Author: kannadanewsnow57

ಮುಂಬೈ : ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆ ಶಾಕ್ ತಟ್ಟಿದ್ದು, ಸಿಎನ್ ಜಿ ಬೆಲೆಯನ್ನು ಪ್ರತಿ ಕೆಜಿಗೆ 2 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ಗ್ಯಾಸ್ ವಿತರಕ ಸಂಸ್ಥೆಯಾದ ಮಹಾನಗರ್ ಗ್ಯಾಸ್ ಲಿಮಿಟೆಡ್ (MGL) ಈ ಬೆಲೆ ಪರಿಷ್ಕರಣೆ ಮಾಡಿದೆ. ಈ ಇತ್ತೀಚಿನ ಬೆಲೆ ಏರಿಕೆಯ ನಂತರ ಮುಂಬೈ, ಠಾಣೆ, ನವಿ ಮುಂಬೈ ಮತ್ತು ಎಂಎಂಆರ್‌ನ ಇತರ ಭಾಗಗಳಲ್ಲಿ ಸಿಎನ್‌ಜಿ ಬೆಲೆ ಈಗ ಪ್ರತಿ ಕೆಜಿಗೆ ₹86 ಆಗಲಿದೆ. ಇತ್ತೀಚಿನ ವಾರಗಳಲ್ಲಿ ಇದು ಎರಡನೇ ಬಾರಿ ನಡೆದಿರುವ ದರ ಏರಿಕೆಯಾಗಿದ್ದು, ಇದಕ್ಕೂ ಮುನ್ನ ಮೇ 14 ರಂದು ಎಂಜಿಎಲ್ ಸಂಸ್ಥೆಯು ಪ್ರತಿ ಕೆಜಿಗೆ 2 ರೂಪಾಯಿಗಳನ್ನು ಹೆಚ್ಚಿಸಿತ್ತು ಎಂದು ನ್ಯೂಸ್18 ಮರಾಠಿ ವರದಿ ಮಾಡಿದೆ. ಎಲ್ಲೆಲ್ಲಿ ಎಂಜಿಎಲ್ ಸೇವೆ ಇದೆ? ಸದ್ಯ ಮಹಾನಗರ್ ಗ್ಯಾಸ್ ಲಿಮಿಟೆಡ್ (MGL) ಸಂಸ್ಥೆಯು ಮಹಾರಾಷ್ಟ್ರದ ಮುಂಬೈ, ಠಾಣೆ, ನವಿ ಮುಂಬೈ, ಕಲ್ಯಾಣ್, ರಾಯಗಢ, ರತ್ನಗಿರಿ, ಲಾತೂರ್ ಮತ್ತು ಉಸ್ಮಾನಾಬಾದ್ ಸೇರಿದಂತೆ ಕರ್ನಾಟಕದ ಚಿತ್ರದುರ್ಗ ಮತ್ತು…

