Author: kannadanewsnow57

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಪಾರ್ಸೆಲ್ ಮೂಲಕ ತಾಜಾ ಮಾವಿನ ಹಣ್ಣನ್ನು ತಲುಪಿಸುವ ವಿಶೇಷ ಸೇವೆಯನ್ನು ಭಾರತೀಯ ಅಂಚೆ ಇಲಾಖೆಯು ಹಾಪ್‌ಕಾಮ್ಸ್ (HOPCOMS) ಸಹಯೋಗದೊಂದಿಗೆ ಆರಂಭಿಸಿದೆ. ನಗರದ ಜಿಪಿಒ ಮುಖ್ಯ ಅಂಚೆ ಪಾಲಕರ ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಅಂಚೆ ವೃತ್ತದ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಆದ ಕೆ. ಪ್ರಕಾಶ್ ಅವರು ಈ ಯೋಜನೆಗೆ ಚಾಲನೆ ನೀಡಿದರು. ಮಾವು ಬೆಳೆಗಾರರೊಂದಿಗೆ ಇಲಾಖೆಯು ‘ಬುಕ್ ನೌ ಪೇ ಲೇಟರ್’ (ಈಗ ಕಾಯ್ದಿರಿಸಿ, ಬಳಿಕ ಹಣ ಪಾವತಿಸಿ) ಒಪ್ಪಂದದಡಿ ಪಾರ್ಸೆಲ್ ಸೇವೆಯನ್ನು ಒದಗಿಸುತ್ತಿದೆ. ಇದರಿಂದ ರೈತರಿಗೆ ಉತ್ತಮ ಮಾರುಕಟ್ಟೆ ಬೆಲೆ ದೊರೆಯುವುದರ ಜೊತೆಗೆ, ಗ್ರಾಹಕರಿಗೂ ಯಾವುದೇ ಮಧ್ಯವರ್ತಿಗಳಿಲ್ಲದೆ ನೇರವಾಗಿ ತೋಟದ ತಾಜಾ ಮಾವಿನ ಹಣ್ಣುಗಳನ್ನು ಖರೀದಿಸಲು ಸಹಾಯವಾಗುತ್ತದೆ. ಗ್ರಾಹಕರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಬುಕಿಂಗ್ ಮಾಡಬಹುದಾಗಿದ್ದು, ಕನಿಷ್ಠ 3 ಕೆಜಿ ಸಾಮರ್ಥ್ಯದ ವಿಶೇಷ ಬಾಕ್ಸ್‌ಗಳಲ್ಲಿ ಹಣ್ಣುಗಳನ್ನು ಪ್ಯಾಕ್ ಮಾಡಿ ಸುರಕ್ಷಿತವಾಗಿ ತಲುಪಿಸಲಾಗುತ್ತದೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ…

Read More

ವಿಶ್ವಾದ್ಯಂತ ರೋಗ ಮತ್ತು ಸಾವಿಗೆ ತಂಬಾಕು ಅತ್ಯಂತ ವ್ಯಾಪಕ ಕಾರಣವಾಗಿದೆ. ಪ್ರತಿ ವರ್ಷ ಮೇ 31 ರಂದು ವಿಶ್ವ ತಂಬಾಕು ರಹಿತ ದಿನವನ್ನು ಆಚರಿಸಲಾಗುತ್ತದೆ. ತಂಬಾಕಿನಿಂದ ಉಂಟಾಗುವ ಸಾವುಗಳು ಮತ್ತು ರೋಗಗಳ ಬಗ್ಗೆ ಜಾಗತಿಕ ಗಮನ ಸೆಳೆಯುವ ಉದ್ದೇಶದಿಂದ ವಿಶ್ವ ಆರೋಗ್ಯ ಸಂಸ್ಥೆಯ (WHO) ಸದಸ್ಯ ರಾಷ್ಟ್ರಗಳು 1987 ರಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು ಘೋಷಿಸಿದವು. ತಂಬಾಕು ಬಳಕೆಯ ಅಪಾಯಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದು ಈ ದಿನದ ಉದ್ದೇಶವಾಗಿದೆ. ಇದು ಪ್ರಪಂಚದಾದ್ಯಂತದ ಜನರು ಆರೋಗ್ಯ ಮತ್ತು ಆರೋಗ್ಯಕರ ಜೀವನದ ಹಕ್ಕನ್ನು ಪಡೆಯಲು ಮತ್ತು ಭವಿಷ್ಯದ ಪೀಳಿಗೆಯನ್ನು ರಕ್ಷಿಸಲು ಪ್ರೋತ್ಸಾಹಿಸುತ್ತದೆ. ಮಧ್ಯಪ್ರದೇಶದಲ್ಲಿ, ಸಾಮಾಜಿಕ ನ್ಯಾಯ ಮತ್ತು ಅಂಗವಿಕಲರ ಸಬಲೀಕರಣ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತಂಬಾಕು ಮತ್ತು ವ್ಯಸನ ವಿರೋಧಿ ಚಟುವಟಿಕೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ. ಇದರಲ್ಲಿ ವಿದ್ಯಾರ್ಥಿಗಳು, ಯುವಕರು, ಸ್ವಯಂಸೇವಾ ಸಂಸ್ಥೆಗಳು ಮತ್ತು ವಿವಿಧ ಇಲಾಖೆಗಳು ಸಕ್ರಿಯವಾಗಿ ಭಾಗವಹಿಸುತ್ತವೆ. ಈ ಬಾರಿ ಥೀಮ್ ಏನು? 31 ರಂದು “ವಿಶ್ವ…

