Author: kannadanewsnow57

ಬೆಂಗಳೂರು: ಭೂಮಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ವ್ಯವಸ್ಥೆಯ ಅಡಿಯಲ್ಲಿ ತರುವ ಮಹಾತ್ವಕಾಂಕ್ಷಿ ULMS (Unified Land Management System) ಯೋಜನೆಯ ಅನುಷ್ಠಾನಕ್ಕೆ ಸರ್ಕಾರದ ದೃಢ ಹೆಜ್ಜೆಯನ್ನು ಇಟ್ಟಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಕುರಿತಂತೆ ಎಲ್ಲಾ ಸಂಬಂಧಿಸಿದ (ಕಂದಾಯ, ನಗರಾಭಿವೃದ್ಧಿ, ನೋಂದಣಿ, ಲೋಕೋಪಯೋಗಿ, ನೀರಾವರಿ, ವಸತಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಇತ್ಯಾದಿ ಇಲಾಖೆಗಳ) ಹಿರಿಯ ಅಧಿಕಾರಿಗಳ ಸಭೆಯನ್ನು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ULMS ಗಣಕೀಕೃತ ಏಕ ವ್ಯವಸ್ಥೆಯಡಿ ಸರ್ವೆ, ಭೂ ಪರಿವರ್ತನೆ, ಬಡಾವಣೆ ಪ್ಲಾನ್‌ ಮಂಜೂರಿ, ಮನೆ ಪ್ಲಾನ್‌ ಮಂಜೂರಿ, ನಿವೇಶನ ಮಾರಾಟ, ಇ-ಖಾತಾ ಸೃಜನೆ (ಸ್ಥಳೀಯ ಸಂಸ್ಥೆಯಲ್ಲಿ), ಆಸ್ತಿ ತೆರಿಗೆ ಸಂಗ್ರಹ, ಭೂಸ್ವಾಧೀನ ಹಾಗೂ ಇನ್ನೂ ಅನೇಕ ಭೂ ಸಂಬಂಧಿತ ಚಟುವಟಿಕೆಗಳನ್ನು ಸರಾಗ, ಸುಲಭ, ಪಾರದರ್ಶಕ ಮತ್ತು ಜನಸ್ನೇಹಿಯಾದ ಒಂದೇ ಆನ್‌ಲೈನ್‌ ವ್ಯವಸ್ಥೆಗೆ ತರುವ ಯೋಜನೆಯಾಗಿದೆ. ಇದರಿಂದ ಜನರಿಗೆ ಬೇರೆ ಬೇರೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಭೂಮಿಗೆ ಸಂಬಂಧಿಸಿದ ಸೇವೆಗಳನ್ನು…

Read More

ಮದುವೆಯ ಸಂದರ್ಭದಲ್ಲಿ ವಧುವಿನ ಕುಟುಂಬವು ವರನಿಗೆ ಅಥವಾ ವರನ ಕುಟುಂಬಕ್ಕೆ ಹಣ, ಬಂಗಾರ, ಆಸ್ತಿ ಅಥವಾ ಇತರ ವಸ್ತುಗಳನ್ನು ನೀಡುವುದು ಕಾನೂನಿನ ಪ್ರಕಾರ ಅಪರಾಧ. ವರದಕ್ಷಿಣೆ ನಿಯಂತ್ರಣ ಕಾಯ್ದೆ, 1961 ರ ಪರಿಣಾಮಕಾರಿ ಜಾರಿಗೆ ಗೊಳಿಸಲು ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ಜವಾಬ್ದಾರಿಗಳನ್ನು ತಿಳಿಯೋಣ. ಮಹಿಳೆಯರ ವಿರುದ್ಧದ ಹಿಂಸಾಚಾರ, ಕಿರುಕುಳ, ಗೃಹ ಹಿಂಸೆ, ಕಾನೂನು ನೆರವು ಹಾಗೂ ತುರ್ತು ಸಹಾಯಕ್ಕಾಗಿ ವನಿತಾ ಸಹಾಯವಾಣಿ 1091 ಗೆ ಸಂಪರ್ಕಿಸಿ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳು ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಿಯೋಜಿಸಲಾದ ವರದಕ್ಷಿಣೆ ನಿಷೇಧ ಉಸ್ತುವಾರಿ ಅಧಿಕಾರಿಗಳ ಹೆಸರು, ಹುದ್ದೆ, ಕಚೇರಿ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸುವುದು. ಸ್ವಸಹಾಯ ಸಂಘದ ಮಹಿಳೆಯರು, ಸಂಘ/ ಸಂಸ್ಥೆ ಹಾಗೂ ಕೂಲಿ/ಕಾರ್ಮಿಕರ ಸಂಘ ಹಾಗೂ ಸಮುದಾಯದಲ್ಲಿ ವರದಕ್ಷಿಣೆ ನಿಷೇಧ ಕುರಿತು ಅರಿವು ಮೂಡಿಸುವುದು. ಚುನಾಯಿತ ಪ್ರತಿನಿಧಿಗಳು, ಜಿಪಿಎಲ್ಎಫ್ ಮತ್ತು ಸ್ವಸಹಾಯ…