Read More

ಹಿಂದೂ ಧರ್ಮದಲ್ಲಿ ಪ್ರತಿಯೊಂದು ಸಂಪ್ರದಾಯದ ಹಿಂದೆ ಒಂದು ಬಲವಾದ ಕಾರಣ ಹಾಗೂ ವೈಜ್ಞಾನಿಕ ಹಿನ್ನೆಲೆ ಇರುತ್ತದೆ. ಸಾಮಾನ್ಯವಾಗಿ ನಮ್ಮಲ್ಲಿ ಹೆಣ್ಣುಮಕ್ಕಳು ಮಾತ್ರ ಕಿವಿ ಚುಚ್ಚಿಸಿಕೊಳ್ಳುತ್ತಾರೆ ಎಂಬ ಭಾವನೆ ಇದೆ. ಇದರಿಂದಾಗಿ ‘ಹುಡುಗರು ಕಿವಿ ಚುಚ್ಚಿಸಿಕೊಳ್ಳಬಹುದೇ?’ ಎಂಬ ಸಂದೇಹ ಅನೇಕರಲ್ಲಿ ಮೂಡುವುದು ಸಹಜ. ಆದರೆ, ಭಾರತೀಯ ಸನಾತನ ಸಂಪ್ರದಾಯದ ಪ್ರಕಾರ ಕಿವಿ ಚುಚ್ಚಿಸಿಕೊಳ್ಳುವುದು ಕೇವಲ ಹೆಣ್ಣುಮಕ್ಕಳಿಗೆ ಮಾತ್ರ ಸೀಮಿತವಾಗಿಲ್ಲ. ಹಿಂದೂ ಸಂಸ್ಕೃತಿಯಲ್ಲಿ ಗಂಡುಮಕ್ಕಳಿಗೂ ಇದು ಅತ್ಯಂತ ಪ್ರಮುಖ ಸಂಸ್ಕಾರವಾಗಿದೆ. ಇದನ್ನು “ಕರ್ಣವೇಧ ಸಂಸ್ಕಾರ” ಎಂದು ಕರೆಯಲಾಗುತ್ತದೆ. ಪ್ರಾಚೀನ ಕಾಲದಿಂದಲೂ ಮಕ್ಕಳಿಗೆ ಕಿವಿ ಚುಚ್ಚಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಕೆಲವು ಕುಟುಂಬಗಳಲ್ಲಿ ಬಾಲ್ಯದಲ್ಲೇ ಕಿವಿ ಚುಚ್ಚಿಸಿದರೆ, ಇನ್ನು ಕೆಲವು ಕಡೆ ಉಪನಯನದ (ಮುಂಜಿ) ಸಮಯದಲ್ಲಿ ಈ ಆಚರಣೆಯನ್ನು ಮಾಡಲಾಗುತ್ತದೆ. ಪ್ರಸ್ತುತ ದಿನಗಳಲ್ಲಿ ಫ್ಯಾಷನ್‌ಗಾಗಿಯೂ ಯುವಕರು ಕಿವಿ ಚುಚ್ಚಿಸಿಕೊಳ್ಳುವುದು ಸಾಮಾನ್ಯವಾಗಿದೆ. ಕಿವಿ ಚುಚ್ಚಿಸಿಕೊಳ್ಳುವುದರಿಂದಾಗುವ ಪ್ರಯೋಜನಗಳು: 1. ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ನಂಬಿಕೆಗಳು ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕಿವಿ ಚುಚ್ಚಿಸಿಕೊಳ್ಳುವುದರಿಂದ ಧನಾತ್ಮಕ ಶಕ್ತಿ ಹೆಚ್ಚುತ್ತದೆ. ಜ್ಯೋತಿಷ್ಯ ಶಾಸ್ತ್ರದ…

Read More

ಬೆಂಗಳೂರು: ನೀವು ತಂಬಾಕು ಸೇವನೆ ಕೇವಲ ಶ್ವಾಸಕೋಶಕ್ಕೆ ಮಾತ್ರ ಕಂಟಕ ಅಂದುಕೊಂಡಿದ್ದೀರಾ? ಹಾಗಿದ್ದರೆ ನಿಮ್ಮ ಆಲೋಚನೆ ತಪ್ಪು! ಭಾರತದಲ್ಲಿ ತಂಬಾಕು ಬಳಕೆಯಿಂದಾಗಿ ಹರಡುತ್ತಿರುವ ಕ್ಯಾನ್ಸರ್ ಪ್ರಕರಣಗಳು ಇದೀಗ ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಸಾರ್ವಜನಿಕ ಆರೋಗ್ಯ ತಜ್ಞರಲ್ಲಿ ತೀವ್ರ ಆತಂಕ ಮೂಡಿಸಿದೆ. ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಬೆಂಗಳೂರಿನ ಪ್ರಖ್ಯಾತ ‘ಸಂಪ್ರದ ಹdestination ಆಸ್ಪತ್ರೆ’ಯ ಸ್ಥಾಪಕರು ಹಾಗೂ ಪ್ರಮುಖ ವೈದ್ಯಕೀಯ ನಿರ್ದೇಶಕರಾದ ಡಾ. ರಾಧೇಶ್ಯಾಮ್ ನಾಯಕ್ ಅವರು ಈ ಕುರಿತು ಅತ್ಯಂತ ಕಳವಳಕಾರಿ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಶ್ವಾಸಕೋಶ ಮಾತ್ರವಲ್ಲ.. ದೇಹದ ಇತರೆ ಅಂಗಗಳಿಗೂ ಕುತ್ತು! ಹೆಚ್ಚಿನವರು ತಂಬಾಕಿನಿಂದ ಕೇವಲ ಶ್ವಾಸಕೋಶದ ಕ್ಯಾನ್ಸರ್ ಮಾತ್ರ ಬರುತ್ತದೆ ಎಂದು ಭಾವಿಸುತ್ತಾರೆ. ಆದರೆ, ಡಾ. ರಾಧೇಶ್ಯಾಮ್ ಅವರ ಪ್ರಕಾರ, ಇಂದು ಸುಮಾರು 25 ರಿಂದ 30 ವಿವಿಧ ರೀತಿಯ ಕ್ಯಾನ್ಸರ್‌ಗಳಿಗೆ ತಂಬಾಕೇ ನೇರ ಕಾರಣವಾಗುತ್ತಿದೆ. ತಂಬಾಕು ಸೇವನೆಯಿಂದಾಗಿ ಭಾರತದಲ್ಲಿ ಪ್ರಮುಖವಾಗಿ ಈ ಕೆಳಗಿನ ಅಂಗಗಳ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿವೆ: ಅನ್ನನಾಳ ಮತ್ತು ಹೊಟ್ಟೆಯ ಕ್ಯಾನ್ಸರ್…

Read More

ಉಪನೋಂದಣಾಧಿಕಾರಿಗಳ (Sub-Registrar) ಹುದ್ದೆಯ ಅಧಿಕಾರ ಹಾಗೂ ನಿರ್ವಹಿಸಬೇಕಾದ ಕರ್ತವ್ಯಗಳ ಸಮಗ್ರ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.ಉಪನೋಂದಣಾಧಿಕಾರಿಗಳ ವ್ಯಾಪ್ತಿಗೆ ಬರುವ ಆಡಳಿತಾತ್ಮಕ ಮತ್ತು ನೋಂದಣಿ ಕಾರ್ಯಗಳ ಸಂಪೂರ್ಣ ಪಟ್ಟಿ ಬಿಡುಗಡೆಯಾಗಿದೆ. ವರದಿಯ ಪ್ರಕಾರ, ಉಪನೋಂದಣಾಧಿಕಾರಿಗಳ ಪ್ರಮುಖ ಕರ್ತವ್ಯಗಳನ್ನು ಪ್ರಮುಖವಾಗಿ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ: 1. ಆಡಳಿತಾತ್ಮಕ ಜವಾಬ್ದಾರಿಗಳು: ಕಚೇರಿ ಮೇಲ್ವಿಚಾರಣೆ: ಕಚೇರಿಯ ಆಡಳಿತಾತ್ಮಕ ಉಸ್ತುವಾರಿ, ಸಿಬ್ಬಂದಿಗಳ ನಡವಳಿ ಆದೇಶಗಳು ಹಾಗೂ ದಿನನಿತ್ಯದ ರಾಜಸ್ವವನ್ನು (Revenue) ಸರ್ಕಾರಕ್ಕೆ ಜಮೆ ಮಾಡುವುದು. ವೇತನ ಮತ್ತು ಬಿಲ್ಲುಗಳು: ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರ ವೇತನ ಬಟಾವಾಡೆ, ಕಚೇರಿ ಕಟ್ಟಡ ಹಾಗೂ ವಿದ್ಯುತ್ ಶಕ್ತಿ ಬಿಲ್ಲುಗಳ ಪಾವತಿ ನಿರ್ವಹಣೆ. ಸಿಬ್ಬಂದಿ ನಿರ್ವಹಣೆ: ಕಚೇರಿ ಸಿಬ್ಬಂದಿಯ ರಜೆ ಮಂಜೂರಾತಿ, ಶಿಸ್ತು ಕ್ರಮಕ್ಕೆ ಶಿಫಾರಸು ಹಾಗೂ ಸೇವಾ ವಹಿಗಳನ್ನು (Service Registers) ನಿರ್ವಹಿಸುವುದು. ವರದಿ ಸಲ್ಲಿಕೆ: ಆಸ್ತಿಯ ಹೊಣೆಗಾರಿಕೆ ಪಟ್ಟಿ, ಮಾಸಿಕ ಮತ್ತು ವಾರ್ಷಿಕ ಲೆಕ್ಕ ಪತ್ರಗಳು ಹಾಗೂ ವರಮಾನ ತೆರಿಗೆ ಇಲಾಖೆಗೆ ವಾರ್ಷಿಕ ಮಾಹಿತಿಯನ್ನು ಜಿಲ್ಲಾ ನೋಂದಣಾಧಿಕಾರಿಗಳಿಗೆ ಸಲ್ಲಿಸುವುದು. ಸಾರ್ವಜನಿಕ…