Read More

ನವದೆಹಲಿ : ದೇಶದ ಪಡಿತರ ವಿತರಣಾ ವ್ಯವಸ್ಥೆಯಲ್ಲಿ (Ration Distribution System) ನಡೆಯುವ ಅಕ್ರಮ ಹಾಗೂ ದಂಧೆಗಳಿಗೆ ಮುಕ್ತಿ ಹಾಡಲು ಕೇಂದ್ರ ಸರ್ಕಾರ ಭರ್ಜರಿ ಮಾಸ್ಟರ್ ಪ್ಲಾನ್ ರೂಪಿಸಿದೆ. ಪ್ರತಿಯೊಬ್ಬ ನಾಗರಿಕನಿಗೂ ಯಾವುದೇ ವಂಚನೆ ಇಲ್ಲದೆ ಆಹಾರ ಧಾನ್ಯ ತಲುಪಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನದ “ಸಾರ್ಥಕ್ ಪಿಡಿಎಸ್” (Sarthak PDS) ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದ್ದಾರೆ. ಏನಿದು ‘ಸಾರ್ಥಕ್ ಪಿಡಿಎಸ್’? ಇದರಿಂದ ಜನರಿಗೇನು ಲಾಭ? ಇದು ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಡಿಜಿಟಲ್ ಮುಖಾಂತರ ನಿಯಂತ್ರಿಸುವ ಹೊಸ ತಂತ್ರಜ್ಞಾನ ಮತ್ತು ಸಾಫ್ಟ್‌ವೇರ್ ಅಪ್ಲಿಕೇಶನ್ ಆಗಿದೆ. ಇದರ ಮುಖ್ಯ ಉದ್ದೇಶ ರೇಷನ್ ವಿತರಣೆಯಲ್ಲಿ ಪಾರದರ್ಶಕತೆ ತರುವುದು. ಲೈವ್ ಟ್ರ್ಯಾಕಿಂಗ್ (ರೇಷನ್ ಕಳ್ಳತನಕ್ಕೆ…

