Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ದೇಶದ ನಾಗರಿಕರಿಗೆ ಸರ್ಕಾರದ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಮತ್ತು ಕಾಗದದ ಬಳಕೆಯನ್ನು ಕಡಿಮೆ ಮಾಡಲು ಭಾರತ ಸರ್ಕಾರವು ಕಳೆದ ದಶಕದಲ್ಲಿ ಹಲವು ಮೊಬೈಲ್ ಆ್ಯಪ್ಗಳನ್ನು ಬಿಡುಗಡೆ ಮಾಡಿದೆ. ಸರ್ಕಾರಿ ದಾಖಲೆಗಳ ಡಿಜಿಟಲ್ ಪ್ರತಿಗಳನ್ನು ಸುರಕ್ಷಿತವಾಗಿರಿಸುವುದರಿಂದ ಹಿಡಿದು, ವಾಹನಗಳ ಮಾಹಿತಿ ಪರಿಶೀಲನೆ ಹಾಗೂ ಆರೋಗ್ಯ ದಾಖಲೆಗಳನ್ನು ನಿರ್ವಹಿಸುವವರೆಗೆ ಈ ಆ್ಯಪ್ಗಳು ಸಹಕಾರಿಯಾಗಿವೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆಯದೆಯೇ ಮೊಬೈಲ್ ಮೂಲಕವೇ ಹಲವು ಕೆಲಸಗಳನ್ನು ಪೂರ್ಣಗೊಳಿಸಲು ಇವು ನೆರವಾಗುತ್ತವೆ. ಸಾಮಾನ್ಯ ಜನರಿಗೆ ತಮ್ಮ ದೈನಂದಿನ ಜೀವನದಲ್ಲಿ ಅತ್ಯಂತ ಉಪಯುಕ್ತವಾಗಿರುವ ಅಂತಹ 12 ಪ್ರಮುಖ ಸರ್ಕಾರಿ ಆ್ಯಪ್ಗಳ ವಿವರ ಇಲ್ಲಿದೆ: 1. ಡಿಜಿಲಾಕರ್ (DigiLocker) “ಡಿಜಿಟಲ್ ಇಂಡಿಯಾ” ಯೋಜನೆಯಡಿ ರೂಪಿಸಲಾದ ಡಿಜಿಲಾಕರ್ ಆ್ಯಪ್ನಲ್ಲಿ ಬಳಕೆದಾರರು ತಮ್ಮ ಚಾಲನಾ ಪರವಾನಗಿ (DL), ವಾಹನ ನೋಂದಣಿ ಪತ್ರ (RC), ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ವಿಮಾ ದಾಖಲೆಗಳಂತಹ ಪ್ರಮುಖ ಪತ್ರಗಳನ್ನು ಡಿಜಿಟಲ್ ರೂಪದಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬಹುದು. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರಕಾರ, ಡಿಜಿಲಾಕರ್ ಮೂಲಕ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗದ ವತಿಯಿಂದ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಬಸ್ ಪಾಸ್ಗಳ ವಿತರಣೆಗೆ ಚಾಲನೆ ನೀಡಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಾಲಾ-ಕಾಲೇಜುಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದ ಆದೇಶದಂತೆ ಸಂಪೂರ್ಣ ವಿದ್ಯಾರ್ಥಿ ಬಸ್ ಪಾಸ್ಗಳನ್ನು ವಿತರಿಸಲು ನಿಗಮವು ಅಗತ್ಯ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳು ಸೇವಾಸಿಂಧು ಫೋರ್ಟಲ್ ನ ಲಿಂಕ್ https://sevasindhuservices.karnataka.gov.in/buspassservices ಮೂಲಕ ಆನ್ಲೈನ್ನಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ 29-05-2026 ರಿಂದಲೇ ಸೇವಾಸಿಂಧು ಫೋರ್ಟಲ್ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ಲೈನ್ ಫೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಚಿತ್ರದುರ್ಗ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ತಮ್ಮ ಹತ್ತಿರದ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಶುಲ್ಕ ನಿಗದಿಪಡಿಸಲಾಗಿದೆ. ವಿದ್ಯಾರ್ಥಿಗಳು ಬಸ್ ಪಾಸ್ಗಾಗಿ ಅರ್ಜಿ ಪಡೆಯಲು ಡಿಕ್ಲರೇಷನ್ ಫಾರಂ ಅನ್ನು…
ನವದೆಹಲಿ: ದೀರ್ಘಕಾಲದಿಂದ ತಾತ್ಕಾಲಿಕ ಅಥವಾ ದಿನಗೂಲಿ ಆಧಾರದ ಮೇಲೆ ದುಡಿಯುತ್ತಿರುವ ನೌಕರರಿಗೆ ಸುಪ್ರೀಂ ಕೋರ್ಟ್ ಭರ್ಜರಿ ಸಿಹಿ ಸುದ್ದಿ ನೀಡಿದೆ. ಖಾಯಂ ನೌಕರರಷ್ಟೇ ಜವಾಬ್ದಾರಿಯಿಂದ ಕೆಲಸ ಮಾಡುವ ತಾತ್ಕಾಲಿಕ ಸಿಬ್ಬಂದಿಗೆ ಸಮಾನ ಸೌಲಭ್ಯಗಳನ್ನು ನಿರಾಕರಿಸುವುದು ತಪ್ಪು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಎ.ಜೆ. ಮಸಿಹ್ ಅವರನ್ನೊಳಗೊಂಡ ಪೀಠವು ಈ ಮಹತ್ವದ ಆದೇಶ ಹೊರಡಿಸಿದೆ. ಅಂಚೆ ಇಲಾಖೆಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ತಾತ್ಕಾಲಿಕ ನೌಕರರಿಗೆ ನಿವೃತ್ತಿ ವೇತನ (ಪಿಂಚಣಿ) ನಿರಾಕರಿಸಿದ್ದ ಪಟ್ನಾ ಹೈಕೋರ್ಟ್ನ ಹಳೆಯ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯ ಹೇಳಿದ್ದೇನು? ಕಾಯಂ ಮತ್ತು ತಾತ್ಕಾಲಿಕ ನೌಕರರ ನಿವೃತ್ತಿ ಪ್ರಯೋಜನಗಳಲ್ಲಿ ಭಾರಿ ತಾರತಮ್ಯ ಮಾಡುವುದು ಸರಿಯಲ್ಲ. ಒಂದೇ ರೀತಿಯ ಕರ್ತವ್ಯ ನಿರ್ವಹಿಸುವಾಗ ಸೌಲಭ್ಯ ನಿರಾಕರಿಸುವುದು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ.ಮಾನ್ಯತೆ ಪಡೆದ ಸ್ಥಾನಮಾನ ಹೊಂದಿರುವವರಿಗೆ ಪಿಂಚಣಿ ಸೇರಿದಂತೆ ಇತರೆ ಸಾಮಾಜಿಕ ಭದ್ರತೆಗಳನ್ನು ನೀಡಲೇಬೇಕು. ಸರ್ಕಾರಗಳು ನೌಕರರನ್ನು ಸದಾ ಆತಂಕದ ಸ್ಥಿತಿಯಲ್ಲೇ ಇಟ್ಟುಕೊಳ್ಳಬಾರದು. ಅಂಚೆ ಇಲಾಖೆಯ ಮಾಜಿ…
ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿ ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ, ತನ್ನ ಅಪಾರ ಯಶಸ್ಸಿನ ನಡುವೆಯೂ ಅತ್ಯಂತ ಶ್ಲಾಘನೀಯ ಮಾನವೀಯ ಹೆಜ್ಜೆಯೊಂದನ್ನು ಇಟ್ಟಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದ ಭೀಕರ ದುರಂತದಲ್ಲಿ ಪ್ರಾಣ ಕಳೆದುಕೊಂಡ 11 ಜನ ನಿಷ್ಠಾವಂತ ಅಭಿಮಾನಿಗಳಿಗೆ ಈ ಬಾರಿಯ ಐಪಿಎಲ್ ಟ್ರೋಫಿಯನ್ನು ಅರ್ಪಿಸುವುದಾಗಿ ಆರ್ಸಿಬಿ ನಾಯಕ ರಜತ್ ಪಾಟೀದಾರ್ ಅತ್ಯಂತ ಭಾವುಕರಾಗಿ ಪ್ರಕಟಿಸಿದ್ದಾರೆ. ಫೈನಲ್ ಪಂದ್ಯ ಮುಗಿದ ಬಳಿಕ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕ್ಯಾಪ್ಟನ್ ಪಾಟೀದಾರ್, ಮಡಿದ ಅಭಿಮಾನಿಗಳನ್ನು ನೆನೆದು ಕಣ್ಣೀರು ಹಾಕಿದರು. “ಪಂದ್ಯ ಗೆದ್ದ ಸಂಭ್ರಮದ ಬೆನ್ನಲ್ಲೇ ನಮ್ಮನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅಭಿಮಾನಿಗಳನ್ನು ಕಳೆದುಕೊಳ್ಳುವುದು ಮನಸ್ಸಿಗೆ ಭರಿಸಲಾಗದ ನೋವು ತರುತ್ತದೆ. ಅವರು ಕೇವಲ ಪಂದ್ಯ ವೀಕ್ಷಿಸುವ ವೀಕ್ಷಕರಲ್ಲ, ಬದಲಾಗಿ ನಮ್ಮ ಆರ್ಸಿಬಿ ಕುಟುಂಬದ ಅವಿಭಾಜ್ಯ ಸದಸ್ಯರಾಗಿದ್ದರು. ಹೀಗಾಗಿ, ಅತ್ಯಂತ ಗೌರವಪೂರ್ವಕವಾಗಿ ಈ ಐಪಿಎಲ್ ಪ್ರಶಸ್ತಿಯನ್ನು ಅವರಿಗೆ…
ಮುಸ್ಕಾಟಿನ್ (ಅಮೆರಿಕ): ಆಗ್ನೇಯ ಐಯೋವಾದಲ್ಲಿ ಸೋಮವಾರ ನಡೆದ ಭೀಕರ ಗುಂಡಿನ ದಾಳಿಗೆ ಆಕ್ರಮಣಕಾರ ಸೇರಿದಂತೆ ಒಟ್ಟು ಏಳು ಜನರು ಬಲಿಯಾಗಿದ್ದಾರೆ. ಒಂದೇ ಕುಟುಂಬದ ಸದಸ್ಯರ ನಡುವೆ ನಡೆದ ಕೌಟುಂಬಿಕ ಕಲಹವೇ ಈ ರಕ್ತಪಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ ಸುಮಾರು 12:12 ರ ಸುಮಾರಿಗೆ ಮುಸ್ಕಾಟಿನ್ ನಗರದ ವಸತಿ ಪ್ರದೇಶವೊಂದರಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಮತ್ತು ತುರ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದಾಗ, ಮನೆಯ ಒಳಗಡೆ ನಾಲ್ವರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ತೀವ್ರವಾದ ಬುಲೆಟ್ ಗಾಯಗಳಿಂದಾಗಿ ನಾಲ್ಕೂ ಜನ ಸ್ಥಳದಲ್ಲೇ ಸಾವನ್ನಪ್ಪಿದ್ದರು ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಪ್ರಾಥಮಿಕ ತನಿಖೆಯ ನಂತರ, ಪೊಲೀಸರು ಮುಸ್ಕಾಟಿನ್ ನಿವಾಸಿ 52 ವರ್ಷದ ರಯಾನ್ ವಿಲ್ಲಿಸ್ ಮೆಕ್ಫಾರ್ಲ್ಯಾಂಡ್ ಎಂಬಾತನನ್ನು ಶೂಟರ್ ಎಂದು ಗುರುತಿಸಿದ್ದಾರೆ. ಆದರೆ, ಪೊಲೀಸರು ಬರುವಷ್ಟರಲ್ಲೇ ಆತ ಅಲ್ಲಿಂದ ಪರಾರಿಯಾಗಿದ್ದ.ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಮೆಕ್ಫಾರ್ಲ್ಯಾಂಡ್ನನ್ನು…
