿ ರೀತಿಯೇ ಅಮಾನುಷ ಕೃತ್ಯ ನಡೆಸಿದ ಆರೋಪಿ ಹೇಮಂತ್ ನನ್ನು ಸೋಲದೇವನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಹುಡುಗಿಯ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಹೇಮಂತ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಯುವಕನನ್ನು ಕಿಡ್ನಾಪ್ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ ದಾಖಲಿಸಿಕೊಂಡಿದ್ದ ಸೋಲದೇವನಹಳ್ಳಿ ಠಾಣೆ ಪೊಲೀಸರು ಆರೋಪಿ ಹೇಮಂತ್ ನನ್ನು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ ದರ್ಶನ್ ಗ್ಯಾಂಗ್ ರೀತಿ ಮತ್ತೊಂದು ಗ್ಯಾಂಗ್ ಈ ಕೃತ್ಯ ಎಸಗಿದ್ದು, ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ…

Read More

ಬೆಂಗಳೂರು : ರಾಜ್ಯದಲ್ಲಿ ಇಂಜಿನಿಯರಿಂಗ್/ಆರ್ಕಿಟೆಕ್ಚರ್ ಕೋರ್ಸುಗಳಿಗೆ ಪ್ರವೇಶಾತಿ ಶುಲ್ಕ, ಸೀಟು ಹಂಚಿಕೆ ಪ್ರಮಾಣ ನಿಗದಿಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) (ತಿದ್ದುಪಡಿ) ಅಧಿನಿಯಮ, 2015 (Act No.39 of 2015)ರಲ್ಲಿನ ಪ್ರಕರಣ 4(ಎ) ಮತ್ತು 4(ಬಿ) ರಲ್ಲಿ ವೃತ್ತಿಪರ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸೀಟು ಹಂಚಿಕೆ ಮತ್ತು ಶುಲ್ಕ, ನಿಗಧಿಯ ಸಂಬಂಧವಾಗಿ ಸರ್ಕಾರವು, ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಒಕ್ಕೂಟ/ಪತಿನಿಧಿಗಳೊಂದಿಗೆ ಸಮ್ಮತಾಭಿಪ್ರಾಯದ ಒಪ್ಪಂದಕ್ಕೆ/ಒಡಂಬಡಿಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2) ರಂತೆ 2024-25ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ರಾಜ್ಯದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು/ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ(ಯು.ವಿ.ಸಿ.ಇ)/ಮೈಸೂರು ವಿಶ್ವವಿದ್ಯಾಲಯ (ಶೇ.50ರಷ್ಟು ಸೀಟುಗಳು)/ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳು ಮತ್ತು ಸ್ನಾತಕೋತ್ತರ ಕೇಂದ್ರಗಳು/ಖಾಸಗಿ ಅನುದಾನಿತ/ಖಾಸಗಿ ಅನುದಾನರಹಿತ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಟರ್ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಪಾವತಿಸಬೇಕಾದ…

Read More

ದಾವಣಗೆರೆ: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ಉ, ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ದಾವಣಗೆರೆಯ ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸಂಭವಿಸುವ ಹಠಾತ್ ಸಾವನ್ನು ಇನ್ನು ಮುಂದೆ ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸಲು ಹಾಗೂ ಆಸ್ಪತ್ರೆಯಿಂದ ಹೊರಗೆ ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