Read More

ಮುಂಬೈ: ಮಹಾರಾಷ್ಟ್ರದ ಪುಣೆ ಮತ್ತು ಪಿಂಪ್ರಿ-ಚಿಂಚವಡದಲ್ಲಿ ಕಳ್ಳಭಟ್ಟಿ (ವಿಷಪೂರಿತ ಮದ್ಯ) ಸೇವಿಸಿ ಕಳೆದ 48 ಗಂಟೆಗಳಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ. ಇನ್ನು ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಅಸ್ವಸ್ಥಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಪ್ರಾಣ ಉಳಿಸಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಎಲ್ಲೆಲ್ಲಿ ಎಷ್ಟು ಸಾವು? ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಸಾವಿನ ವಿವರ ಹೀಗಿದೆ: ಪಿಂಪ್ರಿ-ಚಿಂಚವಡ (ಫುಗೇವಾಡಿ ಮತ್ತು ದಾಪೋಡಿ ಪ್ರದೇಶ): 13 ಸಾವು ಪುಣೆ (ಕಾಲೆ ಪಡಲ್ ಪ್ರದೇಶ): 03 ಸಾವು ಹಡಪ್ಸರ್ ಪ್ರದೇಶ: 02 ಸಾವು ಮುಖ್ಯ ಆರೋಪಿ ಬಂಧನ ದುರಂತದ ಬೆನ್ನಲ್ಲೇ ಕಾರ್ಯಪ್ರವೃತ್ತರಾಗಿರುವ ಪೊಲೀಸರು, ಈ ಅಕ್ರಮ ದಂಧೆಯ ಮುಖ್ಯ ಸೂತ್ರಧಾರಿ ಯೋಗೇಶ್ ಗಾಯಕ್ವಾಡ್ ಎಂಬಾತನನ್ನು ಬಂಧಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಈತ ದೀರ್ಘಕಾಲದಿಂದ ಈ ಭಾಗದಲ್ಲಿ ಅಕ್ರಮ ಹಾಗೂ ವಿಷಪೂರಿತ ಮದ್ಯ ಸರಬರಾಜು ಮಾಡುತ್ತಿದ್ದ. ಈ ಜಾಲದ ಹಿಂದೆ…

