Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ, ಮೊಬೈಲ್ ಬಳಕೆ ನಿಯಂತ್ರಿಸುವ ಉದ್ದೇಶದಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಅಭಿಯಾನವನ್ನು ಅನುಷ್ಠಾನಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿಯನ್ನು ವ್ಯವಸ್ಥಿತವಾಗಿ ಬೆಳೆಸಿ, ಕ್ರಿಯಾಶೀಲ, ವಿವೇಚನೆಯುಕ್ತ ಹಾಗೂ ಉನ್ನತ ಚಿಂತನಾ ಸಾಮರ್ಥ್ಯವನ್ನು ಹೊಂದಿರುವ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವುದು ಶಿಕ್ಷಣ ಇಲಾಖೆಯ ಪ್ರಮುಖ ಉದ್ದೇಶವಾಗಿರುತ್ತದೆ. ಓದುವಿಕೆಯು ವಿದ್ಯಾರ್ಥಿಗಳ ಬೌದ್ಧಿಕ ವಿಕಾಸ, ಮೌಲ್ಯಾಧಾರಿತ ಚಿಂತನೆ, ಆಲೋಚನಾ ಸಾಮರ್ಥ್ಯ ಹಾಗೂ ಜೀವನ ಕೌಶಲ್ಯಗಳ ಸಮಗ್ರ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ಗಳು ಹಾಗೂ ಇತರೆ ಡಿಜಿಟಲ್ ಸಾಧನಗಳ ಅತಿಯಾದ ಹಾಗೂ ಅನಿಯಂತ್ರಿತ ಬಳಕೆಯಿಂದಾಗಿ ಓದುವಿಕೆಯಲ್ಲಿ ಗಣನೀಯ ಕುಸಿತ ಉಂಟಾಗುತ್ತಿರುವುದು, ಕಲಿಕಾ ಆಸಕ್ತಿ ಗಂಭೀರವಾಗಿ ಕುಂಠಿತವಾಗುತ್ತಿರುವುದು, ಏಕಾಗ್ರತೆಯಲ್ಲಿ ಹಿನ್ನಡೆಯಾಗಿರುವುದು, ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳು ಉಂಟಾಗುತ್ತಿರುವುದು ಹಾಗೂ ಶೈಕ್ಷಣಿಕ ಸಾಧನೆಗೆ ಸ್ಪಷ್ಟ ಅಡ್ಡಿಯುಂಟಾಗುತ್ತಿರುವುದನ್ನು ಗಮನಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯನ್ನು ನಿಯಂತ್ರಿಸಿ, ಓದುವ ಅಭ್ಯಾಸವನ್ನು…
ಬೆಂಗಳೂರು: ರಾಜ್ಯದ 108 ಆರೋಗ್ಯ ಕವಚ ಸೇವೆಯಡಿಯಲ್ಲಿ ನೇಮಕಗೊಳ್ಳಲಿರುವ ಇಎಂಟಿ ಮತ್ತು ಪೈಲೆಟ್ ಗಳಿಗೆ ಮೂಲ ವೇತನವನ್ನು ಚಾಲ್ತಿಯಲ್ಲಿರುವ ಕನಿಷ್ಠ ವೇತನ ದರದಲ್ಲಿ ಹಾಗೂ ಹಿಂದಿನ ಸೇವಾ ಅನುಭವಗಾಗಿ ಅನುಭವ ಬೋನಸ್ ಅನ್ನು ಹಾಗೂ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಧನವನ್ನು ನೀಡೋದಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದು, ಆಯವ್ಯಯ ಭಾಷಣ ಕಂಡಿಕೆಯಲ್ಲಿ ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವ ಮೂಲಕ ‘ಆರೋಗ್ಯ ಕವಚ’ ಸೇವೆಯನ್ನು ಬಲಪಡಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ ಎಂದಿದ್ದಾರೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯನ್ನು ಅನುಷ್ಠಾನಗೊಳಿಸಲು ರಾಜ್ಯದಲ್ಲಿ 108-ಆರೋಗ್ಯ ಕವಚ ಸೇವೆಯನ್ನು ಒಡಂಬಡಿಕೆಯ ಪಾಲುದಾರರಾದ GVK-EMRI ಸಂಸ್ಥೆ (ಪ್ರಸ್ತುತ EMRI GHS) ಸಂಸ್ಥೆಯಿಂದ ಹಿಂಪಡೆದು, ಈ ಸೇವೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲು…
