Subscribe to Updates
Get the latest creative news from FooBar about art, design and business.
Author: kannadanewsnow57
ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆ-ಕಾಲೇಜುಗಳ ವಸತಿ ನಿಲಯಗಳು ಕಡ್ಡಾಯವಾಗಿ ಹೊಸ ನಿಯಮಾವಳಿಗಳಡಿ ನೋಂದಾಯಿಸಿಕೊಳ್ಳಬೇಕು ಮತ್ತು ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ನ ನಜೀರ್ಸಾಬ್ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2 ತಿಂಗಳ ಅವಧಿಯೊಳಗೆ ಎಲ್ಲಾ ವಸತಿ ನಿಲಯಗಳು ‘ಕರ್ನಾಟಕ ಮಕ್ಕಳ ವಸತಿ ನಿಲಯಗಳ ನಿಯಂತ್ರಣ ನಿಯಮಗಳು-2025’ ರ ಅಡಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು. ತಪ್ಪಿದಲ್ಲಿ ಅಂತಹ ಸಂಸ್ಥೆಗಳ ಮಾನ್ಯತೆಯನ್ನು ರದ್ದುಪಡಿಸಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪನ್ನೇಕರ್ ಅವರು ಮಾತನಾಡಿ, ಪ್ರತಿ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ, ಮೇಲ್ವಿಚಾರಣಾ ಸಮಿತಿ ಮತ್ತು ರ್ಯಾಗಿಂಗ್ ತಡೆ ಸಮಿತಿಗಳನ್ನು ರಚಿಸಿ ಪ್ರತಿ ತಿಂಗಳು ಸಭೆ ನಡೆಸಬೇಕು ಎಂದು ಹೇಳಿದರು. ಆಡಳಿತ ಮಂಡಳಿಗಳಲ್ಲಿ ಕನಿಷ್ಠ ಒಬ್ಬ ಮಹಿಳಾ ಸದಸ್ಯರಿರಬೇಕು.…
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಗಳ (SC) ದಶಕಗಳ ಬೇಡಿಕೆಯಾದ ‘ಒಳ ಮೀಸಲಾತಿ’ಯನ್ನು ಜಾರಿಗೊಳಿಸಿ ಕರ್ನಾಟಕ ಸರ್ಕಾರ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಆದೇಶ ಹಾಗೂ ಸಚಿವ ಸಂಪುಟದ ತೀರ್ಮಾನದ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಕ್ರಮ ಕೈಗೊಳ್ಳಲಾಗಿದೆ. ಮೀಸಲಾತಿ ಹಂಚಿಕೆ: ಪರಿಶಿಷ್ಟ ಜಾತಿಗೆ ನಿಗದಿಪಡಿಸಲಾದ ಶೇ. 15ರಷ್ಟು ಮೀಸಲಾತಿಯಲ್ಲಿ ವರ್ಗವಾರು ಹಂಚಿಕೆ ಮಾಡಲಾಗಿದೆ. ಪೃವರ್ಗ-ಎ: ಶೇ. 5.25 ಪೃವರ್ಗ-ಬಿ: ಶೇ. 5.25 ಪೃವರ್ಗ-ಸಿ: ಶೇ. 4.50 ಅತೀ ಹಿಂದುಳಿದವರಿಗೆ ಆದ್ಯತೆ: ಪೃವರ್ಗ ‘ಸಿ’ ಅಡಿಯಲ್ಲಿ ಲಭ್ಯವಿರುವ ಹುದ್ದೆಗಳಲ್ಲಿ ಶೇ. 