Read More

ಬೆಂಗಳೂರು: ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆ ಎಂಬ ಹೆಮ್ಮಾರಿ ರಾಜ್ಯದಲ್ಲಿ ಸದ್ದಿಲ್ಲದೆ ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿದೆ. ಕಳೆದ ಕೇವಲ ಒಂದು ವರ್ಷದಲ್ಲೇ ಕರ್ನಾಟಕದಲ್ಲಿ ತಂಬಾಕು ಮತ್ತು ಧೂಮಪಾನದ ಚಟಕ್ಕೆ ಸಿಲುಕಿ ಬರೋಬ್ಬರಿ 10,000 ಕ್ಕೂ ಹೆಚ್ಚು ಜನರು ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ ಎಂಬ ಕಹಿ ಸತ್ಯ ಈಗ ಬಯಲಾಗಿದೆ. ವಿಶ್ವ ತಂಬಾಕು ರಹಿತ ದಿನದ (ಮೇ 31) ಅಂಗವಾಗಿ ಬೆಂಗಳೂರಿನ ಪ್ರಸಿದ್ಧ ‘ಕಿಡ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ’ (Kidwai Hospital) ಈ ಆತಂಕಕಾರಿ ವರದಿಯನ್ನು ಬಿಡುಗಡೆ ಮಾಡಿದೆ. ಯಾವೆಲ್ಲಾ ಕ್ಯಾನ್ಸರ್‌ಗಳಿಗೆ ತಂಬಾಕು ಕಾರಣ? ವರದಿಯ ಪ್ರಕಾರ, ತಂಬಾಕು ಸೇವನೆಯಿಂದಾಗಿ ಪುರುಷರಲ್ಲಿ ಶ್ವಾಸಕೋಶ, ಬಾಯಿ ಹಾಗೂ ನಾಲಿಗೆ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರೆ, ಮಹಿಳೆಯರು ಶ್ವಾಸಕೋಶ, ಬಾಯಿ ಮತ್ತು ಅನ್ನನಾಳದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಕೇವಲ ಕ್ಯಾನ್ಸರ್ ಮಾತ್ರವಲ್ಲದೆ ಧೂಮಪಾನದ ಹಾನಿಕಾರಕ ಹೊಗೆಯಿಂದಾಗಿ ಹೃದಯ ರಕ್ತನಾಳದ ಕಾಯಿಲೆ, ಕಿಡ್ನಿ ಸಮಸ್ಯೆ, ಗಂಟಲು, ಹೊಟ್ಟೆ ಹಾಗೂ ಮೇದೋಜೀರಕ ಗ್ರಂಥಿಯ ಕ್ಯಾನ್ಸರ್‌ ಗಳು ಆವರಿಸಿಕೊಳ್ಳುತ್ತಿವೆ. ಜೊತೆಗೆ ಆಸ್ಟಿಯೋಪೊರೋಸಿಸ್,…

