Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮಾತೃ ಇಲಾಖೆಯಿಂದ ಅನ್ಯ ಸೇವೆ/ನಿಯೋಜನೆಯ ಮೇಲೆ ನಿಗಮ, ಮಂಡಳಿ ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರು, NTT DDO CODE ಆಧಾರದ ಮೇಲೆ ವಿಮಾ ಇಲಾಖೆಯ ಆನ್ಲೈನ್ ಸೇವೆಗಳನ್ನು ಪಡೆಯಲು ಹೆಚ್ .ಆರ್.ಎಂ.ಎಸ್.ನಲ್ಲಿ ಸೇವಾ ವಿವರಗಳ ಪ್ರಾಥಮಿಕ ಮಾಹಿತಿಯನ್ನು ಇಂದೀಕರಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮೆಯ ಎಲ್ಲಾ ಸೇವೆಗಳನ್ನು ಪ್ರಸ್ತುತ ಸಂಪೂರ್ಣವಾಗಿ ಗಣಕೀಕರಣಗೊಳಿಸಲಾಗಿದೆ. ಈ ಆನ್ಲೈನ್ ಸೇವೆಗಳನ್ನು ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರು ಅರ್ಜಿಗಳನ್ನು ವೇತನ ಬಟವಾಡೆ ಅಧಿಕಾರಿಗಳು/ಮೇಲಧಿಕಾರಿಗಳ ಮುಖಾಂತರ ವಿಮಾ ಇಲಾಖೆಗೆ ಸಲ್ಲಿಸಬೇಕಿರುತ್ತದೆ. ಮಾತೃ ಇಲಾಖೆಯಿಂದ ಅನ್ಯ ಸೇವೆ/ನಿಯೋಜನೆಯ ಮೇಲೆ ನಿಗಮ, ಮಂಡಳಿ ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರ ವೇತನ ಬಟವಾಡೆ ಅಧಿಕಾರಿಗಳಿಗೆ ಖಜಾನೆ DDO Code ಇಲ್ಲದಿರುವುದರಿಂದ ಇಂತಹ DDO ಗಳಿಗೆ ಈವರೆಗೆ ವಿಮಾ ಇಲಾಖೆಯಲ್ಲಿ…
ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದ್ದು, ಹರಕೆರೆ ಗ್ರಾಮದ 60 ವರ್ಷದ ವೃದ್ಧೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹರಕೆರೆ ಗ್ರಾಮದ 60 ವರ್ಷದ ವೃದ್ಧೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರಡು ದಿನಗಳಿಂದ ವೃದ್ಧೆಗೆ ಜ್ವರ, ನೆಗಡಿ, ಕೆಮ್ಮು ಇತ್ತು. ಕೋವಿಡ್ ಟೆಸ್ಟ್ ವೇಳೆ ವೃದ್ಧೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಸೋಂಕಿತ ವೃದ್ಧೆಗೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನೈಜೀರಿಯಾ : ನೈಜೀರಿಯಾದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, 21 ಯುವ ಕ್ರೀಡಾಪಟುಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಕ್ಷಿಣಕ್ಕೆ ಸುಮಾರು 1,000 ಕಿಲೋಮೀಟರ್ ದೂರದಲ್ಲಿರುವ ಓಗುನ್ ರಾಜ್ಯವು ಆಯೋಜಿಸುತ್ತಿದ್ದ 22 ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ನೈಜೀರಿಯಾದ ಉತ್ತರದಲ್ಲಿರುವ ಕಾನೊಗೆ ಹಿಂತಿರುಗುತ್ತಿದ್ದವರು ಬಲಿಯಾಗಿದ್ದಾರೆ. ನೈಜೀರಿಯಾದಲ್ಲಿ ರಸ್ತೆ ಅಪಘಾತಗಳು ಪ್ರಮುಖ ಸುರಕ್ಷತಾ ಸಮಸ್ಯೆಯಾಗಿ ಮುಂದುವರೆದಿದೆ. ದೇಶದಲ್ಲಿ ರಸ್ತೆ ಜಾಲವನ್ನು ಸಾಮಾನ್ಯವಾಗಿ ಕಳಪೆಯಾಗಿ ನಿರ್ವಹಿಸಲಾಗುತ್ತದೆ ಮತ್ತು ಅಪಘಾತಗಳು ಸಾಮಾನ್ಯವಾಗಿ ಅಜಾಗರೂಕ ಚಾಲನೆ, ಸಂಚಾರ ಕಾನೂನುಗಳ ಉಲ್ಲಂಘನೆ ಮತ್ತು ವಾಹನಗಳ ಓವರ್ಲೋಡ್ಗೆ ಕಾರಣವಾಗಿವೆ. FRSC ಒದಗಿಸಿದ ಅಧಿಕೃತ ಅಂಕಿಅಂಶಗಳು 2024 ರಲ್ಲಿ ದೇಶಾದ್ಯಂತ 9,570 ರಸ್ತೆ ಅಪಘಾತಗಳು ದಾಖಲಾಗಿದ್ದು, ಕನಿಷ್ಠ 5,421 ಜನರು ಸಾವನ್ನಪ್ಪಿದ್ದಾರೆ ಎಂದು ಸೂಚಿಸುತ್ತದೆ. ಅಧಿಕಾರಿಗಳು ಶನಿವಾರ ಅಪಘಾತದ ಬಗ್ಗೆ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದ್ದಾರೆ, ಆದರೆ ನೈಜೀರಿಯಾದಾದ್ಯಂತ ರಾಜ್ಯ ಸರ್ಕಾರಗಳು ಮತ್ತು ಕ್ರೀಡಾ ಸಂಘಗಳು ಅಪಘಾತವನ್ನು ಖಂಡಿಸಿವೆ. ಬಲಿಪಶುಗಳ ಗುರುತುಗಳನ್ನು ಬಹಿರಂಗಪಡಿಸಲಾಗಿಲ್ಲ, ಏಕೆಂದರೆ ಅವರ ಕುಟುಂಬಗಳನ್ನು ಸಂಪರ್ಕಿಸಲಾಗುತ್ತಿದೆ. “ಇದು ರಾಷ್ಟ್ರೀಯ ದುರಂತ” ಎಂದು…
ಬೆಂಗಳೂರು: ನಗರದ ಶಕ್ತಿ ಸೌಧ ವಿಧಾನಸೌಧ ಸಾರ್ವಜನಿಕರ ಪ್ರವೇಶಕ್ಕೆ ಇನ್ಮುಂದೆ ಮುಕ್ತವಾಗಿದೆ. ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಹಾಗೂ ಪ್ರತಿ ಭಾನುವಾರದಂದು ವಿಧಾನಸೌಧಕ್ಕೆ ಸಾರ್ವಜನಿಕರು ಭೇಟಿ ನೀಡಿ, ನೋಡಬಹುದಾಗಿದೆ. ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ʼವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ. ಪ್ರತಿ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲ ಭಾನುವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. 16 ವರ್ಷ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶವಿರಲಿದ್ದು, ಇದಕ್ಕೆ ಮೇಲ್ಪಟ್ಟವರಿಗೆ 50 ರೂ. ಶುಲ್ಕ ನಿಗದಿ ಮಾಡಲಾಗಿದೆ. ದಿನಕ್ಕೆ 300 ಪ್ರೇಕ್ಷಕರಿಗೆ ಮಾತ್ರ ಪ್ರವೇಶ ಅವಕಾಶವಿರಲಿದೆ. ಅಧಿಕೃತ ಕೆಎಸ್ಟಿಡಿಸಿ ವೆಬ್ಸೈಟ್ ಅಥವಾ ದೃಢೀಕೃತ ಟಿಕೆಟ್ ಸೇವಾ ಪೂರೈಕೆದಾರರ ವೇದಿಕೆಯಲ್ಲಿ ಟಿಕೆಟ್ ಬುಕ್ಕಿಂಗ್ ಕಡ್ಡಾಯ. ಸ್ಥಳದಲ್ಲಿ ಬುಕ್ಕಿಂಗ್ ಮಾಡಲು ಬಯಸುವವರು ಗೇಟ್ -3ರಲ್ಲಿರುವ ಕೆಎಸ್ಟಿಡಿಸಿ ಕೌಂಟರ್ನಲ್ಲಿ ಟಿಕೆಟ್ ಲಭ್ಯತೆ ಇದ್ದರೆ ಪ್ರವೇಶಕ್ಕೆ ಅವಕಾಶ…
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು 6 ಜನರಿಂದ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ 6 ಮಂದಿ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಕಾಮುಕರು ಬಾಲಕಿ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. 6 ತಿಂಗಳ ಹಿಂದೆ ಗ್ಯಾಂಗ್ ರೇಪ್ ಮಾಡಿ ವಿಡಿಯೋ ಮಾಡಿಕೊಂಡಿದ್ದರು. ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡಿ ಮತ್ತೊಮ್ಮೆ ರೇಪ್ ಮಾಡಿದ್ದಾರೆ. ಈಗ ಅದೇ ವಿಡಿಯೋ ಇಟ್ಟುಕೊಂಡು ಬಾಲಕಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸಾರ್ವಜನಿಕ ವಲಯದ ಕೆನರಾ ಬ್ಯಾಂಕ್ ಉಳಿತಾಯ ಖಾತೆದಾರರಿಗೆ ಸಿಹಿಸುದ್ದಿ, ಖಾತೆಯನ್ನು ನಿರ್ವಹಿಸಲು ಗ್ರಾಹಕರು ಇನ್ನು ಮುಂದೆ ಸರಾಸರಿ ಮಾಸಿಕ ಬ್ಯಾಲೆನ್ಸ್ ಅನ್ನು ನಿರ್ವಹಿಸುವ ಅಗತ್ಯವಿಲ್ಲ. ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಕೆನರಾ ಬ್ಯಾಂಕ್ ಉಳಿತಾಯ ಖಾತೆಗಳ ಮೇಲಿನ ಕನಿಷ್ಠ ತಿಂಗಳ ಮೊತ್ತ ಕಾಯ್ದುಕೊಳ್ಳದಿರುವುದಕ್ಕೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಿಸಿದೆ. ಉಳಿತಾಯ ಖಾತೆಗಳು, ವೇತನ ಖಾತೆಗಳು, ಅನಿವಾಸಿ ಭಾರತೀಯ ಉಳಿತಾಯ ಖಾತೆಗಳು ಸೇರಿದಂತೆ ಎಲ್ಲಾ ರೀತಿಯ ಉಳಿತಾಯ ಬ್ಯಾಂಕ್ ಖಾತೆಗಳ ಮೇಲಿನ ಕನಿಷ್ಠ ತಿಂಗಳ ಮೊತ್ತ ಕಾಯ್ದುಕೊಳ್ಳದೆ ಇರುವವರಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ಸಂಪೂರ್ಣ ಮನ್ನ ಮಾಡುವುದಾಗಿ ಘೋಷಿಸಲಾಗಿದೆ. ಯಾವುದೇ ರೀತಿಯ ಉಳಿತಾಯ ಬ್ಯಾಂಕ್ ಖಾತೆಯಲ್ಲಿ ಸರಾಸರಿ ಮಾಸಿಕ ಬ್ಯಾಲೆನ್ಸ್ ಅನ್ನು ಠೇವಣಿ ಮಾಡಬಹುದು. ಇದರಲ್ಲಿ ನಿಯಮಿತ ಉಳಿತಾಯ ಖಾತೆಗಳು, ಸಂಬಳ ಖಾತೆಗಳು ಮತ್ತು NRI ಉಳಿತಾಯ ಖಾತೆಗಳು ಸೇರಿವೆ. ಬ್ಯಾಂಕ್ ಹೊರಡಿಸಿದ ಗ್ರಾಹಕ ಸ್ನೇಹಿ ಹೆಜ್ಜೆಯ ಭಾಗವಾಗಿ ಪತ್ರಿಕಾ ಪ್ರಕಟಣೆಯ ಮೂಲಕ ಈ ಮಾಹಿತಿಯನ್ನು…