20ರಷ್ಟು ಸೀಟುಗಳನ್ನು ಪರಿಶಿಷ್ಟ ಜಾತಿಯಲ್ಲಿನ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿರಿಸಲು ನಿರ್ಧರಿಸಲಾಗಿದೆ. ಒಂದು ವೇಳೆ ಈ ಗುಂಪಿನ ಅಭ್ಯರ್ಥಿಗಳು ಲಭ್ಯವಾಗದಿದ್ದರೆ ಮಾತ್ರ ಆ ಹುದ್ದೆಗಳನ್ನು ಪೃವರ್ಗ ‘ಸಿ’ಯ ಇತರ ಜಾತಿಗಳಿಗೆ ನೀಡಲಾಗುವುದು. ಹಳೆಯ ಅಧಿಸೂಚನೆಗಳ ರದ್ದು: ಒಳ ಮೀಸಲಾತಿ ಅಳವಡಿಸದೆ ಈಗಾಗಲೇ ಹೊರಡಿಸಲಾಗಿದ್ದ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಹಿಂಪಡೆಯಲು ಸರ್ಕಾರ ಸೂಚಿಸಿದೆ. ಈಗ ಹೊಸ ಮೀಸಲಾತಿ…
ಕೇಂದ್ರ ಸರ್ಕಾರದ ಸೂಚನೆಯಂತೆ ಮೇ ಹಾಗೂ ಜೂನ್ ಮಾಹೆಗಳ ಎನ್.ಎಫ್.ಎಸ್.ಎ ಅಕ್ಕಿ ದಾಸ್ತಾನನ್ನು ಒಟ್ಟಿಗೆ ಮೇ ಮಾಹೆಯಲ್ಲಿ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಅದರಂತೆ ಪಡಿತರ ಚೀಟಿದಾರರಿಗೆ ಎರಡು ಮಾಹೆಗಳ ಅಕ್ಕಿಯನ್ನು ಒಂದೇ ಬಾರಿಗೆ ಹಂಚಿಕೆ ಮಾಡಲಾಗುವುದು. ಅಂತ್ಯೋದಯ ಕಾರ್ಡು ಹೊಂದಿದ ಪ್ರತಿ ಪಡಿತರ ಚೀಟಿಗೆ ಒಂದು ತಿಂಗಳಿಗೆ 35 ಕೆ.ಜಿ ಯಂತೆ ಒಟ್ಟು 70 ಕೆ.ಜಿ ಅಕ್ಕಿ ಹಾಗೂ ಬಿ.ಪಿ.ಎಲ್ ಕಾರ್ಡು ಹೊಂದಿದ ಪ್ರತಿ ಸದಸ್ಯರಿಗೆ 5 ಕೆ.ಜಿ ಯಂತೆ ಪಡಿತರ ಚೀಟಿಯಲ್ಲಿನ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಪ್ರತಿ ಸದಸ್ಯರಿಗೆ 10 ಕೆ.ಜಿ ಯಂತೆ ಅಕ್ಕಿ ವಿತರಣೆ ಮಾಡಲಾಗುವುದು. ಮೇ ಹಾಗೂ ಜೂನ್ ತಿಂಗಳ ಪಡಿತರವನ್ನು ಒಟ್ಟಿಗೆ ಪಡೆಯುವ ಸಂದರ್ಭದಲ್ಲಿ, ಕಾರ್ಡುದಾರರು ತಾಂತ್ರಿಕ ದಾಖಲೀಕರಣಕ್ಕಾಗಿ ಎರಡು ಬಾರಿ ಬಯೋಮೆಟ್ರಿಕ್ (ಹೆಬ್ಬೆಟ್ಟಿನ ಗುರುತು) ನೀಡುವುದು ಕಡ್ಡಾಯವಾಗಿದೆ. ಎರಡು ಬಾರಿ ಬೆರಳು ಮುದ್ರೆ ನೀಡಿದ ನಂತರವಷ್ಟೇ ಪೂರ್ಣ ಪ್ರಮಾಣದ ಧಾನ್ಯ ಲಭ್ಯವಾಗಲಿದೆ. ಪಡಿತರ ಚೀಟಿದಾರರು ಮೇ ಮಾಹೆಯಲ್ಲಿಯೇ ಎರಡು ತಿಂಗಳ ಅಕ್ಕಿಯನ್ನು ಪಡೆದುಕೊಳ್ಳಬಹುದು ಎಂದು…
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಕೇವಲ ಎಚ್ಚರಿಕೆಯಲ್ಲ, ಅದು ಜೀವನದ ದಿಕ್ಕನ್ನೇ ಬದಲಿಸುವ ಸತ್ಯ ಎಂಬುದು ಅಮೆರಿಕದ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಜೆರೆಮಿ ಲಂಡನ್ ಅವರ ಅನುಭವದ ನುಡಿಗಳಿಂದ ಸಾಬೀತಾಗಿದೆ. ಹೌದು, ಸುಮಾರು 25 ವರ್ಷಗಳ ವೈದ್ಯಕೀಯ ಅನುಭವ ಹೊಂದಿರುವ ಅವರು, ಸತತ 1,500 ದಿನಗಳ ಕಾಲ (ಸುಮಾರು 4 ವರ್ಷ) ಮದ್ಯದಿಂದ ಸಂಪೂರ್ಣ ದೂರವಿದ್ದು, ತಮ್ಮ ಜೀವನದಲ್ಲಿ ಕಂಡುಕೊಂಡ ನಾಲ್ಕು ಪ್ರಮುಖ ಬದಲಾವಣೆಗಳನ್ನು ಜಗತ್ತಿನ ಮುಂದೆ ತೆರೆದಿಟ್ಟಿದ್ದಾರೆ. ಡಾ. ಜೆರೆಮಿ ಲಂಡನ್ ಅವರು ವಿವರಿಸಿದ ಆ 4 ಜೀವನಪಾಠಗಳು ಇಲ್ಲಿವೆ: ಮೆದುಳಿನ ಚುರುಕುತನ ಮತ್ತು ಸ್ಪಷ್ಟತೆ ಮದ್ಯಪಾನ ಬಿಟ್ಟ ನಂತರ ಮೆದುಳಿಗೆ ಕವಿದಿದ್ದ ಮಂಜು (Brain Fog) ಸರಿದಂತಾಗಿ, ಮಾನಸಿಕ ಸ್ಪಷ್ಟತೆ ಲಭಿಸಿದೆ. ಬೆಳಿಗ್ಗೆ ಎದ್ದ ತಕ್ಷಣ ಆಲಸ್ಯವಿಲ್ಲದೆ ಚುರುಕಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳಲು ಮತ್ತು ಏಕಾಗ್ರತೆ ಹೆಚ್ಚಿಸಿಕೊಳ್ಳಲು ಸಾಧ್ಯವಾಯಿತು ಎಂದು ಅವರು ತಿಳಿಸಿದ್ದಾರೆ. ಆತ್ಮವಿಶ್ವಾಸ ಮತ್ತು ಶಿಸ್ತು ಪ್ರತಿದಿನವೂ ಮದ್ಯದಿಂದ ದೂರವಿರುವ ನಿರ್ಧಾರವು ಅವರಲ್ಲಿ ಅಚಲವಾದ ಆತ್ಮವಿಶ್ವಾಸವನ್ನು ಬೆಳೆಸಿದೆ.…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತಿವೇಗ ಮತ್ತು ಅಜಾಗರೂಕ ಚಾಲನೆಯಿಂದಾಗಿ ಹಿಟ್ ಆ್ಯಂಡ್ ರನ್ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿವೆ. ಇಂದು (ಶುಕ್ರವಾರ) ಮುಂಜಾನೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಇಂತಹದ್ದೇ ಒಂದು ಘೋರ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಶ್ರೀನಿವಾಸ್ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ವೇಗವಾಗಿ ಬಂದ ಅಪರಿಚಿತ ವಾಹನವೊಂದು ಅವರಿಗೆ ಬಲವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಶ್ರೀನಿವಾಸ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣವೇ ಮಾನವೀಯತೆ ಮರೆತ ವಾಹನ ಸವಾರ, ಗಾಯಾಳುವಿಗೆ ನೆರವಾಗುವ ಬದಲು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಕಬ್ಬನ್ ಪಾರ್ಕ್ ಸಂಚಾರ ಠಾಣೆಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಕೊಪ್ಪಳ: ಹನುಮನ ಜನ್ಮಸ್ಥಳ ಎಂದೇ ಪ್ರಸಿದ್ಧಿಯಾಗಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟ ಅಪರೂಪದ ಭಕ್ತಿ ಸಮರ್ಪಣೆಗೆ ಸಾಕ್ಷಿಯಾಯಿತು. ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದರೂ ಲೆಕ್ಕಿಸದ ಭಕ್ತರೊಬ್ಬರು, ಬರೋಬ್ಬರಿ 2.5 ಕೋಟಿ ರೂಪಾಯಿ ಮೌಲ್ಯದ ಚಿನ್ನದ ಕಿರೀಟವನ್ನು ಆಂಜನೇಯನಿಗೆ ಅರ್ಪಿಸುವ ಮೂಲಕ ಸುದ್ದಿಯಾಗಿದ್ದಾರೆ. ಉದ್ಯಮಿ ಮಹೇಶ್ ರೆಡ್ಡಿ ಅವರಿಂದ ಚಿನ್ನದ ಕಿರೀಟ, ಗದೆ ಸಮರ್ಪಣೆ ಹೈದರಾಬಾದ್ ಮೂಲದ ಖ್ಯಾತ ಉದ್ಯಮಿ ಹಾಗೂ ಎಎಂಆರ್ (AMR) ಗ್ರೂಪ್ ಅಧ್ಯಕ್ಷರಾದ ಎ. ಮಹೇಶ್ ರೆಡ್ಡಿ ಅವರು ಈ ಭವ್ಯ ಕಾಣಿಕೆಯನ್ನು ನೀಡಿದವರು. ಹನುಮಂತನಿಗೆ ಅತ್ಯಂತ ಕಲಾತ್ಮಕವಾಗಿ ಸಿದ್ಧಪಡಿಸಲಾದ ಚಿನ್ನದ ಕಿರೀಟ, ಪ್ರಭಾವಳಿ ಹಾಗೂ ಗದೆಯನ್ನು ಅವರು ಭಕ್ತಿಯಿಂದ ಸಮರ್ಪಿಸಿದ್ದಾರೆ. ಈ ಹಿಂದೆ ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೆ ಸುಮಾರು 140 ಕೆಜಿ ಬಂಗಾರವನ್ನು ನೀಡಿ ದೇಶದ ಗಮನ ಸೆಳೆದಿದ್ದ ಮಹೇಶ್ ರೆಡ್ಡಿ, ಇದೀಗ ಅಂಜನಾದ್ರಿ ಹನುಮನ ಮೇಲಿನ ತಮ್ಮ ಭಕ್ತಿಯನ್ನು ಈ ಮೂಲಕ ವ್ಯಕ್ತಪಡಿಸಿದ್ದಾರೆ. ವೈಭವದ ಧಾರ್ಮಿಕ ವಿಧಿವಿಧಾನಗಳು ಮೇ 08 ರಂದು…
ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ (WhatsApp) ಮೂಲಕ ಜನರನ್ನು ಬ್ಲ್ಯಾಕ್ಮೇಲ್ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಒಂದು ವೇಳೆ ಯಾರಾದರೂ ನಿಮ್ಮನ್ನು ಡಿಜಿಟಲ್ ರೂಪದಲ್ಲಿ ಪೀಡಿಸುತ್ತಿದ್ದರೆ ಅಥವಾ ಬ್ಲ್ಯಾಕ್ಮೇಲ್ ಮಾಡುತ್ತಿದ್ದರೆ, ಗಾಬರಿಯಾಗುವ ಅಗತ್ಯವಿಲ್ಲ. ಈ ಕೆಳಗಿನ ಕ್ರಮಗಳನ್ನು ಅನುಸರಿಸಿ ನೀವು ರಕ್ಷಣೆ ಪಡೆಯಬಹುದು ಎಂದು ಅಮರ್ ಉಜಾಲಾ ವರದಿ ಮಾಡಿದೆ. 1. ಪ್ರತಿಕ್ರಿಯಿಸಬೇಡಿ ಮತ್ತು ತಕ್ಷಣ ಬ್ಲಾಕ್ ಮಾಡಿ ಯಾರಾದರೂ ನಿಮ್ಮನ್ನು ಬ್ಲ್ಯಾಕ್ಮೇಲ್ ಮಾಡಲು ಪ್ರಯತ್ನಿಸಿದರೆ, ಮೊದಲನೆಯದಾಗಿ ಅವರಿಗೆ ಯಾವುದೇ ಪ್ರತಿಕ್ರಿಯೆ ನೀಡಬೇಡಿ. ಅವರು ಕೇಳುವ ಹಣ ಅಥವಾ ಬೇಡಿಕೆಗಳಿಗೆ ಮಣಿಯಬೇಡಿ. ತಕ್ಷಣವೇ ಆ ವ್ಯಕ್ತಿಯ ನಂಬರ್ ಅನ್ನು ಬ್ಲಾಕ್ ಮಾಡಿ. 