Author: kannadanewsnow57

ಬೆಂಗಳೂರು : ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ವಸತಿ ಮತ್ತು ವಾಣಿಜ್ಯ ಭೂ ಪರಿವರ್ತಿತ ಜಮೀನುಗಳ ಏಕನಿವೇಶನ ವಿನ್ಯಾಸಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗಿ Farm House/ಭೂ ಪರಿವರ್ತಿತ ಜಮೀನಿನಲ್ಲಿ ಏಕನಿವೇಶನ ವಿನ್ಯಾಸಗಳಲ್ಲಿ ಕಟ್ಟಡ ನಿರ್ಮಿಸಲು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಸಾರ್ವಜನಿಕ ರಸ್ತೆಯ ಸಂಪರ್ಕವನ್ನು ಕಡ್ಡಾಯಗೊಳಿಸಲಾಗುತ್ತಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಪರಿಶೀಲಿಸಲಾಗಿರುತ್ತದೆ. ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ, ಸಕ್ಷಮಪ್ರಾಧಿಕಾರಗಳು ನಿಯಮಾನುಸಾರ ಕ್ರಮ ಜರುಗಿಸಿ ತಾಂತ್ರಿಕ ಅನುಮೋದನೆಗಳನ್ನು ನೀಡಲು ಸರ್ಕಾರದಿಂದ ಸ್ಪಷ್ಟ ನಿರ್ದೇಶನವನ್ನು ನೀಡುವ ಅಗತ್ಯವಿರುವುದನ್ನು ಗಮನಿಸಲಾಗಿರುತ್ತದೆ. ಹಾಗಾಗಿ, ರಾಜ್ಯಾದ್ಯಂತ ಏಕರೂಪದ ಕ್ರಮ ಜರುಗಿಸುವ ಅಗತ್ಯವಿದ್ದು, ವಸತಿ ಮತ್ತು ವಸತಿಯೇತರ ಭೂ ಪರಿವರ್ತಿತ ಜಮೀನುಗಳಲ್ಲಿ ಏಕನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಸಂದರ್ಭದಲ್ಲಿ ಹಾಗೂ farm house ಗಳಿಗೆ ಅನುಮತಿ ನೀಡುವ ಪ್ರಸ್ತಾವನೆಗಳಲ್ಲಿ ಸಾರ್ವಜನಿಕ ರಸ್ತೆಯ ಸಂಪರ್ಕದ ಕುರಿತು ಕೆಳಕಂಡಂತೆ ಪರಿಶೀಲಿಸಿ ತಾಂತ್ರಿಕ…

Read More

ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪ್ರಕ್ರಿಯೆಗಳ ಬಗ್ಗೆ ಉಲ್ಲೇಖ (1) ರಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ. ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಡಿ ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕು ಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಉಲ್ಲೇಖ (2) ರಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸದರಿ ಸಭೆಯ…

Read More

ಬೆಂಗಳೂರು : ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ ಇತ್ಯಾದಿಗಳ ಅಧಿಕಾರಿ/ ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದು ಉಪಯೋಗಿಸಿದ್ರೆ ದಂಡ ವಿಧಿಸಲಾಗುತ್ತದೆ. ಹೌದು, ಈ ಬಗ್ಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಕೆಲವು ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ ವಿಶ್ವ ವಿದ್ಯಾಲಯ/ಸಂಸ್ಥೆಯ ಅಧಿಕಾರಿ / ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದುಕೊಂಡು, ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದು ಒಬ್ಬ ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆಯಾಗಿರುತ್ತದೆ. ಬಿ.ಪಿ.ಎಲ್. ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ. ಒಬ್ಬ ಸರ್ಕಾರಿ ಅಧಿಕಾರಿ/ನೌಕರ ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನರೇಖೆಗಿಂತ ಕೆಳಗೆ ಬರುವುದಿಲ್ಲ. ಆದುದರಿಂದ, ಒಂದು ವೇಳೆ ಯಾವುದೇ ಸರ್ಕಾರಿ/ ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವ ವಿದ್ಯಾಲಯ/ಸಂಸ್ಥೆಯ ಅಧಿಕಾರಿ/ನೌಕರ ಅಥವಾ ಆತನ/ಆಕೆಯ ಅವಲಂಬಿತ…