ಬೆಂಗಳೂರು : ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಿನಿಮಾ ನಿರ್ಮಾಣಕ್ಕೆಂದು ಪಡೆದ ಸಾಲ ಹಿಂತಿರುಗಿಸದೇ ವಂಚಿಸಿದ ಆರೋಪದಡಿ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ತಲಕಾವೇರಿ ಲೇಔಟ್ ನಿವಾಸಿ ಎಚ್.ಜಿ. ಲಕ್ಷ್ಮೀ ಅವರು ದೂರು ನೀಡಿದ್ದಾರೆ. ನಟರಾದ ಶಿವರಾಜಕುಮಾರ್ ಹಾಗೂ ಗಣೇಶ್ ಅವರನ್ನು ಹಾಕಿಕೊಂಡು ‘ಪ್ರೊಡಕ್ಷನ್ ನಂಬರ್ 06’ ಚಿತ್ರ ನಿರ್ಮಿಸುತ್ತಿರುವುದಾಗಿ ನಂಬಿಸಿ 92.50 ಲಕ್ಷ ರೂ. ಪಡೆದುಕೊಂಡಿದ್ದರು. ಈ ಪೈಕಿ 25 ಲಕ್ಷ ರೂ. ಮಾತ್ರ ಹಿಂದಿರುಗಿಸಿ, ಉಳಿದ ಮೊತ್ತವನ್ನು ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನವದೆಹಲಿ : ಜೂನ್ ತಿಂಗಳು ಸಾಮಾನ್ಯ ಜನರಿಗೆ ಹಲವು ದೊಡ್ಡ ಬದಲಾವಣೆಗಳನ್ನು ತರುತ್ತಿದೆ. ಜೂನ್ 1, 2025 ರಿಂದ, ಬ್ಯಾಂಕುಗಳು, ಪಿಎಫ್, ಎಲ್ಪಿಜಿ, ಕ್ರೆಡಿಟ್ ಕಾರ್ಡ್, ಆಧಾರ್ ಮತ್ತು ಯುಪಿಐಗೆ ಸಂಬಂಧಿಸಿದ ಹಲವು ನಿಯಮಗಳು ಬದಲಾಗಲಿವೆ. ಈ ನಿಯಮಗಳು ನಿಮ್ಮ ದೈನಂದಿನ ಜೀವನ ಮತ್ತು ಹಣ ಯೋಜನೆಗೆ ನೇರವಾಗಿ ಪರಿಣಾಮ ಬೀರುತ್ತವೆ. ಜೂನ್ 1 ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು ಇಪಿಎಫ್ಒ 3.0 ಬಿಡುಗಡೆ – ಪಿಎಫ್ ಹಿಂಪಡೆಯುವಿಕೆ ಈಗ ಸುಲಭ ಇಪಿಎಫ್ಒ (ನೌಕರರ ಭವಿಷ್ಯ ನಿಧಿ ಸಂಸ್ಥೆ) ತನ್ನ ಹೊಸ ವೇದಿಕೆ ಇಪಿಎಫ್ಒ 3.0 ಅನ್ನು ಪ್ರಾರಂಭಿಸಲಿದೆ. ಇದರೊಂದಿಗೆ, ಪಿಎಫ್ ಹಿಂಪಡೆಯುವುದು, ಕೆವೈಸಿ ನವೀಕರಿಸುವುದು ಮತ್ತು ಕ್ಲೈಮ್ ಮಾಡುವುದು ಈಗ ಮೊದಲಿಗಿಂತ ವೇಗವಾಗಿ ಮತ್ತು ಸುಲಭವಾಗಿರುತ್ತದೆ. ಅಲ್ಲದೆ, ಎಟಿಎಂ ನಂತಹ ಇಪಿಎಫ್ ಕಾರ್ಡ್ನಿಂದ ಹಣವನ್ನು ಹಿಂಪಡೆಯಬಹುದು. ಎಫ್ಡಿ ಬಡ್ಡಿದರಗಳಲ್ಲಿ ಬದಲಾವಣೆ ಸಾಧ್ಯ ಬ್ಯಾಂಕ್ಗಳ ಸ್ಥಿರ ಠೇವಣಿ (ಎಫ್ಡಿ) ಬಡ್ಡಿದರಗಳು ಕಡಿಮೆಯಾಗಬಹುದು. ಆರ್ಬಿಐನ ರೆಪೊ ದರದಲ್ಲಿ ಸಂಭವನೀಯ ಕಡಿತದಿಂದಾಗಿ ಬ್ಯಾಂಕುಗಳು…
ವೈದ್ಯಕೀಯ ವಿಜ್ಞಾನದ ಪ್ರಕಾರ ವಯಸ್ಸಿನ ವ್ಯಕ್ತಿಗೆ ಸಾಕಷ್ಟು ನಿದ್ರೆ ಮಾಡುವುದು ಮುಖ್ಯ. ಏಕೆಂದರೆ ಸಾಕಷ್ಟು ನಿದ್ದೆ ಮಾಡುವುದರಿಂದ ವ್ಯಕ್ತಿಯು ಒತ್ತಡ ಮತ್ತು ಖಿನ್ನತೆಯಿಂದ ಬಳಲುವುದಿಲ್ಲ ಮತ್ತು ಮೆದುಳಿನ ಕಾರ್ಯನಿರ್ವಹಣೆಯು ಉತ್ತಮವಾಗಿ ಉಳಿಯುತ್ತದೆ. ಇಂದು ಈ ವಿಷಯದಲ್ಲಿ ನಾವು ವಯಸ್ಸಿಗೆ ಅನುಗುಣವಾಗಿ ಎಷ್ಟು ಗಂಟೆಗಳ ನಿದ್ರೆ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ತಿಳಿಯಲು ಪ್ರಯತ್ನಿಸುತ್ತೇವೆ. ಆದ್ದರಿಂದ ಅದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. 