Subscribe to Updates
Get the latest creative news from FooBar about art, design and business.
Author: kannadanewsnow57
ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಏರುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಬಿಸಿಲಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಿಕೊಳ್ಳಬೇಕು. ಆರೋಗ್ಯ ರಕ್ಷಣೆಗೆ ಪ್ರಮುಖ ಕ್ರಮಗಳು: ಸಾಕಷ್ಟು ನೀರು ಕುಡಿಯಿರಿ: ಬಾಯಾರಿಕೆ ಇಲ್ಲದಿದ್ದರೂ ದಿನವಿಡೀ ಅತಿ ಹೆಚ್ಚು ನೀರನ್ನು ಕುಡಿಯುತ್ತಿರಬೇಕು. ನಿರ್ಜಲೀಕರಣ ತಡೆಯಲು ಇದು ಅತಿ ಮುಖ್ಯವಾಗಿದೆ. ನೈಸರ್ಗಿಕ ಪಾನೀಯಗಳ ಬಳಕೆ: ಅಂಗಡಿಯ ಕೃತಕ ಪಾನೀಯಗಳ ಬದಲು ಮನೆಯಲ್ಲಿ ತಯಾರಿಸಿದ ನಿಂಬೆ ಹಣ್ಣಿನ ರಸ, ಮಜ್ಜಿಗೆ ಹಾಗೂ ನೈಸರ್ಗಿಕ ಎಳೆನೀರನ್ನು ಹೆಚ್ಚಾಗಿ ಸೇವಿಸಬೇಕು. ಆಹಾರ ಕ್ರಮ: ಸೌತೆಕಾಯಿ, ಕಲ್ಲಂಗಡಿ, ಕಿತ್ತಳೆ ಹಾಗೂ ದ್ರಾಕ್ಷಿಯಂತಹ ನೀರಿನ ಅಂಶ ಹೆಚ್ಚಿರುವ ಹಣ್ಣು ಮತ್ತು ತರಕಾರಿಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಉಡುಪು: ಹಗುರವಾದ, ತಿಳಿ ಬಣ್ಣದ ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸುವುದು ದೇಹವನ್ನು ತಂಪಾಗಿರಿಸಲು ಸಹಕಾರಿಯಾಗಲಿದೆ. ಹೊರಹೋಗುವಾಗ ವಹಿಸಬೇಕಾದ ಮುನ್ನೆಚ್ಚರಿಕೆ:…
ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಅವರು ಎಚ್ಚರಿಕೆ ನೀಡಿದ್ದಾರೆ. ಬಕ್ರೀದ್ ಸಂದರ್ಭದಲ್ಲಿ ಒಂಟೆ, ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ಮಾಡುವುದನ್ನು ತಡೆಗಟ್ಟುವ ಬಗ್ಗೆ ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಗೆ ಬರುವ ಸಾಗಣೆ ವಾಹನಗಳ ತಪಾಸಣೆ ನಡೆಸಿ ಗೋವು, ಒಂಟೆಗಳ ಅಕ್ರಮ ಸಾಗಣೆ ಕಂಡುಬಂದಲ್ಲಿ ಯಾವುದೇ ಮುಲಾಜಿಲ್ಲದೆ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಪೊಲೀಸ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ತಪಾಸಣೆ ನಡೆಸಿದ ವಾಹನಗಳು ಅನಧಿಕೃತವಾಗಿ ಗೋವು / ಒಂಟೆಗಳನ್ನು ಸಾಗಿಸುತ್ತಿದ್ದಲ್ಲಿ ಅವುಗಳನ್ನು ವಶಪಡಿಸಿಕೊಂಡು ಅಗತ್ಯ ಕಾನೂನು ಕ್ರಮ ಕೈಗೊಳ್ಳುವುದು ಮಾತ್ರವಲ್ಲದೆ ವಾಹನದಲ್ಲಿರುವ ಗೋವುಗಳನ್ನು ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ಗೋಶಾಲೆಗಳಿಗೆ ಅದೇ ವಾಹನದಲ್ಲಿ ಸಾಗಿಸಿ ಸುರಕ್ಷಿತಗೊಳಿಸುವಂತೆ ಸೂಚನೆ ನೀಡಿದರು. ‘ಒಂಟೆ, ಗೋವುಗಳ…
