Author: kannadanewsnow57

ಬೆಂಗಳೂರು: ರಾಜ್ಯದ ವಿಕಲಚೇತನರ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹತ್ತಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ಅರ್ಹ ಫಲಾನುಭವಿಗಳು ಈ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಮುಖ ಯೋಜನೆಗಳು ಮತ್ತು ಅವುಗಳ ವಿವರಗಳು ಈ ಕೆಳಗಿನಂತಿವೆ: 1. ಶೈಕ್ಷಣಿಕ ಪ್ರೋತ್ಸಾಹ ಮತ್ತು ವಿದ್ಯಾರ್ಥಿವೇತನ ವಿದ್ಯಾರ್ಥಿವೇತನ: 1ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಗೆ SSP ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುತ್ತಿದೆ. ಇದಕ್ಕೆ ಯಾವುದೇ ಆದಾಯ ಮಿತಿ ಇರುವುದಿಲ್ಲ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಸಾರ್ವತ್ರಿಕ ಪರೀಕ್ಷೆಗಳಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಪ್ರೋತ್ಸಾಹ ಧನ ನೀಡಲಾಗುತ್ತದೆ. ಶುಲ್ಕ ಮರುಪಾವತಿ: ಎಸ್.ಎಸ್.ಎಲ್.ಸಿ ನಂತರದ ಉನ್ನತ, ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ, ಬೋಧನಾ ಶುಲ್ಕ, ಪ್ರಯೋಗಾಲಯ ಹಾಗೂ ಗ್ರಂಥಾಲಯ…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) 2026ನೇ ಸಾಲಿನ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ದರ್ಜೆ-3 (ಮೇಲ್ವಿಚಾರಕೇತರ) ಮತ್ತು ದರ್ಜೆ-4 ರ ನೌಕರರ ಪರಸ್ಪರ/ಸಾಮಾನ್ಯ ವರ್ಗಾವಣೆ ಆದೇಶವನ್ನು (ಪತಿ-ಪತ್ನಿ ಪ್ರಕರಣ, ಶೇಕಡಾ 40 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ ಪ್ರಕರಣಗಳು ಸೇರಿದಂತೆ) ಅಧಿಕೃತ ವೆಬ್‌ಸೈಟ್ ಆದ ksrtc.karnataka.gov.in ನಲ್ಲಿ ಜೂನ್ 04, 2026 ರಂದು ಪ್ರಕಟಿಸಲಾಗಿದೆ. ಈ ವರ್ಗಾವಣೆ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಲು ಜನವರಿ 01, 2026 ರಿಂದ ಫೆಬ್ರವರಿ 28, 2026 ರವರೆಗೆ ಆನ್‌ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿತ್ತು. ಜೂನ್ 8 ಕ್ಕೆ ಬಿಡುಗಡೆ: ಪರಸ್ಪರ ವರ್ಗಾವಣೆಗೊಂಡ ನೌಕರರನ್ನು ಜೂನ್ 08, 2026 ರಂದು ವರ್ಗಾವಣೆಗೊಂಡ ವಿಭಾಗಕ್ಕೆ ಪ್ರಭಾವಕಾರಿಯಾಗಿ ಬಿಡುಗಡೆಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜೂನ್ 11 ರಿಂದ ಆನ್‌ ಲೈನ್ ಕೌನ್ಸೆಲಿಂಗ್: ಸಾಮಾನ್ಯ ವರ್ಗಾವಣೆಗೊಂಡ ನೌಕರರಿಗೆ ಕೌನ್ಸೆಲಿಂಗ್…

