Author: kannadanewsnow57

ಬೆಂಗಳೂರು : ರಾಜ್ಯದಲ್ಲಿ 30 ಸಾವಿರ ನರ್ಸ್‌ಗಳಿಗೆ 3 ತಿಂಗಳ ಸಂಬಳದ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನ (NHM), ಕರ್ನಾಟಕದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಪ್ಪಂದಾಧಾರಿತ ನೌಕರರು ಹಾಗೂ ASHA ಕಾರ್ಯಕರ್ತರಿಗೆ 2025ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳ ವೇತನ ಮತ್ತು ಪ್ರೋತ್ಸಾಹಧನ ಪಾವತಿಯಲ್ಲಿ ಸಂಭವಿಸಿದ ವಿಳಂಬದ ಕುರಿತು ಈ ಮೂಲಕ ಸ್ಪಷ್ಟನೆ ನೀಡಲಾಗುತ್ತಿದೆ. ಭಾರತ ಸರ್ಕಾರದ ಮಾರ್ಗಸೂಚಿಗಳಂತೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯನ್ನು ಆರ್ಥಿಕ ವರ್ಷದ ಮಧ್ಯಭಾಗದಲ್ಲಿ SNA-SPARSH ಎಂಬ ಹೊಸ ಹಣಕಾಸು ವ್ಯವಸ್ಥೆಗೆ ವರ್ಗಾಯಿಸಲಾಗಿದೆ. ಹಿಂದಿನ ವ್ಯವಸ್ಥೆಯಿಂದ ಹೊಸ ವ್ಯವಸ್ಥೆಗೆ ವರ್ಗಾವಣೆಯಾಗುವ ಸಂದರ್ಭದಲ್ಲಿ, ಕೇಂದ್ರ ಮತ್ತು ರಾಜ್ಯ ಮಟ್ಟಗಳಲ್ಲಿ ನಿಧಿ ಬಿಡುಗಡೆ ಹಾಗೂ ಪಾವತಿ ಪ್ರಕ್ರಿಯೆಗಳಲ್ಲಿ ತಾಂತ್ರಿಕ ಮತ್ತು ಪ್ರಕ್ರಿಯಾತ್ಮಕ ಬದಲಾವಣೆಗಳು ಅಗತ್ಯವಾಗಿದ್ದು, ಇದರಿಂದಾಗಿ ಕೆಲ ತಾತ್ಕಾಲಿಕ ವಿಳಂಬಗಳು ಉಂಟಾಗಿವೆ. SNA-SPARSH ವ್ಯವಸ್ಥೆಯ ಅಡಿಯಲ್ಲಿ, ಕೇಂದ್ರ ಸರ್ಕಾರದಿಂದ ಅನುದಾನ…

Read More

ಉತ್ತರ ಪ್ರದೇಶದ ಗಾಜಿಪುರದ ಸುಮಾರು 10 ಕ್ಕೂ ಹೆಚ್ಚು ಹಳ್ಳಿಗಳಲ್ಲಿ, ಮಕ್ಕಳು ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಕ್ಕಳು ಆರೋಗ್ಯವಾಗಿ ಜನಿಸುತ್ತಾರೆ, ಆದರೆ ಸ್ವಲ್ಪ ಸಮಯದ ನಂತರ, ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಜ್ವರ ಬರುತ್ತದೆ, ಅದು ಅವರನ್ನು ಅಂಗವಿಕಲರನ್ನಾಗಿ ಮಾಡುತ್ತದೆ. ಅವರ ಸ್ಥಿತಿ ಎಷ್ಟು ಗಂಭೀರವಾಗುತ್ತದೆಯೆಂದರೆ, ಪೋಷಕರು ತಮ್ಮ ಮಕ್ಕಳನ್ನು ಹಗ್ಗಗಳು ಅಥವಾ ಸರಪಳಿಗಳಿಂದ ತಮ್ಮ ಕಾಲುಗಳಿಗೆ ಕಟ್ಟುವಂತೆ ಒತ್ತಾಯಿಸಲಾಗುತ್ತದೆ. ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಸಿದ್ಧಾರ್ಥ್ ರೈ ಈಗ ಈ ಗ್ರಾಮಗಳಲ್ಲಿ ಹರಡುತ್ತಿರುವ ಈ ಕಾಯಿಲೆಯ ವಿಷಯವನ್ನು ಎತ್ತಿದ್ದಾರೆ. ಅವರು ಉತ್ತರ ಪ್ರದೇಶ ರಾಜ್ಯಪಾಲ ಆನಂದಿ ಬೆನ್ ಪಟೇಲ್‌ಗೆ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ, ಗಾಜಿಪುರದ ಹರಿಹರಪುರ ಗ್ರಾಮದಲ್ಲಿ ಇಬ್ಬರು ಹೆಣ್ಣು ಮಕ್ಕಳು ಜನಿಸಿದರು. ಆರಂಭದಲ್ಲಿ, ಅವರು ಆರೋಗ್ಯವಾಗಿದ್ದರು. ಆದಾಗ್ಯೂ, ಒಬ್ಬರಿಗೆ ನಾಲ್ಕು ತಿಂಗಳ ನಂತರ ಮತ್ತು ಇನ್ನೊಬ್ಬರಿಗೆ ಸುಮಾರು ಆರು ತಿಂಗಳ ನಂತರ ಜ್ವರ ಬಂದಿತು ಮತ್ತು ಇಬ್ಬರೂ ಮಾನಸಿಕವಾಗಿ ಅಂಗವಿಕಲರಾಗಿದ್ದಾರೆ. ವ್ಯಾಪಕ ಚಿಕಿತ್ಸೆಯ ಹೊರತಾಗಿಯೂ, ಅವರ ಅನಾರೋಗ್ಯವು…