Read More

ಬೆಂಗಳೂರು : ಈ ಬಾರಿಯ ಬೇಸಿಗೆಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮಾರ್ಚ್ನಿಂದ ಮೇವರೆಗೆ ತಾಪಮಾನ ಸಾಮಾನ್ಯಕ್ಕಿಂತ ಕಠಿಣವಾಗಿರಲಿದೆ. ಕಡಿಮೆ ಶಾಖದ ಅಲೆ ಮತ್ತು ಬೆಚ್ಚಗಿನ ರಾತ್ರಿ ಇರಲಿದೆ. ಮಾರ್ಚ್ ಆರಂಭದಲ್ಲೇ ಬಿಸಿಲಿನ ತೀವ್ರತೆ ಹೆಚ್ಚಳವಾಗಲಿದ್ದು, ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನವು ಶೇ.65 ಹೆಚ್ಚಲಿದೆ. ಬೆಂಗಳೂರು, ವಿಜಯಪುರು, ಬೀದರ್, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರಿ, ಧಾರವಾಡ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ ಸೇರಿ ಉ.ಕರ್ನಾಟಕದ ಜಿಲ್ಲೆಗಳಲ್ಲಿ 43 ಡಿ.ಸೆ., ಮೈಸೂರು, ಮಂಡ್ಯ, ಹಾಸನ, ಚಾಮರಾಜ ನಗರ, ತುಮಕೂರು, ಬೆಂ.ದಕ್ಷಿಣ, ಬೆಂ. ಗ್ರಾಮಾಂತರದಲ್ಲಿ 40 ಡಿ.ಸೆ.ವರೆಗೆ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ ಏನು ಮಾಡಬೇಕು ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು. ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಿ. ಆಗಾಗ್ಗೆ…