ಬೆಂಗಳೂರು: ಮಾರಣಾಂತಿಕ ಹಾಗೂ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ನೋವು ನಿವಾರಣೆ ಮತ್ತು ಅವರಿಗೆ ಮಾನಸಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಬೆಂಗಳೂರಿನ ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನೂತನ ‘ಪ್ಯಾಲಿಯೇಟಿವ್ ಕೇರ್’ (ಉಪಶಮನಕಾರಿ ಆರೈಕೆ) ವಿಭಾಗವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಉದ್ಘಾಟಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ‘ಶರಣಂ ಇಂಡಿಯಾ’ ಸಂಸ್ಥೆಯ ಸಹಭಾಗಿತ್ವದಲ್ಲಿ ಈ ನೂತನ ವಿಭಾಗವನ್ನು ಆರಂಭಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದ, ಅಸಾಧಾರಣ ನೋವು ಹಾಗೂ ತೀವ್ರ ಮಾನಸಿಕ ಒತ್ತಡ ಅನುಭವಿಸುತ್ತಿರುವ ರೋಗಿಗಳಿಗೆ ಈ ಕೇಂದ್ರವು ಸಂಜೀವಿನಿಯಾಗಲಿದೆ. ರಾಜ್ಯಾದ್ಯಂತ ವಿಸ್ತರಣೆಯ ಗುರಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, “ಉಪಶಮನ ಆರೈಕೆಯನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಬೆಂಗಳೂರಿನ 4-5 ಕಡೆಗಳಲ್ಲಿ ಇಂತಹ ಕೇಂದ್ರಗಳನ್ನು ಆರಂಭಿಸಿದ್ದೇವೆ. ಇದು ಅನಗತ್ಯ ಆಸ್ಪತ್ರೆ ಭೇಟಿಗಳನ್ನು ಕಡಿಮೆ ಮಾಡುವುದಲ್ಲದೆ, ಸಂಕಷ್ಟದಲ್ಲಿರುವ ರೋಗಿಗಳ ಕುಟುಂಬಗಳಿಗೆ ದೊಡ್ಡ ಆಸರೆಯಾಗಲಿದೆ,” ಎಂದು ತಿಳಿಸಿದರು. ಲಭ್ಯವಿರುವ…
ನವದೆಹಲಿ: ರಾಷ್ಟ್ರಗೀತೆ ‘ವಂದೇ ಮಾತರಂ’ ಹಾಡುವುದಕ್ಕೆ ಅಡ್ಡಿಪಡಿಸುವುದು ಅಥವಾ ಗೀತೆಯನ್ನು ಅವಮಾನಿಸುವುದನ್ನು ಇನ್ಮುಂದೆ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲು ಕೇಂದ್ರ ಸಚಿವ ಸಂಪುಟವು ಮಹತ್ವದ ತೀರ್ಮಾನ ಕೈಗೊಂಡಿದೆ. ಇದಕ್ಕಾಗಿ ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971’ ಕ್ಕೆ ತಿದ್ದುಪಡಿ ತರುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಈವರೆಗೆ ರಾಷ್ಟ್ರಗೀತೆ ‘ಜನ ಗಣ ಮನ’, ರಾಷ್ಟ್ರಧ್ವಜ ಮತ್ತು ಸಂವಿಧಾನಕ್ಕೆ ಮಾತ್ರ ಇದ್ದ ಕಾನೂನಾತ್ಮಕ ರಕ್ಷಣೆಯನ್ನು ಈಗ ‘ವಂದೇ ಮಾತರಂ’ಗೂ ವಿಸ್ತರಿಸಲಾಗುತ್ತಿದೆ. ರಾಷ್ಟ್ರಧ್ವಜ ಅಥವಾ ಸಂವಿಧಾನದ ಪ್ರತಿಯನ್ನು ಸುಡುವುದು, ವಿರೂಪಗೊಳಿಸುವುದು ಅಥವಾ ರಾಷ್ಟ್ರಗೀತೆ ಹಾಡುವಾಗ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ, ಅಥವಾ ಎರಡನ್ನೂ ವಿಧಿಸಬಹುದಾಗಿದೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ 3 ನಿಮಿಷ 10 ಸೆಕೆಂಡ್ಗಳ ಆರು ಚರಣಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಿ ಈಗಾಗಲೇ ಆದೇಶ ಹೊರಡಿಸಲಾಗಿದೆ. ನಿಯಮಗಳೇನು? ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ, ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆಯನ್ನು ಮೊದಲು ಹಾಡಬೇಕು ಅಥವಾ ನುಡಿಸಬೇಕು. ಗೀತೆ ಹಾಡುವ ಸಂದರ್ಭದಲ್ಲಿ ಸಭಿಕರೆಲ್ಲರೂ ಎದ್ದು ನಿಂತು…
ಬೆಂಗಳೂರು: ದುಡಿಯುವ ಸಾಮರ್ಥ್ಯವಿರುವ ಪತಿ, ತಾನು ನಿರುದ್ಯೋಗಿ ಎಂಬ ಕಾರಣ ನೀಡಿ ಪತ್ನಿಗೆ ಜೀವನಾಂಶ ನೀಡುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪತ್ನಿಯು ಉದ್ಯೋಗದಲ್ಲಿದ್ದರೂ ಸಹ, ಮದುವೆಯ ನಂತರ ಪತಿಯ ಮನೆಯಲ್ಲಿ ಅನುಭವಿಸುತ್ತಿದ್ದ ಜೀವನಮಟ್ಟವನ್ನು ಕಾಪಾಡಿಕೊಳ್ಳಲು ಪತಿಯಿಂದ ಜೀವನಾಂಶ ಪಡೆಯಲು ಅರ್ಹಳಾಗಿರುತ್ತಾಳೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಹಿಂದೆ ದಂಪತಿಗಳು ಬೇರೆ ಬೇರೆಯಾಗಿದ್ದು, 2021ರಲ್ಲಿ ವಿವಾಹವಾಗಿದ್ದರು. ಆದರೆ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ 2022ರಲ್ಲಿ ಪತ್ನಿ ಜೀವನಾಂಶ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಕೌಟುಂಬಿಕ ನ್ಯಾಯಾಲಯವು ಪತ್ನಿಗೆ ಮಾಸಿಕ 20 ಸಾವಿರ ರೂ. ಜೀವನಾಂಶ ನೀಡುವಂತೆ ಮಧ್ಯಂತರ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಪತಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. 2023ರಲ್ಲಿ ಕೆಲಸ ಕಳೆದುಕೊಂಡಿದ್ದು, ಪ್ರಸ್ತುತ ನಿರುದ್ಯೋಗಿಯಾಗಿದ್ದೇನೆ. ತಂದೆ-ತಾಯಿಯ ಪಿಂಚಣಿ ಮತ್ತು ಉಳಿತಾಯದ ಹಣದಲ್ಲಿ ಜೀವನ ನಡೆಸುತ್ತಿದ್ದೇನೆ. ಪತ್ನಿಯು ಪದವೀಧರೆಯಾಗಿದ್ದು, ಸ್ವಂತ ಆದಾಯ ಹೊಂದಿರುವುದರಿಂದ ಆಕೆಗೆ ಜೀವನಾಂಶದ ಅಗತ್ಯವಿಲ್ಲ.ನ್ಯಾಯಮೂರ್ತಿ ಡಾ. ಕೆ. ಮನ್ಮಥ ರಾವ್ ಅವರಿದ್ದ…
ಮೈಸೂರು: ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಅತೀ ಶೀಘ್ರದಲ್ಲೇ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಸರ್ಕಾರ ಮಾಡಿಕೊಳ್ಳುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಸಿದ್ದರಾಮೇಶ್ವರ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಮುದಾಯದವರ ಒಮ್ಮತದ ಮೇರೆಗೆ ಒಳಮೀಸಲಾತಿಯನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜಾತಿ ಗಣತಿ ವರದಿ ಹೊರಬಂದ ನಂತರ ಮತ್ತೊಮ್ಮೆ ಈ ಬಗ್ಗೆ ಚರ್ಚೆ ನಡೆಸಲಾಗುವುದು. ಒಳಮೀಸಲಾತಿ ಹಂಚಿಕೆಯಲ್ಲಿ ಈಗಾಗಲೇ ಸರ್ಕಾರ ಸಾಕಷ್ಟು ಮುಂದೆ ಹೋಗಿದ್ದು, ಸಚಿವ ಸಂಪುಟದಲ್ಲಿ ಎಲ್ಲಾ ಸಮುದಾಯದ ಸಚಿವರು ಒಮ್ಮತ ಸೂಚಿಸಿದ್ದಾರೆ ಎಂದು ಸಿಎಂ ತಿಳಿಸಿದರು. ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕು ಹಾಗೂ ರಾಜ್ಯದ ಸರ್ವರಿಗೂ ಸಮಪಾಲು-ಸಮಬಾಳು ಸಿಗಬೇಕು ಎನ್ನುವುದು ಸರ್ಕಾರದ ಗುರಿಯಾಗಿದೆ. ಶೋಷಿತ ವರ್ಗಗಳು…
ಬೆಂಗಳೂರು: ಮಗುವಿಗೆ ತಾಯಿಯಿಂದ ಗಂಭೀರ ಅಪಾಯವಿದೆ ಎಂಬುದಕ್ಕೆ ಬಲವಾದ ಸಾಕ್ಷ್ಯಗಳಿಲ್ಲದೆ, ಮಗುವನ್ನು ಭೇಟಿ ಮಾಡುವ ತಾಯಿಯ ಹಕ್ಕನ್ನು ಕಸಿಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ಮೂಲಕ ಫ್ಯಾಮಿಲಿ ಕೋರ್ಟ್ ವಿಧಿಸಿದ್ದ ನಿರ್ಬಂಧವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಅರ್ಜಿದಾರ ಮಹಿಳೆಯ ಪತಿ 2025ರಲ್ಲಿ ಮೃತಪಟ್ಟಿದ್ದರು. ಪತಿಯ ನಿಧನದ ನಂತರ ಆಸ್ತಿ ವಿಚಾರವಾಗಿ ಅರ್ಜಿದಾರ ಮಹಿಳೆ ಹಾಗೂ ಆಕೆಯ ಅತ್ತೆಯ ನಡುವೆ ಕಾನೂನು ಸಮರ ಆರಂಭವಾಗಿತ್ತು. ಈ ಮಧ್ಯೆ, ಅತ್ತೆ ಮತ್ತು ನಾದಿನಿ ಸೇರಿ 11 ವರ್ಷದ ಅಪ್ರಾಪ್ತ ಮಗುವಿನ ಪಾಲನೆಯ ಹಕ್ಕು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ತಾಯಿ ಮಗುವನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬ ಆರೋಪದ ಮೇರೆಗೆ, ಈ ಹಿಂದೆ ಕೌಟುಂಬಿಕ ನ್ಯಾಯಾಲಯವು ಮಗುವಿನ ಭೇಟಿಗೆ ತಾಯಿಗೆ ನಿರ್ಬಂಧ ಹೇರಿತ್ತು. ಇದನ್ನು ಪ್ರಶ್ನಿಸಿ ತಾಯಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಮಗುವಿನ ಭೇಟಿಯ ಹಕ್ಕು ಸಾಂವಿಧಾನಿಕ ಮತ್ತು ನೈಸರ್ಗಿಕ ಹಕ್ಕಾಗಿದೆ. ಇದನ್ನು ಅಕಾರಣವಾಗಿ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಮಗು ತನ್ನ ತಾಯಿಯ ವಿರುದ್ಧ ಹೇಳಿಕೆ ನೀಡಿದ್ದರೂ, ಅದನ್ನು ಅಂತಿಮ…
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅಂಡಮಾನ್ ನಿಕೋಬಾರ್ ದ್ವೀಪಸಮೂಹದಲ್ಲಿ ಕಂಡುಬಂದಿರುವ ತೇವಾಂಶ ಭರಿತ ಮೋಡಗಳ ಪ್ರಭಾವದಿಂದಾಗಿ, ಕರ್ನಾಟಕ ರಾಜ್ಯದಾದ್ಯಂತ ಈ ವಾರ ಪೂರ್ತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕದ ಭಾಗಗಳಿಗೆ ಹೋಲಿಸಿದರೆ, ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ತುಸು ಹೆಚ್ಚಾಗಿರಲಿದೆ. ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 8 ರಿಂದ ಮೇ 12 ರವರೆಗೆ ಮಳೆ ಸುರಿಯಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮೇ 7 ರಿಂದ ಮೇ 10 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಂದರ್ಭದಲ್ಲಿ ಕೆಲವು ಜಿಲ್ಲೆಗಳಲ್ಲಿ ಗಾಳಿಯ…