Read More

ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ಇಡೀ ಕರ್ನಾಟಕದಲ್ಲಿ ಸೈಬರ್ ವಂಚಕರ ಜಾಲ ದಿನದಿಂದ ದಿನಕ್ಕೆ ಭೀತಿ ಹುಟ್ಟಿಸುತ್ತಿದೆ. ಇಂಟರ್ನೆಟ್ ಜಗತ್ತಿನಲ್ಲಿ ನಡೆಯುತ್ತಿರುವ ಅಪರಾಧಗಳನ್ನು ತಡೆಯಲು ಸರ್ಕಾರ ಮತ್ತು ಗೃಹ ಇಲಾಖೆ ಎಷ್ಟೇ ಕಸರತ್ತು ನಡೆಸುತ್ತಿದ್ದರೂ, ವಂಚಕರ ಕೈ ಮೇಲಾಗುತ್ತಿರುವುದು ತೀವ್ರ ಆತಂಕ ಮೂಡಿಸಿದೆ. ಕೇವಲ ಕಳೆದ ಮೂರು ವರ್ಷಗಳ ಅವಧಿಯಲ್ಲೇ ರಾಜ್ಯದಲ್ಲಿ ಬರೋಬ್ಬರಿ 17,606 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿರುವುದು ತನಿಖಾ ಸಂಸ್ಥೆಗಳ ನಿದ್ದೆ ಗೆಡಿಸಿದೆ. ಹಿಂದೆಲ್ಲಾ ಸೈಬರ್ ಕ್ರೈಂ ಠಾಣೆಗಳು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದವು. ರಾಜ್ಯದ ಯಾವುದೇ ಮೂಲೆಯಲ್ಲಿ ಆನ್‌ಲೈನ್ ವಂಚನೆ ನಡೆದರೂ ಜನರು ದೂರು ನೀಡಲು ರಾಜಧಾನಿಗೇ ಬರಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ಕಾಲ ಬದಲಾಗಿದ್ದು, ರಾಜ್ಯಾದ್ಯಂತ 43 ಸೈಬರ್ ಪೊಲೀಸ್ ಠಾಣೆಗಳು ಕಾರ್ಯನಿರ್ವಹಿಸುತ್ತಿವೆ. ಆದಾಗ್ಯೂ, ತಾಂತ್ರಿಕ ವಂಚನೆಗಳ ಸಂಖ್ಯೆ ಮಾತ್ರ ಗಗನಕ್ಕೇರುತ್ತಲೇ ಇದೆ. ಹಳ್ಳಿಗಳಿಗೂ ಹರಡಿದ ವಂಚನೆಯ ಜಾಲ! ಈ ಹಿಂದೆ ಕೇವಲ ದೊಡ್ಡ ದೊಡ್ಡ ನಗರಗಳನ್ನಷ್ಟೇ ಟಾರ್ಗೆಟ್ ಮಾಡುತ್ತಿದ್ದ ಸೈಬರ್ ಖದೀಮರು, ಈಗ…

Read More

ನವದೆಹಲಿ: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮೈಲಿಗಲ್ಲಾಗಬಲ್ಲ ಅತ್ಯಂತ ಮಹತ್ವದ ಆದೇಶವೊಂದನ್ನು ಸುಪ್ರೀಂಕೋರ್ಟ್ ಹೊರಡಿಸಿದೆ. ಯಾವುದೇ ಪ್ರಕರಣದ ವಿಚಾರಣೆ ಮುಗಿದು ತೀರ್ಪನ್ನು ಕಾಯ್ದಿರಿಸಿದರೆ, ಕೇವಲ 3 ತಿಂಗಳ ಒಳಗಾಗಿ ಹೈಕೋರ್ಟ್‌ಗಳು ಅಂತಿಮ ತೀರ್ಪನ್ನು ಪ್ರಕಟಿಸುವುದು ಇನ್ಮುಂದೆ ಕಡ್ಡಾಯವಾಗಲಿದೆ. ವಿಚಾರಣೆ ಮುಗಿದರೂ ವರ್ಷಗಟ್ಟಲೆ ತೀರ್ಪು ಬಾರದೆ ಕೋರ್ಟ್ ಮೆಟ್ಟಿಲು ಹತ್ತಿ ಸುಸ್ತಾಗುತ್ತಿದ್ದ ಜನಸಾಮಾನ್ಯರಿಗೆ ಈ ಆದೇಶ ದೊಡ್ಡ ಮಟ್ಟದ ರಿಲೀಫ್ ನೀಡಿದೆ. ಜಸ್ಟಿಸ್ ಸೂರ್ಯಕಾಂತ್, ಜಸ್ಟಿಸ್ ದೀಪಂಕರ್ ದತ್ತಾ ಹಾಗೂ ಜಸ್ಟಿಸ್ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠವು ಈ ಐತಿಹಾಸಿಕ ಆದೇಶ ನೀಡಿದೆ. ತೀರ್ಪು ನೀಡುವಲ್ಲಿ ವಿಳಂಬ ಮಾಡುವುದು ಕಕ್ಷಿದಾರರಿಗೆ ತುಂಬಲಾರದ ನಷ್ಟ ಉಂಟುಮಾಡುತ್ತದೆ. ಅದರಲ್ಲೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ತಡ ಮಾಡದೆ ತಕ್ಷಣವೇ ತೀರ್ಮಾನ ಕೈಗೊಳ್ಳುವುದು ಅತ್ಯಗತ್ಯ” ಎಂದು ಸುಪ್ರೀಂಕೋರ್ಟ್ ಗಂಭೀರವಾಗಿ ಹೇಳಿದೆ. 4 ತಿಂಗಳಾದರೂ ತೀರ್ಪು ಬರದಿದ್ದರೆ ಕೇಸ್ ಬೇರೆ ಜಡ್ಜ್‌ಗೆ ವರ್ಗಾವಣೆ! ಒಂದು ವೇಳೆ ವಿಚಾರಣೆ ಮುಗಿದು 3 ತಿಂಗಳಾದರೂ ತೀರ್ಪು ಹೊರಬೀಳದಿದ್ದರೆ, ಆಯಾ ಹೈಕೋರ್ಟ್‌ನ ಮುಖ್ಯ…