Read More

ಬೆಂಗಳೂರು: ನೀವು ಬಾಡಿಗೆ ಮನೆಯಲ್ಲಿದ್ದೀರಾ ಅಥವಾ ಆಫೀಸ್ಗೆಂದು ಬಿಲ್ಡಿಂಗ್ ಬಾಡಿಗೆಗೆ ಪಡೆದಿದ್ದೀರಾ? ಹಾಗಿದ್ದಲ್ಲಿ ನಿಮಗೊಂದು ಅತ್ಯಂತ ನಿರಾಳ ತರುವಂತಹ ಸುದ್ದಿ ಇಲ್ಲಿದೆ. ಬಿಲ್ಡಿಂಗ್ ಅಥವಾ ಆಸ್ತಿಯ ಒಡೆಯ ಬ್ಯಾಂಕ್ನಲ್ಲಿ ಲೋನ್ ಮಾಡಿ ಸುಸ್ತಿದಾರನಾದರೆ, ಅದಕ್ಕೆ ಅಲ್ಲಿರುವ ಬಾಡಿಗೆದಾರರನ್ನು ಹೊಣೆಗಾರರನ್ನಾಗಿ ಮಾಡಲು ಬರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಷ್ಟೇ ಅಲ್ಲ, ಬ್ಯಾಂಕ್ ಕ್ರಮದ ವಿರುದ್ಧ ಮೇಲ್ಮನವಿ ಸಲ್ಲಿಸಲು ಬಾಡಿಗೆದಾರರು ಸಾಲದ ಮೊತ್ತದ ಶೇ. 50 ರಷ್ಟು ಹಣವನ್ನು ಮುಂಗಡವಾಗಿ ಠೇವಣಿ ಇಡಬೇಕು ಎನ್ನುವ ನಿಯಮ ಕಡ್ಡಾಯವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಾಮಾನ್ಯವಾಗಿ ಆಸ್ತಿ ಮಾಲೀಕರು ಬ್ಯಾಂಕ್ ಲೋನ್ ಕಟ್ದೇ ಹೋದಾಗ, ಬ್ಯಾಂಕುಗಳು ಸಾಲ ವಸೂಲಾತಿ ನ್ಯಾಯಾಧಿಕರಣದ (DRT) ಮೂಲಕ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮುಂದಾಗುತ್ತವೆ. ಇಂತಹ ಸಂದರ್ಭದಲ್ಲಿ ಅಲ್ಲಿರುವ ಬಾಡಿಗೆದಾರರು ಸಂಕಷ್ಟಕ್ಕೆ ಸಿಲುಕುತ್ತಿದ್ದರು. ಡಿಆರ್ಟಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಬೇಕಾದರೆ, ಒಟ್ಟು ಸಾಲದ ಅರ್ಧದಷ್ಟು (50%) ಹಣವನ್ನು ಠೇವಣಿ ಇಡಬೇಕು ಎಂಬ ನಿಯಮ ಬಾಡಿಗೆದಾರರಿಗೆ ದೊಡ್ಡ ತಲೆನೋವಾಗಿತ್ತು. ಈ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜೂನ್ 1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು, ವಿದ್ಯಾರ್ಥಿಗಳ ಬಿಸಿಯೂಟ (ಮಧ್ಯಾಹ್ನದ ಉಪಹಾರ) ಯೋಜನೆಗೆ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಕರ್ನಾಟಕ ಸರ್ಕಾರ ಸೂಚಿಸಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ (Middle East) ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಮುಂಬರುವ ದಿನಗಳಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ (ಬಿಸಿಯೂಟ) ಯೋಜನೆಯಡಿ ಶಾಲೆಗಳಿಗೆ ಅಗತ್ಯವಿರುವ ಗ್ಯಾಸ್ ಸಿಲಿಂಡರ್ಗಳ ಸರಬರಾಜು ನಿರಂತರವಾಗಿ ಸಿಗುವಂತೆ ನೋಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮಹತ್ವದ ಪತ್ರ ಬರೆದಿದ್ದಾರೆ. ಆದ್ಯತೆಯ ಮೇರೆಗೆ ಪೂರೈಕೆ: ಬಿಸಿಯೂಟ ಯೋಜನೆಯನ್ನು ಸರ್ಕಾರದ ಪ್ರತಿಷ್ಠಿತ ಹಾಗೂ ಮಹತ್ವಾಕಾಂಕ್ಷಿ ಯೋಜನೆಯೆಂದು ಪರಿಗಣಿಸಲಾಗಿದೆ. ಹಾಗಾಗಿ, ಎಲ್ಪಿಜಿ ಇಂಧನವನ್ನು ‘ಅಗತ್ಯ ವಸ್ತು ಕಾಯ್ದೆ’ ಅಡಿಯಲ್ಲಿ ಪರಿಗಣಿಸಿ, ಶಾಲೆಗಳಿಗೆ ಆದ್ಯತೆಯ ಮೇರೆಗೆ ಸಿಲಿಂಡರ್ ವಿತರಿಸಲು ಕ್ರಮ ಕೈಗೊಳ್ಳಬೇಕು. ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ: ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಗ್ಯಾಸ್ ವಿತರಕರಿಗೆ…