Read More

ಬೆಂಗಳೂರು : ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿನ ಸೋರಿಕೆಯನ್ನು ತಡೆಯಲು ‘ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ಸ್’ ಎಂಬ ಮೊಬೈಲ್ ಅಪ್ಲಿಕೇಶನ್ ವ್ಯವಸ್ಥೆಯನ್ನು ಪರಿಚಯಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಗ್ರಾಹಕರಿಗೆ ಪಡಿತರ ವಿತರಿಸುವಾಗ ತೂಕದಲ್ಲಿ ಮೋಸವಾಗುವುದನ್ನು ತಡೆಯಲು ಕೇಂದ್ರ ಸರಕಾರದ ಸೂಚನೆ ಮೇರೆಗೆ ತೂಕದ ಯಂತ್ರವನ್ನು ಬಯೋಮೆಟ್ರಿಕ್‌ಗೆ ಸಂಯೋಜಿಸಲು ನಿರ್ಧರಿಸಲಾಗಿದೆ. ಇದರಿಂದ ತೂಕದಲ್ಲಿ ವ್ಯತ್ಯಾಸವಾದರೆ ಗ್ರಾಹಕರಿಗೆ ಗೊತ್ತಾಗಲಿದೆ. ಮೊಬೈಲ್ ಅಪ್ಲಿಕೇಶನ್, ಸರಕಾರದ ಕೇಂದ್ರೀಕೃತ ದತ್ತಾಂಶದೊಂದಿಗೆ ಸಂಪರ್ಕ ಹೊಂದಿರುತ್ತದೆ. ಈ ಕೇಂದ್ರೀಕೃತ ವ್ಯವಸ್ಥೆಯಿಂದ ಫಲಾನುಭವಿಗಳು ರಾಜ್ಯದ ಯಾವುದೇ ಪ್ರದೇಶದಲ್ಲಿ ಪಡಿತರ ಪಡೆಯುವುದನ್ನು ಖಚಿತಪಡಿಸುತ್ತದೆ. ಹೀಗಾಗಿ ಕರ್ನಾಟಕದಲ್ಲಿ ಅಳವಡಿಸಲು ತೀರ್ಮಾನಿಸಲಾಗಿದ್ದು, ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಅನುಕೂಲವಾಗುವಂತೆ ಸರಕಾರ ಹೊಸ ಮೊಬೈಲ್ ಅಪ್ಲಿಕೇಶನ್ ಪರಿಚಯಿಸಲು ಮುಂದಾಗಿದೆ.

Read More

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿವಿ ಹೀಗೆ 8 ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 25ರವರೆಗೆ ವಿಸ್ತರಣೆ ಮಾಡಲಾಗಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಪ್ರಾಧಿಕಾರದಿಂದ ದಿನಾಂಕ 15.11.2025 ರಂದು ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕದ ವಿವಿಧ ಸರ್ಕಾರಿ ಇಲಾಖೆ/ಸಂಸ್ಥೆ/ನಿಗಮದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿಗಳನ್ನು ಆಹ್ವಾನಿಸಿ, ದಿನಾಂಕ 08.10.2025 ಮತ್ತು 31.10.2025 ರಂದು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅಧಿಸೂಚನೆಗಳನ್ನು ಹೊರಡಿಸಲಾಗಿತ್ತು ಮತ್ತು ದಿನಾಂಕ 31.10.2025 ರಂದು ಪ್ರತ್ಯೇಕ ಪ್ರಕಟಣೆ ಹೊರಡಿಸಿ ಅರ್ಜಿ ಸಲ್ಲಿಸಲು ದಿನಾಂಕವನ್ನು 14.11.2025ರ ವರೆಗೆ ಹಾಗೂ…