Read More

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸಿವಿಲ್ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳು, 1977ಕ್ಕೆ ತಿದ್ದುಪಡಿ ತರಲು ಸರ್ಕಾರ ಕರಡು ಪ್ರತಿಯನ್ನು ಸಿದ್ಧಪಡಿಸಿದ್ದು, ನೇರ ನೇಮಕಾತಿಯಲ್ಲಿ ಅರ್ಹ ಕ್ರೀಡಾಪಟುಗಳಿಗೆ ಶೇಕಡಾ 2 ರಷ್ಟು ಸಮಾನಾಂತರ ಮೀಸಲಾತಿ (Horizontal Reservation) ಕಲ್ಪಿಸಲು ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಅಧೀನ ಕಾರ್ಯದರ್ಶಿ ಆಶಾಕುಮಾರಿ ಎ. ಜೆ. ಅವರ ಹೆಸರಿನಲ್ಲಿ ಈ ಕರಡು ಅಧಿಸೂಚನೆ ಪ್ರಕಟವಾಗಿದೆ. ಯಾರಿಗೆ ಅನ್ವಯ?: ಕನಿಷ್ಠ 10 ವರ್ಷಗಳ ಕಾಲ ಕರ್ನಾಟಕದಲ್ಲಿ ವಾಸವಾಗಿದ್ದು, ನಿಗದಿಪಡಿಸಿದ 34 ಕ್ರೀಡೆಗಳಲ್ಲಿ ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ವೈಯಕ್ತಿಕವಾಗಿ ಅಥವಾ ತಂಡದ ಸದಸ್ಯರಾಗಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಈ ಮೀಸಲಾತಿ ಅನ್ವಯವಾಗುತ್ತದೆ. ಶೈಕ್ಷಣಿಕ ಅರ್ಹತೆ ಕಡ್ಡಾಯ: ಕ್ರೀಡಾಪಟುಗಳು ತಾವು ಅರ್ಜಿ ಸಲ್ಲಿಸುವ ಹುದ್ದೆಗೆ ನಿಗದಿಪಡಿಸಲಾದ ಕನಿಷ್ಠ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಹುದ್ದೆಗಳ ಭರ್ತಿ: ಒಂದು…