ಕೊಲ್ಕತ್ತಾ: ದೃಢ ಸಂಕಲ್ಪ ಮತ್ತು ಕಠಿಣ ಪರಿಶ್ರಮವಿದ್ದರೆ ಸಾಮಾನ್ಯ ವ್ಯಕ್ತಿಯೂ ಅಸಾಧಾರಣ ಸಾಧನೆ ಮಾಡಬಹುದು ಎಂಬುದಕ್ಕೆ ಪಶ್ಚಿಮ ಬಂಗಾಳದ ಈ ಘಟನೆ ಸಾಕ್ಷಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವಾರಗಳು ಕಳೆಯುತ್ತಲೇ ಮೊದಲ ಬಾರಿ ಸಚಿವ ಸಂಪುಟವನ್ನು ವಿಸ್ತರಿಸಲಾಗಿದೆ. ಈ ವಿಸ್ತರಣೆಯಲ್ಲಿ ಎಲ್ಲರ ಗಮನ ಸೆಳೆದಿದ್ದು ಮಾತ್ರ ಇತ್ತೀಚೆಗಷ್ಟೇ ಶಾಸಕಿಯಾಗಿ ಆಯ್ಕೆಯಾಗಿದ್ದ ಕಡು ಬಡತನದ ಹಿನ್ನೆಲೆಯ ಕಲಿತಾ ಮಾಝಿ! ಒಂದು ಕಾಲದಲ್ಲಿ ಜೀವನೋಪಾಯಕ್ಕಾಗಿ ಬೇರೆಯವರ ಮನೆಗಳಲ್ಲಿ ಪಾತ್ರೆ ತೊಳೆದು ಬದುಕು ಸಾಗಿಸುತ್ತಿದ್ದ ಇವರು, ಇಂದು ರಾಜ್ಯದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ಸೋಮವಾರ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರಾದ ಆರ್.ಎನ್. ರವಿ ಅವರು ಹೊಸದಾಗಿ ಆಯ್ಕೆಯಾದ 35 ಶಾಸಕರಿಗೆ ಸಚಿವರಾಗಿ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಇದರಲ್ಲಿ ಕೆಲವರಿಗೆ ಕ್ಯಾಬಿನೆಟ್ ದರ್ಜೆ ಸಿಕ್ಕರೆ, ಇನ್ನು ಕೆಲವರಿಗೆ ರಾಜ್ಯ ಸಚಿವ ಸ್ಥಾನ ಒಲಿದಿದೆ. ಈ ಹೊಸ ಸೇರ್ಪಡೆಯೊಂದಿಗೆ ಸುವೇಂದು ಸರ್ಕಾರದ…
ಗದಗ : ಸರ್ಕಾರ ನೀಡುವ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳುವವರ ಮಧ್ಯೆ, ಇಲ್ಲೊಂದು ಮಹಿಳಾ ತಂಡ ವಿಭಿನ್ನವಾಗಿ ಯೋಚಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಮತ್ತು ಹಾಜರಾತಿಯನ್ನು ಹೆಚ್ಚಿಸಬೇಕು ಎಂಬ ಉದಾತ್ತ ಉದ್ದೇಶದಿಂದ ಮಹಿಳೆಯರು ಈ ಅಪೂರ್ವ ಹೆಜ್ಜೆ ಇಟ್ಟಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಕೋತಬಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಿಳಾ ಎಸ್ಡಿಎಂಸಿ (SDMC) ಸದಸ್ಯೆಯರು ತಮಗೆ ಸರ್ಕಾರದಿಂದ ಬರುತ್ತಿದ್ದ ‘ಗೃಹಲಕ್ಷ್ಮಿ’ ಯೋಜನೆಯ ಹಣವನ್ನು ಒಟ್ಟುಗೂಡಿಸಿದ್ದಾರೆ. ಈ ಹಣದಿಂದ ಪ್ರಸಕ್ತ ಸಾಲಿನಲ್ಲಿ ಒಂದನೇ ತರಗತಿಗೆ ಹೊಸದಾಗಿ ದಾಖಲಾದ 40ಕ್ಕೂ ಹೆಚ್ಚು ಮಕ್ಕಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್ ಗಳನ್ನು