Read More

ನವದೆಹಲಿ : SSLC ಪಾಸಾದವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಿಹಿಸುದ್ದಿ ನೀಡಿದ್ದು, 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. RBI ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಹುದ್ದೆಗೆ ಆಯ್ಕೆಯನ್ನು ಆನ್ಲೈನ್ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ, ನಂತರ ಭಾಷಾ ಪ್ರಾವೀಣ್ಯತೆ ಪರೀಕ್ಷೆ (LPT) ಇರುತ್ತದೆ. ಒಟ್ಟು ಖಾಲಿ ಹುದ್ದೆಗಳು: 572 ಅರ್ಹತೆ ಸಂಬಂಧಪಟ್ಟ ರಾಜ್ಯ/ಕೇಂದ್ರಾಡಳಿತ ಪ್ರದೇಶದಿಂದ 10ನೇ ತರಗತಿ (ಎಸ್.ಎಸ್.ಸಿ./ಮೆಟ್ರಿಕ್ಯುಲೇಷನ್) ಉತ್ತೀರ್ಣರಾಗಿರಬೇಕು. ಮುಖ್ಯ ಸೂಚನೆ ಅಭ್ಯರ್ಥಿಯು ಜನವರಿ 1, 2026 ರಂತೆ ‘ಪದವಿಪೂರ್ವ’ (ಪದವಿ ಪೂರ್ಣಗೊಳಿಸದ) ಆಗಿರಬೇಕು. ಪದವೀಧರರು ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ. ವಯಸ್ಸಿನ ಮಿತಿ 18 ರಿಂದ 25 ವರ್ಷಗಳ ನಡುವೆ ಇರಬೇಕು. (ಮೀಸಲಾತಿ ಪಡೆದ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಲಭ್ಯವಿದೆ). ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹24,250 ರಿಂದ ₹53,550 ರವರೆಗೆ ವೇತನ ಶ್ರೇಣಿಯನ್ನು ನೀಡಲಾಗುತ್ತದೆ. ಇದರೊಂದಿಗೆ, ಇತರ ಬ್ಯಾಂಕಿಂಗ್ ಭತ್ಯೆಗಳು…

