Author: kannadanewsnow57

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಉದ್ಯಾನವನಗಳಲ್ಲಿ ವಾಯುವಿಹಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಪರಿಸರದ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಸಾಂಸ್ಕೃತಿಕ ಮತ್ತು ಇನ್ನಿತರ ಕಲಾ ಚಟುವಟಿಕೆಗಳನ್ನೊಳಗೊಂಡ “ಬೆಂಗಳೂರು ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಉದ್ಯಾನವನಗಳು ಬೆಂಗಳೂರಿನ ನಾಗರಿಕರಿಗೆ ಉತ್ತಮವಾದ ಆಮ್ಲಜನಕ ಮತ್ತು ಮನೋಲ್ಲಾಸವನ್ನು ಒದಗಿಸುವ ಮೂಲವಾಗಿದೆ. “ಉದ್ಯಾನ ನಗರಿ” ಯಲ್ಲಿ ಪಾಲಿಕೆಯು 1,287 ಉದ್ಯಾನವನಗಳನ್ನು ಅಭಿವೃದ್ಧಿಗೊಳಿಸಿ ನಿರ್ವಹಣೆ ಮಾಡಲಾಗುತ್ತಿದೆ. ಉದ್ಯಾನವನಗಳಿಗೆ ವೀಕ್ಷಿಸಲು ಬರುವಂತಹ ಸಾರ್ವಜನಿಕರಿಗೆ ಮತ್ತು ವಾಯುವಿಹಾರಿಗಳಿಗೆ ಅನುಕೂಲವಾಗಲೆಂದು ಉದ್ಯಾನವನಗಳಲ್ಲಿ “ಬೆಂಗಳೂರು ಹಬ್ಬ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಪಾರಂಪರಿಕ ಸಂಸ್ಕೃತಿ, ಕಲೆಗಳು ಮತ್ತು ಇನ್ನಿತರ ಕಲಾ ಚಟುವಟಿಕೆಗಳಾದ ಡೊಳ್ಳುಕುಣಿತ, ಜಾನಪದ ಗಾಯನ, ಸುಗಮ ಸಂಗೀತ ಮತ್ತು ಜಾನಪದ ಕಲಾತಂಡಗಳನ್ನು ಒಳಗೊಂಡಂತೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 27 ವಿಧಾನಸಭಾ ಕ್ಷೇತ್ರಗಳಲ್ಲಿ 1 ವಿಧಾನ ಸಭಾ ಕ್ಷೇತ್ರಕ್ಕೆ ಒಂದರಂತೆ 27 ಉದ್ಯಾನವನಗಳಲ್ಲಿ ಮೇ-2025 ರಿಂದ ಮಾರ್ಚ್-2026 ರವರೆಗೆ ವರ್ಷವಿಡೀ ಸಾಂಸ್ಕೃತಿಕ ಮತ್ತು ಮಕ್ಕಳಿಗೆ ಉತ್ತೇಜಿಸುವ ಕಲೆಗಳ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ…

Read More

ಬೆಂಗಳೂರು : ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸದ ಹಾಗೂ 50 ವರ್ಷ ಮೀರದ ವೈದ್ಯಾಧಿಕಾರಿಗಳು ಹಾಗೂ ಇತರ ಸಿಬ್ಬಂದಿಯನ್ನು ಗುರುತಿಸಿ ತಕ್ಷಣವೇ ಗ್ರಾಮೀಣ ಪ್ರದೇಶದ ಸೇವೆಗೆ ವರ್ಗಾವಣೆ ಮಾಡಬೇಕೆಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆರೋಗ್ಯ ಇಲಾಖೆಯ ಆದೇಶದ ಪ್ರಕಾರ, ಕನಿಷ್ಠ ಮೂರು ವರ್ಷ ಗ್ರೂಪ್ ‘ಎ’ ಹುದ್ದೆಯಲ್ಲಿ, ಕನಿಷ್ಠ ನಾಲ್ಕು ವರ್ಷ ಗ್ರೂಪ್ ‘ಬಿ’ ಹುದ್ದೆಯಲ್ಲಿ, ಗ್ರೂಪ್ ‘ಸಿ’ ಹುದ್ದೆಯಲ್ಲಿ ಕನಿಷ್ಠ ಐದು ವರ್ಷ ಹಾಗೂ ಗ್ರೂಪ್ ‘ಡಿ’ ಹುದ್ದೆಯಲ್ಲಿ ಕನಿಷ್ಠ 7 ವರ್ಷ ನಿರಂತರ ಸೇವೆಯನ್ನು ಸರಕಾರಿ ಆಸ್ಪತ್ರೆ ಮತ್ತು ಸರಕಾರಿ ಸಂಸ್ಥೆಯಲ್ಲಿ ಸಲ್ಲಿಸಿದ ಒಬ್ಬ ವೈದ್ಯಾಧಿಕಾರಿ ಅಥವಾ ಇತರ ಸಿಬ್ಬಂದಿಯನ್ನು ಅದೇ ಪ್ರದೇಶ ಅಥವಾ ವಲಯ, ಇತರ ವಲಯ ಅಥವಾ ಪ್ರದೇಶದ ಸರಕಾರಿ ಆಸ್ಪತ್ರೆ ಅಥವಾ ಸಂಸ್ಥೆಗೆ ವರ್ಗಾವಣೆ ಮಾಡಬಹುದು ಎಂದು ತಿಳಿಸಿದೆ. ಅಲ್ಲದೆ, ವಿಶೇಷ ತಜ್ಞರು ಮತ್ತು ಹಿರಿಯ ವಿಶೇಷ ತಜ್ಞರು ಅವರ ವಿಶೇಷ ವಿದ್ಯಾರ್ಹತೆಗೆ ಗೊತ್ತುಪಡಿಸದ ಹುದ್ದೆಗಳಲ್ಲಿ ಕಾರ್ಯನಿರ್ವಸುತ್ತಿದ್ದಲ್ಲಿ ಅವರ ಸೇವೆಯನ್ನು ಕೂಡಲೇ…