Read More

ಆಸ್ತಿ ಮಾಲೀಕರು 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಮತ್ತು ಇತರೆ ತೆರಿಗೆಗಳನ್ನು ಎಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಪಾವತಿಸಿ ಶೇ.05 ರಷ್ಟು ರಿಯಾಯಿತಿಯನ್ನು ಪಡೆಯಲು ಮತ್ತು https:/davangerecitycorp.org     ಲಿಂಕ್ನ್ನು ಆನ್ಲೈನ್ ಮೂಲಕ ಯು.ಪಿ.ಐ ಉಪಯೋಗಿಸಿಕೊಂಡು ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.  ಆಸ್ತಿ ಮಾಲೀಕರು ಈವರೆಗೂ ತೆರಿಗೆಗಳನ್ನು ಪಾವತಿಸದಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಕಂದಾಯ ವಿಭಾಗದ ಅಧಿಕಾರಿಗಳು ಸರ್ಕಾರದ ಸುತ್ತೋಲೆ ಕರ್ನಾಟಕ ಮುನ್ಸಿಪಲ್ ಕಾರ್ಪೆರೇಷನ ತೆರಿಗೆ (ತಿದ್ದುಪಡಿ) ನಿಯಮಗಳು 2025 ರಂತೆ ತೆರಿಗೆಗಳನ್ನು ಬಾಕಿ ಉಳಿಸಿಕೊಂಡಿರುವ ಸ್ವತ್ತಿನ ಮಾಲೀಕರುಗಳಿಗೆ ಡಿಮ್ಯಾಂಡ್ ನೋಟಿಸ್ನ್ನು ನೀಡಲಾಗುತ್ತದೆ. ಡಿಮ್ಯಾಂಡ್ ನೋಟಿಸ್ಗೆ   ಅನುಗುಣವಾಗಿ 30 ದಿನಗಳಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಬಾಕಿ ಮೊತ್ತ ಪಾವತಿ ಮಾಡದಿದ್ದರೆ ಆಸ್ತಿಯನ್ನು ಮಹಾನಗರಪಾಲಿಕೆಯೊಂದಿಗೆ ಲಿಂಕ್ ಮಾಡಲಾಗುತ್ತದೆ. ಆಗ ಆಸ್ತಿ ಮಾಲೀಕರು ತಮ್ಮ ಆಸ್ತಿ ಮಾರಾಟ ಮಾಡುವುದು ಹಾಗೂ ವರ್ಗಾವಣೆ ಮಾಡುವುದಕ್ಕೆ ಕಷ್ಟವಾಗುವುದು.. ಆದ್ದರಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಾಲೀಕರು ತೆರಿಗೆಗಳನ್ನು ಪಾವತಿಸಿ ನಗರದ ಸರ್ವತೋಮುಖ…

Read More

ವಿಷಕಾರಿ ಕೆಮ್ಮಿನ ಸಿರಪ್ ನಂತರ ಔಷಧಿಗಳ ಗುಣಮಟ್ಟ ಮತ್ತೊಮ್ಮೆ ಗಂಭೀರ ಪರಿಶೀಲನೆಗೆ ಒಳಪಟ್ಟಿದೆ. ಮಾರುಕಟ್ಟೆಯಲ್ಲಿ ಮಾರಾಟವಾಗುವ ಹಲವಾರು ಆಯುರ್ವೇದ ಔಷಧಿಗಳು ಪ್ರಶ್ನಾರ್ಹ ಗುಣಮಟ್ಟದ್ದಾಗಿರುವುದು ಕಂಡುಬಂದಿದೆ. ಇದರ ನಂತರ, ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದು, ಈ ಔಷಧಿಗಳ ಮಾರಾಟ, ಸಂಗ್ರಹಣೆ ಮತ್ತು ವಿತರಣೆಯನ್ನು ತಕ್ಷಣವೇ ನಿಷೇಧಿಸಿದೆ. ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯ ಬಿಚುವಾ ಪ್ರದೇಶದಲ್ಲಿ 5 ತಿಂಗಳ ಬಾಲಕಿಯ ಅನುಮಾನಾಸ್ಪದ ಸಾವಿನ ನಂತರ ಈ ತನಿಖೆ ನಡೆದಿದೆ. ಏಳು ಆಯುರ್ವೇದ ಔಷಧಿಗಳು ಕಳಪೆ ಗುಣಮಟ್ಟದ್ದಾಗಿರುವುದು ಕಂಡುಬಂದಿದೆ. ಜಿಲ್ಲಾ ಆಯುರ್ವೇದ ಅಧಿಕಾರಿ ಹೊರಡಿಸಿದ ಆದೇಶದಲ್ಲಿ ಈ ಔಷಧಿಗಳು NSQ (ಪ್ರಮಾಣಿತ ಗುಣಮಟ್ಟವಲ್ಲ) ಎಂದು ಕಂಡುಬಂದಿದೆ ಮತ್ತು ಆದ್ದರಿಂದ, ಅವುಗಳ ಬಳಕೆ ಸಾಮಾನ್ಯ ಜನರಿಗೆ ಅಪಾಯಕಾರಿ ಎಂದು ಹೇಳಲಾಗಿದೆ. ಇದರ ನಂತರ, ಆಯುಷ್ ಇಲಾಖೆಯು ತಕ್ಷಣವೇ ಈ ಔಷಧಿಗಳ ಬಳಕೆಯನ್ನು ನಿಷೇಧಿಸಿದೆ. ಈ ಕಂಪನಿಗಳ ಔಷಧಿಗಳನ್ನು ನಿಷೇಧಿಸಲಾಗಿದೆ ಅಸುರಕ್ಷಿತವೆಂದು ಕಂಡುಬಂದ ಔಷಧಿಗಳ ಕಂಪನಿಗಳು ಯುನಿಟ್-II ಶ್ರೀ ಧನ್ವಂತ್ರಿ ಹರ್ಬಲ್ಸ್, ಸೋಲನ್ (HP), ಡಾಬರ್ ಇಂಡಿಯಾ ಲಿಮಿಟೆಡ್,…