Read More

ಬೆಂಗಳೂರು: ಗ್ರಾಮೀಣ ಭಾಗದ ಜನರಲ್ಲಿ ಪಾರದರ್ಶಕತೆ ಮತ್ತು ಆಡಳಿತದ ಮೇಲಿನ ನಂಬಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಇನ್ಮುಂದೆ ಸಾರ್ವಜನಿಕರು ತಮ್ಮ ಗ್ರಾಮ ಪಂಚಾಯಿತಿಯಿಂದ ಒಟ್ಟು 30 ಪ್ರಮುಖ ಅಧಿಕೃತ ಮಾಹಿತಿಗಳನ್ನು ಪಡೆದುಕೊಳ್ಳಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ಗ್ರಾಮ ಪಂಚಾಯಿತಿಯಿಂದ ಈ ಕೆಳಕಂಡ ಮಾಹಿತಿಗಳನ್ನು ಸಾರ್ವಜನಿಕರಿಗೆ ಒದಗಿಸಬಹುದಾಗಿದೆ. 1. ಗ್ರಾಮ ಪಂಚಾಯಿತಿಗೆ ಬಿಡುಗಡೆಯಾದ ಅನುದಾನದ ವಿವರಗಳು. 2. ಗ್ರಾಮ ಪಂಚಾಯತ್ ವೆಚ್ಚ 3. ಗ್ರಾಮ ಪಂಚಾಯತಿ ಡಿ.ಸಿ.ಬಿ. ತಪ್ತ ವಿವರಗಳು (ಬೇಡಿಕೆ, ವಸೂಲಿ ಮತ್ತು ಬಾಕಿ) 4. ಮನೆ ಖಾತೆ ಉದ್ರತ ಭಾಗ, ಡಿಮ್ಯಾಂಡ್ ಉದೃತ ಭಾಗ, ಲೈಸೆನ್ಸ್, ಮ್ಯೂಟೇಶನ್ ಇತ್ಯಾದಿ ಪತ್ರಗಳು 5. ಗ್ರಾಮ ಪಂಚಾಯತಿ ಜಮಾ ಮತ್ತು ಖರ್ಚಿನ ವಿವರಗಳು (ನಮೂನೆ-9ರಲ್ಲಿ) 6. ಗ್ರಾಮ ಪಂಚಾಯತಿ ಸಾಮಾನ್ಯ ಸಭೆ ಹಾಗೂ ಸ್ಥಾಯಿ ಸಮಿತಿಗಳ ನಡವಳಿಗಳು 7. ಗ್ರಾಮ ಪಂಚಾಯತಿ ಸಭಾ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮಗಳು 8. ಗ್ರಾಮ ಸಭೆ ನಡವಳಿಗಳ ಮೇಲೆ ತೆಗೆದುಕೊಂಡ ಕ್ರಮಗಳು 9.…

Read More

ಬೆಂಗಳೂರು: ನಿಮ್ಮ ವಾಹನದ ಮೇಲೆ ಹಳೇ ಟ್ರಾಫಿಕ್ ಫೈನ್ ಬಾಕಿ ಉಳಿದಿದೆಯೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ! ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ರಾಜ್ಯ ಸರ್ಕಾರವು ಮತ್ತೊಮ್ಮೆ ಸುವರ್ಣಾವಕಾಶ ನೀಡಿದ್ದು, ಬರೋಬ್ಬರಿ ಶೇಕಡಾ 50 ರಷ್ಟು ರಿಯಾಯಿತಿ ಘೋಷಿಸಿ ಗುರುವಾರ ಅಧಿಕೃತ ಆದೇಶ ಹೊರಡಿಸಿದೆ. ದಂಡ ಕಟ್ಟಲು ಇಲ್ಲಿದೆ ಕೊನೆಯ ದಿನಾಂಕ! ಈ ರಿಯಾಯಿತಿ ಸೌಲಭ್ಯವು ಸೀಮಿತ ಅವಧಿಗೆ ಮಾತ್ರ ಲಭ್ಯವಿರಲಿದೆ. ಜೂನ್ 21 ರಿಂದ ಜುಲೈ 10 ರವರೆಗೆ ವಾಹನ ಸವಾರರು ಅರ್ಧ ಬೆಲೆಯಲ್ಲಿ ತಮ್ಮ ಬಾಕಿ ದಂಡವನ್ನು ಕಟ್ಟಿ ನಿರಾಳರಾಗಬಹುದು. ಯಾವೆಲ್ಲಾ ಪ್ರಕರಣಗಳಿಗೆ ಅನ್ವಯ? ಪೊಲೀಸ್ ಇಲಾಖೆ: 2026ರ ಮೇ ತಿಂಗಳಿಗಿಂತ ಮುಂಚಿತವಾಗಿ ದಾಖಲಾಗಿರುವ ಸಂಚಾರ ಇ-ಚಲನ್ ಪ್ರಕರಣಗಳ ಬಾಕಿ ದಂಡಕ್ಕೆ ಈ 50% ರಿಯಾಯಿತಿ ಸಿಗಲಿದೆ. ಸಾರಿಗೆ ಇಲಾಖೆ: 1991 ರಿಂದ 2022ರ ಒಳಗಿನ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳಿಗೂ ಈ ಆಫರ್ ಅನ್ವಯವಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ದಂಡ ಪಾವತಿಸುವುದು ಹೇಗೆ?…