Read More

ಬೆಂಗಳೂರು : 2025 ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ. 2025 ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಈ ಕೆಳಕಂಡಂತೆ ದಿನಾಂಕ ನಿಗದಿಪಡಿಸಲಾಗಿದೆ. ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸುವುದು ಮತ್ತು ಪ್ರಾಂಶುಪಾಲರುಗಳು ಈ ಕೆಳಗಿನಂತೆ ಸೂಚನೆಗಳನ್ನು ಪಾಲಿಸುವುದು. 1. 2025 d ಪರೀಕ್ಷೆ-1 ಮತ್ತು ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಿದ್ದು ಫಲಿತಾಂಶ ಉತ್ತಮಪಡಿಸಿಕೊಳ್ಳಲು 2025ರ ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ಬರೆಯಲು ಇಚ್ಚಿಸಿದಲ್ಲಿ, ಅಂತಹ ವಿದ್ಯಾರ್ಥಿಗಳು ಫಲಿತಾಂಶ ಪಟ್ಟಿಯ ಆಧಾರದ ಮೇಲೆ ನಿಯಮಾನುಸಾರ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಅರ್ಜಿಯನ್ನು ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಸಲ್ಲಿಸುವುದು. ಸದರಿ ಪ್ರಕ್ರಿಯೆಗೆ ಮಂಡಲಿಯ ಅನುಮತಿ ಪಡೆಯುವ ಅವಶ್ಯಕತೆ ಇರುವುದಿಲ್ಲ. 2. 2025 ದ್ವಿತೀಯ ಪಿಯುಸಿ ಪರೀಕ್ಷೆ-2 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ನೀಡಲಾಗುವ…

Read More

ಬೆಂಗಳೂರು : 2025ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ಸ್ ಪ್ರತಿ ಪಡೆಯಲು ಹಾಗೂ ಮರುಮೌಲ್ಯಮಾಪನ ಮತ್ತು ಮರುಎಣಿಕೆಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಕರ್ನಾಟಕ ಶ್ರೀ ಯೂನಿವರ್ಸಿಟಿ ಕೋರ್ಸ್ ಸ್ಟೇಟ್ ಲೆವೆಲ್ ಪರೀಕ್ಷಾ ನಿಯಮಾವಳಿ 1997ರ ನಿಯಮ 29(1) ಹಾಗೂ 30(1)ರ ಪ್ರಕಾರ 2025 ರ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯಲು, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಸದರಿ ಕಾರಣಕ್ಕಾಗಿ ಮಾರ್ಚ್-2025 ರ ಪರೀಕ್ಷೆ-1 ಕ್ಕೆ ಹಾಜರಾದ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆಗಳು:- ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಗಳಿಗೆ ಅರ್ಜಿ ಸಲ್ಲಿಸಿ ಸ್ಕ್ಯಾನ್ಸ್ ಪ್ರತಿ ಪಡೆದ ವಿಷಯಗಳಿಗೆ ಮಾತ್ರ ಮರುಮೌಲ್ಯಮಾಪನ /ಮರುಎಣಿಕೆಗಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಿರುವ ವಿಷಯಗಳಿಗೆ ಪ್ರತ್ಯೇಕವಾಗಿ ಮರುಎಣಿಕೆಗೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. 3.ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ…

Read More

ಬಳ್ಳಾರಿ : ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿö್ಮ ಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು. ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ…