Read More

ಪಾಟ್ನಾ : ಬಿಹಾರದ ಪಾಟ್ನಾದಲ್ಲಿ ಪೊಲೀಸ ಸಿಬ್ಬಂದಿಯಿಂದ ಅಮಾನವೀಯ ಕೃತ್ಯ ನಡೆದಿದ್ದು, ಗರ್ಭಿಣಿ ಮಹಿಳೆಗೆ ಸ್ಕೂಟಿಯಿಂದ ಡಿಕ್ಕಿ ಹೊಡೆದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೆರೈನ್ ಡ್ರೈವ್ನಲ್ಲಿ ಚಲನ್ಗೆ ಸಂಬಂಧಿಸಿದಂತೆ ಪರಿಸ್ಥಿತಿ ವಿಕೋಪಕ್ಕೆ ಹೋದಾಗ, ಒಬ್ಬ ಪೊಲೀಸ್ ತನ್ನ ಸ್ಕೂಟರ್ ಅನ್ನು ಗರ್ಭಿಣಿ ಮಹಿಳೆಯ ಮೇಲೆ ಹರಿಸಲು ಪ್ರಯತ್ನಿಸಿದನು. ತಾನು ಗರ್ಭಿಣಿಯಾಗಿರುವುದರಿಂದ ಹೀಗೆ ಮಾಡಬೇಡಿ ಎಂದು ಮಹಿಳೆ ಬೇಡಿಕೊಂಡಳು, ಆದರೆ ಪೊಲೀಸ್ ಸಿಬ್ಬಂದಿ ನಿರಾಕರಿಸಿದ್ದಾರೆ. ಸಿಬ್ಬಂದಿ ಸ್ಕೂಟರ್ ಅನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗುವುದನ್ನು ಮುಂದುವರಿಸಿದ್ದಾರೆ. ಮಹಿಳೆ ತನ್ನೊಂದಿಗೆ ಬರಲು ಕೇಳಿದಳು, ಆದರೆ ಪೊಲೀಸ್ ಸಿಬ್ಬಂದಿ ನಿರಾಕರಿಸಿದ್ದಾರೆ. ಮಹಿಳೆ ಸ್ಕೂಟರ್ ನಿಲ್ಲಿಸಲು ಪ್ರಯತ್ನಿಸಿದಾಗ, ಪೊಲೀಸ್ ಆಕೆಯ ಮೇಲೆ ಹರಿಸಿದ್ದು,  ಮಹಿಳೆಗೆ ಕೆಲವು ಗಾಯಗಳಾಗಿವೆ. ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಹೈ-ವೋಲ್ಟೇಜ್ ನಾಟಕದ ನಂತರ, ಮಹಿಳೆ ಪೊಲೀಸ್ ಠಾಣೆಗೆ ತಲುಪಿದಳು. ಆಕೆಯ ಪತಿಯೂ ಅಲ್ಲಿಗೆ ತಲುಪಿದಳು. ತಪ್ಪು ಪುನರಾವರ್ತಿಸುವುದಿಲ್ಲ ಎಂದು ಭರವಸೆ ನೀಡಿದ ನಂತರ, ಪೊಲೀಸರು…