Read More

ಕೊಪ್ಪಳ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ತುಮಕೂರ ಜಿಲ್ಲೆ ಬೀರನಕಲ್ ಗ್ರಾಮ ನಿವಾಸಿ ರಮೇಶ ತಂದೆ ಮುದ್ದುರಾಮಯ್ಯ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ವಿಧಿಸಿರುತ್ತಾರೆ. ತುಮಕೂರ ಜಿಲ್ಲೆ ಬೀರನಕಲ್ ಗ್ರಾಮ ನಿವಾಸಿ ರಮೇಶ ತಂದೆ ಮುದ್ದುರಾಮಯ್ಯ ಇತನು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಇನ್ಟ್ಸಾಗ್ರಾಂ ಮೂಲಕ ಪರಿಚಯಿಸಿಕೊಂಡು ಪೋನಿನಲ್ಲಿ ಮಾತನಾಡುತ್ತ ಸಲುಗೆ ಬೆಳೆಸಿರುತ್ತಾನೆ. ಬಾಲಕಿಯ ತಾಯಿ ಕೊಪ್ಪಳದಲ್ಲಿ ವಾಸವಾಗಿರುತ್ತಾರೆ. ದಿ: 15-10-2023 ರಂದು ಬೆಳಿಗ್ಗೆ 6 ಗಂಟೆಗೆ ಬಾಲಕಿಯ ತಾಯಿ ಮನೆ ಕೆಲಸಕ್ಕೆ ಹೋದಾಗ ಬಾಲಕಿ ಮಾತ್ರ ಮನೆಯಲ್ಲಿದ್ದು ಆರೋಪಿ ರಮೇಶ ಇತನು ಮನೆಯಲ್ಲಿ ಅತೀಕ್ರಮ ಪ್ರವೇಶ ಮಾಡಿ ಅಪ್ರಾಪ್ತ ಬಾಲಕಿಯೊಂದಿಗೆ ಸಲುಗೆಯಿಂದ ಮಾತನಾಡುತ್ತ ಮೈ ಕೈ ಮುಟ್ಟಿ ಕೈ ಹಿಡಿದು ಎಳೆದಾಡಿದಾಗ ಬಾಲಕಿ ನಿರಾಕರಿಸಿದ್ದು ನಾವಿಬ್ಬರೂ ಮುಂದೆ ಮದುವೆಯಾಗುತ್ತೇವೆ ಎಂದು ಹೇಳಿ ನಂಬಿಸಿ ಮನೆಯಲ್ಲಿ ಲೈಂಗಿಕ…

Read More

ಬೆಂಗಳೂರು: ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಲೋಪ ಸೇರಿ ಬರೀ ವಿವಾದಗಳಿಂದ ಗೊಂದಲದಲ್ಲಿದ್ದ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಹುತೇಕ ನೆನೆಗುದಿಗೆ ಬಿದ್ದಿದೆ. ಕೆಎಎಸ್ ನೇಮಕಾತಿಯಲ್ಲಿ ಮೀಸಲಾತಿಯನ್ನು ಶೇಕಡ 56ಕ್ಕೆ ಹೆಚ್ಚಿಸಿರುವ ಕಾನೂನು ಬದ್ಧತೆಯನ್ನು ಪ್ರಶ್ನಿಸಿ ಕೆಎಎಸ್ ಆಕಾಂಕ್ಷಿ ಮಧು ಬಿ.ಎನ್. ಎಂಬುವರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೆಎಟಿ ನೇಮಕಾತಿ ಅಧಿಸೂಚನೆಯನ್ನು ಅಮಾನತುಗೊಳಿಸಿದೆ. ಹೀಗಾಗಿ ಎರಡು ತಿಂಗಳ ಹಿಂದಿನ ಪರೀಕ್ಷೆ ಮೌಲ್ಯಮಾಪನ ಸ್ಥಬ್ಧವಾಗಿದೆ. ಮುಂದೆ ಏನೆಂದು ಗೊತ್ತಾಗದೆ ಅಭ್ಯರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಅಭ್ಯರ್ಥಿಗಳ ನೇಮಕಾತಿ ಭವಿಷ್ಯ ಈಗ ಹೈಕೋರ್ಟ್ ಆಂಗಳದಲ್ಲಿದೆ. ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ 2022ರಲ್ಲಿ ಸುಗ್ರೀವಾಜ್ಞೆ ಆದೇಶ ಹೊರಡಿಸಿತ್ತು. ಈ ಆಧಾರದ ಮೇಲೆ ಮಾಡಲಾಗಿದ್ದ ಕೆಎಎಸ್ ನೇಮಕಾತಿ ‘ಹುದ್ದೆಗಳ ಮೀಸಲಾತಿ ವರ್ಗೀಕರಣ’ವನ್ನು ಮಧು ಬಿ.ಎನ್ ಪ್ರಶ್ನಿಸಿದ್ದರು. ವಿಚಾರಣೆ ವೇಳೆ ಮೀಸಲಾತಿ ವರ್ಗೀಕರಣವನ್ನು ಅಮಾನ್ಯಗೊಳಿಸಿ ಹೊಸ ಅಧಿಸೂಚನೆ ಹೊರಡಿಸಬಹುದು ಎಂದು ಕೆಎಟಿತನ್ನ ಆದೇಶದಲ್ಲಿ ತಿಳಿಸಿತ್ತು.