Read More

ಬಳ್ಳಾರಿ : ರಾಜ್ಯ ಸರ್ಕಾರವು 2 ವ಼ರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇದೇ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕಾರ್ಯಕ್ರಮ ಆಯೋಜನೆ ಕುರಿತಂತೆ, ಶುಕ್ರವಾರ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.2023 ರ ಮೇ 20 ರಂದು ರಾಜ್ಯ ಸರ್ಕಾರವು ಅಸ್ತಿತ್ವಕ್ಕೆ ಬಂದು ಈಗ ಎರಡು ವರ್ಷ ಪೂರೈಸುತ್ತಿದೆ. ಅಂದೇ ಕ್ಯಾಬಿನೆಟ್ ಸಭೆಯಲ್ಲಿ ಪಂಚ ಗ್ಯಾರಂಟಿ ಜಾರಿಗೆ ಕುರಿತಂತೆ ಚರ್ಚಿಸಲಾಗಿತ್ತು. ಪ್ರಥಮವಾಗಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷಿಮತ್ತು ಯುವನಿಧಿ ಸೇರಿದಂತೆ ಹಂತ-ಹAತವಾಗಿ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಅವರು ಹೇಳಿದರು. ಕಳೆದ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಯಲ್ಲಿ ಬಹುಮತದಿಂದ ಆರಿಸಿ ಗೆಲ್ಲಿಸಿದಂತಹ ಪ್ರಜಾಪ್ರಭುತ್ವದ ಮತದಾರರಿಗೆ ನಮ್ಮ ಸರ್ಕಾರವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಕೊಟ್ಟ ಮಾತಿನಂತೆ ಪಂಚ…

Read More

ಕಲಬುರಗಿ : ಪರಿಶಿಷ್ಟ ಜಾತಿಗಳ ಸಮೀಕ್ಷೆ ಕಾರ್ಯ ನಡೆಸುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ಗುರುವಾರ ನಡೆದಿದೆ. ಶಿಕ್ಷಕ ನಾಗಶೆಟ್ಟಿ ಅಮೃತಪ್ಪ ಬಾಸಪಳ್ಳಿ(50) ಮೃತಪಟ್ಟವರು. ಗುರುವಾರ ಸಮೀಕ್ಷೆಗಾಗಿ ಚತ್ರಸಾಲ ಗ್ರಾಮದಲ್ಲಿ ಮನೆಗಳಿಗೆ ಭೇಟಿ ನೀಡಿದ ವೇಳೆ ಬೆಳಗ್ಗೆ 11.30 ಕ್ಕೆ ಘಟನೆ ನಡೆದಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ನಾಗಶೆಟ್ಟಿ ಅವರು ಬುರಗಪಳ್ಳಿ ಗ್ರಾಮದವರು. 1998 ರಲ್ಲಿ ಶಿಕ್ಷಕರಾಗಿ ನೇಮಕಗೊಂಡಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ. ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ. ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ ಆರಂಭವಾಗಿ ಸೆ. 21ರವರೆಗೆ ಹಾಗೂ ಎರಡನೇ ಅವಧಿ ಅ.8 ರಿಂದ 2026ರ ಮಾರ್ಚ್ 31ರವರೆಗೆ ಇರಲಿದ್ದು, ಸೆ. 22ರಿಂದ ಅ. 7ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ.

Read More

ಬೆಂಗಳೂರು: ಮೇ.17, 23ರಂದು ಬೆಂಗಳೂರಲ್ಲಿ ಐಪಿಎಲ್ ಪಂದ್ಯಾವಳಿ ನಿಗದಿಯಾಗಿದೆ. ಈ ಪಂದ್ಯಾವಳಿ ವೀಕ್ಷಣೆಗೆ ತೆರಳುವಂತ ವೀಕ್ಷಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಮಧ್ಯರಾತ್ರಿಯವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆ ವಿಸ್ತರಣೆ TATA IPL T-20 ಕ್ರಿಕೆಟ್ ಪಂದ್ಯಗಳು ದಿನಾಂಕ 17 ಮತ್ತು 23ನೇ ಮೇ, 2025 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಸದರಿ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮಧ್ಯರಾತ್ರಿ 01.00ರ ವರೆಗೆ ವಿಸ್ತರಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.35 ಕ್ಕೆ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ಕೋರಿದೆ. https://twitter.com/officialbmrcl/status/1923013575339085964

Read More

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಹೊಳಲ್ಕರೆ ಮೂಲದವರು ಎಂದು ಗುರುತಿಸಲಾಗಿದ್ದು, ಈ ಪೈಕಿ ಪುಟಾಣಿ ಕಂದಮ್ಮ ಸೇರಿ ಇಬ್ಬರು ಮಕ್ಕಳು ಕೂಡ ಮೃತಪಟ್ಟಿವೆ.ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಕೂಡಲೇ ಹೊಳಲ್ಕೆರೆ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಅರೇಹಳ್ಳಿಯ ಉದ್ಯಮಿ ಯಶವಂತ್‌ ಅವರ ಪತ್ನಿ ಕಾವ್ಯಾ (30), ಅತ್ತೆ ಗಂಗಮ್ಮ (50) ಹಾಗೂ ಪುತ್ರಿಯರಾದ ಹನ್ಸಿಕಾ (4), ಮನಸ್ವಿ (2) ಮೃತ ದುರ್ದೈವಿಗಳು. ಯಶವಂತ್‌ ಹಾಗೂ ಕುಟುಂಬ ಸದಸ್ಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು-ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿತ್ರಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More