Read More

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಆಡಳಿತಕ್ಕೆ ಹೊಸ ಸ್ಪರ್ಶ ನೀಡಲು ಹಾಗೂ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ದೇಶದಲ್ಲೇ ಮೊದಲ ಬಾರಿಗೆ ಎರಡು ಹೊಸ ಸಚಿವಾಲಯಗಳನ್ನು ಸ್ಥಾಪಿಸಲು ಮುಂದಾಗಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ವಿಧಾನಸೌಧದಲ್ಲಿ ಉನ್ನತಾಧಿಕಾರಿಗಳ ಮಹತ್ವದ ಸಭೆ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್ ಅವರು ಈ ಕ್ರಾಂತಿಕಾರಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು, ಸಾರ್ವಜನಿಕರಿಂದ ಬರುವ ಅರ್ಜಿಗಳು, ವಿಚಾರಧಾರೆಗಳು ಮತ್ತು ಸಮಸ್ಯೆಗಳನ್ನು ಆಲಿಸಿ ಬಗೆಹರಿಸಲೆಂದೇ ವಿಶೇಷವಾಗಿ ಒಂದು ಪ್ರತ್ಯೇಕ ಸಚಿವಾಲಯವನ್ನು ಆರಂಭಿಸಲಾಗುತ್ತಿದೆ. ಇದಕ್ಕೆ ಒಬ್ಬರು ಪ್ರತ್ಯೇಕ ಸಚಿವರನ್ನೂ ನೇಮಿಸಲಾಗುವುದು. ಇಂತಹದ್ದೊಂದು ವಿಶಿಷ್ಟ ಪ್ರಯತ್ನ ಇಡೀ ದೇಶದಲ್ಲೇ ಮೊಟ್ಟಮೊದಲನೆಯದಾಗಿದೆ. ಅನಿವಾಸಿ ಭಾರತೀಯರಿಗಾಗಿ (NRI) ಪ್ರತ್ಯೇಕ ಸಚಿವಾಲಯ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ತಾಯ್ನಾಡಿನೊಂದಿಗೆ ಬೆಸೆಯಲು ಮತ್ತು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಬಯಸುವ ಎನ್‌ಆರ್‌ಐಗಳಿಗೆ (NRI) ನೆರವಾಗಲು ಮತ್ತೊಂದು ಪ್ರತ್ಯೇಕ ಸಚಿವಾಲಯವನ್ನು…

Read More

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿಕೆ ಶಿವಕುಮಾರ್ ವಿದ್ಯಾರ್ಥಿ ಸಮುದಾಯಕ್ಕೆ ಮಹತ್ವದ ಉಡುಗೊರೆಯೊಂದನ್ನು ಘೋಷಿಸಿದ್ದಾರೆ. ರಾಜ್ಯದ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸುವುದಾಗಿ ಅವರು ಪ್ರಕಟಿಸಿದ್ದಾರೆ. ಈ ಘೋಷಣೆಯಿಂದ ಸಾವಿರಾರು ವಿದ್ಯಾರ್ಥಿಗಳ ಸಾರಿಗೆ ವೆಚ್ಚ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ ಸಿಗುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳಿಗೆ ಬಸ್ ಪಾಸ್ ಉಚಿತವಾಗಿ ದೊರೆಯಲಿದ್ದರೂ, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಿರುವಂತೆಯೇ ಮುಂದುವರಿಯಲಿದೆ. ಹಿಂದಿನ ನಿಯಮಗಳ ಪ್ರಕಾರವೇ ಅರ್ಜಿ ಸಲ್ಲಿಸಬೇಕಾಗುತ್ತದೆ. ವ್ಯತ್ಯಾಸವೆಂದರೆ ಪಾಸ್ ಪಡೆಯಲು ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸಬೇಕಾಗುವುದಿಲ್ಲ. ಉಚಿತ ಬಸ್ ಪಾಸ್‌ ಗೆ ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಕೆಳಗಿನ ಮಾರ್ಗಗಳಲ್ಲಿ ಸಲ್ಲಿಸಲು ಅವಕಾಶವಿದೆ: * ಸೈಬರ್ ಸೆಂಟರ್‌ಗಳ ಮೂಲಕ * ಬೆಂಗಳೂರು ಒನ್ ಕೇಂದ್ರಗಳಲ್ಲಿ * ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಸ್ವತಃ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ನಿಗದಿತ ಸೇವಾ…