Read More

ನವದೆಹಲಿ : ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ‘ಇ-ಮ್ಯಾಜಿಕ್ ಬಾಕ್ಸ್’ ಅಪ್ಲಿಕೇಶನ್ ಎಂಬ ವಿಶಿಷ್ಟ ಡಿಜಿಟಲ್ ಉಪಕ್ರಮವನ್ನು ಪ್ರಾರಂಭಿಸಿದೆ. ಇಂದಿನ ಡಿಜಿಟಲ್ ಯುಗದಲ್ಲಿ, ಮಕ್ಕಳ ಶಿಕ್ಷಣವು ಇನ್ನು ಮುಂದೆ ಪುಸ್ತಕಗಳಿಗೆ ಸೀಮಿತವಾಗಿಲ್ಲ. ಬದಲಾಗುತ್ತಿರುವ ತಂತ್ರಜ್ಞಾನದೊಂದಿಗೆ, ಶೈಕ್ಷಣಿಕ ವಿಧಾನಗಳು ಸಹ ಬದಲಾಗುತ್ತಿವೆ. ವಿಶೇಷವಾಗಿ ಚಿಕ್ಕ ಮಕ್ಕಳಿಗೆ, ಅವರು ತಮ್ಮ ಆರಂಭಿಕ ಶಿಕ್ಷಣದ ಸಮಯದಲ್ಲಿ ಸರಿಯಾದ ಮಾರ್ಗದರ್ಶನ ಮತ್ತು ಆಕರ್ಷಕ ವಿಷಯವನ್ನು ಪಡೆದರೆ, ಅವರ ಕಲಿಕಾ ಸಾಮರ್ಥ್ಯವು ಘಾತೀಯವಾಗಿ ಹೆಚ್ಚಾಗುತ್ತದೆ. ಈ ದೃಷ್ಟಿಕೋನದೊಂದಿಗೆ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ‘ಇ-ಮ್ಯಾಜಿಕ್ ಬಾಕ್ಸ್’ ಅಪ್ಲಿಕೇಶನ್ ಎಂಬ ವಿಶಿಷ್ಟ ಡಿಜಿಟಲ್ ಉಪಕ್ರಮವನ್ನು ಪ್ರಾರಂಭಿಸಿದೆ. ಈ ಅಪ್ಲಿಕೇಶನ್ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ನಡೆಸಲ್ಪಡುತ್ತದೆ ಮತ್ತು ಮಕ್ಕಳು, ಪೋಷಕರು ಮತ್ತು ಶಿಕ್ಷಕರನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ. ಮಕ್ಕಳು ಆಟದ ಮೂಲಕ ಕಲಿಯಲು ಮತ್ತು ವಯಸ್ಕರು ತಮ್ಮ ಕಲಿಕಾ ಪ್ರಯಾಣದಲ್ಲಿ ಸಕ್ರಿಯವಾಗಿ ಭಾಗವಹಿಸಲು ಅನುವು ಮಾಡಿಕೊಡುವುದು ಇದರ ಗುರಿಯಾಗಿದೆ. ಇ-ಮ್ಯಾಜಿಕ್ ಬಾಕ್ಸ್ ಅಪ್ಲಿಕೇಶನ್…

Read More

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-3ಬಿ ನಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಲ್ಲಿ ಸೌಲಭ್ಯಕ್ಕಾಗಿ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು ಬ್ಯಾಂಕುಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ. ನಗರ ಪ್ರದೇಶದ ವಿಧಾನ ಸಭಾಕ್ಷೇತ್ರಗಳಾದ ಧಾರವಾಡ, ನವಲಗುಂದ, ಕುಂದಗೋಳ, ಕಲಘಟಗಿ, ಹುಬ್ಬಳ್ಳಿ-ಧಾ ಪೂರ್ವ, ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ಗಕಳಲ್ಲಿ ಯೋಜನೆಯ ಸೌಲಭ್ಯ ಪಡೆಯಬಯಸುವವರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು. ವೀರಶೈವ ಲಿಂಗಾಯತ ಸಮುದಾಯದ ಅರ್ಜಿದಾರರು ಮಾರ್ಚ 06, 2026 ರೊಳಗಾಗಿ ಸೇವಾಸಿಂಧು ಪೆÇೀರ್ಟಲ್ ಗ್ರಾಮಒನ್, ಕರ್ನಾಟಕ ಒನ್ಗುಳ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ದೂರವಾಣಿ ಸಂಖ್ಯೆ:…

Read More

ಧಾರವಾಡ : ಬೇಸಿಗೆ ಅವಧಿ ಆರಂಭ ಆಗುತ್ತಿರುವದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ, ರೈತರಿಗೆ ಅನುಕೂಲವಾಗುವಂತೆ ಆದಷ್ಟು ಹಗಲು ಹೊತ್ತಿನಲ್ಲಿ ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಹೆಸ್ಕಾಂ ಸಂಸ್ಥೆಯ ವಿವಿಧ ಕಾಮಗಾರಿಗಳ ಪ್ರಗತಿ ಹಾಗೂ ಬೇಸಿಗೆ ಅವಧಿಯ ವಿದ್ಯುತ್ ಪೂರೈಕೆ ಸಿದ್ದತೆ ಕುರಿತು ಹೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ಜರುಗುಸಿ, ಮಾತನಾಡಿದರು ಅವರು, ಜಿಲ್ಲೆಯಲ್ಲಿ 67 ಕೃಷಿ ವಿದ್ಯುತ್ ಫೀಡರ್ಗಳಿವೆ. ಇದರಲ್ಲಿ 41 ಫೀಡರ್ಗಳಿಂದ ಬೆಳಿಗ್ಗೆ 7 ರಿಂದ ಸಂಜೆ 4 ಗಂಟೆಯೊಳಗೆ, 12 ಫೀಡರ್ಗಳಿಗೆ ಸಂಜೆ 6 ರಿಂದ ರಾತ್ರಿ 9 ಗಂಟೆ ಹಾಗೂ ರಾತ್ರಿ 10 ರಿಂದ ಮಧ್ಯರಾತ್ರಿ 1 ಗಂಟೆಯೊಳಗೆ ಮತ್ತು 8 ಫೀಡರ್ಗಳಿಂದ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ…