Read More

ನವದೆಹಲಿ: ಮುಂಬರುವ ಜನಗಣತಿಯ ಸಮಯದಲ್ಲಿ ಸ್ವಯಂ-ಗಣತಿಗಾಗಿ ವಿಶೇಷ ಮೀಸಲಾದ ವೆಬ್ ಪೋರ್ಟಲ್ ಅನ್ನು ಪ್ರಾರಂಭಿಸಲಾಗುವುದು, ಇದು ರಾಷ್ಟ್ರೀಯ ಎಣಿಕೆ ಕಾರ್ಯದ ಎರಡೂ ಹಂತಗಳಿಗೆ ಲಭ್ಯವಿರುತ್ತದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೇಶದ ಮೊದಲ ಡಿಜಿಟಲ್ ಜನಗಣತಿಯಲ್ಲಿ, ಗಣತಿದಾರರು ತಮ್ಮ ಆಂಡ್ರಾಯ್ಡ್ ಮತ್ತು ಆಪಲ್ ಫೋನ್‌ಗಳಲ್ಲಿ ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಳಸಿಕೊಂಡು ನಾಗರಿಕರ ಡೇಟಾವನ್ನು ಸಂಗ್ರಹಿಸುತ್ತಾರೆ ಎಂದು ಅವರು ಹೇಳಿದರು. ಮನೆಪಟ್ಟಿ ಮತ್ತು ವಸತಿ ಗಣತಿ (HLO) ಮತ್ತು ಜನಸಂಖ್ಯಾ ಗಣತಿಯ ಎರಡೂ ಹಂತಗಳಿಗೆ ಲಭ್ಯವಿರುವ ಮೀಸಲಾದ ವೆಬ್ ಪೋರ್ಟಲ್ ಮೂಲಕ ನಾಗರಿಕರು ಸ್ವಯಂ-ಗಣತಿ ಮಾಡಲು ಅವಕಾಶವನ್ನು ಪಡೆಯುವುದು ದೇಶದಲ್ಲಿ ಇದೇ ಮೊದಲು. “ಡಿಜಿಟಲ್ ಜನಗಣತಿ ಉಪಕ್ರಮವು ಜನಗಣತಿ ಪ್ರಕ್ರಿಯೆಯನ್ನು ಆಧುನೀಕರಿಸುವ ಕಡೆಗೆ ಒಂದು ಪರಿವರ್ತನೆಯ ಹೆಜ್ಜೆಯಾಗಿದೆ. ಮೊದಲ ಬಾರಿಗೆ, ಡೇಟಾವನ್ನು ಸಂಗ್ರಹಿಸಲು ಮತ್ತು ಅದನ್ನು ವಿದ್ಯುನ್ಮಾನವಾಗಿ ಕೇಂದ್ರ ಸರ್ವರ್‌ಗೆ ಕಳುಹಿಸಲು ತಂತ್ರಜ್ಞಾನವನ್ನು ಬಳಸಲಾಗುವುದು. ಇದು ಜನಗಣತಿ ದತ್ತಾಂಶದ ಆರಂಭಿಕ ಲಭ್ಯತೆಗೆ ಕಾರಣವಾಗುತ್ತದೆ” ಎಂದು ಅಧಿಕಾರಿಯೊಬ್ಬರು ಹೇಳಿದರು. ಸಂಗ್ರಹಣೆ, ಪ್ರಸರಣ ಮತ್ತು ಸಂಗ್ರಹಣೆಯ ಸಮಯದಲ್ಲಿ…