Read More

ಬೆಂಗಳೂರು: ರಾಜ್ಯ ರಾಜಕಾರಣದ ಹೈವೋಲ್ಟೇಜ್ ಸಸ್ಪೆನ್ಸ್‌ಗೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಕುರ್ಚಿಯ ಮಹಾ ಯುದ್ಧದ ಕ್ಲೈಮ್ಯಾಕ್ಸ್ ಮುಗಿದು, ಸಿದ್ದರಾಮಯ್ಯ ರಾಜೀನಾಮೆ ನೀಡ ಬೆನ್ನಲ್ಲೇ ಹೊಸ ಇತಿಹಾಸ ಸೃಷ್ಟಿಗೆ ವೇದಿಕೆ ಸಿದ್ಧವಾಗಿದೆ. ಈ ನಡುವೆ, ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಅವರ ಪರಮಾಪ್ತ ಹಾಗೂ ರಾಜಗುರು ದ್ವಾರಕನಾಥ್ ಗುರೂಜಿ ಅವರು ನುಡಿದಿರುವ ಭವಿಷ್ಯ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಡಿಕೆಶಿ ಜಾತಕದ ಪ್ರಕಾರ ಮುಂದಿನ ಎಂಟು ವರ್ಷಗಳ ಕಾಲ ಅವರ ಮುಖ್ಯಮಂತ್ರಿ ಗದ್ದುಗೆಯನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವೇ ಇಲ್ಲ ಎಂದು ಗುರೂಜಿ ಭಾರಿ ಭವಿಷ್ಯ ನುಡಿದಿದ್ದಾರೆ. ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಗಿರುವ 35 ವರ್ಷಗಳ ಸುದೀರ್ಘ ಒಡನಾಟದ ಅಪರೂಪದ ರಹಸ್ಯವನ್ನು ಗುರೂಜಿ ಈ ವೇಳೆ ಬಿಚ್ಚಿಟ್ಟಿದ್ದಾರೆ. ಡಿಕೆಶಿಗೆ ಮುಖ್ಯಮಂತ್ರಿ ಪಟ್ಟ ಸಿಗುವುದು ಕೊಂಚ ತಡವಾಗುತ್ತಿದ್ದದ್ದನ್ನು ಕಂಡು, ನಾನು ಅವರಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಶೃಂಗೇರಿಯ ಶಾರದಾಂಬೆ ಸನ್ನಿಧಿಗೆ ತೆರಳಿದ್ದೆ. ದೇವಿಯ ಮುಂದೆ ಕೈಮುಗಿದು ಪ್ರಾರ್ಥನೆ ಮಾಡುತ್ತಾ ಕುಳಿತಿದ್ದಾಗಲೇ ನನ್ನ ಮೊಬೈಲ್…

Read More

ನವದೆಹಲಿ: ದೇಶದ ರಾಜಧಾನಿ ದೆಹಲಿಯ ಹೌಜ್ ಖಾಸ್ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಭಾರತೀಯ ಸ್ಪರ್ಧಾ ಆಯೋಗದ (CCI) ಮೊದಲ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ್ (80) ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೇ 27ರ ಬುಧವಾರ ತಡರಾತ್ರಿ ಅವರ ನಿವಾಸದಲ್ಲಿ ಏರ್ ಕಂಡೀಷನರ್ (AC) ಇನ್ಡೋರ್ ಯುನಿಟ್ ಸ್ಫೋಟಗೊಂಡಿದ್ದರಿಂದ ಈ ದುರಂತ ಸಂಭವಿಸಿದೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಏಮ್ಸ್ (AIIMS) ಟ್ರಾಮಾ ಸೆಂಟರ್‌ಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಬುಧವಾರ ರಾತ್ರಿ ಸುಮಾರು 11:18 ರ ವೇಳೆಗೆ ಹೌಜ್ ಖಾಸ್ ಪೊಲೀಸ್ ಠಾಣೆಗೆ ಅಗ್ನಿ ಅವಘಡದ ಕುರಿತು ಕರೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅವಘಡದ ಸಮಯದಲ್ಲಿ ಮನೆಯಲ್ಲಿ ಧನೇಂದ್ರ ಕುಮಾರ್ ಅವರ ಕುಟುಂಬಸ್ಥರು ಮತ್ತು ಮನೆ ಕೆಲಸದವರು ಸೇರಿದಂತೆ ಒಟ್ಟು ಐದು ಜನರಿದ್ದರು. ತಕ್ಷಣವೇ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಯಿತು.…

Read More