2. ಸಾಕ್ಷ್ಯಗಳನ್ನು ಸಂಗ್ರಹಿಸಿ (ಸ್ಕ್ರೀನ್ಶಾಟ್) ನಂಬರ್ ಬ್ಲಾಕ್ ಮಾಡುವ ಮೊದಲು, ಅವರು ಕಳುಹಿಸಿದ ಬೆದರಿಕೆ ಸಂದೇಶಗಳು, ಫೋಟೋಗಳು ಅಥವಾ ವಿಡಿಯೋ ಕರೆಗಳ ಸ್ಕ್ರೀನ್ಶಾಟ್ ತೆಗೆದುಕೊಳ್ಳಿ. ದೂರು ದಾಖಲಿಸುವಾಗ ಇದು ಅತ್ಯಂತ ಪ್ರಮುಖ ಸಾಕ್ಷ್ಯವಾಗಲಿದೆ. 3. ಸಹಾಯವಾಣಿ ಸಂಖ್ಯೆ 1930 ನೀವು ಸೈಬರ್ ಅಪರಾಧಕ್ಕೆ ಒಳಗಾಗಿದ್ದರೆ ತಕ್ಷಣವೇ 1930 ಸಂಖ್ಯೆಗೆ ಕರೆ ಮಾಡಿ…
ಪ್ರೀತಿಸಿ ಮದುವೆಯಾದ ಪತ್ನಿಯ ಮೇಲೆ ಅನುಮಾನದ ಎಂಬ ವಿಷಬೀಜ ಮೊಳೆದಾಗ, ಆ ಸಂಸಾರ ಸ್ಮಶಾನವಾಗುತ್ತದೆ ಎಂಬುದಕ್ಕೆ ಆಂಧ್ರಪ್ರದೇಶದ ಸೂರ್ಯಾಪೇಟೆ ಜಿಲ್ಲೆಯ ಕೋದಾಡದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಎರಡು ವರ್ಷದ ಮಗನಿದ್ದಾನೆ ಎಂಬ ಕರುಣೆಯೂ ಇಲ್ಲದೆ, ಪತಿಯೊಬ್ಬ ತನ್ನ ಪತ್ನಿಯನ್ನೇ ಸಾರ್ವಜನಿಕವಾಗಿ ಹತ್ಯೆ ಮಾಡಿದ್ದಾನೆ. ಕೋದಾಡ ನಿವಾಸಿ ಮಣಿದೀಪ್ ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದಾನೆ. ಆರು ವರ್ಷಗಳ ಹಿಂದೆ ಆಂಧ್ರಪ್ರದೇಶದ ಜಗ್ಗಯ್ಯಪೇಟೆಯ ಶಿರೀಷಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದನು. ಇವರಿಗೆ ಎರಡು ವರ್ಷದ ಮಗನೂ ಇದ್ದಾನೆ. ಕೆಲವು ಸಮಯದಿಂದ ಮಣಿದೀಪ್ ತನ್ನ ಪತ್ನಿಯ ನಡತೆಯ ಮೇಲೆ ಅನುಮಾನ ಪಡಲು ಶುರುಮಾಡಿದ್ದನು. ಇದರಿಂದಾಗಿ ದಂಪತಿಗಳ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಪತಿಯ ಕಿರುಕುಳ ತಾಳಲಾರದೆ ಶಿರೀಷಾ ಈ ಹಿಂದೆ ಪೊಲೀಸರಿಗೂ ದೂರು ನೀಡಿದ್ದರು. ಹಿರಿಯರು ಸಂಧಾನ ಮಾಡಿದರೂ ಮಣಿದೀಪ್ ನಡವಳಿಕೆಯಲ್ಲಿ ಬದಲಾವಣೆ ಇರಲಿಲ್ಲ. ಎರಡು ದಿನಗಳ ಹಿಂದೆ ಮತ್ತೆ ಗಲಾಟೆ ನಡೆದಿದ್ದರಿಂದ, ಶಿರೀಷಾ ತನ್ನ ಮಗನೊಂದಿಗೆ ಹೈದರಾಬಾದ್ನಲ್ಲಿರುವ ಅಕ್ಕನ ಮನೆಗೆ ಹೋಗಿದ್ದರು. ಆದರೆ, ತನ್ನ ಪತ್ನಿ…
ಬೆಂಗಳೂರು: ರಾಜ್ಯದ ಪ್ರವಾಸಿ ತಾಣಗಳಲ್ಲಿ ಶಾಲಾ ಮಕ್ಕಳು ಹಾಗೂ ಪ್ರವಾಸಿ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯು ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಲ್ಲಿ ಮಕ್ಕಳ ರಕ್ಷಣೆಗಾಗಿ ಸಂಸ್ಥೆಯು ಪ್ರಮುಖ 12 ಅಂಶಗಳ ಮಾರ್ಗಸೂಚಿಯನ್ನು ಪಾಲಿಸಲು ಸೂಚಿಸಿದೆ. ಅವುಗಳ ವಿವರ ಇಲ್ಲಿದೆ: ಪ್ರಮುಖ ಮಾರ್ಗಸೂಚಿಗಳು: ಹೆಲ್ಪ್ ಲೈನ್ ಸಂಖ್ಯೆ: ಎಲ್ಲಾ ಪ್ರವಾಸಿ ತಾಣಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಎಚ್ಚರಿಕೆ ಫಲಕಗಳು: ಅಪಾಯಕಾರಿ ಪ್ರದೇಶಗಳಲ್ಲಿ ಸ್ಪಷ್ಟವಾದ ಎಚ್ಚರಿಕೆ ಮತ್ತು ಸೂಚನಾ ಫಲಕಗಳನ್ನು ಅಳವಡಿಸಬೇಕು. ಸಿಬ್ಬಂದಿಗೆ ತರಬೇತಿ: ಪ್ರವಾಸೋದ್ಯಮ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಮಕ್ಕಳ ಹಕ್ಕುಗಳ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು. ಸುರಕ್ಷತಾ ವಲಯ: ಬೀಚ್ ಮತ್ತು ಜಲಪಾತಗಳ ಬಳಿ ಮಕ್ಕಳಿಗಾಗಿ ಪ್ರತ್ಯೇಕ ಸುರಕ್ಷತಾ ವಲಯಗಳನ್ನು ಗುರುತಿಸಬೇಕು. ನಿರ್ಬಂಧಗಳು: ಪ್ರವಾಸಿ ತಾಣಗಳಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.…
ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆಯುವುದು ಇಂದಿನ ಯುವಜನತೆಯ ಬಹುದೊಡ್ಡ ಕನಸು. ಲಕ್ಷಾಂತರ ಅಭ್ಯರ್ಥಿಗಳು ಹಗಲಿರುಳು ಇದಕ್ಕಾಗಿ ಶ್ರಮಿಸುತ್ತಾರೆ. ಆದರೆ, ಅಚಾತುರ್ಯದಿಂದಲೋ ಅಥವಾ ಕಿಡಿಗೇಡಿಗಳ ಸಂಚಿನಿಂದಲೋ ಒಬ್ಬ ಅಭ್ಯರ್ಥಿಯ ಮೇಲೆ ಎಫ್ಐಆರ್ (FIR) ದಾಖಲಾದರೆ, ಅವರ ಸರ್ಕಾರಿ ಕೆಲಸದ ಕನಸು ಭಗ್ನಗೊಳ್ಳುತ್ತದೆಯೇ? ಈ ಕುರಿತು ಕಾನೂನು ಮತ್ತು ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟನೆಗಳು ಇಲ್ಲಿವೆ. 1. ಎಫ್ಐಆರ್ ದಾಖಲಾದ ತಕ್ಷಣ ನೀವು ಅಪರಾಧಿಯಲ್ಲ! ಅನೇಕರಲ್ಲಿ ಒಂದು ತಪ್ಪು ಕಲ್ಪನೆಯಿದೆ – ಎಫ್ಐಆರ್ ದಾಖಲಾದ ಕೂಡಲೇ ಸರ್ಕಾರಿ ಕೆಲಸದ ಹಾದಿ ಮುಚ್ಚಿಹೋಗುತ್ತದೆ ಎಂದು. ಆದರೆ ಕಾನೂನಿನ ಪ್ರಕಾರ, ಎಫ್ಐಆರ್ ಎನ್ನುವುದು ಕೇವಲ ಒಂದು ಆರೋಪದ ಪ್ರಾಥಮಿಕ ದಾಖಲೆ ಮಾತ್ರ. ನ್ಯಾಯಾಲಯದಲ್ಲಿ ಆರೋಪ ಸಾಬೀತಾಗುವವರೆಗೂ ಯಾವುದೇ ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಲಾಗುವುದಿಲ್ಲ. ಹಾಗಾಗಿ, ಕೇವಲ ಎಫ್ಐಆರ್ ಇರುವುದೊಂದೇ ಕಾರಣಕ್ಕೆ ಯಾರನ್ನೂ ಅಯೋಗ್ಯ ಎಂದು ಘೋಷಿಸಲು ಸಾಧ್ಯವಿಲ್ಲ. 2. ಸತ್ಯ ಮರೆಮಾಚುವುದು ದೊಡ್ಡ ಅಪಾಯ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಮೇಲೆ ಇರುವ ಪ್ರಕರಣಗಳ…