Read More

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಾರ್ವಜನಿಕರಿಗೆ ಭರ್ಜರಿ ಸೌಲತ್ತೊಂದನ್ನು ಘೋಷಿಸಿದ್ದಾರೆ. ಬುಧವಾರ ನಡೆದ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ, ಸಣ್ಣ ನಿವೇಶನದಾರರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. 2,500 ಚದರ ಅಡಿವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಕಡ್ಡಾಯವಾಗಿದ್ದ ‘ಸ್ವಾಧೀನಾನುಭವ ಪ್ರಮಾಣ ಪತ್ರ’ (Occupancy Certificate – OC) ನಿಯಮದಿಂದ ಒಂದು ಬಾರಿಗೆ ವಿನಾಯಿತಿ ನೀಡಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ: ಈ ಸೌಲಭ್ಯವು ಎಲ್ಲರಿಗೂ ಅನ್ವಯಿಸುವುದಿಲ್ಲ. 2,500 ಅಡಿ ನಿವೇಶನಗಳಲ್ಲಿ ಮನೆ ನಿರ್ಮಿಸಿ, ವಿದ್ಯುತ್ ಸಂಪರ್ಕಕ್ಕಾಗಿ 2026ರ ಮೇ 31ರ ಒಳಗಾಗಿ ಅರ್ಜಿ ಸಲ್ಲಿಸುವ ಗ್ರಾಹಕರಿಗೆ ಮಾತ್ರ ಈ ‘ಒಂದು ಬಾರಿಯ ವಿನಾಯಿತಿ’ ಸಿಗಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಗಮನಿಸಿ: ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವ ಸಾರ್ವಜನಿಕರು ಸ್ವಾಧೀನಾನುಭವ ಪ್ರಮಾಣ…

Read More

ನವದೆಹಲಿ: ಭಾರತದ ವಾರ್ಷಿಕ ಮಳೆಗಾಲದ ಆರಂಭವನ್ನು ಸಾರುವ ನೈಋತ್ಯ ಮುಂಗಾರು (Southwest Monsoon) ಇಂದು ಕೇರಳವನ್ನು ಅಧಿಕೃತವಾಗಿ ಪ್ರವೇಶಿಸಿದೆ. ದಕ್ಷಿಣ ಭಾರತದ ಜೊತೆಗೆ, ದೇಶದ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ (NCR) ಇಂದು ಮಳೆಯಾಗುವ ಸಾಧ್ಯತೆಯಿದ್ದು, ತೀವ್ರ ಬಿಸಿಲಿನಿಂದ ಕಂಗಾಲಾಗಿದ್ದ ಜನರಿಗೆ ಭಾರಿ ನಿರಾಳತೆ ಸಿಗುವ ನಿರೀಕ್ಷೆಯಿದೆ. ಭಾರತದ ಕೃಷಿ ವಲಯದ ಜೀವನಾಡಿಯಾಗಿರುವ ಮುಂಗಾರು ಮಳೆಯ ಆರಂಭವು ದೇಶದ ಪ್ರಮುಖ ಹವಾಮಾನ ವಿದ್ಯಮಾನಗಳಲ್ಲಿ ಒಂದಾಗಿದೆ. ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಸ್ಥಿರವಾಗಿ ಮುನ್ನಡೆದ ನಂತರ, ಮುಂಗಾರು ಈಗ ಕೇರಳವನ್ನು ತಲುಪಿದೆ. ಮುಂಬರುವ ದಿನಗಳಲ್ಲಿ ಇದು ದಕ್ಷಿಣ ಭಾರತದ ಇತರ ಭಾಗಗಳಿಗೂ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬೆಳವಣಿಗೆಯಿಂದಾಗಿ ಕೇರಳ ಮತ್ತು ಅದರ ನೆರೆಯ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಪ್ರೀ-ಮೂನ್ಸೂನ್ (ಮುಂಗಾರು ಪೂರ್ವ) ತಾಪಮಾನದಿಂದ ಕರಾವಳಿ ಹಾಗೂ ದಕ್ಷಿಣ ಭಾರತದ ಜನರಿಗೆ ದೊಡ್ಡ ಮಟ್ಟದ ಉಪಶಮನ ಸಿಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ…