Read More

ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಅನೇಕ ಸಮಸ್ಯೆಗಳು ಮತ್ತು ಸವಾಲುಗಳನ್ನು ಎದುರಿಸುತ್ತಾನೆ. ಇವು ದಿನಾಂಕ, ಸಮಯ, ರಾಶಿಚಕ್ರ ಚಿಹ್ನೆ, ನಕ್ಷತ್ರ ಮತ್ತು ಹುಟ್ಟಿದ ದಿನವನ್ನು ಅವಲಂಬಿಸಿರುತ್ತದೆ. ಆದಾಗ್ಯೂ, S ಅಕ್ಷರದ ಹೆಸರಿನವರು ಯಾವುದೇ ದಿನಾಂಕ, ರಾಶಿಚಕ್ರ ಚಿಹ್ನೆ ಅಥವಾ ಅವರು ಮಹಿಳೆಯರು ಅಥವಾ ಪುರುಷರು ಆಗಿರಲಿ ಒಂದೇ ರೀತಿಯ ಗುಣಗಳನ್ನು ಹೊಂದಿರುತ್ತಾರೆ. S ಅಕ್ಷರವಿರುವವರು ತುಂಬಾ ಅದೃಷ್ಟವಂತರು. ವಿಶೇಷವಾಗಿ ಫೆಬ್ರವರಿಯಲ್ಲಿ ಅವರಿಗೆ ಅದೃಷ್ಟ ಬರುತ್ತದೆ ಎಂದು ವಿದ್ವಾಂಸರು ಹೇಳುತ್ತಾರೆ. ಬ್ರಹ್ಮನ ಸಮಯ ಜ್ಞಾನದ ಪ್ರಕಾರ, ಅವರು ಪ್ರತಿಯೊಂದು ಕೆಲಸದಲ್ಲೂ ಯಶಸ್ವಿಯಾಗುತ್ತಾರೆ. ಅವರು ತುಂಬಾ ಬಲಶಾಲಿಗಳು ಮತ್ತು ತಮ್ಮ ಜೀವನವನ್ನು ಉತ್ತಮಗೊಳಿಸಿಕೊಳ್ಳುತ್ತಾರೆ. ದೀರ್ಘಕಾಲದಿಂದ ಕೆಲಸಕ್ಕಾಗಿ ಕಾಯುತ್ತಿರುವವರಿಗೆ ಈ ಸಮಯದಲ್ಲಿ ಸರ್ಕಾರಿ ಕೆಲಸ ಸಿಗುತ್ತದೆ. ಅದರ ಹೊರತಾಗಿ, ಅವರು ಒಳ್ಳೆಯ ಸ್ವಭಾವವನ್ನು ಹೊಂದಿರುವುದರಿಂದ, ಎಲ್ಲರೂ ಅವರೊಂದಿಗೆ ಸಭ್ಯರಾಗಿರುತ್ತಾರೆ. ಅವರಿಗೆ ಉನ್ನತ ಗುರಿಗಳಿವೆ. ಅವುಗಳನ್ನು ನನಸಾಗಿಸಲು ಅವರು ನಿರಂತರವಾಗಿ ಶ್ರಮಿಸುತ್ತಾರೆ. ವಿಶೇಷವಾಗಿ, ನೀವು ಕಳೆದ ವರ್ಷ ಮಾಡದ ಕೆಲಸಗಳನ್ನು ಈ ತಿಂಗಳು ಮಾಡುತ್ತೀರಿ. ಕುಟುಂಬದಲ್ಲಿ ಸಂತೋಷದ ವಾತಾವರಣವಿರುತ್ತದೆ.…

Read More

ಮೈಸೂರು : ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನಃ ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ “ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ” ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಮನರೇಗಾ ಕಾನೂನು ಜಾರಿ ಮಾಡಿದರು. ಆ ಮೂಲಕ ಕೆಲಸದ ಹಕ್ಕು ಕೊಟ್ಟರು. ಮೋದಿ ಸರ್ಕಾರ ಅದನ್ನು ಕಿತ್ತುಹಾಕುತ್ತಿದೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ. ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೇಂದ್ರ ಸರ್ಕಾರ ಅದನ್ನು ತೀರ್ಮಾನಿಸಲಿದೆ. ವಿಬಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಎಲ್ಲರೂ ಚಳುವಳಿಗೆ ತಯಾರಾಗಿ ಎಂದರು. ದೇಶದಲ್ಲಿ ಇನ್ನು ಮುಂದೆ ಮನರೇಗಾ ಯೋಜನೆ ಇರುವುದಿಲ್ಲ.…

Read More

ಬೆಂಗಳೂರು : ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ. (2) ಕಾನೂನಿನ ಮೂಲಕ ಸ್ಥಾಪಿತವಾದ ಸರ್ಕಾರವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಉರುಳಿಸುವಂಥದ್ದಾಗಿರುವ ಅಥವಾ ಉರುಳಿಸುವ ಉದ್ದೇಶ ಹೊಂದಿರುವ ಯಾವುದೇ ಚಳುವಳಿಯಲ್ಲಿ ಅಥವಾ ಚಟುವಟಿಕೆಯಲ್ಲಿ ಅವನ ಕುಟುಂಬದ ಯಾರೇ ಸದಸ್ಯನೂ ಭಾಗವಹಿಸದಂತೆ, ಅದರ ಸಹಾಯಾರ್ಥ ವಂತಿಗೆ ನೀಡದಂತೆ ಅಥವಾ ಇನ್ನಾವುದೇ ರೀತಿಯಿಂದ ನೆರವಾಗುವುದನ್ನು ತಡೆಗಟ್ಟಲು ಪ್ರಯತ್ನಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಕರ್ತವ್ಯವಾಗಿರತಕ್ಕದ್ದು ಮತ್ತು ಅಂಥ ಯಾವುದೇ ಚಳುವಳಿಯಲ್ಲಿ ಅಥವಾ ಚಟುವಟಿಕೆಯಲ್ಲಿ ಅವನ ಕುಟುಂಬದ ಸದಸ್ಯರು ಭಾಗವಹಿಸುವುದನ್ನು, ವಂತಿಗೆ ನೀಡುವುದನ್ನು ಅಥವಾ ಬೇರೆ ರೀತಿಯಿಂದ ನೆರವು ನೀಡುವುದನ್ನು ತಡೆಗಟ್ಟಲು ಸರ್ಕಾರಿ ನೌಕರನಿಗೆ ಸಾಧ್ಯವಾಗದಿದ್ದರೆ, ಅವನು ಆ ವಿಷಯವನ್ನು ಸರ್ಕಾರಕ್ಕೆ ವರದಿ ಮಾಡತಕ್ಕದ್ದು.…