1. ನವಜಾತ ಶಿಶುವಿನ. ವೈದ್ಯಕೀಯ ವಿಜ್ಞಾನದ ಪ್ರಕಾರ, ನವಜಾತ ಶಿಶುಗಳು ಸರಿಸುಮಾರು 14-17 ಗಂಟೆಗಳ ನಿದ್ದೆ ತೆಗೆದುಕೊಳ್ಳಬೇಕು. ಇದು ಆರೋಗ್ಯಕ್ಕೆ ಪ್ರಯೋಜನಕಾರಿ. 2. 3-5 ವರ್ಷ ವಯಸ್ಸು. ತಜ್ಞರ ಪ್ರಕಾರ, ಈ ವಯಸ್ಸಿನ ಮಕ್ಕಳಿಗೆ 10-13 ಗಂಟೆಗಳ ನಿದ್ರೆ ಸಾಕಷ್ಟು ನಿದ್ರೆ ಎಂದು ಪರಿಗಣಿಸಲಾಗುತ್ತದೆ. ಇದು ಆರೋಗ್ಯಕ್ಕೆ ಪ್ರಯೋಜನಕಾರಿ. 3. 6-13 ವರ್ಷ ವಯಸ್ಸು. ವೈದ್ಯರ ಪ್ರಕಾರ, ನ್ಯಾಷನಲ್ ಸ್ಲೀಪ್ ಫೌಂಡೇಶನ್ (ಎನ್ಎಸ್ಎಫ್) ಈ ಮಕ್ಕಳಿಗೆ 9 ರಿಂದ 11 ಗಂಟೆಗಳ ನಿದ್ರೆಯನ್ನು ಶಿಫಾರಸು ಮಾಡುತ್ತದೆ. ಎಷ್ಟೋ ಗಂಟೆಗಳ ನಿದ್ದೆ ಅವರನ್ನು…
ಶಿವಮೊಗ್ಗ: ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಶಿಮುಲ್ ವತಿಯಿಂದ ಜೂ.1 ರಂದು 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಮಾರುಕಟ್ಟೆಯಲ್ಲಿ ದೊರೆಯುವ ಬೇರೆ ಖಾಸಗಿ ಬ್ರಾಂಡ್ನ ಕೇಕ್ ಹಾಗೂ ಮಫಿನ್ಗಳಿಗಿಂತ ನಂದಿನಿ ಕೇಕ್ ಹಾಗೂ ಮಫಿನ್ಗಳು ಉತ್ತಮ ಗುಣಮಟ್ಟದಲ್ಲಿ ಹಾಗೂ ಸ್ಪರ್ಧಾತ್ಮಕ ಬೆಲೆಗಳಲ್ಲಿ ನೀಡಲಾಗುತ್ತಿದೆ. ಒಕ್ಕೂಟವು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದಾರ್ಗ ಜಿಲ್ಲೆಗಳ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು, ಕಾರ್ಯವ್ಯಾಪ್ತಿಯ ಜಿಲ್ಲೆಗಳ 1325 ಉತ್ಪಾದಕರ ಸಹಕಾರ ಸಂಘಗಳಿAದ ಪ್ರತಿನಿತ್ಯ 02 ಸರತಿಗಳಲ್ಲಿ ಸರಾಸರಿ 8 ಲಕ್ಷ ಕೆ.ಜಿ ಹಾಲನ್ನು ಸಂಗ್ರಹಿಸಲಾಗುತ್ತಿದೆ. ಸದರಿ ಹಾಲನ್ನು ಅತ್ಯಾಧುನಿಕ ಯಂತ್ರಗಳಲ್ಲಿ ಸಂಸ್ಕರಿಸಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಒಕ್ಕೂಟದ ವ್ಯಾಪ್ತಿಯಲ್ಲಿರುವ 1836 ಹಾಲಿನ ಡೀಲರ್, 147 ಫ್ರಾಂಚೈಸಿ ಪಾರ್ಲರ್ ಹಾಗೂ 49 ಸ್ವಂತ ಪಾರ್ಲರ್ಗಳ ಮೂಲಕ ಪ್ರತಿನಿತ್ಯ 2.85 ಲಕ್ಷ ಲೀಟರ್ ಹಾಲು ಮತ್ತು ಸರಾಸರಿ 65 ಸಾವಿರ ಕೆ.ಜಿ. ಮೊಸರನ್ನು…