ಖರೀದಿಸಿಕೊಟ್ಟಿದ್ದಾರೆ. ಸೋಮವಾರ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ, ಈ ಮಹಿಳೆಯರು ತಮ್ಮ ಸ್ವಂತ ಹಣದಿಂದ ತಂದ ಬ್ಯಾಗ್ ಗಳನ್ನು ಮಕ್ಕಳಿಗೆ ಉಡುಗೊರೆಯಾಗಿ ವಿತರಿಸುವ ಮೂಲಕ ಮಕ್ಕಳ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ. ಮಹಿಳೆಯರ ಈ ಸಾಮಾಜಿಕ ಕಳಕಳಿಗೆ ಈಗ ಸಾರ್ವಜನಿಕ…
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗಷ್ಟೇ ಬೀಯರ್ ದರ ಗಣನೀಯವಾಗಿ ಇಳಿಕೆಯಾಗಿದ್ದರಿಂದ ಮದ್ಯಪ್ರಿಯರು ಖುಷಿಯಾಗಿದ್ದರು. ಆದರೆ ಆ ಸಂತಸದ ಬೆನ್ನಲ್ಲೇ ಈಗ ಮತ್ತೊಂದು ಶಾಕ್ ಎದುರಾಗಿದೆ. ಬೆಲೆ ಕಡಿಮೆಯಾದ ಕಾರಣ ಬೀಯರ್ಗೆ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದ್ದು, ಮಾರುಕಟ್ಟೆಯಲ್ಲಿ ಸದ್ಯ ಸ್ಟಾಕ್ ಕೊರತೆ (ಬರ) ಎದುರಾಗಿದೆ. ಗ್ರಾಹಕರು ಕೇಳಿದಷ್ಟು ಬೀಯರ್ ಪೂರೈಸಲು ಮದ್ಯದಂಗಡಿಗಳಿಗೆ ಸಾಧ್ಯವಾಗುತ್ತಿಲ್ಲ. ಏನಿದು ಹೊಸ ತೆರಿಗೆ ನೀತಿ? ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ‘ಆಲ್ಕೋಹಾಲ್ ಇನ್ ಬೇವರೆಜ್’ (AIB) ಎಂಬ ಹೊಸ ತೆರಿಗೆ ಪದ್ಧತಿಯನ್ನು ಜಾರಿಗೆ ತಂದಿದೆ. ಮೇ 11 ರಿಂದ ಜಾರಿಗೆ ಬಂದಿರುವ ಈ ವಿನೂತನ ನಿಯಮದ ಪ್ರಕಾರ, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆಯನ್ನು ನಿಗದಿಪಡಿಸಲಾಗುತ್ತಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಬೀಯರ್ ಮೇಲಿನ ತೆರಿಗೆ ಹೊರೆ ಕಡಿಮೆಯಾಗಿ, ಅದರ ಮಾರಾಟದ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿದಿದೆ. ಬೆಲೆ ಇಳಿದರೂ ಸಿಗುತ್ತಿಲ್ಲ ಹೊಸ ದರದ ಬೀಯರ್! ಹೊಸ ಎಐಬಿ ಪದ್ಧತಿ ಜಾರಿಗೆ ಬಂದು ಸುಮಾರು 20 ದಿನಗಳು ಕಳೆದಿದ್ದರೂ,…
ಟೆಕ್ ಲೋಕದ ದೈತ್ಯ ಸಂಸ್ಥೆ ಗೂಗಲ್, ತಂತ್ರಜ್ಞಾನವನ್ನು ಬಳಸಿ ಆರೋಗ್ಯ ಕ್ಷೇತ್ರದಲ್ಲಿ ಮತ್ತೊಂದು ಕ್ರಾಂತಿಕಾರಿ ಪ್ರಯೋಗಕ್ಕೆ ಮುಂದಾಗಿದೆ. ಡೆಂಗ್ಯೂ, ಚಿಕನ್ ಗುನ್ಯಾ ಮತ್ತು ಜಿಕಾದಂತಹ ಮಾರಣಾಂತಿಕ ಕಾಯಿಲೆಗಳನ್ನು ಹರಡುವ ಸೊಳ್ಳೆಗಳ ಸಂತತಿಯನ್ನು ತಡೆಗಟ್ಟಲು ಗೂಗಲ್ ತನ್ನದೇ ಆದ ‘ಸೊಳ್ಳೆಗಳ ಸೈನ್ಯ’ವನ್ನು ಸಿದ್ಧಪಡಿಸಿದೆ. ಗೂಗಲ್ನ ಅಂಗಸಂಸ್ಥೆಯಾದ ‘ವೆರಿಲಿ’ (Verily), ‘ಡೆಬಗ್ ಪ್ರಾಜೆಕ್ಟ್’ (Debug Project) ಅಡಿಯಲ್ಲಿ ಲಕ್ಷಾಂತರ ಸೊಳ್ಳೆಗಳನ್ನು ಪ್ರಯೋಗಾಲಯದಲ್ಲಿ ಸಿದ್ಧಪಡಿಸುತ್ತಿದೆ. ಇವು ಸಾಮಾನ್ಯ ಸೊಳ್ಳೆಗಳಲ್ಲ; ಇವುಗಳನ್ನು ‘ವೊಲ್ಬಚಿಯಾ’ (Wolbachia) ಎಂಬ ವಿಶೇಷ ಬ್ಯಾಕ್ಟೀರಿಯಾದೊಂದಿಗೆ ಸಂಸ್ಕರಿಸಲಾಗಿದೆ. ವಿಶೇಷ ಸೊಳ್ಳೆಗಳನ್ನು ಪ್ರಕೃತಿಗೆ ಬಿಟ್ಟಾಗ, ಅವು ಕಾಡಿನಲ್ಲಿರುವ ಹೆಣ್ಣು ಸೊಳ್ಳೆಗಳೊಂದಿಗೆ ಮಿಲನ ನಡೆಸುತ್ತವೆ. ಆದರೆ, ಈ ಪ್ರಕ್ರಿಯೆಯಿಂದ ಜನಿಸುವ ಮೊಟ್ಟೆಗಳು ಮೊಟ್ಟೆಯೊಡೆದು ಮರಿಗಳಾಗುವುದಿಲ್ಲ. ಇದರಿಂದಾಗಿ ಸೊಳ್ಳೆಗಳ ಸಂತಾನೋತ್ಪತ್ತಿ ಪ್ರಕ್ರಿಯೆಯು ನೈಸರ್ಗಿಕವಾಗಿಯೇ ಕುಂಠಿತಗೊಳ್ಳುತ್ತದೆ. ವರದಿಯ ಪ್ರಕಾರ, ಗೂಗಲ್ ಸುಮಾರು 3.2 ಕೋಟಿ (32 Million) ಸೊಳ್ಳೆಗಳನ್ನು ಬಿಡುಗಡೆ ಮಾಡುವ ಮೂಲಕ ನಿರ್ದಿಷ್ಟ ಪ್ರದೇಶಗಳಲ್ಲಿ ಸೊಳ್ಳೆಗಳ ಹಾವಳಿಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿ ಹೊಂದಿದೆ. ಈವರೆಗೆ ಸೊಳ್ಳೆಗಳನ್ನು ನಿಯಂತ್ರಿಸಲು…
ಬೆಂಗಳೂರು : ರಾಜ್ಯ ರಾಜಕಾರಣದ ಸಚಿವ ಸಂಪುಟ ರಚನೆಯ ಕುತೂಹಲ ಈಗ ದೆಹಲಿ ತಲುಪಿದೆ. ನಿನ್ನೆ ಸೋಮವಾರವೇ ನಡೆಯಬೇಕಿದ್ದ ಹೈಕಮಾಂಡ್ನ ಪ್ರಮುಖ ಸಭೆಯು ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರು ತಡವಾಗಿ ರಾಜಧಾನಿ ತಲುಪಿದ ಕಾರಣದಿಂದ ಇವತ್ತು (ಮಂಗಳವಾರ) ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಯಾರಿಗೆ ಒಲಿಯಲಿದೆ ಸಚಿವ ಸ್ಥಾನ? ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರೂ ತಮ್ಮದೇ ಆದ ಬೆಂಬಲಿಗರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಹೈಕಮಾಂಡ್ ಮುಂದೆ ಇಟ್ಟಿದ್ದಾರೆ. ಮೊದಲ ಸುತ್ತಿನಲ್ಲಿ ಈ ಪಟ್ಟಿಗಳ ಬಗ್ಗೆ ಚರ್ಚೆ ನಡೆಸಿ, ಆ ಬಳಿಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಅಂತಿಮ ಸಚಿವರ ಹೆಸರನ್ನು ಫೈನಲ್ ಮಾಡಲಾಗುತ್ತದೆ. ಇವತ್ತೇ ಈ ಕುರಿತು ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದ್ದು, ನಾಳೆಯೇ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಬಹುದು ಎಂದು ಹೇಳಲಾಗುತ್ತಿದೆ. ಸಂಭಾವ್ಯ ಸಚಿವರ ರೇಸ್ನಲ್ಲಿರುವ ಪ್ರಮುಖರು: ಡಾ. ಜಿ. ಪರಮೇಶ್ವರ್ ಸತೀಶ್ ಜಾರಕಿಹೊಳಿ…