Read More

ಆತ್ಮ ನಿರ್ಭರ ಭಾರತ ಅಭಿಯಾನ, ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (PMFME) ಯೋಜನೆ, ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗೆ ಸುವರ್ಣಾವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿಯಲ್ಲಿ ಶೇ. 50 ರಷ್ಟು ಅಥವಾ ಗರಿಷ್ಟ ರೂ. 15 ಲಕ್ಷ ಸಹಾಯಧನ (ಕೇಂದ್ರ ಸರ್ಕಾರದ ರೂ. 6 ಲಕ್ಷ ಹಾಗೂ ರಾಜ್ಯ ಸರ್ಕಾರದ ರೂ. 9 ಲಕ್ಷ ಸಹಾಯಧನ) ನೀಡಲಾಗುತ್ತದೆ. ಯೋಜನೆಯ ಘಟಕಗಳ ಕಿರು ಪರಿಚಯ: ವೈಯಕ್ತಿಕ ಉದ್ದಿಮೆಗಳು ಮತ್ತು ಗುಂಪುಗಳು: ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಮತ್ತು ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಅವಕಾಶ ನೀಡಲಾಗಿದೆ. 18 ವರ್ಷ ಮೇಲ್ಪಟ್ಟವರು ಹಾಗೂ ಯಾವುದೇ ಕನಿಷ್ಠ ವಿದ್ಯಾರ್ಹತೆ ಇರುವುದಿಲ್ಲ. ಇತರೆ ಸರ್ಕಾರಿ ಯೋಜನೆಗಳಲ್ಲಿ ಸಹಾಯಧನ ಸಂಪರ್ಕಿತ ಬ್ಯಾಂಕ್ ಸಾಲ ಪಡೆದಿದ್ದರೂ ಸಹ ಅರ್ಹರಾಗಿರುತ್ತಾರೆ. ವೈಯಕ್ತಿಕ ಉದ್ದಿಮೆಗಳಿಗೆ ಮಾಲೀಕತ್ವದ ಸಂಸ್ಥೆಗಳಿಗೆ, ಪಾಲುದಾರಿಕೆ ಸಂಸ್ಥೆಗಳಿಗೆ, ಖಾಸಗಿ ಸಂಸ್ಥೆಗಳಿಗೆ, ರೈತ ಉತ್ಪಾದಕರ ಸಂಸ್ಥೆಗಳಿಗೆ, ಸರ್ಕಾರೇತರ ಸಂಸ್ಥೆಗಳಿಗೆ ಮತ್ತು ಸ್ವ-ಸಹಾಯ ಸಂಘಗಳಿಗೆ ಸಾಲ ಸಂಪರ್ಕಿತ ಶೇ.…

Read More

ದಾವಣಗೆರೆ : ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಸೇರಿದಂತೆ ಅಪಘಾತ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಲು ಸತತ ಪ್ರಯತ್ನ ಮಾಡುತ್ತಿದ್ದು ಜುಲೈ 8 ರಂದು ಮಂಗಳವಾರ ಬೆಳ್ಳಂಬೆಳಗ್ಗೆ ರಸ್ತೆಗಿಳಿದು 30ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಸಂಚಾರಿ ದಕ್ಷಿಣ ವಲಯ ಠಾಣೆಗೆ ಹಸ್ತಾಂತರಿಸಿದರು. ಕೆಲವು ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರವಾಹನಕ್ಕೆ ನಂಬರ್ ಪ್ಲೇಟ್ ಇಲ್ಲದೇ ವಾಹನ ಚಲಾಯಿಸುತ್ತಿರುವುದು ಮತ್ತು ವಯಸ್ಕರು ಕೂಡ ವಾಹನದ ನಂಬರ್ ಪ್ಲೇಟ್ ಇಲ್ಲದೇ ವಾಹನ ಚಲಾಯಿಸುತ್ತಿರುವುದನ್ನು ಪತ್ತೆಹಚ್ಚಿ, ಅಂತಹ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ವಾಹನದ ನಂಬರ್ ಪ್ಲೇಟ್ ಇಲ್ಲದೇ ಚಲಾಯಿಸುವುದು ಮೋಟಾರ್ ವಾಹನ ಕಾಯಿದೆಯ ಸೆಕ್ಷನ್ 177 ರ ಉಲ್ಲಂಘನೆಯಾಗಿದ್ದು ದಂಡನೆಗೆ ಅವಕಾಶ ನೀಡಲಾಗಿದೆ. ವಾಹನಗಳಿಗೆ ಕಾನೂನು ಬದ್ದತೆ, ಗುರುತು ಮತ್ತು ಭದ್ರತೆಗೆ ಸಂಬಂಧಿಸಿದಾಗಿದ್ದು ಪ್ರತಿಯೊಂದು ವಾಹನದ ಗುರುತಿಗಾಗಿ ಮತ್ತು ಅಪರಾಧಗಳಲ್ಲಿ ಬಳಸುವ ವಾಹನ ಗುರುತಿಗಾಗಿ ಮತ್ತು ಸಂಚಾರಿ ನಿಯಮಗಳ ಉಲ್ಲಂಘನೆ ಪತ್ತೆ, ಕಳ್ಳತನ ಪತ್ತೆಹಚ್ಚಲು ಪ್ರತಿ ವಾಹನದ ನಂಬರ್ ಪ್ಲೇಟ್ ಸಹಾಯಕವಾಗಿದ್ದು…