Read More

ಬಾಗಲಕೋಟೆ : ಹೆತ್ತ ತಾಯಿಯ ಮಮತೆ ಹಾಗೂ ಮಗಳ ಜನ್ಮಜನ್ಮಾಂತರದ ಅನುಬಂಧಕ್ಕೆ ಸಾಕ್ಷಿಯಾದ ಹೃದಯವಿದ್ರಾವಕ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಸಂಭವಿಸಿದೆ. ನೂರು ವಸಂತಗಳನ್ನು ಕಂಡು ಇಹಲೋಕ ತ್ಯಜಿಸಿದ ಶತಾಯುಷಿ ತಾಯಿಯ ಸಾವಿನ ಆಘಾತಕ್ಕೆ ಒಳಗಾಗಿ 76 ವರ್ಷದ ವೃದ್ಧ ಮಗಳು ಕೂಡ ಕೊನೆಯುಸಿರೆಳೆದ ಕರುಣಾಜನಕ ಘಟನೆ ತೋದಲಬಾಗಿ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲೂಕಿನ ಪಾರ್ಥನಹಳ್ಳಿಯ ನಿವಾಸಿಯಾದ ಗಂಗವ್ವ ಚನ್ನಬಸಪ್ಪ ಪಾರ್ಥನಹಳ್ಳಿ (101 ವರ್ಷ) ಎಂಬ ಶತಾಯುಷಿ ಮಾತೆ ಕಳೆದ ಶುಕ್ರವಾರ ವಯೋಸಹಜ ಕಾರಣಗಳಿಂದಾಗಿ ನಿಧನರಾಗಿದ್ದರು. ತಾಯಿಯ ಸಾವಿನ ವಾರ್ತೆ ತಿಳಿಯುತ್ತಿದ್ದಂತೆಯೇ, ಅಥಣಿಯ ಪಾರ್ಥನಹಳ್ಳಿಯಲ್ಲೇ ವಾಸವಿದ್ದ ಅವರ ಮಗಳು ಹಣಮವ್ವ ರಾಮು ಮುಜ ಗೋಣಿ (76 ವರ್ಷ) ತೀವ್ರ ಆಘಾತಕ್ಕೆ ಒಳಗಾಗಿದ್ದರು. ತಮ್ಮ ಹೆತ್ತ ತಾಯಿಯ ಅಂತಿಮ ದರ್ಶನ ಪಡೆದು, ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹಣಮವ್ವ ಅವರು ಜಮಖಂಡಿ ತಾಲೂಕಿನ ತೋದಲಬಾಗಿ ಗ್ರಾಮಕ್ಕೆ ಧಾವಿಸಿದ್ದರು. ಆದರೆ ಅಲ್ಲಿಗೆ ತಲುಪಿದಾಗ ತಾಯಿಯ ಪಾರ್ಥಿವ ಶರೀರವನ್ನು ಕಂಡು ಅವರ ದುಃಖ ಆಣೆಕಟ್ಟೆ ಒಡೆದಂತೆ ಉಕ್ಕಿ…

Read More

ಅಹಮದಾಬಾದ್: ಇಂದು ಅಹಮದಾಬಾದ್‌ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಯ ಐಪಿಎಲ್ ಪ್ರಶಸ್ತಿಗಾಗಿ ಭರ್ಜರಿ ಫೈನಲ್ ಪಂದ್ಯ ನಡೆಯಲಿದ್ದು, ಹಾಲಿ ಚಾಂಪಿಯನ್ ಬೆಂಗಳೂರು ಹಾಗೂ ಮಾಜಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿವೆ. ಉಭಯ ತಂಡಗಳಿಗೂ ಇದು 2ನೇ ಐಪಿಎಲ್ ಟ್ರೋಫಿ ಗೆಲ್ಲುವ ಸುವರ್ಣ ಅವಕಾಶವಾಗಿದೆ. ಒಂದು ಟ್ರೋಫಿಗಾಗಿ ಬರೋಬ್ಬರಿ 18 ವರ್ಷ ಕಾದಿದ್ದ ಆರ್ಸಿಬಿಗೆ ಈಗ ಸತತ 2ನೇ ವರ್ಷವೂ ಚಾಂಪಿಯನ್ ಎನಿಸಿಕೊಳ್ಳುವ ಕಾತರ ಹೆಚ್ಚಾಗಿದೆ. ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ತೋರಿರುವ ಆರ್ಸಿಬಿ, ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಪ್ಲೇ-ಆಫ್ ಪ್ರವೇಶಿಸಿತ್ತು. ಕ್ವಾಲಿಫೈಯರ್-1ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದು ನೇರವಾಗಿ ಫೈನಲ್‌ಗೇರಿದೆ. ಮತ್ತೊಂದೆಡೆ ಗುಜರಾತ್ ತಂಡವೂ ಅತ್ಯಂತ ಬಲಿಷ್ಠವಾಗಿದ್ದು, ಗುಂಪು ಹಂತದಲ್ಲಿ ಆರ್ಸಿಬಿಗಿಂತ ಅಂಕ ಪಡೆದಿದ್ದರೂ ನೆಟ್ ರನ್‌ರೇಟ್ ಕಡಿಮೆ ಇದ್ದ ಕಾರಣ 2ನೇ ಸ್ಥಾನಿಯಾಗಿತ್ತು. ಆದರೆ ಕ್ವಾಲಿಫೈಯರ್-1ರಲ್ಲಿ ಸೋತ ಬಳಿಕ ಎಲಿಮಿನೇಟರ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದು ಫೈನಲ್ ತಲುಪಿದೆ. ಉಭಯ ತಂಡಗಳ ಮುಖಾಮುಖಿಯಲ್ಲಿ ಈವರೆಗೆ 9 ಪಂದ್ಯಗಳು ನಡೆದಿದ್ದು, ಆರ್ಸಿಬಿ…