Read More

ನವದೆಹಲಿ : ಬಿ.ಇಡಿ. ಅರ್ಹತೆ ಇಲ್ಲದ ಯಾವುದೇ ವ್ಯಕ್ತಿಯನ್ನು ಸಹಾಯಕ ಪ್ರಾಧ್ಯಾಪಕ\ತರಬೇತಿ ಪಡೆದ ಪದವೀಧರ ಶಿಕ್ಷಕ (ಕಲೆ) ಹುದ್ದೆಗೆ ನೇಮಿಸಬಾರದು ಎಂದು ಅಲಹಾಬಾದ್ ಹೈಕೋರ್ಟ್ ನಿರ್ದೇಶಿಸಿದೆ. ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗವು ಸಹಾಯಕ ಶಿಕ್ಷಕ/ತರಬೇತಿ ಪಡೆದ ಪದವೀಧರ ಶಿಕ್ಷಕ (ಕಲೆ) ಪರೀಕ್ಷೆ-2014 ರ ಹುದ್ದೆಗೆ ಜಾಹೀರಾತು ನೀಡಿತ್ತು. ಆದಾಗ್ಯೂ, ನ್ಯಾಯಾಲಯವು ಪ್ರತಿವಾದಿಗಳು ಆಯ್ಕೆ ಪ್ರಕ್ರಿಯೆಯನ್ನು ಮುಂದುವರಿಸುವಂತೆ ನಿರ್ದೇಶಿಸಿತು. ವಿನೋದಕುಮಾರ್ ಯಾದವ್ ಮತ್ತು ಇತರ ನಾಲ್ವರು ಸಲ್ಲಿಸಿದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸುವಾಗ ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಸುಧಾಂಶು ಚೌಹಾಣ್ ಅವರ ಪೀಠವು ಶುಕ್ರವಾರ ಈ ಆದೇಶವನ್ನು ನೀಡಿತು. ನ್ಯಾಯಾಲಯವು ರಾಜ್ಯದ ಅಡ್ವೊಕೇಟ್ ಜನರಲ್‌ಗೆ ನೋಟಿಸ್ ಜಾರಿ ಮಾಡಿ, ರಾಜ್ಯ ಸರ್ಕಾರ, ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗ ಮತ್ತು ಇತರರಿಗೆ ಈ ವಿಷಯದಲ್ಲಿ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿತು ಮತ್ತು ಮಾರ್ಚ್ 13, 2026 ಅನ್ನು ಮುಂದಿನ ವಿಚಾರಣೆಯ ದಿನಾಂಕವಾಗಿ ನಿಗದಿಪಡಿಸಿತು.

Read More

ಬೆಂಗಳೂರು: ರಾಜ್ಯದಲ್ಲಿ ಶಾಲಾ ದಾಖಲಾತಿಯಲ್ಲಿ ಜಾತಿ ತಿದ್ದುಪಡಿ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ.  ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಶಾಲಾ ದಾಖಲಾತಿಯಲ್ಲಿ ಜಾತಿಯನ್ನು ತಿದ್ದುಪಡಿ ಮಾಡುವ ಬಗ್ಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ ಪಂಗಡದ ಜಾತಿಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯು ಆಡಳಿತ ಇಲಾಖೆಯಾಗಿದ್ದು ಮತ್ತು ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಹಾಗೂ ಇತರ ಹಿಂದುಳಿದ ವರ್ಗಗಳ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ ಕಾಯ್ದೆಯಂತೆ ಜಾತಿ ಪಮಾಣ ಪತ್ರಗಳನ್ನು ನೀಡಲಾಗುತ್ತಿರುವುದರಿಂದ ಈ ಬಗ್ಗೆ ಸ್ಪಷ್ಟಿಕರಣ. ನೀಡಲು ಸಮಾಜ ಕಲ್ಯಾಣ ಇಲಾಖೆ ಸೂಕ್ತ ಪ್ರಾಧಿಕಾರವಾಗಿರುತ್ತದೆ ಎಂದು ತಿಳಿಸಿ ಮಾರ್ಗದರ್ಶನ ಹಾಗೂ ಸ್ಪಷ್ಟಿಕರಣ ನೀಡುವಂತೆ ಕೋರಲಾಗಿರುತ್ತದೆ ಎಂದು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ರವರು ತಿಳಿಸಿರುತ್ತಾರೆ ಎಂದಿದ್ದಾರೆ. ಮುಂದುವರೆದಂತೆ, ಈ ಕೆಳಕಂಡ ಆದೇಶ ಮತ್ತು ಸುತ್ತೋಲೆಗಳಲ್ಲಿ ಜಾತಿ ತಿದ್ದುಪಡಿ ಕುರಿತು ಮಾರ್ಗದರ್ಶನ ನೀಡಿರುವ ಕುರಿತು ತಿಳಿಸಿರುತ್ತಾರೆ. ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ:- ಇಡಿ…