Read More

ಬೆಂಗಳೂರು : ರಾಜ್ಯದಲ್ಲಿ ಎನ್ ಐಎ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು ನೀಡಿದ ಆರೋಪದಡಿ ಮೂವರನ್ನು ಬಂಧಿಸಿದೆ. ರಾಜ್ಯದ ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಯ ಐದು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್, ಉತ್ತರ ವಿಭಾಗದ ನಗರ ಶಶಸ್ತ್ರ ಮೀಸಲು ಪಡೆ ಎಎಸ್ಐ ಚಾಂದ್ ಪಾಷಾ ಮತ್ತು ತಲೆ ಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಅಹಮದ್ ತಾಯಿ ಅನೀಸ್ ಫಾತಿಮಾ ಅವರನ್ನು ಬಂಧಿಸಲಾಗಿದೆ. https://twitter.com/NIA_India/status/1942612683729100817?ref_src=twsrc%5Egoogle%7Ctwcamp%5Eserp%7Ctwgr%5Etweet ಕೋಲಾರ ತಾಲೂಕಿಕಿನ ಭಟ್ರಹಳ್ಳಿಯ ಸತೀಶ್ ಗೌಡ ಅವರಿಗೆ ಎನ್ಐಎ ನೋಟಿಸ್ ನೀಡಿದೆ. ಬೆಳಿಗ್ಗೆ 10ಗಂಟೆಗೆ ಗಂಟೆಗೆ ಬೆಂಗಳೂರಿನ ಎನ್ಐಎ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ವೈಟ್ ಫೀಲ್ಡ್ ಬಳಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸತೀಶ್ ಗೌಡ ಶಂಕಿತ ಉಗ್ರರಿಗೆ ಮೊಬೈಲ್ ಸಿಮ್ ಕಾರ್ಡ್ ಗಳನ್ನು ನೀಡಿದ ಆರೋಪವಿದೆ. ಸತೀಶ್ ಗೌಡ…

Read More

ದಾವಣಗೆರೆ : ದಾವಣಗೆರೆಯಲ್ಲಿ ಇಬ್ಬರು ಅಂತಾರಾಜ್ಯ ಮಹಿಳಾ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದ ನಿವಾಸಿ ಆರ್. ಮಂಜುಳಾ (32), ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಪೂರ್ಣಿಮಾ (20) ಬಂಧಿಸಲಾಗಿದೆ. ಬಂಧಿತರಿಂದ 15 ಲಕ್ಷ ರೂ. ಮೌಲ್ಯದ 155 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ದಾವಣಗೆರೆ ನಗರದ ಕೆಟಿಜೆ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳಿಯರನ್ನು ಬಂಧಿಸಿದ್ದಾರೆ. ದಾವಣಗೆರೆ ಕೇಂದ್ರ ಬಸ್ ನಿಲ್ದಾಣದಲ್ಲಿ ಟಿ.ಸುಧಾ ಎಂಬುವರ ಚಿನ್ನ ಕಳವು ಮಾಡಿದ್ದರು. ದಾವಣಗೆರೆ ರೈಲ್ವೆ ಪೊಲೀಸ್ ಠಾಣೆ, ಬಡಾವಣೆ ಪೊಲೀಸ್ ಠಾಣೆ, ಚಿತ್ರದುರ್ಗ, ಹೊಳಲ್ಕೆರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.

Read More