ನವದೆಹಲಿ : ಪ್ಯಾಕ್ ಮಾಡಿದ ಆಹಾರದ ಮೇಲೆ ‘ಎಚ್ಚರಿಕೆ ಲೇಬರ್’ ಇರಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಈ ಪರಿಣಾಮಕ್ಕಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಗೆ ಆದೇಶಿಸಿದೆ. ಸಾರ್ವಜನಿಕ ಆರೋಗ್ಯದೊಂದಿಗೆ ಆಟವಾಡಬಾರದು ಮತ್ತು ಯಾವುದೇ ಸಂದರ್ಭಗಳಲ್ಲಿ ಈ ವಿಷಯದಲ್ಲಿ ರಾಜಿಗೆ ಅವಕಾಶವಿಲ್ಲ ಎಂದು ಅದು ಹೇಳಿದೆ. ‘3 S ಮತ್ತು ನಮ್ಮ ಆರೋಗ್ಯ ಸಮಾಜ’ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರ ಪೀಠವು ವಿಚಾರಣೆ ನಡೆಸಿತು. ಪ್ಯಾಕೆಟ್ಗಳ ಮೇಲೆ ಸಕ್ಕರೆ, ಸೋಡಿಯಂ ಮತ್ತು ಕೊಬ್ಬಿನ ಪ್ರಮಾಣದ ಬಗ್ಗೆ ದಪ್ಪ ಅಕ್ಷರಗಳಲ್ಲಿ ಎಚ್ಚರಿಕೆಗಳಿದ್ದರೆ ಮಾತ್ರ ಜನರನ್ನು ಎಚ್ಚರಿಸಲಾಗುತ್ತದೆ ಎಂದು ಅರ್ಜಿದಾರರ ವಕೀಲರು ವಾದಿಸಿದರು. ಈ ವಿಷಯದ ಬಗ್ಗೆ FSSAI ಸಲ್ಲಿಸಿದ ಅಫಿಡವಿಟ್ ಬಗ್ಗೆ ಪೀಠವು ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಅರ್ಜಿದಾರರ ವಾದಗಳೊಂದಿಗೆ ಸಮ್ಮತಿಸುತ್ತಾ … ಚರ್ಚೆಗಳು ಮತ್ತು ಸಭೆಗಳಲ್ಲಿ ಸಮಯ ವ್ಯರ್ಥ ಮಾಡದಂತೆ ಅದು FSSA ಗೆ ಎಚ್ಚರಿಕೆ ನೀಡಿತು.…
ಬೆಂಗಳೂರು : ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆ ಹಾಗೂ ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೃತಕ ಬುದ್ದಿಮತ್ತೆ (ಎಐ) ಆಧಾರಿತ ಮುಖ ಗುರುತಿನ ಹಾಜರಾತಿ ವ್ಯವಸ್ಥೆಯನ್ನು 2026-27ನೇ ಸಾಲಿನ ಆರಂಭದಿಂದಲೇ ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆಗೆ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ. ಶಿಕ್ಷಕರ ಡಿಜಿಟಲ್ ಹಾಜರಾತಿಗೆ ಈಗಾಗಲೇ ಆದೇಶ ಮಾಡಲಾಗಿದ್ದು, ಅದನ್ನು ಸಮರ್ಪ ಕವಾಗಿ ಈ ಸಾಲಿನಿಂದಲೇ ಜಾರಿಗೊಳಿಸಬೇಕು.ಬರುವ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳಿಗೂ ಎಐ ಆಧಾರಿತ ಡಿಜಿಟಲ್ ಹಾಜರಾತಿ ಪ್ರಕ್ರಿಯೆ ಅನುಷ್ಠಾನಗೊಳಿಸಬೇಕೆಂದು ಸೂಚಿಸಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮಾಂಕ (1)ರಲ್ಲಿ, 2025-26ನೇ ಸಾಲಿನಲ್ಲಿ ಸರ್ಕಾರವು ಮಂಡಿಸಿರುವ ಆಯವ್ಯಯ ಘೋಷಣೆಯ ಕಂಡಿಕೆ-112ರಲ್ಲಿ ಈ ಕೆಳಕಂಡಂತೆ ಘೋಷಣೆ ಮಾಡಲಾಗಿದೆ. “ನಿರಂತರ’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.” ಮೇಲೆ ಓದಲಾದ ಕ್ರಮಾಂಕ (2) ರಲ್ಲಿ, ‘ನಿರಂತರ’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲು ಲೆಕ್ಕ ಶೀರ್ಷಿಕೆ 4202-01-201-1-04-…
ಬೆಂಗಳೂರು : ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕೋ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ ಪೊಲೀಸರು ದೂರು ಅರ್ಜಿ, ಪ್ರಥಮ ವರ್ತಮಾನ ವರದಿ ಮತ್ತು ತನಿಖಾ ವರದಿಗಳಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು ಮತ್ತು ವಿಳಾಸಗಳ ಗೌಪತ್ಯೆಯನ್ನು ಕಾಪಾಡುವುದು ಕಡ್ಡಾಯವಾಗಿದೆ. ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕೋ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ ದೂರು ಅರ್ಜಿ, ಪ್ರಥಮ ವರ್ತಮಾನ ವರದಿ ಮತ್ತು ತನಿಖಾ ವರದಿಗಳಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು ಮತ್ತು ವಿಳಾಸಗಳ ಗೌಪತ್ಯೆಯನ್ನು ಕಾಪಾಡುವ ಸಂಬಂಧ ಉಲ್ಲೇಖಿ-(1)ರ ಮಾನ್ಯ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ಪಾಲಿಸುವಂತೆ ಆದೇಶಿಸಲಾಗಿರುತ್ತದೆ. ಅದರಂತೆ ನ್ಯಾಯಾಲಯದ ಆದೇಶದಂತೆ ಮಹಿಳೆ ಮತ್ತು ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳಾದ ಅತ್ಯಾಚಾರ ಮತ್ತು ಪೋಕೋ ಪ್ರಕರಣಗಳಲ್ಲಿ ನೊಂದ ಮಹಿಳೆ ಅಥವಾ ಅಪ್ರಾಪ್ತರ ಹೆಸರು, ಗುರುತು ಮತ್ತು ವಿಳಾಸವನ್ನು ಪೊಲೀಸ್ ಠಾಣಾಧಿಕಾರಿಗಳು ಸಾರ್ವಜನಿಕಗೊಳಿಸದಂತೆ ಗೌಪ್ಯತೆ ಕಾಪಾಡಿಕೊಳ್ಳುವಂತೆ ಈ ಕಛೇರಿಯಿಂದ ಉಲ್ಲೇಖಿತ-2ರ…
ಬೆಂಗಳೂರು ಪೂರ್ವನಗರ ಪಾಲಿಕೆ ಕೆ.ಆರ್.ಪುರ ವಲಯ ವ್ಯಾಪ್ತಿಯಲ್ಲಿ ನಗರ ಪಾಲಿಕೆಗೆ ಒಂದಕ್ಕಿಂತಲೂ ಹೆಚ್ಚಿನ ವರ್ಷಗಳ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ಸ್ವತ್ತುಗಳ ಹರಾಜಿನ ಮೂಲಕ ಬಾಕಿ ಆಸ್ತಿ ತೆರಿಗೆ ವಸೂಲಾತಿಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಕೆ.ಆರ್ ಪುರ ವಲಯ ದ ಜಂಟಿ ಆಯುಕ್ತರಾದ ಡಾ. ಸುಧಾ ರವರು ತಿಳಿಸಿದರು. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2025ರ ಅಡಿಯಲ್ಲಿ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ತರಹದ ಸ್ವತ್ತುಗಳ ಮಾಲೀಕರು ಅಥವಾ ಅಧಿಭೋಗದಾರರ ಪ್ರತಿವರ್ಷ ಆಸ್ತಿತೆರಿಗೆ ಪಾವತಿಸುವುದು ಕಡ್ಡಾಯವಾಗಿರುತ್ತದೆ. ಒಂದಕ್ಕಿಂತಲೂ ಹೆಚ್ಚಿನ ಸಾಲಿನ ಆಸ್ತಿತರಿಗೆ ಪಾವತಿಸದೇ ಇರುವ ಪ್ರಕರಣಗಳಲ್ಲಿ ಆಸ್ತಿತೆರಿಗೆ ವಸೂಲಿ ಮಾಡುವ ಕಾರ್ಯವಿಧಾನವನ್ನು ಆಸ್ತಿತೆರಿಗೆ ನಿರ್ಧರಣೆ, ವಸೂಲಾತಿ ಮತ್ತು ನಿರ್ವಹಣೆ ನಿಯಮಗಳು 2024ರ ಅಡಿಯಲ್ಲಿ ರೂಪಿಸಲಾಗಿರುತ್ತದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಹಾಗೂ ನಿಯಮಗಳಲ್ಲಿ ತಿಳಿಸಿರುವಂತೆ ಆಸ್ತಿ ತೆರಿಗೆ ಸುಸ್ಥಿದಾರರಿಗೆ ಕಾರಣ ಕೇಳಿ ಪತ್ರ, ಆಸ್ತಿ ತೆರಿಗೆ ಬೇಡಿಕೆ ಪತ್ರ ಜಾರಿ ಮಾಡಲಾಗಿದ್ದು, ಸಾಕಷ್ಟು ಕಾಲಾವಕಾಶವನ್ನು ನೀಡಿದ್ದರೂ ಆಸ್ತಿ…
ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India), ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ತನ್ನ ಶಾಖೆಗಳಲ್ಲಿ 2,273 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಇವುಗಳಲ್ಲಿ 2,050 ನಿಯಮಿತ ಹುದ್ದೆಗಳು ಮತ್ತು 223 ಬ್ಯಾಕ್ಲಾಗ್ ಹುದ್ದೆಗಳು. ಈಗಾಗಲೇ ಪ್ರಾರಂಭವಾಗಿರುವ ಅರ್ಜಿ ಪ್ರಕ್ರಿಯೆಯನ್ನು ಮತ್ತಷ್ಟು ವಿಸ್ತರಿಸುವ ಅಧಿಸೂಚನೆಯನ್ನು ಬ್ಯಾಂಕ್ ಇತ್ತೀಚೆಗೆ ಹೊರಡಿಸಿದೆ. ದಿನಾಂಕಗಳು: ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 29 ಜನವರಿ 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಫೆಬ್ರವರಿ 2026 ಪರೀಕ್ಷೆ ನಡೆಯುವ ಅಂದಾಜು ಸಮಯ: ಮಾರ್ಚ್ 2026 ಅರ್ಹತೆ ಸಿಬಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪದವಿ ಅಥವಾ ಇಂಟಿಗ್ರೇಟೆಡ್ ಡ್ಯುಯಲ್ ಡಿಗ್ರಿ (ಐಡಿಡಿ) ನಂತಹ ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ವೈದ್ಯಕೀಯ, ಎಂಜಿನಿಯರಿಂಗ್, ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್…
ಧಾರವಾಡ : ಧಾರವಾಡದಲ್ಲಿ ಮದುವೆಯಾಗಿ ಮಗು ಇದ್ರೂ ಯುವಕರೊಂದಿಗೆ ಮಹಿಳೆಯೊಬ್ಬಳು ಡೇಟಿಂಗ್ ಮಾಡಿ ವಂಚಿಸಿರುವ ಘಟನೆ ನಡೆದಿದೆ. ಹೌದು, ಮಹಿಳೆಯೊಬ್ಬರು ಮೂರು ಮೂರು ಹೆಸರು ಇಟ್ಟುಕೊಂಡು ಯುವಕರೊಂದಿಗೆ ಚಾಟಿಂಗ್ ಮಾಡಿ ಲಕ್ಷಾಂತರ ರೂ. ವಂಚಿಸಿರುವ ಆರೋಪ ಕೇಳಿಬಂದಿದೆ. ಐಶ್ವರ್ಯಾ, ರೇಣುಕಾ, ಆರೋಹಿ ಹೆಸರಿನಲ್ಲಿ ವಂಚನೆ ಮಾಡಿದ್ದಾರೆ. ಮದುವೆ ಆಗೋದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಿದ್ದಾರೆ. ಧಾರವಾಡದಲ್ಲಿ ಗುರು ಎಂಬಾತನಿಂದ 7 ಲಕ್ಷ ರೂ. ಪಡೆದಿದ್ದು. ಮದುವೆ ಆಗದೇ ಐಶ್ವರ್ಯ ಕಳ್ಳಾಟ ಆಡುತ್ತಿದ್ದು, ಮನನೊಂದ ಯುವಕ ಗುರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಯುವಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಂಚಕಿಯ ಜಾಲ ಬಗೆದಷ್ಟು ಬಯಲಾಗುತ್ತಿದೆ.