ನವದೆಹಲಿ: ದೇಶದ ಕೋಟ್ಯಂತರ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು (CCEA), 2026-27ನೇ ಸಕ್ಕರೆ ಹಂಗಾಮಿಗೆ (ಅಕ್ಟೋಬರ್-ಸೆಪ್ಟೆಂಬರ್) ಕಬ್ಬಿನ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (FRP) ಯನ್ನು ಪ್ರತಿ ಕ್ವಿಂಟಾಲ್ಗೆ ₹365 ಕ್ಕೆ ಹೆಚ್ಚಿಸಿ ಅನುಮೋದನೆ ನೀಡಿದೆ. ಕಳೆದ ಹಂಗಾಮಿನ ಬೆಲೆ ₹355ಕ್ಕೆ ಹೋಲಿಸಿದರೆ, ಈ ಬಾರಿ ಕ್ವಿಂಟಾಲ್ಗೆ ₹10 ಹೆಚ್ಚಳ ಮಾಡಲಾಗಿದೆ (ಶೇ. 2.81ರಷ್ಟು ಏರಿಕೆ). ಈ ಬೆಲೆಯು ಶೇ. 10.25 ರಷ್ಟು ಮೂಲ ಸಕ್ಕರೆ ಚೇತರಿಕೆ ದರವನ್ನು ಆಧರಿಸಿದೆ.ಒಂದು ವೇಳೆ ಸಕ್ಕರೆ ಚೇತರಿಕೆ ಪ್ರಮಾಣವು ಶೇ. 10.25ಕ್ಕಿಂತ ಹೆಚ್ಚಿದ್ದರೆ, ಪ್ರತಿ ಶೇ. 0.1 ಹೆಚ್ಚಳಕ್ಕೆ ರೈತರು ಪ್ರತಿ ಕ್ವಿಂಟಾಲ್ಗೆ ₹3.56 ಹೆಚ್ಚುವರಿ ಪ್ರೀಮಿಯಂ ಪಡೆಯಲಿದ್ದಾರೆ.ಚೇತರಿಕೆ ದರ ಕಡಿಮೆ ಇದ್ದರೂ ರೈತರ ಹಿತರಕ್ಷಣೆ ಮಾಡಲಾಗಿದ್ದು, ಶೇ. 9.5ಕ್ಕಿಂತ ಕಡಿಮೆ ಚೇತರಿಕೆ ಇರುವ ಗಿರಣಿಗಳಿಗೆ ಕಡಿತ ಅನ್ವಯಿಸುವುದಿಲ್ಲ. ಅಂತಹ ಸಂದರ್ಭದಲ್ಲೂ ರೈತರಿಗೆ…
ನವದೆಹಲಿ: ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ದಾಖಲಾಗಿದ್ದ ಪ್ರಕರಣವೊಂದನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಕೆ.ವಿ. ವಿಶ್ವನಾಥನ್ ಮತ್ತು ನ್ಯಾಯಮೂರ್ತಿ ಮನ್ಮೋಹನ್ ಅವರನ್ನೊಳಗೊಂಡ ಪೀಠವು ಈ ಪ್ರಮುಖ ತೀರ್ಪನ್ನು ನೀಡಿದೆ. ಪ್ರಕರಣದ ಹಿನ್ನೆಲೆ ಮಹಾರಾಷ್ಟ್ರದ ಶೈಲೇಶ್ ಭಾಯ್ ಗೋವಿಂದ್ ಭಾಯ್ ಮಕ್ವಾನಾ ಎಂಬುವರ ವಿರುದ್ಧ 2021ರಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ, ಆರೋಪಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇದು ಇಬ್ಬರು ವ್ಯಕ್ತಿಗಳ ನಡುವೆ ದೀರ್ಘಕಾಲದವರೆಗೆ ನಡೆದ ‘ಪರಸ್ಪರ ಒಪ್ಪಿಗೆಯ ಸಂಬಂಧ’ ಎಂದು ಸ್ಪಷ್ಟಪಡಿಸಿದೆ. ದೂರುದಾರೆ ಮತ್ತು ಆರೋಪಿ ಇಬ್ಬರಿಗೂ ಮೊದಲೇ ಮದುವೆಯಾಗಿತ್ತು. ತಮ್ಮ ವೈವಾಹಿಕ ಸ್ಥಿತಿಯ ಬಗ್ಗೆ ಇಬ್ಬರಿಗೂ ಸಂಪೂರ್ಣ ಅರಿವಿತ್ತು.ಇಬ್ಬರೂ ಸುಮಾರು ನಾಲ್ಕು ವರ್ಷಗಳ ಕಾಲ ಒಟ್ಟಿಗೆ ಪ್ರಯಾಣಿಸಿದ್ದು, ದೈಹಿಕ ಸಂಬಂಧ ಹೊಂದಿದ್ದರು. 2017ರಲ್ಲಿ ಸಂಬಂಧ ಆರಂಭವಾಗಿದ್ದರೂ, 2021ರವರೆಗೆ ಯಾವುದೇ ದೂರು ದಾಖಲಾಗಿರಲಿಲ್ಲ.ಸಂಬಂಧದಲ್ಲಿ ಬಿರುಕು ಮೂಡಿದ ನಂತರವಷ್ಟೇ ಕ್ರಿಮಿನಲ್ ಕ್ರಮ…