Read More

ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದ 44 ತಾಣಗಳನ್ನು ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರ್ಪಡೆಮಾಡಲಾಗುತ್ತಿದ್ದು, ಈತಾಣಗಳುಸರ್ಕಾರದನೇರಉಸ್ತುವಾರಿಗೆ ಒಳಪಡಲಿವೆ. ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ, ಉತ್ಖನನ ಪ್ರಗತಿ ಬಗ್ಗೆ ಸಚಿವ ಹೆಚ್.ಕೆ ಪಾಟೀಲ್ ಅವರು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಭೆಯಲ್ಲಿ ಪ್ರಜ್ವಲ್ ರಿತ್ತಿಗೆ ಸಿಕ್ಕ ನಿಧಿ ಬಗ್ಗೆಯೂ ವಿಶೇಷವಾಗಿ ಚರ್ಚೆ ನಡೆಸಲಾಯಿತು. ಆ ಕುಟುಂಬಕ್ಕೆ ಏನೆಲ್ಲಾ ಸಹಾಯ ಮಾಡಬೇಕೆಂದು ಚರ್ಚೆ ನಡೆಸಲಾಗಿದೆ. ಲಕ್ಕುಂಡಿಯಲ್ಲಿನ ಬಯಲು ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ 165 ಲಕ್ಷ ಬಿಡುಗಡೆ ಮಾಡಲಾಗಿದೆ. ಮೂರು ಎಕರೆ ಭೂಮಿ ಪಡೆದುಕೊಳ್ಳಲು ನಿರ್ಧಾರ ಮಾಡಲಾಗಿದೆ ಎಂಬುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು. ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಅದರ ಜತೆಗೆ ಇನ್ನು 28 ದೇವಸ್ಥಾನ, ಬಾವಿಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಘೋಷಿಸುತ್ತೇವೆ. ಇದರಿಂದಾಗಿ ಒಟ್ಟು 44 ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿದ್ದು, ಇವುಗಳ…

Read More

ಶಿವಮೊಗ್ಗ : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬಟ್ಟೆ ಒಗೆಯಲು ಹೋದ ಒಂದೇ ಕುಟುಂಬದ ನಾಲ್ವರು ಭದ್ರಾ ನಾಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ ಬಟ್ಟೆ ಒಗೆಯುವ ಸಂದರ್ಭದಲ್ಲಿ ಕಾಲು ಜಾರಿ ಭದ್ರಾ ನಾಲೆಗೆ ಬಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಈವರೆಗೂ ಶವ ಪತ್ತೆಯಾಗಿಲ್ಲ. ಅರೆಬಳಚಿ ಗ್ರಾಮದ ನೀಲಾಬಾಯಿ (50), ಮಗ ರವಿಕುಮಾರ್ (23), ಮಗಳು ಶ್ವೇತಾ (24),ಅಳಿಯ ಪರಶುರಾಮ (28) ನೀರು ಪಾಲಾದವರು. ಬಟ್ಟೆ ತೊಳೆಯುವಾಗ ನೀಲಾಬಾಯಿ,ಶ್ವೇತಾ ಕಾಲು ಜಾರಿ ನಾಲೆಗೆ ಬಿದ್ದರು. ತಕ್ಷಣವೇ ರಕ್ಷಿಸಲು ಮಗ ರವಿಕುಮಾ‌ರ್ ಮತ್ತು ಅಳಿಯ ಪರಶುರಾಮ್ ನಾಲೆಗೆ ಧುಮುಕಿದ್ದಾರೆ.

Read More