Read More

ನವದೆಹಲಿ : 2026 ರ ಪರೀಕ್ಷೆಗಳಿಗೆ ಸಂಬಂಧಿಸಿದಂತೆ CBSE ಮಂಡಳಿಯು ಪ್ರಮುಖ ನವೀಕರಣವನ್ನು ಹೊರಡಿಸಿದೆ. 10 ಮತ್ತು 12 ನೇ ತರಗತಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳು, ಯೋಜನೆಗಳು ಮತ್ತು ಆಂತರಿಕ ಮೌಲ್ಯಮಾಪನಗಳ ದಿನಾಂಕಗಳನ್ನು ಘೋಷಿಸಲಾಗಿದೆ. ಮಂಡಳಿಯು ಹೊಸ ಮತ್ತು ವಿವರವಾದ ಮೌಲ್ಯಮಾಪನ ರಚನೆಯನ್ನು ಸಹ ಬಿಡುಗಡೆ ಮಾಡಿದೆ, ವಿದ್ಯಾರ್ಥಿಗಳು ಮತ್ತು ಶಾಲೆಗಳು ಪ್ರತಿ ವಿಷಯದಲ್ಲಿ ಅಂಕಗಳನ್ನು ಹೇಗೆ ನೀಡಲಾಗುತ್ತದೆ ಮತ್ತು ಯಾವ ಬದಲಾವಣೆಗಳನ್ನು ಮಾಡಲಾಗಿದೆ ಎಂಬುದನ್ನು ಮುಂಚಿತವಾಗಿ ತಿಳಿದುಕೊಳ್ಳಲು ಅನುವು ಮಾಡಿಕೊಡುತ್ತದೆ. ಈ ಹೊಸ ಮಾರ್ಗಸೂಚಿಗಳು ಶಾಲೆಗಳು ಪರೀಕ್ಷೆಗಳ ಸಮಯದಲ್ಲಿ ಯಾವುದೇ ಗೊಂದಲ ಅಥವಾ ವಿಳಂಬವನ್ನು ತಪ್ಪಿಸಲು ಸಮಯಕ್ಕೆ ಸರಿಯಾಗಿ ತಯಾರಿ ಮಾಡಲು ಸಹಾಯ ಮಾಡುತ್ತದೆ ಎಂದು ಮಂಡಳಿ ಹೇಳುತ್ತದೆ. ಜನವರಿ 1 ರಿಂದ ಪ್ರಾಯೋಗಿಕ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಫೆಬ್ರವರಿ 14 ರವರೆಗೆ ಪೂರ್ಣ ಮೌಲ್ಯಮಾಪನ ಮುಂದುವರಿಯಲಿದೆ. CBSE ಯ ಅಧಿಕೃತ ವೆಬ್ಸೈಟ್ನಲ್ಲಿ ಹೊರಡಿಸಲಾದ ಸುತ್ತೋಲೆಯ ಪ್ರಕಾರ, ಜನವರಿ 1, 2026 ರಿಂದ ಫೆಬ್ರವರಿ 14, 2026 ರವರೆಗೆ ಎಲ್ಲಾ ಶಾಲೆಗಳಲ್ಲಿ ಪ್ರಾಯೋಗಿಕ…

Read More

ಬೆಂಗಳೂರು : ಸಾರ್ವಜನಿಕರೇ ನೀವು ದೂರವಾಣಿ ಮೂಲಕ ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವರನ್ನ ಸಂಪರ್ಕಿಸಬೇಕಾ..? ಹಾಗಿದ್ರೆ ಇಲ್ಲಿದೆ ಸಿಎಂ, ಡಿಸಿಎಂ ಹಾಗೂ ಎಲ್ಲಾ ಸಚಿವರುಗಳ ದೂರವಾಣಿ ಸಂಖ್ಯೆ ಪಟ್ಟಿ. ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರ ದೂರವಾಣಿ ಸಂಖ್ಯೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದೂರವಾಣಿ ಸಂಖ್ಯೆ ಪಟ್ಟಿ ಹೀಗಿದೆ.

Read More