2026 ರಿಂದ ಪ್ರಾರಂಭವಾಗುವ ಹೊಸ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಯೋಜನೆಯ ಅರ್ಹತಾ ನಿಯಮಗಳ ಕುರಿತು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಅಧಿಕೃತ ಸ್ಪಷ್ಟೀಕರಣವನ್ನು ಹೊರಡಿಸಿದೆ. ವೈಯಕ್ತಿಕ, ವೈದ್ಯಕೀಯ ಅಥವಾ ಇತರ ಕಾರಣಗಳಿಂದ ಮೊದಲ ಪರೀಕ್ಷೆಯನ್ನು ತೆಗೆದುಕೊಳ್ಳಲು ಸಾಧ್ಯವಾಗದವರು ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಹಲವಾರು ಪ್ರಶ್ನೆಗಳು ಮತ್ತು ಎರಡನೇ ಬೋರ್ಡ್ ಪರೀಕ್ಷೆಯನ್ನು ಹೇಗೆ ತೆಗೆದುಕೊಳ್ಳಬೇಕೆಂಬುದರ ಕುರಿತು ಮಾರ್ಗದರ್ಶನಕ್ಕಾಗಿ ವಿನಂತಿಗಳ ನಂತರ ಈ ಸ್ಪಷ್ಟೀಕರಣ ಬಂದಿದೆ. ಈಗ, ಎಲ್ಲಾ ವಿದ್ಯಾರ್ಥಿಗಳು 10 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ ಮತ್ತು ಮೊದಲ ಪರೀಕ್ಷೆಯಲ್ಲಿ ಮೂರು ಅಥವಾ ಹೆಚ್ಚಿನ ವಿಷಯಗಳನ್ನು ತಪ್ಪಿಸಿಕೊಂಡರೆ ಅವರು ಎರಡನೇ ಪರೀಕ್ಷೆಯನ್ನು ತೆಗೆದುಕೊಳ್ಳಲು ಅನರ್ಹರಾಗುತ್ತಾರೆ ಎಂದು CBSE ಸ್ಪಷ್ಟಪಡಿಸಿದೆ. ಮೊದಲ ಪರೀಕ್ಷೆಯಲ್ಲಿ ಹಾಜರಾತಿ ಕಡ್ಡಾಯವಾಗಿದೆ ಮಂಡಳಿಯ ಅಧಿಕೃತ ಸೂಚನೆಯ ಪ್ರಕಾರ, ಎಲ್ಲಾ ವಿದ್ಯಾರ್ಥಿಗಳು 10 ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಹಾಜರಾಗಬೇಕು. ಮೂರು ಅಥವಾ ಹೆಚ್ಚಿನ ವಿಷಯಗಳನ್ನು ತಪ್ಪಿಸಿಕೊಂಡ ವಿದ್ಯಾರ್ಥಿಗಳಿಗೆ ಎರಡನೇ ಪರೀಕ್ಷೆಯನ್ನು ತೆಗೆದುಕೊಳ್ಳಲು…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ ಐವರು ಕೆಎಎಸ್ (KAS) ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.