Read More

ಪ್ರಯಾಗರಾಜ್ : ಲಿವ್ ಇನ್ ಸಂಬಂಧದಲ್ಲಿ ವಾಸಿಸುವ ಜೋಡಿಗೆ ಜೀವನಾಂಶದ ಕುರಿತು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪುರುಷ ಮತ್ತು ಮಹಿಳೆ ದೀರ್ಘಕಾಲದಿಂದ ಪತಿ ಮತ್ತು ಪತ್ನಿಯಾಗಿ ಒಟ್ಟಿಗೆ ವಾಸಿಸುತ್ತಿದ್ದರೆ, ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ಮಹಿಳೆ ಬೇರ್ಪಟ್ಟರೆ ಜೀವನಾಂಶಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಹೇಳಿದೆ. ವಿವಾಹದ ಔಪಚಾರಿಕ ಅಥವಾ “ಕಟ್ಟುನಿಟ್ಟಾದ” ಕಾನೂನು ಪುರಾವೆ ಲಭ್ಯವಿಲ್ಲದಿದ್ದರೂ ಸಹ, ಹೆಂಡತಿಗೆ ಜೀವನಾಂಶಕ್ಕೆ ಅರ್ಹತೆ ಇರುತ್ತದೆ. ಮುನೀಶ್ ಕುಮಾರ್ ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ವಜಾಗೊಳಿಸುತ್ತಾ ನ್ಯಾಯಮೂರ್ತಿ ಮದನ್ ಪಾಲ್ ಸಿಂಗ್ ಅವರ ಏಕ ಪೀಠವು ಈ ಆದೇಶವನ್ನು ಹೊರಡಿಸಿತು. ಪತಿಯ ಮಾಸಿಕ ಆದಾಯ ₹70,000 ಮತ್ತು ನಾಲ್ಕನೇ ಒಂದು ಭಾಗ ₹17,500 ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣದಲ್ಲಿ, ಮೊರಾದಾಬಾದ್‌ನ ಕುಟುಂಬ ನ್ಯಾಯಾಲಯವು ₹18,000 ಜೀವನಾಂಶವನ್ನು ಆದೇಶಿಸಿದೆ, ಇದು ಅತಿಯಾದದ್ದಲ್ಲ ಆದರೆ ಸೂಕ್ತವಾಗಿದೆ. ಪ್ರಕರಣದ ಹಿನ್ನೆಲೆ ವಾಸ್ತವವಾಗಿ, ಕುಟುಂಬ ನ್ಯಾಯಾಲಯವು ಮಹಿಳೆಗೆ ₹12,000 ಮತ್ತು ಮಗನಿಗೆ ₹6,000,…

Read More

ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಮುಂದಿನ 2-3 ದಿನಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ಕಂತಿನ ಹಣ ಖಾತೆಗೆ ಜಮೆ ಆಗಲಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗೃಹಲಕ್ಷ್ಮೀ DBT ಪ್ರಕ್ರಿಯೆ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಫಲಾನುಭವಿಗಳಿಗೆ ನಾಲ್ಕನೇ ಅನುದಾನದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ರಾಯಚೂರು ರವರ ಮೂಲಕ DBT ಪ್ರಕ್ರಿಯೆ ಚಾಲ್ತಿ ಮಾಡಲಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮಾವಾಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಪಾಮಯ್ಯ ಮುರಾರಿ ತಿಳಿಸಿರುತ್ತಾರೆ.