Read More

ಬೆಂಗಳೂರು:9 ತಿಂಗಳ (39 ವಾರಗಳ) ಪೂರ್ಣ ಗರ್ಭಿಣಿಯಾಗಿರುವ ಬೆಂಗಳೂರಿನ ಮಹಿಳೆಯೊಬ್ಬರು ಅತ್ಯಂತ ಕಠಿಣವಾದ ಯೋಗಾಸನಗಳನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಮಹಿಳೆ ಪ್ರದರ್ಶಿಸಿದ ದೈಹಿಕ ಶಕ್ತಿ ಮತ್ತು ಶಿಸ್ತನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ. ವೃತ್ತಿಯಲ್ಲಿ ಯೋಗ ಶಿಕ್ಷಕಿಯಾಗಿರುವ ಶಶಿ ಪ್ರಭಾ ದ್ವಿವೇದಿ ಎಂಬುವವರೇ ಈ ವಿಡಿಯೋ ಹಂಚಿಕೊಂಡ ಮಹಿಳೆ. ಅವರು ಸೀರೆ ಉಟ್ಟುಕೊಂಡು ಗರ್ಭಾವಸ್ಥೆಯ ಅಂತಿಮ ಹಂತದಲ್ಲಿ ‘ಚಕ್ರಾಸ್ನ’ ಸೇರಿದಂತೆ ಹಲವು ಕಠಿಣ ಯೋಗಾಸನಗಳನ್ನು ಸುಲಭವಾಗಿ ಮಾಡುತ್ತಿರುವುದು ವಿಡಿಯೋದಲ್ಲಿದೆ. ಈ ವಿಡಿಯೋ ಈಗಾಗಲೇ 2.1 ಕೋಟಿಗೂ (21 Million) ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಇದು ನನ್ನ ವರ್ಷಗಳ ಪರಿಶ್ರಮ” – ಶಶಿ ಪ್ರಭಾ ಸ್ಪಷ್ಟನೆ ವಿಡಿಯೋದ ಶೀರ್ಷಿಕೆಯಲ್ಲಿ ಶಶಿ ಪ್ರಭಾ ಅವರು, ತಾವು ಮಾಡುತ್ತಿರುವ ಯೋಗಾಸನಗಳು ವರ್ಷಗಳ ತರಬೇತಿಯ ಫಲವೇ ಹೊರತು, ಇದನ್ನು ಇತರರು ಅನುಕರಿಸಲು ನೀಡುತ್ತಿರುವ ಸಲಹೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 39 ವಾರಗಳು, 9 ತಿಂಗಳು. ಇದು ನನ್ನ ವಾಸ್ತವ. ಜನ ಕೇವಲ ಆಸನಗಳನ್ನು…

Read More

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ. ಈ ಬೆನ್ನಲ್ಲೇ ತಮಗೆ ಇಷ್ಟು ದೊಡ್ಡ ಜವಾಬ್ದಾರಿ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ನಾಯಕರಿಗೆ ಬಿ.ಕೆ.ಹರಿಪ್ರಸಾದ್ ಅವರು ಧನ್ಯವಾದ ಸಮರ್ಪಿಸಿದ್ದಾರೆ. ತಮ್ಮ ನೇಮಕಾತಿ ಕುರಿತು ಪ್ರತಿಕ್ರಿಯಿಸಿರುವ ಅವರು, “ನನ್ನ ಮೇಲೆ ಪ್ರೀತಿ, ವಿಶ್ವಾಸ ಹಾಗೂ ನಂಬಿಕೆ ಇಟ್ಟು ಈ ಮಹತ್ತರ ಜವಾಬ್ದಾರಿ ವಹಿಸಿದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನನ್ನ ಅಚ್ಚುಮೆಚ್ಚಿನ ನಾಯಕಿ ಶ್ರೀಮತಿ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಪ್ರಿಯಾಂಕಾ ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದಿದ್ದಾರೆ. ಇದು ಕೇವಲ ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ! “ಕಾಂಗ್ರೆಸ್ ಹೈಕಮಾಂಡ್‌ನ ಈ ನಿರ್ಧಾರವು ಕೇವಲ ಒಬ್ಬ ವ್ಯಕ್ತಿಗೆ ನೀಡಿರುವ ಹುದ್ದೆಯಲ್ಲ. ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತಗಳಾದ ಸಾಮಾಜಿಕ ನ್ಯಾಯ, ಜಾತ್ಯತೀತತೆ,…

Read More