Read More

ಬೆಂಗಳೂರು: ಇನ್ಮುಂದೆ ಸರ್ಕಾರಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಗಳು ನಾನಾ ನೆಪಗಳನ್ನು ಹೇಳಿ ತಡವಾಗಿ ಶಾಲೆಗೆ ಬರುವಂತಿಲ್ಲ, ಹಾಗೆಯೇ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಿ ಎಲ್ಲೆಂದರಲ್ಲಿ ಸುತ್ತಾಡುವ ಆಟ ಇನ್ನು ನಡೆಯುವುದಿಲ್ಲ. ಕರ್ತವ್ಯದ ಅವಧಿಯಲ್ಲಿ ಶಾಲೆಗೆ ಚಕ್ಕರ್ ಹೊಡೆಯುವ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದೆ. ರಾಜ್ಯ ಶಿಕ್ಷಣ ಇಲಾಖೆಯು ಪ್ರಸಕ್ತ ಸಾಲಿನಿಂದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ತಂತ್ರಜ್ಞಾನ ಆಧಾರಿತ ಕಡ್ಡಾಯ ಹಾಜರಾತಿ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಶಿಕ್ಷಕರು ಶಾಲೆಗೆ ಬಂದು ತಮ್ಮ ಮುಖದ ಗುರುತು (Face Recognition) ಹಾಗೂ ಲೊಕೇಶನ್ (Location) ಆಧರಿಸಿ ಅಟೆಂಡೆನ್ಸ್ ಹಾಕಬೇಕಾಗುತ್ತದೆ. ಇದಕ್ಕಾಗಿ ಇಲಾಖೆಯು ‘ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್’ (KAAMS – ಕೆಎಎಎಂಎಸ್) ಎಂಬ ವಿಶೇಷ ಆಪ್ ರೂಪಿಸಿದೆ. ಕಳೆದ ಶುಕ್ರವಾರದಿಂದಲೇ ಈ ನೂತನ ತಂತ್ರಜ್ಞಾನ ರಾಜ್ಯಾದ್ಯಂತ ಅನುಷ್ಠಾನಕ್ಕೆ ಬಂದಿದ್ದು, ಶಿಕ್ಷಕರು ದಿನಕ್ಕೆ ಎರಡು ಬಾರಿ ಕಡ್ಡಾಯವಾಗಿ ಆಪ್ ಮೂಲಕವೇ ಹಾಜರಾತಿ ದಾಖಲಿಸಬೇಕಿದೆ. ನಿಗದಿತ ಸಮಯಕ್ಕಿಂತ ತಡವಾಗಿ ಬಂದರೆ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಬೆಳವಣಿಗೆಗೆ ತೆರೆ ಬಿದ್ದಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ರಾಜ್ಯಪಾಲರು ಸರ್ಕಾರ ರಚಿಸಲು ಹಸಿರು ನಿಶಾನೆ ತೋರಿದ್ದಾರೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಶಕಗಳ ಕಾಲದ ಅವರ ಅವಿರತ ಶ್ರಮ ಮತ್ತು ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಂತಾಗಿದೆ. ಮೊದಲ ಹಂತದಲ್ಲೇ ಸಂಪುಟ ಸೇರಲು ಭರ್ಜರಿ ಲಾಬಿ! ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಕಾರ್ಯಕ್ರಮದ ಜೊತೆಯಲ್ಲೇ ಅವರ ಹೊಸ ಸಚಿವ ಸಂಪುಟದ ಸದಸ್ಯರ ಮೊದಲ ಪಟ್ಟಿ ಕೂಡ ಹೊರಬೀಳುವ ಸಾಧ್ಯತೆ ಇದೆ. ಮೊದಲ ಹಂತದಲ್ಲೇ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಶಾಸಕರಲ್ಲಿ ಭರ್ಜರಿ ಲಾಬಿ ಹಾಗೂ ಕಸರತ್ತು ಶುರುವಾಗಿದೆ. ಹೈಕಮಾಂಡ್‌ನೊಂದಿಗೆ ಚರ್ಚಿಸಿ ಸಚಿವರ…

Read More