Read More

ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ, ಮೊಬೈಲ್ ಬಳಕೆ ನಿಯಂತ್ರಿಸುವ ಉದ್ದೇಶದಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಅಭಿಯಾನವನ್ನು ಅನುಷ್ಠಾನಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿಯನ್ನು ವ್ಯವಸ್ಥಿತವಾಗಿ ಬೆಳೆಸಿ, ಕ್ರಿಯಾಶೀಲ, ವಿವೇಚನೆಯುಕ್ತ ಹಾಗೂ ಉನ್ನತ ಚಿಂತನಾ ಸಾಮರ್ಥ್ಯವನ್ನು ಹೊಂದಿರುವ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವುದು ಶಿಕ್ಷಣ ಇಲಾಖೆಯ ಪ್ರಮುಖ ಉದ್ದೇಶವಾಗಿರುತ್ತದೆ. ಓದುವಿಕೆಯು ವಿದ್ಯಾರ್ಥಿಗಳ ಬೌದ್ಧಿಕ ವಿಕಾಸ, ಮೌಲ್ಯಾಧಾರಿತ ಚಿಂತನೆ, ಆಲೋಚನಾ ಸಾಮರ್ಥ್ಯ ಹಾಗೂ ಜೀವನ ಕೌಶಲ್ಯಗಳ ಸಮಗ್ರ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್‌ಗಳು ಹಾಗೂ ಇತರೆ ಡಿಜಿಟಲ್ ಸಾಧನಗಳ ಅತಿಯಾದ ಹಾಗೂ ಅನಿಯಂತ್ರಿತ ಬಳಕೆಯಿಂದಾಗಿ ಓದುವಿಕೆಯಲ್ಲಿ ಗಣನೀಯ ಕುಸಿತ ಉಂಟಾಗುತ್ತಿರುವುದು, ಕಲಿಕಾ ಆಸಕ್ತಿ ಗಂಭೀರವಾಗಿ ಕುಂಠಿತವಾಗುತ್ತಿರುವುದು, ಏಕಾಗ್ರತೆಯಲ್ಲಿ ಹಿನ್ನಡೆಯಾಗಿರುವುದು, ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳು ಉಂಟಾಗುತ್ತಿರುವುದು ಹಾಗೂ ಶೈಕ್ಷಣಿಕ ಸಾಧನೆಗೆ ಸ್ಪಷ್ಟ ಅಡ್ಡಿಯುಂಟಾಗುತ್ತಿರುವುದನ್ನು ಗಮನಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯನ್ನು ನಿಯಂತ್ರಿಸಿ, ಓದುವ ಅಭ್ಯಾಸವನ್ನು…

Read More

ಪಕ್ಕದ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಶೀತ ಜ್ವರ (ಹಕ್ಕಿ ಜ್ವರ) ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ. ಕೋಳಿ ಫಾರಂ ಮಾಲೀಕರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ್ ಅವರು ಸೂಚನೆ ನೀಡಿದರು. ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೋಳಿ ಶೀತ ಜ್ವರದ ರೋಗೋದ್ರೇಕದ ಕುರಿತು ಮುಂಜಾಗ್ರತೆ ವಹಿಸುವ ಕುರಿತು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಣಿ ಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 25 ಮೊಟ್ಟೆ ಉತ್ಪಾದನಾ ಕೋಳಿ ಫಾರಂಗಳು ಹಾಗೂ 14 ಮಾಂಸ ಉತ್ಪಾದನಾ ಕೋಳಿ ಫಾರಂಗಳು ಕಾರ್ಯನಿರ್ವಹಿಸುತ್ತಿದ್ದು, ಕೋಳಿ ಶೀತ ಜ್ವರ ಹರಡುವಿಕೆ ತಡೆಯಲು ತೀವ್ರ ನಿಗಾವಹಿಸುವುದು ಅತ್ಯಗತ್ಯವಾಗಿದೆ. ಪಕ್ಕದ ರಾಜ್ಯದಲ್ಲಿ ರೋಗೋದ್ರೇಕ ಕಂಡುಬಂದಿರುವುದರಿಂದ, ಜಿಲ್ಲೆಯ ಪಶುವೈದ್ಯಕೀಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಕೋಳಿ…

Read More